ಅಥವಾ

ಒಟ್ಟು 45 ಕಡೆಗಳಲ್ಲಿ , 13 ವಚನಕಾರರು , 26 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

``ದಂಡಶ್ಚ ತಾರಕಾಕಾರೋ ಭವತಿ | ಓಂ ಸಾರ್ವತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ಪಂಚದಶಮೇ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ | ಓಂ ಪರಮಾತ್ಮಾ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ಷೋಡಶೇ ಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ಜ್ಯೋತಿಶ್ಚ ದರ್ಪಣಾಕಾರೋ ಭವತಿ | ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಸಪ್ತದಶ ಪ್ರಣವಾಂಶಕೇ ||'' ``ಮಕಾರೇ ಚ ಅಕಾರೇಚ ಉಕಾರೇಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಂ ಇತಿ ಜ್ಯೋತಿರೂಪಕಂ || ಪ್ರಥಮಂ ತಾರಕಾರೂಪಂ ದ್ವಿತೀಯಂ ದಂಡ ಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಂ ಅರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ್ಠಂ ಜ್ಯೋತಿರೂಪಕಂ | ಇತಿ ಪ್ರಣವಃ ಜ್ಞೇಯಂ ಏತದ್ಗೋಪ್ಯಂ ವರಾನನೇ || ಓಂಕಾರ ಪ್ರಭವೋ ವೇದಃ ಓಂಕಾರಂ ಪ್ರಭವ ಸ್ವರಃ | ಓಂಕಾರಪ್ರಭವಾ ಭೂಃ ಓಂಕಾರಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವಾ ಮಹಃ | ಓಂಕಾರಪ್ರಭವೋ ಜನಃ ಓಂಕಾರ ಪ್ರಭವಂ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರ ಪ್ರಭವೋ ರವಿ ಃ | ಓಂಕಾರಪ್ರಭವಸ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಸ್ಯಾತ್ರ ನ ಸಂಭವೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವಃ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ | ಇತಿ ಪ್ರಣವಃ ವಿಜ್ಞೇಯಃ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವದ ಜ್ಯೋತಿಸ್ವರೂಪದಲ್ಲಿ- ಹೃದಯಮಂತ್ರೋ ಭವತಿ | ಓಂ ಪರಮಾತ್ಮಾ ದೇವತಾ | ಜ್ಯೋತಿರೂಪೋ ಲಯಂ ಪ್ರಾಪ್ತೆ ೀ ಪ್ರಥಮಂ ಪ್ರಣವಾಂಶಕೇ || ಆ ಪ್ರಣವದ ದರ್ಪಣಾಕಾರದಲ್ಲಿ- ``ಶಿರೋಮಂತ್ರೋ ಭವತಿ | ಓಂ ಯಕಾರಾತ್ಮಾ ದೇವತಾ | ದರ್ಪಣೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಕೇ ||'' ಆ ಪ್ರಣವದ ಅರ್ಧಚಂದ್ರಕದಲ್ಲಿ- ``ಶಿಖಾಮಂತ್ರೋ ಭವತಿ | ಓಂ ಅಕಾರಾತ್ಮಾ ದೇವತಾ | ಅರ್ಧಚಂದ್ರೇ ಲಯಂ ಪ್ರಾಪ್ತೇ ತೃತೀಯಂ ಪ್ರಣವಾಂಶಕೇ ||'' ಆ ಪ್ರಣವದ ಕುಂಡಲಾಕಾರದಲ್ಲಿ- ``ಕವಚಮಂತ್ರೋ ಭವತಿ | ಓಂ ಶಿಕಾರಾತ್ಮಾ ದೇವತಾ | ಕುಂಡಲೇ ಚ ಲಯಂ ಪ್ರಾಪ್ತೇ ಚತುರ್ಥಂ ಪ್ರಣವಾಂಶಕೇ ||'' ಆ ಪ್ರಣವದ ದಂಡಸ್ವರೂಪದಲ್ಲಿ- ``ನೇತ್ರಮಂತ್ರೋ ಭವತಿ | ಓಂ ಮಕಾರಾತ್ಮಾ ದೇವತಾ | ದಂಡರೂಪೇ ಚ ಲಯಂ ಪ್ರಾಪ್ತೇ ಪಂಚಮಂ ಪ್ರಣವಾಂಶಕೇ ||'' ಆ ಪ್ರಣವದ ತಾರಕಸ್ವರೂಪದಲ್ಲಿ- ``ಅಸ್ತ್ರಮಂತ್ರೋ ಭವತಿ | ಓಂ ನಕಾರಾತ್ಮಾ ದೇವತಾ | ತಾರಕೇ ಚ ಲಯಂ ಪ್ರಾಪ್ತೇ ಷಷ್ಠಮಂ ಪ್ರಣವಾಂಶಕೇ ||'' ಇಂತೆಂದುದು ಶ್ರುತಿ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಜಂಗಮಫಲವೆಲ್ಲವೂ ದೇವತೆಗಳಾಹಾರವು; ಸ್ಥಾವರಫಲವೆಲ್ಲವೂ ಮನುಷ್ಯರಾಹಾರವು. ಅದೆಂತೆಂದೊಡೆ : ದೇವತಾಬಿಂದುವಿನಲ್ಲಿ ಮನುಷ್ಯಕೃತ್ಯದಿಂದುದ್ಭವಿಸುವುದೆಲ್ಲ ಸ್ಥಾವರವು; ಮನುಷ್ಯ ಬಿಂದುವಿನಲ್ಲಿ ದೇವತಾ ಕೃತ್ಯದಿಂದುದ್ಭವಿಸುವುದೆಲ್ಲ ಜಂಗಮವು. ಮನುಷ್ಯರು ಶೂದ್ರಮುಖದಿಂ ಕೊಂಬುತಿರ್ಪರು. ದೇವತೆಗಳು ಬ್ರಾಹ್ಮಣಮುಖದಿಂ ಕೊಂಬುತಿರ್ಪರು. ಪೃಥ್ವಿಯಲ್ಲಿ ಎಂಬತ್ತುನಾಲ್ಕುಲಕ್ಷವಿಧ ಜಂಗಮಗಳು ಹೇಗೋ ದೇವತೆಗಳಲ್ಲಿಯೂ ಹಾಗೆ. ದೇವತೆಗಳು ತಮ್ಮ ಕರ್ಮಫಲವು ತೀರಿದೊಡೆ, ತದ್ಧೋಷ ಕರ್ಮಾನುಸಾರಮಾಗಿ ಪಂಚಾಶಲ್ಲಕ್ಷ ದೇಹಗಳೊಂದಂ ಹೊಂದಿ ಆಯಾ ಆಹಾರಂಗಳಂ ಭುಂಜಿಸುತ್ತಾ. ತದಾನುಗುಣ್ಯಮಾಗಿ ಕ್ರೀಡಿಸುತ್ತರ್ಪಂದದಿ, ಮನುಷ್ಯನು ಇಹಲೋಕಕರ್ಮವು ತೀರಿದಲ್ಲಿ ಆ ಕರ್ಮಫಲಕ್ಕೆ ತಕ್ಕ ಮರಣವಂ ಹೊಂದಿ, ದೇವತಾ ಪಿಶಾಚಾಂತಮಾದ ದೇಹಗಳೊಳೊಂದು ದೇಹವನ್ನೆತ್ತಿ, ಸುಖದುಃಖಗಳನನುಭವಿಸುತ್ತಾ ತನ್ನ ಅದ್ಥಿಕಾರಕ್ಕೆ ದೇವತೆಯನ್ನು ಗ್ರಹಿಸಿ, ಆ ದೇವತಾಮುಖದಿಂ ಆಹಾರಂಗಳಂ ಗ್ರಹಿಸುವಂತೆ, ಆ ದೇವತೆಗಳು ತಮ್ಮ ಅದ್ಥಿಕಾರಕ್ಕನುಗುಣವಾಗಿ ಮನುಷ್ಯರಂ ಗ್ರಹಿಸಿ, ಆ ಮನುಷ್ಯಮುಖದಿಂ ಆಹಾರಂಗಳಂ ಕೊಂಬುತಿರ್ಪರು. ದೇವೆತಗಳಿಗೆ ಮಂತ್ರದಿಂದಾವಾಹನೋಚ್ಚಾಟನೆಗಳು, ಮನುಷ್ಯರಿಗೆ ತಂತ್ರದಿಂದಾವಾಹನೋಚ್ಚಾಟನೆಗಳು. ಮನುಷ್ಯರಿಗೆ ತಂತ್ರದಿಂ ಕೂಡಿದ ಮಂತ್ರವು, ದೇವತೆಗಳಿಗೆ ಮಂತ್ರದಿಂ ಕೂಡಿದ ತಂತ್ರವು, ಇಂತು ಮನುಷ್ಯರೂಪದಿಂದ ಸತ್ತು. ದೇವತಾರೂಪದಿಂ ಹುಟ್ಟುತ್ತಿರ್ಪ ದಂದುಗವಂ ಬಿಡಿಸಿ, ನಿನ್ನಲ್ಲಿ ಸತ್ತು ಹುಟ್ಟುತ್ತಿರ್ಪ ನಿಜಸುಖವಂ ಕೊಟ್ಟು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇದಕ್ಕೆ ಮಹದೋಂಕಾರೋಪನಿಷತ್ತು : ಉಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶಮೇ ಪ್ರಣವಾಂಶಕೇ || '' ಮಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || '' ಅಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ| ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇ ಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದುಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಹರಿಗೆ ಇಂದ್ರನೀಲಲಿಂಗ, ಬ್ರಹ್ಮಂಗೆ ಶೈಲಲಿಂಗ, ಶಕ್ರಂಗೆ ಮಣಿಮಯಲಿಂಗ, ಸೂರ್ಯಂಗೆ ತಾಮ್ರಲಿಂಗ, ಸೋಮಂಗೆ ಮೌಕ್ತಿಕಲಿಂಗ, ಕುಬೇರಂಗೆ ಹೇಮಲಿಂಗ, ನಾಗರ್ಕಳಿಗೆ ಪವಳದ ಲಿಂಗ, ಅಷ್ಟವಸುಗಳಿಗೆ ಕಂಚಿನ ಲಿಂಗ, ವರುಣಂಗೆ ರತ್ನದ ಲಿಂಗ, ನೈರುತ್ಯಂಗೆ ಪರುಷದ ಲಿಂಗ, ವಾಯವ್ಯಗೆ ಹಿತ್ತಾಳಿಯ ಲಿಂಗ, ಕಾಮಂಗೆ ಕುಸುಮ ಲಿಂಗ, ಋಷಿಗಳಿಗೆ ಪರ್ವತದ ಲಿಂಗ, ಅಸುರರಿಗೆ ಕಬ್ಬುನದ ಲಿಂಗ, ದಶರಥಗೆ ಸುವರ್ಣದ ಲಿಂಗ, ಅಶ್ವಿನಿಗೆ ಕರಪಾತ್ರೆಯ ಲಿಂಗ, ಅಂತಕಂಗೆ ಪರಿಪರಿಯ ಲಿಂಗ, ಗಾಯತ್ರಿಗೆ ಮರಕತದ ಲಿಂಗ, ಚಾಮುಂಡಿಗೆ ವಜ್ರದ ಲಿಂಗ, ಭೂದೇವಿಗೆ ಪಚ್ಚದ ಲಿಂಗ, ದುರ್ಗಿಗೆ ಕನಕದ ಲಿಂಗ, ಸಪ್ತಮಾತೃಕೆಯರಿಗೆ ಮಳಲ ಲಿಂಗ, ಇದೆಂತೆಂದಡೆ: ಇಂದ್ರನೀಲಮಯಂ ಲಿಂಗಂ ವಿಷ್ಣುಃ ಪೂಜಯತೇ ಸದಾ ವಿಷ್ಣುತ್ವಂ ಪ್ರಾಪ್ಯತೇ ತೇನ ಸಾದ್ಭುತೈಕಂ ಸನಾತನಂ ಬ್ರಹ್ಮಾ ಪೂಜಯತೇ ನಿತ್ಯಂ ಲಿಂಗಂ ಶೈಲಮಯಂ ಶುಭಂ ತಸ್ಯ ಸಂಪೂಜನಾದೇವ ಪ್ರಾಪ್ತಂ ಬ್ರಹ್ಮತ್ವಮುತ್ತಮಂ ಶಕ್ರೋ[s]ಪಿ ದೇವ ರಾಜೇಂದ್ರೋ ಲಿಂಗಂ ಮೃಣ್ಮಯಂ ಶುಭಂ ಭಕ್ತ್ಯಾ ಪೂಜಯತೇ ನಿತ್ಯಂ ತೇನ ಶಕ್ರತ್ವಮಾಪ್ನುಯಾತ್ ತಾಮ್ರಲಿಂಗಂ ಸದಾಕಾಲಂ ಭಕ್ತ್ಯಾ ದೇವೋ ದಿವಾಕರಃ ತ್ರಿಕಾಲಂ ಯಜತೇ ತೇನ ಪ್ರಾಪ್ತಂ ಸೂರ್ಯತ್ವಮುತ್ತಮಂ ಮುಕ್ತಾಫಲಮಯಂ ಲಿಂಗಂ ಸೋಮಃ ಪೂಜಯತೇ ಸದಾ ತೇನ ಸೋಮೇನ ಸಂಪ್ರಾಪ್ತಂ ಸೋಮತ್ವಂ ಸತತೋಜ್ವಲಂ ಲಿಂಗ ಹೇಮಮಯಂ ಕಾಂತಂ ಧನದೋ[s]ರ್ಚಯತೇ ಸದಾ ತೇನ ಸಾಧನತೋ ದೇವಃ ಧನದತ್ವಮವಾಪ್ತವಾನ್ ವಸವಃ ಕಾಂಸ್ಯಕಂ ಲಿಂಗಂ ಪೂಜ್ಯ ಕಾಮಾನವಾಪ್ನುಯಾತ್ ನಾಗಾಃ ಪ್ರವಾಳಜಂ ಲಿಂಗಂ ಪೂಜ್ಯ ರಾಜ್ಯಾನಿ ಲೇಬ್ಥಿರೇ ಲಿಂಗಂ ರತ್ನಮಯಂ ಚಾರು ವರುಣೋಡಿರ್ಚಯತೇ ಸದಾ ತೇನ ತದ್ವರುಣತ್ವಂ ಹಿ ಪ್ರಾಪ್ತಂ ಭದ್ರಸಮನ್ವಿತಂ ಲಿಂಗಮಧ್ಯೇ ಜಗತ್ಸರ್ವಂ ಸರ್ವಂ ಲಿಂಗೇ ಪ್ರತಿಷ್ಠಿತಂ ತಸ್ಮಾತ್ ಸಂಪೂಜಯೇಲ್ಲಿಂಗಂ ಯದಿ ಚೇತ್ಸಿದ್ಧಿಮಾತ್ಮನಃ ಐವಂ ದೇವಾಶ್ಚ ಗಂಧರ್ವಾ ಯಕ್ಷೋರಗರಾಕ್ಷಸಾಃ ಪೂಜಯಂತಿ ಸದಾಕಾಲಮೀಶಾನಂ ಸುರನಾಯಕಂ ಬ್ರಹ್ಮಾವಿಷ್ಣುಸ್ತಥಾ ಶಕ್ರೋ ಲೋಕಪಾಲಾಶ್ಚ ದೇವತಾಃ ಲಿಂಗಾರ್ಚನರತಾ ಹ್ಯೇತೇ ಮಾನುಷೇಷು ಚ ಕಾ ಕಥಾ ? ಇಂತೆಂದುದಾಗಿ ಸುರಪ ಹರಿ ವಿರಂಚಿ ಗಂಧರ್ವ ಯಕ್ಷ ರಾಕ್ಷಸ ಋಷಿ ದೇವತೆಗಳೆಲ್ಲರೂ ಲಿಂಗವ ಪೂಜಿಸಿ ಇಷ್ಟಕಾಮ್ಯಸಿದ್ಧಿಯ ಪಡೆದು ಭವಭಾರಿಗಳಾದರು. ಸೌರಾಷ್ಟ್ರ ಸೋಮೇಶ್ವರನ ಶರಣರು ಫಲಪದಂಗಳ ಮೀರಿ ಅರಿಕೆಯರತು ಬಯಕೆ ಬರತು ಹುಟ್ಟುಗೆಟ್ಟು ಭವಹಿಂಗಿ ಅಭಂಗರಾದರು
--------------
ಆದಯ್ಯ
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇಂದ್ರಾದಿ ದೇವತಾ ಸಂಕುಳಕ್ಕೆ ಅಂತಪ್ಪ ಪದವನಿತ್ತಾತ ಬಸವಣ್ಣನಯ್ಯಾ. ಬ್ರಹ್ಮ-ವಿಷ್ಣು ಮೊದಲಾದ ದೇವತಾಮೊತ್ತಕ್ಕೆ ಅಂತಪ್ಪ ಪದವನಿತ್ತಾತ ಬಸವಣ್ಣನಯ್ಯಾ. ಶಿವಲಿಂಗಭಕ್ತರಿಗೆ ಚರಲಿಂಗಧಾರಣೆಯ ಪರಿಯಾಯಂದಿದಲೊರೆದಾತ ಗುರು. ಇಹಲೋಕ ಪರಲೋಕದನುಮಿಷದ ಸುದ್ದಿಯನರುಹಿದಾತ ಗುರು ಬಸವಣ್ಣನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಮನವಿಕಾರ ಸುಟ್ಟದನು ಮನವಿಕಾರದ ಭ್ರಮೆಯ ಹೋರಟೆಯಾಗದೆಂ ಬನುವಿನಿಂ ತ್ರಿಲೋಕಯೆಲ್ಲ ಭಂಗಿತರಾಗಿ ಜನನ ಮರಣಕೆ ಬರುವ ಮನವು ನಿರ್ಮನವಾಗಲವ ಸತ್ಯ ನಿತ್ಯ ಶರಣ. ಪದ :ಹರಿದು ಮರ್ಕಟನ ವಿಕಾರಕಿಂದಲಿ ಮೇಣು ಸುರೆ ಸವಿದವನ ವಿಕಾರವದರಿಂದ ಧ ತ್ತುರಿಯ ಸೇವಿಸಿದವನ ವಿಕಾರಯಿವು ತ್ರಿವಿಧಕೆ ಗೌರವಂ ಮನವಿಕಾರ ಚರಿಯ ಮದದ ಅಮಲು ತಲೆಗೇರಿ ತಾಮಸದಲಿಂ ಗಿರಿಯಂಧಕನವೋಲಿನಂತೆ ದೇವತಾ ಸತ್ಯ ಪುರುಷರುಂ ಶಿವಜ್ಞಾನ ಹೊಲಬನರಿಯದೆ ಕೆಟ್ಟುದನೇನ ಹೊಗಳ್ವೆ ನಾನು | 1 | ಹರಿಯ ಮುಂದುಗೆಡಿಸಿ ಅಜನ ಶಿರವ ಕಳೆಸಿ ಸುರನ ಮೈಯೋನಿಯಂ ಮಾಡಿ ದೇವರ್ಕಳಂ ನೆರೆ ಕೆಡಿಸಿ ಯತಿ ಸಿದ್ಧಸಾಧ್ಯರೆಲ್ಲರ ಸೆರೆಯ ಹಿಡಿದು ಭಂಗಿತರ ಮಾಡಿ ಧರೆಯ ಮನುಜರ ತಿಂದು ತೇಗಿ ಕಾಡುವ ಮನವ ನಿರಸನಮಾಡಿ ನಿರ್ಮೋಹಿಯಾಗಿಹ ಸತ್ಯ ಶರಣರಡಿಧೂಳಿಯ ಚಮ್ಮಾವುಗೆಯ ಪೊರೆವೆನೆನಗಿದೆ ಸತ್ಯ ಮುಕ್ತಿ ಕಂಡಾ |2| ಇಳೆಪತಿಗೆ ಮಂತ್ರಿ ತಾ ಮುಖ್ಯವಾದಂತೆ ಕಾಯ ದೊಳು ಚರಿಸುವ ಜೀವ ಪ್ರಾಣದ್ವಯ ದಶವಾಯು ಗಳು ಅಷ್ಟಮದ ಸಪ್ತವ್ಯಸನ ಅರಿವರ್ಗ ಚತುರಂತಃಕರಣವಿಷ್ಟೆಲ್ಲಕೆ ಸಲೆ ಮನಂ ಮುಖ್ಯವಾಗಿಯೂ ಪಾಪ ಅನ್ಯಾಯವ ಗಳಿಸಿ ಯಮನಿಂಗೆ ಗುರಿಮಾಡಿ ಬಂಧಿಸಿ ಜನರ ಕೊಲ್ಲಿಸುತಿಹ ವಿಧಿಗಂಜಿ ನಿಮ್ಮ ಮೊರೆಹೊಕ್ಕೆನೆಲೆ ಕಾಯೋ ಶಂಭುವೆ. | 3 | ಚಣಚಣಕ್ಕೆ ಪಾತಾಳಲೋಕಕೈದುವ ಮನಂ ಚಣಚಣಕ್ಕೆ ಆಕಾಶದತ್ತ ಹಾರುವ ಮನಂ ಚಣಚಣಕ್ಕೆ ಸಪ್ತಸಮುದ್ರವ ಚರಿಸಿಬರುವುದೀ ಮನಮರುತ ಸರ್ವಾಂಗದಿ ಚಣಕೊಂದು ಬುದ್ಧಿಯ ನೆನದು ಕಾಡುವ ಮನದ ಗುಣದಿಂದ ನಾ ಕರ್ಮಶರಧಿಯೊಳು ಮುಣಗಿದೆನು ತ್ರಿಣಯ ನೀ ಕೈವಿಡಿದು ತೆಗೆದು ರಕ್ಷಿಸು ಎನ್ನ ಕರುಣಾಳು ದುರಿತಹರನೆ |4 | ಮನದಿಂದೆ ನೊಂದೆ ನಾ ಮನದಿಂದೆ ಬೆಂದೆ ನಾ ಮನದಿಂದ ಕಂದಿ ಕುಂದಿಯೆ ಕುಸಿದು ಭವಗಿರಿಯ ನನುದಿನಂ ಸುತ್ತುತಿರ್ದೆನು ಅಂಧಕನ ತೆರದಿ ಮನದ ನಸು ಗುನ್ನಿ ಚುರಿಚಿತನವು ಸರ್ವಾಂಗವೆಲ್ಲವ ಕೊಂಡು ತಿನಿಸೆದ್ದು ಮನದ ಗಂಧೆಯ ತುರಿಸಿ ತುರಿಸನೇ ಹಂಬಲಿಸಿ ಕನಲುತಿರ್ದೆನು ಎನ್ನ ಗುಣವ ನೋಡದೆ ಕಾಯೋ ಕಾಯೋ ಕರುಣಾಳುವೆ |5| ಪಾಪಿಮನ ಠಕ್ಕಮನ ಸರ್ವರೊಳು ಕೋಪಿಮನ ಕುಕ್ಕಮನ ಕಾಕುಮನ ಜಾಪಿಮನ ಹೇವಮನ ಹೆಬಗಮನ ಗುಣಧರ್ಮಕರ್ಮದಿಂದ ತಾಪಸಬಡುತಿರ್ದೆ ಗಾಯವಡೆದ ಉರಗ ನಾಪರಿಯಲೆನ್ನ ನೆರಳಿಸಿ ಒರಲಿಸುವ ಮನದ ರೂಪನಳಿದು ಜ್ಞಾನವಿತ್ತು ಸಲವಯ್ಯಾ ಚಿದ್ರೂಪ ಚಿನ್ಮಯ ಶಂಭುವೆ. | 6 | ಕೂಳಮನ ಕುರಿಮನ ಸರ್ವಚಾಂ ಡಾಲಿಮನ ಪರಧನ ಪರಸ್ತ್ರೀಯರನ್ಯಕ್ಕೆ ಕೋಳುಗೊಂಬುವ ಹೆಡ್ಡಮನ ಜಿಡ್ಡುಮನ ಜಾಳುಮನ ಹಾಳುಮನದ ಪಾಳೆಯವು ಹಲವು ಪರಿಯ ಮನದ ಗಾಡಿಗೆ ಸಿಲ್ಕಿ ಕಾಲಕರ್ಮಕ್ಕೆ ಗುರಿಯಾದೆನಿದ ಪರಿಹರಿಸಿ ಶೂಲಿ ಸರಸಿಜನ ಕಪಾಲಿ ಶಿರಮಾಲಿ ರಕ್ಷಿಸು ಕರುಣಾಂಬುನಿಧಿ ಗಿರಿಜೇಶನೆ |7| ಅಂಗಗೂಡಿನೊಳು ಮನಪಕ್ಷಿ ಹೊರಗಿರುವ ಪ ಕ್ಕಂಗಳೆರಡರೊಳು ಉಡುಪತಿ ಭಾನುವಂ ಪಿಡಿದು ಜಂಗಿಟ್ಟು ಭೂಯ್ಯೋಮ ಮಧ್ಯದೊಳು ಚರಿಸುತಿರಲೆತಿ ಸಿದ್ಧ ಸಾಧ್ಯರೆಲ್ಲ ಭಂಗಬಡುವರು ಮನವೆಂಬ ಪಕ್ಷಿಯ ಮುರಿದು ನುಂಗಬಲ್ಲಡೆ ಸತ್ಯಶಿವಯೋಗಿ ಶರಣ ನಿ ರ್ಭಂಗ ನಿರ್ಲೇಪ ನಿರ್ಮನ ನಿರಾಭಾರಿಯಾಗಿಹರೆನ್ನ ಪ್ರಾಣಲಿಂಗ. | 8 | ಹರನ ಶ್ರೀಪಾದದೊಳು ಮನವನಿಟ್ಟಿಹ ಸತ್ಯ ಶರಣಬಸವೇಶ ಪ್ರಭುರಾಯ ಮೋಳಿಗೆ ಮಾರ ಗುರುಭಕ್ತ ನೆಂಬಣ್ಣ ದಾಸಿ ಕೇಶಯ್ಯನೋಹಿಲದೇವನುದುಟಯ್ಯ ಮರುಳಶಂಕರ ಮುಖ್ಯವಾದ ಪ್ರಮಥರ ದಿವ್ಯ ಚರಣದಲಿ ಮನವ ಮಗ್ನಿಸಿದ ದಾಸೋಹಿಗಳ ವರಪ್ರಸಾದಕ್ಕೆ ಯೋಗ್ಯನ ಮಾಡು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ. | 9 |
--------------
ಹೇಮಗಲ್ಲ ಹಂಪ
ಶ್ರೀವಿಭೂತಿಯ ಬಿಟ್ಟು ತಪಸ್ಸು ಮಾಡಿದಡೆ, ಆ ತಪಸ್ಸಿನ ಸಿದ್ಧಿ ಬಯಲು. ಶ್ರೀವಿಭೂತಿಯ ಬಿಟ್ಟು ದೀಕ್ಷೆಯ ಕೊಂಡಡೆ, ಆ ದೀಕ್ಷೆಯೆಲ್ಲ ಬಯಲು. ಶ್ರೀವಿಭೂತಿಯ ಬಿಟ್ಟು ಮಂತ್ರಂಗಳ ಸಾಧಿಸಿದೆಡೆ, ಆ ಮಂತ್ರಸಿದ್ಧಿಯು ಬಯಲು. ಶ್ರೀವಿಭೂತಿಯ ಬಿಟ್ಟು ಯಜ್ಞಂಗಳ ಸಾಧಿಸಿದಡೆ, ಆ ಯಜ್ಞಸಿದ್ಧಿಯು ಬಯಲು. ಶ್ರೀವಿಭೂತಿಯ ಬಿಟ್ಟು ದೇವತಾರ್ಚನೆಯ ಮಾಡಿದಡೆ, ಆ ದೇವತಾರ್ಚನಾಸಿದ್ಧಿಯೂ ಬಯಲು. ಶ್ರೀವಿಭೂತಿಯ ಬಿಟ್ಟು ವಿದ್ಯವ ಸಾಧಿಸಿದಡೆ, ಆ ವಿದ್ಯಾಸಿದ್ಧಿಯು ಬಯಲು. ಶ್ರೀವಿಭೂತಿಯ ಬಿಟ್ಟು ವೇದವ ಪಠಿಸಿದಡೆ, ಆ ವೇದಸಿದ್ಧಿಯು ಬಯಲು. ಅದೆಂತೆಂದಡೆ:ಲೈಂಗೇ- ನ ದೀಕ್ಷಾ ನ ತಪೋ ಮಂತ್ರಂ ನ ಯಜ್ಞೋ ದೇವತಾ ನ ಚ | ವಿದ್ಯಾ ನೈವಾಗಮಜ್ಞಾನಂ ಭಸ್ಮಮಾಹಾತ್ಮ್ಯವರ್ಜಿತಂ || ಎಂದುದಾಗಿ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ, ನಿಮ್ಮ ದಿವ್ಯಾಲಂಕಾರಮಪ್ಪ ದಿವ್ಯಭಸಿತವ ಬಿಟ್ಟ ಪಂಚಮಹಾಪಾತಕಂಗೆ ಆವ ಕಾರ್ಯವೂ ಸಿದ್ಧಿಯಿಲ್ಲ.
--------------
ಸಂಗಮೇಶ್ವರದ ಅಪ್ಪಣ್ಣ
ಇದಕ್ಕೆ ಪ್ರಣವೋಪನಿಷತ್ತು : ಅಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಕಾಕಾರೋಭವತಿ ಓಂ ನಿರಾಳಾತ್ಮ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ದಶಮಂ ಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋಭವತಿ ಓಂ ನಿರಂಜನಾತ್ಮಾ ದೇವತಾ ಉಕಾರೇ ಚ ಲಯಂ ಪ್ರಾಪ್ತೇ ಏಕಮೇವ ಪ್ರಣವಾಂಶಕೇ ||'' ಮಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ನಿರಾಮಯಾತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ ||'' ``ಅಕಾರೇ ಚ ಉಕಾರೇ ಚ ಮಕಾರೇ ಚ ನಿರಂಜನಂ | ಇದಮೇಕಂ ಸಮುತ್ಪನ್ನಂ ಓಂ ಇತಿ ಜ್ಯೋತಿರೂಪಕಂ || ಪ್ರಥಮಂ ಕಾರಕಾರೂಪಂ ದ್ವಿತೀಯೋ ದಂಡ ಉಚ್ಯತೇ | ತೃತೀಯಃ ಕುಂಡಲಾಕಾರಃ ಚತುರ್ಥಶ್ಚಾರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷೊ*ೀ ಜ್ಯೋತಿಸ್ವರೂಪಕಂ | ಇತಿ ಪ್ರಣವಃ ವಿಜ್ಞಾತಃ ಏತದ್ಗೋಪಂ ವರಾನನೇ || ಓಂಕಾರಪ್ರಭವೋ ರುದ್ರಃ ಓಂಕಾರ ಪ್ರಭುವೋ ಜಪಃ | ಓಂಕಾರಪ್ರಭವೋ ಬ್ರಹ್ಮಾ ಓಂಕಾರ ಪ್ರಭವೋ ಹರಿಃ || ಓಂಕಾರಪ್ರಭವಶ್ಚಂದ್ರಃ ಓಂಕಾರ ಪ್ರಭುವೋ ರವಿಃ | ಓಂಕಾರಪ್ರಭವೋ ವೇದಃ ಓಂಕಾರ ಪ್ರಭವಃ ಸ್ವರಃ || ಓಂಕಾರಪ್ರಭವಂ ಸರ್ವಂ ತ್ರೈಲೋಕ್ಯಂ ಸಚರಾಚರಂ | ಸರ್ವವ್ಯಾಪಕಮೋಂಕಾರಂ ಮಂತ್ರಾಣ್ಯನ್ಯತ್ರನಸೋ ಭವೇತ್ || ಪ್ರಣವೋಹಿಃ ಪರಬ್ರಹ್ಮ ಪ್ರಣವಃ ಪರಮಂ ಪದಂ | ಓಂಕಾರಂ ನಾದರೂಪಂ ಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ | ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶ್ರುತಿವಿಧಿಸಿದ ಶ್ರೀವಿಭೂತಿಯ ಪರಂಜ್ಯೋತಿಯೆಂದರಿದು ಭವಭೀತಿ ಮೃತ್ಯುಭಯಕ್ಕಂಜಿ ಜಮದಗ್ನಿ ಅಗಸ್ತ್ಯ ಕಸ್ಯಪ ಮೊದಲಾದ ಎಲ್ಲಾ ಋಷಿಗಳು ಧರಿಸಿ ಕೊರಜರಾದರು ನೋಡಾ. ಶ್ರೀವಿಭೂತಿಯ ಪರಂಜ್ಯೋತಿಯೆಂದರಿದು ಎಲ್ಲಾ ದೇವರ್ಕಳು ಎಲ್ಲಾ ಶ್ರುತಿ ಸ್ಮøತಿಗಳು ಧರಿಸಿದವು ನೋಡಾ. ಶ್ರೀವಿಭೂತಿಯೆ ಪರಂಜ್ಯೋತಿಯೆಂದರಿದು ಗಾಯತ್ರಿ ಬ್ರಹ್ಮ ವಿಷ್ಣು ಇಂದ್ರಾದಿ ದೇವರ್ಕಳು ಧರಿಸಿದರು ನೋಡಾ. ಶ್ರೀವಿಭೂತಿಯ ಪರಂಜ್ಯೋತಿ ನಿರುತವಿದು ನಂಬಿ ಧರಿಸಿ ಬದುಕು ಮನುಜಾ. ಶ್ರೀವಿಭೂತಿಯೆ ಪರಂಜ್ಯೋತಿಯೆಂಬುದು. ಇದಕ್ಕೆ ಜಾಬಾಲೋಪನಿಷತ್ : ``ಓಂ ಸ ಏಷ ಭಸ್ಮ ಜ್ಯೋತಿ ಸ್ಸಏಷ ಭಸ್ಮ ಜ್ಯೋತಿರಿತ'' ಇಂತೆಂದುದು ಶ್ರುತಿ. ಇದಕ್ಕೆ ಮಾನವಪುರಾಣೇ : ``ಭಸ್ಮ ಜ್ಯೋತಿರ್ಭವತ್ಯೇವ ಶಿವಾಖ್ಯಂ ನ ಹಿ ಸಂಶಯಃ | ಜಾಬಾಲೋಪನಿಷತ್ಸರ್ವಂ ಪ್ರಾಹೇದಂ ಪರಯಾ ಮುದಾ ||'' ಇಂತೆಂದುದಾಗಿ, ಇನ್ನು ವಿಭೂತಿ ಅಭಿಮಂತ್ರ ವಿಭೂತಿಧಾರಾ ಎಂಬುದಕ್ಕೆ ಕಾತ್ಯಾಯನ ಗೃಹ್ಯೇ, ಕಾತ್ಯಾಯನ ಸ್ಮೃತಿ, ಬೋಧಾಯನ ಸ್ಮೃತಿ, ಅಭಿಮಂತ್ರ ಶ್ರುತಿ : ``ಮಾನಸ್ತೋಕೇ ತನಯೇ ಮಾನ ಆಯುಷಿ ಮಾನೋ ಗೋಷು ಮಾನೋ ಅಶ್ವೇಷು ರೀರಿಷಃ | ವೀರಾನ್ಮಾನೋ ರುದ್ರ ಭಾಮಿತೋ ವಧೀರ್ಹವಿಷ್ಮಂತೋ ಶಮಿತ್ವಾ ಹವಾಮಹೇ ||'' ಇಂತೆಂದುದು ಶ್ರುತಿ. ಇನ್ನು ವಿಭೂತಿಧಾರಾ ಎಂಬುದಕ್ಕೆ ಶ್ರುತಿ: ``ಓಂ, ಕುಕ್ಷರುಷಿ ರುದ್ರೋ ದೇವತಾ ಜಗತೀ ಛಂದಃ | ಓಂ, ತ್ರಿಯಾಯುಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ | ಅಗಸ್ತ್ಯಸ್ಯ ತ್ರಿಯಾಯುಷಂ ತನ್ಮೇ ಅಸ್ತು ತ್ರಿಯಾಯುಷಂ | ಯದ್ದೇವಾನಾಂ ತ್ರಿಯಾಯುಷಂ ಶತಾಯುಷಂ ಕುರು ತ್ವಾನಿ || ಲಲಾಟ ಭುಜದ್ವಯಂ ನಾಭೇರುತ್ವಾರುಷಿ | ಬ್ರಹ್ಮಣ ರುಷಿ ವೈದಿಕಂ ಸದಾ || '' ಇಂತೆಂದುದು ಶ್ರುತಿ. ಇದಕ್ಕೆ ಬೋಧಾಯನ ಶ್ರುತಿ : ``ಮಾನಸ್ತೋಕೇತ್ಯಾದಿ ಮಂತ್ರೇಣ ಮಂತ್ರಿತಂ ಭಸ್ಮ ಧಾರಯೇತ್ | ಊಧ್ರ್ವಪುಂಡ್ರಂ ಭವೇತ್ ಸಾಮ ಮಧ್ಯಪುಂಡ್ರಂ ಯಜೂಂಷಿ ಚ | ಅಧಃ ಪುಂಡ್ರಮೃಚಃ ಸಾಕ್ಷಾತ್ ತಸ್ಮಾತ್ ಪುಂಡ್ರಂ ತ್ರಿಯಾಯುಷಂ ||'' ಇದಕ್ಕೆ ಲೈಂಗ್ಯ ಪುರಾಣೇ : ``ಅಕಾರೋನಾಮಿಕಂ ಪ್ರೋಕ್ತಂ ಉಕಾರೋ ಮಧ್ಯಮಾಂಗುಲಿಃ | ಮಕಾರೋ ತಜ್ರ್ಜನಿಸ್ಥಾನಂ ತ್ರಿಭಿಃ ಕುರ್ಯಾತ್ ತ್ರಿಪುಂಡ್ರಕಂ ||'' ಇಂತೆಂದುದಾಗಿ. ಇದಕ್ಕೆ ಕಾಲಾಗ್ನಿರುದ್ರೋಪನಿಷತ್ : ``ಹರಃ ಓಂ, ಅಥ ಕಾಲಾಗ್ನಿರುದ್ರಂ ಭಗವಂತಂ ಸನತ್ಕುಮಾರಃ ಅಪಪ್ರಚ್ಛಧೀಹಿ ಭಗವನ್ ತ್ರಿಪುಂಡ್ರವಿಧಿಂ ಸತತ್ವಂ ಕಿಂ ದ್ರವ್ಯಂ ಕ್ರಿಯತ್ ಸ್ಥಾನಂ ಕತಿ ಪ್ರಮಾಣಂ ಕಾ ರೇಖಾ ಕೇ ಮಂತ್ರಾಃ ಕಾ ಶಕ್ತಿಃ ಕಿಂ ದೈವತಂ ಕಃ ಕರ್ತಾ ಕಿಂ ಫಲಮಿತಿ ಚ || ತಂ ಹ್ಯೋವಾಚ ಭಗವಾನ್ ಕಾಲಾಗ್ನಿ ರುದ್ರಃ ಯದ್ದ್ರವ್ಯಂ ತದಾಗ್ನೇಯಂ ಭಸ್ಮ, ಸದ್ಯೋಜಾತಾದಿ ಪಂಚಬ್ರಹ್ಮ ಮಂತ್ರೈಃ ಪರಿಗೃಹ್ಯ ಅಗ್ನಿರಿತಿ ಭಸ್ಮೇತ್ಯನೇನ ಚಾಭಿಮಂತ್ರ್ಯ ಮಾನಸ್ತೋಕ ಇತಿ ಸಮುದ್ದøತ್ಯ, ಮಾನೊ ಮಹಾಂತಮಿತಿ ಜಲೇನ ಸಂಸೃಜ್ಯ, ತ್ರಿಯಾಯುಷಮಿತಿ ಶಿರೋ ಲಲಾಟವಕ್ಷ ಸ್ಕಂಧೇಷು ತ್ರಿಯಾಯುಷೈಸ್ತ್ರ್ಯಂಬಕೈಸ್ತ್ರಿಶಕ್ತಿಭಿಸ್ತಿರ್ಯಕ್ ತಿಸ್ರೋ ರೇಖಾಃ ಪ್ರಕುರ್ವೀತ ವ್ರತಮೇತಚ್ಛಾಂಭವಂ ಸರ್ವೇಷು ದೇವೇಷು ವೇದವೇದಾದಿಭಿರುಕ್ತಂ ಭವತಿ ತಸ್ಮಾತ್ತತ್ಸಮಾಚರೇನ್ಮುಮುಕ್ಷುರ್ನಪುನರ್ಭವಾಯ || ಅಥ ಸನತ್ಕುಮಾರಃ ಪಪ್ರಚ್ಛ ಪ್ರಮಾಣಮಸ್ಯ ತ್ರಿಪುಂಡ್ರಧಾರಣಸ್ಯ ತ್ರಿಧಾರೇಖಾಭವತ್ಯಾಲಲಾಟಾದಾಚಕ್ಷುಷೋರಾಮೂಧ್ರ್ನೋರಾಭ್ರುವೋರ್ಮ- ಧ್ಯತಶ್ಚ ಪ್ರಥಮಾ ರೇಖಾ ಸಾ ಗಾರ್ಹಪತ್ಯಶ್ಚಾಕಾರೋ ರಜೋ ಭೂರ್ಲೋಕಃ ಸ್ವಾತ್ಮಾ ಕ್ರಿಯಾಶಕ್ತಿಃ ಋಗ್ವೇದಃ ಪ್ರಾತಃ ಸವನಂ ಮಹೇಶ್ವರೋ ದೇವತೇತಿ || ಯಾsಸ್ಯ ದ್ವಿತೀಯಾ ರೇಖಾ ಸಾ ದಕ್ಷಿಣಾಗ್ನಿರುಕಾರಃ ಸ್ವತ್ವ ಮಂತ್ರರಿಕ್ಷಮಂತರಾತ್ಮಾ ಚೇಚ್ಛಾಶಕ್ತಿಃ ಯಜುರ್ವೇದೋ ಮಾಧ್ಯಂ ದಿನಂ ಸವನಂ ಸದಾಶಿವೋ ದೇವತೇತಿ || ಯಾsಸ್ಯ ತೃತೀಯಾ ರೇಖಾ ಸಾsಹವನೀಯೋ ಮಕಾರಸ್ತಮೋ - ದ್ಯೌರ್ಲೋಕಃ ಪರಮಾತ್ಮಾ ಜ್ಞಾನಶಕ್ತಿಃ ಸಾಮವೇದಸ್ತøತೀಯಂ ಸವನಂ ಮಹಾದೇವೋ ದೇವತೇತಿ || ಏವಂ ತ್ರಿಪುಂಡ್ರವಿಧಿಂ ಭಸ್ಮನಾ ಕರೋತಿ ಯೋ ವಿದ್ವಾನ್ ಬ್ರಹ್ಮಚಾರೀ ಗೃಹೀ ವಾನಪ್ರಸ್ಥೋ ಯತಿರ್ವಾ ಸಃ ಸಮಸ್ತ ಮಹಾಪಾತಕೋ - ಪಪಾತಕೇಭ್ಯಃ ಪೂತೋ ಭವತಿ, ಸ ಸರ್ವೇಷು ತೀರ್ಥೇಷು ಸ್ನಾತೋ ಭವತಿ, ಸ ಸರ್ವಾನ್ ಜ್ಞಾತೋ ಭವತಿ, ಸ ಸರ್ವಾನ್ ವೇದಾನಧೀತೋ ಭವತಿ, ಸ ಸತತಂ ಸಕಲರುದ್ರಮಂತ್ರಜಾಪೀ ಭವತಿ, ಸ ಸಕಲಭೋಗಾನ್‍ಭುಂಕ್ತೆ ದೇಹಂತ್ಯಕ್ತ್ವ ಶಿವಸಾಯುಜ್ಯಮೇತಿ ನ ಸ ಪುನರಾವರ್ತತೇನ ಸ ಪುನರಾವರ್ತತ ಇತ್ಯಾಹ ಭಗವಾನ್ ಕಾಲಾಗ್ನಿರುದ್ರಃ ||'' ಇಂತೆಂದುದಾಗಿ, ಇದಕ್ಕೆ ಭೀಮತಂತ್ರಾಗಮೇ : ``ಸರ್ವತೀರ್ಥೇಷು ಯತ್‍ಪುಣ್ಯಂ ಸರ್ವಯಜ್ಞೇಷು ಯತ್‍ಫಲಂ| ತತ್‍ಫಲಂ ಕೋಟಿಗುಣಿತಂ ಭಸ್ಮಸ್ನಾನಾನ್ನಸಂಶಯಃ||'' ಇಂತೆಂದುದಾಗಿ, ಇದಕ್ಕೆ ಭವಿಷ್ಯೋತ್ತರಪುರಾಣೇ : ``ಶಿವಾಗ್ನಿಕಾರ್ಯಂ ಯಃ ಕೃತ್ವಾ ಕುರ್ಯಾತ್ರಿಯಾಯುಷಂ | ಆತ್ಮವಿತ್ ವಿಶುದ್ಧ ಃ ಸರ್ವಪಾಪೈಶ್ಚ ಸಿತೇನ ಭಸ್ಮನಾ || '' ಇಂತೆಂದುದಾಗಿ, ಇದಕ್ಕೆ ಪರಾಶರಪುರಾಣೇ : ``ಕ್ರಿಯಾಯುಷ್ಯಾಣಿ ಕುರುತೇ ಲಲಾಟೇಚ ಭುಜದ್ವಯೇ | ನಾಶಿಕಾಂತೇ ಚ ಧೃತ್ವಾರ್ಷೇ | '' (?) ಇದಕ್ಕೆ ಬ್ರಹ್ಮಪುರಾಣೇ : ``ಶ್ರಾದ್ಧೇ ಯಜ್ಞೇ ಜಪೇ ಹೋಮೇ ವೈಶ್ವದೇವೇ ಸುರಾರ್ಚನೇ | ಧೃತತ್ರಿಪುಂಡ್ರಪೂತಾತ್ಮಾ ಮೃತ್ಯುಂ ಜಯತಿ ಮಾನವ ಃ || '' ಇಂತೆಂದುದಾಗಿ, ಇದಕ್ಕೆ ಆದಿತ್ಯಪುರಾಣೇ : ``ಸರ್ವಾಶ್ರಮಾಣಾಂ ವರ್ಣಾನಾಂ ಭಸ್ಮ ರುದ್ರಾಕ್ಷ ಧಾರಣಂ | ಕರ್ತವ್ಯಂ ಮಂತ್ರತಶ್ಚೋಕ್ತಂ ದ್ವಿಜಾನಾಂ ನಾತ್ರ ಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ ಃ ``ವಿಪ್ರಾದೀನಾಂಚ ಸರ್ವೇಷಾಂ ಲಲಾಟಂ ಭಸ್ಮಶೂನ್ಯಕಂ | ಭಿಕ್ಷಾ ಚ ಜಪಹೋಮಂ ಚಾರ್ಪಣಂ ನಿಷ್ಫಲಂ ಭವೇತ್ || '' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಸಿತೇನ ಭಸ್ಮನಾ ಕಾರ್ಯಂ ತ್ರಿಸಂಧ್ಯಾಂ ತ್ರಿಪುಂಡ್ರಕಂ | ಸರ್ವಪಾಪವಿನಿರ್ಮುಕ ್ತಃ ಶಿವಸಾಯುಜ್ಯಮಾಪ್ನುಯಾತ್ || '' ಇಂತೆಂದುದಾಗಿ, ಇದಕ್ಕೆ ಲೋಕಾಕ್ಷಿ ಸ್ಮೃತಿ : ``ಮಧ್ಯಮಾನಾಮಿಕಾಂಗುಷೆ*ೀ ತ್ರಿಪುಂಡ್ರಂ ಭಸ್ಮನಾ ಧೃತಂ | ತತ್ತ್ರಿಪುಂಡ್ರಂ ಭವೇತ್ಪುಣ್ಯಂ ಮಹಾಪಾತಕನಾಶಕಂ ''|| ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ನೃಪಾಣಾವಿೂೀಶ್ವರಾಣಾಂ ಚ ಭಸ್ಮೀ ತ್ರೇಣ ಚ ಚಂದನಂ | ತ್ರಿಪುಂಡ್ರಂ ವಿಧಿವತ್ಕುರ್ಯಾತ್ ಸುಗಂಧೇನಾಪಿ ವಾಗುಹಾಂ || ಭಸ್ಮನಾಯೈ ತ್ರಿಸಂಧ್ಯಾಂ ಚ ಗೃಹಸ್ಥೋ ಜಲಸಂಯುತಂ | ಸರ್ವಕಾಲೇ ಭವೇತ್ ಸ್ತ್ರೀಣಾಂ ಯತಿನಾಂ ಜಲವರ್ಜಿತಂ || ವಾನಪ್ರಸ್ಥೇಷು ಕಾಂಸ್ಯಾನಾಂ ದೀಕ್ಷಾಹೀನಂ ಮೃಣಂ ತಥಾ | ಮಧ್ಯಾಹ್ನೇ ಪ್ರಾಕ್‍ಜಲಯುಕ್ತಂ ಪರಾಕ್ ಜಲವಿವರ್ಜಿತಂ ||'' ಇಂತೆಂದುದಾಗಿ, ಇದಕ್ಕೆ ಕ್ರಿಯಾಸಾರೇ : ``ಶುದ್ಧ ತಾ ಜಲೇನೈೀವ ಭಸ್ಮಸ್ಯಾತ್ ತ್ರಿಪುಂಡ್ರಕಂ | ಯೋ ಧಾರಯೇತ್ ಪರಬ್ರಹ್ಮ ಸಂಪ್ರಾಪ್ನೋತಿ ನ ಸಂಶಯಃ|| ಮಧ್ಯಮಾನಾಮಿಕಾಂಗುಷೆ* ೈರನುಲೋಮವಿಲೋಮತಃ ||'' ಧಾರಯದ್ಯಗ್ನಿ ತ್ರಿಪುಂಡ್ರಾಂತಂ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುಗಾಗಿ, ಇದಕ್ಕೆ ಕ್ರಿಯಾಸಾರೇ : ``ಮಧ್ಯಾಂಗುಲಿ ತ್ರಯೇಣೈವ ಸ್ವದಕ್ಷಿಣ ಕರಸ್ಯ ತು | ಷಡಂಗುಲಾಯತಂ ಮಾನಮಪಿವಾsಲಿಕಮಾನನಂ || ಷಡಂಗುಲಪ್ರಮಾಣೇನ ಬ್ರಾಹ್ಮಣಾನಾಂ ತ್ರಿಪುಂಡ್ರಕಂ | ನೃಪಾನಾಂ ಚತುರಂಗುಲ್ಯಂ ವೈಶ್ಯಾನಾಂ ಚ ದ್ವಿರಂಗುಲಂ | ಶೂದ್ರಾಣಾಂ ಚ ಸರ್ವೇಷಾಂ ಏಕಾಂಗುಲಾ ತ್ರಿಪುಂಡ್ರಕಂ ||'' ಇಂತೆಂದುಗಾಗಿ, ಇದಕ್ಕೆ ಭೀಮಸಂಹಿತಾಯಾಂ : ``ಮೂಧ್ರ್ನಾ ಲಲಾಟಕಂ ದ್ಯೌಶ್ಚ ಶ್ರೋತ್ರೇ ಬಾಹೂ ತಥೈೀವ ಚ | ಹೃದಯಂ ನಾಭಿಪೃಷೌ* ಚ ಹಸ್ತೋ ವೈ ಸಂಧಯಃ ಕ್ರಮಾತ್ || ಮೂಧ್ರ್ನಿಃ ಸ್ಯಾತ್ ಬ್ರಹ್ಮಣ ಪ್ರೀತಿಃ ಲಲಾಟೇ ಚ ಸರಸ್ವತೀ | ಕಂಠೋ ಲಕ್ಷ್ಮ್ಯಾ ಭವೇತ್ ಪ್ರೀತಿಃ ಸ್ಕಂದೇ ಪೀಣಾತಿ ಪಾರ್ವತಿ || ಇಂದ್ರ ಪ್ರೀತಿ ಕರಂ ಬಾಹೋ ಹೃದಯಂ ಚ ಶರಪ್ರಿಯಂ | ಅನೇನ ವಿಧಿನಾ ಚೈವ ವಿಭೂತಿಂ ಧಾರಯೇತ್ ಸುಧೀಃ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ತ್ರಿಪುಂಡ್ರಂ ಬ್ರಹ್ಮಣೋ ವಿದ್ವಾನ್ ಮನಸಾsಪಿ ನ ಲಂಘಯೇತ್ | ಶ್ರುತ್ವಾ ವಿಧೀಯತೇ ಯಸ್ಮಾತ್ ತತ್ಯಾನಿ ಪತಿತೋ ಭವೇತ್ ||'' ಇಂತೆಂದುದಾಗಿ, ಇದಕ್ಕೆ ಮತ್ಸ್ಯಪುರಾಣೇ : ``ನ ಚ ಶೌಚಂ ತಪೋ ಯಜ್ಞಂ ತೀರ್ಥಂ ದೇವಾಗ್ನಿಪೂಜನಂ | ಅಶ್ವಮೇಧಮಿದಂ ವ್ಯರ್ಥಂ ತ್ರಿಪುಂಡ್ರೋ ಯೋ ನ ಧಾರಯೇತ್ ||'' ಇಂತೆಂದುದಾಗಿ, ಇದಕ್ಕೆ ಬ್ರಹ್ಮಾಂಡಪುರಾಣೇ : ``ವಿಪ್ರಾಣಾಂ ವೇದವಿದುಷಾಂ ವೇದಾಂತಜ್ಞೇನ ವೇದಿನಾಂ | ಸಿತೇನ ಭಸ್ಮನಾ ಕಾರ್ಯಂ ತ್ರಿಪುಂಡ್ರಮಿತಿ ಪದ್ಮಭೂಃ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಸರ್ವೇ ತಪಸ್ವಿನಃ ಪ್ರೋಕ್ತಾಃ ಸರ್ವೇ ಯಜ್ಞೇಷು ಭಾಗಿನಃ | ರುದ್ರಭಕ್ತಾ ಸ್ಮøತಾಸ್ಸರ್ವೇ ತ್ರಿಪುಂಡ್ರಾಂಕಿತಮಸ್ತಕಾಃ ||'' ಇಂತೆಂದುದಾಗಿ, ಇದಕ್ಕೆ ಕ್ರಿಯಾಸಾರೇ : ``ಶಿರೋ ಲಲಾಟೇ ಶ್ರವಣೋದ್ವಯಾಗ್ನಿರ್ವಾಭುಜದ್ವಯಂ | ವಕ್ಷೋ ನಾಭಿಃ ಪೃಷ*ಭಾಗೇ | ಕಕುದಿತ್ಯೇಕದೋದಶ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಮೂಧ್ನೇ ಲಾಲಟೇ ಕರ್ಣೇ ಚ ಚಕ್ಷುಷೇ ಮಸ್ತಕಸ್ತಥಾ | ಅನ್ಯ ಬಾಹು ಭುಜದ್ವಂದ್ವಂ ಸ್ಥಾನಾವಪ್ಯುದರಂ ತಥಾ || ಮಣಿಬಂಧೇಷು ಧೃತ್ವಾ ಪಾಶ್ರ್ವೇ ನಾಭಿಮೇಢ್ರಂ ಚ ಪೃಷ್ಟಕಂ | ಊರೂ ಚ ಚಾಮಕಾಶ್ಚ ೈವ ಸಂಷ್ಟಪಿ ಯಥಾಕ್ರಮಂ || ವಿಧಿವತ್‍ಭಸ್ಮಸ್ನಾನಂ ಧಾರಣಂ ಮೋಕ್ಷಕಾರಣಂ || '' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಶಿರೋ ಫಾಲಃ ಕರ್ಣಕಂ ತೌಚ ಬಾಹೂ ಚ ಮಣಿಬಂಧಕೇ | ಹೃದಯಂ ಚ ಪರಂ ಚೈವ ನಾಭಿ ಭುಜದ್ವಯಂ ತಥಾ || ಓಷಾ*ವಪಿ ಚ ವಿಜ್ಞೇಯೋ ಷೋಡಶಃ ಸಂಧಯಃ ಸ್ಮøತಾಃ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಲಲಾಟಾಂಘ್ರಿವಾಂ ಭುಜಾತ್ ಹೃದಯಂ ನಾಭಿರೇವ ಚ | ಅಪರೇ ಸಂಧಯೋ ಜ್ಞೇಯಾ ಅಷ್ಟಸ್ಥಾನಂ ಚ ಭೂಷಣಂ || ಭಸ್ಮಸ್ನಾನಂ ನರೋ ತೀರ್ಥಂ ಗಂಗಾಸ್ನಾನಂ ದಿನೇ ದಿನೇ | ಭಸ್ಮರೂಪಂ ಶಿವಂ ಸಾಕ್ಷಾದ್ಭಸ್ಮ ತ್ರೈಲೋಕ್ಯಸಾಧನಂ || '' ಇಂತೆಂದುದಾಗಿ, ಇದಕ್ಕೆ ಯಜುರ್ವೇದ : ``ಓಂ ಭಾಗದ್ವಯೇವಾಯೇವಂ ಪ್ರಣಯೇತಿ ಬ್ರಾಹ್ಮಣಃ | ಆ ಋಷಯಃ ಉದ್ಧರೇವ ಬ್ರಾಹ್ಮಣೋ ವೈ ಸರ್ವದೇವತಾಃ | ಸರ್ವಾದಿ ದೇವೈಃ ಆನಂದೇವತಾಭಿರುದ್ಧತಿ || '' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಜಲಸ್ನಾನಂ ತಪಃ ಪುಣ್ಯಂ ಮಂತ್ರಸ್ನಾನಂ ಕುಲಕ್ಷಯಃ| ವಿಭೂತಿರೇಣುಮಾತ್ರೇಣ ತತ್ಫಲಂ ಶ್ರುಣು ಪಾರ್ವತಿ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಶ್ರೀಮತ್ ತ್ರಿಪುಂಡ್ರಮಹಾತ್ಮ್ಯಂ ಯಃ ಪಠೇತ್ ಸತತಂ ನರಃ | ಈಹೇಷ್ಟಾನ್ ಸಕಲಾನ್ ಪ್ರಾಪ್ಯ ಗಚ್ಛಂತಿ ಪರಮಂ ಪದಂ ||'' ಇಂತೆಂದುದಾಗಿ, ಇದನರಿದು ಶ್ರೀ ವಿಭೂತಿಯ ಧರಿಸದ ಕರ್ಮಿಯ ಎನಗೊಮ್ಮೆ ತೋರದಿರಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆದ್ಯರ ವಚನವ ಕೇಳಿ, ವೇದಾಗಮಂಗಳ ತಿಳಿದು, ಶ್ರೀವಿಭೂತಿಯ ಧಾರಣವೆ ಮುಖ್ಯವೆಂದರಿದು ಧರಿಸಿರಣ್ಣ. ಇಂತಿದನರಿಯದೆ, ಶಿವದೀಕ್ಷೆಯ ಮಾಡಿದರೂ ದೀಕ್ಷೆಯ ಪಡೆದರೂ ಫಲವಿಲ್ಲ. ಶಿವಮಂತ್ರಸ್ಮರಣೆ ತಪಯಜ್ಞಂಗಳ ಮಾಡಿದಲ್ಲಿಯೂ ಫಲವಿಲ್ಲ. ಆತಂಗೆ ವಿದ್ಯೆಯು ದೇವತೆಗಳು ಆಗಮಜ್ಞಾನವು ಇಲ್ಲ. `ನ ದೀಕ್ಷಾ ನ ತಪೋ ಮಂತ್ರಂ ನ ಯಜ್ಞೋ ದೇವತಾ ನ ಚ ವಿದ್ಯಾ ನೈವಾಗಮಜ್ಞಾನಂ ಭಸ್ಮಮಾಹಾತ್ಮವರ್ಜಿತೇ' ಎಂದುದಾಗಿ: ಇದು ಕಾರಣ, ಶ್ರೀವಿಭೂತಿಯ ಮಹಾತ್ಮೆಯನರಿದು ಧರಿಸಲು, ಸರ್ವಸಿದ್ಧಿಯಪ್ಪುದು. ಬಳಿಕ ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೊಳಗಿಪ್ಪನು.
--------------
ಸ್ವತಂತ್ರ ಸಿದ್ಧಲಿಂಗ
ಇದಕ್ಕೆ ಓಂಕಾರೋಪನಿಷತ್ : ಮಕಾರವೆಂಬ ಪ್ರಣವದಲ್ಲಿ - ``ದಂಡಶ್ಚ ತಾರಕಾಕಾರೋ ಭವತಿ ಓಂ ಸರ್ವಾತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ - ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಪರಾತ್ಪರಾತ್ಮೋ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ತ್ರಿಮಿಶಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಚತುರ್ವಿಂಶ ಪ್ರಣವಾಂಶಕೇ ||'' ಮಕಾರೇ ಚ ಅಕಾರೇ ಚ ಉಕಾರೇ ಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಪ್ರಥಮಂ ತಾರಕರೂಪಂ ದ್ವಿತೀಯಂ ದಂಡಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಶ್ಚಾರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ*ಂ ಜ್ಯೋತಿಸ್ವರೂಪಕಂ | ಇತಿ ಪ್ರಣವಾ ವಿಜ್ಞೇಯಂ ಏತದ್ಗೌಪ್ಯಂ ವರಾನನೇ || ಓಂಕಾರಪ್ರಭವಾ ವೇದಾಃ ಓಂಕಾರ ಪ್ರಭವಾತ್ ಸ್ವರಾಃ | ಓಂಕಾರಪ್ರಭವಾ ಭೂಃ ಓಂಕಾರ ಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವೋ ಮಹಃ | ಓಂಕಾರ ಪ್ರಭವೋ ಜನಃ ಓಂಕಾರ ಪ್ರಭವೋ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರಪ್ರಭವೋ ರವಿಃ | ಓಂಕಾರ ಪ್ರಭವಾತ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಾನ್ಯತ್ರ ನ ಶೋಭಯೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವೋಹಿ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿಸರ್ವತ್ರ ಓಂಕಾರಂ ಗೌಪ್ಯಮಾನನಂ | ಇತಿ ಪ್ರಣವಂ ವಿಜ್ಞೇಯಂ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಲಿಂಗಗರ್ಭದಲ್ಲಿ ಅನೇಕ ಕೋಟಿ ತತ್ವಂಗಳು, ಅನೇಕ ಕೋಟಿ ಸದಾಶಿವರು, ಅನೇಕ ಕೋಟಿ ಈಶ್ವರರು ಅಡಗಿಹರು ನೋಡಾ. ಆ ಲಿಂಗಗರ್ಭದಲ್ಲಿ ಅನೇಕ ಕೋಟಿ ಮಹೇಶ್ವರರು, ಅನೇಕ ಕೋಟಿ ರುದ್ರರು, ಅನೇಕ ಕೋಟಿ ವಿಷ್ಣಾ ್ವದಿಗಳಡಗಿಹರು ನೋಡಾ. ಆ ಲಿಂಗಗರ್ಭದಲ್ಲಿ ಅನೇಕ ಕೋಟಿ ಬ್ರಹ್ಮರು, ಅನೇಕ ಕೋಟಿ ಚಂದ್ರಾದಿತ್ಯರು, ಅನೇಕ ಕೋಟಿ ಋಷಿಗಳಡಗಿಹರು ನೋಡಾ. ಆ ಲಿಂಗಗರ್ಭದಲ್ಲಿ ಅನೇಕ ಕೋಟಿ ಇಂದ್ರರು, ಅನೇಕ ಕೋಟಿ ದೇವರ್ಕಳು, ಅನೇಕ ಕೋಟಿ ಬ್ರಹ್ಮಾಂಡಂಗಳಡಗಿ ಆದಿಮಧ್ಯಾವಸಾನಗಳಿಲ್ಲದೆ ಅಖಂಡ ಪರಿಪೂರ್ಣ ಗೋಳಕಾಕಾರ ಅಪ್ರಮಾಣ ಅಗೋಚರ ಅಪ್ರಮೇಯ ಅವ್ಯಕ್ತ ಅನಂತತೇಜ ಅತ್ಯಂತಪ್ರಚಯ ಅನಂತಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶ ಅನಂತಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹರು ನೋಡಾ. ಇದಕ್ಕೆ ಶಿವಧರ್ಮ ಸೂತ್ರೇ: ``ತತ್ವ ಸಂಜ್ಞಾಃ ಅಸಂಖ್ಯಾತಾಃ ಅಸಂಖ್ಯಾತ ಅಂಬರಂ ತಥಾ | ಅಸಂಖ್ಯಾ ದೇವಮುನಯಃ ಲಿಂಗತತ್ವೇ ವಿಲೀಯಂತೇ || ಅಸಂಖ್ಯಾತ ಸೂರ್ಯಚಂದ್ರಾಗ್ನಿ ತಾರಾಖ್ಯ ದೈತ್ಯ ಮಾನವಾಃ | ಅಸಂಖ್ಯಾತ ಸುರೇಂದ್ರಾಣಾಂ ಲಿಂಗಗರ್ಭೇ ವಿಲೀಯತೇ || ಅಸಂಖ್ಯಾ ಮಹಾವಿಷ್ಣವಃ ಅಸಂಖ್ಯಾತ ಪಿತಾಮಹಾಃ | ಅಸಂಖ್ಯಾತ ಮಹದಾಕಾಶಂ ಲಂಗಗರ್ಭೇ ವಿಲೀಯತೇ ||'' ಇಂತೆಂದುದಾಗಿ, ಇದಕ್ಕೆ ಶಿವಧರ್ಮ ಪುರಾಣೇ : ``ಕಲ್ಪಾಂತೇ ತಸ್ಯ ದೇವಸ್ಯ ಲೀಯತೇ ಸರ್ವದೇವತಾ | ದಕ್ಷಿಣೇ ಲೀಯತೇ ಬ್ರಹ್ಮಾ ವಾಮಭಾಗೇ ಜನಾರ್ಧನಃ || ಹೃದಯೇ ಚೈವ ಗಾಯತ್ರೀ ಸರ್ವದೇವೋತ್ತಮೋತ್ತಮಃ | ಲೀಯತೇ ಮೂಧ್ರ್ನಿ ವೈವೇದಾ ಷಡಂಗಪದಕ್ರಮಾತ್ || ಜಠರೇ ಲೀಯತೇ ಸರ್ವಂ ಜಗತ್‍ಸ್ಥಾವರ ಜಂಗಮಂ || ಉತ್ಪಾದ್ಯತೇ ಘನಸ್ತಸ್ಮಾತ್ ಬ್ರಹ್ಮಾದ್ಯಂ ಸಚರಾಚರಂ ||'' ಇಂತೆಂದುದಾಗಿ. ಇದಕ್ಕೆ ಶಿವಲಿಂಗಾಗಮೇ : ``ಚಿದ್ವ್ಯೋಮ ಲಿಂಗಮಿತ್ಯಾಹುಃ ಚಿದ್ಭೂಮಿ ತಸ್ಯ ಪೀಠಿಕಾ | ಆಲಯಃ ಸರ್ವದೇವಾನಾಂ ಲಯಾನಾಂ ಲಿಂಗಮುಚ್ಯತೇ || ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಉತ್ಪದ್ಯಂತೇ ಪುನಸ್ತಸ್ಮಾತ್ ಬ್ರಹ್ಮಾವಿಷ್ಣಾದಿ ದೇವತಾಃ ||'' ಇಂತೆಂದುದಾಗಿ, ಇದಕ್ಕೆ ಮಕುಟಾಗಮಸಾರೇ : ``ಆದಿಮಧ್ಯಾಂತ ಶೂನ್ಯಂ ಚ ಶೂನ್ಯ ಶೂನ್ಯಂ ದಶಾದಿಶಂ | ಸರ್ವಶೂನ್ಯಂ ನಿರಾಕಾರಂ ನಿದ್ರ್ವಂದ್ವಂ ಪರಮಂ ಪದಂ ||'' ಇಂತೆಂದುದಾಗಿ, ಇದಕ್ಕೆ ಉತ್ತರವಾತುಲಾಗಮೇ : ``ನ ಭೂಮಿರ್ನಜಲಂ ಚೈವ ನ ತೇಜೋ ನ ಚ ವಾಯುಚ | ನಚಾಕಾಶಂ ನ ಸೂರ್ಯಶ್ಚ ನಚ ಚಂದ್ರಮಇಂದ್ರಯೋ | ನ ಚ ಬ್ರಹ್ಮ ನ ವಿಶ್ವಂ ಚ ನಚೋ ನಕ್ಷತ್ರಕಾರಕಾ | ಏಕಮೇವ ಪರಂ ನಾಸ್ತಿ ಅಖಂಡಿತಮಹೋದಯಂ | ಸರ್ವಶೂನ್ಯಂ ನಿರಾಲಂಬಂ ಸ್ವಯಂ ಲಿಂಗಮಯಂ ಪರಂ ||'' ಇಂತೆಂದುದಾಗಿ, ಇದಕ್ಕೆ ರುದ್ರಕೋಟಿಸಂಹಿತಾಯಾಂ : ``ವಾಚಾತೀತಂ ಮನೋತೀತಂ ಭಾವಾತೀತಂ ಪರಂ ಶಿವಂ | ಸರ್ವಶೂನ್ಯಂ ನಿರಾಕಾರಂ ಸ್ವಯಂಭುರ್ಲಿಂಗಮೂರ್ತಯೇ ||'' ಇಂತೆಂದುದಾಗಿ, ಇದಕ್ಕೆ ಮಹಾಗಮಸಾರೇ : ``ಊಧ್ರ್ವಶೂನ್ಯಂ ಅಧಃ ಶೂನ್ಯಂ ಮಧ್ಯಶೂನ್ಯಂ ನಿರಾಮಯಂ | ಸರ್ವಶೂನ್ಯಂ ನಿರಾಕಾರಂ ಸ್ವಯಂಭುರ್ಲಿಂಗಮೂರ್ತಯೇ ||'' ಇಂತೆಂದುದಾಗಿ, ಇದಕ್ಕೆ ಆದಿ ನಾರಾಯಣ ಉವಾಚ : ``ನಮಸ್ತೇ ಜ್ಞಾನಲಿಂಗಾಯ ಶಿವಲಿಂಗಾಯ ಲಿಂಗಿನೇ | ನಮಸ್ತೇ ಗೂಢಲಿಂಗಾಯ ಪರಲಿಂಗಾಯ ಲಿಂಗಿನೇ || ಜಗತ್ಕಾರಣಲಿಂಗಾಯ ಜಗತಾಂ ಪತಯೇ ನಮಃ | ಆವಯೋಃ ಪತಯೇ ನಮಃ ನಿತ್ಯಂ ಪತೀನಾಂ ಪತಯೇ || ಅನಾದಿಮಲಸಂಸಾರೇ ರೋಗವೈದ್ಯಾಯ ಶಂಭವೇ | ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ || ಪ್ರಳಯಾಂಬುಧಿ ಸಂಸ್ಥಾಯ ಪ್ರಳಯೋತ್ಪತ್ಯಹೇತವೇ | ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ || ಆದಿಮಧ್ಯಾಂತಶೂನ್ಯಾಯ ಅಂಬರಸ್ಯಾಪಿ ಹೇತವೇ | ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ || ನಿಷ್ಕಳಾಯ ವಿಶುದ್ಧಾಯ ನಿತ್ಯಾನಂದಸ್ಯ ಹೇತವೇ | ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ || ನಿರ್ವಿಕಾರಾಯ ನಿತ್ಯಾಯ ಸತ್ಯಾಯ ಪರಮಾತ್ಮನೇ | ನಮಃಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ || ಓಂಕಾರಾಂತಾಯ ಸೂಕ್ಷ್ಮಾಯ ಸ್ತ್ರೀಪುಂಸಾಯಾತ್ಮ ರೂಪಣೇ | ನಮಃಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ || ಲೀಲಾತ್ಮಂಚ ದ್ವಯೋರ್ಮಧ್ಯೇ ಕಾಯಾತ್ಮರೂಪಣೇ | ನಮಃಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ||'' ಇಂತೆಂದುದಾಗಿ, ಇದಕ್ಕೆ ಮಹಾದೇವ ಉವಾಚ : ``ವಾಚಾತೀತಂ ಮನೋತೀತಂ ವರ್ಣಾತೀತಂ ಪರಂ ಶಿವಂ | ಸರ್ವಶೂನ್ಯಂ ನಿರಾಕಾರಂ ನಿರಾಲಂಬಸ್ಯ ಲಿಂಗಯೋಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ವೇದವೆಂಬುದು ವಾದ, ವೈದಿಕತ್ವ ಮಾಯಾಭೇದ. ದೇವತಾ ದೇವತೆ ಕುಲ ಋಷಿ ಪ್ರಯೋಗಯಾಗಕ್ರಮ ದಿಗ್ವಳಯ ಬಂಧನ, ಗ್ರಹಸಂಬಂಧಯೋಗ. ಇಂತಿವು ಮೊದಲಾದ ಕರ್ಮಂಗಳಲ್ಲಿ ವ[ತಿರ್]ಸಿ ನಿಂದ ಸ್ವಯವಾವುದು ? ಧರ್ಮಶಾಸ್ತ್ರವ ತಿಳಿದು, ಶಿಲ್ಪ ವೈದಿಕ ಜೋಯಿಸ ಇವು ಮುಂತಾದ ನಾನಾ ಭೇದಂಗಳ ಹೇಳಿ ತನ್ನ ಅಳಿವು ಉಳಿವು ಕಂಡುದಿಲ್ಲ. ಪುರಾಣವನೋದಿ ಕೆಲರ್ಗೆ ಹೇಳಿ ಪೂರ್ವಯಥ್ಞಿಕಥನ ಮುಂತಾದ ರಾಮರಾವಣಾದಿಗಳು ಚಕ್ರವರ್ತಿಗಳು ಮುಂತಾದ ಧರ್ಮಕರ್ಮಂಗಳನೋದಿ ಬೋಧಿಸಿದಲ್ಲಿಯೂ ಸಫಲವಾದುದಿಲ್ಲ. ಇಂತಿವನ್ನೆಲ್ಲವನರಿತು, ಉಭಯಸಂಧಿಯ ಉಪೇಕ್ಷಿಸಿದಲ್ಲಿ ಬಿಡುಮುಡಿ ಉಭಯದ ಭೇದವ ತಾನರಿತು ಮಲತ್ರಯಕ್ಕೆ ದೂರಸ್ಥನಾಗಿ ತ್ರಿವಿಧಾತ್ಮಕ್ಕೆ ಅಳಿವು ಉಳಿವನರಿತು ಆರಾರ ಮನ ಧರ್ಮಂಗಳಲ್ಲಿ ಭೇದವಿಲ್ಲದೆ ನುಡಿದು ಅಭೇದ್ಯಮೂರ್ತಿಯ ತೋರಿ, ವಿಭೇದವ ಬಿಡಿಸಿ ತರಣಿಯ ಕಿರಣದಂತೆ, ವಾರಿಯ ಸಾರದಂತೆ 'ಖಲ್ವಿದಂ ಬ್ರಹ್ಮವಸ್ತು'ವೆಂದಲ್ಲಿ, ಏಕಮೇವನದ್ವಿತೀಯನೆಂದಲ್ಲಿ 'ಓಂ ಭರ್ಗೋ ದೇವಸ್ಯ ಧೀಮಹಿ' ಯೆಂದಲ್ಲಿ ಆದಿ ಪರಮೇಶ್ವರನೆಂದಲ್ಲಿ, ಆದಿ ಪುರುಷೋತ್ತಮನೆಂದಲ್ಲಿ ಆರಾರ ಭೇದಕ್ಕೆ ಭೇದ. ತ್ರಿಮೂರ್ತಿಗಳ ಜಗಹಿತಾರ್ಥವಾಗಿ ಸಂಶಯಸಿದ್ಧಿಯಿಂದ ತಿಳಿವುದು. ಸರ್ವಶಾಸ್ತ್ರದಿಂದ ಈ ಗುಣವಾಚಕರಿಗೆ ದೂಷಣದಿಂದ ನುಡಿವರಿಗೆ ಹಾಕಿದ ಮುಂಡಿಗೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಲ್ಲದಿಲ್ಲಾ ಎಂಬೆನು.
--------------
ಪ್ರಸಾದಿ ಭೋಗಣ್ಣ
ಇನ್ನಷ್ಟು ... -->