ಅಥವಾ

ಒಟ್ಟು 5 ಕಡೆಗಳಲ್ಲಿ , 5 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಹಾಜ್ಞಾನ ದಿವ್ಯಪರಿಪೂರ್ಣವಸ್ತು ಜಗಹಿತಾರ್ಥವಾಗಿ ಸ್ವಯಂಭುವೆಂಬ ಸ್ವರೂಪವ ಬಿಟ್ಟು, ಲೀಲಾಸಂಭವನಾಗಿ ಉಮಾಪತಿಯಾದಲ್ಲಿ, ಪಂಚವಕ್ತ್ರದಿಂದ ಪಂಚಭೂತಿಕಂಗಳು ಕಲ್ಪಿಸುವಲ್ಲಿ, ಕರ್ಮಶಕ್ತಿ ವಿಷ್ಣುರೂಪಾಯಿತ್ತು. ಭಾವಶಕ್ತಿ ಬ್ರಹ್ಮರೂಪಾಯಿತ್ತು. ಜ್ಞಾನಶಕ್ತಿ ರುದ್ರರೂಪಾಯಿತ್ತು. ಈ ಉಭಯವ ಘಟಿಸಿ ನಿಂದಲ್ಲಿ, ಷಡುದರ್ಶನ ಸಂಭವಿಸಿದ ಠಾವಾವುದು ? ಒಂದು ವೃಕ್ಷದಲ್ಲಿ ಹುಟ್ಟಿದ ಫಲ, ಮೊದಲೆ ಎಳದಾಗಿ, ತದನಂತರ ಮೀರಿ ಬಲಿದಲ್ಲದೆ ಬೀಜಾಂಕುರವಿಲ್ಲ. ಮರದಿಂ ಮೀರಿ ತೋರುವ ಅಂಕುರವಿಲ್ಲ. ವಸ್ತುವ ಮೀರುವ ದರ್ಶನವಿಲ್ಲ. ಅಪ್ಪು ಒಂದರಲ್ಲಿ ಹಲವು ಫಲವನನುಭವಿಸುವಂತೆ, ವಸ್ತು ಒಂದರಲ್ಲಿ ಸಕಲ ಕೃತ್ಯವ ಮಾಡಿ, ತನ್ನ ಚಿತ್ತದ ಕಲೆಯ ಹರಿದುಕೊಂಬವಂಗೆ ಅವನೊಳು ತಥ್ಯಮಿಥ್ಯ. ಕೈಯುಳಿ ಕತ್ತಿ ಅಡಿಗೂಂಡಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ
--------------
ಮಾದಾರ ಚೆನ್ನಯ್ಯ
ನಾಣಮರೆಯ ನೂಲು ಸಡಿಲಲು ನಾಚುವರು ನೋಡಾ ಗಂಡು ಹೆಣ್ಣೆಂಬ ಜಾತಿಗಳು. ಪ್ರಾಣದೊಡೆಯ ಜಗದೊಳಗೆ ಮುಳುಗಲು ತೆರಹಿಲ್ಲದಿರಲು ದೇವರ ಮುಂದೆ ನಾಚಲೆಡೆಯುಂಟೆ ? ಚೆನ್ನಮಲ್ಲಿಕಾರ್ಜುನ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮರಸುವ ಠಾವಾವುದು ಹೇಳಯ್ಯಾ ?
--------------
ಅಕ್ಕಮಹಾದೇವಿ
ಬೀಜವಿಲ್ಲದೆ ಬಿತ್ತು ಹುಟ್ಟುವ ತೆರನಾವುದು ? ತೊಟ್ಟಿಲ್ಲದೆ ಹಣ್ಣು ಇಪ್ಪ ತೆರನಾವುದು ? ಇಷ್ಟವಿಲ್ಲದೆ ಚಿತ್ತ ಅಪ್ಪುವ ಠಾವಾವುದು ? ಇಂತೀ ಭೇದದಲ್ಲಿ ಭೇದಕನಾಗಿ ಎರಡಳಿದು ವೇದ್ಥಿಸಿ ನಿಂದಲ್ಲಿಯೆ ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಪ್ರಾಣಲಿಂಗಿಯ ಸ್ಥಲ.
--------------
ಬಿಬ್ಬಿ ಬಾಚಯ್ಯ
ಶಕ್ತಿಯಂಗದ ಯೋನಿಯಲ್ಲಿ ಶುಕ್ಲ ಸೋರಿ, ಬೆಚ್ಚು ಪುತ್ತಳಿಯಾದ ಠಾವಾವುದು ? ಕೂಡಿದನಪ್ಪ, ಕೂಡಿಸಿಕೊಂಡಳವ್ವೆ. ಉಭಯದ ಯೋಗದಿಂದಾದ ಮತ್ತೆ ಬ್ರಹ್ಮನ ಅಗಡವೇಕೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ ?
--------------
ಸಗರದ ಬೊಮ್ಮಣ್ಣ
ರಜ್ಜು ರಸ ಕೂಡಿ ಅಗ್ನಿ ಮುಟ್ಟಿ ಉರಿದಲ್ಲಿ, ಅದೇತರ ಹೊದ್ದಿಗೆಯ ಬೆಳಗು ? ರಜ್ಜು, ರಸದಿಂದವೋ ? ಅಗ್ನಿಯ ಭಾವದಿಂದವೋ ? ಈ ಮೂರರ ಹೊಲಬಿನ ಹೊದ್ದಿಕೆಯಲ್ಲಿ ಬೆಳಗುವ ಪ್ರಜ್ವಲಿತ ಅನಲನ ಕೂಡುವಿನೊಳಗಾಯಿತ್ತು. ಕಾಯದ ಕರ್ಮದ ಜ್ಞಾನದಿಂದ ಕಂಡೆಹೆನೆಂದಡೆ, ನಾಮವಿಲ್ಲದ ರೂಪು, ಭಾವದಿಂದ ಅರಿವ ಠಾವಾವುದು ? ಒಂದರಿಂದ ಒಂದ ಕಂಡೆಹೆನೆಂಬ ಸಂದೇಹ, ಇನ್ನೆಂದಿಗೆ ಹರಿಗು ? ಕೈಯುಳಿ ಕತ್ತಿ ಅಡಿಗೂಂಡಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.
--------------
ವೀರ ಗೊಲ್ಲಾಳ/ಕಾಟಕೋಟ
-->