ಅಥವಾ

ಒಟ್ಟು 22 ಕಡೆಗಳಲ್ಲಿ , 11 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಸಕಲೇಂದ್ರಿಯಂಗಳ ಪ್ರಪಂಚು ನಾಸ್ತಿಯಾಗಿರಬಲ್ಲಡೆ ಕಕ್ಷದಲ್ಲಿ ಧರಿಸುವುದಯ್ಯಾ ಶಿವಲಿಂಗವ. ಕಾಂಚನಕ್ಕೆ ಕೈಯಾನದಿರ್ದಡೆ ಕರಸ್ಥಲದಲ್ಲಿ ಧರಿಸುವುದಯ್ಯ ಶಿವಲಿಂಗವ. ಪರಸ್ತ್ರೀಯರ ಅಪ್ಪುಗೆ ಇಲ್ಲದಿರ್ದಡೆ ಉರಸ್ಥಲದಲ್ಲಿ ಧರಿಸುವುದಯ್ಯ ಶಿವಲಿಂಗವ. ಎಂದೆಂದೂ ಹುಸಿಯನಾಡದಿರ್ದಡೆ ಜಿಹ್ವಾಪೀಠದಲ್ಲಿ ಧರಿಸುವುದಯ್ಯ ಶಿವಲಿಂಗವ. ಅನ್ನಪಾನಂಗಳಿಗೆ ಬಾಯ್ದೆರೆಯದಿರ್ದಡೆ ಅಮಳೋಕ್ಯದಲ್ಲಿ ಧರಿಸುವುದಯ್ಯ ಶಿವಲಿಂಗವ. ಅನ್ಯರಾಜರಿಗೆ ತಲೆವಾಗದಿರ್ದಡೆ ಉತ್ತಮಾಂಗದಲ್ಲಿ ಧರಿಸುವುದಯ್ಯ ಶಿವಲಿಂಗವ. ಇಂತೀ ಷಡ್‍ವಿಧಾಚಾರ ನೆಲೆಗೊಂಡು ಷಡ್‍ವಿಧ ಸ್ಥಾನದಲ್ಲಿ ಶಿವಲಿಂಗವ ಧರಿಸಬಲ್ಲಡೆ, ಭಕ್ತನೆಂಬೆನು, ಮಹೇಶ್ವರನೆಂಬೆನು, ಪ್ರಸಾದಿಯೆಂಬೆನು, ಪ್ರಾಣಲಿಂಗಿಯೆಂಬೆನು, ಶರಣನೆಂಬೆನು, ಐಕ್ಯನೆಂಬೆನು. ಇಂತೀ ಭೇದವನರಿಯದೆ ಲಿಂಗವ ಧರಿಸಿದಡೆ ಮಡಿಲಲ್ಲಿ ಕಲ್ಲ ಕಟ್ಟಿಕೊಂಡು ಕಡಲ ಬಿದ್ದಂತಾಯಿತ್ತು ಕಾಣಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ದೇವ ದೇವ ಮಹಾಪ್ರಸಾದ. ತನ್ನ ರೂಪವ ತಿಳಿದು ನೋಡಬೇಕೆಂದು ಕನ್ನಡಿಯನುಪಾಸ್ತಿ ಮಾಡಲು ಆ ಕನ್ನಡಿ ಬೇಕು ಬೇಡೆಂಬುದೆ ಅಯ್ಯಾ ? ಪತಿಯಾಜ್ಞೆಯಂತೆ ಸತಿಪತಿಭಾವವ ಧರಿಸಿದಡೆ ಸಂಯೋಗಕಾಲದಲ್ಲಿ ಅಲ್ಲವೆಂದೆನಬಹುದೆ ? ನೀವೆ ಮಾಡಿದಡೆ ನೀವೆ ಮಾಡಿದುದು ನಾನೆ ಮಹಾಪ್ರಸಾದವೆಂದು ಸ್ವೀಕರಿಸಿದಡೂ ನೀವೆ ಮಾಡಿದುದು. ಅಂಗೈಯ ಲಿಂಗದ ಲಕ್ಷಣವ ನೋಡಿ ಎಂದು ಕೈಯಲ್ಲಿ ಕೊಟ್ಟಡೆ, ಲಿಂಗದಲ್ಲಿ ಲಕ್ಷಣವನರಸಲಾಗದೆಂದು ಚೆನ್ನಸಂಗಮನಾಥನ `ಕೋ' ಎಂದು ಕೊಟ್ಟಡೆ ಮಹಾಪ್ರಸಾದವೆಂದು ಕೈಕೊಂಡೆನು ಗುರುವೆ. ಬೆದರಿ ಅಂಜಿದಡೆ ಮನವ ಸಂತೈಸಿ ಏಕಾರ್ಥದ ಭೇದದ ತೋರಿ ಬಿನ್ನಹವ ಮಾಡಿದೆನು. ಕೂಡಲಚೆನ್ನಸಂಗಮದೇವರ ಮಹಾಮನೆಯ ಗಣಂಗಳು ಮೆಚ್ಚಲು, ಸಂಗನಬಸವಣ್ಣನ ಕರುಣದ ಶಿಶುವೆಂಬುದ ಮೂರುಲೋಕವೆಲ್ಲವು ಅಂದು ಜಯ ಜಯ ಎನುತಿರ್ದುದು.
--------------
ಚನ್ನಬಸವಣ್ಣ
ಒಮ್ಮೆ ನೆಲದಲ್ಲಿ ಬಿತ್ತಿದ ಬಿತ್ತುವ ಕಿತ್ತಿ ಕಿತ್ತಿ ಮತ್ತೆ ಬಿತ್ತುತ್ತ ಹೋದಡೆ, ಆ ಬಿತ್ತು ಮೊಳೆತು ಕಳೆಯೇರಿ ಬೆಳೆದು ಬೆಳಸನೀವ ಪರಿಯಿನ್ನೆಂತೊ, ಮರುಳು ಮಾನವಾ ? ಗುರುವಿತ್ತ ಲಿಂಗವ ತೊರೆ ತೊರೆದು ಮರಳಿ ಮರಳಿ ಧರಿಸಿದಡೆ ಆ ಇಷ್ಟಲಿಂಗವು ಅನಿಷ್ಟವ ಕಳೆದು ಇಷ್ಟಾರ್ಥವನೀವ ಪರಿಯಿನ್ನೆಂತೊ ? ಇದು ಕಾರಣ- ಕೂಡಲಚೆನ್ನಸಂಗಯ್ಯನಲ್ಲಿ ಮುಕ್ತಿಯನರಸುವಡೆ ಅಂಗನಲ್ಲಿ ಹೆರೆಹಿಂಗದೆ ಲಿಂಗವ ಧರಿಸಬೇಕು
--------------
ಚನ್ನಬಸವಣ್ಣ
ಕೂಡಿದ ಧನವೆಲ್ಲವನು ಗುರುಲಿಂಗಜಂಗಮಕ್ಕೆ ವಂಚನೆಯ ಮಾಡಿ ಒಳಗಿಟ್ಟುಕೊಂಡು, ನೆಲನ ತೋಡಿ ಬಚ್ಚಿಟ್ಟುಕೊಂಡು. ಹಲವು ತೆರದ ಆಭರಣಂಗಳ ಮಾಡಿಸಿ, ಕರ ಚರಣ ಉರ ಕರ್ಣಂಗಳೊಳಗಿಟ್ಟುಕೊಂಡು, ಮತ್ತಿಷ್ಟು ಬದುಕಾಗಲೆಂದು ತನ್ನ ಕೈಯೊಳಗಿನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡುವ ಲಿಂಗಪೂಜಕನ ಪರಿ ಎಂತೆಂದೊಡೆ; ಆ ಭಕ್ತನು ಪಂಚಾಬ್ಥಿಷೇಕದಿಂದ ಲಿಂಗಕ್ಕೆ ಮಜ್ಜನವ ನೀಡಿದಡೆ ಲಿಂಗದ ಚಿತ್ತದಲ್ಲಿ ಸುಣ್ಣ ನೀರನೆತ್ತಿ ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ವಿಭೂತಿಯ ಧರಿಸಿದಡೆ ಲಿಂಗದ ಚಿತ್ತದಲ್ಲಿ ಬೂದಿಯ ಬೊಕ್ಕಣವ ಕಟ್ಟಿ ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ಗಂಧವ ಧರಿಸಿದರೆ ಲಿಂಗದ ಚಿತ್ತದಲ್ಲಿ ಚಂಡಿಟ್ಟು ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ಅಕ್ಷತೆಯನೇರಿಸಿದರೆ ಲಿಂಗದ ಚಿತ್ತದಲ್ಲಿ ಕಲ್ಲು ಹೊರಿಸಿ ಬಾದ್ಥಿಸಿದಂತಾಯಿತ್ತಯ್ಯಾ ! ಆ ಭಕ್ತನು ಪುಷ್ಪವ ಧರಿಸಿದರೆ ಲಿಂಗದ ಚಿತ್ತದಲ್ಲಿ ಬೆನ್ನ ಮೇಲೆ ಹೇರು ಹೊರಿಸಿದಂತಾಯಿತ್ತಯ್ಯಾ ! ಆ ಭಕ್ತನು ಧೂಪವ ಬೀಸಿದರೆ ಲಿಂಗದ ಚಿತ್ತದಲ್ಲಿ ಅರವನಿಕ್ಕಿ ಬಾದ್ಥಿಸಿದಂತಾಯಿತ್ತಯ್ಯಾ ! ಆ ಭಕ್ತನು ದೀಪಾರತಿಯನೆತ್ತಿದರೆ ಲಿಂಗದ ಚಿತ್ತದಲ್ಲಿ ಪಂಜುಗಳ್ಳರು ಬಂದು ಮೋರೆಯ ಸುಟ್ಟು ಬಾ[ದ್ಥಿ]ಸಿದಂತಾಯಿತ್ತಯ್ಯಾ ! ಆ ಭಕ್ತನು ಸ್ತೋತ್ರಮಂತ್ರವ ನುಡಿದರೆ ಲಿಂಗದ ಚಿತ್ತದಲ್ಲಿ ಕರ್ಣದೊಳಗೆ ತೊಣಚಿ ಹೊಕ್ಕು ಗೋಳಿಟ್ಟು ಬಾದ್ಥಿಸಿದಂತಾಯಿತ್ತಯ್ಯಾ ! ಇಂತಪ್ಪ ಲಿಂಗಬಾಧಕರನು ಲಿಂಗಪೂಜಕರೆನಬಹುದೆ ? ಆತನ ಅಂಗಳವ ಮೆಟ್ಟಬಹುದೆ ? ಇದರ ಇಂಗಿತವ ನಿಜಭಾವವುಳ್ಳ ಶರಣರು ನೀವೇ ತಿಳಿದು ನೋಡಿರೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಆವನೊಬ್ಬನು ಉಪಪಾತಕ ಮಹಾಪಾತಕಂಗಳ ಮಾಡಿ, ಶ್ರೀ ರುದ್ರಾಕ್ಷಿಯ ನಾಮೋಚ್ಚರಣೆಯ ಮಾಡಿದಡೆ ಆ ಪಾತಕಂಗಳು ಪರಿಹಾರವಾಗಿ ಹತ್ತುಸಾವಿರ ಗೋದಾನದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಸ್ವರೂಪವನು ಕಂಗಳು ತುಂಬಿ ನೋಡಿದಡೆ ಶತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮುಟ್ಟಿ ಮುಟ್ಟಿ ಪೂಜಿಸಿದಡೆ ಸಹಸ್ರಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ತತ್ ಸ್ಥಾನಂಗಳಲ್ಲಿ ಭಕ್ತಿಯಿಂದೆ ಧರಿಸಿದಡೆ ಲಕ್ಷಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮಣಿಗಳಿಂದೆ ಜಪವ ಮಾಡಿದಡೆ ಅನಂತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಅದೆಂತೆಂದೊಡೆ : ``ಸಪ್ತಕೋಟಿಶತಂ ಪುಣ್ಯಂ ಲಭತೇ ಧಾರಣಾತ್ ನರಃ | ಲಕ್ಷಕೋಟಿಸಹಸ್ರಾಣಿ ಲಕ್ಷಕೋಟಿಶತಾನಿ ಚ | ತಜ್ಜಪಾತ್ ಲಭತೇ ಪುಣ್ಯಂ ನಾತ್ರ ಕಾರ್ಯವಿಚಾರಣಾ ||' ಎಂದುದಾಗಿ, ಇಂತಪ್ಪ ರುದ್ರಾಕ್ಷಿಯ ಧರಿಸಿದ ಫಲಕ್ಕೆ ಇನ್ನಾವ ಫಲವು ಸರಿಯಿಲ್ಲವೆಂದು ಸಕಲಾಗಮಂಗಳು ಸಾರುತಿಪ್ಪವು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮಸ್ತಕದಲ್ಲಿ ಮಹಾದೇವನೆಂಬ ರುದ್ರನಿಪ್ಪನಯ್ಯಾ, ನೊಸಲಲ್ಲಿ ಲಕುಲೀಶ್ವರನೆಂಬ ರುದ್ರನಿಪ್ಪನಯ್ಯಾ. ನಾಭಿಯಲ್ಲಿ ಶಂಕರನೆಂಬ ರುದ್ರನಿಪ್ಪನಯ್ಯಾ, ಎದೆಯಲ್ಲಿ ಮಹೇಶ್ವರನೆಂಬ ರುದ್ರನಿಪ್ಪನಯ್ಯಾ. ಕೊರಳಲ್ಲಿ ಲೋಕೇಶ್ವರನೆಂಬ ರುದ್ರನಿಪ್ಪನಯ್ಯಾ. ಬಲದ ಭುಜದಲ್ಲಿ ಶ್ರೀಕÀಠನೆಂಬ ರುದ್ರನಿಪ್ಪನಯ್ಯಾ, ಎಡದ ಭುಜದಲ್ಲಿ ದೇವೇಶನೆಂಬ ರುದ್ರನಿಪ್ಪನಯ್ಯಾ. ಬಲದ ಬಾಹುವಿನಲ್ಲಿಈಶ್ವರನೆಂಬ ರುದ್ರನಿಪ್ಪನಯ್ಯಾ. ಎಡದ ಬಾಹುವಿನಲ್ಲಿ ಶೂಲಪಾಣಿಯೆಂಬ ರುದ್ರನಿಪ್ಪನಯ್ಯಾ. ಬಲದ ಮುಂಗೈಯಲ್ಲಿ ಕೋದಂಡನೆಂಬ ರುದ್ರನಿಪ್ಪನಯ್ಯಾ, ಎಡದ ಮುಂಗೈಯಲ್ಲಿ ಲಿಂಗಕಾಮಿಯೆಂಬ ರುದ್ರನಿಪ್ಪನಯ್ಯಾ. ಬಾಯಲ್ಲಿ ಭವನಾಶನೆಂಬ ರುದ್ರನಿಪ್ಪನಯ್ಯಾ, ನಾಸಿಕದಲ್ಲಿ ನಾಗಭೂಷಣನೆಂಬ ರುದ್ರನಿಪ್ಪನಯ್ಯಾ. ಬಲದ ಕಣ್ಣಲ್ಲಿ ಕಾಮಸಂಹರನೆಂಬ ರುದ್ರನಿಪ್ಪನಯ್ಯಾ, ಎಡದ ಕಣ್ಣಲ್ಲಿ ತ್ರಿಪುರಸಂಹರನೆಂಬ ರುದ್ರನಿಪ್ಪನಯ್ಯಾ. ಬಲದ ಕರ್ಣದಲ್ಲಿ ಪಾರ್ವತೀಪ್ರಿಯನೆಂಬ ರುದ್ರನಿಪ್ಪನಯ್ಯಾ, ಎಡದ ಕರ್ಣದಲ್ಲಿ ಏಕಾದಶನೆಂಬ ರುದ್ರನಿಪ್ಪನಯ್ಯಾ. ಹಿಂದಲೆಯಲ್ಲಿ ಪಂಚಮುಖನೆಂಬ ರುದ್ರನಿಪ್ಪನಯ್ಯಾ. ಬ್ರಹ್ಮರಂಧ್ರದಲ್ಲಿ ಬ್ರಹ್ಮಾಂಡಖಂಡಿತನೆಂಬ ರುದ್ರನಿಪ್ಪನಯ್ಯಾ; ಇಂತೀ ರುದ್ರರುಗಳು ತಮ್ಮ ತಮ್ಮಸ್ಥಾನಂಗಳೊಳಗಿಪ್ಪರಾಗಿ; ಇದನರಿಯದೆ ವಿಭೂತಿಯ ಧರಿಸಿದಡೆ ಕತ್ತೆ ಬೂದಿಯಲ್ಲಿ ಹೊರಳಿದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸಮಯವಿರೋಧವಾದೀತೆಂದು ಪಾದಾರ್ಚನೆಯ ಮಾಡುವರಯ್ಯಾ. ಲಿಂಗಜಂಗಮಕ್ಕೆ ಪಾದವಾವುದು ? ಅರ್ಚನೆ ಯಾವುದು ? ಎಂಬ ತುದಿ ಮೊದಲನರಿಯರು. ಉದಾಸೀನದಿಂದ ಪಾದಾರ್ಚನೆಯ ಮಾಡಿ, ಪಾದೋದಕ ಧರಿಸಿದಡೆ ಅದೇ ಪ್ರಳಯಕಾಲಜಲ. ವರ್ಮವನರಿದು ಕೊಂಡಡೆ ತನ್ನ ಭವಕ್ಕೆ ಪ್ರಳಯಕಾಲಜಲ ! ಈ ಉಭಯವ ಭೇದಿಸಿ ಸಂಸಾರಮಲಿನವ ತೊಳೆವಡೆ ಕೂಡಲಚೆನ್ನಸಂಗಾ ಈ ಅನುವ ನಿಮ್ಮ ಶರಣ ಬಲ್ಲ.
--------------
ಚನ್ನಬಸವಣ್ಣ
ಸೂತೆಯಲ್ಲಿ ಬೀಜ ಹುಟ್ಟಿದಡೆ ಅದೇತಕ್ಕೆ ಬಾತೆ? ಪಾಷಾಣದ ಕೈಯಲ್ಲಿ ಈಶ ರೂಪ ಧರಿಸಿದಡೆ ಅದು ನೆಲೆಗಳೆದ ತಟಾಕದ ತೂಬು. ಆ ಪಥವ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಆದಿಗೆ ಅನಾದಿಗೆ ಭೇದವುಂಟೆ ? ಆದಿ ಲಿಂಗ ಅನಾದಿ ಶರಣನೆಂಬುದು, ತನ್ನಿಂದ ತಾ ಮಾಡಲಾಯಿತ್ತು. ಧರೆಯಾಕಾಶ ಭುವನ ಭವನಂಗಳು ಹುಟ್ಟದ ಮುನ್ನ ಅನಾದಿ ಪರಶಿವನು ತಾನೆ ತನ್ನ ಲೀಲೆಗೆ ಸಾಕಾರವ ಧರಿಸಿದಡೆ ಆ ಸಾಕಾರವೆ ಈ ಸಾಕಾರವಾಯಿತ್ತು. ಎನ್ನ ಸಾಕಾರದ ಆದಿಯನೂ, ಎನ್ನ ನಿರಾಕಾರದ ಆದಿಯನೂ ಬಸವಣ್ಣ ಬಲ್ಲವನಾಗಿ, ಗುಹೇಶ್ವರಲಿಂಗದ ಘನವು ಬಸವಣ್ಣನಿಂದೆನಗೆ ಸಾಧ್ಯವಾಯಿತ್ತು ಕಾಣಾ ಚನ್ನಬಸವಣ್ಣಾ !
--------------
ಅಲ್ಲಮಪ್ರಭುದೇವರು
ಮಸ್ತಕದಲ್ಲಿ ರುದ್ರಾಕ್ಷಿಯಂ ಧರಿಸಿ ಅನ್ಯದೈವದ ಗುಡಿಯ ಹೊಗಲಾಗದು ಶರಣ. ಕರಣಂಗಗಳಲ್ಲಿ ರುದ್ರಾಕ್ಷಿಯಂ ಧರಿಸಿ ಹರನಿಂದೆ ಗುರುನಿಂದೆಯ ಕೇಳಲಾಗದು ಶರಣ. ತೋಳುಗಳಲ್ಲಿ ರುದ್ರಾಕ್ಷಿಯಂ ಧರಿಸಿ ಪರಸತಿಯನಪ್ಪಲಾಗದು ಶರಣ. ಮುಂಗೈಯಲ್ಲಿ ರುದ್ರಾಕ್ಷಿಯಂ ಧರಿಸಿ ಅನ್ಯರಿಗೆ ಕೈಮುಗಿಯಲಾಗದು ಶರಣ. ಇದನರಿದು ಧರಿಸಿದಡೆ ಶ್ರೀರುದ್ರಾಕ್ಷಿಯಹುದು. ಅಂತಲ್ಲದಿರ್ದಡೆ, [ಡ]ಂಬ ಹಗರಣವ ಹೊತ್ತು ಬಂದಂತೆ ಎಂದಾತನಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಯಾಂತ್ರಿಕನ ಯಂತ್ರಮಂತ್ರ ಸಂಬಂಧದಿಂದ ಪಿಶಾಚಗ್ರಸ್ತನ ಪಿಶಾಚಿಯು ಫಲಾಯನವಪ್ಪ ತೆರನಂತೆ, ಶ್ರೀಗುರುವಿನ ಶಿವಮಂತ್ರ ಶಿವಲಿಂಗ ಸಂಬಂಧದಿಂದ ಮನುಜನ ಮಾಯಾಗ್ರಹವು ತೊಲಗುವುದಯ್ಯಾ. ಗಿಡಮರಬಳ್ಳಿಗಳ ನಾರುಬೇರುಗಳ ಶರೀರದೊಂಡೆಯಲ್ಲಿ ಧರಿಸಿದಡೆ ರೋಗಿಯ ಹಲವು ರೋಗಗಳು ನಷ್ಟವಪ್ಪ ಪರಿಯಂತೆ ಇಷ್ಟಲಿಂಗವನಂಗದಲ್ಲಿ ಸಂಗಗೊಳಿಸುವುದರಿಂದ, ಭವಿಯ ಭವ ಕೆಟ್ಟು, ಕೂಡಲಚೆನ್ನಸಂಗಯ್ಯನ ಕಾರುಣ್ಯಕ್ಕೆ ಪಕ್ಕಾಗುವನಯ್ಯಾ
--------------
ಚನ್ನಬಸವಣ್ಣ
ಶರಣರ ಸಂಗ ಸಾಲೋಕ್ಯಪದವಯ್ಯಾ. ಗಣಂಗಳ ಮುಖಾವಲೋಕನ ಪ್ರಿಯಸಂಭಾಷಣೆ ಸಾಮೀಪ್ಯಪದವಯ್ಯ. ಶ್ರೀವಿಭೂತಿ ರುದ್ರಾಕ್ಷಿ ಪ್ರಮಥರ ಶ್ರೀಮೂರ್ತಿಯ ಕಂಡು ಮನದಲ್ಲಿ ಧರಿಸಿದಡೆ, ಸಾರೂಪ್ಯಪದವಯ್ಯಾ. ಪುರಾತನರ ಶ್ರೀಪಾದಂಗಳಲ್ಲಿ ಎನ್ನ ಶಿರಸ್ಪರ್ಶನದಿಂದ ಸಾಷ್ಟಾಂಗವೆರಗಲು, ಸಾಯುಜ್ಯಪದವಯ್ಯಾ. ಇಂತೀ ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯವೆಂಬ ಚತುರ್ವಿಧಪದವೆನಗಾಯಿತ್ತಯ್ಯಾ ನಿಮ್ಮ ಗಣಂಗಳ ಕರುಣದಿಂದ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂದು ಆದಿಯ ಬಿಂದುವಿಲ್ಲದಂದು, ನಿಮಗೂ ನನಗೂ ಲಿಂಗಾಂಗವೆಂಬ ಹೆಸರಿಲ್ಲದೆ ಇರ್ದೆವೆಂದು, ಆದಿಬಿಂದು ರೂಹಿಸಿದಲ್ಲಿ ಲಿಂಗಾಂಗವೆಂಬ ಹೆಸರು ಬಂದಿತ್ತೆಂದು, ಅಂದು ಆದಿಯಾಗಿ ನೀವಾವಾವ ಲೀಲೆಯ ಧರಿಸಿದಡೆ, ಆ ಲೀಲೆಗೆ ನಾನಾಧಾರವಾದೆ. ನಿಮಗೂ ನನಗೂ ಎಂದೆಂದೂ ಹೆರಹಿಂಗದ ಯೋಗ. ಅದು ನೀವು ಬಲ್ಲಿರಿ, ನಾ ಬಲ್ಲೆನು, ನುಡಿದು ತೋರಲೇಕಿನ್ನು? ಇಂದೆನಗೆ ತನು ಯೋಗವಾದಲ್ಲಿ ನಿಜ ಹೊರತೆ? ``ಶಿವಯೋಗಿ ಶರೀರೇ ಚ ಸದಾ ಸನ್ನಿಹಿತಶ್ಯಿವಃ' ಎಂದುದಾಗಿ, ನಿಮಗೆ ಬೇರೆ ದೇಹವಿಲ್ಲ. ನನ್ನ ದೇಹವೆ ನಿಮ್ಮ ದೇಹವೆಂಬುದಕ್ಕೆ ನೀವೇ ಸಾಕ್ಷಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->