ಅಥವಾ

ಒಟ್ಟು 29 ಕಡೆಗಳಲ್ಲಿ , 11 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತಮಾ ಮಹಾಲಿಂಗದಧಃಕಂಜಾಖ್ಯವಾದನಾಹತಚಕ್ರದ ರುದ್ರಸ್ವರೂಪವೆಂತೆನೆ- ಕ ಕ್ರೋಡ್ಥೀಶಂ, ಖ ಚಂಡೇಶಂ, ಗ ಪಂಚಾಂತಕಂ, ಘ ಶಿವೋತ್ತಮಂ, ಙ ಏಕರುದ್ರಂ, [ಚ (?)], ಛ ಏಕನೇತ್ರರುದ್ರಂ, ಜ ಚತುರಾನನರುದ್ರಂ, ರುsು ಅಜೇಶರುದ್ರಂ, ಞ ಶರ್ವರುದ್ರಂ, ಟ ಸೋಮೇಶರುದ್ರಂ, ಠ ಲಾಂಗುಲಿರುದ್ರಂ. ಇಂತೀ ದ್ವಾದಶರುದ್ರರೀ ಮಹಾಲಿಂಗದನಾಹತಚಕ್ರದ ದ್ವಾದಶಕೋಷ್ಠದಳ ನ್ಯಸ್ತಕಾದಿರಾಂತ ದ್ವಾದಶ ವಿಕಲಾಕ್ಷರ ವಾಚ್ಯರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಇಂದ್ರಪದ ಬ್ರಹ್ಮಪದ ವಿಷ್ಣುಪದವಿಲ್ಲದಂದು, ಸುರಾಲಯ ರುದ್ರಲೋಕ ಉತ್ಪತ್ಯವಾಗದಂದು, ಅಷ್ಟವಸುಗಳು, ದ್ವಾದಶಾದಿತ್ಯರು, ಏಕಾದಶ ರುದ್ರರುತ್ಪತ್ಯವಾಗದಂದು, ದ್ವಾದಶ ರಾಸಿ ನಕ್ಷತ್ರ ನವಗ್ರಹಂಗಳುತ್ಪತ್ಯವಾಗದಂದು, ಅಗ್ನಿಮಂಡಲ ಆದಿತ್ಯಮಂಡಲ ಉತ್ಪತ್ಯವಾಗದಂದು, ಚಂದ್ರಮಂಡಲ ತಾರಾಮಂಡಲ ಉತ್ಪತ್ಯವಾಗದಂದು, ಇವೇನೂ ಏನೂ ಎನಲಿಲ್ಲದಂದು ಚಿತ್ಕಲಾಪ್ರಣವವಾಗಿದ್ದನು ನೋಡಾ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇದಕ್ಕೆ ಮಹದೋಂಕಾರೋಪನಿಷತ್ತು : ಉಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶಮೇ ಪ್ರಣವಾಂಶಕೇ || '' ಮಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || '' ಅಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ| ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇ ಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದುಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇಂತೀ ಅಷ್ಟಾವರಣವ ಸದ್ಗುರುಮುಖದಿಂ ಚಿದಂಗಚಿದ್ಘನಲಿಂಗದ ಮಧ್ಯದಲ್ಲಿ ಸಂಬಂಧವಿಟ್ಟು, ಏಕಲಿಂಗನಿಷ್ಠಾಪರತ್ವದಿಂದ ಸ್ಥೂಲಕಂಥೆಯ ಧರಿಸಿ ಸತ್ಕಾಯಕ-ಸತ್ಕ್ರಿಯಾ-ಸಮ್ಯಜ್ಞಾನ-ಸದ್ಭಕ್ತಿ- ಸದಾಚಾರಸನ್ನಿಹಿತರೆ ನೂತನಗಣಂಗಳೆನಿಸುವರು ನೋಡ. ಅದರಿಂ ಮೇಲೆ ಚಿದಂಗ-ಚಿತ್ಪ್ರಾಣಾಂಗದ ಮಧ್ಯದಲ್ಲಿ ಚಿದ್ಘನಲಿಂಗ-ಚಿತ್ಪ್ರಾಣಲಿಂಗವ ಸದ್ಗುರುಮುಖದಿಂ ಸಂಬಂಧವಿಟ್ಟು ಆ ಲಿಂಗದ ಮಧ್ಯದಲ್ಲಿ ಸಾಕಾರ-ನಿರಾಕಾರವಾದ ಷೋಡಶಾವರಣವ ಸಂಪೂರ್ಣವಮಾಡಿಕೊಂಡು, ಸೂಕ್ಷ್ಮತನುವೆಂಬ ಕಂಥೆಯ ಧರಿಸಿ ಕಂಗಳಾಲಯದ ಜ್ಯೋತಿರ್ಲಿಂಗದ ಮಧ್ಯದಲ್ಲಿ ಮನವ ಮುಳುಗಿಸುವರೆ ಆದಿಗಣಂಗಳೆನಿಸುವರು ನೋಡ. ಅದರಿಂ ಮೇಲೆ, ಚಿದ್ಘನ ತ್ರಿವಿಧಾಂಗ-ಚಿದ್ಘನ ತ್ರಿವಿಧಲಿಂಗವ ಸದ್ಗುರುಮುಖದಿಂ ಸಂಬಂದ್ಥಿಸಿಕೊಂಡು ಆ ಲಿಂಗಾಂಗದ ಮಧ್ಯದಲ್ಲಿ ಕ್ರಿಯಾಷ್ಟಾವರಣ-ಜ್ಞಾನಾಷ್ಟಾವರಣ-ಮಹಾಜ್ಞಾನಾಷ್ಟಾವರಣವ ಸಂಬಂಧವಿಟ್ಟು, ಕಾರಣತನುವೆಂಬ ಕಂಥೆಯ ಧರಿಸಿ, ಹೃತ್ಕಮಲಮಧ್ಯದಲ್ಲಿ ಬೆಳಗುವ ಪರಂಜ್ಯೋತಿರ್ಲಿಂಗಮಧ್ಯದಲ್ಲಿ ಭಾವವ ಮುಳುಗಿಸಿ ಬಚ್ಚಬರಿಯಾನಂದದಲ್ಲಿ ಪರಿಪೂರ್ಣಾನಂದದಿಂದಾಚರಿಸುವರೆ ಅನಾದಿಗಣಂಗಳೆನಿಸುವರು ನೋಡ. ಅದರಿಂ ಮೇಲೆ, ಚಿದ್ಘನ ಅಷ್ಟಾಂಗದ ಮಧ್ಯದಲ್ಲಿ ಚಿದ್ಘನ ಅಷ್ಟಲಿಂಗಂಗಳ ಸದ್ಗುರುಮುಖದಿಂ ಧರಿಸಿ, ಆ ಲಿಂಗಾಂಗದ ಮಧ್ಯದಲ್ಲಿ ಅರುವತ್ತುನಾಲ್ಕು ತೆರದಾವರಣವ ಸಂಬಂದ್ಥಿಸಿಕೊಂಡು ತಮ್ಮ ಸರ್ವಾಂಗದಲ್ಲಿ ಅಷ್ಟವಿಧಕಮಲಂಗಳ ಕಂಡು, ಆ ಕಮಲಮಧ್ಯದಲ್ಲಿ ನೆಲಸಿರ್ಪ ಚತುರ್ವಿಧ ಬಿಂದುಲಿಂಗ, ಷಡ್ವಿಧ ಧಾತುಲಿಂಗ, ದಶವಿಧ ಕ್ಷೇತ್ರಲಿಂಗ, ದ್ವಾದಶ ವಿಕೃತಿಲಿಂಗ, ಷೋಡಶ ಕಳಾಲಿಂಗ, ದ್ವಿವಿಧ ವಿದ್ಯಾಲಿಂಗ, ಸಹಸ್ರ ಶಿವಕಳಾಲಿಂಗ, ತ್ರಿವಿಧ ವಿವೇಕಲಿಂಗ ಇಂತೀ ಅಷ್ಟವಿಧಕಮಲಂಗಳ ಮಧ್ಯದಲ್ಲಿ ನೆಲಸಿರ್ಪ ಅಷ್ಟವಿಧಲಿಂಗಗಳ ಅಷ್ಟವಿಧ ಹಸ್ತಗಳಿಂದ, ಅಷ್ಟವಿಧಾರ್ಚನೆ, ಷೋಡಶೋಪಚಾರಂಗಳ ಮಾಡಿ, ಎರಡಳಿದು ಏಕರೂಪವಾಗಿ ನಿರಾವಯ ಕಂಥೆಯ ಧರಿಸಿ, ಪರತತ್ವ ಜ್ಯೋತಿರ್ಮಯಲಿಂಗದೊಳಗೆ ಉರಿಯುಂಡ ಕರ್ಪುರದಂತೆ ಸಮರಸವಾದರು ನೋಡ. ಅವರಾರೆಂದಡೆ : ರುದ್ರಲೋಕದ ರುದ್ರಗಣಂಗಳು, ಶಿವಲೋಕದ ಶಿವಗಣಂಗಳು, ದೇವಲೋಕದ ದೇವಗಣಂಗಳು, ನಾಗಲೋಕದ ನಾಗಗಣಂಗಳು, ಶಾಂಭವಲೋಕದ ಶಾಂಭವಗಣಂಗಳು ಮುಂತಾದವರು ಬಯಲೊಳಗೆ ಮಹಾಬಯಲು ಬೆರದಂತಾದರು ನೋಡ. ಇಂತೀ ಸರ್ವಾಚಾರಸಂಪತ್ತಿನಾಚರಣೆಯನಾಚರಿಸುವರೆ ನಿರಾವಯಗಣಂಗಳೆನಿಸುವರು ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಒಂದು ಜಡಿಯ ಬಿಚ್ಚಿ ಸಹಸ್ರ ಹುರಿಗೂಡಿದ ಒಂದು ಹಗ್ಗ. ಮೂರು ಹುರಿಗೂಡಿದ ಒಂದು ಹಗ್ಗ. ಒಂದು ಹುರಿಗೂಡಿದ ಒಂದು ಹಗ್ಗ. ನಾಲ್ಕು ಹುರಿಗೂಡಿದ ಒಂದು ಹಗ್ಗ. ಆರು ಹುರಿಗೂಡಿದ ಒಂದು ಹಗ್ಗ. ಹತ್ತು ಹುರಿಗೂಡಿದ ಒಂದು ಹಗ್ಗ. ದ್ವಾದಶ ಹುರಿಗೂಡಿದ ಒಂದು ಹಗ್ಗ. ಷೋಡಶ ಹುರಿಗೂಡಿದ ಒಂದು ಹಗ್ಗ. ಎರಡು ಹುರಿಗೂಡಿದ ಒಂದು ಹಗ್ಗ. ಇಂತೀ ಹುರಿಗೂಡಿದ ಹಗ್ಗ ಮೊದಲಾದ ಅನೇಕ ಹುರಿಗೂಡಿದ ಒಂದು ಅಖಂಡ ಹಗ್ಗವಮಾಡಿ, ನಾಲ್ಕು ಹುರಿ ಹಗ್ಗದಿಂ ಬ್ರಹ್ಮನ ಕಟ್ಟಿ, ಷಡುಹುರಿ ಹಗ್ಗದಿಂ ವಿಷ್ಣುವಿನ ಕಟ್ಟಿ, ದಶಹುರಿ ಹಗ್ಗದಿಂ ರುದ್ರನ ಕಟ್ಟಿ, ದ್ವಾದಶಹುರಿ ಹಗ್ಗದಿಂ ಈಶ್ವರನ ಕಟ್ಟಿ, ಷೋಡಶಹುರಿ ಹಗ್ಗದಿಂ ಸದಾಶಿವನ ಕಟ್ಟಿ, ದ್ವಿಹುರಿ ಹಗ್ಗದಿಂ ಶಿವನ ಕಟ್ಟಿ, ಸಹಸ್ರ ಹುರಿಹಗ್ಗದಿಂ ಮತ್ರ್ಯದರಸನ ಕಟ್ಟಿ, ಮೂರು ಹುರಿಹಗ್ಗದಿಂ ಸ್ವರ್ಗಲೋಕದರಸನ ಕಟ್ಟಿ, ಒಂದು ಹುರಿಹಗ್ಗದಿಂ ಪಾತಾಳಲೋಕದರಸನ ಕಟ್ಟಿ, ಅನಂತ ಹುರಿಗೂಡಿದ ಅಖಂಡ ಹಗ್ಗದಿಂ ಚತುರ್ದಶಭುವನಯುಕ್ತವಾದ ಬ್ರಹ್ಮಾಂಡವ ಕಟ್ಟಿ, ಕಾಯಕವ ಮಾಡುತಿರ್ದನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ. ಈ ಭೇದವ ಬಲ್ಲವರು ಲಿಂಗಸಂಬಂದ್ಥಿಗಳು ಈ ಭೇದವ ತಿಳಿಯದವರು ಅಂಗಸಂಬಂದ್ಥಿಗಳು.
--------------
ಕಾಡಸಿದ್ಧೇಶ್ವರ
ಇಂತಪ್ಪ ತ್ರಿವಿಧಾಚರಣೆಯಲ್ಲಿ ಬ್ಥಿನ್ನಜ್ಞಾನಿಗಳಾಗಿ ಬ್ಥಿನ್ನ ಕ್ರಿಯಗಳಾಚರಿಸಿ, ಬ್ಥಿನ್ನಭಾವ ಮುಂದುಗೊಂಡು ವ್ರತವನಾಚರಿಸುವ ಅಜ್ಞಾನಿಗಳಾದ ಜೀವಾತ್ಮರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ ? ಮತ್ತೆಂತೆಂದೊಡೆ : ಸುಜ್ಞಾನೋದಯವಾಗಿ ಸಕಲಪ್ರಪಂಚ ನಿವೃತ್ತಿಯ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಮರಸವಾಗಿ ಸರ್ವಾಂಗಲಿಂಗಮಯ ತಾನೆಂದು ತಿಳಿದುನೋಡಿ, ಅಂತಪ್ಪ ಘನಮಹಾಲಿಂಗ ಇಷ್ಟಬ್ರಹ್ಮವನು ತನುವಿನಲ್ಲಿ ಸ್ವಾಯತವ ಮಾಡಿ, ಆ ತನುಪ್ರಕೃತಿಯನಳಿದು ಆ ಇಷ್ಟಲಿಂಗದ ಸತ್ಕ್ರಿಯವನಾಚರಿಸುವುದೇ ದಿನಚರಿ ವಾರ ಸೋಮವಾರವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮದ ಚಿತ್ಕಲಾಸ್ವರೂಪವಾದ ನಿಷ್ಕಲಪ್ರಾಣಲಿಂಗವನು ಮನದಲ್ಲಿ ಸ್ವಾಯತವಮಾಡಿ, ಆ ಮನೋಪ್ರಕೃತಿಯನಳಿದು ಆ ನಿಷ್ಕಲ ಪ್ರಾಣಲಿಂಗದ ಸುಜ್ಞಾನಕ್ರಿಯಗಳನಾಚರಿಸುವುದೇ ದ್ವಾದಶಮಾಸದೊಳಗೆ ಶ್ರೇಷ್ಠವಾದ ಶ್ರಾವಣಮಾಸದವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮಾನಂದಸ್ವರೂಪವಾದ ನಿರಂಜನಭಾವಲಿಂಗವನು - ಧನವೆಂದಡೆ ಆತ್ಮ. ಅಂತಪ್ಪ ಆತ್ಮನಲ್ಲಿ ಸ್ವಾಯತವ ಮಾಡಿ, ಆ ಆತ್ಮಪ್ರಕೃತಿಯನಳಿದು, ಆ ನಿರಂಜನ ಭಾವಲಿಂಗದ ಮಹಾಜ್ಞಾನಾಚರಣೆಯನಾಚರಿಸುವುದೇ ದ್ವಾದಶಮಾಸ, ದ್ವಾದಶ ಚತುರ್ದಶಿ, ದ್ವಾದಶ ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ ಶಿವರಾತ್ರಿಅಮವಾಸೆಯ ವ್ರತವೆಂಬೆ. ಇಂತೀ ತ್ರಿವಿಧಲಿಂಗ ಮೊದಲಾದ ಚಿದ್ಘನಲಿಂಗವು ತನ್ನ ಸರ್ವಾಂಗದಲ್ಲಿ ಸ್ವಾಯತವುಂಟೆಂದು ಶ್ರೀಗುರುಮುಖದಿಂ ತಿಳಿಯದೆ ಲಿಂಗವಿರಹಿತರಾಗಿ, ಬಾಹ್ಯದ ಕ್ರಿಯೆಗಳ ಪಿಡಿದು ವ್ರತವನಾಚರಿಸುವುದೆಲ್ಲ ಮಾಯಾವಿಲಾಸ ಭವದ ಬಟ್ಟೆ ಎಂದು ತಿಳಿಯದೆ ಭವಭಾರಿಗಳಾಗಿ, ಭವಕ್ಕೆ ಭಾಜನವಾಗಿ ಕೆಟ್ಟು ಮನು ಮುನಿ ದೇವ ದಾನವರು ಮಾನವರು ಮೊದಲಾದ ಸಕಲ ಲೋಕಾದಿಲೋಕಂಗಳು ತಮ್ಮ ನಿಲುವು ತಾವಾರೆಂಬುದನ್ನರಿಯದೆ ಇದಿರಿಟ್ಟು ಕೆಟ್ಟುಪೋದರು ನೋಡೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆಧಾರಾದಿ ಷಡುಚಕ್ರಂಗಳು ಇವಕ್ಕೆ ವಿವರ: ಆಧಾರಸ್ಥಾನದಲ್ಲಿ ಚತುರ್ದಳ ಪದ್ಮವಿಹುದು ಅದು ಸುವರ್ಣವರ್ಣ ಅದಕ್ಕೆ ಅಕ್ಷರ ವಶಷಸ ಎಂಬ ನಾಲ್ಕಕ್ಷರ, ಅಧಿದೈವ ಬ್ರಹ್ಮನು. ಸ್ವಾಧಿಷ್ಠಾನ ಸ್ಥಾನದಲ್ಲಿ ಷಡ್ದಳ ಪದ್ಮವಿಹುದು, ಅದು ಕಪ್ಪುವರ್ಣ ಅದಕ್ಕೆ ಅಕ್ಷರ ಬಭಮಯರಲ ಎಂಬ ಷಡಕ್ಷರ, ವಿಷ್ಣು ಅಧಿದೈವ. ಮಣಿಪೂರದ ಸ್ಥಾನದಲ್ಲಿ ದಶದಳ ಪದ್ಮವಿಹುದು, ಅದು ಕೆಂಪುವರ್ಣ ಅದಕ್ಕೆ ಅಕ್ಷರ ಡಢಣ ತಥದಧನ ಪಫ ಎಂಬ ದಶ ಅಕ್ಷರ, ರುದ್ರನಧಿದೈವ. ಅನಾಹತಸ್ಥಾನದಲ್ಲಿ ದ್ವಾದಶದಳದ ಪದ್ಮವಿಹುದು, ಅದು ನೀಲವರ್ಣ, ಅದಕ್ಕೆ ಅಕ್ಷರ ಕಖಗಘಙ ಚ ಛ ಜಝಞ ಠ ಎಂಬ ದ್ವಾದಶ ಅಕ್ಷರ ಅದಕ್ಕೆ ಮಹೇಶ್ವರ ಅಧಿದೈವ. ವಿಶುದ್ಧಿಸ್ಥಾನದಲ್ಲಿ ಷೋಡಶದಳ ಪದ್ಮವಿಹುದು, ಅದು ಸ್ಪಟಿಕವರ್ಣ ಅದಕ್ಕೆ ಅಕ್ಷರ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಷೋಡಶಾಕ್ಷರ, ಅದಕ್ಕೆ ಸದಾಶಿವ ಅಧಿದೈವ. ಆಜ್ಞಾಸ್ಥಾನದಲ್ಲಿ ದ್ವಿದಳದ ಪದ್ಮವಿಹುದು. ಅದು ಮಾಣಿಕ್ಯವರ್ಣ, ಅದಕ್ಕೆ ಅಕ್ಷರ `ಹಕ್ಷ ಎಂಬ ದ್ವಯಾಕ್ಷರ. ಅದಕ್ಕೆ ಮಹಾಶ್ರೀಗುರು ಅಧಿದೈವ. ಅಲ್ಲಿಂದ ಮೇಲೆ ಬ್ರಹ್ಮರಂಧ್ರಸ್ಥಾನದಲ್ಲಿ ಸಹಸ್ರದಳ ಪದ್ಮವಿಹುದು. ಅದು ಹೇಮವರ್ಣ ಅಲ್ಲಿಗೆ ಓಂಕಾರವೆಂಬ ಅಕ್ಷರ ಪರಂಜ್ಯೋತಿ ಪರಬ್ರಹ್ಮ ಅದು ಅನಂತಕೋಟಿ ಸೂರ್ಯಪ್ರಕಾಶವಾಗಿ ಬೆಳಗುತ್ತಿಹುದು. ಅಲ್ಲಿಗೆ ಅಧಿದೈವ ಶ್ರೀಗುರು ಮೂರ್ತಿಯೇ ಕರ್ತನು. ಇಂತೀ ಷಟ್ ಚಕ್ರಂಗಳಂ ತಿಳಿದು ಪರತತ್ವದಲ್ಲಿ ಇರಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಅಯ್ಯ, ನಿಃಶೂನ್ಯಾಕೃತಿ, ಕ್ಷಕಾರ ಪ್ರಣಮ, ದಿವ್ಯನಾದ, ಶಿಖಾಚಕ್ರ, ಮಹಾಜ್ಯೋತಿವರ್ಣ, ನಿರಾಲಂಬಸ್ಥಲ, ಚಿನುಮಯ ತನು, ನಿರಾಳ ಹಸ್ತ, ಶೂನ್ಯಲಿಂಗ, ಉನ್ಮನಿಮುಖ, ನಿರಹಂಕಾರ ಭಕ್ತಿ, ಪರಿಪೂರ್ಣಪದಾರ್ಥ, ಪರಿಪೂರ್ಣಪ್ರಸಾದ, ಪರಶಿವ ಪೂಜಾರಿ, ಪರಶಿವನದ್ಥಿದೇವತೆ, ಅವಿರಳ ಸಾದಾಖ್ಯ, ಆಗಮವೆಂಬ ಲಕ್ಷಣ, ನಿರ್ಮಾಯವೆಂಬ ಸಂಜ್ಞೆ, ದಿವ್ಯನಾದ, ಘೋಷದಿಕ್ಕು, ಮನೋರ್ಲಯ ವೇದ, ಚಿಚ್ಚಂದ್ರನೆ ಅಂಗ, ದಿವ್ಯಾತ್ಮ, ನಿಭ್ರಾಂತಿ ಶಕ್ತಿ ಅನಂತಕಲೆ ಇಂತು ಇಪ್ಪತ್ತುನಾಲ್ಕು ಸಂಕೀಲಂಗಳನೊಳಕೊಂಡು ಎನ್ನ ಶಿಖಾಚಕ್ರವೆಂಬ ಹೇಮಾದ್ರಿಪರ್ವತಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಶಿವಮಂತ್ರ ಶಿಕ್ಷಾಕರ್ತೃಸ್ವರೂಪವಾದ ಶೂನ್ಯಲಿಂಗವೆ ಹಿರಣ್ಯೇಶ್ವರಲಿಂಗವೆಂದು ಕರಣತ್ರಯವ ಮಡಿಮಾಡಿ, ಅನುಪಮವೆಂಬ ಜಲದಿಂ ಮಜ್ಜನಕ್ಕೆರದು, ಚಂದ್ರ ನಿವೃತ್ತಿಯಾದ ಗಂಧವ ಧರಿಸಿ, ವಿರಳ ಅವಿರಳವಾದಕ್ಷತೆಯನಿಟ್ಟು, ಅಲ್ಲಿಹ ತ್ರಿದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಮಹಾಜ್ಯೋತಿವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ನಿಃಸಂಸಾರಾವಸ್ಥೆಯೆಂಬ ನವೀನ ವಸ್ತ್ರವ ಹೊದ್ದಿಸಿ, ಸದಾನಂದವೆಂಬಾಭರಣವ ತೊಡಿಸಿ, ಪರಿಪೂರ್ಣವೆಂಬ ನೈವೇದ್ಯವನರ್ಪಿಸಿ, ನಿರಹಂಕಾರವೆಂಬ ತಾಂಬೂಲವನಿತ್ತು, ಇಂತು ಶೂನ್ಯಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಶತಕೋಟಿ ಸೂರ್ಯನ ಪ್ರಭೆಯಂತೆ ಬೆಳಗುವ ಶೂನ್ಯಲಿಂಗವನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು, ಆ ಶೂನ್ಯಲಿಂಗವ ಪೂಜೆಯ ಸಮಾಪ್ತವ ಮಾಡಿ, ಜ್ಞಾನ ಜಪವೆಂಬ ದ್ವಾದಶ ಪ್ರಣಮ ಮಂತ್ರಗಳಿಂದೆ ನಮಸ್ಕರಿಸಿ, ಆ ಶೂನ್ಯಲಿಂಗದ ತಾನೆಂದರಿದು, ಕೂಡಿ ಎರಡಳಿದು ನಿಸ್ಸಂಸಾರಿಯಾಗಿ ಆಚರಿಸಬಲ್ಲಾತನೆ ನಿರಹಂಕಾರ ಭಕ್ತಿಯನುಳ್ಳ ನಿರಾತಂಕ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹಜ್ಜೆ ಇಲ್ಲದ ಪುರುಷ, ಆ ಸಜ್ಜನಸ್ತ್ರೀ, ಷಡುಪಂಚಮರುದ್ರ, ಕಾಳಾಂಧರ, ವಾರಿದ್ಥಿ, ಆತ್ಮಾನಾತ್ಮ ಇಂತಿವೇನೂ ಇಲ್ಲದಂದು, ಅತ್ತತ್ತಲಿರ್ದ ಬೆಳಗಿನ ಚಿನ್ಮೂರ್ತಿಯಲ್ಲಿ ಚಿದ್ವಿಭೂತಿ ಇದ್ದಿತ್ತು. ಆ ಚಿದ್ವಿಭೂತಿ ಚಿದ್ಘನಾತ್ಮಕ ರತ್ನವಾಯಿತ್ತು. ಆ ಚಿದ್ಘನಾತ್ಮಕ ರತ್ನವೆ ಚಿಚ್ಛಕ್ತಿಯಾಯಿತ್ತು. ಆ ಚಿಚ್ಛಕ್ತಿ ಸಕಲಚೈತನ್ಯಾತ್ಮಕ ಶರಣನಾಯಿತ್ತು. ಆ ಶರಣನೊಳಗೊಂದು ಕೋಳಿ ದ್ವಾದಶವರ್ಣದ ಸುನಾದವಾಗಿ ಕೂಗಿತ್ತು. ಆ ಸುನಾದಂಗಳ ಝೇಂಕಾರವು ಚತುರ್ದಶ ಸಾವಿರಕ್ಷರ ರೂಪಕವಾಗಿ, ಆ ಶರಣನ ಸಪ್ತಚಕ್ರದ ಕಮಲದೊಳಗೆ ಪ್ರವೇಷ್ಟಿಸಿ, ಗೋಪ್ಯವಾಗಿದವು. ಆ ಶರಣನಲ್ಲಿ ಷಡುಶಿವಮೂರ್ತಿಗಳುದಯಿಸಿದರು. ಆ ಮೂರ್ತಿಗಳಲ್ಲಿ ಷಡುಸ್ಥಲ ಸತ್ಕ್ರಿಯೆಗಳು ತೋರಿದವು. ಅವರೆಲ್ಲರಲ್ಲಿ ಅನಂತಕೋಟಿ ಮೂರ್ತಿಗಳ ಮೇಲೆ, ತೊಂಬತ್ತಾರುಸಾವಿರ ಶಿವಮೂರ್ತಿಗಳುದಯಿಸಿದರು. ಆ ಶರಣನ ನಾಡಿಗಳೊಳಗೆ ಚಿದ್ಮಣಿ, ಚಿದ್ಭಸ್ಮ, ಚಿಲ್ಲಿಂಗ ಇಂತಿವೆಲ್ಲ ತೋರಿದವು. ಇವನೆಲ್ಲವ, ಶಿವಗಣಂಗಳಲ್ಲಿ ಆ ಶರಣನು, ಉಪದೇಶಮಾರ್ಗದಿಂ ಧರಿಸಿಕೊಂಡು, ನೂರೊಂದರ ಮೇಲೆ ನಿಂದು, ದ್ವಾದಶ ಸಪ್ತವಿಂಶತಿ ಛತ್ತೀಸದ್ವಯವೆ ಎಪ್ಪತ್ತು ಶತಾಷ್ಟವೆಂಬ ಪಂಚಜಪಮಾಲೆಗಳಿಗೆ ಹನ್ನೆರಡು ಸಿಡಿಲ ಸುನಾದವನೊಡದು, ತ್ರಿ ಆರುವೇಳೆ ಕೂಡಿ, ನೂರೆಂಟಕ್ಕೆ ಸಂದಾನಿಸಿ ಜಪಿಸುತ್ತಿಪ್ಪ ಅನಂತ ಪ್ರಮಥರಂ, ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿ ಕಂಡು ಸುಖಿಯಾದೆನು.
--------------
ಸಂಗಮೇಶ್ವರದ ಅಪ್ಪಣ್ಣ
ಇಂತಪ್ಪ ಪ್ರಣಮಮಂತ್ರಸಂಬಂಧವನು ಸ್ವಾನುಭಾವಗುರುಮೂರ್ತಿಗಳಿಂದ ವಿಚಾರಿಸಿಕೊಳ್ಳಬೇಕಲ್ಲದೆ, ಭಿನ್ನ ಜ್ಞಾನಗುರುಮೂರ್ತಿಗಳಿಂದ ವಿಚಾರಿಸಿಕೊಳ್ಳಲಾಗದು. ಅದೇನು ಕಾರಣವೆಂದಡೆ: ದ್ವಾದಶ ರುದ್ರಾಕ್ಷಿಮಾಲೆಯಂ ಮಾಡಿ, ಆ ದ್ವಾದಶ ರುದ್ರಾಕ್ಷಿಗೆ ದ್ವಾದಶಪ್ರಣಮವ ಸಂಬಂಧಿಸಿ, ಶಿಖಾರುದ್ರಾಕ್ಷಿಗೆ ನಿರಂಜನ ಅವಾಚ್ಯಪ್ರಣವವೆಂಬ ಹಕಾರ ಪ್ರಣಮವ ಸಂಬಂಧಿಸಿ, ಉದಯ ಮಧ್ಯಾಹ್ನ ಸಾಯಂಕಾಲವೆಂಬ ತ್ರಿಕಾಲದಲ್ಲಿ ಸ್ನಾನವ ಮಾಡಿ, ಏಕಾಂತಸ್ಥಾನದಲ್ಲಿ ಉತ್ತರವಾಗಲಿ ಪೂರ್ವವಾಗಲಿ ಉಭಯದೊಳಗೆ ಆವುದಾನೊಂದು ದಿಕ್ಕಿಗೆ ಮುಖವಾಗಿ ಶುಭ್ರವಸ್ತ್ರವಾಗಲಿ, ಶುಭ್ರರೋಮಶಾಖೆಯಾಗಲಿ, ಶುಭ್ರ ರೋಮಕಂಬಳಿಯಾಗಲಿ, ತೃಣದಾಸನವಾಗಲಿ, ನಾರಾಸನವಾಗಲಿ, ಇಂತೀ ಪಂಚಾಸನದೊಳಗೆ ಆವುದಾನೊಂದು ಆಸನ ಬಲಿದು, ಮೂರ್ತವ ಮಾಡಿ, ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ, ಆ ರುದ್ರಾಕ್ಷಿಮಾಲೆಗೆ ವಿಭೂತಿ ಅಗ್ಗಣಿ ಪತ್ರಿಯ ಧರಿಸಿ, ತರ್ಜನ್ಯವಾಗಲಿ ಅನಾಮಿಕ ಬೆರಳಾಗಲಿ ಉಭಯದೊಳಗೆ ದಾವುದಾದರೇನು ಒಂದು ಬೆರಳಿಗೆ ರುದ್ರಾಕ್ಷಿಯಂ ಧರಿಸಿ ಅದರೊಳಗೆ ದೀಕ್ಷಾಗುರು ಅಧೋಮುಖವಾಗಿ ರುದ್ರಾಕ್ಷಿಮಾಲೆಯ ಜಪಿಸೆಂದು ಪೇಳ್ವನು. ಮತ್ತಂ, ಕುರುಡರೊಳಗೆ ಮೆಳ್ಳನು ಚಲುವನೆಂಬ ಹಾಗೆ ಅಜ್ಞಾನಿಗಳೊಳಗಣ ಜ್ಞಾನಿಗಳು ಊಧ್ರ್ವಮುಖವಾಗಿ ರುದ್ರಾಕ್ಷಿ ಜಪಿಸೆಂದು ಪೇಳುವರು. ಇಂತಪ್ಪ ಸಂಶಯದಲ್ಲಿ ಮುಳುಗಿ ಮೂರುಲೋಕವು ಭವಭವದಲ್ಲಿ ಎಡೆಯಾಡುವುದು ಕಂಡು, ಶಿವಜ್ಞಾನ ಶರಣನು ವಿಸರ್ಜಿಸಿ ಸ್ವಾನುಭಾವಸೂತ್ರದಿಂ, ದ್ವಾದಶಪ್ರಣಮವ ಪೋಣಿಸಿ, ಅಧೋ ಊಧ್ರ್ವವೆಂಬ ವಿಚಾರವಿಲ್ಲದೆ ದಿವಾರಾತ್ರಿಯಲ್ಲಿ ನಿಮಿಷ ನಿಮಿಷವನಗಲದೆ ಮರಿಯದೆ ಜಪಿಸಿ ಸದ್ಯೋನ್ಮುಕ್ತನಾಗಿ ಶಿವಸುಖದಲ್ಲಿ ಸುಖಿಯಾಗಿರ್ದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯ, ಕೇಳ, ಪ್ರಮಥಗಣಂಗಳೆಲ್ಲ ಷಡ್ವಿಧಭಕ್ತಿಯೆಂಬ ಪರಮಾಮೃತವ ಸೇವಿಸಿ, ಪ್ರವೃತ್ತಿಮಾರ್ಗದಲ್ಲಿ ಚರಿಸುವ ಆರು ವೈರಿಗಳ ಸಂಗವ ತ್ಯಜಿಸಿ, ನಿವೃತ್ತಿ ಮಾರ್ಗದಲ್ಲಿ ಚರಿಸುವ ಷಡ್ಗುಣಗಳ ಸಂಗವ ಸಾಧಿಸಿ, ಜಂಗಮದ ಆಚಾರ ವಿಚಾರವ ತಿಳಿದು, ಷಟ್‍ಸ್ಥಲಮಾರ್ಗದಲ್ಲಿ ನಿಂದು, ಭಕ್ತಿ-ಜ್ಞಾನ-ವೈರಾಗ್ಯದಲ್ಲಾಚರಿಸಿದ ವಿಚಾರವೆಂತೆಂದಡೆ : ಅನಾದಿನಿರಂಜನ-ಅಕಾಯಚರಿತ್ರ-ನಿರಾಲಂಬ-ಪರಶಿವಮೂರ್ತಿ ಸಾಕ್ಷಾತ್ ಶ್ರೀಗುರುದೇವನಿಂದ ಏಕವಿಂಶತಿ ವೇಧಾ-ಮಂತ್ರ-ಕ್ರಿಯಾದೀಕ್ಷೆಯ ಪಡದು, ತನ್ನ ತಾನರ್ಚಿಸಿ, ಆ ಶ್ರೀಗುರುದೇವನ ಲಿಂಗಜಂಗಮಲೀಲೆ ಹೇಗುಂಟೋ ಹಾಂಗೆ, ಭಕ್ತಿಯ ಮಾಡಿ, ಶ್ರೀಗುರು-ಲಿಂಗ-ಜಂಗಮದಂತಃಕರಣವೆಂಬ ಪರಮಾತೃತಸುಧೆಯೊಳಗೆ ಲೋಲುಪ್ತರಾಗಿ, ನಿರಾವಯ ಸಮಾಧಿಯಲ್ಲಿ ಬಯಲಾದರು ನೋಡ. ಅದರ ವಿಚಾರವೆಂತೆಂದಡೆ : ಭಕ್ತಿಸ್ಥಲಕ್ಕೆ ಕಾರಣವಾದ ಬಸವಣ್ಣನೆ ಲಿಂಗಲಾಂಛನಗಳ ನೋಡಿ, ತನು-ಮನ-ಧನವನೊಪ್ಪಿಸಿ ಶರಣೆಂದರಯ್ಯ ! ಮಹೇಶಸ್ಥಲಕ್ಕೆ ಕಾರಣವಾದ ಮಡಿವಾಳದೇಶಿಕೇಂದ್ರನೆ ಲಿಂಗಲಾಂಛನ-ವಿಭೂತಿ-ರುದ್ರಾಕ್ಷೆ-ಪಂಚಾಚಾರವ ನೋಡಿ ತನುಮನಧನವನೊಪ್ಪಿಸಿ ಶರಣೆಂದರಯ್ಯ. ಪ್ರಸಾದಿಸ್ಥಲಕ್ಕೆ ಕಾರಣವಾದ ಮರುಳಶಂಕರದೇವನೆ ಲಿಂಗಲಾಂಛನ-ವಿಭೂತಿ-ರುದ್ರಾಕ್ಷೆ-ಮಂತ್ರ ಪಂಚಾಚಾರದಾಚರಣೆ, ಸಪ್ತಾಚಾರದ ಸಂಬಂಧದ ನಡೆನುಡಿಯ ವಿಚಾರಿಸಿ, ತನುಮನಧನವನೊಪ್ಪಿಸಿ ಶರಣೆಂದರಯ್ಯ. ಪ್ರಾಣಲಿಂಗಿಸ್ಥಲಕ್ಕೆ ಕಾರಣವಾದ ಸಿದ್ಧರಾಮೇಶ್ವರನೆ ಲಿಂಗಲಾಂಛನ, ಶ್ರೀವಿಭೂತಿ, ರುದ್ರಾಕ್ಷೆ, ಪಂಚಮಂತ್ರ, ದ್ವಾದಶಾಚಾರ ಮೊದಲಾದ ಸರ್ವಾಚಾರ ಸಂಪತ್ತಿನಾಚರಣೆ ಸರ್ವಾಂಗದಲ್ಲಿ ನೂನು ಕೂನುಗಳಿಲ್ಲದೆ, ನಡೆನುಡಿಗಳು ಹೊದ್ದಲ್ಲದೆ, ನಿರಾಭಾರಿ ವೀರಶೈವವ ನೋಡಿ ಇದೆ ಪರವಸ್ತುವೆಂದು ತನುಮನಧನವನೊಪ್ಪಿಸಿ ಶರಣೆಂದರಯ್ಯ. ಶರಣಸ್ಥಲಕ್ಕೆ ಕಾರಣವಾದ ಚೆನ್ನಬಸವೇಶ್ವರನೆ ಇಂತು ಚತುರ್ವಿಧಮೂರ್ತಿಗಳು ವಿಚಾರಿಸಿದ ಆಚರಣೆಯ ನೋಡಿ, ಗುರು-ಸೂತ್ರ-ಗೋತ್ರ-ಸಂಪ್ರದ ದೀಕ್ಷೆಯ ವಿಚಾರಿಸಿ, ಲಿಂಗಾಂಗ ಷಟ್ಸ್ಥಾನಂಗಳ ನೋಡಿ, ಗುರುಮಾರ್ಗಾಚಾರ ನಡೆನುಡಿಗಳ ವಿಚಾರಿಸಿ, ಸ್ವಾನುಭಾವ ಸಕೀಲದ ಗೊತ್ತ ತಿಳಿದು, ಲಾಂಚನವ ನೋಡಿ ಮನ್ನಿಸಿ, ತನುಮನಧನವನೊಪ್ಪಿಸಿ ಶರಣೆಂದರಯ್ಯ. ಐಕ್ಯಸ್ಥಲಕ್ಕೆ ಕಾರಣವಾದ ಅಜಗಣ್ಣಗಳೆ ಬಸವ, ಮಡಿವಾಳ, ಮರುಳುಶಂಕರ, ಸಿದ್ಧರಾಮ, ಚೆನ್ನಬಸವ ಮೊದಲಾದ ಮಹಾಗಣಂಗಳು ಅರ್ತಿ-ಉತ್ಸಾಹದಿಂದ ಭಕ್ತಿಯ ಮಾಡಿದ ಜಂಗಮವೆ ನನಗೆ ಮಹಾಪ್ರಸಾದವೆಂದು ಅವರಡಿಗಳಿಗೆ ವಂದಿಸಿ, ತನು-ಮನ-ಧನವನೊಪ್ಪಿಸಿ ಶರಣೆಂದರಯ್ಯ. ನಿರವಯಸ್ಥಲಕ್ಕೆ ಕಾರಣವಾದ ಪ್ರಭುದೇವನೆ ಆವ ಮತವೆಂದು ನೋಡದೆ, ಬಾಲಬ್ರಹ್ಮಿ-ಬಳಸಿಬ್ರಹ್ಮಿಯೆಂಬ ಸಂಸಾರ ಸಂಕಲ್ಪಸೂತಕವನೆಣಿಸದೆ, ಸರ್ವಾಂಗದವಯವಂಗಳ ನೋಡಿ, ಸರ್ವಸಂಗಪರಿತ್ಯಾಗದಿಂದ, ದ್ವಾದಶ ಮಲಂಗಳ ತ್ಯಜಿಸಿ, ಭಕ್ತಿ-ಜ್ಞಾನ-ವೈರಾಗ್ಯದಿಂದ ಸಮಸ್ತವಾದ ಭೋಗಯೋಗಾದಿಗಳಿಗೆ ಹೇವರಿಸಿ, ನಿರಾಸಕತ್ವದಿಂದ ಶಿವಧೋ ಎಂದು ಗುರೂಪಾವಸ್ತೆಯಂ ಮಾಡುವ ಜ್ಞಾನಕಲಾತ್ಮಂಗೆ ಜಂಗಮಾಕೃತಿಯಿಂದ ಪ್ರತ್ಯಕ್ಷವಾಗಿ, ಆ ಜ್ಞಾನಕಲಾತ್ಮನ ಉಪಾವಸ್ತೆಯನೊಂದಿಸಿ, ಆತಂಗೆ ಅಂಜಬೇಡವೆಂದು ಅಭಯಹಸ್ತವನಿತ್ತು. ರೇವಣಸಿದ್ಧೇಶ್ವರ ಮೊದಲಾದ ಗಣಾಚಾರ್ಯರ ಮಧ್ಯದಲ್ಲಿ ಈ ಜ್ಞಾನಕಲಾತ್ಮನನೊಪ್ಪಿಸಿ, ಅವರಿಂದ ನಿರಾಕಾರವಾದ ಪ್ರಾಣಲಿಂಗವ ಬಷ್ಕರಿಸಿ, ಪಂಚಕಲಶಸೂತ್ರದಿಂದ ಪ್ರಮಥಗಣ ಸಾಕ್ಷಿಯಾಗಿ ಆತನ ಷಡ್ವಿಧಸ್ಥಾನದಲ್ಲಿ ಸ್ಥಿರಗೊಳಸಿ, ಅಂತರಂಗ ಬಹಿರಂಗದಲ್ಲಿ ಅಷ್ಟವಿಧಾರ್ಚನೆ, ಷೋಡಶೋಪಚಾರ ಭಕ್ತಿಗಳನರುಪಿ, ಆ ಪರಶಿವಲಿಂಗದಲ್ಲಿ ನೈಷೆ*ಯ ನೋಡಿ, ಪ್ರಮಥಗಣರಾಧ್ಯ ಭಕ್ತ ಮಹೇಶ್ವರರೊಡಗೂಡಿ, ಏಕವಿಂಶತಿ ದೀಕ್ಷೆ ಮೊದಲಾಗಿ, ಪ್ರಮಥರು ನುಡಿದ ಎರಡೆಂಬತ್ತು ಕೋಟಿ ವಚನಾನುಭಾವದ ಉದಾಹರಣೆಯ ಬೋಧಿಸಿ, ಸ್ವಸ್ವರೂಪು ನಿಲುಕಡೆಯ ಬೋಧಿಸಿ, ನಾನು ನೀನು ಎಂಬ ಭಿನ್ನಭಾವವನಳಿದು, ಏಕಸ್ವರೂಪವೆಂಬ ಅಭಿನ್ನಲೀಲೆಯಿಂದ ಪಾದೋದಕ ಪ್ರಸಾದದಲ್ಲಿ ಏಕಭಾಜನವ ಮಾಡಿದಮೇಲೆ, ಶ್ರೀಗುರು ಬಸವ ಮೊದಲಾದ ಸಕಲಪ್ರಮಥಗಣಾರಾಧ್ಯರ ಕರದು, ಇಲ್ಲೊಂದು ನಿಜವಸ್ತು ಉಂಟೆಂದು ಹೇಳಿ, ತಾವು ಮೊದಲು ಶರಣು ಹೊಕ್ಕು, ತಮ್ಮ ಹಿಂದೆ ಶರಣಗಣಂಗಳೆಲ್ಲ ಶರಣುಹೊಕ್ಕು. ಅಡಿ ಮುಡಿಯಿಂದ ವಸ್ತುವ ಬೆಸಗೊಂಡು ಆ ಲಿಂಗಜಂಗಮದೇವರೂಪಡಗೂಡಿ ಬಯಲೊಳಗೆ ಮಹಾಬಯಲಾದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಯ್ಯಾ, ಶ್ರೀಗುರು ಕರುಣಿಸಿಕೊಟ್ಟ ಲಿಂಗ ಜಂಗಮವಲ್ಲದೆ, ಅನ್ಯದೈವಂಗಳ ತ್ರೈಕರಣದಲ್ಲಿ ಅರ್ಚಿಸದಿರ್ಪುದೆ ಲಿಂಗಾಚಾರವೆಂಬೆನಯ್ಯಾ. ಭಕ್ತನಾದಡೆ ಸತ್ಯಶುದ್ಧ ಕಾಯಕ [ವ ಮಾಡಿ], ಮಹೇಶನಾದಡೆ ಸತ್ಯಶುದ್ಧ ಭಿಕ್ಷವ ಬೇಡಿ ಸಮಸ್ತ ಪ್ರಾಣಿಗಳಲ್ಲಿ ಪಾತ್ರಾಪಾತ್ರವ ತಿಳಿದು ಹಸಿವು ತೃಷೆ ಶೀತಕ್ಕೆ ಪರಹಿತಾರ್ಥಿಯಾಗಿರ್ಪುದೆ ಸದಾಚಾರವೆಂಬೆನಯ್ಯಾ. ಗುರುಮಾರ್ಗಾಚಾರದಲ್ಲಿ ನಿಂದ ಶಿವಲಾಂಛನಧಾರಿಗಳೆಲ್ಲಾ ಪರಶಿವಲಿಂಗವೆಂದು ಭಾವಿಸಿ, ಅರ್ಥ ಪ್ರಾಣಾಭಿಮಾನವನರ್ಪಿಸುವುದೆ ಶಿವಾಚಾರವೆಂಬೆನಯ್ಯಾ. ಅಷ್ಟಾವರಂಣಗಳ ಮೇಲೆ ಅನ್ಯರಿಂದ ಕುಂದು ನಿಂದೆಗಳು ಬಂದು ತಟ್ಟಿದಲ್ಲಿ ಗಣಸಮೂಹವನೊಡಗೂಡಿ ಆ ಸ್ಥಲವ ತ್ಯಜಿಸುವುದೆ ಗಣಾಚಾರವೆಂಬೆನಯ್ಯಾ. ಜಾತ್ಯಾಶ್ರಮ ಕುಲಗೋತ್ರ ನಾಮರೂಪು ಕ್ರಿಯಾರಹಿತನಾಗಿ, ಗುರೂಪಾವಸ್ಥೆಯಿಂದ ಗುರುವ ಪ್ರತ್ಯಕ್ಷವ ಮಾಡಿ, ಆ ಗುರುವಿನಿಂದ ಚಿದ್ಘನ ಮಹಾಲಿಂಗವ ಪಡೆದು, ಆ ಲಿಂಗಸಹಿತವಾಗಿ ಭಕ್ತಿಜ್ಞಾನವೈರಾಗ್ಯ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಮಂತ್ರ ಮೊದಲಾದ ಷಟ್‍ಸ್ಥಲಮಾರ್ಗದಲ್ಲಿ ನಿಂದ ಭಕ್ತಗಣಂಗಳಲ್ಲಿ ಪಂಚಸೂತಕಂಗಳ ಕಲ್ಪಿಸದೆ ಅವರಿದ್ದ ಸ್ಥಳಕ್ಕೆ ಹೋಗಿ, ತನುಮನಧನಂಗಳ ಸಮರ್ಪಿಸಿ, ಅವರೊಕ್ಕುಮಿಕ್ಕುದ ಹಾರೈಸಿ ಹಸ್ತಾಂಜಲಿತರಾಗಿ ಪ್ರತ್ಯುತ್ತರವ ಕೊಡದಿರ್ಪುದೆ ಭೃತ್ಯಾಚಾರವೆಂಬೆನಯ್ಯಾ. ಮಲ ಮಾಯಾ ಪಾತಕ ಸೂತಕ ರಹಿತವಾದ ದೀಕ್ಷಾಗುರು, ಶಿಕ್ಷಾಗುರು, ಜ್ಞಾನಗುರುವಿನಿಂದ ವೇಧಾಮಂತ್ರ ಕ್ರಿಯಾದೀಕ್ಷೆಯ ಪಡೆದು ದ್ವಾದಶ ಮಲಪಾಶ ಕರ್ಮವ ತ್ಯಜಿಸಿ, ಮನ ಮಾರುತ ಮೊದಲಾದ ದ್ವಾದಶ ಇಂದ್ರಿಯಂಗಳ ಗುರುಪಾದಜಲದಿಂದ ಪ್ರಕ್ಷಾಲಿಸಿ ದಂತಪಙಫ್ತೆಕ್ರಿಯೆಗ? ಮಾಡಿ, ಕಟಿಸ್ನಾನ, ಕಂಠಸ್ನಾನ, ಮಂಡೆಸ್ನಾನ ಸರ್ವಾಂಗಸ್ನಾನವ ಮಾಡಿ ಕ್ರಿಯಾಭಸಿತದಿಂದ ಸ್ನಾನ ಧೂಲನ ಧಾರಣದ ಮರ್ಮವ ತಿಳಿದಾಚರಿಸಿ ಸಾಕಾರ ನಿರಾಕಾರ ಅಷ್ಟವಿಧಾರ್ಚನೆ ಷೋಡಷೋಪಚಾರದಿಂದ ಗುರು-ಲಿಂಗ-ಜಂಗಮವನರ್ಚಿಸಿ ನಿರ್ವಂಚಕತ್ವದಿಂದ ಘನಪಾದತೀರ್ಥಪ್ರಸಾದ ಮಂತ್ರದಲ್ಲಿ ನಿಂದ ನಿಜಾವಸ್ಥೆಯ ಕ್ರಿಯಾಚಾರವೆಂಬೆನಯ್ಯಾ ಅಂತರಂಗದಲ್ಲಿ ಕರಣವಿಷಯ ಕರ್ಕಶದಿಂದ ಅಹಂಕರಿಸಿ ಗುರುಹಿರಿಯರಲ್ಲಿ ಸಂಕಲ್ಪ ವಿಕಲ್ಪಗಳಿಂದ ಕುಂದು-ನಿಂದೆ ಹಾಸ್ಯ-ರೋಷಂಗಳೆಂಬ ಅಜ್ಞಾನವ ಬಳಸದೆ ಪರಮಪಾತಕರ ದರ್ಶನಸ್ಪರ್ಶನಸಂತರ್ಪಣೆ ಪಂಕ್ತಿಪಾಕವ ಕೊಳ್ಳದೆ ಸತ್ಯ ನಡೆನುಡಿಯುಳ್ಳ ಶಿವಶರಣಗಣಂಗಳಲ್ಲಿ ಷಡ್ವಿಧಭಕ್ತಿ ಮುಂದುಗೊಂಡು, ಎರಡೆಂಬತ್ತೆಂಟುಕೋಟಿ ವಚನಾನುಭವದಲ್ಲಿ ನಿಂದ ನಿಲುಕಡೆಯೆ ಜ್ಞಾನಾಚಾರವೆಂಬೆನಯ್ಯಾ. ತನುವಿಕಾರದಿಂದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳ ಬಳಕೆ ಮಾಡದೆ ಲೋಕದಂತೆ ನಡೆನುಡಿಗಳ ಬಳಸದೆ, ತನ್ನ ಗುಣಾವಗುಣಂಗಳ ಸ್ವಾತ್ಮಾನುಭವದಿಂದರಿದು, ದುರ್ಗುಈವ ತ್ಯಜಿಸಿ, ಸದ್ಗುಣವ ಹಿಡಿದು ಬಿಡದಿಪ್ಪುದೆ ಭಾವಾಚಾರವೆಂಬೆನಯ್ಯಾ. ಕೊಡುವಲ್ಲಿ ಕೊಂಬಲ್ಲಿ ಅತಿಯಾಸೆಯಿಂದ ಹುಸಿಯ ನುಡಿಯದೆ, ಕೊಟ್ಟ ಭಾಷೆಗ? ಪ್ರಾಣಾಂತ್ಯ ಬಂದಡೆಯೂ ನುಡಿಯಂತೆ ನಡೆವುದೆ ಸತ್ಯಾಚಾರವೆಂಬೆನಯ್ಯಾ. ಕಾಲ ಕಾಮರ ಬಾಧೆಗೊ?ಗಾಗದ ಹಠಯೋಗ ಫಲಪದಂಗ? ತಟ್ಟುಮುಟ್ಟು ಸೋಂಕುಗಳಿಲ್ಲದೆ ಲಿಂಗಾಣತಿಯಿಂದ ಬಂದೊದಗಿದ ಪರಿಣಾಮಪ್ರಸಾದದಲ್ಲಿ ಲೋಲುಪ್ತನಾಗಿರ್ಪುದೆ ನಿತ್ಯಾಚಾರವೆಂಬೆನಯ್ಯಾ. ಸರ್ವಾವಸ್ಥೆಯಲ್ಲಿ ದಶವಿಧಪಾದೋದಕ ಏಕಾದಶಪ್ರಸಾದ ಛತ್ತೀಸ ಪ್ರಣವ ಮೊದಲಾದ ಮಹಾಮಂತ್ರಂಗಳಲ್ಲಿ ಎರಕವನುಳ್ಳುದೆ ಧರ್ಮಾಚಾರವೆಂಬೆನಯ್ಯಾ. ಇಂತೀ ಏಕಾದಶವರ್ಮವ ಗುರುಕೃಪಾಮುಖದಿಂದರಿದು, ಆಚಾರವೆ ಅಂಗ ಮನ ಪ್ರಾಣ ಭಾವಂಗಳಾಗಿ, ಇಹಪರವ ವಿೂರಿ, ಪಿಂಡಾದಿ ಜ್ಞಾನಶೂನ್ಯಾಂತವಾದ ಏಕೋತ್ತರಮಾರ್ಗದಲ್ಲಿ ನಿಂದು, ಬಯಲೊಳಗೆ ಬಚ್ಚಬರಿಯ ನಿರ್ವಯಲ ಸಾಧಿಸುವುದೆ ಸರ್ವಾಚಾರ ಸಂಪತ್ತಿನಾಚಾರದ ನಿಲುಕಡೆ ನೋಡಾ ಇಂತು ಆಚಾರದ ಕುರುಹ ತಿಳಿದು ಪಂಚಾಚಾರವ ಬಹಿಷ್ಕರಿಸಿ ಸಪ್ತಾಚಾರವ ಗೋಪ್ಯವ ಮಾಡಿ, ದರಿದ್ರನಿಗೆ ನಿಧಿನಿಧಾನ ದೊರೆತಂತೆ, ರೋಗಿಗೆ ವೈದ್ಯದ ಲತೆ ದೊರೆತಂತೆ, ಮೂಕ ಫಲರಸವ ಸವಿದಂತೆ, ಕಳ್ಳಗೆ ಚೇಳೂರಿದಂತೆ, ತಮ್ಮ ಚಿದಂಗಸ್ವರೂಪರಾದ ಶರಣಗಣಂಗಳಲ್ಲಿ ಉಸುರಿ, ದುರ್ಜನಾತ್ಮರಲ್ಲಿ ಬಳಸದೆ ನಿಂದ ಪರಮಸುಖಿ ನಿಮ್ಮ ಶರಣನಲ್ಲದೆ ಉಳಿದ ಕಣ್ಗೆಟ್ಟಣ್ಣಗಳೆತ್ತ ಬಲ್ಲರಯ್ಯಾ ಕೂಡಲಚೆನ್ನಸಂಗಮದೇವಾ ?
--------------
ಚನ್ನಬಸವಣ್ಣ
ಇನ್ನಷ್ಟು ... -->