ಅಥವಾ

ಒಟ್ಟು 20 ಕಡೆಗಳಲ್ಲಿ , 11 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಅಂತರಂಗ ಬಹಿರಂಗದಲ್ಲಿ ಸರ್ವಾಚಾರ ಸಂಪತ್ತಿನ ಆಚರಣೆಯನರಿಯದ ಮೂಢಾತ್ಮಂಗೆ ಲಿಂಗಾಂಗ ಸಮರಸವ ಹೇಳಿ ಸರ್ವಾಂಗ ಸ್ನಾನಧೂಳನ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣ ಕ್ರಿಯಾಭಸಿತವ ಧರಿಸುವ ನಿರ್ಣಯವ ಹೇಳಿ ಅಂತರಂಗದ ಜಪವ ಹೇಳುವನೊಬ್ಬ ಆಚಾರದ್ರೋಹಿ ನೋಡಾ, ರಾಮನಾಥ.
--------------
ಜೇಡರ ದಾಸಿಮಯ್ಯ
ಗುರುಸ್ವಾಮಿ ಧರಿಸುವ ಮಡಿಯ ನಾ ಸುತ್ತಿದೆನಾದಡೆ, ಶಿರವು ಬಿರಿದು ಬೀಳಾಗಲಿ ದೇವಾ. ಗುರುಸ್ವಾಮಿ ಧರಿಸುವ ಕಂಠಮಾಲೆಯ ನಾ ಧರಿಸಿದೆನಾದಡೆ, ಕಂಠ ಕತ್ತರಿಸಿ ಹೋಗ ದೇವಾ. ಗುರುಸ್ವಾಮಿ ಪಾನವ ಮಾಡುವ ಗಿಂಡಿಯ ನಾ ಪಾನವ ಮಾಡಿದೆನಾದಡೆ ನಾಲಗೆ ಸೀಳಿಹೋಗ ದೇವಾ. ಗುರುಸ್ವಾಮಿ ಶಯನಿಸುವ ಸುಪ್ಪಿತ್ತಿಗೆಯಲ್ಲಿ ನಾ ಶಯನ ಮಾಡಿದೆನಾದಡೆ ಎನ್ನಂಗದಲಿ ಕ್ರಿಮಿಗಳು ಬೀಳ ದೇವಾ, ಕಪಿಲಸಿದ್ಧಮಲ್ಲಿಕಾರ್ಜುನದೇವಾ.
--------------
ಸಿದ್ಧರಾಮೇಶ್ವರ
ವರ್ಣವಿಲ್ಲದ ಲಿಂಗಕ್ಕೆ ರೂಪು ಪ್ರತಿಷೆ*ಯ ಮಾಡುವ ಪರಿಯಿನ್ನೆಂತೊ? ಪ್ರಳಯವಿಲ್ಲದ ಲಿಂಗಕ್ಕೆ ಪ್ರಾಣಪ್ರತಿಷೆ*ಯ ಮಾಡುವ ಪರಿಯಿನ್ನೆಂತೊ? ನೆನೆಯಬಾರದ ಲಿಂಗಕ್ಕೆ ಅನುಗ್ರಹವ ಮಾಡುವ ಪರಿಯಿನ್ನೆಂತೊ? ನುಡಿಯಬಾರದ ಲಿಂಗಕ್ಕೆ ಜಪಪೂಜೆಯದೆಂತೊ? ಇಲ್ಲದ ಲಿಂಗವ ಧರಿಸುವ ಪರಿಯಿನ್ನೆಂತೊ? ಮಹಾಮಹಿಮ ಮಾಗುಡದ ಮಲ್ಲಿಕಾರ್ಜುನಾ ಇದರಂತುವ ನೀವೆ ಬಲ್ಲಿರಿ.
--------------
ನಿರ್ಧನಪ್ರಿಯ ರಾಮೇಶ್ವರ
ಅಯ್ಯಾ, ಶ್ರೀವಿಭೂತಿಯ ಧರಿಸುವ ಭೇದವೆಂತೆಂದಡೆ : ಸಹಜಲಿಂಗಧಾರಕರು ಎಂಟುಸ್ಥಾನದಲ್ಲಿ ಧರಿಸುವುದಯ್ಯಾ. ಕ್ರಿಯಾದೀಕ್ಷಾನ್ವಿತರಾದ ಉಪಾಧಿಭಕ್ತರು ಹದಿನಾರು ಸ್ಥಾನದಲ್ಲಿ ಧರಿಸುವುದಯ್ಯಾ. ಕ್ರಿಯಾದೀಕ್ಷೆ, ಮಂತ್ರದೀಕ್ಷೆಯುಕ್ತರಾದ ನಿರುಪಾಧಿಭಕ್ತರು ಮೂವತ್ತೆರಡು ಸ್ಥಾನದಲ್ಲಿ ಧರಿಸುವುದಯ್ಯಾ. ಕ್ರಿಯಾದೀಕ್ಷೆ ಮಂತ್ರದೀಕ್ಷೆ ವೇಧಾದೀಕ್ಷೆಯುಕ್ತರಾದ ಸಹಜಭಕ್ತರು ಮೂವತ್ತಾರು ಸ್ಥಾನದಲ್ಲಿ ಧರಿಸುವುದಯ್ಯಾ. ಕ್ರಿಯಾದೀಕ್ಷೆ ಮಂತ್ರದೀಕ್ಷೆ ವೇಧಾದೀಕ್ಷೆ ಸಚ್ಚಿದಾನಂದದೀಕ್ಷಾಯುಕ್ತರಾದ ನಿರ್ವಂಚನಭಕ್ತರು ನಾಲ್ವತ್ತುನಾಲ್ಕು ಸ್ಥಾನದಲ್ಲಿ ಧರಿಸುವುದಯ್ಯಾ. ಕ್ರಿಯಾ-ಮಂತ್ರ-ವೇಧಾ-ಸಚ್ಚಿದಾನಂದ-ನಿರ್ವಾಣಪದದೀಕ್ಷಾ ಸಮನ್ವಿತರಾದ ಸದ್ಭಕ್ತಶರಣಗಣಂಗಳು, ಆಪಾದಮಸ್ತಕ ಪರಿಯಂತರ ಸ್ನಾನ ಧೂಳನವ ಮಾಡಿ ನಾಲ್ವತ್ತೆಂಟು ಸ್ಥಾನದಲ್ಲಿ ಮಂತ್ರಸ್ಮರಣೆಯಿಂದ ತ್ರಿಪುಂಡ್ರವ ಧರಿಸುವುದಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಯ್ಯಾ, ಶ್ರೀವಿಭೂತಿಯ ಸತ್ಕ್ರಿಯೆಯಿಂದ (ಮಾಡಿ) ಧರಿಸುವ ಭೇದವೆಂತೆಂದಡೆ : ಆವ ವರ್ಣದ ಗೋವಾದಡೆಯೂ ಸರಿಯೆ, ಅವಯವಂಗಳು ನೂನು-ಕೂನಿಲ್ಲದೆ, ಬರೆಗಳ ಹಾಕದೆ ಇರುವಂತಹ ಗೋವ ತಂದು, ಅದಕ್ಕೆ ಧೂಳಪಾದೋದಕ ಸ್ನಾನವ ಮಾಡುವಂತಹದೆ ಕ್ರಿಯಾಲಿಂಗಧಾರಣದೀಕ್ಷೆ; ಧೂಳಪಾದೋದಕಸೇವನೆಯೆ ಮಹಾತೀರ್ಥ. ಭಕ್ತ ಆತನ ಭಾಂಡದಲ್ಲಿರುವ ಪದಾರ್ಥವ ಹಸ್ತ ಮುಟ್ಟಿ ಹಾಕಿದ ಮೇಲೆ ಮಹಾಪ್ರಸಾದವಾಯಿತ್ತು. ಇಂತಹ ಆಚಾರಯುಕ್ತವಾದ ಗೋವಿನ ಸಗಣಿಯ ಸ್ವಚ್ಛವಾದ ಸ್ಥಳದಲ್ಲಿ ಚೂರ್ಣ ಮಾಡಿ ಒಣಗಿಸಿ ಕ್ರಿಯಾಗ್ನಿಯಿಂದ ದಹಿಸಿದ ಬೂದಿಯ ಧೂಳಪಾದೋದಕದಲ್ಲಿ ಶೋಧಿಸಿ, ಅದರೊಳಗೆ ತಿಳಿಯ ತೆಗೆದು ಘಟ್ಟಿಯ ಮಾಡಿ ಪೂರ್ವದಲ್ಲಿ (ಗುರು) ಹೇಳಿದ ವಚನೋಕ್ತಿಯಿಂದ ಧರಿಸಿದ ಲಿಂಗಾಧಾರಕಭಕ್ತಂಗೆ ಗುರುದೀಕ್ಷೆಯುಂಟಾಗುವುದಯ್ಯಾ, ಉಪಾಧಿಭಕ್ತಂಗೆ ಗುರುಲಿಂಗಜಂಗಮದ ಸದ್ಭಕ್ತಿ ದೊರೆವುದಯ್ಯಾ, ನಿರುಪಾಧಿಭಕ್ತಂಗೆ ತ್ರಿವಿಧಪಾದೋದಕ ಪ್ರಸಾದ ದೊರೆಯುವುದಯ್ಯಾ ಸಹಜ ಭಕ್ತಂಗೆ ಸಚ್ಚಿದಾನಂದಪದ ದೊರೆಯುವುದಯ್ಯಾ ನಿರ್ವಂಚಕ ಭಕ್ತಂಗೆ ನಿರ್ವಾಣ ಪದವಾಗುವುದಯ್ಯಾ ನಿರ್ವಾಣಭಕ್ತಂಗೆ ನಿಷ್ಕಳಂಕ ಜ್ಯೋತಿರ್ಮಯ ಪರಶಿವಲಿಂಗದಲ್ಲಿ ಕೂಟಸ್ಥವಾಗಿ, ನಿರಂಜನಜಂಗಮದಲ್ಲಿ ಕೂಡಿ ಹರಗಣಸಹವಾಗಿ ನಿರವಯಸಮಾಧಿ ತಪ್ಪದು ನೋಡಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಲಿಂಗಾಂಗಸಂಗಸಮರಸದ ವಿವರವ ಕರುಣಿಸು ಸ್ವಾಮಿ. ಕೇಳೈ ಮಗನೆ : ಮುಖಪ್ರಕ್ಷಾಲನ ಮಾಡುವಾಗ ಲಿಂಗಕ್ಕೆ ಮಜ್ಜನವ ನೀಡಿದುದು ಇಷ್ಟಲಿಂಗದ ಮಜ್ಜನ. ಲಿಂಗಾರ್ಚನೆ ಮಾಡುವಾಗ ಕ್ರಿಯೆಯಿಟ್ಟು ಲಿಂಗಕ್ಕೆ ಮಜ್ಜನವ ನೀಡಿದುದು ಪ್ರಾಣಲಿಂಗದ ಮಜ್ಜನ. ಲಿಂಗಾರ್ಚನೆ ಮುಗಿದ ಬಳಿಕ ಮಜ್ಜನ ನೀಡಿದುದು ಭಾವಲಿಂಗದ ಮಜ್ಜನವೆಂದರಿವುದು. ಇನ್ನು ವಿಭೂತಿಯ ಧರಿಸುವ ಕ್ರಮವು : ಸ್ನಾನ ಧೂಳನ ಧಾರಣ. ಸ್ನಾನ ಮಾಡಿದುದು ಇಷ್ಟಲಿಂಗದಲ್ಲಿ ; ಧೂಳನವ ಮಾಡಿದುದು ಪ್ರಾಣಲಿಂಗದಲ್ಲಿ ; ಧಾರಣವ ಮಾಡಿದುದು ಭಾವಲಿಂಗದಲ್ಲಿ. ಇನ್ನು ಲಿಂಗಪೂಜೆ ; ಹೊರಗಣ ಪುಷ್ಪ ಇಷ್ಟಲಿಂಗಕ್ಕೆ ; ಒಳಗಣ ಕಮಲದ ಪುಷ್ಪ ಪ್ರಾಣಲಿಂಗಕ್ಕೆ ; ಬಯಲ ಪುಷ್ಪ ಭಾವಲಿಂಗಕ್ಕೆಂದರಿವುದು. ಇನ್ನು ಜಪದ ಕ್ರಮ ; ಹನ್ನೆರಡು ಪ್ರಣವ ಮಾಡಲಾಗಿ ಪಂಚತತ್ತ್ವವಡೆದ ಜಪ ಇಷ್ಟಲಿಂಗಕ್ಕೆ ; ಒಳಗಣ ಜಪ ಇಪ್ಪತ್ತೊಂದು ಸಾವಿರದಾರುನೂರು ಪ್ರಾಣಲಿಂಗಕ್ಕೆ ; ಬಯಲ ಜಪ ಭಾವಲಿಂಗಕ್ಕೆಂದರಿವುದು. ಇನ್ನು ತ್ರಿಕಾಲಪೂಜೆ : ಉದಯಕಾಲದ ಪೂಜೆ ಇಷ್ಟಲಿಂಗಕ್ಕೆ ; ಮಧ್ಯಾಹ್ನದ ಪೂಜೆ ಪ್ರಾಣಲಿಂಗಕ್ಕೆ ; ಸಾಯಂಕಾಲದ ಪೂಜೆ ಭಾವಲಿಂಗಕ್ಕೆಂದರಿವುದು. ಇನ್ನು ಪ್ರಸಾದತ್ರಯದ ವಿವರ : ಶುದ್ಧಪ್ರಸಾದ ಇಷ್ಟಲಿಂಗಕ್ಕೆ ; ಸಿದ್ಧಪ್ರಸಾದ ಪ್ರಾಣಲಿಂಗಕ್ಕೆ ; ಪ್ರಸಿದ್ಧಪ್ರಸಾದ ಭಾವಲಿಂಗಕ್ಕೆಂದರಿವುದು. ಇನ್ನು ಭೋಗತ್ರಯದ ವಿವರ : ಭೋಜನಸುಖವು ಇಷ್ಟಲಿಂಗಕ್ಕೆ ; ತನ್ನ ಸ್ತ್ರೀಸಂಗದಸುಖವು ಪ್ರಾಣಲಿಂಗಕ್ಕೆ ; ವಸ್ತ್ರಾಭರಣದ ಸುಖವು ಭಾವಲಿಂಗಕ್ಕೆಂದರಿವುದು. ಲಿಂಗಾಂಗಿಯ ಚರಿತ್ರದ ವಿವರ ; ನಿಂತಿರ್ದುದು ಇಷ್ಟಲಿಂಗಕ್ಕೆ ; ಕುಂತಿರ್ದುದು ಪ್ರಾಣಲಿಂಗಕ್ಕೆ ಮಲಗಿರ್ದುದು ಭಾವಲಿಂಗಕ್ಕೆಂದರಿವುದು. ಇನ್ನು ನಡೆವುದು ಇಷ್ಟಲಿಂಗವು ; ನುಡಿವುದು ಪ್ರಾಣಲಿಂಗವು ; ಪಿಡಿದುನೋಡುವ ಸುಖವು ಭಾವಲಿಂಗವು ಎಂದರಿವುದು. ಇನ್ನು ಇಷ್ಟಲಿಂಗದ ಗರ್ಭದಲ್ಲಿ ತನ್ನ ಶರೀರವನಿಟ್ಟು ಬ್ರಹ್ಮರಂಧ್ರದಲ್ಲಿರ್ದ ಸಹಸ್ರದಳ ಕಮಲದೊಳಗೆ ಆ ಇಷ್ಟಲಿಂಗವ ಮುಳುಗಿಸುವುದೀಗ ಲಿಂಗಾಂಗವು. ಇನ್ನು ನೇತ್ರಸ್ಥಾನದಲ್ಲಿರ್ದ ವಿಶ್ವಜೀವನ ಜಾಗ್ರಾವಸ್ಥೆ ಸ್ಥೂಲತನುವಿನ ವ್ಯವಹರಣೆ ಇಷ್ಟಲಿಂಗವೆಂದರಿವುದು. ಕಂಠಸ್ಥಾನದಲ್ಲಿರ್ದ ತೈಜಸಜೀವನ ಸ್ವಪ್ನಾವಸ್ಥೆ ಸೂಕ್ಷ್ಮತನುವಿನ ವ್ಯವಹರಣೆ ಪ್ರಾಣಲಿಂಗವೆಂದರಿವುದು. ಹೃದಯಸ್ಥಾನದಲ್ಲಿರ್ದ ಪ್ರಾಜ್ಞಜೀವನ ಸುಷುಪ್ತಾವಸ್ಥೆ ಕಾರಣತನುವಿನ ವ್ಯವಹರಣೆ ಭಾವಲಿಂಗವೆಂದರಿವುದು. ಇನ್ನು ಆಯತ ಇಷ್ಟಲಿಂಗವು ಸ್ವಾಯತ ಪ್ರಾಣಲಿಂಗವು ಸನ್ನಹಿತ ಭಾವಲಿಂಗವು ಎಂದರಿವುದು. ಇನ್ನು ಪಾತಾಳಲೋಕವನೊಳಕೊಂಡದ್ದು ಇಷ್ಟಲಿಂಗವಹುದು ; ಮತ್ರ್ಯಲೋಕವನೊಳಕೊಂಡದ್ದು ಪ್ರಾಣಲಿಂಗವಹುದು ; ಸ್ವರ್ಗಲೋಕವನೊಳಕೊಂಡದ್ದು ಭಾವಲಿಂಗವಹುದು. ಈರೇಳುಲೋಕವನೊಳಕೊಂಡದ್ದು ಪ್ರಾಣಲಿಂಗವು ; ಚರ್ಮಚಕ್ಷುವಿಗೆ ಅಗೋಚರವು, ಮನೋನೇತ್ರಕ್ಕೆ ಒಂದೆರಡಾಗಿ ಕಾಣಲ್ಪಟ್ಟುದೀಗ ಪ್ರಾಣಲಿಂಗವು. ಆ ಪ್ರಾಣಲಿಂಗಕ್ಕೆ ಎರಡು ನೇತ್ರಂಗಳು ಪುಷ್ಪವಾಗಿಪ್ಪುದೆ ಲಿಂಗಾಂಗಸಂಗವು. ಇನ್ನು ರೂಪಾಗಿ ಬಂದ ಪದಾರ್ಥವನು ಭೋಗಿಸುವದು ಇಷ್ಟಲಿಂಗವು ತಾನೆ. ರುಚಿಯಾಗಿ ಬಂದ ಪದಾರ್ಥವನು ಭೋಗಿಸುವದು ಪ್ರಾಣಲಿಂಗವು ತಾನೆ. ತೃಪ್ತಿಯಾಗಿ ಬಂದ ಪದಾರ್ಥವನು ಭೋಗಿಸುವದು ಭಾವಲಿಂಗವು ತಾನೆ. ಸಾಕ್ಷಿ : 'ಇಷ್ಟಲಿಂಗಾರ್ಪಿತಂ ಅಂಗಂ ಪ್ರಾಣಲಿಂಗಾರ್ಪಿತಂ ಮನಂ | ಭಾವಲಿಂಗಾರ್ಪಿತಂ ತೃಪ್ತಿರಿತಿ ಭೇದೋ ವರಾನನೇ ||' ಎಂದುದಾಗಿ, ಅಂಗವೆಂದರೆ ರೂಪು, ಮನವೆಂದರೆ ರುಚಿ, ಸಂತೋಷವೆಂದರೆ ತೃಪ್ತಿ ಎಂದರಿವುದು. ಕ್ರಿಯೆವಿಡಿದು ಕಾಯಾರ್ಪಣ ಮಾಡುವ ಷಡ್ವಿಧಲಿಂಗದಸುಖವ ಭೋಗಿಸುವಾತ ಇಷ್ಟಲಿಂಗವು ತಾನೆ. ಜ್ಞಾನವಿಡಿದು ಕರಣಾರ್ಪಣವ ಮಾಡುವ ಛತ್ತೀಸಲಿಂಗದ ಸುಖವ ಭೋಗಿಸುವಾತ ಪ್ರಾಣಲಿಂಗ ತಾನೆ. ಭಾವವಿಡಿದು ಪರಿಣಾಮಾರ್ಪಣ ಮಾಡುವ ಇನ್ನೂರ ಹದಿನಾರು ಲಿಂಗದ ಸುಖವ ಭೋಗಿಸುವಾತ ಭಾವಲಿಂಗವು ತಾನೆ. ಸಾವಿರದ ಇನ್ನೂರಾ ತೊಂಬತ್ತಾರು ಲಿಂಗ ಇಂತಪ್ಪ ಬಯಲಲಿಂಗವು ಲೆಕ್ಕಕ್ಕೆ ನಿಲುಕದು. ಬಯಲ ಹಸ್ತದಿಂದ ಪೂಜಿಸಿ ಆ ಬಯಲಲಿಂಗದೊಳಗೆ ತಾನಾಗಿ ತನ್ನೊಳಗೆ ಬಯಲ ಲಿಂಗವು ಬೆರದುದು ಇದು ಲಿಂಗಾಂಗಸಂಗ ಸಮರಸವು. ಇದು 'ಶರಣಸತಿ ಲಿಂಗಪತಿ' ನ್ಯಾಯವು. ಇದು ತ್ರಿವಿಧ ತನುವ ತ್ರಿಲಿಂಗಕ್ಕೆ ಅರ್ಪಿಸುವ ಕ್ರಮವು. ಇಂತಿವೆಲ್ಲ ಕ್ರಮವನೊಳಕೊಂಡು ಇಷ್ಟಬ್ರಹ್ಮವು ತಾನೆಯೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಅಂಗಸಂಗಿಗಳೆತ್ತಬಲ್ಲರು ನೋಡಾ.
--------------
ಗಣದಾಸಿ ವೀರಣ್ಣ
ತನ್ನ ಪ್ರೀತಿಯ ಪುತ್ರ ಮಿತ್ರಾದಿಗಳು ಪರದೇಶದೊಳಗಿಪ್ಪರೆಂಬ ಭಾವದಲ್ಲಿ ಅಡಗಿದ ಆನಂದಕ್ಕಿಂತ ಮನಮುಟ್ಟಿ ನೆನೆವುದರಿಂದಾದ ಆನಂದ ಮಿಗಿಲಾಗಿಪ್ಪುದು ನೋಡಾ ! ಮನಮುಟ್ಟಿ ನೆನೆವುದರ ಸುಖಕ್ಕಿಂತ, ಅವರನಪ್ಪಿ ಆಲಂಗಿಸುವುದರಿಂದಾದ ಸುಖ ಅಧಿಕವಾಗಿ ತೋರ್ಪುದು ನೋಡಾ ! ಒಮ್ಮೆ ಅಪ್ಪಿ ಆಲಂಗಿಸಿದ ಆನಂದಕ್ಕಿಂತ ಅವರೊಡನೆ ಸದಾ ಕೂಡಿಪ್ಪ ಹರ್ಷ ಹಿರಿದಾಗಿಪ್ಪುದು ನೋಡಾ ! ಇಂತೀ ದೃಷ್ಟಾಂತದಂತೆ, ಪರಶಿವಲಿಂಗವ ಭಾವದಲ್ಲಿ ಭಾವಿಸುವುದಕ್ಕಿಂತ ಮನಮುಟ್ಟಿ ನೆನೆವುದು, ಮನಮುಟ್ಟಿ ನೆನೆವುದಕ್ಕಿಂತ ಕಣ್ಮುಚ್ಚಿ ಕಾಣುವುದು, ಕಣ್ಮುಚ್ಚಿ ಕಾಣುವುದಕ್ಕಿಂತ ಕರಮುಟ್ಟಿ ಪೂಜಿಸುವುದು, ಕರಮುಟ್ಟಿ ಪೂಜಿಸುವುದಕ್ಕಿಂತ ಸದಾ ಅಂಗದಲ್ಲಿ ಹಿಂಗದೆ ಧರಿಸುವ ಹರ್ಷವು, ಪರಮಾವಧಿಯಾಗಿಪ್ಪುದು ನೋಡಾ ! ಇದು ಕಾರಣ_ಕೂಡಲಚೆನ್ನಸಂಗಯ್ಯನ ಶರಣರು ಭಾವದಿಂದ ಮನಕ್ಕೆ, ಮನದಿಂದ ನೇತ್ರಕ್ಕೆ, ನೇತ್ರದಿಂದ ಕರಕ್ಕೆ ಆ ಶಿವಲಿಂಗವ ಬಿಜಯಂಗೈಸಿಕೊಂಡು ಪೂಜಾದಿ ಸತ್ಕ್ರಿಯೆಗಳನಗಲದೆ ಆಲಸದೆ ಆಚರಿಸುತಿಪ್ಪರು
--------------
ಚನ್ನಬಸವಣ್ಣ
ವರ್ಣವಿಲ್ಲದ ಲಿಂಗಕ್ಕೆ ರೂಪು ಪ್ರತಿಷೆ*ಯ ಮಾಡುವ ಪರಿ ಇನ್ನೆಂತೊ? ಪ್ರಳಯವಿಲ್ಲದ ಲಿಂಗಕ್ಕೆ ಪ್ರಾಣಪ್ರತಿಷೆ*ಯ ಮಾಡುವ ಪರಿ ಇನ್ನೆಂತೊ? ನೆನೆಯಬಾರದ ಲಿಂಗಕ್ಕೆ ಅನುಗ್ರಹವ ಮಾಡುವ ಪರಿ ಇನ್ನೆಂತೊ? ನುಡಿಯಬಾರದ ಲಿಂಗಕ್ಕೆ ಜಪಪೂಜೆಯದೆಂತೊ? ಇಲ್ಲದ ಲಿಂಗವ ಧರಿಸುವ ಪರಿ ಇನ್ನೆಂತೊ? ಮಹಾಮಹಿಮಲ್ಲಿಕಪಿಲಸಿದ್ಧ್ವಮ್ಲಕಾರ್ಜುನ, ಇದರಂತುವ ನೀವೆ ಬಲ್ಲಿರಿ.
--------------
ಸಿದ್ಧರಾಮೇಶ್ವರ
ಶ್ರೀ ರುದ್ರಾಕ್ಷಿಯ ಧರಿಸಿದಾತನೆ ಲಿಂಗವೆಂಬೆ, ಶ್ರೀ ರುದ್ರಾಕ್ಷಿಯ ಧರಿಸದ ಅಧಮರನೆ ಭವಿಯೆಂಬೆ, ಕೂಡಲ ಸಂಗಮದೇವಯ್ಯಾ ಶ್ರೀ ರುದ್ರಾಕ್ಷಿಯ ಧರಿಸುವ ಭಕ್ತರ ನೀನೆಂಬೆ.
--------------
ಬಸವಣ್ಣ
ಗುರುಕಾರುಣ್ಯವ ಪಡೆದು ಅಂಗದ ಮೇಲೆ ಲಿಂಗಧಾರಣವಾಗಿ, ಶ್ರೀ ವಿಭೂತಿಯ ಧರಿಸಿದ ಮಹಾತ್ಮನು ಮುಂದೆ ಶಿವನ ಜ್ಞಾನಚಕ್ಷುವಿನಿಂದುದಯಿಸಿದ ರುದ್ರಾಕ್ಷಿಯ ಧರಿಸುವ ಭೇದವೆಂತೆಂದೊಡ ಃ ಶಿಖಾಸ್ಥಾನದಲ್ಲಿ ಏಕಮುಖವನುಳ್ಳಂಥ ಒಂದು ರುದ್ರಾಕ್ಷಿಯ `` ಓಂ ಸದಾಶಿವಾಯ ನಮ ಃ '' ಎಂಬ ಮಂತ್ರದಿಂದ ಧಾರಣಮಾಡುವುದು. ಮಸ್ತಕದಲ್ಲಿ ಎರಡುಮುಖ ಮೂರುಮುಖ ಹನ್ನೆರಡುಮುಖಂಗಳನುಳ್ಳಂಥ ಮೂರು ರುದ್ರಾಕ್ಷಿಗಳ `` ಓಂ ವಹ್ನಿಸೂರ್ಯಸೋಮಾಧಿಪಾಯ ಶಿವಾಯ ನಮಃ '' ಎಂಬ ಮಂತ್ರದಿಂದ ಧಾರಣಮಾಡುವುದು. ಶಿರವ ಬಳಸಿ ಹನ್ನೊಂದುಮುಖಂಗಳನುಳ್ಳಂಥ ಮೂವತ್ತಾರು ರುದ್ರಾಕ್ಷಿಗಳ ``ಓಂ ಷಟ್‍ತ್ರಿಂಶತತ್ತಾ ್ವತ್ಮಕಾಯ ಪರಶಿವಾಯ ನಮಃ '' ಎಂಬ ಮಂತ್ರದಿಂದ ಧಾರಣಮಾಡುವುದು. ಕರ್ಣಯುಗದಲ್ಲಿ ಐದುಮುಖ ಹತ್ತುಮುಖ ಏಳುಮುಖಂಗಳನುಳ್ಳಂಥ ಒಂದೊಂದು ರುದ್ರಾಕ್ಷಿಯ ``ಓಂ ಸೋಮಾಯ ನಮಃ'' ಎಂಬ ಮಂತ್ರದಿಂದ ಧಾರಣಮಾಡುವುದು. ಕಂಠಸ್ಥಾನದಲ್ಲಿ ಎಂಟುಮುಖ, ಆರುಮಖಂಗಳನುಳ್ಳಂಥ ಮೂವತ್ತೆರಡು ರುದ್ರಾಕ್ಷಿಗಳ ``ಓಂ ತ್ರಿಯಂಬಕಕಲಾತ್ಮನೇ ಶ್ರೀಕಂಠಾಯ ನಮಃ'' ಎಂಬ ಮಂತ್ರದಿಂದ ಧಾರಣಮಾಡುವುದು. ಉರಸ್ಥಾನದಲ್ಲಿ ನಾಲ್ಕುಮುಖಂಗಳನುಳ್ಳಂಥ ಐವತ್ತುನಾಲ್ಕು ರುದ್ರಾಕ್ಷಿಗಳ ``ಓಂ ಶ್ರೀಕಂಠಾದಿಮುಕ್ತ್ಯಾತ್ಮಕಾಯ ಶ್ರೀ ಸರ್ವಜ್ಞಾಯ ನಮಃ'' ಎಂಬ ಮಂತ್ರದಿಂದ ಧಾರಣಮಾಡುವುದು. ಬಾಹುದ್ವಯದಲ್ಲಿ ಹದಿಮೂರುಮುಖಂಗಳನುಳ್ಳಂಥ ಹದಿನಾರು ಹದಿನಾರು ರುದ್ರಾಕ್ಷಿಗಳ ``ಓಂ ಸುಖಾಸನಾದಿ ಷೋಡಶಮೂರ್ತ್ಯಾತ್ಮಕಾಯ ಶ್ರೀಕಂಠಾಯ ನಮಃ'' ಎಂಬ ಮಂತ್ರದಿಂದ ಬಲದ ತೋಳಿನಲ್ಲಿ ಧಾರಣಮಾಡುವುದು. ``ಓಂ ಸೋಮಕಲಾತ್ಮಕಾಯ ಸೋಮಾಯ ನಮಃ'' ಎಂಬ ಮಂತ್ರದಿಂದ ಎಡದ ತೋಳಿನಲ್ಲಿ ಧಾರಣಮಾಡುವುದು. ಮುಂಗೈ ಎರಡರಲ್ಲಿ ಒಂಬತ್ತು ಮುಖಂಗಳನುಳ್ಳಂಥ ಹನ್ನೆರಡು ಹನ್ನೆರಡು ರುದ್ರಾಕ್ಷಿಗಳ ``ಓಂ ದ್ವಾದಶಾದಿತ್ಯಾಕ್ಷಾಯ ಶ್ರೀ ಮಹಾದೇವಾಯ ನಮಃ'' ಎಂಬ ಮಂತ್ರದಿಂದ ಬಲದ ಮುಂಗೈಯಲ್ಲಿ ಧಾರಣಮಾಡುವುದು. ``ಓಂ ಕೇಶವಾದಿತ್ಯಾಯ ಉಮಾಪತಯೇ ನಮಃ'' ಎಂಬ ಮಂತ್ರದಿಂದ ಎಡದ ಮುಂಗೈಯಲ್ಲಿ ಧಾರಣಮಾಡುವುದು. ಕಕ್ಷಸ್ಥಾನದಲ್ಲಿ ಯಜ್ಞೋಪವೀತರೂಪವಾಗಿ ಹದಿನಾಲ್ಕುಮುಖಂಗಳನುಳ್ಳಂಥ ನೂರೆಂಟು ರುದ್ರಾಕ್ಷಿಗಳ ``ಓಂ ಶತರುದ್ರವಿದ್ಯಾಸ್ವರೂಪಾತ್ಮಕಾಯ ಶ್ರೀ ವಿಶ್ವೇಶ್ವರಾಯ ನಮಃ'' ಎಂಬ ಮಂತ್ರದಿಂದ ಧಾರಣಮಾಡುವುದು. ಇಂತೀ ಸ್ಥಾನಗಣನೆ ಮುಖಮಂತ್ರಂಗಳ ಭೇದವನರಿದು, ಶ್ರೀ ರುದ್ರಾಕ್ಷಿಯ ಧರಿಸಿದ ಶರಣ ತಾನೇ ಸಾಕ್ಷಾತ್ ಪರಶಿವನಲ್ಲದೆ ಬೇರಲ್ಲವಯ್ಯ. ಅದೆಂತೆಂದೊಡೆ :ಪರಮರಹಸ್ಯದಲ್ಲಿ- ``ಭಾಲೇ ತ್ರೈಪುಂಡ್ರಕಂ ಯಸ್ಯ ಗಲೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರಂ ಮಂತ್ರಂ ಶಿವಃ ನಾ ಸಂಶಯಃ ||'' ಎಂದುದಾಗಿ, ಅಂತಪ್ಪ ಮಹಿಮಂಗೆ ಶರಣೆಂದವರೆ ಧನ್ಯರಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಕೊರಳಿಗೆ ಕವಡೆಯ ಕಟ್ಟಿ ನಾಯಾಗಿ ಬೊಗಳುವರು! ಅದಾವ ವಿಚಾರವಯ್ಯ? ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಬೇವಿನುಡಿಗೆಯನುಟ್ಟು ಹಡಲಿಗೆಯ ಹೊತ್ತು `ಉಧೋ ಉಧೋ ಎಂಬರು! ಅದಾವ ವಿಚಾರವಯ್ಯ? ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಹಗ್ಗಹುರಿ-ಬೆನ್ನಸಿಡಿ-ಬಾಯಬೀಗದಲ್ಲಿ ಹೋಗುವರು! ಅದಾವ ವಿಚಾರವಯ್ಯ? ಇಂಥ ಭವಿಮಾರ್ಗದಲ್ಲಿ ಚರಿಸುವ ಶಿವದ್ರೋಹಿಗಳಿಗೆ ಲಿಂಗಧಾರಣವ ಮಾಡುವನೊಬ್ಬ ಗುರುದ್ರೋಹಿ, ಅವರಿಗೆ ಚರಣೋದಕವ, ತಾ ಧರಿಸುವ ವಿಭೂತಿ-ರುದ್ರಾಕ್ಷಿಯ ಕೊಡುವನೊಬ್ಬ ಲಿಂಗದ್ರೋಹಿ! ಅವನು ಭಕ್ತನೆಂದು ಅವನ ಮನೆಯ ಹೊಕ್ಕು, ಮಂತ್ರವ ಹೇಳಿ, ಅನ್ನವ ತಿಂದವನೊಬ್ಬ ಜಂಗಮದ್ರೋಹಿ! ಇಂತೀ ನಾಲ್ವರಿಗೆ ಸೂರ್ಯಚಂದ್ರರುಳ್ಳನ್ನಕ್ಕ ಎಕ್ಕಲಕೊಂಡದಲ್ಲಿಕ್ಕದೆ ಮಾಣ್ಬನೆ ಅಂಬಿಗರ ಚೌಡಯ್ಯನು?
--------------
ಅಂಬಿಗರ ಚೌಡಯ್ಯ
ಪಂಚಬ್ರಹ್ಮಾತ್ಮಕದಿಂದುದಯವಾದ, ಪಂಚಗವ್ಯ ಗೋಮಯವನು ಆಗಮಮತದಿಂದ ದಹಿಸಿ, ಸಮಸ್ತ ಜನಂಗಳು ಧರಿಸುವ ಭಸಿತವಿದು ನೋಡಾ ಕೂಡಲಸಂಗಯ್ಯಾ.
--------------
ಬಸವಣ್ಣ
ಚರಲಿಂಗಪ್ರಸನ್ನ ಪ್ರಸಾದಿ ಭಕ್ತ ಮಹೇಶ್ವರರು, ಶ್ರೀ ವಿಭೂತಿಯ ಕ್ರಿಯಾಧಾರಣ ಮಾಡಬೇಕಾದರೆ, ಸಾಜವಾದಂಥ ಗಟ್ಟಿಗೆ, ಆ ಮಡಿಗಿಕೊಂಡಿರ್ದಂಥ ಗುರುಪಾದೋದಕದಿಂದ ಅಭಿಷೇಕಂಗೈದು, ಅದೇ ಉದಕವನ್ನು ಒಂದು ಬಟ್ಟಲಲ್ಲಿ ಸ್ವಲ್ಪ ಮಾತ್ರ ತೆಗೆದುಕೊಂಡು, ಮೂಲಮಂತ್ರಧ್ಯಾನದಿಂದ ಆ ಜಂಗಮಮೂರ್ತಿಗಳ ಉಭಯಾಂಗುಷ*ದಡಿಯಲ್ಲಿ ಮಡುಗಿ ತನ್ನ ನಿಜದೃಷ್ಟಿಯೆ ಅರ್ಚನೆಯಾಗಿ ನಮಸ್ಕರಿಸಿ, ಇಷ್ಟಲಿಂಗಸಂಬಂಧವಾದ ಅಂಗುಷ*ವ ತನ್ನ ತರ್ಜನಿಬೆರಳಿಂದ ನಾದಬಿಂದುಕಳೆಗಳೆಂಬ ತ್ರಿವಿಧಪ್ರಣಮಗಳ ಬಿಂದುದೀರ್ಘಾಯುಕ್ತವಾಗಿ ಮೂರುವೇಳೆ ಘನಮನವೇದ್ಯದಿಂದ ಸ್ಪರಿಶನವಮಾಡಿ, ಪ್ರಾಣಲಿಂಗಸಂಬಂಧವಾದ ಅಂಗುಷ*ವ ಅದರಂತೆ ಚಿನ್ನಾದ ಬಿಂದು ಕಳೆಗಳೆಂಬ ತ್ರಿವಿಧಪ್ರಣಮಗಳ ಬಿಂದುದೀರ್ಘಯುಕ್ತವಾಗಿ ಮೂರುವೇಳೆ ಪರಿಪೂರ್ಣಾನುಭಾವದಿಂದ ಸ್ಪರಿಶನವ ಮಾಡಿ, ಅಲ್ಲಿಂದ ಭಾವಲಿಂಗಸ್ವರೂಪ ಅಷ್ಟಾವರಣಸಂಬಂಧವಾದ ಎಂಟು ಅಂಗುಲಿಗಳ ಅಂಗುಷ*ಗಳೊಡಗೂಡಿ, ಪರನಾದ ಬಿಂದು ಕಳೆಗಳೆಂಬ ತ್ರಿವಿಧಪ್ರಣಮಗಳ ಬಿಂದು ದೀರ್ಘಯುಕ್ತವಾಗಿ, ಒಂದು ವೇಳೆ ಸತ್ತುಚಿತ್ತಾನಂದ ನಿತ್ಯಪರಿಪೂರ್ಣತ್ವದಿಂದ ಸ್ಪರಿಶನವ ಮಾಡಿದಂಥ ಲಿಂಗಪಾದೋದಕವನ್ನು ಗುರುಪಾದೋದಕದಿಂದಭಿಷೇಕಂಗೈದಿಷ್ಟವಿಭೂತಿಗಟ್ಟಿ ಸುಯಿಧಾನದಿಂದ ಸಮ್ಮಿಶ್ರಂಗೈದುಳಿದಂಥ ಲಿಂಗಪಾದೋದಕವನ್ನು ಪ್ರಸಾದಿಸ್ಥಲವಿಲ್ಲದವರು ಒಂದು ಗಿಂಡಿಯಲ್ಲಿ ಮಡುಗಿಕೊಂಡು ನೆಲದಮೇಲಿಡದೆ ಒಂದಾಸನದಲ್ಲಿಟ್ಟು, ಸುಯ್ದಾನದಿಂದ ಘನಪಾದತೀರ್ಥ ತನ್ನರ್ಪಿತ ಸಮಯೋಚಿತಕ್ಕೆ ದೊರೆಯದಿದ್ದರೆ ಇಷ್ಟಲಿಂಗಾರ್ಪಿತಕ್ಕೆ ಮೂರುವೇಳೆ ಶಿವಶಿವ ಹರಹರ ಜಯಜಯ ಬಸವಲಿಂಗಯ್ಯಯೆಂದು ತಾನು ಸ್ವೀಕರಿಸಿ, ಕಂಡಿತಂಗೈದು, ಲಿಂಗಾರ್ಪಿತವ ಮಾಡುವುದು. ಗುರುದೀಕ್ಷೆಯುಳ್ಳವರು ಆ ಗಿಂಡಿಯೊಳಗಿರುವ ಉದಕವ ಜಂಗಮಮೂರ್ತಿಗಳು ದೊರೆತ ಸಮಯದಲ್ಲಿ ಕಂಡಿತಂಗೈದು, ಲಿಂಗದ ಉದುಗದಲ್ಲಿ ದ್ರವವನಾರಿಸಿ, ಆ ಗಿಂಡಿಯಂ ಬೆಳಗಿ, ಶಿವಪ್ರಸಾದಿಗಳಿಂದ ಶರಣುಹೊಕ್ಕು ಮೊದಲಂತೆ ಪಾದೋದಕವ ಮಾಡಿಟ್ಟು, ಗಿಂಡಿಯಲ್ಲಿ ತುಂಬಿಟ್ಟುಕೊಂಡು, ಪ್ರಾಣಾಂತ್ಯಲೀಲೆಸಮಾಪ್ತಪರಿಯಂತರವು ಆಚರಿಸುವುದು. ಲಿಂಗಪ್ರಸಾದಿಗಳಾದವರು, ಅಲ್ಲಿಂದ ಗಿಂಡಿ ಒಂದು ತಾವು ಉಳಿದು, ತಾನೊಂದು ಬಳಿಯವಾದಲ್ಲಿ ಜಂಗಮದ ತೀರ್ಥವ ಪಡೆದು ಸಲಿಸಿ, ಲಿಂಗಾರ್ಪಿತ ಭೋಗೋಪಭೋಗದಲ್ಲಿರ್ಪವರೆ ಲಿಂಗಾಂಗಿಗಳೆನಿಸುವರು. ಈ ಎರಡೂ ಇಲ್ಲವಾದೊಡೆ, ಪ್ರಸಾದಿಸ್ಥಲವುಳ್ಳವರು ಧರಿಸುವ ಕ್ರಿಯಾಭಸಿತದಿಂದ, ಪರಿಣಾಮೋದಕವನೊಂದು ಬಟ್ಟಲಲ್ಲಿ ಸ್ವಲ್ಪಮಡಗಿಕೊಂಡು, ಭಸ್ಮಮಿಶ್ರಂಗೆಯ್ದು, ಹಿಂದೆ ಹೇಳಿದ ಸ್ಮರಣೆಯಿಂದೆ ಸಲಿಸಿ, ಕಂಡಿತಂಗೈದು, ಷಡ್ರಸಾಮೃತಲಿಂಗಭೋಗದಲ್ಲಿರ್ಪುದೆ ನಿರವಯಪ್ರಭು ಮಹಾಂತನ ಸೂತ್ರಧಾರಿಗಳೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಭವಿತನಕ್ಕೆ ಹೇಸಿ ಭಕ್ತನಾಗಬೇಕೆಂಬಾತನು ಸದ್ಗುರುವನರಸಿಕೊಂಡು ಬಂದು ಅವರ ಕಾರುಣ್ಯದಿಂದ ಮುಕ್ತಿಯಂ ಪಡೆದೆನೆಂದು ಆ ಶ್ರೀಗುರುವಿಂಗೆ ದಂಡಪ್ರಣಾಮಂ ಮಾಡಿ ಭಯಭಕ್ತಿಯಿಂದ ಕರಂಗಳಂ ಮುಗಿದು ನಿಂದಿರ್ದು ಎಲೆ ದೇವಾ ! ಎನ್ನ ಭವಿತನಮಂ ಹಿಂಗಿಸಿ ನಿಮ್ಮ ಕಾರುಣ್ಯದಿಂದೆನ್ನ ಭಕ್ತನಂ ಮಾಡುವುದೆಂದು ಶ್ರೀಗುರುವಿಂಗೆ ಬಿನ್ನಹವಂ ಮಾಡಲು ಆ ಶ್ರೀಗುರುವು ಅಂತಪ್ಪ ಭಯಭಕ್ತಿ ಕಿಂಕರತೆಯೊಳಿಪ್ಪ ಶಿಶುವಂ ಕಂಡು ತಮ್ಮ ಕೃಪಾವಲೋಕನದಿಂ ನೋಡಿ ಆ ಭವಿಯ ಪೂರ್ವಾಶ್ರಯಮಂ ಕಳೆದು ಪೂನರ್ಜಾತನಂ ಮಾಡಿ ಆತನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ಅಗ್ನಿರಿತಿ ಭಸ್ಮ ಓಂ ವಾಯುರಿತಿ ಭಸ್ಮ ಓಂ ಜಲಮಿತಿ ಭಸ್ಮ ಓಂ ಸ್ಥಲಮಿತಿ ಭಸ್ಮ ಓಂ ವ್ಯೋಮೇತಿ ಭಸ್ಮ ಓಂ ಸೋಮೇತಿ ಭಸ್ಮ ಓಂ ಸೂರ್ಯೇತಿ ಭಸ್ಮ ಓಂ ಆತ್ಮೇತಿ ಭಸ್ಮ ಎಂಬೀ ಮಂತ್ರದಿಂದ ಆತನ ಅಷ್ಟತನುವಂ ಶುದ್ಧವ ಮಾಡುವುದು ಇನ್ನು ಆತನ ಜೀವ ಶುದ್ಧವ ಮಾಡುವ ಕ್ರಮವೆಂತೆಂದಡೆ_ ಓಂ ಅಸ್ಯ ಪ್ರಾಣಪ್ರತಿಷಾ* ಮಂತ್ರಸ್ಯ ಬ್ರಹ್ಮವಿಷ್ಣು ಮಹೇಶ್ವರಾ ಋಷಯಃ ಋಗ್ಯಜುಃ ಸಾಮಾಥರ್ವಣಾ ಶ್ಫಂದಾಂಸಿ ಸದಾಶಿವ ಮಹಾಪ್ರಾಣ ಇಹಪ್ರಾಣ ಮಮ ಜೀವ ಅಯಂ ತಥಾ ಮಮಾಸಕ್ತ ಸರ್ವೇಂದ್ರಿಯಾಣಿ ವಾಙ್ಮನಶ್ಚಕ್ಷುಃ ಶ್ರೋತ್ರ ಜಿಹ್ವಾಘ್ರಾಣ ಮನೋಬುದ್ಧಿ ಚಿತ್ತ ವಿಜ್ಞಾನವ? ಮಮ ಶರೀರೇ ಅಂಗಸ್ಯ ಸುಖಂ ಸ್ಥಿರಿಷ್ಯತಿ ಜೀವಃ ಶಿವಃ ಶಿವೋ ಜೀವಃ ಸಜೀವಃ ಕೇವಲಃ ಶಿವಃ ಪಾಶಬದ್ಧೋ ಭವೇಜ್ಜೀವಃ ಪಾಶಮುಕ್ತಃ ಶದಾಶಿವಃ ಎಂದೀ ಮಂತ್ರದಿಂದ ಆತನ ಜೀವನ ಶುದ್ಧವಂ ಮಾಡುವುದು. ಇನ್ನು ಆತ್ಮಶುದ್ದವ ಮಾಡುವ ಕ್ರಮವೆಂತೆಂದಡೆ_ ಓಂ ಶಿವಾತ್ಮಕಸುಖಂ ಜೀವೋ ಜೀವಾತ್ಮಕಸುಖಂ ಶಿವಃ ಶಿವಜೀವಾತ್ಮಸಂಯೋಗೇ ಪ್ರಾಣಲಿಂಗಂ ತಥಾ ಭವೇತ್ ಎಂದೀ ಮಂತ್ರದಿಂದ ಆತನ ಆತ್ಮನ ಶುದ್ಧವಂ ಮಾಡುವುದು. ಇನ್ನು ವಾಕ್ಕು ಪಾಣಿ ಪಾದ ಗುಹ್ಯ ಪಾಯುವೆಂಬ ಕರ್ಮೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತವಂ ತೊಡೆದು ಲಿಂಗಲಿಖಿತವಂ ಮಾಡುವ ಕ್ರಮವೆಂತೆಂದಡೆ_ ಓಂ [ಮೇ] ನೇತ್ರೇ ತ್ರ್ಯಂಬಕಃ ಪಾತು ಮುಖಂ ಪಾತು ಮಹೇಶ್ವರಃ ಕuõ್ರ್ಞ ಪಾತು ಶಂಭುರ್ಮೇ ನಾಸಿ ಕಾಯಾಂ ಭವೋದ್ಭವಃ ವಾಗೀಶಃ ಪಾತು ಮೇ ಜಿಹ್ವಾಮೋಷ*ಂ ಪಾತ್ವಂಬಿಕಾಪತಿಃ ಎಂದೀ ಮಂತ್ರದಿಂದ ಆತನ ಪಂಚೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತಮಂ ತೊಡೆದು ಲಿಂಗಲಿಖಿತವಂ ಮಾಡುವುದು. ಇನ್ನು ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯಂಗಳ ನಿವರ್ತನೆಯ ಮಾಡುವ ಕ್ರಮವೆಂತೆಂದಡೆ_ ಮನದಲ್ಲಿ ಧ್ಯಾನವಾಗಿ ಬುದ್ಧಿಯಲ್ಲಿ ವಂಚನೆಯಿಲ್ಲದೆ ಚಿತ್ತವು ದಾಸೋಹದಲ್ಲಿ ಅಹಂಕಾರವು ಜ್ಞಾನದಲ್ಲಿ ಈ ಮರ್ಯಾದೆಯಲ್ಲಿ ಚತುರ್ವಿಧಮಂ ನಿವರ್ತನೆಯಂ ಮಾಡುವುದು. ಇನ್ನು ಆತಂಗೆ ಪಂಚಗವ್ಯಮಂ ಕೊಟ್ಟು ಏಕಭುಕ್ತೋಪವಾಸಂಗಳಂ ಮಾಡಿಸಿ ಪಂಚಭೂತಸ್ಥಾನದ ಅಧಿದೇವತೆಗಳಂ ತೋರುವುದು ಅವಾವೆಂದಡೆ_ ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಏತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದೀ ಮಂತ್ರದಿಂದ ಆತನ ಪಂಚಭೂತ ಶುದ್ಧಿಯಂ ಮಾಡುವುದು. ಈ ಕ್ರಮದಲ್ಲಿ ಶುದ್ಧಾತ್ಮನಂ ಮಾಡಿದ ಬಳಿಕ ಆತನನ್ನು ಗಣತಿಂಥಿಣಿಯ ಮುಂದೆ ನಿಂದಿರಿಸುವುದು. ನಿಂದಿರ್ದಾತನಂ ದಂಡಪ್ರಣಾಮಮಂ ಮಾಡಿಸುವ ಕ್ರಮವೆಂತೆಂದಡೆ_ ಅನಂತ ಜನ್ಮಸಂಪ್ರಾಪ್ತ ಕರ್ಮೇಂಧನವಿದಾಹಿನೇ ಜ್ಞಾನಾನಲಪ್ರಭಾವಾಯ ತಸ್ಮೈ ಶ್ರೀಗುರವೇ ನಮಃ ಕರ್ಮಣಾ ಮನಸಾ ವಾಚಾ ಗುರು ಭಕ್ತೈತುವತ್ಸಲಃ ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್ ಪ್ರಣಮ್ಯ ದಂಡವದ್ಭೂಮೌ ಅಷ್ಟಮಂತ್ರೈಃ ಸಮರ್ಚಯೇತ್ ಶ್ರೀಗುರೋಃ ಪಾದಪದ್ಮಂಚ ಗಂಧಪುಷ್ಪಾಕ್ಷತಾದಿಭಿಃ ಅನ್ಯಥಾ ವಿತ್ತಹೀನೋ[s]ಪಿ ಗುರುಭಕ್ತಿಪರಾಯಣಃ ಕೃತ್ವಾ ದಂಡನಮಸ್ಕಾರಂ ಸ್ವಶರೀರಂ ನಿವೇದಯೇತ್ ಎಂದೀ ಮಂತ್ರದಿಂದ ದಂಡಪ್ರಣಾಮವಂ ಮಾಡಿಸುವುದು ಆತನ ರೈವಿಡಿದೆತ್ತುವ ಕ್ರಮವೆಂದರೆ ಗುರುಃ ಪಿತಾ ಗುರುರ್ಮಾತಾ ಗುರುರೇವ ಹಿ ಬಾಂಧವಃ ಗುರುದೈವಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಓಂ ಗುರುದೇವೋ ಭವ, ಓಂ ಪಿತೃದೇವೋ ಭವ, ಓಂ ಆಚಾರ್ಯದೇವೋ ಭವ ಎಂದೀ ಮಂತ್ರದಿಂದ ಆತನ ಕೈವಿಡಿದೆತ್ತುವುದು ಇನ್ನು ಭೂಶುದ್ಧಿಯಂ ಮಾಡುವ ಕ್ರಮವೆಂತೆಂದಡೆ_ ಓಂ ಶಿವಶಿವ ಶಿವಾಜ್ಞಾ ವಿಷ್ಣುಪ್ರವರ್ತಮಾನುಷಾ ಅಪವಿತ್ರಃ ಪವಿತ್ರೋವಾ ಸರ್ವಾವಸ್ಥಾಂಗತೋ[s]sಪಿ ವಾ ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭ್ಯಂತರಃ ಶುಚಿಃ ಪ್ರಥ್ವಿ ತ್ವಯಾ ಧೃತಾ ದೇವಿ ದೇವತ್ವಂ ವಿಷ್ಣುನಾ ಧೃತಾ ಪಂಚದಾರಾಮಯೋ ದೇವಿ ಪವಿತ್ರಂ ಕುರು ಚಾಸನಮ್ ಸಮ್ಮಾರ್ಜನಂ ಶತಂ ಪುಣ್ಯಂ ಸಹಸ್ರಮನುಲೇಪನಮ್ ರೇಖಾಶತಸಹಸ್ರೇಷು ಅನಂತಂ ಪದ್ಮಮುಚ್ಯತೇ ಬಂಧೋ ಭವಹರಶ್ಚೈವ ಸ್ವಸ್ತಿಕಂ ಶತ್ರುನಾಶನಮ್ ಪದ್ಮಂ ಪುಣ್ಯಂ ಫಲಂ ಚೈವ ಮುದ್ರಾ ತು ಮೋಕ್ಷಸಾಧನಮ್ ಎಂದೀ ಮಂತ್ರದಿಂದ ಭೂಶುದ್ಧಿಯ ಮಾಡುವದು. ಇನ್ನು ಆತನ ಚೌಕಮಧ್ಯದಲ್ಲಿ ಕುಳ್ಳಿರಿಸುವ ಕ್ರಮವೆಂತೆಂದಡೆ- ಓಂ ನಮೋ ರುದ್ರೇಭ್ಯೋ ಯೇ ಪೃಥ್ವಿವ್ಯಾಂ ಯೇ[s]ಂತರಿಕ್ಷೇ ಯೇ ದಿವಿ ಯೇಷಾಮನ್ನಂ ವಾತೋ ವರ್ಷಮಿಷವಸ್ತೇಭ್ಯೋ ದಶಪ್ರಾಚೀರ್ದಶ ದಕ್ಷಿಣಾ ದಶ ಪ್ರತೀಚೀರ್ದಶೋದೀಚೀರ್ದಶೋಧ್ರ್ವಾಸ್ತೇಭ್ಯೋ ನಮಸ್ತೇನೋ ಮೃಡಯಂತು ತೇ ಯಂ ದ್ವಿಷ್ಟೋ ಯಶ್ಚನೋ ದ್ವೇಷ್ಟಿ ತಂ ವೊ ಜಂಬೇ ದಧಾಮಿ ಚಾಂ ಪೃಥಿವ್ಯಾ ಮೇರು ಪೃಷ* ಋಷಿಃ ಕೂರ್ಮೋ ದೇವತಾ ಜಗತೀ ಛಂದಃ ಆಸನೇ ವಿನಿಯೋಗಃ ಎಂದೀ ಮಂತ್ರದಿಂದ ಶ್ರೀಗುರು ಆತನ Zõ್ಞಕಮಧ್ಯದಲ್ಲಿ ಕುಳ್ಳಿರಿಸುವುದು. ಇನ್ನು ನಾಲ್ಕೂ ಕಲಶದ ಪ್ರತ್ಯೇಕ ಪ್ರಧಾನ ದೇವತೆಗಳಂ ಕುಳ್ಳಿರಿಸಿ ಗುರುಕಲಶವಂ ಸ್ಥಾಪ್ಯವಂ ಮಾಡುವ ಕ್ರಮವೆಂತೆಂದಡೆ- ಚೌಕಮಧ್ಯೇ ಸುಮಾಂಗಲ್ಯಂ ಷೋಡಶಂ ಕಲಶಂ ತಥಾ ಭಾಸುರಂ ತಂಡುಲಂ ತಸ್ಯ ಪಂಚಸೂತ್ರಂ ತಥೈವ ಚ ತೇಷು ತೀರ್ಥಾಂಬುಪೂರ್ಣೇಷು ನಿದಧ್ಯಾದಾಮ್ರಪಲ್ಲವಾನ್ ದೂರ್ವಾಂಕುರಸುಪೂಗಾನಿ ನಾಗವಲ್ಲೀದಲಾನ್ಯಪಿ ಓಂ ತತ್ಪುರುಷಾಯ ನಮಃ ತತ್ಪುರುಷವಕ್ತ್ರಾಯ ನಮಃ ಓಂ ಅಘೋರರಾಯ ನಮಃ ಅಘೋರವಕ್ತ್ರಾಯ ನಮಃ ಓಂ ಸದ್ಯೋಜಾತಾಯ ನಮಃ ಸದ್ಯೋಜಾತವಕ್ತ್ರಾಯ ನಮಃ ಓಂ ವಾಮದೇವಾಯ ನಮಃ ವಾಮದೇವವಕ್ತ್ರಾಯ ನಮಃ ಓಂ ಈಶಾನಾಯ ನಮಃ ಈಶಾನವಕ್ತ್ರಾಯ ನಮಃ ಓಂ ತತ್ಪುರುಷ ಅಘೋರ ಸದ್ಯೋಜಾತ ವಾಮದೇವ ಈಶಾನ ವಕ್ತ್ರೇಭ್ಯೋ ನಮಃ ಎಂದು ಈ ಮಂತ್ರದಿಂದ ಗುರುಕಲಶಕ್ಕೆ ಪಂಚಸೂತ್ರಂಗಳನಿಕ್ಕಿ ಪಂಚಪಲ್ಲವಂಗಳನಿಕ್ಕಿ ಪಂಚಮುಖಂಗಳನಿಕ್ಕಿ ಗುರುಕಲಶವಂ ಸ್ಥಾಪ್ಯವಂ ಮಾಡುವುದು. ಇನ್ನು ಜಲಶುದ್ಧವಂ ಮಾಡುವ ಕ್ರಮವೆಂತೆಂದಡೆ - ಓಂ ನಮಃ ಶಿವಾಯ ನಮಸ್ತೇ ಅಸ್ತು ಭಗವನ್ ವಿಶ್ವೇಶ್ವರಾಯ ಮಹಾದೇವಾಯ ತ್ರ್ಯಂಬಕಾಯ ತ್ರಿಪುರಾಂತಕಾಯ ತ್ರಿಕಾಲಾಗ್ನಿಕಾಲಾಯ ಕಾಲಾಗ್ನಿರುದ್ರಾಯ ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ ಶ್ರೀಮನ್ಮಹಾದೇವಾಯ ನಮಃ ಓಂ ನಿಧನಪತಯೇ ನಮಃ ನಿಧನಪತಾಂತಿಕಾಯ ನಮಃ ಓಂ ಊಧ್ರ್ವಾಯ ನಮಃ ಊಧ್ರ್ವಲಿಂಗಾಯ ನಮಃ ಓಂ ಹಿರಣ್ಯಾಯ ನಮಃ ಹಿರಣ್ಯಲಿಂಗಾಯನಮಃ ಓಂ ಸುವರ್ಣಾಯ ನಮಃ ಸುವರ್ಣಲಿಂಗಾಯ ನಮಃ ಓಂ ದಿವ್ಯಾಯ ನಮಃ ದಿವ್ಯಲಿಂಗಾಯ ನಮಃ ಓಂ ಭವಾಯ ನಮಃ ಭವಲಿಂಗಾಯ ನಮಃ ಓಂ ಶಿವಾಯ ನಮಃ ಶಿವಲಿಂಗಾಯ ನಮಃ ಓಂ ಜ್ಯೇಷಾ*ಯ ನಮಃ ಜ್ಯೇಷ*ಲಿಂಗಾಯ ನಮಃ ಓಂ ಶ್ರೇಷಾ*ಯ ನಮಃ ಶ್ರೇಷ*ಲಿಂಗಾಯ ನಮಃ ಓಂ ಜ್ವಲಾಯ ನಮಃ ಜ್ವಲಲಿಂಗಾಯ ನಮಃ ಓಂ ಸ್ಥೂಲಾಯ ನಮಃ ಸ್ಥೂಲಲಿಂಗಾಯ ನಮಃ ಓಂ ಸೂಕ್ಷ್ಮಾಯ ನಮಃ ಸೂಕ್ಷ್ಮಲಿಂಗಾಯ ನಮಃ ಓಂ ಶೂನ್ಯಾಯ ನಮಃ ಶೂನ್ಯಲಿಂಗಾಯ ನಮಃ ಓಂ ನೇತ್ರಾಯ ನಮಃ ನೇತ್ರಲಿಂಗಾಯ ನಮಃ ಓಂ ಶ್ರೋತ್ರಾಯ ನಮಃ ಶ್ರೋತ್ರಲಿಂಗಾಯ ನಮಃ ಓಂ ಘ್ರಾಣಾಯ ನಮಃ ಘ್ರಾಣಲಿಂಗಾಯ ನಮಃ ಓಂ ಪ್ರಾಣಾಯ ನಮಃ ಪ್ರಾಣಲಿಂಗಾಯ ನಮಃ ಓಂ ವ್ಯೋಮಾಯ ನಮಃ ವ್ಯೋಮಲಿಂಗಾಯ ನಮಃ ಓಂ ಆತ್ಮಾಯ ನಮಃ ಆತ್ಮಲಿಂಗಾಯ ನಮಃ ಓಂ ಪರಮಾಯ ನಮಃ ಪರಮಲಿಂಗಾಯ ನಮಃ ಓಂ ಶರ್ವಾಯ ನಮಃ ಶರ್ವಲಿಂಗಾಯ ನಮಃ ಓಂ ಶಾಂತಾಯ ನಮಃ ಶಾಂತಲಿಂಗಾಯ ನಮಃ ಓಮೇತತ್ಸೋಮಸ್ಯ ಸೂರ್ಯಸ್ಯ ಸರ್ವಲಿಂಗಂ ಸ್ಥಾಪಯತಿ ಪಾಣಿಮಂತ್ರಂ ಪವಿತ್ರಮ್ ಓಂ ನಮಸ್ತೇ ಸರ್ವೋ ವೈ ರುದ್ರಸ್ತಸ್ಮೈ ರುದ್ರಾಯ ನಮೋsಸ್ತು ನಮೋ ಹಿರಣ್ಯಬಾಹವೇ ಹಿರಣ್ಯವರ್ಣಾಯ ಹಿರಣ್ಯರೂಪಾಯ ಹಿರಣ್ಯಪತಯೇ ಅಂಬಿಕಾಪತಯೇ ಉಮಾಪತಯೇ ಪಶುಪತಯೇ ನಮೋ ನಮಃ ಋತಂ ಸತ್ಯಂ ಪರಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮೋ ನಮಃ ಓಂ ಸದ್ಯೋಜಾತಂ ಪ್ರಪದ್ಯಾಮಿ ಸದ್ಯೋಜಾತಾಯ ವೈ ನಮೋ ನಮಃ ಭವೇ ಭವೇ ನಾತಿಭವೇ ಭವಸ್ವ ಮಾಂ ಭವೋದ್ಭವಾಯ ನಮಃ ಓಂ ವಾಮದೇವಾಯ ನಮೋ ಜ್ಯೇಷಾ*ಯ ನಮಃ ಶ್ರೇಷಾ*ಯ ನಮೋ ರುದ್ರಾಯ ನಮಃ ಕಾಲಾಯ ನಮಃ ಕಲವಿಕರಣಾಯ ನಮೋ ಬಲವಿಕರಣಾಯ ನಮೋ ಬಲಾಯ ನಮೋ ಬಲಪ್ರಮಥನಾಥಾಯ ನಮಃ ಸರ್ವಭೂತದಮನಾಯ ನಮೋ ಮನೋನ್ಮನಾಯ ನಮಃ ಓಂ ಅಘೋರೇಭ್ಯೋsಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಸ್ಯರ್ವ ಸರ್ವೇಭ್ಯೋ ನಮಸ್ತೇ ಅಸ್ತು ರುದ್ರರೂಪೇಭ್ಯಃ ಶ್ರೀ ಸದಾಶಿವಾಯ ನಮಃ ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರಃ ಪ್ರಚೋದಯಾತ್ ಓಮೀಶಾನಃ ಸರ್ವವಿದ್ಯಾನಾಮೀಶ್ವರಃ ಸರ್ವಭೂತಾನಾಂ ಬ್ರಹ್ಮಾಧಿಪತಿಬ್ರಹ್ಮಣೋsಧಿಪತಿಬ್ರ್ರಹ್ಮಾ ಶಿವೋ ಮೇ ಅಸ್ತು ಸದಾಶಿವೋಂ ಕದ್ರುದ್ರಾಯ ಪ್ರಚೇತಸೇ ಮೀಡುಷ್ಟಮಾಯ ತವ್ಯಸೇ ವೋಚೇಮ ಶಂತಮಗ್‍ಂ ಹೃದೇ ಏಕಃ ಶಿವ ಏವಾನ್ಯರಹಿತಾಯ ತೇ ನಮೋ ನಮಃ ಓಂ ವಿಶ್ವಂ ಭೂತಂ ಭುವನಂ ಚಿತ್ರಂ ಬಹುಧಾಜಾತಂ ಜಾಯಮಾನಂ ಚ ಯತ್ ಓಂ ಶಂ ಚ ಮೇ ಮಯಶ್ಚ ಮೇ ಪ್ರಿಯಂ ಚ ಮೇ[s] ಸುಕಾಮಶ್ಚ ಮೇ ಕಾಮಶ್ಚ ಮೇ ಸೌಮನಶ್ಚ ಮೇ ಭದ್ರಂ ಚ ಮೇ ಶ್ರೇಯಶ್ಚ ಮೇ ವಸ್ಯಶ್ಚ ಮೇ ಯಶಶ್ಚ ಮೇ ಭಗಶ್ಚ ಮೇ ದ್ರವಿಣಂ ಚ ಮೇ ಯಂತಾ ಚ ಮೇ ಧರ್ತಾ ಚ ಮೇ ಕ್ಷೇಮಶ್ವಮೇ ಧೃತಿಶ್ಚಮೇ ವಿಶ್ವಂ ಚ ಮೇ ಮಹಶ್ಚಮೇ ಸಂವಿಚ್ಚ ಮೇ ಜ್ಞಾತ್ರಂ ಚ ಮೇ ಸೂಶ್ಚ ಮೇ ಪ್ರಸೂಶ್ಚ ಮೇ ಸೀರಂ ಚ ಮೇ ಲಯಶ್ಚಯ ಮೇ ಅಮೃತಂ ಚ ಮೇ ಯಕ್ಷ್ಮಂಚ ಮೇ[s] ಮೃತಂ ಚ ಮೇ ನಾಮಯಶ್ಚ ಮೇ ಜೀವಾತು ಶ್ಚ ಮೇ ದೀರ್ಘಾಯುತ್ವಂ ಚ ನಮಿತ್ರಂ ಚ ಮೇS ಭಯಂ ಚಮೇ ಸುಗಂಧಂ ಚ ಮೇ ಶಯನಂ ಚ ಮೇ ಸೂಷಾ ಚ ಮೇ ಸುದಿನಂ ಚ ಮೇ ಓಂ ಸಹನಾವವತು ಸಹ £õ್ಞ ಭುನಕ್ತು ಸಹ ವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ಓಂ ಶಾಂತಿಃ ಶಾಂತಿಃ ಶಾಂತಿಃ ಎಂದೀ ಮಂತ್ರದಿಂದ ಜಲಶುದ್ಧವಂ ಮಾಡುವುದು. ಇನ್ನು ಜಂಗಮಕ್ಕೆ ಪಾದಾರ್ಚನೆಯಂ ಮಾಡುವ ಕ್ರಮವೆಂತೆಂದಡೆ_ ಅಂಗುಷಾ*ಗ್ರೇ ಅಷ್ಟಷಷ್ಟಿ ತೀರ್ಥಾನಿ ನಿವಸಂತಿ ವೈ ಸಪ್ತಸಾಗರಪಾದಾಧಸ್ತದೂಧ್ರ್ವೇ ಕುಲಪರ್ವತಾಃ ಚರಸ್ಯ ಪಾದತೀರ್ಥೇನ ಲಿಂಗಮಜ್ಜನಮುತ್ತಮವಮ್ ತತ್ಪ್ರಸಾದಂ ಮಹಾದೇವಿ ನೈವೇದ್ಯಂ ಶುಭಮಂಗಲಮ್ ಈ ಮಂತ್ರದಿಂದ ಪಾದಾರ್ಚನೆಯಂ ಮಾಡುವುದು. ಇನ್ನು ಕುಮಾರಠಾವನು ಜಲಾಭಿವಾಸವ ಮಾಡುವ ಕ್ರಮವೆಂತೆಂದಡೆ_ ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಕುಮಾರಠಾವನ್ನು ಜಲಾಧಿವಾಸವ ಮಾಡಿಸುವುದು. ಇನ್ನು ಆ ಶಿಷ್ಯನ ಹಸ್ತವಂ ಶೋಧಿಸುವ ಕ್ರಮವೆಂತೆಂದಡೆ_ ಓಂ ತ್ರಾತ್ವಿಯಂ ಶಕ್ತಿಃ ಶ್ರೀಕರಂ ಚ ಪವಿತ್ರಂ ಚ ರೋಗಶೋಕಭಯಾಪಹವರಿï ಮನಸಾ ಸಹ ಹಸ್ತೇಭ್ಯೋ ಪದ್ಭ್ಯಾಮುದ್ಧರಣಾಯ ಚ ಎಂದೀ ಮಂತ್ರದಿಂದ ಶಿಷ್ಯನ ಹಸ್ತವಂ ಶೋಧಿಸುವುದು. ಇನ್ನು ವಿಭೂತಿಯ ಧರಿಸುವ ಕ್ರಮವೆಂತೆಂದಡೆ_ ಮೂಧ್ರ್ನಿ ಲಲಾಟೇ ಕರ್ಣೇ ಚ ಚಕ್ಷುಷೋಘ್ರ್ರಾಣಕೇ ತಥಾ ಆಸ್ಯೇ ದ್ವಾಭ್ಯಾಂ ಚ ಬಾಹುಭ್ಯಾಂ ತನ್ಮೂಲತನವಸ್ತಥಾ ಮಣಿಬಂಧೇ ಚ ಹೃತ್ಪಾಶ್ರ್ವೇ ನಾಭೌ ಮೇಢ್ರೇ ತಥೈವ ಚ ಉರೌ ಚ ಜಾನುಕೇ ಚೈವ ಜಂಘಾ ಪೃಷೆ*ೀ ತಥೈವ ಚ ಪಾದೇ ದ್ವಾತ್ರಿಂಶತಿಶ್ಚೈವ ಪಾದಸಂಧೌ ಯಥಾ ಕ್ರಮಾತ್ ಇತ್ಯುದ್ಧೂಳನಂ ಸ್ನಾನಂ ಧಾರಣಂ ಮೋಕ್ಷಕಾರಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮೂವತ್ತೆರಡು ಸ್ಥಾನಗಳಲ್ಲಿ ವಿಭೂತಿಯಂ ಧರಿಸುವುದು. ಇನ್ನು ರುದ್ರಾಕ್ಷಿಯಂ ಧರಿಸುವ ಕ್ರಮವೆಂತೆಂದಡೆ_ ಓಂ ಹ್ರೂಂ ಶ್ರೂಂ ಭ್ರೂಂ ರೂಂ ಬ್ರೂ_ ಪ್ರರೂಮಪಿ ಸ್ರೀಯಂ ಕ್ಷೇಕ್ಷಮಪಿಕ್ಷೂ ಹ್ರೀಂ ನಮೋಂತಿ ಮಯಯೇ ಇತಿ ಪೂರ್ವೋಕ್ತ ಮಂತ್ರಾನಂತರೇ ಪ್ರಾಣನಾಯಮ್ಯ ಸಮಸ್ತ ಪಾಪಕ್ಷಯಾರ್ಥಂ ಶಿವಜ್ಞಾನಾವಾಪ್ತ್ಯರ್ಥಂ ಸಮಷ್ಟಿಮಂತ್ರೈಃ ಸಹ ಧಾರಣಂ ಕರಿಷ್ಯೇ ಇತಿ ಸಂಕಲ್ಪ್ಯ_ ಶಿರಸಾ ಧಾರಯೇತ್ಕೋಟಿ ಕರ್ಣಯೋರ್ದಶಕೋಟಿಭಿಃ ಶತಕೋಟಿ ಗಳೇ ಬದ್ಧಂ ಸಹಸ್ರಂ ಬಾಹುಮೂಲಯೋಃ ಅಪ್ರಮಾಣಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನವರಿï ಎಂದೀ ಮಂತ್ರದಿಂದ ಆ ಶಿಷ್ಯನ ಹಸ್ತಂಗಳಲ್ಲಿ ರುದ್ರಾಕ್ಷಿಯಂ ಧರಿಸುವುದು, ಇನ್ನು ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವ ಕ್ರಮವೆಂತೆಂದಡೆ_ ಮಹಾದೇವಾಯ ಮಹತೇ ಜ್ಯೋತಿಷೇSನಂತತೇಜಸೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವದು. ಇನ್ನು ಶಿಲೆಯ ಪೂವಾಶ್ರಯವಂ ಕಳೆವ ಪರಿಯೆಂತೆಂದಡೆ_ ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋಬಾಹುರುತ ವಿಶ್ವತಃಸ್ವಾತ್ ಸಂಬಾಹುಭ್ಯಾಂ ದಮತಿ ಸಂಪದಂ ತ್ರಯೀ_ ದ್ರ್ಯಾವಾಭೂಮೀ ಜನಯನ್ ದೇವ ಏಕಃ ಎಂದೀ ಮಂತ್ರದಿಂದ ಆ ಶಿಲೆಯ ಪೂರ್ವಾಶ್ರಯವಂ ಕಳೆವುದು. ಇನ್ನು ಆ ಶಿಲೆಗೆ ಪ್ರಾಣ ಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ವಿಶ್ವಾಧಿಕೋ ರುದ್ರೋ ಮಹರ್ಷಿಃ ಸರ್ವೋ ಹ್ಯೇಷ ರುದ್ರ ಸ್ತಸ್ಮೈ ರುದ್ರಾಯ ತೇ ಅಸ್ತು ನಮೋ ರುದ್ರೋ ವೈ ಕ್ರೂರೋ_ ರುದ್ರಃ ಪಶುನಾಮಧಿಪತಿಸ್ತಥಾ ದೇವಾ ಊಧ್ರ್ವಬಾಹವೊ_ ರುದ್ರಾ ಸ್ತುನ್ವಂತಿ ಯಸ್ಮಾತ್ಪರಂ ನಾಪರಮಸ್ತಿ ಕಿಂಚಿದ್ಯಸ್ಯಾನಾ ಣೀಯೋ ನ ಧ್ಯೇಯಃ ಕಿಂಚಿತ್ ಶಿವ ಏಕೋ ಧ್ಯೇಯಃ ಎಂದೀ ಮಂತ್ರದಿಂದ ಆ ಶಿಲೆಗೆ ಪ್ರಾಣಪ್ರತಿಷೆ*ಯಂ ಮಾಡುವುದು. ಇನ್ನು ದೇವರಿಗೆ ಸ್ನಪನಕ್ಕೆರೆಯುವ ಕ್ರಮವೆಂತೆಂದಡೆ_ ಸಪುಷ್ಪಶೀರ್ಷಕಂ ಲಿಂಗಂ ತಥಾ ಸ್ನಪನಮಾಚರೇತ್ ಪಯೋಧಧ್ಯಾಜಮಧ್ವಿಕ್ಷುರಸೈರ್ಮೂಲೇನ ಪಂಚಭಿಃ ಓಮನಂತ ಶುಚಿರಾಯುಕ್ಷ ಭಕ್ತಂ ತಿಸ್ತರತಾತ್ ಪರಮಂ ನಿಯಮುಚ್ಯತೇರ್ಮರಾತಸ್ಯ ಅವಿರಸ ಭುವನಂ ಜ್ಯೋತಿರೂಪಕವರಿï ಎಂದೀ ಮಂತ್ರದಿಂದ ದೇವರಿಗೆ ಸ್ನಪನಕ್ಕೆರೆವುದು. ಇನ್ನು ದೇವರಿಗೆ ವಸ್ತ್ರವಂ ಸಮರ್ಪಿಸುವುದೆಂತೆಂದಡೆ - ವ್ಯೋಮರೂಪ ನಮಸ್ತೇSಸ್ತು ವ್ಯೋಮತ್ಮಾಯ ಪ್ರಹರ್ಷಿಣೇ ವಾಸಾಂಸಿ ಚ ವಿಚಿತ್ರಾಣಿ ಸರವಂತಿ ಮೃದೂನಿ ಚ ಶಿವಾಯ ಗುರವೇ ದತ್ತಂ ತಸ್ಯ ಪುಣ್ಯಫಲಂ ಶೃಣು ಏವಂ ತದ್ವಸ್ತ್ರತಂತೂನಾಂ ಪರಿಸಂಖ್ಯಾತ ಏವ ಹಿ ತಾವದ್ವರ್ಷಸಹಸ್ರಾಣಿ ರುದ್ರಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ವಸ್ತ್ರವಂ ಸಮರ್ಪಿಸುವುದು. ಇನ್ನು ದೇವರಿಗೆ ಗಂಧವಂ ಸಮರ್ಪಿಸುವ ಕ್ರಮವೆಂತೆಂದಡೆ- ಚಂದನಾಗರುಕರ್ಪೂರತಮಾಲದಳಕುಂಕುಮಂ ಉಶೀರಕೋಷ*ಸಂಯುಕ್ತಂ ಶಿವಗಂಧಾಷ್ಟಕಂ ಸ್ಮೃತವಮ್ ಆಚಮಾನಸ್ತು ಸಿದ್ಧಾರ್ಥಂ ಅವಧಾರ್ಯ ಯಥೈವ ಚ ಅಷ್ಟಗಂಧಸಮಾಯುಕ್ತಂ ಪುಣ್ಯಪ್ರದಸಮನ್ವಿತವಮ್ ಎಂದೀ ಮಂತ್ರದಿಂದ ದೇವರಿಗೆ ಗಂಧಮಂ ಸಮರ್ಪಿಸುವುದು. ಇನ್ನು ದೇವರಿಗೆ ಅಕ್ಷತೆಯನರ್ಪಿಸುವ ಕ್ರಮವೆಂತೆಂದಡೆ ಅಭಿನ್ನಶಂಖವಚ್ಚೈವ ಸುಶ್ವೇತವ್ರೀಹಿತಂಡುಲವಮ್ ಸ್ಮೃತಂ ಶಿವಾರ್ಚನಾಯೋಗ್ಯಂ ನೇತರಂ ಚ ವರಾನನೇ ಗಂಧಾಕ್ಷತಸಮಾಯುಕ್ತಂ ಶಿವಮುಕ್ತೇಶ್ಚಕಾರಣಮ್ ಸರ್ವವಿಘ್ನವಿನಿರ್ಮುಕ್ತಂ ಶಿವಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ಅಕ್ಷತೆಯಂ ಸಮರ್ಪಿಸುವುದು. ಇನ್ನು ದೇವರಿಗೆ ಪುಷ್ಪವಂ ಸಮರ್ಪಿಸುವ ಕ್ರಮವೆಂತೆಂದಡೆ - ಮಲ್ಲಿಕೋತ್ಪಲಪುನ್ನಾಗಕದಂಬಾಶೋಕಚಂಪಕಮ್ ಸೇವಂತಿಕರ್ಣಿಕಾರಾಖ್ಯಂ ತ್ರಿಸಂಧ್ಯಾರಕ್ತಕೇಸರೀ ಕದಂಬವನಸಂಭೂತಂ ಸುಗಂಧಿಂ ಚ ಮನೋಹರಮ್ ತತ್ವತ್ರಯಾತ್ಮಕಂ ದಿವ್ಯಂ ಪುಷ್ಪಂ ಶಂಭೋSರ್ಪಯಾಮಿ ತೇ ಎಂದೀ ಮಂತ್ರದಿಂದ ದೇವರಿಗೆ ಪುಷ್ಪವ ಸಮರ್ಪಿಸುವದು. ಇನ್ನು ದೇವರಿಗೆ ಧೂಪವ ಸಮರ್ಪಿಸುವ ಕ್ರಮವೆಂತೆಂದಡೆ- ಗುಗ್ಗುಲಂ ಘೃತಸಂಯುಕ್ತಂ ಲಿಂಗಮಭ್ಯಚ್ರ್ಯ ಸಂದಹೇತ್ ವನಸ್ಪತಿವಾಸನೋಕ್ತಂ ಗಂಧಂ ದದ್ಯಾತ್ತಮುತ್ತಮಮ್ ಅರ್ಪಣಾದೇವ ದೇವಾಯ ಭಕ್ತಪಾಪಹರಾಯ ಚ ಎಂಬೀ ಮಂತ್ರದಿಂದ ದೇವರಿಗೆ ಧೂಪವನರ್ಪಿಸುವುದು. ಇನ್ನು ದೇವರಿಗೆ ದೀಪವ ಸಮರ್ಪಿಸುವ ಕ್ರಮವೆಂತೆಂದಡೆ- ಸ್ವಪ್ರಕಾಶ ಮಹಾತೇಜ ಸರ್ವಾಂತಸ್ತಿಮಿರಾಪಹೆ ಸ ಬಾಹ್ಯಾಭ್ಯಂತರಂ ಜ್ಯೋತಿರ್ದೀಪೊSಯಂ ಪ್ರತಿಗೃಹ್ಯತಾಮ್ ಎಂಬೀ ಮಂತ್ರದಿಂದ ದೇವರಿಗೆ ದೀಪವನರ್ಪಿಸುವುದು. ಇನ್ನು ದೇವರಿಗೆ ನೈವೇದ್ಯವನರ್ಪಿಸುವ ಕ್ರಮವೆಂತೆಂದಡೆ- ಕ್ಷೀರವಾರಿದಿ[s]ಸಂಭೂತಮಮೃತಂ ಚಂದ್ರಸನ್ನಿಭಮ್ ನೈವೇದ್ಯಂ ಷಡ್ರಸೋಪೇತಂ ಶಾಶ್ವತಾಯ ಸಮರ್ಪಿತಮ್ ಎಂಬೀ ಮಂತ್ರದಿಂದ ದೇವರಿಗೆ ನೈವೇದ್ಯವ ಸಮರ್ಪಿಸುವುದು. ಇನ್ನು ದೇವರಿಗೆ ತಾಂಬೂಲವ ಸಮರ್ಪಿಸುವ ಕ್ರಮವೆಂತೆಂದಡೆ- ಪೂಗಸಂಭೂತಕರ್ಪೂರ ಚೂರ್ಣಪರ್ಣದ್ವಿಸಂಯುತಃ ತ್ರಯೋದಶಕಲಾತ್ಮಾನಂ ತಾಂಬೂಲಂ ಫಲಮುಚ್ಯತೇ ಎಂದೀ ಮಂತ್ರದಿಂದ ದೇವರಿಗೆ ತಾಂಬೂಲವ ಸಮರ್ಪಿಸುವುದು. ಇನ್ನು ದೇವರಿಗೆ ಮಂತ್ರಪುಷ್ಪವ ಸಮರ್ಪಿಸುವ ಕ್ರಮವೆಂತೆಂದಡೆ ತ್ರಿಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನವಮ್ ಉರ್ವಾರುಕಮಿವ ಬಂಧನಾನ್ಮುೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬೀ ಮಂತ್ರದಿಂದ ದೇವರಿಗೆ ಮಂತ್ರಪುಷ್ಪವಂ ಸಮರ್ಪಿಸುವುದು. ಇನ್ನು ದೇವರಿಗೆ ನಮಸ್ಕಾರವಂ ಮಾಡುವ ಕ್ರಮವೆಂತೆಂದಡೆ- ಪಿÀಠಂ ಯಸ್ಯಾ ಧರಿತ್ರೀ ಜಲಧರಕಲಶಂ ಲಿಂಗಮಾಕಾಶಮೂರ್ತಿಂ ನಕ್ಷತ್ರಂ ಪುಷ್ಪಮಾಲ್ಯಂ ಗ್ರಹಗಣಕುಸುಮಂ ನೇತ್ರಚಂದ್ರಾರ್ಕವಹ್ನಿಮ್ ಕುಕ್ಷಿಂ ಸಪ್ತ ಸಮುದ್ರಂ ಭುಜಗಿರಿಶಿಖರಂ ಸಪ್ತಪಾತಾರಿಪಾದಂ ವೇದಂ ವಕ್ತ್ರಂ ಷಡಂಗಂ ದಶದಿಶಸನಂ ದಿವ್ಯಲಿಂಗಂ ನಮಾಮಿ ಎಂಬೀ ಮಂತ್ರದಿಂದ ದೇವರಿಗೆ ನಮಸ್ಕಾರವಂ ಮಾಡುವುದು. ಇನ್ನು ದೇವರಿಗೆ ಅನುಷಾ*ನವಂ ಮಾಡುವ ಕ್ರಮವೆಂತೆಂದಡೆ- ``ಏತೇಷಾಂ ಪುರುಷೋsಸ್ತು'' ಎಂದೀ ಮಂತ್ರದಿಂದ ದೇವರಿಗೆ ಅನುಷಾ*ನವಂ ಮಾಡುವುದು. ಇನ್ನು ಅನುಷಾ*ನವಂ ಮಾಡಿದ ಬಳಿಕ ಶ್ರೀಗುರುವು ಶಿಷ್ಯಂಗೆ ಉರಸ್ಥಲದ ಸಜ್ಜೆಯಲ್ಲಿ ಲಿಂಗವ ಧರಿಸುವ ಕ್ರಮವೆಂತೆಂದಡೆ- ಅಯಂ ಮೇ ಹಸ್ತೊ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜಃ ಅಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ಅಯಂ ಜೀವಾತುರಗಮತ್ ಇದಂ ತವ ಸಮರ್ಪಣಂ ಸುಬಂಧವೇ ನಿರೀಹಿ ಎಂದೀ ಮಂತ್ರದಿಂದ ಆ ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವುದು. ಇನ್ನು ಆ ಶಿಷ್ಯನ ವಾಯುಪ್ರಾಣಿತ್ವವಂ ಕಳೆದು ಲಿಂಗಪ್ರಾಣಿಯ ಮಾಡುವ ಕ್ರಮವೆಂತೆಂದಡೆ- ಓಂ ಅಪಿ ಚ ಪ್ರಾಣಾಪಾನವ್ಯಾನೋದಾನಸಮಾನಾದಿ ತಚ್ಚೈತನ್ಯ ಸ್ವರೂಪಸ್ಯ ಪರಮೇಶ್ವರಸ್ಯ ಓಂ ಶ್ರದ್ಧಾಯಾಂ ಪ್ರಾಣೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಪ್ರಾಣಾಯ ಸ್ವಾಹಾ ಓಂ ಶ್ರದ್ಧಾಯಾಮಪಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಅಪಾನಾಯ ಸ್ವಾಹಾ ಓಂ ಶ್ರದ್ಧಾಯಾಂ ವ್ಯಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ವ್ಯಾನಾಯ ಸ್ವಾಹಾ ಓಂ ಶ್ರದ್ಧಾಯಾಮುದಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಉದಾನಾಯ ಸ್ವಾಹಾ ಓಂ ಶ್ರದ್ಧಾಯಾಂ ಸಮಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಸಮಾನಾಯ ಸ್ವಾಹಾ ಎಂದೀ ಮಂತ್ರದಿಂದ ಆ ಶಿಷ್ಯನ ವಾಯುಪ್ರಾಣಿತ್ವವ ಕಳೆದು ಲಿಂಗ ಪ್ರಾಣಿಯಂ ಮಾಡುವುದು. ಇನ್ನು ಆ ಶಿಷ್ಯಂಗೆ ಅಗ್ರೋದಕವನ್ನು ಸರ್ವಾಂಗದ ಮೇಲೆ ತಳಿವ ಕ್ರಮವೆಂತೆಂದಡೆ- ಶಿವಃ ಪಶ್ಯತಿ ಶಿವೋ ದೃಶ್ಯತೇ ಅಹೋರಾತ್ರಂ ಶಿವಸನ್ನಿಧಾವೈಕಮೇನಂ ಪ್ರಯುಜ್ಯತೇ ತ್ರೈಜಾತಾಮಿ ಯಜೇಕಂ ಆ ಸರ್ವೇಭ್ಯೋಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ಸರ್ವೇಭ್ಯೋ ಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ತ್ರೈಜಾತಾಮಿಯಜೇಕಂ ಅಭಿಚಾರನ್ ಇತಿ ಸರ್ವೋ ವೈ ಏಷ ಯಜ್ಞಃ ಯತ್ರೋಪಾತ್ತಯಜ್ಞಃ ಸರ್ವೇಷಾಮೇನಂ ಯಜ್ಞೇನ ಜಾಯತೇ ನ ದೇವತಾಭ್ಯಾಂ ಆ ಉಚ್ಯತೇ ದ್ವಾದಶಕಪಾಲ ಪೂರುಷೋ ಭವತಿ ತಂ ತೇ ಯಜೇತ ಕಪಾಲ ಸ್ತ್ರೀಸಾಮುದ್ರೈ- ತ್ರಯಂ ತ್ರಯೀ ಮೇ ಲೋಕಾ ಏಷಾಮ್- ಲೋಕಾನಾಮಪ್ಯುತ್ತರೋತ್ತರ ಜ್ಞೇಯೋ ಭವತಿ ಎಂದೀ ಮಂತ್ರದಿಂದ ಆ ಶಿಷ್ಯಂಗೆ ಸರ್ವಾಂಗದಲ್ಲಿ ಅಗ್ರೋದಕವಂ ತಳೆವುದು. ಇನ್ನು ಆ ಶಿಷ್ಯನ ಭಾಳದಲ್ಲಿವಿಭೂತಿಯ ಪಟ್ಟವಂ ಕಟ್ಟುವ ಕ್ರಮವೆಂತೆಂದಡೆ ಓಂ ತ್ರಿಪುಂಡ್ರಂ ಸತತಂ ತ್ರಿಪುಂಡ್ರಂ ಸರ್ವದೇವಲಲಾಟಪಟ್ಟತ್ರಿಪುಂಡ್ರಂ ಸಪ್ತಜನ್ಮಕೃತಂ ಪಾಪಂ ಭಸ್ಮೀಭೂತಂ ತತಃ ಕ್ಷಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಭಾಳದಲ್ಲಿ ವಿಭೂತಿ ಪಟ್ಟವಂ ಕಟ್ಟುವುದು. ಇನ್ನು ಆ ಶಿಷ್ಯನ ದುರಕ್ಷರವ ತೊಡೆವ ಕ್ರಮವೆಂತೆಂದಡೆ- ಐಶ್ವರ್ಯಕಾರಣಾಧ್ಭೂತಿರ್ಭಾಸನಾದ್ಭಸಿತಂ ತಥಾ ಸರ್ವಾಂಗಾಭ್ಯರ್ಚನಾದ್ಭಸ್ಮ ಚಾಪದಕ್ಷರಣಾತ್ ಕ್ಷರಂ ತತೋಭೂತಪ್ರೇತಪಿಶಾಚಬ್ರಹ್ಮರಾಕ್ಷಸ - ಅಪಸ್ಮಾರಭವಭೀತಿಭ್ಯೋ ಭೀಕಾರಣಾದ್ರಕ್ಷಾ ರಕ್ಷತೇ ಏತಾನಿ ತಾನಿ ಶಿವಮಂತ್ರ ಪವಿತ್ರಿತಾನಿ ಭಸ್ಮಾನಿ ಕಾಮದಹನಾಂಗ ವಿಭೂಷಿತಾನಿ ತ್ರೈಪುಂಡ್ರಕಾನಿ ರಚಿತಾನಿ ಲಲಾಟಪಟ್ಟೇ ಲುಂಪಂತಿ ದೈವಲಿಖಿತಾನಿ ದುರಕ್ಷರಾಣಿ ಎಂದೀ ಮಂತ್ರದಿಂದ ಆ ಶಿಷ್ಯನ ದುರಕ್ಷರವಂ ತೊಡೆವುದು. ಇನ್ನು ಆ ಶಿಷ್ಯನ ಲಲಾಟದಲ್ಲಿ ಲಿಂಗಲಿಖಿತವಂ ಬರೆವ ಕ್ರಮವೆಂತೆಂದಡೆ- ``ಓಂ ಓಂ ಓಂ ನಮಃ ಶಿವಾಯ ಸರ್ವಜ್ಞಾನಧಾಮ್ನೇಱಱ ಎಂದೀ ಮಂತ್ರದಿಂದ ಆ ಶಿಷ್ಯನ ಲಲಾಟದಲ್ಲಿ ಶಿವಲಿಖಿತಮಂ ಬರೆವುದು. ಇನ್ನು ಆ ಶಿಷ್ಯನ ಮಸ್ತಕದಲ್ಲಿ ಹಸ್ತವನಿರಿಸುವ ಕ್ರಮವೆಂತೆಂದಡೆ- ಉದ್ಯದ್ಭಾಸ್ಕರ ಕೋಟಿ ಪ್ರಕಾಶ ಮಹಾದರ್ಶನ ದಿವ್ಯಮೂರ್ತಿಭೀಷಣಮ್ ಭುಜಂಗಭೂಷಣಂ ಧ್ಯಾಯೇತ್ ದಿವ್ಯಾಯುಧಂ ರುದ್ರವರಿï ಸರ್ವೈಸ್ತಪಸ್ವಿಭಿಃ ಪ್ರೋಕ್ತಂ ಸರ್ವಜ್ಞೇಷು ಭಾಗಿನಮ್ ರುದ್ರಭಕ್ತಂ ಸ್ಮೃತಾಃ ಸರ್ವೇ ತ್ರಿಪುಂಡ್ರಾಂಕಿತಮಸ್ತಕಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮಸ್ತಕದ ಮೇಲೆ ಹಸ್ತವನ್ನಿರಿಸುವುದು. ಇನ್ನು ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವ ಕ್ರಮವೆಂತೆಂದಡೆ - ಕರ್ಣದ್ವಾರೇ ಯಥಾವಾಕ್ಯಂ ಸದ್ಗುರೋರ್ಲಿಂಗಮೀರ್ಯತೇ ಇಷ್ಟಪ್ರಾಣಸ್ತಥಾಭಾವೋ ತ್ರಿಧಾಮ್ನೈಕ್ಯಮಿದಂ ಶೃಣು ಕರ್ಣೇ ಶಿಷ್ಯಸ್ಯ ಶನಕೈಃ ಶಿವಮಂತ್ರಮುದೀರಯೇತ್ ಸ ತು ಬದ್ಧಾಂಜಲಿಃ ಶಿಷ್ಯೋ ಮಂತ್ರತದ್ಧ್ಯಾನಮಾನಸಃ ಎಂದೀ ಮಂತ್ರದಿಂದ ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವುದು. ಇನ್ನು ಶತಪತ್ರದೊಳಗಣ ಮನಪ್ರಾಣದೊಳಗಿಪ್ಪ ಪ್ರಾಣಲಿಂಗಕ್ಕೊಂದು ಇಷ್ಟಲಿಂಗ ಸ್ಥಲಮಂ ತೋರಿಸಿ ಆ ಶಿಷ್ಯನಂ ಕೃತಕೃತ್ಯನಂ ಮಾಡಿದ ಶ್ರೀಗುರುವಿಂಗೆ ನಮೋ ನಮಃ ಎಂದು ಬದುಕಿದನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನಷ್ಟು ... -->