ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗ ಜಂಗಮಕ್ಕೆ ಮಾಡಿದ ಭಕ್ತಿ ಮನಕೆ ಮನವೇ ಸಾಕ್ಷಿಯಾಗಿರಬೇಕಲ್ಲದೆ, ಇದಿರಿಟ್ಟು ನುಡಿಯಲಾಗದು. ಅದೇನು ಕಾರಣವೆಂದರೆ : ಬಡವಂಗೆ ಭಾಗ್ಯ ದೊರೆಕೊಂಡಂತಿರಬೇಕಲ್ಲದೆ, ಎನ್ನ ಪದಾರ್ಥವ ನಾನು ಮಾಡಿದೆನು ಅವರು ಕೈಕೊಂಡರೆಂದು ತನ್ನ ಖ್ಯಾತಿ ಭಕ್ತಿಯನು ಮನ ಹಿಗ್ಗಿ ಅನ್ಯರೊಡನೆ ಹೇಳಿಕೊಂಡರೆ ಶಿವನೊಪ್ಪಿಕೊಳ್ಳನು, ಪುರಾತನರು ಮೆಚ್ಚರು. ಅಂತಪ್ಪ ಖ್ಯಾತಿಭಕ್ತನ ಡಂಭಕದ ಭಕ್ತಿಯೆಂತಾಯಿತ್ತೆಂದರೆ, ಹಾವಸಗಲ್ಲ ಮೆಟ್ಟಿ ಜಾರಿ ಬಿದ್ದು ಕೊಡನೊಡೆದಂತಾಯಿತ್ತು ಕಾಣಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಡಂಭಕದ ಪೂಜೆ, ಹೋಹ ಹೋತಿನ ಕೇಡು. ಆಡಂಬರದ ಪೂಜೆ, ತಾಮ್ರದ ಮೇಲಣ ಸುವರ್ಣದ bs್ಞಯೆ. ಇಂತೀ ಪೂಜೆಗೆ ಹೂಸೊಪ್ಪನಿಕ್ಕಿ, ಮನವ ಹೂಸಿ ಮಾಡುವ ಪೂಜೆ, ಬೇರು ನೆನೆಯದ ನೀರು, ಆಯವಿಲ್ಲದ ಗಾಯ, ಭಾವವಿಲ್ಲದ ಗರಿ, ಮನಸಂದ ಮಾರೇಶ್ವರಾ.
--------------
ಮನಸಂದ ಮಾರಿತಂದೆ
-->