ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಟ್ಟೆಯ ಚುಚ್ಚುವ ಉಳಿಯ ಮೊನೆಯಲ್ಲಿ, ಪ್ರತ್ಯಕ್ಷವಾದ ಪರಮೇಶ್ವರನ ಕಂಡು, ಇತ್ತಲೇಕಯ್ಯಾ, ಕಾಯದ ತಿತ್ತಿಯ ಹೊತ್ತಾಡುವನ ಮುಂದೆ ? ನಿನ್ನ ಭಕ್ತರ ಠಾವಿನಲ್ಲಿಗೆ ಹೋಗಿ ಮುಕ್ತಿಯ ಮಾಡು. ನೀ ಹೊತ್ತ ಬಹುರೂಪ[ದಿ] ತಪ್ಪದೆ ರಜತಬೆಟ್ಟದ ಮೇಲಕ್ಕೆ ಹೋಗು, ನಿನ್ನ ಭಕ್ತರ ಮುಕ್ತಿಯ ಮಾಡು. ಕಾಮಧೂಮ ಧೂಳೇಶ್ವರನ ಕರುಣದಿಂದ ನೀನೆ ಬದುಕು.
--------------
ಮಾದಾರ ಧೂಳಯ್ಯ
-->