ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನಾ ಜನ್ಮಂಗಳಲ್ಲಿ ಬಂದಡೂ, ನಾನಾ ಯುಕ್ತಿಯಲ್ಲಿ ನುಡಿದಡೂ, ನಾನಾ ಲಕ್ಷಣಂಗಳಲ್ಲಿ ಶ್ರುತ ದೃಷ್ಟ ಆನುಮಾನಂಗಳ ಲಕ್ಷಿಸಿ ನುಡಿವಲ್ಲಿ ಏನನಹುದು ಏನನಲ್ಲಾಯೆಂಬ ಠಾವನರಿಯಬೇಕು. ಮಾತ ಬಲ್ಲೆನೆಂದು ನುಡಿಯದೆ, ನೀತಿವಂತನೆಂದು ಸುಮ್ಮನಿರದೆ, ಆ ತತ್ಕಾಲದ ನೀತಿಯನರಿದು ಸಾತ್ವಿಕ ಲಕ್ಷಣದಲ್ಲಿಪ್ಪಾತನ ಲಕ್ಷಣವೇ ನಿರೀಕ್ಷಣ ಕದಂಬಲಿಂಗಾ.
--------------
ಗೋಣಿ ಮಾರಯ್ಯ
ವೇದವ ಕಲಿತಲ್ಲಿ, ಪಾಠಕನಲ್ಲದೆ ಜ್ಞಾನಿಯಲ್ಲ, ನಿಲ್ಲು. ಶಾಸ್ತ್ರ ಪುರಾಣವನೋದಿದಲ್ಲಿ, ಪಂಡಿತನಲ್ಲದೆ ಜ್ಞಾನಿಯಲ್ಲ, ನಿಲ್ಲು. ವ್ರತ ನೇಮ ಕೃತ್ಯ ಪೂಜಕನಾದಡೇನು ? ದಿವ್ಯಜ್ಞಾನದ ಠಾವನರಿಯಬೇಕು. ಈ ಭೇದಂಗಳ ತಿಳಿದರಿದಲ್ಲಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
-->