ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ ಮುನ್ನ ಮುನ್ನವೆ ಗುರುವಿನೆಡೆಗೆಯಿದಿತ್ತು. ತನುವಿನಲ್ಲಿ ಡಿಂಬ ನೋಡಾ ? ಮನ ಬೇರಾದವರ ತನುವನಪ್ಪುವನೆಗ್ಗ ನೋಡಾ. ಚೆನ್ನಮಲ್ಲಿಕಾರ್ಜುನನ ನೋಡಿ ಕೂಡಿ ಬಂದೆಹೆನಂತಿರುವಂತಿರು.
--------------
ಅಕ್ಕಮಹಾದೇವಿ
ಅನಾಹತಮಹೇಶ್ವರನೆಂಬಾತಂಗೆ, ಪ್ರಸಾದಸ್ಥಲದ ಪ್ರಸಾದಾಶ್ರಯದ ಭವಿತ್ವವ ನೀಕರಿಸಿ ಪ್ರಸಾದವನು ನೆಲೆಗೊಳಿಸಿ; ಅನ್ಯಥಾ ಪವನ ಆಧಾರ ಆಶ್ರಯವ ನೀಕರಿಸಿ ದ್ವಿಜ ಪ್ರಜ ತ್ರಜವೆಂಬ ಡಿಂಬ ಮತ್ರ್ಯಕ್ಕೆ ಕಳುಹಿದಿರಿ ಬಸವಣ್ಣನನು. ಮಡಿ ಮಡಿವಾಳನನು ಒಡನೆ ಕಳುಹಿದಿರಿ. ಕನ್ನಡಿಯಾಗಿ ಭವಕ್ಕೆ ಬಾರದಂತೆ ಭಾವವ ನಿಲಿಸಿದಿರಿ. ಬಳಿಕ ಲಿಂಗಸ್ಥಲ, ಜಂಗಮಸ್ಥಲ, ಪ್ರಸಾದಸ್ಥಲ ನಿರ್ಧರವಾದವು. ಚಿರಕಾಲದಲ್ಲಿ ಮಹಾಸುನಾದಗಣ, ಅನಾಹತನಾದಗಣ ಸಂಪೂರ್ಣನಾಗಿಪ್ಪನಯ್ಯಾ ಕೂಡಲಚೆನ್ನಸಂಗಾ, ನಿಮ್ಮ ಶರಣ ಬಸವಣ್ಣನು !
--------------
ಚನ್ನಬಸವಣ್ಣ
-->