ಅಥವಾ

ಒಟ್ಟು 571 ಕಡೆಗಳಲ್ಲಿ , 71 ವಚನಕಾರರು , 391 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛಲಮದವೆಂಬುದು ತಲೆಗೇರಿ ಗುರುಹಿರಿಯರ ನೆಲೆಯನರಿಯದೆ ಮದಿಸಿಪ್ಪರಯ್ಯ. ರೂಪಮದ ತಲೆಗೇರಿ ಮುಂದುಗೊಂಡು ತಮ್ಮ ತನುವಿನ ರೂಪ ಚೆಲ್ವಿಕೆ ನೋಡಿ ಮರುಳಾಗಿ ಚಿದ್ರೂಪನ ನೆನವ ಮರೆದರಯ್ಯಾ. ಯವ್ವನಮದ ತಲೆಗೇರಿ ಮದಸೊಕ್ಕಿದಾನೆಯಂತೆ ಪ್ರಯಾಸಮತ್ತರಾಗಿ ಕಾಮನ ಬಲೆಯೊಳಗೆ ಸಿಲ್ಕಿ ಕಾಮಾರಿನೆನವ ಮರೆದರಯ್ಯಾ. ಧನಮದವೆಂಬುದು ತನುವಿನೊಳು ಇಂಬುಗೊಂಡು ಅರ್ಥಭಾಗ್ಯ ಕಾಡಿ ವ್ಯರ್ಥ ಸತ್ತಿತು ಲೋಕ. ವಿದ್ಯಾಮದವೆಂಬುದು ಬುದ್ಧಿಗೆಡಿಸಿ ನಾ ಬಲ್ಲವ ತಾ ಬಲ್ಲವನೆಂದು ತರ್ಕಿಸಿ ಪ್ರಳಯಕಿಳಿದರು. ರಾಜ್ಯಮದವೆದ್ದು ರಾಜ್ಯವನಾಡಿಸಿ ಬೇಡಿಸಿಕೊಂಡೆನೆಂದು ರಾಜರಾಜರು ಹತವಾದರು. ತಪಮದವೆದ್ದು ನಾ ತಪಸಿ ನಾ ಸಿದ್ಧ ನಾ ಯೋಗಿ ನನಗಾರು ಸರಿಯಿಲ್ಲವೆಂದು ಅಹಂಕಾರಕ್ಕೆ ಗುರಿಯಾಗಿ ಭವಕ್ಕೆ ಬಂದರು ಹಲಬರು. ಇಂತೀ ಅಷ್ಟಮದವೆಂಬ ಭ್ರಾಂತು[ವ] ತೊಲಗಿಸಿ ನಿಭ್ರಾಂತನಾಗಿರಬಲ್ಲರೆ ಶಿವಶರಣನೆಂಬೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಲಿಂಗಪ್ರಸಾದಿಗಳೆಂಬರು ಬಲ್ಲರೆ ನೀವು ಹೇಳರೋ! ಸಜ್ಜನಶುದ್ಧಶಿವಾಚಾರಸಂಪನ್ನರಪ್ಪ ಸದ್ಭಕ್ತರು ತಮ್ಮ ಲಿಂಗಕ್ಕೆ ಗುರುಮಂತ್ರೋಪದೇಶದಿಂದ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ, ಸಕಲ ಪದಾರ್ಥವೆಲ್ಲವ ಪ್ರಮಾಣಿನಲ್ಲಿ ಭರಿತವಾಗಿ ಗಡಣಿಸಿ, ತನು ಕರಗಿ ಮನ ಕರಗಿ ನಿರ್ವಾಹ ನಿಷ್ಪತ್ತಿಯಲಿ ಗಟ್ಟಿಗೊಂಡು ತಟ್ಟುವ ಮುಟ್ಟುವ ಭೇದದಲ್ಲಿಯೇ ಚಿತ್ತವಾಗಿ ಲಿಂಗಾರ್ಪಿತವ ಮಾಡೂದು ಆ ಪ್ರಸಾದವ ತನ್ನ ಪಂಚೇಂದ್ರಿಯ ಸಪ್ತಧಾತು ತೃಪ್ತವಾಗಿ ಭೋಗಿಸೂದು. ಲಿಂಗಪ್ರಸಾದ ಗ್ರಾಹಕನ ಪರಿಯಿದು, ಕೊಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆರುಸ್ಥಲದಲ್ಲಿ ಅರಿತಿಹೆನೆಂದು ಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ ! ಅಂಗದ ಮೇಲೆ ಲಿಂಗಸಂಬಂಧಿಯಾದಡೇನಯ್ಯ, ಆ ಲಿಂಗವ ತನ್ನ ಪ್ರಾಣಕ್ಕೆ ಅವಧರಿಸದನ್ನಕ್ಕ ! ಆ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರ ಬಾಹ್ಯಕ್ರೀಯ ಮಾಡಿದಡೇನಯ್ಯ ನೈಷ್ಠೆಇಲ್ಲದನ್ನಕ್ಕ ಅಷ್ಟಮದಂಗಳ ನಷ್ಟವಮಾಡಿ ಪಂಚೇಂದ್ರಿಯಂಗಳ ಲಿಂಗಮುಖವ ಮಾಡಿ ದೇಹೇಂದ್ರಿಯ ಮನ ಪ್ರಾಣಾದಿಗಳ ಪ್ರಕೃತಿಯನಳಿದು ! ಇಷ್ಟ ಪ್ರಾಣ ಭಾವವೆಂಬ ತ್ರಿವಿಧ ಲಿಂಗಕ್ಕೆ ರೂಪು ರುಚಿ ತೃಪ್ತಿಯನೀವ ವರ್ಮಾದಿವರ್ಮಂಗಳ ಭೇದವನರಿಯದೆ ! ಕರಸ್ಥಲದಲ್ಲಿ ಲಿಂಗವಿಡಿದು ಸಹಭೋಜನವೆಂದು ಒಂದಾಗಿ ಉಂಡು ತಮ್ಮ ಒಡಲ ಹೊರೆವ ಲಿಂಗದ್ರೋಹಿಗಳ ನೋಡಿ ನಗುತ್ತಿರ್ದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಲಿಂಗಭಾಜನದಲ್ಲಿ ಸಹಭೋಜನವ ಮಾಡಿಹೆವೆಂದೆಂಬರು, ಲಿಂಗಭಾಜನದಲ್ಲಿ ಸಹಭೋಜನವ ಮಾಡುವವರ ನೋಡಿರೇ. ಲಿಂಗವಂತರೆಲ್ಲಾ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಆಸೆವುಳ್ಳನ್ನಕ್ಕ ಲಿಂಗಭಾಜನದಲ್ಲಿ ಸಹಭೋಜನವ ಮಾಡುವ ಪರಿಯೆಂತೊ ? ಹಸಿವು ತೃಷೆ ನಿದ್ರೆ ಆಲಸ್ಯ ವ್ಯಸನವುಳ್ಳನ್ನಕ್ಕ, (ಲಿಂಗಭಾಜನದಲ್ಲಿ ಸಹಭೋಜನವ ಮಾಡುವ ಪರಿಯೆಂತೊ ?) ಗುರುಲಿಂಗಜಂಗಮತ್ರಿವಿಧಸಂಪನ್ನತೆವುಳ್ಳನ್ನಕ್ಕ, ಲಿಂಗಭಾಜನದಲ್ಲಿ ಸಹಭೋಜನವ ಮಾಡುವಜಾÕನಿಗಳು ತಾವೇ ಲಿಂಗವೆಂಬರು, ಲಿಂಗವೇ ತಾವೆಂಬರು. ತಾವೆ ಲಿಂಗವಾದರೆ ಜನನ ಮರಣ ರುಜೆ ತಾಗು ನಿರೋಧವಿಲ್ಲದಿರಬೇಡಾ? ಮಹಾಜಾÕನವ ಬಲ್ಲೆವೆಂದು ತಮ್ಮ ಭಾಜನದಲ್ಲಿ ಲಿಂಗಕ್ಕೆ ನೀಡುವ ಪಾತಕರ ತೋರದಿರು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು, ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ'' _ ಇಂತೆಂದುದಾಗಿ_ನಾದ ನೀನು, ಬಿಂದು ನೀನು, ಕಳೆ ನೀನು, ಕಳಾತೀತ ನೀನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಒಬ್ಬರು ನಡೆದಾಚರಣೆಯಲ್ಲಿ ನಡೆಯರು. ಒಬ್ಬರು ಹಿಡಿದ ಶೀಲವ ಹಿಡಿಯರು. ಒಬ್ಬರು ನುಡಿದ ಭಾಷೆಯ ನುಡಿಯರು. ಅದೇನು ಕಾರಣವೆಂದೊಡೆ : ತಮ್ಮ ಲಿಂಗಮಚ್ಚಿ ನಡೆವರು. ತಮ್ಮ ಲಿಂಗಮಚ್ಚಿ ಹಿಡಿವರು. ತಮ್ಮ ಲಿಂಗಮಚ್ಚಿ ನುಡಿವರು. ಇದು ಕಾರಣ. ಅಖಂಡೇಶ್ವರಾ, ನಿಮ್ಮ ಶರಣರು ಪರಮ ಸ್ವತಂತ್ರಶೀಲರು.
--------------
ಷಣ್ಮುಖಸ್ವಾಮಿ
ಪೃಥ್ವಿಯ ಮರೆಯ ಸುವರ್ಣದಂತೆ ಚಿಪ್ಪಿನ ಮರೆಯ ಮುತ್ತಿನಂತೆ ಅಪ್ಪುವಿನ ಮರೆಯ ಅಗ್ನಿಯಂತೆ ಒಪ್ಪದೊಳಗಣ ಮಹಾಪ್ರಕಾಶದಂತೆಯಿಪ್ಪ ಘನಲಿಂಗವನರಿಯೆ. ರುದ್ರ ಬ್ರಹ್ಮ ವಿಷ್ಣ್ವಾವದಿಗಳು ತಮ್ಮ ಆತ್ಮಜ್ಞಾನ [ನಿಶ್ಚಿಂ]ತೆಯೆಂಬ ನಿಜವ ನೀಗಾಡಿಕೊಂಡರು. ಇದನರಿಯದೆ ಆಚರಿಸುವರು, ಆರಿಗೂ ಅಳವಲ್ಲವಯ್ಯಾ. ಇಷ್ಟಪ್ರಾಣಭಾವಸಂಬಂದ್ಥಿಗಳಪ್ಪ ಸದ್ಭಾವಾಚಾರವೆಡೆಗೊಂಡ ಶರಣಂಗಲ್ಲದೆ ಮಿಕ್ಕಿನ ದುರಾಚಾರಿಗಳಿಗೆ ಸಾಧ್ಯವಲ್ಲ, ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು.
--------------
ಬಾಚಿಕಾಯಕದ ಬಸವಣ್ಣ
ಓಂ ನಮಃ ಶಿವಾಯಯೆಂಬುದನರಿಯದೆ ಜಗವೆಲ್ಲವು ನಾಯಾ[ಯಿತ್ತು] ತಮ್ಮ ತಾವರಿಯದವರಿಗೆ, ಇನ್ನು ಹೇಳಿ ಕೇಳಿದಂತೆ ಆಚರಿಸದಿರ್ದಡೆ ಆ ನಾಯ ಸಾವು ತಪ್ಪದು. ಇನ್ನೆತ್ತಣ ಮುಕ್ತಿ ? ಅವರಿಗೆ ಭೋಧಿಸಿದ್ದಾನಗದುಫ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಕಾಮುಕಗೆ ದುರ್ಜನಗೆ ಕಪಟಿಗೆ ಹೇಮಚೋರಗೆ ಕಾರುಕ ಸಮ್ಮಗಾರಗೆ ಆವ ಭಾವದ ವ್ರತವ ಮಾಡಲಿಕ್ಕೆ, ಅವ ಭಾವಿಸಿ ನಡೆಯಬಲ್ಲನೆ? ಕಾಗೆಗೆ ರಸಾನ್ನ ಮುಂದಿರಲಿಕೆ, ಹರಿವ ಕೀಟಕಂಗೆ ಸರಿವುದಲ್ಲದೆ ಮತ್ತೆ ಅದು ಸವಿಯಸಾರವ ಬಲ್ಲುದೆ? ಇಂತೀ ಇವು ತಮ್ಮ ಜಾತಿಯ ಲಕ್ಷಣವ ಕೊಂದಡೂ ಬಿಡವಾಗಿ, ವ್ರತಾಚಾರವ ಸಂಬಂದ್ಥಿಸುವಲ್ಲಿ ಶರಣರೆಲ್ಲರ ಕೂಡಿ, ಈ ಗುಣ ಅಹುದು ಅಲ್ಲ ಎಂದು ಹೇಳಿ, ಜಾತಿವರ್ಗದ ಗುಣವ ನೀಕರಿಸಿ ಬಿಡಿಸಿ, ಸುಜಾತಿಯ ಅರಸಿನ ಪಟ್ಟವಂ ಕಟ್ಟಿ ಶರಣರೆಲ್ಲರು ನಿಹಿತಾಚಾರದಲ್ಲಿ ಸಹಭೋಜನವಂ ಮಾಡಿ ಇಂತೀ ಗುಣನಿಹಿತವ್ರತ ಅಜಾತನ ಒಲುಮೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ನಿಹಿತದ ಶೀಲದ ನೇಮ.
--------------
ಅಕ್ಕಮ್ಮ
ಹೊನ್ನು ಹೆಣ್ಣು ಮಣ್ಣನಾವರಿಸಿಕೊಂಡು, ಒಡವೆ ಆಭರಣಂಗಳ ಹಲ್ಲಣಿಸಿಕೊಂಡು ಬಂದು, ಸರ್ವರಿಗೆ ಶಾಸ್ತ್ರೋಪದೇಶವ ಹೇಳುವರು ವೇಷಧಾರಿಗಳು. ಸೂಳೆಯರಂತೆ ತಮ್ಮ ಉಪಾದ್ಥಿಕೆಗೆ ಒಡಲಾಸೆಗೆ ಹಿತವಚನ ನುಡಿವರು. ಇಂತಪ್ಪ ಪ್ರಪಂಚಿನ ವೇಷಡಂಭಕ ಧೂರ್ತಲಾಂಛನಧಾರಿಗಳಿಗೆ ಮಹಂತಿನ ದೇವರೆನ್ನಬಹುದೆ ? ಎನಲಾಗದು. ಅದೇನು ಕಾರಣವೆಂದಡೆ, ತಮ್ಮಾದಿಯ ನಿಲುವ ತಾವರಿಯರು. ಷಟ್‍ಸ್ಥಲದ ನಿರ್ಣಯವ ಏನೆಂದರಿಯರು. ಆಚಾರದನುಭಾವದಂತರಂಗದ ಮೂಲವ ಮುನ್ನವೇ ಅರಿಯರು. ಇಂತಿದನರಿಯದ ಪಶುಪ್ರಾಣಿಗಳಿಗೆ ಜಂಗಮವೆನ್ನಬಹುದೆ ? ಎನ್ನಲಾಗದಯ್ಯಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಅಕ್ಕನ ಮೂಲೆಯ ಮೊದಲಿನಲ್ಲಿ ಮೂವರು ತಮ್ಮಂದಿರು ಬಂದರು. ತಮ್ಮ ತಮ್ಮ ಅಂಗವ ತೋರಿ, ಅಕ್ಕನ ಮುಂದೆ ಬೆತ್ತಲೆ ಆಡುತ್ತಿದ್ದರೆ, ಬೆತ್ತಲೆಯ ಮುಟ್ಟಿ ಕಂಡು, ತಮ್ಮನದ ತನ್ನದರಲ್ಲಿ ಇಕ್ಕಿಕೊಂಡಳು. ಅಕ್ಕ ತಮ್ಮನ ಕೂಡಿ ಒಪ್ಪವಾಗಿ ಬಾಳುತ್ತಿದ್ದರು, ಬಂಕೇಶ್ವರಲಿಂಗವನರಿತ ಕಾರಣ.
--------------
ಸುಂಕದ ಬಂಕಣ್ಣ
ಗುರುಸ್ಥಲವೆಂದು ಬಂದೆ, ಆಚಾರ್ಯನಾಗಿ. ಲಿಂಗಸ್ಥಲವೆಂದು ಬಂದೆ, ಆರೋಹ ಅವರೋಹಂಗಳ ಪರಿಹರಿಸಿಹೆನೆಂದು. ಶರಣನಾಗಿ ಬಂದೆ, ಭಕ್ತಿಜ್ಞಾನ ವೈರಾಗ್ಯ ತ್ರಿವಿಧದ ಗೊತ್ತ ಮುಕ್ತಿಯ ಮಾಡಿಹೆನೆಂದು. ದುತ್ತೂರಕ್ಕೆ, ಕಲ್ಪತರುವಿಂಗೆ ಮತ್ತಾವ ವೃಕ್ಷಫಲಾದಿಗಳಿಗೆ ಅಪ್ಪುವೊಂದು, ಹಲವು ವೃಕ್ಷಂಗಳು ತಮ್ಮ ತಮ್ಮ ಸಶ್ಚಿತ್ತದ ಸವಿಯಾದಂತೆ, ನಾನಾ ಸ್ಥಲಕ್ಕೆ ದೇವನೊಬ್ಬನೆ. ಊರೊಳಗಾದಲ್ಲಿ ಅರಸು ಆಳಿನೊಳಗಾದಂತೆ ಆದೆಯಲ್ಲಾ. ಕ್ರೀಗೆ ತುತ್ತಾಗಿ ಸಿಕ್ಕಿದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪರವನರಿದ ಸತ್ಪುರುಷರ ಸಂಗದಿಂದ ಶಿವಯೋಗದ ವಚನಾಮೃತವನು, ಸದ್ಭಕ್ತಿಯುಳ್ಳ ಮಹೇಶ್ವರನು ತನ್ನ ಶ್ರೋತ್ರಮುಖದಲ್ಲಿ ಕೇಳಿ, ಮನೋಮುಖದಲ್ಲಿ ಹಾರೈಸಿ, ತೃಪ್ತಿಮುಖದಲ್ಲಿ ಸಂತೋಷವನೆಯ್ದಬಲ್ಲಡೆ ಆ ಸುಖವು ಪರಿಣಾಮವನೊಡಗೂಡುವುದು ! ಹೀಂಗಲ್ಲದೆ, ಸಂಸಾರವಿಷಯರಸವ ತಮ್ಮ ಹೃದಯಕೂಪದಲ್ಲಿ ತುಂಬಿಕೊಂಡಿಪ್ಪ ಜೀವರು ಕಾಯದಲ್ಲಿ ವಚನಾಮೃತವ ತುಂಬಿದಡೆ, ಭಿನ್ನಘಟದಲ್ಲಿ ಉದಕವ ಹೊಯ್ದಂತೆ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->