ಅಥವಾ

ಒಟ್ಟು 75 ಕಡೆಗಳಲ್ಲಿ , 14 ವಚನಕಾರರು , 31 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರಾಹಿಮಾಂ ಪರಮೇಶ್ವರ ಜಯ ಭಕ್ತಿಜಾÕನಮಾಕಾರ ನೀನೆಯಯ್ಯ ಚೆನ್ನಬಸವಣ್ಣ. ಏಕೋದೇವ ದೇವಧರ್ಮ ಧರ್ಮಗುಣ ಗುಣಪ್ರಕಾಶ ಪ್ರಕಾಶ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ. ನಿಮ್ಮಿಂದ ಪ್ರಾಣಂಗಸಂಬಂಧವಾಗಿ ನಿಮಗೆ ನಮೋ ನಮೋ ಎನುತಿರ್ದೆನಯ್ಯಾ ಚೆನ್ನಬಸವಣ್ಣ.
--------------
ಸಿದ್ಧರಾಮೇಶ್ವರ
ಅಯ್ಯಾ, ಎನ್ನ ಸ್ಥೂಲತತ್ವದಲ್ಲಿ ದ್ವಾದಶಕಳೆಯೊಳು ನಿಂದು ಅನಂತಕೋಟಿಪ್ರಕಾಶವಾಗಿ ತೋರುವ ಪ್ರಾಣಲಿಂಗವನು ಸತ್ಕ್ರಿಯಾನುಭಾವದಿಂದೆ ಕಾಯದ ಕರಸ್ಥಲದಲ್ಲಿಟ್ಟು ಅಷ್ಟವಿಧಾರ್ಚನೆಯ ಮಾಡಿ, ಕಂಗಳಾರತಿಯನೆತ್ತಿ ಮಂಗಳ ಜಯ ಜಯವೆನುತಿರ್ದೆನಯ್ಯಾ. ಅಯ್ಯಾ, ಎನ್ನ ಸೂಕ್ಷ್ಮ ತತ್ವದಲ್ಲಿ ಷೋಡಶಕಳೆಯೊಳು ನಿಂದು ಅನಂತಕೋಟಿಪ್ರಕಾಶವಾಗಿ ತೋರುವ ಪ್ರಾಣಲಿಂಗವನು ಸಮ್ಯಕ್ ಜ್ಞಾನಾನುಭಾವದಿಂದೆ ಮನದ ಕರಸ್ಥಲದಲ್ಲಿಟ್ಟು ಅಷ್ಟವಿಧಾರ್ಚನೆಯ ಮಾಡಿ ಮನದಾರತಿಯನೆತ್ತಿ ಮಂಗಳ ಜಯ ಜಯವೆನುತಿರ್ದೆನಯ್ಯಾ. ಅಯ್ಯಾ, ಎನ್ನ ಕಾರಣತತ್ವದಲ್ಲಿ ದಶಕಳೆಯೊಳು ನಿಂದು ಅನಂತಕೋಟಿ ಪ್ರಕಾಶವಾಗಿ ತೋರುವ ಪ್ರಾಣಲಿಂಗವನು ಮಹಾಜ್ಞಾನಾನುಭಾವದಿಂದೆ ಭಾವದ ಕರಸ್ಥಲದಲ್ಲಿಟ್ಟು ಅಷ್ಟವಿಧಾರ್ಚನೆಯ ಮಾಡಿ ಭಾವದಾರತಿಯನೆತ್ತಿ ಮಂಗಳ ಜಯ ಜಯವೆನುತಿರ್ದೆನಯ್ಯಾ. ಅಯ್ಯಾ. ಎನ್ನ ಸರ್ವಾಂಗದಲ್ಲಿ ಮೂವತ್ತೆಂಟು ಕಳಾತೀತನಾಗಿ ಅಗಣಿತಕೋಟಿಪ್ರಕಾಶಮಯದಿಂದೊಪ್ಪುವ ಗುರುನಿರಂಜನ ಚನ್ನಬಸವಲಿಂಗವೆಂಬ ಪ್ರಾಣಲಿಂಗವನು ಮಹದರುವಿನ ಕರಸ್ಥಲದಲ್ಲಿಟ್ಟು ಅಷ್ಟವಿಧಾರ್ಚನೆಯ ಮಾಡಿ ಜ್ಞಾನದಾರತಿಯನೆತ್ತಿ ಮಂಗಳ ಜಯ ಜಯವೆನುತಿರ್ದೆನಯ್ಯಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ನಾದಪ್ರಿಯಂ ನಾದಮಯಂ ನಾದೋರ್ಲಿಂಗ ನಗೇಶ್ವರಂ ಆದಿ ಮಧ್ಯಾಂತರಹಿತಂ ವೇದೋ ವೇದವಿದಂ ವರಂ ಮಂತ್ರಮೂರ್ತಿ ಮಹಾರುದ್ರಂ ಓಮಿತಿ ಜ್ಯೋತಿರೂಪಕಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕನಕಗಿರಿನಿವಾಸಂ ಕಾಮನಾಶಂ ಕಮಲವೈರಿಭೂಷಂ ವಿನುತನಾಮಧೇಯಂ ಅನುಪಮಾವತಾರಸಾರಂ ಪರಮ ವೀರಶೈವಭಕ್ತಿಭಾವಂ ಜನಿತಪುಣ್ಯಕಾಯಂ ಭವರೋಗವೈದ್ಯಂ ಭವಹರಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಓಂ ಜಯ ಪರಮೇಶ್ವರಂ ಪರಮಾತ್ಮಂ ಈಶ್ವರನುರ್ವಿಪರ್ವಿ ಅಡಗಿಕೊಂಡಿಪ್ಪನು. ಒಬ್ರ್ಬಣಿಗೆಯಾಗಿ ಯೋಗಿಗಳ ಮನದ ಸಂಸಾರ ತೆಪ್ಪದೊಳಗೆ ಆನೀಗ ಅದ್ದು ಅಳಲುತಪ್ಪೆನಯ್ಯಾ, ಬೇಗ ಬಾರ ಬಾರಯ್ಯಾ ಬಾರಾ. ವಜ್ರಲೇಪದ ಬಿದ್ದಿದ್ದೇನೆ, ಬೇಗ ಬಂದೆತ್ತಯ್ಯಾ ಎತ್ತಯ್ಯಾ ಕಪಿಲಸಿದ್ಧಮಲ್ಲಿನಾಥಯ್ಯಾ.
--------------
ಸಿದ್ಧರಾಮೇಶ್ವರ
ನಿಶ್ಚಿಂತ ನಿರಾಕಾರ ಪರಂಜ್ಯೋತಿ ಪರಮಪ್ರಕಾಶ ಆನಂದ ಸ್ವರೂಪನೆ ಜಂಗಮಲಿಂಗ. ಚೈತ್ಯರೂಪವೆ ಲಿಂಗಜಂಗಮ, ಸತ್ವರೂಪವೆ ಗುರುಲಿಂಗ. ಸತ್ತು ಚಿತ್ತಾನಂದವೆ ಸದ್ಭಕ್ತನಲ್ಲಿ ಉದಯ ಇಂತಿವರ ನೆಲೆಯ ವೇದಾಗಮ ಶಾಸ್ತ್ರ ಪುರಾಣಗಳು ಕಾಯದೆ ವಾಗತೀತಃ ಮನೋತೀತಃ ಭಾವಾತೀತಃ ಪರಃ ಶಿವಃ ಸರ್ವಶೂನ್ಯ ನಿರಾಕಾರಂ ನಿತ್ಯತ್ವಂ ಪರಮಂ ಪದಂ || ಎಂದುದಾಗಿ, ಇಂತಪ್ಪ ಶ್ರುತಿ ಒಳ ಹೊರಗಿಪ್ಪ ಜಂಗಮಲಿಂಗವೆ ಜಗತ್ಪಾವನ ಜಂತು ಜಯ ಶರಣಾಗು. ಬಸವಪ್ರಿಯ ಕೂಡಲಸಂಗಮದೇವಾ ಮಾಂ ತ್ರಾಹಿ ತ್ರಾಹಿ ಕರುಣಾಕರನೆ.
--------------
ಹಡಪದ ಅಪ್ಪಣ್ಣ
ಪಂಚವಕ್ತ್ರಂ ದಶಭುಜಂ ದಶಪಂಚನೇತ್ರಂ ದ್ವಿಪಾದಂ ತನುವೇಕಂ ಶುದ್ಧಸ್ಫಟಿಕಪ್ರದ್ಯುಕ್ತಂ ಪ್ರಭಾಮಯಮೂರ್ತಿ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಯುಗದ ಉತ್ಸಾಹವ (ಉತ್ಸವವ?) ನೋಡಿರೆ ! ಪಂಚಶಕ್ತಿಗಳಿಗೆ ಪಂಚಪ್ರಧಾನರು. ಅವರ ಆಗುಹೋಗನು ಆ ಶರಣನೆ ಬಲ್ಲ. ಆ ಶರಣನು ತಾನು ತಾನಾಗಿ ಆರು ದರುಶನಕ್ಕೆ ಯಾಚಕನಲ್ಲ ! ಮೂರು ದರುಶನಕ್ಕೆ ಮುಯ್ಯಾನುವನಲ್ಲ, ವೇದ ಶಾಸ್ತ್ರಾಗಮ ಪುರಾಣ ಛಂದಸ್ಸು, ನಿಘಂಟುಗಳೆಂಬುವಕ್ಕೆ ಭೇದಕನಲ್ಲ, ಅದೆಂತೆಂದಡೆ:ಅವರ ಅಂಗದ ಮೇಲೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ. ಪ್ರಸಾದವಿಲ್ಲ ಪಾದೋದಕವಿಲ್ಲದ ಭಾಷೆ. ಆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ಏಕಾರ್ಥವಾದ ಕಾರಣ ಪ್ರಾಣಿಗಳೆಲ್ಲವು ಪ್ರಣಾಮಂಗೆಯ್ಯುತ್ತಿದ್ದವು, ಜೀವಿಗಳೆಲ್ಲವು ಜಯ ಜೀಯಾ ಎನುತ್ತಿದ್ದುವು. ಆತ್ಮಂಗಳೆಲ್ಲ ಅನುವ ಬೇಡುತ್ತಿದ್ದವು. ಗುಹೇಶ್ವರಾ ಸಂಗನಬಸವಣ್ಣನ ಪಾದಕ್ಕೆ ಈರೇಳುಭುವನವೆಲ್ಲವೂ ಜಯ ಜೀಯಾ ಎನುತ್ತಿದ್ದವು.
--------------
ಅಲ್ಲಮಪ್ರಭುದೇವರು
ಕಾಮಿಗೆ ಯೋನಿಯೆಲ್ಲವೂ ಸರಿ. ಕ್ರೋದ್ಥಿಗೆ ಕೊಲೆ ಸರ್ವಜೀವವೆಲ್ಲವೂ ಸರಿ. ಲೋಬ್ಥಿಗೆ ಜಯ ಅಪಜಯದಿಂದ ಬಂದ ದ್ರವ್ಯವೆಲ್ಲವೂ ಸರಿ. ಪಾತಕಂಗೆ ಪಾಪಪುಣ್ಯವೆಂಬುದಿಲ್ಲ. ಇಂತೀ ಜಗದ ಸೂತಕಕ್ಕೆ ಹೊರಗಾಗಿ, ತ್ರಿಕರಣಸೂತಕಕ್ಕೆ ಒಳಗಲ್ಲದೆ, ಕಾತು ಕರ್ಮವನರಿಯದೆ, ಜೀವ ಭವವ ನುಣ್ಣದೆ, ಆವ ಠಾವಿನಲ್ಲಿಯೂ ಕಲೆ ನಿಷ್ಪತ್ತಿಯಾದ ಮತ್ತೆ ಕಾಯಕ್ಕೆ ಕುರುಹಿಲ್ಲ, ಜೀವಕ್ಕೆ ಭಯವಿಲ್ಲ, ಅರಿವಿಂಗೆ ಮರವೆಯಿಲ್ಲದೆ ತೋರದ ನಿರಾಳ, ಕಾಮಧೂಮ ಧೂಳೇಶ್ವರ ತಾನೂ ತಾನೆ.
--------------
ಮಾದಾರ ಧೂಳಯ್ಯ
ದೇವ ದೇವ ಮಹಾಪ್ರಸಾದ. ತನ್ನ ರೂಪವ ತಿಳಿದು ನೋಡಬೇಕೆಂದು ಕನ್ನಡಿಯನುಪಾಸ್ತಿ ಮಾಡಲು ಆ ಕನ್ನಡಿ ಬೇಕು ಬೇಡೆಂಬುದೆ ಅಯ್ಯಾ ? ಪತಿಯಾಜ್ಞೆಯಂತೆ ಸತಿಪತಿಭಾವವ ಧರಿಸಿದಡೆ ಸಂಯೋಗಕಾಲದಲ್ಲಿ ಅಲ್ಲವೆಂದೆನಬಹುದೆ ? ನೀವೆ ಮಾಡಿದಡೆ ನೀವೆ ಮಾಡಿದುದು ನಾನೆ ಮಹಾಪ್ರಸಾದವೆಂದು ಸ್ವೀಕರಿಸಿದಡೂ ನೀವೆ ಮಾಡಿದುದು. ಅಂಗೈಯ ಲಿಂಗದ ಲಕ್ಷಣವ ನೋಡಿ ಎಂದು ಕೈಯಲ್ಲಿ ಕೊಟ್ಟಡೆ, ಲಿಂಗದಲ್ಲಿ ಲಕ್ಷಣವನರಸಲಾಗದೆಂದು ಚೆನ್ನಸಂಗಮನಾಥನ `ಕೋ' ಎಂದು ಕೊಟ್ಟಡೆ ಮಹಾಪ್ರಸಾದವೆಂದು ಕೈಕೊಂಡೆನು ಗುರುವೆ. ಬೆದರಿ ಅಂಜಿದಡೆ ಮನವ ಸಂತೈಸಿ ಏಕಾರ್ಥದ ಭೇದದ ತೋರಿ ಬಿನ್ನಹವ ಮಾಡಿದೆನು. ಕೂಡಲಚೆನ್ನಸಂಗಮದೇವರ ಮಹಾಮನೆಯ ಗಣಂಗಳು ಮೆಚ್ಚಲು, ಸಂಗನಬಸವಣ್ಣನ ಕರುಣದ ಶಿಶುವೆಂಬುದ ಮೂರುಲೋಕವೆಲ್ಲವು ಅಂದು ಜಯ ಜಯ ಎನುತಿರ್ದುದು.
--------------
ಚನ್ನಬಸವಣ್ಣ
ಭವರೋಗವೈದ್ಯನೆಂದು ನಂಬಿದೆ ನಾನು, ಒಮ್ಮಿಂಗೆ ಕರುಣಿಸಯ್ಯಾ ಭಕ್ತಿಫಲಪ್ರದಾಯಕ. ನೀನು ಒಮ್ಮಿಂಗೆ ಕರುಣಿಸಯ್ಯಾ ಜಯ ಜಯ ಶ್ರೀ ಮಹಾದೇವ ಎನುತಿರ್ದೆನು. ಕೂಡಲಸಂಗಮದೇವಯ್ಯಾ, ನಿಮ್ಮ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಬಸವಣ್ಣ
ಜ್ಞಾನಗಮ್ಯಂ ದೃಢಪ್ರಾಜ್ಞಂ ದೇವದೇವಂ ತ್ರಿಲೋಚನಂ ಮಹಾದೇವಂ ಮಹಾತ್ಮಾನಂ ಮಹಾಜ್ಞಾನ ಪರಾತ್‍ಪರಂ ಮಹಾಪಾಪಹರಂ ದೇವಂ ಮದ್ದೇವ ದೇವದೇವಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕೆಂಜೆಡೆಯ ಭಾಳನೇತ್ರಂ ರಂಜಿಪ ರವಿಕೋಟಿ ತೇಜದಿಂದುರವಣಿಪಂ ಕಂಜಪದಯುಗದೊಳು ಹೊಳೆವುತ್ತಿಹ ನಂಜುಗೊರಳಭವ ಭವಕುಕ್ಷಿಯೊಳೀರೇಳುಭುವನವಂ ಮಿಗೆ ತಾಳ್ದ ರಾಕ್ಷಸಹರ ರಕ್ಷಿಸೆನ್ನುವಂ ಹರ ಹರಾ ಶಿವ ಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸತ್ಯಸದಾಚಾರವುಳ್ಳ ಶಿವಶರಣರವರಹುದೆಂದುದೆ ಶುಭಮುಹೂರ್ತ [ಶುಭಘಳಿಗೆ] ಸಕಲ ಬಲ, ಸಕಲ ಜಯ, ಅವರಲ್ಲವೆಂಬುದೇ ವಿಘ್ನ ವಿಷಗಳಿಗೆ ನಿರ್ಬಲ ಅಪಜಯ. ಅದೆಂತೆಂದಡೆ: ಅವರು ಮಾಡುವ ಕಾರ್ಯವೆಲ್ಲಾ ಕೂಡಲಚೆನ್ನಸಂಗಮಾಧೀನವಾಗಿ. ನೀನೆ ಮೃತ್ಯುಂಜಯನು, ವಿಶ್ವಾಧಿಪತಿಯಾದ ಕಾರಣ ಜಯವಪ್ಪುದಯ್ಯಾ.
--------------
ಚನ್ನಬಸವಣ್ಣ
ಇನ್ನಷ್ಟು ... -->