ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಾನಾ ಜನ್ಮಂಗಳಲ್ಲಿ ಬಂದಡೂ,ನಾನಾ ಯುಕ್ತಿಯಲ್ಲಿ ನುಡಿದಡೂ,ನಾನಾ ಲಕ್ಷಣಂಗಳಲ್ಲಿ ಶ್ರುತ ದೃಷ್ಟ ಆನುಮಾನಂಗಳ ಲಕ್ಷಿಸಿನುಡಿವಲ್ಲಿಏನನಹುದು ಏನನಲ್ಲಾಯೆಂಬ ಠಾವನರಿಯಬೇಕು.ಮಾತ ಬಲ್ಲೆನೆಂದು ನುಡಿಯದೆ,ನೀತಿವಂತನೆಂದು ಸುಮ್ಮನಿರದೆ,ಆ ತತ್ಕಾಲದ ನೀತಿಯನರಿದುಸಾತ್ವಿಕ ಲಕ್ಷಣದಲ್ಲಿಪ್ಪಾತನ ಲಕ್ಷಣವೇ ನಿರೀಕ್ಷಣಕದಂಬಲಿಂಗಾ.
ವೇದವ ಕಲಿತಲ್ಲಿ, ಪಾಠಕನಲ್ಲದೆ ಜ್ಞಾನಿಯಲ್ಲ,ನಿಲ್ಲು. ಶಾಸ್ತ್ರ ಪುರಾಣವನೋದಿದಲ್ಲಿ, ಪಂಡಿತನಲ್ಲದೆ ಜ್ಞಾನಿಯಲ್ಲ, ನಿಲ್ಲು.ವ್ರತ ನೇಮ ಕೃತ್ಯ ಪೂಜಕನಾದಡೇನು ? ದಿವ್ಯಜ್ಞಾನದ ಠಾವನರಿಯಬೇಕು.ಈ ಭೇದಂಗಳ ತಿಳಿದರಿದಲ್ಲಿ, ಮನಸಂದಿತ್ತು ಮಾರೇಶ್ವರಾ.