ಅಟ್ಟೆಯ ಚುಚ್ಚುವ ಉಳಿಯ ಮೊನೆಯಲ್ಲಿ,
ಪ್ರತ್ಯಕ್ಷವಾದ ಪರಮೇಶ್ವರನ ಕಂಡು,
ಇತ್ತಲೇಕಯ್ಯಾ, ಕಾಯದ ತಿತ್ತಿಯ ಹೊತ್ತಾಡುವನ ಮುಂದೆ ?
ನಿನ್ನ ಭಕ್ತರ ಠಾವಿನಲ್ಲಿಗೆ ಹೋಗಿ ಮುಕ್ತಿಯ ಮಾಡು.
ನೀ ಹೊತ್ತ ಬಹುರೂಪ[ದಿ] ತಪ್ಪದೆ
ರಜತಬೆಟ್ಟದ ಮೇಲಕ್ಕೆ ಹೋಗು,
ನಿನ್ನ ಭಕ್ತರ ಮುಕ್ತಿಯ ಮಾಡು.
ಕಾಮಧೂಮ ಧೂಳೇಶ್ವರನ ಕರುಣದಿಂದ ನೀನೆ ಬದುಕು.