ಅಥವಾ

ಒಟ್ಟು 525 ಕಡೆಗಳಲ್ಲಿ , 72 ವಚನಕಾರರು , 427 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಂಡಲಿಗನೊಂದು ಕೀಡೆಯ ತಂದು ತನ್ನಂತೆ ಮಾಡಿತಲ್ಲಾ, ಎಲೆ ಮಾನವಾ, ಕೇಳಿ ನಂಬಯ್ಯಾ, ನೋಡಿ ನಂಬಯ್ಯಾ, ಎಲೆ ಮಾನವಾ. ತ್ವಚ್ಚಿಂತಯಾ ಮಹಾದೇವ ತ್ವಾಮೇವೈತಿ ನ ಸಂಶಯಃ ಭ್ರಮದ್‍ಭ್ರಮರಚಿಂತಾಯಾಂ ಕೀಟೋಡಿಪಿ ಭ್ರಮರಾಯತೇ ಕೂಡಲಸಂಗನ ಶರಣರ ಅನುಭಾವ ಇದರಿಂದ ಕಿರುಕುಳವೆ, ಎಲೆ ಮಾನವಾ
--------------
ಬಸವಣ್ಣ
ಕಾಯವಿಲ್ಲದ ಶರಣಂಗೆ ಕರ್ಮವಿಲ್ಲ ; ಕರ್ಮಶೂನ್ಯವಾದಲ್ಲಿ ಭಾವನಾಸ್ತಿ ಕಾಣಾ. ಭಾವನಾಸ್ತಿಯಾಗಿ ನಿರ್ಭಾವ ನಿಂದು ನಿಜವಾದಲ್ಲಿ ನೋಡಲಿಲ್ಲ ನುಡಿಯಲಿಲ್ಲ ಕೂಡಲಿಲ್ಲ ಅಗಲಲಿಲ್ಲ. ಗುರುನಿರಂಜನ ಚನ್ನಬಸವಲಿಂಗ ತಾನು ತಾನಾಗಿರ್ದ ಸುಖವ ತಂದು ಹೇಳುವರಾರೂ ಇಲ್ಲ ಈ ಮೂರುಲೋಕದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಂಚಗೋಮಯವ ತಂದು ಪಂಚಪ್ರಣವ ಶಿಖಾಗ್ನಿಯಿಂದೆ ದಹಿಸಿ, ವಂಚನೆಯಳಿದುಳಿದು ವರ್ಮವರಿದು ಸ್ಥಾನವು ಧೂಳನ ಧಾರಣವಾದ ಮಹಾಘನಮಹಿಮ ಶಿವಶರಣಂಗೆ ನಮೋ ನಮೋ ಎಂಬೆನಯ್ಯಾ ನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಈರೇಳುಭುವನವನು ಒಡಲೊ?ಗೆ ಇಂಬಿಟ್ಟುಕೊಂಡು ಲಿಂಗರೂಪನಾಗಿ ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಡಿತ್ತು ನೋಡಾ ! ಅಂತಹ ಅಗಮ್ಯ ಅಗೋಚರ ಲಿಂಗವೆಂದರಿದು ಭಕ್ತನು ತಾನು ಹಿಂದೆ ನಡೆದ ಜೂಜು ಬೇಂಟೆ ಚದುರಂಗ ಲೆತ್ತ ಪಗಡೆಯಾಟಂಗಳಂ ಪರಿಹಾಸಕರ ಕೂಡಿಕೊಂಡು ಕೆಲೆದಾಡುವದಂ ಬಿಟ್ಟು ಬಂಧುವ ತೊರೆದು ಮುಂದೆ ಶಿವಪಥದಲ್ಲಿ ನಡೆಯಬಲ್ಲಾತನೇ ಸದ್ಭಕ್ತನಲ್ಲದೆ, ಹಣದಾಸೆಗೆ ಹಂಗಿಗನಾಗಿ ಗುಣದಾಸೆಗೆ ಅಮೇಧ್ಯವ ತಿಂದು ಬಂಧುಗಳ ಬಿಟ್ಟು ಭಕ್ತಿಯಿಲ್ಲವೇ ಉಂಟೇ ಎಂಬ ಪಂಚಮಹಾಪಾತಕರ ಮುಖವ ನೋಡಲಾಗದು ಅವರ ಮಾತ ಕೇಳಲಾಗದು, ಅದೆಂತೆಂದಡೆ; ಕತ್ತೆ ಭಕ್ತನಾದರೆ ಕಿಸುಕುಳವ ತಿಂಬುದ ಮಾಂಬುದೆ ? ಬೆಕ್ಕು ಭಕ್ತನಾದರೆ ಇಲಿಯ ತಿಂಬುದ ಮಾಂಬುದೆ ? ಹಂದಿ ಭಕ್ತನಾದರೆ ಹಡಿಕೆಯ ತಿಂಬುದ ಮಾಂಬುದೆ ? ಶುನಕ ಭಕ್ತನಾದರೆ ಮೂಳೆ ಮಾಂಸವ ತಿಂಬುದ ಮಾಂಬುದೆ ? ಕೋಳಿಯ ತಂದು ಪಂಜರವ ಕೂಡಿ ಅಮೃತಾನ್ನವನಿಕ್ಕಿ ಸಲಹಿದರೆ ಅದು ತಾನೆ ಮತ್ತೆ ತಿಂಬ ಹಡುವಿಂಗೆ ಚಿತ್ತವನಿಕ್ಕುದುಂ ಮಾಂಬುದೆ ? ಇಂತೀ ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಅನಾಚಾರವ ಬಿಟ್ಟು ಸದಾಚಾರದಲ್ಲಿ ನಡೆಯಬೇಕು. ಗುರುವಾದಡೂ ಆಗಲಿ ಭಕ್ತನಾದಡೂ ಆಗಲಿ ತಾನು ಹಿಂದೆ ಭವಿಯಾಗಿದ್ದಾಗ ಭುಂಜಿಸುತ್ತಿದ್ದ ಸುರೆ ಮಾಂಸ ಭಂಗಿ ಭವಿಸಂಗ ಭವಿಪಾಕ ಇಂತಿವ ಬಿಡದಿರ್ದವರುಗಳು ಆ ಕತ್ತೆ ಬೆಕ್ಕು ಸೂಕರ ಸೊಣಗ ಕೋಳಿಗಿಂದತ್ತತ್ತ ಕಡೆ ನೋಡಿರೇ. ಚಿನ್ನದ ಬೆಟ್ಟವನೇರಿದವನು ಕಣ್ಣುಕಾಣದಿಪ್ಪಂತೆ ಗಣೆಯನೇರಿದ ಡೊಂಬ ಮೈ ಮರೆದಿಪ್ಪಂತೆ ನಡುನೀರಿಗೆ ಹೋದ ಹರಿಗೋಲು ತಲೆ ಕೆಳಗಾದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ತಾ ವ್ರತಿಯಾಗಿದ್ದಲ್ಲಿ ತನ್ನ ಸೀಮೆ ಒಳಗಾಗಿ, ಕಟಕ ಪಾರದ್ವಾರ ಹುಸಿ ಕೊಲೆ ಕಳವು ಅನ್ಯಾಹಾರ ಮುಂತಾದ ನಿಂದಕ ದುರ್ಜನ ಭವಿಸಂಗ ಉಳ್ಳವರ ತಂದೆತಾಯಿಯೆಂದು ಹೆಂಡಿರುಮಕ್ಕಳೆಂದು ಬಂಧುಬಳಗವೆಂದು ಅವರನು ಅಂಗಳದಲ್ಲಿ ಕೂಡಿಕೊಂಡಡೆ, ಅವರ ತಂದು ಕೊಳನಿಕ್ಕಿದಡೆ, ತಿಂಗಳು ಸತ್ತ ನಾಯಮಾಂಸವ ತಂದು ತಿಂದ ದೋಷ ತಪ್ಪದು. ಇದಕ್ಕೆ ಹಿಂದೆ ನೆನೆಯಲಿಲ್ಲ, ಮುಂದೆ ನೋಡಲಿಲ್ಲ. ಈ ತಪ್ಪು ಹೊತ್ತಲ್ಲಿಯೆ ಅಂದಿಗೆ ನೂರು ತುಂಬಿತ್ತೆಂದು ಅಂಗವ ಬಿಡಬೇಕು. ಅಂಗವ ಬಿಡದ ಭಂಡರ ಕಂಡಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗನೊಪ್ಪ.
--------------
ಅಕ್ಕಮ್ಮ
ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ಅಷ್ಟದಳಕಮಲವ ಮೆಟ್ಟಿ ಚರಿಸುವ ಹಂಸನ ಭೇದವ ಹೇಳಿಹೆನು: ಪೂರ್ವದಳಕೇರಲು ಗುಣಿಯಾಗಿಹನು. ಅಗ್ನಿದಳಕೇರಲು ಕ್ಷುಧೆಯಾಗಿಹನು. ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು. ನೈಋತ್ಯದಳಕೇರಲು ಅಸತ್ಯನಾಗಿಹನು. ವರುಣದಳಕೇರಲು ನಿದ್ರೆಗೆಯ್ವುತಿಹನು. ವಾಯುದಳಕೇರಲು ಸಂಚಲನಾಗಿಹನು. ಉತ್ತರದಳಕೇರಲು ಧರ್ಮಿಯಾಗಿಹನು. ಈಶಾನ್ಯದಳಕೇರಲು ಕಾಮಾತುರನಾಗಿಹನು. ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನ ಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ: ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆ ಅಷ್ಟ ಲಿಂಗಕಳೆಯ ಪ್ರತಿಷ್ಠಿಸಿ ಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲು ಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ. ಪಶುವೇನ ಬಲ್ಲುದು ಹಸುರೆಂದೆಠಸುವುದು. ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ, ಸುಬುದ್ಧಿಯೆಂಬ ಉದಕವನೆರೆದು, ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಉದಯಕ್ಕೆ ತನುವೆಂಬ ಹಸ್ತದಲ್ಲಿ ಇಷ್ಟಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಮಧ್ಯಾಹ್ನಕ್ಕೆ ಮನವೆಂಬ ಹಸ್ತದಲ್ಲಿ ಪ್ರಾಣಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಅಸ್ತಮಾನಕ್ಕೆ ಧನವೆಂಬ ಹಸ್ತದಲ್ಲಿ ಭಾವಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ತನು ಮುಟ್ಟದ ಮುನ್ನ, ಮನ ಮುಟ್ಟದ ಮುನ್ನ, ಭಾವ ಮುಟ್ಟದ ಮುನ್ನ, ಲಿಂಗಕ್ಕೆ ದ್ರವ್ಯವ ಸಲಿಸಬಲ್ಲರೆ ಶರಣನೆಂಬೆ. ಕಾಲು ತಾಗದ ಮುನ್ನ, ಕೈ ಮುಟ್ಟದ ಮುನ್ನ ಉದಕವ ತಂದು ಲಿಂಗಕ್ಕೆ ಮಜ್ಜನವ ನೀಡಬಲ್ಲರೆ ಶರಣನೆಂಬೆ. ಹೂವು ನೋಡದ ಮುನ್ನ, ಹಸ್ತದಿಂದ ಮುಟ್ಟದ ಮುನ್ನ, ಹೂವಕೊಯಿದು ಧರಿಸಬಲ್ಲರೆ ಶರಣನೆಂಬೆ. ಈ ಭೇದವ ತಿಳಿಯಬಲ್ಲರೆ ಶಿವಜ್ಞಾನಿಶರಣ ಲಿಂಗಾಂಗಸಂಬಂದ್ಥಿ. ಇಂತೀ ನಿರ್ಣಯವ ತಿಳಿಯದೆ ಶರಣಸತಿ ಲಿಂಗಪತಿ ಎಂಬಾತನ ಲಿಂಗ ಪ್ರೇತಲಿಂಗ, ಅವ ಭೂತಪ್ರಾಣಿ ಎಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹರತೇರು ಬಿತ್ತಿದ ಗಿಡವಿನ ಹೂವ್ವ ಕೊಯ್ದು ಊರೆಲ್ಲ ಕಟ್ಟಿದ ಕೆರೆ ನೀರ ತಂದು ನಾಡೆಲ್ಲ ನೋಡಿರಿಯೆಂದು ಪೂಜಿಸುವ ಪುಣ್ಯ ನೀರಿಗೊ ಹುವ್ವಿಗೊ ನಾಡೆಲ್ಲಕ್ಕೊ ಪೂಜಿಸಿದಾತಗೊ ಇದ ನಾನರಿಯೆ ನೀ ಹೇಳೆಂದಾತ ನಮ್ಮ ದಿಟ್ಟ ವೀರಾದ್ಥಿವೀರ ನಿಜ ಭಕ್ತ ಅಂಬಿಗರ ಚವುಡಯ್ಯನು
--------------
ಅಂಬಿಗರ ಚೌಡಯ್ಯ
ದೀಕ್ಷೋಪದೇಶವ ಮಾಡಿ ಗುರುವಿನ ಕಣ್ಣ ಕಳೆದು ತಲೆ ಹೊಡೆದು ಮೂರು ಹಣವ ಕೊಂಡೆ. ದೀಕ್ಷೋಪದೇಶವ ಹಡೆದ ಭಕ್ತರ ನಾಲಗೆಯ ಕೊಯ್ದು ಕೈ ಮುರಿದು ಮೂರು ಹಣವ ಕೊಂಡೆ. ಈ ಗುರುಶಿಷ್ಯರುಭಯರ ಸಂಯೋಗಕಾಲದಲ್ಲಿರುವ ಸಾಕ್ಷಿಗಣಂಗಳ ಮನೆಯ ಸುಟ್ಟು ಮೂರು ರತ್ನವ ಕೊಂಡೆ. ಇಂತೀ ಮೂವರ ಹಣವ ತಂದು ಗುರುವಿಗೆ ಕೊಟ್ಟು ಕಾಯಕವ ಮಾಡುತ್ತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ ? ಹುಸಿದು ತಂದು ಮಾಡುವಾತ ಭಕ್ತನೆ ? ಭಕ್ತರ ಕುಲವನೆತ್ತಿ ನಿಂದಿಸುವಾತ ಭಕ್ತನೆ ? ನಿಂದಯಾ ಶಿವಭಕ್ತಾನಾಂ ಕೋಟಿ ಜನ್ಮನಿ ಸೂಕರಃ | ಸಪ್ತಜನ್ಮನಿ ಭವೇತ್ ಕುಷ್ಠೀ ದಾಸೀಗರ್ಭೇಷು ಜಾಯತೇ ||' ಎಂದುದಾಗಿ, ತನ್ನ ಪ್ರಾಣದ ಮೇಲೆ ಬಂದಡೂ ಬರಲಿ, ಇವರ ಬಿಡಬೇಕು. ಬಿಡದಿರಲು ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಹಸಿಯ ಸೊಪ್ಪು ಮುರಿದು ತರುವಾಗ ನೀವೇನು ಆಡಿನ ಮಕ್ಕಳೆ? ಹಸಿಯ ಸೊಪ್ಪು ತಂದು ಬಿಸಿ ಮಾಡಿ ಶಶಿಧರನೆಂಬ ಜಂಗಮಕ್ಕೆ ನೀಡಲು, ಆ ಲಿಂಗದ ಹಸಿವು ಹೋಯಿತ್ತೆಂದಾತ ನಮ್ಮಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ದೂಷಕನವನೊಬ್ಬ ದೇಶವ ಕೊಟ್ಟಡೆ, ಆಸೆಮಾಡಿ ಅವನ ಹೊರೆಯಲಿರಬೇಡ. ಮಾದಾರ ಶಿವಭಕ್ತನಾದಡೆ, ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ, ತೊತ್ತಾಗಿಪ್ಪುದು ಕರ ಲೇಸಯ್ಯಾ. ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು, ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ. 136
--------------
ಬಸವಣ್ಣ
ಇನ್ನಷ್ಟು ... -->