ಬಳಿಕ್ಕೆಯುಮಗ್ನಿಮಂಡಲದ ವಾಯುದಿಕ್ಕಿನೇಕದಳದಲ್ಲಿ ರಕಾರಮ
ನದರಾಚೆಯ ಚಂದ್ರಮಂಡಲದ ವಾಯುದಿಕ್ಕಿನ ದಳದ್ವಯದಲ್ಲಿ
ವಾಯುದಳದೊಳಗೆ ಎಕಾರಮಂ,
ವಾಯು ಕುಬೇರರಪದಿಕ್ಕಿನ ದಳದ್ವಯದಲ್ಲಿ ಐಕಾರಮ
ನದರಾಚೆಯ ಸೂರ್ಯಮಂಡಲದ ದಳತ್ರಯದಲ್ಲಿ
ವಾಯುದಳದೊಳಗೆಕಾರಮಂ,
ವಾಯು ಕುಬೇರರಪದಿಕ್ಕಿನ ದಳದ್ವಯದಲ್ಲಿ ಥಕಾರ ದಕಾರಂಗಳಂ
ಬರೆದು ಭಾವಿಪುದೆಂದೆಯಯ್ಯಾ,
ಪರಮ ಶಿವಲಿಂಗೇಶ್ವರ ಪ್ರಚುರ ಕಲ್ಯಾಣ ಗುಣಾಕರ.