ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮಡದಿ ಎನಲಾಗದು ಬಸವಂಗೆ ಎನ್ನನು. ಪುರುಷನೆನಲಾಗದು ಬಸವನ ಎನಗೆ. ಉಭಯದ ಕುಳವ ಹರಿದು ಬಸವಂಗೆ ಶಿಶುವಾನಾದೆನು, ಬಸವನೆನ್ನ ಶಿಶುವಾದನು. ಪ್ರಮ ಥರು ಪುರಾತರು ಸಾಕ್ಷಿಯಾಗಿ ಸಂಗಯ್ಯನಿಕ್ಕಿದ ದಿಬ್ಯವ ಮೀರದೆ ಬಸವನೊಳಗಾನಡಗಿದೆ.
ಮನಕ್ಕೆ ಬಂದಂತೆ ಹಲವುಪರಿಯ ವೇಷವ ತೊಟ್ಟು ಹರಿದಾಡುವ ಜಾತಿಕಾರರ ಈಶ್ವರನು ಮೆಚ್ಚನು; ಸದಾಶಿವನು ಸೈರಣೆಯ ಮಾಡನು. ಬಸವಾದಿ ಪ್ರಮಥರು ಬನ್ನಿ ಕುಳ್ಳಿರಿ ಎನ್ನರು. ಅಮುಗೇಶ್ವರಲಿಂಗವನರಿಯದ ಅನಾಚಾರಿಗಳ ಕಂಡಡೆ ಬನ್ನಿ ಕುಳ್ಳಿರಿ ಎಂಬ ನುಡಿಯ ನುಡಿಯರು.