ಅಥವಾ

ಒಟ್ಟು 27 ಕಡೆಗಳಲ್ಲಿ , 9 ವಚನಕಾರರು , 26 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿಂಗೆ ಜೀವಪ್ರಸಾದ, ಚರಕ್ಕೆ ಭಾವಪ್ರಸಾದ. ಜೀವಭಾವದಲ್ಲಿ ಕೂಡಲಿಕ್ಕಾಗಿ ಪರಮಪ್ರಸಾದ. ಆ ಪರಮಪ್ರಸಾದ ವ್ಯತಿರಿಕ್ತವಾಗಿ ಕಾಣಿಸಿಕೊಂಡಲ್ಲಿ ಪ್ರಸಾದವಾಯಿತ್ತು. ಆ ಲಿಂಗಪ್ರಸಾದ ತನಗಾಗಲಾಗಿ ಸ್ವಯಪ್ರಸಾದವಾಯಿತ್ತು. ಇಂತೀ ಪ್ರಸಾದಿಸ್ಥಲ ವಿವರಂಗಳ ತಿಳಿದು ಲಿಂಗಕ್ಕೆ ಕೊಟ್ಟು ಕೊಳಬೇಕು. ದಹನ ಚಂಡಿಕೇಶ್ವರಲಿಂಗಕ್ಕೆ ಅರಿದು ಅರ್ಪಿಸಬೇಕು.
--------------
ಪ್ರಸಾದಿ ಲೆಂಕಬಂಕಣ್ಣ
ದ್ಥೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ. ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ ಮಹಾಕುಂಭಘೃತಂಗಳ ಕೊಂಡಂತೆ. ಮಹಾಮೇರುವೆಯ ಅಲ್ಪಮೊರಡಿ ದ್ಥಿಕ್ಕರಿಸಿ ಅಲ್ಲಿಗೆ ಹೋದಡೆ ಅದರ ತಪ್ಪಲಲ್ಲಿಯೆ ತಾನಡಗಿದಂತೆ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.
--------------
ಪ್ರಸಾದಿ ಲೆಂಕಬಂಕಣ್ಣ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.
--------------
ಪ್ರಸಾದಿ ಲೆಂಕಬಂಕಣ್ಣ
ಅಟ್ಟುದನಡಲುಂಟೆ ? ಸುಟ್ಟುದ ಸುಡಲುಂಟೆ ? ಜ್ಞಾನಾಗ್ನಿಯಲ್ಲಿ ದಗ್ಧವಾದ ಪರಮಶಿವಯೋಗಿಗೆ ಹುಟ್ಟು ಹೊಂದೆಂಬ ಉಭಯ ಜಡತೆಯುಂಟೆ ? ಅದೆಂತೆಂದಡೆ: ``ದಗ್ಧಸ್ಯ ದಹನಂ ನಾಸ್ತಿ ಪಾಕಸ್ಯ ಪಚನಂ ನ ಹಿ ಜ್ಞಾನಾಗ್ನಿರ್ದಗ್ಧದೇಹಸ್ಯ ನ ಚ ದಾಹೋ ನ ಚ ಕ್ರಿಯಾ '' ಎಂದುದಾಗಿ_ ನಮ್ಮ ಗುಹೇಶ್ವರಲಿಂಗವನೊಡಗೂಡಿ, ಎರಡಳಿದು ನಿಂದ, ಮಹಾಮಹಿಮಂಗೆ ಪರಿಭವವಿಲ್ಲ ಕಾಣಿರೊ.
--------------
ಅಲ್ಲಮಪ್ರಭುದೇವರು
ರೂಪನರಿದು ರುಚಿಯನುಂಡು ಅವರ ನಿಹಿತಂಗಳ ಕಂಡು ಮತ್ತೆ ಲಿಂಗಕ್ಕೆ ಅರ್ಪಿಸಿ ಪ್ರಸಾದ ಮುಂತಾಗಿ ಕೊಂಡೆಹೆನೆಂಬ ವರ್ತಕಭಂಡರ ನೋಡಾ. ಕಟ್ಟಿ ಹುಟ್ಟದ ರತ್ನ, ಸುಗುಣ ಅಪ್ಪು ತುಂಬದ ಮುತ್ತು ಕಳೆ ತುಂಬದ ಬೆಳಗು, ಹೊಳಹುದೋರದ ಸೂತ್ರ ಲವಲವಿಕೆಯಿಲ್ಲದ ಚಿತ್ತ, ಇದಿರಗುಣವನರಿಯದ ಆತ್ಮ. ಇಂತಿವು ಫಲಿಸಬಲ್ಲವೆ ? ಕ್ರೀಯನರಿದು ಅರ್ಪಿಸಬೇಕು. ಅರ್ಪಿಸುವಲ್ಲಿ ದೃಷ್ಟಾಂತದ ಸಿದ್ಧಿ ಪ್ರಸಿದ್ಧವಾಗಬೇಕು. ಕಾಣದವಗೆ ತಾ ಕಂಡು ಕುರುಹಿನ ದಿಕ್ಕ ಅರುಹಿ ತೋರುವನ ತೆರನಂತೆ ತಾ ಲಕ್ಷಿಸಿದಲ್ಲಿ, ತಾ ದೃಷ್ಟಿಸಿದಲ್ಲಿ, ತಾ ಮುಟ್ಟಿದಲ್ಲಿ ಅರ್ಪಿತವಾದ ಪ್ರಸಾದಿಯ ಕಟ್ಟು. ದಹನ ಚಂಡಿಕೇಶ್ವರಲಿಂಗವು ತಾನಾದ ಚಿತ್ತದವನ ಮುಟ್ಟು.
--------------
ಪ್ರಸಾದಿ ಲೆಂಕಬಂಕಣ್ಣ
ಕಣ್ಣು ನೋಡಿ ಅರ್ಪಿಸಿದ ಪ್ರಸಾದ ಅದಾವ ಲಿಂಗಕ್ಕೆ ? ಕಿವಿ ಕೇಳಿ ಅರ್ಪಿಸಿದ ಪ್ರಸಾದ ಅದಾವ ಲಿಂಗಕ್ಕೆ ? ಘ್ರಾಣ ವಾಸಿಸಿ ಅರ್ಪಿಸಿದುದು ಅದಾವ ಲಿಂಗಕ್ಕೆ ? ಜಿಹ್ವೆಯ ಕೊನೆಯಲ್ಲಿ ಸವಿದು ಅರ್ಪಿಸಿದುದು ಅದಾವ ಲಿಂಗಕ್ಕೆ ? ಕರ ಮುಟ್ಟಿದ ಸೋಂಕಿನ ಸುಖ ಅದಾವ ಲಿಂಗಕ್ಕೆ ? ಇಂತೀ ಪಂಚೇಂದ್ರಿಯಂಗಳಲ್ಲಿ ಅರ್ಪಿಸಿಕೊಂಬ ಆತ್ಮನ ತೃಪ್ತಿ ಐದೋ ಮೂರೋ ಬೇರೆರಡೋ ಏಕವೋ ? ಎಂಬುದ ನಿಧಾನಿಸಿ ಬಹುವೆಜ್ಜದ ಕುಂಭದಲ್ಲಿ ಅಗ್ನಿಯನಿರಿಸಿ ಉರುಹಲಿಕೆ ವೆಜ್ಜ ವೆಜ್ಜಕ್ಕೆ ತಪ್ಪದೆ ಕಿಚ್ಚು ಹೊದ್ದಿ ತೋರುವದು ವೆಜ್ಜದ ಗುಣವೋ ? ಒಂದಗ್ನಿಯ ಗುಣವೋ ? ಇಂತೀ ಗುಣವ ನಿಧಾನಿಸಿಕೊಂಡು ನಿಜಪ್ರಸಾದವ ಕೊಂಬ ಸ್ವಯಪ್ರಸಾದಿಗೆ ತ್ರಿವಿಧಪ್ರಸಾದ ಸಾಧ್ಯವಪ್ಪುದಲ್ಲದೆ ವರ್ತಕಪ್ರಸಾದಿಗಳಿತ್ತಲೆ ಉಳಿದರು. ದಹನ ಚಂಡಿಕೇಶ್ವರಲಿಂಗಕ್ಕೆ ಅರ್ಪಿತ ಮುಟ್ಟದೆ ಹೋಯಿತ್ತು.
--------------
ಪ್ರಸಾದಿ ಲೆಂಕಬಂಕಣ್ಣ
ಮತ್ತಮಾ ಶಿವಪೂಜಾವಿಧಿಗೆ ದೇಶ ಕಾಲ ಸ್ಥಾನ ದ್ರವ್ಯ ಪ್ರಯೋಜನಾದಿ ಗಳಂ ತಾಂತ್ರಿಕ ವೈದಿಕಮೆಂಬೆರಡೂ ಪೂಜಾಭೇದಂದಳಂ, ಅಂತಃಶೌಚ ಬಾಹ್ಯ ಶೌಚಯೆಂಬೆರಡೂ ಶೌಚಭೇದಂಗಳಂ, ಶೋಷಣ ದಹನ ಪ್ಲಾವನಮೆಂಬ ಕ್ರಿಯೆಗಳಂ, ಆತ್ಮಶುದ್ಧಿ ಸ್ಥಾನಶುದ್ಧಿ ದ್ರವ್ಯ ಶುದ್ಧಿ [ಲಿಂಗಶುದ್ಧಿ] ಮಂತ್ರ ಶುದ್ಧಿಯೆಂಬ ಪಂಚ ಶುದ್ಧಿಗಳ ವಿಸ್ತರಿಸುದವರಲ್ಲಿ ಶೌಚಾಚಮನಸ್ನಾನ ಭಸ್ಮರುದ್ರಾಕ್ಷಧಾರಣ ಕವಚ ಮಂತ್ರ ಕಲಾನ್ಯಾಸ ಧ್ಯಾನಾದಿ ರಚನೆಂಗೆಯ್ದುದೇ ಆತ್ಮಶುದ್ಧಿ ಎನಿಸೂದು. ಸಮ್ಮಾರ್ಜನಾನುಲೇಪನ ವರ್ಣಕ ಗಂಧಪುಷ್ಪಧೂಪ ದೀಪಾದಿ ನಿರ್ಮಲೋಪ ಕರಣಂಗಳಿಂ ಚೌಕಮನಲಂಕರಿಪುದೆ ಸ್ಥಾನ ಶುದ್ಧಿ ಎನಿಸೂದು. ಜಲಗಂಧಾಕ್ಷತಾ ಪುಷ್ಪಾದಿಗಳಂ ನಿರೀಕ್ಷಿಸಿ, ಭಸ್ಮಮಂತ್ರವಾರಿಗಳಿಂ ಸಂಪ್ರೋಕ್ಷಣಂಗೆಯ್ವುದೆ ದ್ರವ್ಯಶುದ್ಧಿ ಎನಿಸೂದು. ಅನಾಮಿಕ ಮಧ್ಯಮೆಗಳ ಮಧ್ಯದಲ್ಲಿ ನವೀನಕುಸುಮವಿಡಿದು ಅಂಗುಷ*ತರ್ಜನಿಗಳಿಂ ಮೊದಲ ನಿರ್ಮಾಲ್ಯಮಂ ತ್ಯಜಿಸಿ, ಲಿಂಗಪೀಠಮಂವಾರಿಯಿಂ ಪ್ರಕ್ಷಾಲನಂ ಗೆಯ್ವುದೆ ಲಿಂಗಶುದ್ಧಿ ಎನಿಸೂದು. ಸಕಲಪೂಜಾತ್ರ್ಥಮಾಗಿ ಒಂ ನಮಃ ಶಿವಾಯ ಸ್ವಾಹಾ ಎಂದುಚ್ಚರಿಪುದೆ ಮಂತ್ರಶುದ್ಧಿಯಹುದೆಂದೊಡಂ ಬಟ್ಟು, ಬಳಿಕ ಅಸ್ತ್ರಮುದ್ರೆ ಚಕ್ರಮುದ್ರೆ ಮಹಾಮುದ್ರೆ ಶೋಧನಿಮುದ್ರೆ ಸಂಹಾರ ಪಂಚಮುಖ ಮುದ್ರೆ ಸುರಭಿಮುದ್ರೆ ದ್ರವ್ಯಮುದ್ರೆ ಮುಕುಳಿಕಾಮುದ್ರೆ ಪದ್ಮಮುದ್ರೆ ಶಶಕರ್ಣವೆÅದ್ರೆ ಶಕ್ತಿಮುದ್ರೆ ಬೀಜಮುದ್ರೆ ಶಾಂತಿಮುದ್ರೆ ಆವಾಹನ ಮುದ್ರೆ ಮನೋರಮಮುದ್ರೆ ಧ್ವಜಮುದ್ರೆ ಲಿಂಗಮುದ್ರೆ ಗಾಯತ್ರಿಮುದ್ರೆ ಕಾಲಕಂಢ ಮುದ್ರೆ ಶೂಲಮುದ್ರೆ ನಮಸ್ಕಾರಮುದ್ರೆ ಯೋನಿಮುದ್ರೆ [ವಿ]ಬ್ದೊಟ..... ಮುದ್ರೆ....ರ ಮುದ್ರೆ ಎಂಬ ಸಕಲ ಮುದ್ರಾಲಕ್ಷಣವನರಿದಾಯಾ ಯೋಗ್ಯ ಕ್ರಿಯೆಗಳಿಲ್ಲಿ ಪ್ರಯೋಗಿಸಿ, ಬಳಿಕ ಕೂರ್ಮ ಆನಂತಸಿಂಹ ಪದ್ಮವಿ.......... ಪೀಠಂಗಳಲ್ಲಿ......ಮಾದ ಸಿಂಹಾಸನಕ್ಕೆ ಶ್ವೇತರಕ್ತಪೀತಶ್ಯಾಮವರ್ಣದ ಸಿಂಹಾ ಕಾರಮಾದ ಧರ್ಮಜ್ಞಾನ ವೈರಾಗ್ಯ ಐಶ್ವರ್ಯವೆ,ಬ ನಾಲ್ಕೆ ಕ್ರಮದಿಂದಾಗ್ನ್ಯಾದಿ ದಿಕ್ಕಿನ ಪಾದಚತುಷ್ಟಯಂಗಳು, ರಾಜಾವರ್ತಪ್ರಭೆಯ ರೂಪಮಾದ ಅಧರ್ಮ ಅಜ್ಞಾನ ಅವೈರಾಗ್ಯ ಅನೈಶ್ವರ್ಯವೆಂಬ ನಾಲ್ಕೆ ಕ್ರಮದಿ ಪೂರ್ವಾದಿ ದಿಕ್ಕಿನ ಪಾದಚತುಷ್ಟಯಂಗಳು ಮೇಲೆ ಅಣಿಮಾದಿಗಳೆ ಪೂರ್ವಾದ್ಯಷ್ಟದಿಕ್ಕಿನ ದಳಂಗಳು, ವಾಮಾದಿ ಸರ್ವಭೂತ ದಮನಾಂತಮಾದ ರುದ್ರವೆ ಪೂರ್ವಾ ದ್ಯಷ್ಟದಿಕ್ಕಿನ ಕೇಸರಂಗಳು, ವೈರಾಗ್ಯವೆ ಕರ್ಣಿಕೆ ವಾಮೆ ಮೊದಲು ಮನೋನ್ಮನಿ ಕಡೆಯಾದ ನವಶಕ್ತಿಗಳೆ ಪೂರ್ವಾದಿಮಧ್ಯಾಂತವಾದ ಕರ್ಣಿಕಾಬೀಜಂಗಳು, ಬಳಿಕದರ ಮೇಲೆ ಅಗ್ನಿರವಿಶಶಿ ಮಂಡಲತ್ರಯಂಗಳು, ಬಳಿಕದರ ಮೇಲೆ ತಮೋರಜಸತ್ವಗುಣಂಗಳವರ ಮೇಲೆ ಜೀವಾತ್ಮ ಅಂತರಾತ್ಮ ಪರಮಾತ್ಮರು ಗಳವರ ಮೇಲೆ ಆತ್ಮತತ್ವ ವಿದ್ಯಾತತ್ವ ಶಿವಶತ್ವಂಗಳಿಂತು ಪರಿವಿಡಿದಾಯತ ಮಾದ ಸಿಂಹಾಸನಮಂ ಪರಿಕಲ್ಪಿಸಿ ಲಿಂಗಾರ್ಚನೆಯಂ ಮಾಳ್ಪುದಯ್ಯಾ ಶಾಂತ ವೀರೇಶ್ವರಾ.
--------------
ಶಾಂತವೀರೇಶ್ವರ
ಅಷ್ಟಮದ ಸಪ್ತವ್ಯಸನ ಷಡುವರ್ಗಂಗಳ ಒತ್ತಿ ನಿಲಿಸಿ, ಎಲ್ಲಕ್ಕೆ ಶಿವನೊಬ್ಬನೆ, ಶಿವಜ್ಞಾನವೆಂದರಿಯದ ವಿಪ್ರರು, ಆನೆ ಅಶ್ವ ಹೋತ ಕೋಣ ಬಿಂಜಣದಿಂದ ಕಡಿದು, ಬೆಂಕಿಯ ಮೇಲೆ ಹಾಕಿ, ತಾನು ಪರಬ್ರಹ್ಮನಾದೆನೆಂದು ನರಕಕ್ಕೆ ಹೋದರೊಂದುಕೋಟ್ಯಾನುಕೋಟಿ ಬ್ರಹ್ಮರು. ವೇದದ ಅರ್ಥವನರಿಯದೆ ಜೀವನ ಬಾಧೆಯಂ ಮಾಡುವ ವಧಾಸ್ವಕರ್ಮಕ್ಕೆ ಒಳಗಾದರು, ದ್ವಿಜರಂದು. ಆದಿಯ ಪ್ರಮಥರು ಕಂಡುದೆಂತೆಂದಡೆ: ಆನೆಯೆಂಬುದು ಮದ, ಮತ್ಸರವೆಂಬುದು ಅಶ್ವ, ಕೋಣನೆಂಬುದು ಕ್ರೋಧ, ಅಂಗವಿಕಾರವೆಂಬುದು ಹೋತ. ಇಂತು ನಾಲ್ಕು ವರ್ಗಂಗಳು. ಶಿವಜ್ಞಾನವೆಂಬ ಅಗ್ನಿಯಲ್ಲಿ ದಹನ ಮಾಡುವರು ನಮ್ಮವರು. ಇಂತೀ ವಿವರವಿಲ್ಲದೆ ತಾವು ಪರಬ್ರಹ್ಮರೆನಿಸಿಕೊಂಬ, ಜೀವಹಿಂಸೆಯ ಮಾಡುವ ವಿಪ್ರರ ಮುಖವ ನೋಡಲಾಗದೆಂದ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಕಾಯದಲ್ಲಿ ಸೋಂಕ ಅಳಿದು, ಕೊಂಬುದು ಶುದ್ಧಪ್ರಸಾದಿಯ ಅಂಗ. ಕರಣಂಗಳಿಚ್ಫೆಯಿಲ್ಲದೆ ಕೊಂಬುದು ಸಿದ್ಧಪ್ರಸಾದಿಯ ಅಂಗ. ಭಾವ ತಲೆದೋರದೆ ಜನನ ಮರಣಾದಿಗಳಲ್ಲಿ ನಾಮ ರೂಪು ಕ್ರೀಗೆ ಬಾರದೆ ನಿಶ್ಚಯ ನಿಜಾಂಗಲೇಪವಾಗಿ ಕೊಂಬುದು ಪ್ರಸಿದ್ಧಪ್ರಸಾದಿಯ ಅಂಗ. ಇಂತೀ ತ್ರಿವಿಧಪ್ರಸಾದಿಗಳಲ್ಲಿ ಹೊರಗೆ ವಿಚಾರಿಸಿ, ಒಳಗ ಕಂಡು ಒಳಗಿನ ಗುಣದಲ್ಲಿ ಕಳೆ ನಿಂದು ನಿಃಪತಿಯಾಗಿ ದೃಷ್ಟ ತನ್ನಷ್ಟವಾದುದು ಸ್ವಯಂಪ್ರಸಾದಿಯ ಅಂಗ. ಇಂತಿವರಲ್ಲಿ ತಿಳಿದುಳಿದವಂಗಲ್ಲದೆ ಜಂಗಮಪ್ರಸಾದವ ಲಿಂಗಕ್ಕೆ ಕೊಟ್ಟಿಹೆನೆಂಬುದು ದೃಷ್ಟಾಂತವಲ್ಲ. ಕೊಟ್ಟು ಕೊಂಡೆಹೆನೆಂದಡೆ ಆ ಗುರುವಿಗೂ ಲಿಂಗವೆಂಬುದೊಂದು ಕುರುಹು. ಜಂಗಮಕ್ಕೂ ಲಿಂಗವೆಂಬುದೊಂದು ಕುರುಹು. ಕೊಟ್ಟು ಕೊಂಡೆಹೆನೆಂಬ ಭಕ್ತಂಗೂ ಲಿಂಗವೆಂಬುದೊಂದು ಕುರುಹು. ಇಂತೀ ಬೀಜ, ಆ ಬೀಜದಿಂದಂಕುರ. ಆ ಅಂಕುರದಿಂದ ಪತ್ರ ಕುಸುಮ ಫಲಭೋಗ. ಆ ಫಲಭೋಗದಿಂದ ಮತ್ತೆ ಬೀಜವಪ್ಪುದರಿಂದ ಕಂಡು ಇಂತೀ ತ್ರಿವಿಧಗುಣ ಲಿಂಗ ಸೋಂಕೆಂಬುದ ಕಂಡು ಒಂದರಿಂದೊಂದು ಗುಣವನರಿದೆಹೆನೆಂದಡೆ ಸಂದನಳಿದ ಸದಮಲಾನಂದವೊಂದು ಸೂತಕವೆಂದಳಿದು ಕೊಡಲಿಲ್ಲ. ಎರಡು ಸೂತಕವೆಂದು ಮುಟ್ಟಿ ಅರ್ಪಿಸಲಿಲ್ಲ. ಮೂರನೊಡಗೂಡಿ ಪ್ರಸಾದವಿದೆಯೆಂದು ಬೇರೆ ಅರ್ಪಿಸಿಕೊಂಬವರಿನ್ನಾರೊ ? ಇಂತೀ ಪ್ರಸಾದಿಯ ಪ್ರಸನ್ನವ ತಿಳಿದಲ್ಲಿ ದಹನ ಚಂಡಿಕೇಶ್ವರಲಿಂಗವು ಪ್ರಸನ್ನಪ್ರಸಾದಿಕಾಯನು.
--------------
ಪ್ರಸಾದಿ ಲೆಂಕಬಂಕಣ್ಣ
ನಿಷೆ*ಯಿಂದ ಕೊಂಬುದು ದ್ರವ್ಯಪ್ರಸಾದ. ತೃಪ್ತಿಯಿಂದ ಭೋಗಿಸುವದು ಕರುಣಪ್ರಸಾದ. ಅರಿವಿನ ಮುಖದಿಂದ ಕುರುಹಳಿದು ಕೊಂಬುದು ಎರಡಳಿದ ಪ್ರಸಾದ. ಆ ಪ್ರಸಾದ ಮಹಾಪ್ರಸಾದವಾಗಲಾಗಿ ವರುಷ ವರುಷಕ್ಕೆ ಇದಿರೆಡೆಗೆಟ್ಟಂತೆ ಉರಿ ಉರಿಯೆಡೆ ಸುಡಲಿಲ್ಲದ ತೆರನಂತೆ ಮುಕುರ ಮುಕುರಕ್ಕೆ ಕಳೆಬೆಳಗೊಡಗೂಡಿದಂತೆ. ಇಂತೀ ಪ್ರಸಾದ ಅಂಗವಾದ ನಿರಂಗಿಯ ತೆರ. ದಹನ ಚಂಡಿಕೇಶ್ವರಲಿಂಗವೆ ಅಂಗವಾದವನ ಸಂಗ.
--------------
ಪ್ರಸಾದಿ ಲೆಂಕಬಂಕಣ್ಣ
ಅನಂತರದಲ್ಲಿ ದಾಂತ್ಯಾದಿ ಸಾಧನಸಂಪನ್ನಾಗಿ, ಶ್ರೀಗುರುವಿಂ ಶಾಸನೀಯ ನಪ್ಪುದರಿಂ ಶಿಷ್ಯನಾದಾತ್ಮನು ಶುಭಕಾಲದೇಶಾದಿಗಳಂ ಪರೀಕ್ಷಿಸಿ ಬಳಿಕಾ ಚಾರ್ಯ ಸಂಪ್ರದಾಯಸಿದ್ಧನಾದ ಸಕಲಸದ್ಗುಣಸಹಿತನಾದ ಶ್ರೀಗುರುವನೆಯಿ, ಮತ್ತಮಾ ಗುರುವಿನನುಮತದಿಂ ಶಿವಪೂಜಾ ಪಾರಾಯಣರಾದ ಕೀರ್ತಿಮಯ ರಾದ ನಾಲ್ವರು ಋತ್ವಿಕ್ಕುಗಳಂ ಸ್ನಾನಧವಲಾಂಬರ ಆಭರಣ ಪುಷ್ಪಾದಿ ಗಳಿಂದಲಂ ಕರಿಸಿ, ಬಳಿಕಾ ಶ್ರೀಗುರುವಿನಾಜ್ಞೆಯಿಂ ತಾನಾ ರಾತ್ರೆಯಲ್ಲಿ, ಕ್ಷೀರಾಹಾರಿಯಾಗಿರ್ದು, ಮೇಲೆ ಪ್ರಭಾತಸಮಯದಲ್ಲಿ ದಂತಧಾವನಂಗೆಯ್ದು, ಮಂಗಲಸ್ನಾನಂ ಮಾಡಿ ಧವಲಾಂಬರವನುಟ್ಟು ಪೊದೆದು, ಭಸಿತೋದ್ಧೂಳನಂ ರಚಿಸಿ, ತ್ರಿಪುಂಡ್ರ ಧಾರಣಮಂ ವಿಸ್ತರಿಸಿ, ರುದ್ರಾಕ್ಷಮಾಲೆಗಳಂ ಧರಿಸಿ, ಸುವರ್ಣಾಭರಣಾದಿಗಳಿಂ ಸಿಂಗರಂಬಡೆದು, ಬಳಿಕಾಚಾರ್ಯನ ಸವಿೂಪಕ್ಕೆ ಬಂದು, ಭಯಭಕ್ತಿಯಿಂದಷ್ಟಮಂತ್ರಪೂರ್ವಕದಿಂ ವಿನಯವಿನಮಿತನಾಗಿ ಸುವರ್ಣ ಪುಷ್ಪಾದಿಗಳಿಂ ವಿತ್ತಾನುಸಾರಮಾಗಿ ಗುರುಪೂಜನಂಗೆಯ್ದು ಮರಳಿ ಗಂಧ ಪುಷ್ಪಾದಿಗಳಿಂ ಋತ್ವಿಕ್ಕುಗಳಂ ಭಜಿಸಿ, ಮೇಲೆ ಶ್ರೀಗುರು ಮುಖ್ಯಸಕಲಮಾಹೇಶ್ವರರಂ ವಂದಿಸಿ ವಿಭೂತಿ ವೀಳೆಯಂಗಳಂ ಸಮರ್ಪಿಸಿ, ಬಳಿಕ ಖನನ ದಹನ ಶೋಧನ ಸಂಪ್ರೋಕ್ಷಣ ಮರ್ದನ ಲೇಪನವೆಂಬ ಷಟ್ಕಮರ್ಂಗಳಿಂ ಸಾರಣೆ ಕಾರಣೆ ತಳಿರತೋರಣ ಕುಸುಮತೋರಣ ಸರವಿಸರ ಪಳವಳಿಗೆ ಧೂಪ ಧೂಮ್ನಾದಿಗಳಿಂ ಪರಿಶೋಭೆವಡೆದು, ಮನೋಹರಮಾದ ದೀಕ್ಷಾಮಂಟಪದಲ್ಲಿ ಗೋಚರ್ಮ ಮಾತೃಭೂಮಿಯಂ ಚೌಕಮಾಗಿ, ಗೋರೋಜನ ಗೋಮಯ ಗೋಮೂತ್ರ ಗೋದಧಿ ಘೃತ ಗೋಕ್ಷೀರಯೆಂಬ ಷಟ್ಸಮ್ಮಾರ್ಜನಂಗೆಯು, ಬಳಿಕಾ ಚೌಕಮಧ್ಯದಲ್ಲಿ ಪ್ರವಾಳ ಮೌಕ್ತಿಕ ಶುಭ್ರ ಪಾಷಾಣ ಸುವ್ಯರ್ಣ ಶ್ವೇತಾಭ್ರಕ ತಂಡುಲಾದಿಗಳ ಚೂರ್ಣಂಗಳಿಂದ ಷ್ಟದಳಕಮಲಮಂ ರಚಿಸಿ, ಮತ್ತದರಾ ವಿವರ:ಶಂಖ ಚಕ್ರ ಶೂಲ ಡಮರುಗ ಪರಶು ಘಂಟೆ ಛತ್ರ ಚಾಮರಮೃಷಭ ಚರಣಾದಿ ವಿಚಿತ್ರವರ್ಣಕಮಂ ತುಂಬುತ್ತದರ ಮೇಲೆ ಎಳ್ಳು ಜೀರಿಗೆ ಗೋದುವೆ ಅಕ್ಕಿ ಉದ್ದುಗಳೆಂಬ ಪಂಚಧಾನ್ಯವನಾದರೂ ಕೇವಲ ತಂಡುಲವನಾದರೂ ಮೂವತ್ತೆರಡಂಗುಲ ಪ್ರಮಾಣಿನ ಚತುರಸ್ರಮಾಗಿ ಹರಹುತ್ತದರ ಮೇಲೆ ತೀರ್ಥಾಂಬುಪೂರ್ಣ ಮಾದ ಸುವರ್ಣಾದಿ ನವೀನ ಪಂಚಕಳಶಂಗಳಂ ಪೂರ್ವದಕ್ಷಿಣ ಪಶ್ಚಿಮ ಉತ್ತರ ಮಧ್ಯ ಕ್ರಮದಿಂದಾಚಾರ್ಯನೆ ಸ್ಥಾಪಿಸುತ್ತಾ, ಕಳಶಂಗಳಂ ಬೇರೆ ಬೇರೆ ನೂತನ ವಸ್ತ್ರಂಗಳಿಂ ಸುತ್ತಿ, ನವಪಂಚತಂತುಗಳಿಂ ಪರಿವೇಷ್ಟಿಸಿ ಸುವರ್ಣಾದಿನಗಳನವ ರೊಳಿರಿಸಿ, ಬಳಿಕ್ಕಾಮ್ರಪಲ್ಲವ ದೂರ್ವಾಂಕುರ ಪೂಗ ಕುಸುಮ ನಾಗವಳಿ... (ಇಲ್ಲಿ ಒಂದು ಗರಿ ಕಳೆದುಹೋಗಿದೆ).
--------------
ಶಾಂತವೀರೇಶ್ವರ
ಭಕ್ತಿಭಾಂಡದ ಶಿವಭಕ್ತರ ನಿಷೇಧವ ಮಾಡುವ ಕರ್ಮಭಾಂಡದ ದ್ವಿಜರು ನೀವು ಕೇಳಿಭೋ : `ಸತ್ಯಂ ಭೋ ಬ್ರೂತ ಪಂಚಪ್ರಾಣ ಇಂದ್ರಿಯನಿಗ್ರಹಮೆಂದೋದಿ ಗುದ್ದಿ ಗುದ್ದಿ ಹೋತನ ತಿಂಬುದಾವಾಚಾರವೊ ? `ಪಿತಾಮಹಶ್ಚ ವೈಶ್ಯಸ್ತು ಕ್ಷತ್ರಿಯೋ ಪರಯೋ ಹರಿಃ ಬ್ರಾಹ್ಮಣೋ ಭಗವಾನ್ ರುದ್ರಃ ಸರ್ವೇಷ್ವ್ಯುತ್ತಮೋತ್ತಮಃ ಎಂಬ ಶ್ರುತಿಯ ನೋಡಿ, ತಮ್ಮ ಕುಲದೈವವಹ ಬ್ರಾಹ್ಮಣನಹ ರುದ್ರನ ನಿಂದಿಸಿ, ತಮಗಿಂದ ಕೀಳುಜಾತಿಯಹ ಕ್ಷತ್ರಿಯ ಹರಿಯ ಆರಾಧಿಸುವ ಕುಲಹೀನರು ನೀವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ `ವೇದಾಭ್ಯಾಸೇನ ವಿಪ್ರಸ್ತು ಬ್ರಹ್ಮಣಾ ಚರಂತೀತಿ ಬ್ರಾಹ್ಮಣಃ ಎಂಬ ಶ್ರುತಿಯನೋದಿ, ಪರಬ್ರಹ್ಮನಂತಹ ಶಿವಲಿಂಗಪೂಜೆಯನಾಚರಿಸಿ ಬ್ರಾಹ್ಮಣತ್ವವನೈ[ದದೆ] ಶತಯಾಗಂಗಳ ಮಾಡಿ ಶೂದ್ರನಹ ಇಂದ್ರತ್ವವ ಬಯಸುವ ಅಧಮರು ನಿವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಮಾತಾ ಸಾ ಪ್ರಥಮಂ ಶೂದ್ರಾಣಿ ನಚೋಪದೇಶಃ ಗಾಯತ್ರೀ ನ ಚ ಮೌಂಜೀ ನ ಚ ಕ್ರಿಯಾ ಎಂದುದಾಗಿ, ದೀಕ್ಷೆಯಿಲ್ಲದೆ ಸತಿಶೂದ್ರಗಿತ್ತಿಗೆ ಹುಟ್ಟಿದವನೊಡನುಂಬ ಅನಾಚಾರಿಗೆ ಎಲ್ಲಿಯದೊ ಬ್ರಾಹ್ಮಣತ್ವ ? ಆವ ಜಾತಿಯವನಾದರೇನು ಶಿವಭಕ್ತನೆ ಬ್ರಾಹ್ಮಣ. ಅದಕ್ಕೆ ಸಾಕ್ಷಿ : . `ತಪಸಾ ಬ್ರಾಹ್ಮಣೋ[s]ಭವತ್ ಸಾಂಖ್ಯಾಯನ ಮಹಾಮುನಿಃ ತಪಸಾ ಬ್ರಾಹ್ಮಣೋ[s]ಭವತ್ ಗೌತಮಸ್ತು ಮಹಾಮುನಿಃ ಜಾತಿಂ ನ ಕಾರಯೇತ್ತೇಷು ಶ್ರೇಷಾ*ಃ ಸಮಭವಂಸ್ತತಃ ತಜ್ಜಾತಿರಭವತ್ತೇನ' ಎಂದುದಾಗಿ, ತಮ್ಮ ತಮ್ಮ ಗೋತ್ರಂಗಳೆ ಸಾಕ್ಷಿಯಾಗಿ ಸಾರುತ್ತಿರಲು ಕುಭ್ರಮೆಯಾತಕ್ಕೆ ? ಶ್ವಪಚೋ[s]ಪಿ ಮುನಿಶ್ರೇಷ*ಃ ಶಿವಭಕ್ತಿಸಮನ್ವಿತಃ ಶಿವಭಕ್ತಿವಿಹೀನಸ್ತು ಶ್ವಪಚೋ[s]ಪಿ ದ್ವಿಜಾಧಮಃ ಎಂದುದಾಗಿ ಶಿವಭಕ್ತನೆ ಕುಲಜ, ಶಿವಭಕ್ತಿ ಇಲ್ಲದವನೆ ಶ್ವಪಚನೆಂದರಿಯದ ಅಜ್ಞಾನಿಗಳು ನೀವು ಕೇಳಿಭೋ ! `ಏಕ ಏವ ರುದ್ರೋ ನ ದ್ವಿತೀಯಾಯತಸ್ಥೇ' ಎಂದು ವೇದವನೋದಿ `ಪಶುಪತಯೇ ನಮಃ' ಎಂದಾ ರುದ್ರವನೋದಿ ಶಿವನೆ ಪತಿ ಮಿಕ್ಕಿನ ದೈವಂಗಳೆಲ್ಲ ಪಶುಗಳೆಂಬುದ ತಿಳಿದು ಮತ್ತೆಯೂ ಈ ದ್ವಿಜರು ಕಾಣಲರಿಯರು. ಹರಹರನೊಂದೆಯೆಂಬ ನರಗುರಿಗಳು ನೀವು ಕೇಳಿಭೋ ! ಪಾರಾಶ[ರ] ಪುರಾಣೇ : ಆದೌ ರುದ್ರಾಂಗಮುತ್ಪತ್ತಿಃ ಮುಖೇ ಬ್ರಾಹ್ಮಣವೀಶ್ವರಃ ವಿಷ್ಣುಂ ಕ್ಷತ್ರಿಯಮಿತ್ಯಾಹುರ್ಬಾಹುನಾ ಚ ಅವಸ್ಥಿತಃ ವೈಶ್ಯಶ್ಚ ಬ್ರಹ್ಮಾ ಇತ್ಯಾಹುಃ ಲಿಂಗಾದೇವ ಅವಸ್ಥಿತಃ ಸುರಪೋ ಶೂದ್ರಯಿತ್ಯಾಹುಃ ದೇವಪಾದಾದವಿಸ್ಥಿತಃ ಎಂದುದಾಗಿ, ರುದ್ರನ ಮುಖದಲ್ಲಿ ಹುಟ್ಟಿದವನೆ ಬ್ರಾಹ್ಮಣ, ಮಿಕ್ಕಾದ ವಿಪ್ರರೆಲ್ಲರು ಋಷಿಗೋತ್ರದಲ್ಲಿ ಹುಟ್ಟಿದರು. ಆ ಋಷಿಮೂಲದ ವಿಪ್ರರೆಲ್ಲರು ಅಧಮಜಾತಿ ಅಧಮಜಾತಿಯಾದರೇನು ? ರುದ್ರಭಕ್ತರಾದ ಕಾರಣ ಬ್ರಾಹ್ಮಣರಾದರು. ಈ ವರ್ಮವನರಿಯದ ಚಾಂಡಾಲ ವಿಪ್ರರ್ಗೇನೂ ಸಂಬಂಧವಿಲ್ಲ. ಕಾಕ ರುದ್ರನ ಮುಖದಲ್ಲಿ ಉದ್ಭವವೆಂಬುದಕ್ಕೆ ಶ್ವಾನಸೂಕರರೂಪೇ ಪ್ರೇತಪಿಂಡ ಪ್ರದಾನತಃ ಪ್ರೇತತ್ವಂ ಚ ಸದಾ ಸ್ಯಾತ್ ತಥಾ ಧರ್ಮೇಣ ಲುಪ್ಯತೇ ಎಂದುದಾಗಿ ಆಗಮಾರ್ಥವನರಿಯದೆ, ಪ್ರೇತಪಿಂಡವನಿಕ್ಕುವ ಪಾತಕರು, [ಪ್ರಾಣಾಯಸ್ವಾಹಾ]ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂದು ಭೂತಬಲಿಯ ಬೆಕ್ಕು ನಾಯಿಗೆ ಹಾಕಿ ಮಿಕ್ಕ ಭೂತಶೇಷವ ಕೊಂಬ ಅಕುಲಜರು, ನೀವು ಕೇಳಿಭೋ ! `ವಸುರೂಪೋ ಮಧ್ಯಪಿಂಡಃ ಪುತ್ರ¥õ್ಞತ್ರಪ್ರವರ್ಧನಃ' ಎಂದು, ರುದ್ರಪ್ರಸಾದವನೆ ಕೊಂಡು ರುದ್ರಪಿಂಡದಿಂದ ಹುಟ್ಟಿ, ದೀಕ್ಷಾಕಾಲದಲ್ಲಿ ಭಸಿತವ ಧರಿಸಿ, ಬ್ರಹ್ಮಕಪಾಲಪಾತ್ರೆಯಂ ಪಿಡಿದು, ಪಲಾಶಕಂಕಾಳದಂಡಮಂ ಪಿಡಿದು, `ಭವತೀ ಭಿಕ್ಷಾಂ ದೇಹಿ'ಯೆಂದು ಭಿಕ್ಷಮಂ ಬೇಡಿ ಪಿತೃಕಾರ್ಯದಲ್ಲಿ `ವಿಶ್ವೇ ದೇವಾಂಸ್ತರ್ಪಯಾಮಿ'ಯೆಂದರ್ಚಿಸಿ, ಮರಣಕಾಲದಲ್ಲಿ ರುದ್ರಭೂಮಿಯಲ್ಲಿ ರುದ್ರಾಗ್ನಿಯಿಂದ ದಹನ ರುದ್ರವಾಹನದ ಬಾಲವಿಡಿದು ಸ್ವರ್ಗವನೆಯ್ದಿದರು, ರುದ್ರಭಕ್ತಿವಿರುದ್ಧ ವಿಚಾರಹೀನರು. `ತ್ರ್ಯಾಯುಕ್ಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ, ಅಗಸ್ತ್ಯಸ್ಯ ತ್ರಿಯಾಯುಷಂನತನ್ಮೇಡಿಸ್ತುಫತ್ರಿಯಾ ಶತಸಯುಷಂ ಎಂದು ಸಕಲಋಷಿಗಳು ಶ್ರೀ ವಿಭೂತಿಯನು ಧರಿಸಿ, ಬಹಳಾಯುಷ್ಯಮಂ ಪಡೆದರೆಂದು ಮತ್ತೆಯು ಯಜುಸ್ಸಿನಲ್ಲಿ ದೀಕ್ಷೆಯನೈದಲ್ಲಿ, `ಭೂತಿವಾಂಶ್ಚ ಪ್ರಿಯಂ ಹೋತವ್ಯಂ'ಯೆಂದು, ಶ್ರೀವಿಭೂತಿಯನೆ ಧರಿಸಹೇಳಿತ್ತು ವೇದವು. `ಗೋಪೀ ಮಲಿನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ತದೈಕವಿಂಶತಿಕುಲಂ ಸಾಕ್ಷಾತ್ತು ನರಕಂ ವ್ರಜೇತ್ ' ಎಂದು, ಗೋಪಿ ಮಲಿನ ಚಂದನವನಿಟ್ಟು, ಪಾತಕರು[ವ] ಶಿವಲಿಂಗ ಮುಟ್ಟಿದರೆ ತಮ್ಮಿಪ್ಪತ್ತೊಂದು ಕುಲಸಹಿತ ಕೇಡಿಲ್ಲದ ನರಕದಲ್ಲಿ ಬೀಳುವರೆಂದರಿಯದೆ ಮುಟ್ಟಿಯನಿಟ್ಟ ಭ್ರಷ್ಟರು, ಮತ್ಸ್ಯ ಕೂರ್ಮ ವರಾಹ ನಾರಸಿಂಹ ಈ ನಾಲ್ಕೂ ಅವತಾರದಲ್ಲಿ ನೀರಿಂದ ಬಲಿ ಧಾರೆಯನೆರೆದನೆಂಬುದನರಿದು, ವಿಷ್ಣುವಿನ ಪಾದದಲ್ಲಿ ಗಂಗೆ ಹುಟ್ಟಿತೆಂಬ ವಿಚಾರಹೀನರು `ವಿಯದ್ವಿಷ್ಣುಪದಂ ಪ್ರೋಕ್ತಂ ಪುಂಸ್ಯಾಕಾಶವಿಹಾಯಸೀ ವಿಹಾಯಸೋ[s]ಪಿನಾಕೋ[s]ಪಿ ದ್ಯುರಪಿ ಸ್ಯಾತ್ತಿದವ್ಯಯಂ' ಎಂದು ನಿಘಂಟಿನಲ್ಲಿ ಆಕಾಶದ ಹೆಸರು ವಿಷ್ಣುಪದಿ, ಆಕಾಶಗಂಗೆ ಮುನ್ನಲುಂಟೆಂಬುದನರಿತು, ವಿಷ್ಣುವಿನ ಕಾಲಲ್ಲಿ ಗಂಗೆ ಹುಟ್ಟಿತೆಂಬ ದುಷ್ಟರು, ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲೆಗಟ್ಟು ಗಾಯತ್ರಿಯಲ್ಲಿ ಶಿವನೆ ದೈವವೆಂದಿತ್ತು. `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಹರ ಹರಿಭಕ್ತನೆಂದನಿಸುವ ವಿಚಾರಹೀನರು ನೀವು ಕೇಳಿಭೋ ! ಹರಿ ಶಿವನ ಭಕ್ತನೆಂಬುವದಕ್ಕೆ ಸಾವಿರಕಮಲ ಕೊರತೆಗೆ ತನ್ನ ನಯನ ಕಮಲಮಂ ಕಳೆದು ಶಿವನಂಘ್ರಿಗರ್ಪಿಸಿ, ಚಕ್ರಮಂ ಪಡೆದನೆಂದು ಮಹಿಮದಲ್ಲಿ ಹರಿಸ್ತೇ ಸಾಹಸ್ರಂ ಕಮಲಬಲಿಯಾಧಾಯ ಪದಯೋಃ' ಎಂದೋದಿ ಮರೆದ ಮತಿಭ್ರಷ್ಟರು ನೀವು ಕೇಳಿಭೋ ! ಹರನೆ ಕರ್ತ, ಹರಿಯೆ ಭೃತ್ಯನೆಂಬುದಕ್ಕೆ ರಾಮಪ್ರತಿಷೆ* ಶಿವಲಿಂಗ[ದ] ಮೂರ್ತಿಗಳಿಂ ಕಾಣಿರೆ, ಕಂಡು ತಿಳಿಯಲರಿಯದ ಹುಲಮನುಜರು ಶ್ರೀರಾಮನ ಗುರು ವಶಿಷ* ಹಂಪೆಯಲ್ಲಿ ವಿರೂಪಾಕ್ಷಲಿಂಗನ ಭಕ್ತನೆಂದರಿದು, ಕೃಷ್ಣಾವಿಷ್ಣುವಿನ ಗುರು ಉಪಮನ್ಯು ಅಹಿಪುರದಲ್ಲಿ ಸೋಮೇಶ್ವರಲಿಂಗನ ಭೃತ್ಯನೆಂಬುದನರಿದು, ಇಂತು ಭೃತ್ಯನ ಶಿಷ್ಯಂಗೆ ಕರ್ತನ ಸರಿಯೆಂಬ ಕರ್ಮಚಂಡಾಲರು ನೀವು ಕೇಳಿಭೋ ! `ಅಸಂಖ್ಯಕೋಟಿಬ್ರಹ್ಮಾಣಾಂ ಕೋಟಿವಿಷ್ಣುಗಣಂ ತತಃ ಗಂಗಾವಾಲುಕ ಸಮೌ ಹೇvõ್ಞ ಕಿಂಚಿದಜ್ಞಾಃ ನ ಮಹೇಶ್ವರಾತ್ ಎಂದು ರುದ್ರನ ಎವೆಯಾಡುವನಿತಕ್ಕೆ ಲೆಕ್ಕವಿಲ್ಲದ ಕೋಟಿ ಬ್ರಹ್ಮವಿಷ್ಣುರು ಸತ್ತುಹೋದರೆಂದು ಓದಿ ತಿಳಿದು ಇಂಥ ಹುಲುದೈವಂಗಳ `ಮೃತ್ಯುಂಜಯಃ ನಿತ್ಯಃ ಏಕೋ ದೇವಃ ನ ದ್ವಿತೀಯಃ' ಎಂದೆನಿಸುವ ಶಿವಗೆ ಸರಿಯಂದೆನಿಸುವ ಭವಿವಿಪ್ರರಿಗೆ ತಾವು ಓದುವ, ವೇದಾಗಮಂಗಳು ತಮಗೆ ಹಗೆಯಾಗಿ ನಡೆಯೊಂದು ಪರಿ ನುಡಿಯೊಂದು ಪರಿ ಆಗಿಹುದು. ಅದೆಂತೆಂದರೆ:ಗೌತಮ ದಧೀಚಿ ಭೃಗುವಾದಿಯಾಗಿ ಹಿರಿಯರುಗಳೇ ಶಾಪದಿಂದ ಶಾಪಹತರಾಗಿ ಶಿವದ್ರೋಹಿಗಳಾಗಿ ನರಕಕ್ಕಿಳಿವ ಚಾಂಡಾಲರಿಂದ ವಿಪ್ರರ ಸತ್ಪಾತ್ರರೆಂದಾರಾಧಿಸುವರ ನರಕದ ಕುಳಿಯೊಳು ಮೆಟ್ಟಿ ನರಕಾಗ್ನಿಯಿಂದ ಸುಡುತಿರ್ಪ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಸುಟ್ಟು ಶುದ್ಧವಾದ ಬಳಿಕ ಮತ್ತೆ ಸುಡಲಿಕೆಲ್ಲಿಯದೊ ? ಅಟ್ಟು ಪಾಕವಾದ ಬಳಿಕ ಮತ್ತೆ ಅಡಲೆಲ್ಲಿಯದೊ ? ಇನ್ನು ಶುದ್ಧ ಮಾಡಿಹೆನೆಂಬ ವಿಧಿಯ ನೋಡಾ ಶ್ರುತಿ: ದಗ್ಧಸ್ಯ ದಹನಂ ನಾಸ್ತಿ ಪಕ್ವಸ್ಯ ಪಚನಂ ಯಥಾ ಜ್ಞಾನಾಗ್ನಿದಗ್ಧದೇಹಸ್ಯ ನ ಚ ಶ್ರಾದ್ಧಂ ನ ಚ ಕ್ರಿಯಾ ಇದು ಕಾರಣ, ಕೂಡಲಚೆನ್ನಸಂಗಯ್ಯಾ ನಂಬಿಯೂ ನಂಬದಿದ್ದಡೆ ನ ಭವಿಷ್ಯತಿ.
--------------
ಚನ್ನಬಸವಣ್ಣ
ವೇದ ಶಾಸ್ತ್ರ ಪುರಾಣ ಆಗಮಂಗಳಿಗೆ ಅಭೇದ್ಯಲಿಂಗಕ್ಕೆ ಸಕಲಸಂಸಾರವೇದಿಗಳ ಶೇಷವ ಸಮರ್ಪಿಸಬಹುದೆ? ಅಲ್ಲಾಯೆಂದಡೆ ಸಮಯವಿರೋಧ. ಅಹುದೆಂದಡೆ ಆದಿಯನಾದಿಯಿಂದತ್ತ ಭೇದಿಸಿ ಕಾಣದ ಅಭೇದ್ಯಲಿಂಗಕ್ಕೆ ಸರ್ವಸಾಧನೆಯಲ್ಲಿ ಸಾವವರ ಶೇಷವ ನಾದ ಬಿಂದು ಕಳೆಗೆ ಅತೀತವಪ್ಪ ವಸ್ತುವಿಂಗೆ ನೈವೇದಿಸಬಹುದೆ? ಲಿಂಗದ ಆದ್ಯಂತವನರಿಯರು. ಗುರುಲಿಂಗಜಂಗಮದ ಭೇದಕ್ರೀಯನರಿದು ಕಂಡು ತನ್ನಿರವ ತಾ ಶೋಧಿಸಿಕೊಂಡು ತ್ರಿವಿಧವ ಅರಿತವಂಗಲ್ಲದೆ ಉಭಯಪ್ರಸಾದವ ಲಿಂಗಕ್ಕೆ ಅರ್ಪಿಸಿ ತ್ರಿವಿಧಪ್ರಸಾದವ ಒಡಗೂಡಿಕೊಂಬುದು ನಿರಂಗಿ. ನಿರಂಗಿಯ ಮಹಾಪ್ರಸಾದಿಯ ಅಂಗ ಹೀಂಗಲ್ಲದೆ ಕಂಡವರ ಕೈಕೊಂಡು ಬಂಧ ಮೋಕ್ಷ ಕರ್ಮಂಗಳೊಂದೂ ಹರಿಯದೆ ನಿಂದ ಕೀರ್ತಿ ಆಡಂಬರಕ್ಕಾಗಿ ಮಾಡಿಕೊಂಡ ನೇಮಕ್ಕೆ ಕೆಟ್ಟಡೆ ತ್ರಿವಿಧವೇದಿಗಳು ಬಾಧಿಸಿಹರೆಂದು ಕಟ್ಟುಗುತ್ತಿಗೆಯ ವರ್ತಕರಿಗೆ ತ್ರಿವಿಧಪ್ರಸಾದದ ನಿಜನಿಶ್ಚಯ ಉಂಟೆ? ಇಂತೀ ಭೇದವಿಚಾರಗಳ ತಿಳಿದು ಲಿಂಗದ ಅಂದಿನ ಸೋಂಕಿನಿಂದ ಬಂದ ಗುರು ಲಿಂಗ ಜಂಗಮದ ಅಂಗವನರಿದು ಲಿಂಗಮೂರ್ತಿ ತ್ರಿವಿಧರೂಪಾಗಿ ಬಂದುದ ತಿಳಿದು, ತನ್ನ ಮೂರ್ತಿಗೆ ತಾ ಗುರುವಾಗಿ ದೀಕ್ಷಿತನಾಗಿ ಬಂದುದ ಕಂಡು ತನ್ನ ಮೂರ್ತಿಗೆ ತಾನು ಸುಳಿದು, ಚರವಾಗಿ ನಿಂದುದ ಕಂಡು ತನ್ನ ಮೂರ್ತಿಗೆ ನಿಜಕ್ಕೆ ತಾ ಮೂರ್ತಿಯಾಗಿ ಆ ಲಿಂಗವು ಉಭಯದ ಗುಣದಲ್ಲಿ ಕುರುಹಗೊಂಡಿತ್ತು. ಇಂತೀ ನಡೆನುಡಿ ಸಿದ್ಧಾಂತವಾದವಂಗಲ್ಲದೆ ಗುರುಚರಪ್ರಸಾದ ಲಿಂಗಕ್ಕೆ ನೈವೇದ್ಯವಲ್ಲ, ದಹನ ಚಂಡಿಕೇಶ್ವರಲಿಂಗವನರಿದ ಪ್ರಸಾದಿಯ ನಿರಂಗ.
--------------
ಪ್ರಸಾದಿ ಲೆಂಕಬಂಕಣ್ಣ
ಇಷ್ಟಪ್ರಸಾದವ ದೃಷ್ಟಕ್ಕೆ ಅರ್ಪಿಸಿಕೊಂಡೆಹೆನೆಂಬನ್ನಕ್ಕ ದೃಷ್ಟವೂ ಇಲ್ಲ, ಇಷ್ಟವೂ ಇಲ್ಲ. ಉಭಯವಿಲ್ಲಾಗಿ ತೃಪ್ತಿಗೆ ಮುಟ್ಟದ ಅರ್ಪಿತವ ಇದನಾರು ಬಲ್ಲರು. ಮುಟ್ಟದಲ್ಲಿಯೆ ಸವಿಸಾರಂಗಳ ಭೇದವ ದೃಷ್ಟ ಮುಂತಾಗಿ ಅರ್ಪಿತದಲ್ಲಿಯೆ ಸವಿಸಾರಂಗಳನರಿದು ಅರ್ಪಿಸಬಲ್ಲಡೆ ಅರ್ಪಿತಸೂತಕ ಅಲ್ಲಿಯೆ ನಷ್ಟ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದವನ ಸಂಗದ ಕೂಟ.
--------------
ಪ್ರಸಾದಿ ಲೆಂಕಬಂಕಣ್ಣ
ಇನ್ನಷ್ಟು ... -->