ಅಥವಾ

ಒಟ್ಟು 308 ಕಡೆಗಳಲ್ಲಿ , 67 ವಚನಕಾರರು , 235 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ. ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ. ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ | ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇಂದೆನ್ನ ಮನೆಗೆ ಒಡೆಯರು ಬಂದಡೆ ತನುವೆಂಬ ಕಳಶದಲುದಕವ ತುಂಬಿ, ಕಂಗಳ ಸೋನೆಯೊಡನೆ ಪಾದಾರ್ಚನೆಯ ಮಾಡುವೆ. ನಿತ್ಯ ಶಾಂತಿಯೆಂಬ ಶೈತ್ಯದೊಡನೆ ಸುಗಂಧವ ಪೂಸುವೆ. ಅಕ್ಷಯ ಸಂಪದವೆಂದರಿದು ಅಕ್ಷತೆಯನೇರಿಸುವೆ. ಹೃದಯಕಮಲ ಪುಷ್ಪದೊಡನೆ ಪೂಜೆಯ ಮಾಡುವೆ. ಸದ್ಭಾವನೆಯೊಡನೆ ಧೂಪವ ಬೀಸುವೆ. ಶಿವಜ್ಞಾನ ಪ್ರಕಾಶದೊಡನೆ ಮಂಗಳಾರತಿಯನೆತ್ತುವೆ. ನಿತ್ಯತೃಪ್ತಿಯೊಡನೆ ನೈವೇದ್ಯವ ಕೈಕೊಳಿಸುವೆ. ಪರಿಣಾಮದೊಡನೆ ಕರ್ಪೂರ ವೀಳೆಯವ ಕೊಡುವೆ. ಪಂಚಬ್ರಹ್ಮದೊಡನೆ ಪಂಚಮಹಾವಾದ್ಯವ ಕೇಳಿಸುವೆ. ಹರುಷದೊಡನೆ ನೋಡುವೆ, ಆನಂದದೊಡನೆ ಕುಣಿಕುಣಿದಾಡುವೆ, ಪರವಶದೊಡನೆ ಹಾಡುವೆ, ಭಕ್ತಿಯೊಡನೆ ಎರಗುವೆ, ನಿತ್ಯದೊಡನೆ ಕೂಡಿ ಆಡುವೆ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ನಿಲವ ತೋರಿದ ಗುರುವಿನಡಿಯಲ್ಲಿ ಅರನಾಗಿ ಕರಗುವೆ.
--------------
ಅಕ್ಕಮಹಾದೇವಿ
ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಉಲಿವ ಉಯ್ಯಲೆಯ ಹರಿದು ಬಂದೇರಲು, ತಾಗದೆ ತೂಗುವುದು, ಭವಸಾಗರ ಮರಳಿ ಬಾರದಂತೆ ! ಹಂಸೆಯ ಮೇಲೆ ತುಂಬಿ ಕುಳ್ಳಿರ್ದು ಸ್ವರ ಗೆಯ್ಯುವ ಘೋಷವಿದೇನೊ ? ಆತನಿರ್ದ ಸರ ಹರಿಯದೆ ಇದ್ದಿತ್ತು. ದೇಹಿಗಳೆಲ್ಲ ಅರಿವರೆ, ಗುಹೇಶ್ವರನ ಆಹಾರಮುಖವ ?
--------------
ಅಲ್ಲಮಪ್ರಭುದೇವರು
ಸರ್ವಾಚಾರಸಂಪತ್ತನರಿದಲ್ಲದೆ ನಿರವಯಲಪದವ ಕಾಣಬಾರದು ನೋಡಾ ಆರಿಗೆಯು. ಸರ್ವಾಚಾರಸಂಪತ್ತು ಎಂತೆನಲು, ಷಡ್‍ಭೂತಂಗಳಲ್ಲಿ ಷಡ್ವಿಧ ಮಂತ್ರಂಗಳ ನೆಲೆಗೊಳಿಸಿ, ಆ ಷಡ್ವಿಧ ಮಂತ್ರಂಗಳನೆ ಷಡ್ವಿಧಚಕ್ರಂಗಳೆಂದು ತಿಳಿದು, ಆ ಷಡ್ವಿಧ ಚಕ್ರಂಗಳಿಗೆ ಷಡ್ವಿಧ ಅದ್ಥಿದೈವಂಗಳನೆ ಷಡ್ವಿಧ ಅಂಗವೆಂದಾಧಾರಗೊಳಿಸಿ, ಆ ಷಡ್ವಿಧ ಅಂಗಕ್ಕೆ ಷಡ್ವಿಧ ಕರಣಂಗಳನೆ ಷಡ್ವಿಧ ಹಸ್ತಂಗಳೆಂದು ಅರಿದಳವಡಿಸಿಕೊಂಡು, ಆ ಷಡ್ವಿಧ ಹಸ್ತಂಗಳಿಗೆ ಷಡ್ವಿಧ ಲಿಂಗಂಗಳನಳವಡಿಸಿಕೊಂಡು, ಆ ಷಡ್ವಿಧ ಲಿಂಗಕ್ಕೆ ಷಡ್ವಿಧೇಂದ್ರಿಯಂಗಳನೆ ಷಡ್ವಿಧ ಪದಾರ್ಥಂಗಳೆಂದರಿದು, ಆ ಷಡ್ವಿಧ ಪದಾರ್ಥಂಗಳನು ಷಡ್ವಿಧ ಭಕ್ತಿಯಿಂದೆ ಷಡ್ವಿಧ ಲಿಂಗಮುಖಂಗಳಿಗೆ ಸಮರ್ಪಿಸಲು, ಒಳಹೊರಗೆಲ್ಲ ಆ ಷಡ್ವಿಧ ಲಿಂಗದ ಬೆಳಗು ತುಂಬಿ ತೊಳಗಿ ಬೆಳಗುತಿರ್ಪುದು ನೋಡಾ. ಎಡೆದೆರಹಿಲ್ಲದೆ ಆ ಷಡ್ವಿಧ ಲಿಂಗದ ಬೆಳಗಿನೊಳಗೆ ತನ್ನ ಷಡ್ವಿಧಾಂಗದ ಕಳೆಗಳನೆಲ್ಲವನಡಗಿಸಿ, ತಾನೆಂಬ ಕುರುಹುದೋರದಿರ್ದಡೆ ಅದೇ ಸರ್ವಾಚಾರಸಂಪತ್ತು ನೋಡಾ. ಇಂತಪ್ಪ ಸರ್ವಾಚಾರಸಂಪತ್ತು ನಿಮ್ಮ ಪೂರ್ಣ ಒಲುಮೆಯ ಶರಣರಿಗಲ್ಲದೆ ಉಳಿದವರಿಗಳವಡದಯ್ಯಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಮಹಾಮನೆಯ ಮಂಟಪದಲ್ಲಿ ನಾಲ್ಕು ನಡುವಳ ಕಂಬದ ನಡುವಳ ಕಂಬದಲ್ಲಿ ಒಂದು ಒರಲೆ ಮನೆಯ ಮಾಡಿತ್ತು. ಅದಕ್ಕೆ ಎಂಟು ಕಂಬ, ಒಂಬತ್ತು ಬಾಗಿಲು, ಹತ್ತು ಕದ; ಮಿಗಿಲೊಂದು ಮುಚ್ಚುವುದಕ್ಕೆ ಬಾಗಿಲಿಲ್ಲ. ತುಂಬಿ ಅಲ್ಲಿ ಹಾರಿತ್ತು. ಆ ಆತ್ಮನ ನೆಲೆಯನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಗಗನಪವನದ ಮೇಲೆ ಉದಯಮುಖದನುಭಾವ, ಸದಮದದ ಗಜವ ನಿಲಿಸುವ ಮಾವತಿಗ ಬಂದ. ಅಷ್ಟದಳಕಮಲದೊಳು ಸೃಷ್ಟಿಯಂಕುರ ಭಜನೆ; ಮೆಟ್ಟಿ ನಿಂದಾತ ಪರಮಯೋಗಿಯಾಗದೆ ಮಾಣ ! ಬಯಲ ಬಣ್ಣವ ತುಂಬಿ, ನೆಳಲ ಶೃಂಗಾರವ ಮಾಡಿದ ಗುಹೇಶ್ವರನ ಶರಣ ಚನ್ನಬಸವಣ್ಣಂಗೆ ಶರಣೆನುತಿರ್ದೆನು.
--------------
ಅಲ್ಲಮಪ್ರಭುದೇವರು
ಮಾಗಿಯ ಹುಲ್ಲಿನ ಸೋಂಕಿನಂತೆ ತನು ಪುಳಕಿತಳಾದಳವ್ವೆ. ನುಡಿ ತೊದಳು ಆತನ ಒಲವೆ ಆಧಾರವಾಗಿದ್ದಳವ್ವೆ. ಬಿಳಿಯ ತುಂಬಿ ಕುಂಕುಮ ರಸದಲ್ಲಿ ಬಂಡುಂಡಂತೆ. ಮಹಾಲಿಂಗ ಗಜೇಶ್ವರನಲ್ಲಿ ತನ್ನಲ್ಲಿ ತಾನೆ ರತಿಯಾಗಿರ್ದಳವ್ವೆ
--------------
ಗಜೇಶ ಮಸಣಯ್ಯ
ಆದಿ ಅನಾದಿಯಿಂದತ್ತತ್ತ ಮೀರಿ ತೋರುವ ಪರಾತ್ಪರವಸ್ತುವೆ ತನ್ನ ಚಿದ್ವಿಲಾಸದಿಂದ ತಾನೆ ಜಗತ್ಪಾವನಮೂರ್ತಿಯಾಗಿ, ತನ್ನಂತರಂಗ ಬಹಿರಂಗದಲ್ಲಿ ಭಕ್ತಿ ಜ್ಞಾನ ವೈರಾಗ್ಯ ಪಟ್ಸ್ಥಲಮಾರ್ಗವಿಡಿದು ಭಕ್ತಿಪ್ರಿಯರಾಗಿ, ತಮ್ಮಂತರಂಗದೊಳಗೆ ಷಡ್ವಿಧಸಕೀಲ ಛತ್ತೀಸಸಕೀಲ ನಾಲ್ವತ್ತೆಂಟುಸಕೀಲ ಐವತ್ತಾರುಸಕೀಲ ಅರುವತ್ತಾರುಸಕೀಲ ತೊಂಬತ್ತಾರುಸಕೀಲ ನೂರೆಂಟುಸಕೀಲ ಇನ್ನೂರ ಹದಿನಾರುಸಕೀಲ ಮೊದಲಾದ ಸಮಸ್ತಸಕೀಲಂಗಳನೊಳಕೊಂಡು, ಬೆಳಗುವ ಗುರು ಲಿಂಗ ಜಂಗಮವ ಕಂಗಳು ತುಂಬಿ, ಮನ ತುಂಬಿ ಭಾವ ತುಂಬಿ ಕರಣಂಗಳು ತುಂಬಿ, ತನು ತುಂಬಿ ಪ್ರಾಣ ತುಂಬಿ ಸರ್ವಾಂಗ ತುಂಬಿ, ಅರ್ಚಿಸಲರಿಯದೆ, ಹಲವನರಸಿ, ತೊಳಲುವ ಮೂಳರ ಕಂಡು ಬೆರಗಾದೆ ನೋಡಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ತುಂಬಿ ಪರಿಮಳವನುಂಡಿತೊ, ಪರಿಮಳ ತುಂಬಿಯ ನುಂಡಿತೊ ? ಲಿಂಗ ಪ್ರಾಣವಾಯಿತೊ ? ಪ್ರಾಣ ಲಿಂಗವಾಯಿತೊ ? ಗುಹೇಶ್ವರಾ, ಇವರ ಈ ಉಭಯದ ಭೇದವ ನೀನೆ ಬಲೆ
--------------
ಅಲ್ಲಮಪ್ರಭುದೇವರು
ಮೊಟ್ಟೆ ಮೊಟ್ಟೆ ಪತ್ರೆಯ ತಂದು ಒಟ್ಟಿ, ಪೂಜಿಸಿದ[ಡೇ]ನು ಮನಶುದ್ಧವಿಲ್ಲದನ್ನಕ್ಕರ ? ಮನಮಗ್ನವಾಗಿ ಶಿವಧ್ಯಾನದಲ್ಲಿ ಕೂಡಿ, ಒಂದೇ ದಳವ ಧರಿಸಿದರೆ ಶಿವನು ಒಲಿಯನೆ? ಇಂತು ಪೂಜೆಯ ಮಾಡುವುದಕ್ಕಿಂತಲು ಅದೇ ತೊಪ್ಪಲನು ಕುದಿಸಿ ಪಾಕವ ಮಾಡಿದಲ್ಲಿ ಆ ಲಿಂಗವು ತೃಪ್ತಿಯಾಯಿತ್ತು. ಬರಿದೆ ಲಿಂಗವ ಪೂಜಿಸಿ ಜಂಗಮಕ್ಕೆ ಅನ್ನವ ಕೊಡದೆ, ಲಿಂಗದ ಮುಖವು ಜಂಗಮವು ಎಂದು ತಿಳಿಯದೆ, ತನು-ಮನ-ಧನವನು ಗುರು-ಲಿಂಗ-ಜಂಗಮಕ್ಕೆ ಸವೆಸದೆ, ಬಾಗಿಲಿಗೆ ಕಾವಲಿಕ್ಕಿ, ಹೆಂಡಿರು ಮಕ್ಕಳು ಕೂಡಿಕೊಂಡು, ತನ್ನ ತಾನೇ ತಿಂಬುವಂಥ ನೀಚ ಹೊಲೆಯರ ಮೂಗ ಸವರಿ ಮೆಣಸಿನ ಹಿಟ್ಟು ತುಪ್ಪವ ತುಂಬಿ, ಪಡಿಹಾರಿ ಉತ್ತಣ್ಣಗಳ ಪಾದುಕೆಯಿಂದ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಶಿವಲಿಂಗವ ನೋಡುವ ಕಣ್ಣಲ್ಲಿ ಪರಸ್ತ್ರೀಯ ನೋಡಿದಡೆ ಅಲ್ಲಿ ಲಿಂಗವಿಲ್ಲ. ಪರಬ್ರಹ್ಮವ ನುಡಿವ ಜಿಹ್ವೆಯಲ್ಲಿ, ಪರಸ್ತ್ರೀಯರ ಅಧರಪಾನವ ಕೊಂಡಡೆ ಪ್ರಸಾದಕ್ಕೆ ದೂರ. ಘನಲಿಂಗವ ಪೂಜಿಸುವ ಕೈಯಲ್ಲಿ, ಪರಸ್ತ್ರೀಯರ ಕುಚವ ಮುಟ್ಟಿದಡೆ, ತಾ ಮಾಡಿದ ಪೂಜೆ ನಿಷ್ಫಲ. ಇದನರಿಯದಿರ್ದಡೆ ಬಳ್ಳದಲ್ಲಿ ಸುರೆಯ ತುಂಬಿ ಮೇಲೆ ಬೂದಿಯ ಹೂಸಿದಂತಾಯಿತ್ತು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ತುಂಬಿ ಬಂದಡೆ ಪರಿಮಳ ಓಡಿತ್ತ ಕಂಡೆ ! ಇದೇನು ಸೋಜಿಗ ಹೇಳಾ ? ಮನ ಬಂದಡೆ ಬುದ್ಧಿ ಓಡಿತ್ತ ಕಂಡೆ, ದೇವ ಬಂದಡೆ ದೇಗುಲ ಓಡಿತ್ತ ಕಂಡೆ_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶುದ್ಧ ನಿರ್ಮಾಯ ನಿರ್ಮಲವೆಂಬ ಅಂಗತ್ರಯದಲ್ಲಿ ಸದ್ಗತಿ ಸತ್ಕ್ರಿಯೆ ಸದ್ಧರ್ಮವೆಂಬ ಪೀಠತ್ರಯದ ಮೇಲೆ ವಿಚಾರಗುರು ವಿನಯಗುರು ಕೃಪಾಗುರುವೆಂಬ ಗುರುತ್ರಯವ ಧರಿಸಿ ಘನಭಕ್ತಿಯ ಕುರುಹಬಲ್ಲರೆ ಆತ ಸತ್ಯಭಕ್ತನೆಂಬೆ. ಸುಬುದ್ಧಿ ನಿಃಕಾಮ ಅನುಕೂಲೆಯೆಂಬ ಮನತ್ರಯದ ವಿಶೇಷಗತಿ ಸುಜ್ಞಾನ ವಿಮಲಜ್ಞಾನವೆಂಬ ಪೀಠತ್ರಯದಮೇಲೆ ಸಗುಣಲಿಂಗ ನಿರ್ಗುಣಲಿಂಗ ನಿರ್ಭೇದ ಲಿಂಗವೆಂಬ ಲಿಂಗತ್ರಯವ ಧರಿಸಿ, ಚಿನ್ಮಯಭಕ್ತಿಯ ಕುರುಹ ಬಲ್ಲರೆ ಆತ ನಿತ್ಯಭಕ್ತನೆಂಬೆ. ಸಂವಿತ್‍ಕಳಾ ಸಂಧಾನಕಳಾ ಸಮರಸಕಳಾಯೆಂಬ ಭಾವತ್ರಯದಲ್ಲಿ, ಮತಿಗಮನ, ರತಿಗಮನ, ಮಹಾರತಿಗಮನವೆಂಬ ಭಾವತ್ರಯದ ಸತ್ಪ್ರೇಮ ಸುಖಮಯ ಆನಂದವೆಂಬ ಪೀಠತ್ರಯದ ಮೇಲೆ ಜ್ಞಾನಜಂಗಮ, ಮಹಾಜ್ಞಾನಜಂಗಮ, ಪರಮಜ್ಞಾನಜಂಗಮವೆಂಬ ಜಂಗಮತ್ರಯವ ಧರಿಸಿ, ಪರಿಪೂರ್ಣಭಕ್ತಿಯ ಕುರುಹ ಬಲ್ಲರೆ ಆತ ನಿಜಭಕ್ತನೆಂಬೆ. ಈ ಭೇದವನರಿಯದೆ ಬರಿಯ ಕಾಯ ಮನ ಭಾವದಲ್ಲಿ ಹುಸಿನೆರವಿಯ ತುಂಬಿ ಹುಸಿಯ ಡಂಬ್ಥಿನ ಭಕ್ತಿಯ ಕಿಸುಕುಳತ್ವಕ್ಕೆ ಬಿಸಿಯನಿಟ್ಟು, ತಪ್ಪಿಸಿ ತೋರುತಿರ್ದನು ಗಂಬ್ಥೀರ ಭಕ್ತಿಯ ನೆರೆದು ಚೆಲುವಂಗ ಪ್ರಾಣಾತ್ಮಪ್ರಿಯ ಸಿದ್ಧಲಿಂಗನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->