ಅಥವಾ

ಒಟ್ಟು 7 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಗುದದಲ್ಲಿ ಆಧಾರಚಕ್ರ, ಪೃಥ್ವಿಯೆಂಬ ಮಹಾಭೂತ, ಚತುಃಷ್ಕೋಣ, ಚೌದಳಪದ್ಮ, ಅಲ್ಲಿಯ ಅಕ್ಷರ ವಶಷಸವೆಂಬ ನಾಲ್ಕು ಅಕ್ಷರ, ಅದರ ವರ್ಣ[ಪೀತ], ಅದಕ್ಕೆ ಅಧಿದೇವತೆ[ಬ್ರಹ್ಮ], ಭಕ್ತ ಮುಖ, ಕ್ರಿಯಾಶಕ್ತಿ, ಆಚಾರಲಿಂಗ, ನಕಾರ ಸ್ವಾಯತ. ಲಿಂಗಸ್ಥಾನದಲ್ಲಿ ಸ್ವಾಧಿಷಾ*ನಚಕ್ರ, ಅಪ್ಪುವೆಂಬ ಮಹಾಭೂತ, ಧನುರ್ಗತಿ, ಷಡುದಳಪದ್ಮ, ಅಲ್ಲಿಯ ಅಕ್ಷರವಾರು ಬ ಭ ಮ ಯ ರ ಲ ; ಅದರ ವರ್ಣ [ಶ್ವೇತ], ಅಧಿದೇವತೆ [ವಿಷ್ಣು], ಮಹೇಶ ಮುಖ, ಜ್ಞಾನಶಕ್ತಿ, ಗುರುಲಿಂಗ, ಅಲ್ಲಿ ಮಕಾರ ಸ್ವಾಯತ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ತೇಜವೆಂಬ ಮಹಾಭೂತ, ತ್ರಿಕೋಣ, ದಶದಳಪದ್ಮ, ಅಲ್ಲಿಯ ಅಕ್ಷರ ಹತ್ತು ; ಡಢಣ ತಥದಧನ ಪಫ, ಅದಕ್ಕೆ [ಹರಿತ]ವರ್ಣ, ಅಧಿದೇವತೆ [ರುದ್ರ], ಪ್ರಸಾದಿ ಮುಖ, ಇಚ್ಚಾಶಕ್ತಿ , ಶಿವಲಿಂಗ, ಶಿಕಾರ ಸ್ವಾಯತ. ಹೃದಯಸ್ಥಾನದಲ್ಲಿ ಅನಾಹತಚಕ್ರ, ವಾಯುವೆಂಬ ಮಹಾಭೂತ, ಷಟ್ಕೋಣ, ದ್ವಿದಶದಳಪದ್ಮ, ಅಲ್ಲಿಯ ಅಕ್ಷರ ಹನ್ನೆರಡು : ಕ ಖ ಗ ಘ ಙ ಚ ಛ ಜ ಝ ಞ ಟ ಠ ಅದರ ವರ್ಣ [ಮಾಂಜಿಷ್ಟ], ಅದಕ್ಕೆ ಅಧಿದೇವತೆ [ಈಶ್ವರ], ಪ್ರಾಣಲಿಂಗಿ ಮುಖ, Wಆದಿಘೆಶಕ್ತಿ, ಜಂಗಮಲಿಂಗ, ಅಲ್ಲಿ ವಕಾರ ಸ್ವಾಯತ. ಕಂಠಸ್ಥಾನದಲ್ಲಿ ವಿಶುದ್ಧಿಚಕ್ರ, ಆಕಾಶವೆಂಬ ಮಹಾಭೂತ, ವರ್ತುಳಾಕಾರ, ಷೋಡಷದಳಪದ್ಮ, ಅಲ್ಲಿಯ ಅಕ್ಷರ ಹದಿನಾರು :ಅ ಆ ಇ ಈ ಉ ಊ ಋ Iೂ ಲೃ ಲೃೂ ಏ ಐ ಓ ಔ ಅಂ ಅಃ, ಅದಕ್ಕೆ ವರ್ಣ [ಕಪೋತ], ಅಧಿದೇವತೆ ಸದಾಶಿವನು, ಶರಣ ಮುಖ, [ಪರಾ]ಶಕ್ತಿ , [ಪ್ರಸಾದಲಿಂಗ, ಯಕಾರ ಸ್ವಾಯತ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಮನವೆಂಬ ಮಹಾಭೂತ, ದ್ವಿದಳಪದ್ಮ,] ಅಲ್ಲಿಯ ಅಕ್ಷರವೆರಡು :ಹ ಷ ವೆಂಬ [ಅಕ್ಷರ], ಮಾಣಿಕ್ಯ ವರ್ಣ, [ಅದಕ್ಕೆ ಅಧಿದೇವತೆ ಮಹೇಶ್ವರ], ಐಕ್ಯ ಮುಖ, ಕ್ರಿಯಾಶಕ್ತಿ, ಮಹಾಲಿಂಗ, ಓಂಕಾರ ಸ್ವಾಯತ. ಇಂತೀ ಷಡುಚಕ್ರದ, ಷಡುಸ್ಥಳದ, ಷಡುಲಿಂಗದ, ಷಡುಶಕ್ತಿಯರಿಗೆ ಷಡಕ್ಷರವೆ ಪ್ರಾಣವಾಗಿ ವಿರಾಜಿಸುತ್ತಿದ್ದಿತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಭೂಲೋಕದ ನಚ್ಚನೆ ಮೀರಿ ನಿಶ್ಚಟನಾಗಿ ಜ್ಞಾನ ಕ್ರೀಗಳಿಂದ ಆಚರಿಸಿ ಅಂಗಲಿಂಗ ಸಂಬಂಧಿಗಳಾದ ಶಿವಲಿಂಗ ಮೋಹಿಗಳು ಕೇಳಿರಯ್ಯ. ಶರಣರು ಮುಕ್ತಿಪುರಕ್ಕೆ ಹೋಗುವ ಹಾದಿಯಲ್ಲಿ ಒಂದು ಪಂಚವರ್ಣದ ಹಣ್ಣು, ಮನವೇಟದ ಮಹಾಪಟ್ಟಣವೊಂದು. ಆ ಪಟ್ಟಣದ ಕಡೆ ಮೊದಲಾಗಿಯೂ ಹಾಳಾಗಿಪ್ಪುದು. ಆ ಪಟ್ಟಣದ ನಡುವೆ ಹೋಗುತ್ತಿಪ್ಪ ಹಾದಿಯಲ್ಲಿ ಅಹಂಕಾರ ಮಮಕಾರಗಳೆರಡು ಪಟ್ಟಣಗಳು ತುಂಬಿ ತುಳುಕುತವೆ. ಆ ಎರಡು ಪಟ್ಟಣಕ್ಕೆ ಹೋಹಾದಿ ಹೆಬ್ಬೆಟ್ಟಗಳಾಗಿಪ್ಪವು. ಆ ಎರಡು ಪಟ್ಟಣದ ದಿಕ್ಕಿನಲ್ಲಿ ಒಂದು ಭಕ್ತಿಯ ಪುರವಿದೆ. ಆ ಭಕ್ತಿ ಪುರಕ್ಕೆ ಹಾದಿಯಿಲ್ಲ. ಆ ಭಕ್ತಿಪುರಕ್ಕೆ ಹೋದಲ್ಲದೆ ಮುಂದಳ ಮುಕ್ತಿಪುರದ ಬಟ್ಟೆ ಕಾಣಬಾರದು. ಮುಂದಳ ಪಯಣ ಗತಿಯ ಸಂಚದೋವರಿಯ ಸಂಚಮಾಕರಣ ಮನ ಎಂಬತ್ತು ನಾಲ್ಕು ಲಕ್ಷದ ಪ್ರಕಾರದಲ್ಲಿಪ್ಪರಾ ಮಂಡಲದಲ್ಲಿ ಸುಳಿವುದು ತಪ್ಪದೆಂದು ಅದಕ್ಕೆ ಹೇಹಮಂ ಮಾಡಿ, ತಮ್ಮವರು ಹೋದ ನಸುದೋಯಲ (?) ಬೆಂಬಳಿವಿಡಿದು ಹೋಗಿ ಭಕ್ತಿಪುರಮಂ ಕಂಡು ಆ ಭಕ್ತಿಪುರದಿ ನಡುವೆ ಹೋಗುತ್ತಿದ್ದ ಹಾದಿಯಲ್ಲಿ ಹೆಬ್ಬುಲಿ ಕರಡಿ ಕಾಳರಕ್ಕಸಿ ಕರಿಘಟೆಯಿಪ್ಪ ಮಹಾಸರೋವರದ ಅರಣ್ಯವಿದೆ. ಆ ಸರೋವರದ ಅರಣ್ಯಮಧ್ಯದಲ್ಲಿ ಎಂಟು ಕಳಸದ ಚೌಕಮಂಟಪದ ಸುವರ್ಣದ ದೇಗುಲವಿದೆ. ಆ ದೇಗುಲದಲ್ಲಿ ಮುಕ್ತಿರಾಜ್ಯಕ್ಕೆ ಪಟ್ಟವಕಟ್ಟುವ ಸಮರ್ಥಿಕೆಯನ್ನುಳ್ಳ ಜಂಗಮಲಿಂಗವದೆ. ಆ ಲಿಂಗಜಂಗಮಂ ಶರಣ ಕಂಡು ಹರ್ಷಗೊಂಡ ಭಾವದಲ್ಲಿ ಷೋಡಶೋಪಚಾರ ಅಷ್ಟವಿಧಾರ್ಚನೆಗಳಿಂದ ಪೂಜೆಯಂ ಮಾಡಿ ತನ್ನ ಮನದ ಅಭೀಷ್ಟೆಯಂ ಮನ ನೆನದಂತೆ ಮನದಲ್ಲಿ ಭೇದಿಸಿ ದೇಹ ಮನ ಪ್ರಾಣಕುಳ ಸಮಸ್ತ ಶರಣಾದಿಗಳ ಗುಣಕಂಗಳೆಲ್ಲವೂ ಸುಟ್ಟು ಬೊಟ್ಟಿಕ್ಕಿ ನಿರ್ಮಲದ ರೂಪನಾಗಿ ಅಲ್ಲಿಂದ ಮುಂದೆ ನಡೆಸುತ್ತಿದ್ದಾಗ ಉತ್ತರ ದಿಕ್ಕಿನ ಆಕಾಶದಲ್ಲಿ ಅನೇಕ ಚೋದ್ಯವನೊಳಕೊಂಡಿಪ್ಪ ತ್ರಿಪುರಮಂ ಕಂಡು, ಆ ತ್ರಿಪುರದ ಮೇಲೆ ಬ್ರಹ್ಮರಂಧ್ರವೆಂಬ ಕೈಲಾಸದ ಕಡೆಯ ಬಾಗಿಲೊಳಿಪ್ಪ ಐಕ್ಯಸ್ಥಲವೆನಿಸುವ ಅಣುನೆಲೆಯ ಮಾಣಿಕ್ಯವರ್ಣದ ಉಪ್ಪರಿಗೆಯ ತಳಮಂ ಕಂಡು ಪತಿಯಿದ್ದ ಮನೆಯ ಬಾಗಿಲ ಸತಿಸಾರುವಂತೆ ಶರಣ ಉಪ್ಪರಿಗೆಯ ಬಾಗಿಲಂ ಸಾರಿ ಬಾಗಿಲಲ್ಲಿ ಡಾಕಿಣಿ, ರಾಕಿಣಿ, ಲಾಕಿಣಿ, ಕಾಕಿಣಿ, ಸಾಕಿಣಿ, ಹಾಕಿಣಿಯರೆಂಬ ಪಡ್ವಿಧಶಕ್ತಿಗಳಿಗೆ ಆದಿನಾಯಕಿಯಾಗಿಪ್ಪಳು. ಅರ್ಧಕುಂಡಲಿ ಎಂಬ ಜ್ಞಾನಶಕ್ತಿ, ಆ ಶಕ್ತಿಯ ಬಾಗಿಲಿಗೆ ದ್ವಾರಪಾಲಕಿಯಾಗಿಪ್ಪಳು. ಅವಳ ಅಂಗರಂ ತಡವಳು, ನಿರಂಗರಂ ಬಿಡುವಳು ಎಂಬುದ ಶರಣ ತನ್ನ ಮನದಲ್ಲಿ ತಾನೆ ತಿಳಿದು ಅಲ್ಲಿಪ್ಪ ಮಹಾಲಿಂಗಮಂ ಶರಣ ಮಂತ್ರಮಾಲೆಯಂ ಮಾಡಿ ಮನದಲ್ಲಿ ಧರಿಸಿ, ಸೋಮಸೂರ್ಯರ ಕಾಲಾಟಮಂ ನಿಲ್ಲಿಸಿ, ಕುಂಭಕಮಂ ಇಂಬುಗೊಳಿಸಿ, ಝಂ ಝಂ ಎಂದು ಝೇಂಕರಿಸುತ್ತಿದ್ದ ಪೆಣ್ದುಂಬಿಯ ನಾದಮಂ ಚಿಣಿಮಿಣಿಯೆಂದು ಸಣ್ಣರಾಗದಿ ಘನವ ಸೋಂಕುತಿಪ್ಪ ವೀಣಾನಾದಮಂ ಲಿಂಗಲಿಂಗ ಎಂದು ಕರವುತಿಪ್ಪ ಘಂಟಾನಾದಮಂ ಢಂ ಢಂ ಎನುತಿಪ್ಪ ಪೂರಿತವಾದ ಭೇರಿನಾದಮಂ ಚಿಟಪಟಲು ಭುಗಿಲು ಭುಗಿಲೆನುತಿಪ್ಪ ಮೇಘನಾದಮಂ ಝಂ ಝಂ ಎಂದು ಎಡವಿಡದೆ ಬಲಿವುತಿಪ್ಪ ಪ್ರಣಮನಾದಮಂ ಓಂ ಹ್ರಾಂ ಹ್ರೀಂ ಹ್ರೂಂ ಹ್ರೀ ಎಂದು ಬೆಳಗಿ ಬೀರುತಿಪ್ಪ ದಿವ್ಯ ನಾದಮಂ, ಆರಣ್ಯ ಘೀಳಿಡುವಂತೆ ಹೂಂಕರಿಸುತಿಪ್ಪ ಸಿಂಹನಾದಮಂ ಈ ಪ್ರಕಾರ ನಾದಂಗಳ ಶರಣ ಕೇಳಿ ಮನಂ ದಣಿದು ಹರುಷಣ ಮಿಕ್ಕು ಆ ಬಾಗಿಲ ದಾಟಿ ಪಶ್ಚಿಮ ದಿಕ್ಕಿಗೆ ಮುಖವಾಗಲೊಡನೆ ಚೌಕಮಧ್ಯದಲ್ಲಿ ವಜ್ರ ವೈಢೂರ್ಯ ಪುಷ್ಯರಾಗ ಗೋಮೇಧಿಕ ಇಂತಿವರೊಳಗಾದ ನವರತ್ನಂಗಳ ಕಂಬ ಬೋದಿಗೆ ಹಲಗೆಗಳಿಂದ ಅನುಗೈದು ತೀರಿಸಿದ ಮಹಾಶ್ರೀಗುರುವಿನ ಒಡ್ಡೋಲಗದ ಪ್ರಭೆ ಆಕಾಶಮಂ ಸಲವುತಿಪ್ಪುದ ಕಂಡು ಬಹಿರಾವರಣದಿ ಎಸೆವ ಪ್ರಾಕಾರದಕೋಟೆ ಎರಡು ಹದಿನಾರು ಕೊತ್ತಳಗಳಲ್ಲಿ ಈಶಾನ್ಯ ಪರ್ಜನ್ಯ ಜಯಂತರೊಳಗಾದಿ ಮೂವತ್ತೆರಡು ತಂಡದ ಅನಂತ ವಸ್ತು ದೇವತೆಗಳ ಕಾವಲ ಅತ್ಯುಗ್ರಮಂ ಕಂಡು ಶರಣರ್ಗೆ ತಡಹಿಲ್ಲವೆಂಬುದಂ ತನ್ನ ಮನೋವೇಗದಿಂದ ಅರಿದು ಕಾವಲಾಗಿಪ್ಪ ವಸ್ತು ದೇವತೆಯ ಕೃಪಾದೃಷ್ಟಿಯಿಂದ ಸಂತೈಸಿ ಮುಕ್ತಿಪುರಕೆ ಮೂಲಸೂತ್ರವಾದ ಬ್ರಹ್ಮರಂಧ್ರದ ಪೂರ್ವದಿಕ್ಕಿನ ಚಂದ್ರಮಂಡಲದಲ್ಲಿಪ್ಪ ಬಾಗಿಲ ಬೀಗಮಂ ತೆಗೆದು ಶರಣ ಒಳಹೊಗಲೊಡನೆ ಬಹಿರಾವರಣದ ವೀದಿಯ ಓಲಗದೊಳಿಪ್ಪ ಹರಿಸುರ ಬ್ರಹ್ಮಾದಿ ದೇವತೆಗಳು ಮನು ಮುನಿ ಗರುಡ ಗಂಧರ್ವ ಇಂದ್ರ ಚಂದ್ರರೊಳಗಾದ ಅನಂತರೆಲ್ಲಾ ಅಂಜಿ ಕೆಲಸಾರೆ, ಸೋಮವೀದಿಯೊಳಿಪ್ಪ ಅನಂತರ ರುದ್ರರೊಳಗಾದ ಇಪ್ಪತ್ತುನಾಲ್ಕು ತಂಡದ ಅನಂತರು, ಶಿವನ ಒಡ್ಡೋಲಗವ ನಡೆಸುವ ಪರಿಚಾರಕರು, ಅವರು ಬಂದು, ಶರಣಲಿಂಗದ ದೃಷ್ಟಿಸಂಧಾನವಾಗಲೆಂದು ಮುಖವಂ ಮಾಡಿ, ಸೂರ್ಯವೀದಿಯೊಳಿಪ್ಪ ಉಮಾಚಂಡಿಕೇಶ್ವರ ನಂದಿಕೇಶ್ವರರೊಳಗಾದ ಹದಿನಾರು ತಂಡದ ಅನಂತ ರುದ್ರರು ಬಂದು ಶರಣನ ಸನ್ಮಾನವಂ ಮಾಡಿ, ಅಗ್ನಿವೀದಿಯೊಳಿಪ್ಪ ಉಮೆ ಜೇಷೆ*ಯರೊಳಗಾದ ಎಂಟು ತಂಡದ ಅನಂತ ಶಕ್ತಿಯರು [ಕರ್ಪೂ]ರದ ಪುತ್ಥಳಿ ಬಂದು ಉರಿಯ ಪುತ್ಥಳಿಯ ಆಲಂಗಿಸಿದಂತೆ ಶರಣ ಬಂದು ಆ ಘನಲಿಂಗಮಂ ಅಮರ್ದಪ್ಪಿ ಪುಷ್ಪ ಪರಿಮಳದಂತೆ ಏಕವಾಗಿ, ಆ ಘನಲಿಂಗ[ವೆ] ತಾನೆಯಾದ ಮಹಾಗುರು ಸಿದ್ಧೇಶ್ವರನ ಶ್ರೀ ಚರಣಮಂ ನಾನು ಕರಸ್ಥಳದಲ್ಲಿ ಪಿಡಿದು ಪೂಜೆಯಂ ಮಾಡಲೊಡನೆ ಎನ್ನ ತನುವೆ ಪಂಚಬ್ರಹ್ಮ, ಪ್ರಾಣವೆ ಪರಬ್ರಹ್ಮವಾಯಿತ್ತು.
--------------
ಕಲ್ಲಯ್ಯದೇವರು
ಗುದಸ್ಥಾನದಲ್ಲಿ ಆಧಾರಚಕ್ರ, ಪೃಥ್ವಿಯೆಂಬ ಮಹಾಭೂತ, ಚತುಃಕೋಣೆ ಚೌದಳ ಪದ್ಮ, ಅಲ್ಲಿ ಇಹ ಅಕ್ಷರ ನಾಲ್ಕು_ವ, ಶ, ಷ, ಸ, ಅದರ ವರ್ಣ ಸುವರ್ಣ, ಅದಕ್ಕೆ ಅಧಿದೇವತೆ ದಾಕ್ಷಾಯಣಿ. ಲಿಂಗಸ್ಥಾನದಲ್ಲಿ ಸ್ವಾಧಿಷಾ*ನಚಕ್ರ, ಅಪ್ಪುವೆಂಬ ಮಹಾಭೂತ, ಧನುರ್ಗತಿ, ಷಡುದಳ ಪದ್ಮ, ಅಲ್ಲಿ ಇಹ ಅಕ್ಷರವಾರು_ಬ, ಭ, ಮ, ಯ, ರ, ಲ, ಅದರ ವರ್ಣ ಪಚ್ಚೆಯ ವರ್ಣ, ಅದಕ್ಕೆ ಅಧಿದೇವತೆ ಬಹ್ಮನು. ನಾಭಿಸ್ಥಾನದಲ್ಲಿ ಮಣಿಪೂರಕವೆಂಬಚಕ್ರ, ತೇಜವೆಂಬ ಮಹಾಭೂತ, ತ್ರಿಕೋಣೆ, ದಶದಳ ಪದ್ಮ ಅಲ್ಲಿ ಇಹ ಅಕ್ಷರ ಹತ್ತು_ ಡ, ಢ, ಣ, ತ, ಥ, ದ, ಧ, ನ, ಪ, ಫ, ಅದರ ವರ್ಣ ಕೃಷ್ಣವರ್ಣ, ಅದಕ್ಕೆ ಅಧಿದೇವತೆ ವಿಷ್ಣು. ಹೃದಯಸ್ಥಾನದಲ್ಲಿ ಅನಾಹತಚಕ್ರ, ವಾಯುವೆಂಬ ಮಹಾಭೂತ, ಷಟ್ಕೋಣೆ, ದ್ವಾದಶಗಳ ಪದ್ಮ ಅಲ್ಲಿ ಇಹ ಅಕ್ಷರ ಹನ್ನೆರಡು_ ಕ, ಖ, ಗ, ಘ, ಙ, ಚ, ಛ, ಜ, ಝ, ಞ, ಟ,Àಠ, ಅದರ ವರ್ಣ ಕುಂಕುಮವರ್ಣ, ಅದಕ್ಕೆ ಅಧಿದೇವತೆ ಮಹೇಶ್ವರನು. ಕÀಂಠಸ್ಥಾನದಲ್ಲಿ ವಿಶುದ್ಧಿಚಕ್ರ, ಆಕಾಶವೆಂಬ ಮಹಾಭೂತ, ವರ್ತುಲಾಕಾರ, ಷೋಡಶದಳ ಪದ್ಮ ಅಲ್ಲಿ ಇಹ ಅಕ್ಷರ ಹದಿನಾರು_ ಅ, ಆ, ಇ, ಈ, ಉ, ಊ, ಋ, Iೂ, , , ಏ, ಐ, ಓ, ಔ, ಅಂ, ಅಃ, ಅದರ ವರ್ಣ ಶ್ವೇತವರ್ಣ, ಅದಕ್ಕೆ ಅಧಿದೇವತೆ ಸದಾಶಿವನು. ಭ್ರೂಮಧ್ಯಸ್ಥಾನದಲ್ಲಿ ಆಜ್ಞಾಚಕ್ರ, ಮನವೆಂಬ ಮಹಾಭೂತ, ತಮಂಧಾಕಾರ, ದ್ವಿದಳಪದ್ಮ ಅಲ್ಲಿ ಇಹ ಅಕ್ಷರವೆರಡು_ ಹಂ, ಕ್ಷಂ, ಅದರ ವರ್ಣ ಮಾಣಿಕ್ಯವರ್ಣ, ಅದಕ್ಕೆ ಅಧಿದೇವತೆ ಶ್ರೀಗುರು. ಉನ್ಮನೀಜ್ಯೋತಿ ಬ್ರಹ್ಮರಂಧ್ರದ ಮೇಲೆ. ಸಹಸ್ರದಳ ಪದ್ಮ, ಅಲ್ಲಿ ಅಮೃತವಿಹುದು ಅಲ್ಲಿ `ಓಂ' ಕಾರಸ್ವರೂಪವಾಗಿ ಗುಹೇಶ್ವರಲಿಂಗವು ಸದಾಸನ್ನಹಿತನು.
--------------
ಅಲ್ಲಮಪ್ರಭುದೇವರು
-->