ಅಥವಾ

ಒಟ್ಟು 172 ಕಡೆಗಳಲ್ಲಿ , 41 ವಚನಕಾರರು , 140 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ, ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423
--------------
ಬಸವಣ್ಣ
ಭಿಕಾರಿ ಭಿಕಾರಕ್ಕೆಳಸ. ಉಣ್ಣಲು ಉಡಲು ಕಾಣದಾತ ಭಿಕಾರಿ. ತನು ಮೀಸಲು, ಮನ ಮೀಸಲು, ಬಾಯಿ ಬೋರು ಬೋರು. ಮರಣವಳಿದುಳಿದಾತ ಭಿಕಾರಿ. ಸಂಚಲದ ಪಂಚಕರಣಗಳ ತೆಗೆದುಂಡು, ರುಂಡಮಾಲೆಯ ರಣಮಾಲೆಯ ಹೆಣಮಾಲೆಯ ಚಾರುಚ್ಚಿದಲ್ಲದೆ ಭಿಕಾರಿ ಭೀಮೇಶ್ವರಲಿಂಗಕ್ಕೆ ದೂರ ಕಾಣಾ, ಕರುತಿರುವ ಗೊರವಾ
--------------
ಭಿಕಾರಿ ಭೀಮಯ್ಯ
ಪಾತಕ ಹೊಲೆಯೆಂದರಿದು ಬಿಟ್ಟಲ್ಲಿ, ಮತ್ತಾ ಗುಣ ಸ್ವೀಕರಿಸಬಹುದೆ ? ಇವೆಲ್ಲ ಅಲ್ಲಾ ಎಂದು ಬಲ್ಲತನವ ತಾನರಿದು, ಮತ್ತೆಲ್ಲರಲ್ಲಿ ಬೆರಸಬಹುದೆ ? ಒಡೆದ ಹಂಚಿಂಗೆ, ಹಿಡಿದು ಬಿಟ್ಟ ವ್ರತಕ್ಕೆ, ಮತ್ತಿವ ಒಡಗೂಡಬಹುದೆ ? ಇಂತೀ ಬಿಡುಗಡೆಯನರಿದಲ್ಲಿ, ಅನುಸರಣೆಯ ಮಾಡಿದಡೆ, ಎನ್ನೊಡೆಯ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾದಡೂ ಹರಶರಣರಿಗೆ ದೂರ.
--------------
ಶಿವಲೆಂಕ ಮಂಚಣ್ಣ
ಚರ ಸ್ಥಾವರವಾದುದುಂಟೆ? ಮಹಾಸಮುದ್ರಕ್ಕೆ ಕೆರೆಯೇರಿಯುಂಟೆ? ಸುಖವ ಮಚ್ಚಿ ಅಖಿಳರೊಳಗಿದ್ದು ಸಕಲ ವಿರಹಿತರಾದ ಪರಿಯಿನ್ನೆಂತೊ? ಅದು ವಿಕಳರ ಮಾತು, ಮೂರಕ್ಷರಕ್ಕೆ ದೂರ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಮನದ ಕತ್ತಲೆಯೊಳಗಣ ಜ್ಯೋತಿಯ ಕೊನೆಯ[ಮೊನೆಯ]ಮೇಲೆ ಘನವನರಿದೆವೆಂಬರ ಅನುಮಾನಕ್ಕೆ ದೂರ. ತಮತಮಗೆ ಅರಿದೆವೆಂಬರು,_ಕನಸಿನಲಿಂಗ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಕಂಡುವ ಹೇಳಿಹೆನೆ ? ಸಮಯಕ್ಕೆ ದೂರ, ಎನ್ನ ಇರವನರಿಯರು. ಲೆಂಡನೆಂಬರು, ಸುಮ್ಮನಿದ್ದೇನೆ. ಇವರೆನ್ನ ಆರೈದು ಕಂಡುದ ನುಡಿವರು. ಎನ್ನ ಮುಟ್ಟಿದವರ ಎನ್ನಂತೆ ಮಾಡಿಕೊಂಬೆ. ಎನ್ನ ಅರಿಯದವರ ಹಾದಿಯ ಹೋಗೆ. ಎನ್ನನರಿತ ಜಂಗಮದ ಸಂಗವ ಮಾಡುವೆ. ಜಗದ ಸಂಗವನೊಲ್ಲೆ, ನಿಗಮಾಗಮಶಾಸ್ತ್ರವನೊಲ್ಲೆ. ಅವೆಲ್ಲವು ಸ್ಥಲ ನೆಲೆ ಇಟ್ಟು ಹೇಳುವವು. ಎಮ್ಮ ಶರಣರು ನುಡಿದ ಶಾಸ್ತ್ರಕ್ಕೆ ಸ್ಥಲ ನೆಲೆ ಇಲ್ಲ. ಇಂತಿವೆಲ್ಲವ ಬಲ್ಲೆನಾಗಿ, ಎನ್ನಂಗಕ್ಕೆ ಪ್ರಾಣಕ್ಕೆ ಭವವಿಲ್ಲ, ಬಂಧನವಿಲ್ಲ. ಅದೇಕೆಂದರೆ:ಲಿಂಗವೆಂದ ಕಾರಣ, ನಾನೆಂಬುದಿಲ್ಲ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ. ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿಮನುಜರನೇನೆಂಬೆ, ಕೂಡಲಸಂಗಮದೇವಾ !
--------------
ಬಸವಣ್ಣ
ಗುರುವಾಗಿ ಬಂದು ತನುವ ಕೊರೆದಡೂ ಕೇಳೆ, ಲಿಂಗವಾಗಿ ಬಂದು ಮನದಲ್ಲಿ ಕುಳ್ಳಿರ್ದು ನಿಜಾಂಗವ ತೋರಿದಡೂ ಕೇಳೆ, ಜಂಗಮವಾಗಿ ಬಂದು ಬಯಲ ಬೆಳಗಿನಲ್ಲಿ ಒಳಗಾಗೆಂದಡೂ ಒಲ್ಲೆ. ಅದೆಂತೆಂದಡೆ ; ಕುಟಿಲದಲ್ಲಿ ಬಂದು ವ್ರತವ ಕೆಡಿಸಿಹೆನೆಂದಡೆ, ಕುಟಿಲದ ದೇವರುಂಟೆ ವ್ರತ ಮೊದಲು ಘಟ ಕಡೆಯಾಗಿ ಘಟಿಸುವೆನಲ್ಲದೆ, ಮೂರು ಕಿಸುಕುಳಕಾಗಿ ಘಟವ ಹೊರೆದಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.
--------------
ಅಕ್ಕಮ್ಮ
ತಾನಾರೆಂದರಿವುದು ಭಕ್ತಿ. ಭಕ್ತಿಯೆಂಬುದು ಹಿಂದೋ ಮುಂದೋ? ಗುರುಲಿಂಗ ಜಂಗಮವೆಂದರಿಯದೆ ಮಾಡುವ ಭಕ್ತಿ ಅದೇ ಅನಾಚಾರ:ಅವರು ಪ್ರಸಾದಕ್ಕೆ ದೂರ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ, ನಿಮ್ಮ ಶರಣರಿಗಲ್ಲದಳವಡದು.
--------------
ಉರಿಲಿಂಗಪೆದ್ದಿ
ತನುವಿಡಿದು ಮಾಡಿದ ಪದಾರ್ಥವು ಘನಲಿಂಗಕ್ಕೆ ಸಲ್ಲದು. ಮನವಿಡಿದು ಮಾಡಿದ ಪದಾರ್ಥವು ಅನುವಿಂಗೆ ಸೊಗಸದು. ಧನವಿಡಿದು ಮಾಡಿದ ಪದಾರ್ಥವು ಪರಮಲಿಂಗಕ್ಕೆ ಸಮನಿಸದು. ಅದು ಕಾರಣ ತನು ಮನ ಧನವಿಡಿದ ಸುಖಿಗಳು ಗುರುನಿರಂಜನ ಚನ್ನಬಸವಲಿಂಗಕ್ಕತ್ತತ್ತ ದೂರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಲ್ಲು ರತಿಯಿಂದ ರತ್ನವಾದಂತೆ, ಉದಕ ಸಾರವರತು ಲವಣವಾದಂತೆ, ವಾರಿ ವಾಯುವ ಸಂಗದಿಂದ ಬಲಿದಂತೆ, ಪೂರ್ವವನಳಿದು ಪುನರ್ಜಾತನಾದ ಮತ್ತೆ, ಎನ್ನವರೆಂದು ಬೆರಸಿದಲ್ಲಿ, ಆ ಗುಣ ಆಚಾರಕ್ಕೆ ಹೊರಗಾಯಿತ್ತು. ಮಾತೆ ಪಿತ ಸಹೋದರ ಬಂಧುಗಳೆಂದು ಮನ ಕೂರ್ತು ಬೆರಸಿದಲ್ಲಿ, ಆಚಾರಕ್ಕೆ ಭ್ರಷ್ಟ, ವಿಚಾರಕ್ಕೆ ದೂರ, ಪರಮಾರ್ಥಕ್ಕೆ ಸಲ್ಲ. ಇವನೆಲ್ಲವ ಕಳೆದುಳಿದು ನಿಂದಲ್ಲಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಶಿವಲಿಂಗವ ನೋಡುವ ಕಣ್ಣಲ್ಲಿ ಪರಸ್ತ್ರೀಯ ನೋಡಿದಡೆ ಅಲ್ಲಿ ಲಿಂಗವಿಲ್ಲ. ಪರಬ್ರಹ್ಮವ ನುಡಿವ ಜಿಹ್ವೆಯಲ್ಲಿ, ಪರಸ್ತ್ರೀಯರ ಅಧರಪಾನವ ಕೊಂಡಡೆ ಪ್ರಸಾದಕ್ಕೆ ದೂರ. ಘನಲಿಂಗವ ಪೂಜಿಸುವ ಕೈಯಲ್ಲಿ, ಪರಸ್ತ್ರೀಯರ ಕುಚವ ಮುಟ್ಟಿದಡೆ, ತಾ ಮಾಡಿದ ಪೂಜೆ ನಿಷ್ಫಲ. ಇದನರಿಯದಿರ್ದಡೆ ಬಳ್ಳದಲ್ಲಿ ಸುರೆಯ ತುಂಬಿ ಮೇಲೆ ಬೂದಿಯ ಹೂಸಿದಂತಾಯಿತ್ತು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಅಪರಸ್ಥಾನದಲ್ಲಿ ಆನಂದಬ್ರಹ್ಮವ ಭೇದ್ಥಿಸುವ ಪರಿಯೆಂತೋ? ಪೂರ್ವದಕ್ಷಿಣವೆಂಬ ದಿಕ್ಕುಗಳಲ್ಲಿ ಸಮನಿಸುವ ಆತ್ಮ ಅಂತರ್ಯಾತ್ಮ ಭೂತಾತ್ಮ ಸರ್ವಾತ್ಮ ಪರಮಾತ್ಮವೆಂಬ ಆತ್ಮ ಪಂಚಕಗಳೆಂಬವನು ಹಿಂದು ಮುಂದರಿಯದೆ, ಮುಂದು ಹಿಂದೆಂದರಿಯದೆ ಸಂಯೋಗದಲಿಕ್ಕಿ ಪ್ರಯೋಗಿಸಿಹೆನೆಂಬ ಯೋಗಿ ಕೇಳಾ; ಪೂರ್ವವಾವುದು? ದಕ್ಷಿಣವಾವುದು? ಪೂರ್ವದಲ್ಲಿ ದಿವಾಕರರು ಹನ್ನೆರಡರ ಆನಂದ ಪ್ರಭೆಯಲ್ಲಿ ಭವಿಸಲ್ಪಟ್ಟ ನಯನದ ಕಿರಣದ ಕೊನೆಯ ಮೊನೆಯ ಮೇಲೆ ದಿವ್ಯಾಂಗಯೋಗ ಸಮನಿಸುವ ಪರಿಯೆಂತು ಹೇಳಾ? ದಕ್ಷಿಣದಲ್ಲಿ ದಿಗ್ವಳಯ ಹದಿನಾಲ್ಕರ ವ್ಯಾಪ್ತಿಯ ಸಂಚರಿಸದೆ ಸಮನಿಸುವ ಕೋಹಂ ತತ್ವಾರ್ಥದಿಂದತ್ತ ನಾಹಂ ಪರಮಾರ್ಥದಿಂದತ್ತ ಸೋಹಂ ಸದ್ಭಕ್ತಿಯ ಮುಟ್ಟಿದ ದಾಸೋಹ ನಿನ್ನಲ್ಲಿ ಸಂಯೋಗವ ಎಂತು ಮಾಡುವೆ ಹೇಳಾ? ಯೋಗಿ ನೀನು ಯೋಗಕ್ಕೆ ಹರಿವಾವುದು? ಯೋಗಕ್ಕೆ ನೆಲೆ ಯಾವುದು? ಮತ್ತೆ ಪೆರತನರಿಯದೆ ಶಾಶ್ವತವು ನೀನೆ ನೀನೆ ಎಂದೆನ್ನು, ಸಕಲನಿಷ್ಕಲದೊಳಗೆ ನೀನೆ ನೀನೆಯೆನ್ನಾ ತಾತ್ಪರ್ಯವರ್ಮ ಕಳೆಗಳೊಳಗೆ ನೀನೆ ನೀನೆಯೆಂದೆನ್ನಾ. ಓಂ ಗ್ರಾಂ ಘ್ರೀಂ ಘ್ರೂಂ ಎಂಬಕ್ಷರ ಚತುಷ್ಟಯದ ಮೇಲೆ ಶುದ್ಧ ಸಂಯೋಗವೆಂಬ ಗದ್ದುಗೆಯಿಕ್ಕಿ ಅಕ್ಷರದ್ವಯದ ಆನಂದರಾಜ ಕುಳ್ಳಿದ್ದೆ ೈದಾನೆ ಜಪಿಸುತ. ಆ ಜಪವು ನಿತ್ಯ, ಅದು ಮುಕ್ತಿ, ಅದು ಸತ್ಯ. ಅದು ಪದಕ್ಕೆ ಫಲಕ್ಕೆ ಭವಕ್ಕೆ ದೂರ, ವರ್ಣಾಶ್ರಯವ ಮೀರಿತ್ತು ತತ್ವ ಪ್ರಾಪಂಚಿಕವ ಜರಿಯಿತ್ತು. ಮಂತ್ರಂಗಳ ಕೈಯಿಂದ ವಂದಿಸಿಕೊಂಡಿತ್ತು. ಮೂರರಲ್ಲಿ ಭವಿಸಿತ್ತು, ಆರರಲ್ಲಿ ಫಲವಾಯಿತ್ತು. ಮೂವತ್ತಾರರಲ್ಲಿ ಹಣಿತಿತ್ತು ಯೋಗಿಗಳ ನಡೆಸಿತ್ತು ತತ್ವಮಸಿ ಸಂಗಮವಾಯಿತ್ತು. ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ನಿತ್ಯದಲ್ಲಿ ನಿತ್ಯವಾಯಿತ್ತು.
--------------
ಸಿದ್ಧರಾಮೇಶ್ವರ
ಅನುಭಾವವಿಲ್ಲದ ಕ್ರಿಯೆ ಆಚಾರಕ್ಕೆ ದೂರ. ಅನುಭಾವವಿಲ್ಲದ ಜ್ಞಾನ ವಿಚಾರಕ್ಕೆ ದೂರ. ಅನುಭಾವವಿಲ್ಲದ ಭಕ್ತಿ ಅರುವಿಂಗೆ ದೂರ. ಅನುಭಾವವಿಲ್ಲದ ವೈರಾಗ್ಯ ಅಗಮ್ಯಕ್ಕೆ ದೂರ. ಗುರುನಿರಂಜನ ಚನ್ನಬಸವಲಿಂಗವನರಿವರೆ ಅನುಭಾವವೇ ಬೀಜ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ನೇಮವ ಮಾಡಿಕೊಂಡು ಭಕ್ತರ ಭವನಂಗಳ ಹೊಕ್ಕು, ಕಾಯಕ ಸತ್ತು, ಹಣ ಹೊನ್ನ ಬೇಡೆಹೆನೆಂಬುದು ಕಷ್ಟವಲ್ಲವೆ ಸದ್ಭಕ್ತಂಗೆ ? ಆ ಗುಣ ಅಮರೇಶ್ವರಲಿಂಗಕ್ಕೆ ದೂರ.
--------------
ಆಯ್ದಕ್ಕಿ ಮಾರಯ್ಯ
ಇನ್ನಷ್ಟು ... -->