ಅಥವಾ

ಒಟ್ಟು 35 ಕಡೆಗಳಲ್ಲಿ , 20 ವಚನಕಾರರು , 34 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಜ್ಞಾನವೆಂಬ ಭಾವವು ಗುರುವಿನಲ್ಲಿ ಸಾಹಿತ್ಯವು. ಜ್ಞಾನವೆಂಬ ಭಾವವು ಶಿಷ್ಯನಲ್ಲಿ ಸಾಹಿತ್ಯವು. ಮನವೆಂಬ ಭಾವವು ಲಿಂಗದಲ್ಲಿ ಸಾಹಿತ್ಯವು. ಲಿಂಗಕ್ಕೆ ಮಜ್ಜನ ಮಾಡಲಾಗದು, ಅದೇನು ಕಾರಣ ? ಮನವೆಂಬ ಲಿಂಗವು ಭಾವದಲ್ಲಿ ಸಾಹಿತ್ಯವಾದ ಕಾರಣ. ಲಿಂಗಕ್ಕೆ ಗಂಧ ಧೂಪ ನಿವಾಳಿಯ ಕುಡಲಾಗದು, ಅದೇನು ಕಾರಣ ?
--------------
ಚನ್ನಬಸವಣ್ಣ
ಶರಣ ಲಿಂಗಸಮರಸವಾಗಿ ಆಚರಿಸುವ. ಶರಣನ ಲಿಂಗ ಬ್ಥಿನ್ನವಾಗಿ ಓಸರಿಸಿಹೋದರೆ ನೋಡಿ, ಅರಸಿ ಸಿಕ್ಕಿದ ಸಮಯದಲ್ಲಿ ಆ ಲಿಂಗವ ಪರೀಕ್ಷಿಸಿ ನೋಡುವುದು. ಆರು ಸ್ಥಾನಂಗಳಲ್ಲಿ ಭಿನ್ನವಿಲ್ಲದಿರ್ದಡೆ ಧರಿಸಿಕೊಂಬುದು. ಸರ್ವಮಾಹೇಶ್ವರರು ನೋಡಿ ಶಂಕೆಯುಳ್ಳಡೆ ಬಿಡುವುದು. ಅದೆಂತೆಂದಡೆ : ಶರಣನ ಸಂಕಲ್ಪ ಸನ್ಮತ ತನ್ನದೆಂಬುದೆ ದಿಟವೆಂದು ತಾ ನಿಶ್ಚೈಸಿ ತೆತ್ತಿಗರಾದ ಸರ್ವಮಾಹೇಶ್ವರರು ಮಂತ್ರಬೋಧನೆಯ ಕರ್ಣದಲ್ಲಿ ಬೋದ್ಥಿಸಬೇಕಲ್ಲದೆ ಆ ಲಿಂಗಧ್ಯಾನಾರೂಢನಪ್ಪಾತಂಗೆ ಧೂಪ ದೀಪ ಅಂಬರಗಳೆಂಬ ಬಂಧನವೈಕ್ಯವಂ ಮಾಡಲಾಗದು. ಮಾಡಿದಡೆ ಜ್ಞಾನಿಗಳೊಪ್ಪರು. ಅದು ಕಾರಣವಾಗಿ ಶಿವಧ್ಯಾನ ನಿಶ್ಚಿಂತವ ಮಾಡಿದ ಕಾರಣ ಅವರ ತೆತ್ತಿಗರಲ್ಲವೆಂಬೆ, ದಿಟ ಕಾಣಾ ನೀ ಸಾಕ್ಷಿ ನಿಮ್ಮಾಣೆನಿಮ್ಮಅರ್ಧಾಂಗಿಯಾಣೆ ಅಮರಗುಂಡದ ಮಲ್ಲಿಕಾರ್ಜುನಾ |
--------------
ಪುರದ ನಾಗಣ್ಣ
ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ. ಧೂಪ ಪರಿಮಳವಲ್ಲ, ಕಂಚು ಬೆಳಗಲ್ಲ, ಸಯಧಾನ ಅರ್ಪಿತವಲ್ಲ ! ಅದೆಂತೆಂದಡೆ: ಸಜ್ಜನವೆ ಮಜ್ಜನ, ಸತ್ಯಸದಾಚಾರವೆ ಪತ್ರೆ ಪುಷ್ಪ. ಅಷ್ಟಮದಂಗಳ ಸುಟ್ಟುದೆ ಧೂಪ, ನಯನವೆ ಸ್ವಯಂ ಜ್ಯೋತಿ, ಪರಿಣಾಮವೆ ಅರ್ಪಿತ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪೂಜೆಯಾಯಿತ್ತದೇನೊ ? ಪೂಜೆಯ ಮೇಲೆ ಸಿಂಹಾಸನವಿದೇನೊ ? ಧೂಪ ದೀಪ ನಿವಾಳಿ ಇದೇನೊ ? ತಳದಲ್ಲಿ ಜ್ಯೋತಿ ಮೇಲೆ ಪ್ರಣತೆ ! ಕಳಸದ ಮೇಲಣ ನೆಲಗಟ್ಟು ಕಂಡು ನೋಡಿ ಬೆರಗಾದೆ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ಎನ್ನ ಹೃದಯಕಮಲ ಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಎನ್ನ ಪ್ರಾಣೇಶ್ವರಂಗೆ_ ಎನ್ನ ಕ್ಷಮೆಯೆ ಅಭಿಷೇಕ, ಎನ್ನ ಪರಮವೈರಾಗ್ಯವೆ ಪುಷ್ಪದಮಾಲೆ ಎನ್ನ ಸಮಾಧಿಸಂಪತ್ತೆ ಗಂಧ, ಎನ್ನ ನಿರಹಂಕಾರವೆ ಅಕ್ಷತೆ, ಎನ್ನ ಸದ್ವಿವೇಕವೆ ವಸ್ತ್ರ, ಎನ್ನ ಸತ್ಯವೆ ದಿವ್ಯಾಭರಣ ಎನ್ನ ವಿಶ್ವಾಸವೆ ಧೂಪ, ಎನ್ನ ದಿವ್ಯಜ್ಞಾನವೆ ದೀಪ, ಎನ್ನ ನಿಭ್ರಾಂತಿಯೆ ನೈವೇದ್ಯ, ಎನ್ನ ನಿರ್ವಿಷಯವೆ ತಾಂಬೂಲ ಎನ್ನ ವರಿõ್ಞನವೆ ಘಂಟೆ, ಎನ್ನ ನಿರ್ವಿಕಲ್ಪತೆಯೆ ಪ್ರದಕ್ಷಿಣೆ, ಎನ್ನ ಶುದ್ಧಿಯೆ ನಮಸ್ಕಾರ, ಎನ್ನ ಅಂತಃಕರಣದಿಂದ ಮಾಡುವ ಸೇವೆಯೆ ಉಪಚಾರಂಗಳು_ ಈ ಪರಿಯಲ್ಲಿ ಎಮ್ಮ ಗುಹೇಶ್ವರಲಿಂಗಕ್ಕೆ ಪ್ರಾಣ (ಲಿಂಗ) ಪೂಜೆಯೆ ಮಾಡಿ ಬಾಹ್ಯಕ್ರೀಯ ಮರೆದನು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಎನ್ನಂಗದಲ್ಲಿ ನಿಮಗೆ ಮಜ್ಜನ, ಎನ್ನ ತುರುಬಿನಲ್ಲಿ ನಿಮಗೆ ಕುಸುಮ ಪೂಜೆ ಎನ್ನ ನೇತ್ರದಲ್ಲಿ ನಿಮಗೆ ನಾನಾರೂಪು ವಿಚಿತ್ರ ನೋಟ. ಎನ್ನ ಶ್ರೋತ್ರದಲ್ಲಿ ನಿಮಗೆ ಪಂಚ ಮಹಾವಾದ್ಯದ ಕೇಳಿಕೆ. ಎನ್ನ ನಾಸಿಕದಲ್ಲಿ ನಿಮಗೆ ಸುಗಂಧ ಧೂಪ ಪರಿಮಳ. ಎನ್ನ ಜಿಹ್ವೆಯಲ್ಲಿ ನಿಮಗೆ ಷಡುರಸಾನ್ನ ನೈವೇದ್ಯ. ಎನ್ನ ತ್ವಕ್ಕಿನಲ್ಲಿ ನಿಮಗೆ ವಸ್ತ್ರಾಭರಣಾಲಂಕಾರ ಪೂಜೆ. ಎನ್ನ ಆನಂದವೆಂಬ ಸಜ್ಜೆಗೃಹದಲ್ಲಿ ನೀವು ಸ್ಪರುಸನಂಗೈದು ನೆರೆದಿಪ್ಪಿರಾಗಿ, ನಾನು ನೀನೆಂಬೆರಡಳಿದು, ತಾನು ತಾನಾದ ಘನವನೇನೆಂಬೆ ಗುಹೇಶ್ವರಯ್ಯಾ.
--------------
ಅಲ್ಲಮಪ್ರಭುದೇವರು
ಪಾದೋದಕ ಪ್ರಸಾದಗಳೆಂದೆಂಬಿರಿ, ಪಾದೋದಕ ಪ್ರಸಾದದ ಬಗೆಯ ಪೇಳ್ವೆ. ಗದ್ದುಗೆಯ ಮೇಲೆ ಗದ್ದುಗೆಯ ಹಾಕಿ, ಜಂಗಮಲಿಂಗಿಗಳ ಕರತಂದು ಕುಳ್ಳಿರಿಸಿ, ಧೂಪ ದೀಪ ಪತ್ರಿ ಪುಷ್ಪದಿಂದ ಪಾದಪೂಜೆಯ ಮಾಡಿ, ಕೆರೆ ಬಾವಿ ಹಳ್ಳ ಕೊಳ್ಳ ನದಿ ಮೊದಲಾದವುಗಳ ನೀರ ತಂದು- ಬ್ರಹ್ಮರಂಧ್ರದಲ್ಲಿರುವ ಸತ್ಯೋದಕವೆಂದು ಮನದಲ್ಲಿ ಭಾವಿಸಿ, ಆ ಜಂಗಮದ ಉಭಯಪಾದದ ಮೇಲೆರೆದು, ಪಾದೋದಕವೇ ಪರಮತೀರ್ಥವೆಂದು ಲಿಂಗ ಮುಂತಾಗಿ ಸೇವಿಸಿ, ನವಖಂಡಪೃಥ್ವಿಯಲ್ಲಿ ಬೆಳೆದ ಹದಿನೆಂಟು ಜೀನಸಿನ ಧಾನ್ಯವ ತಂದು, ಉದಕದಲ್ಲಿ ಹೆಸರಿಟ್ಟು, ಅಗ್ನಿಯಲ್ಲಿ ಪಾಕವಮಾಡಿ, ತಂದು ಜಂಗಮಕ್ಕೆ ಎಡೆಮಾಡಿ, ಜಂಗಮವು ತನ್ನ ಲಿಂಗಕ್ಕೆ ಅರ್ಪಿಸಿ ಸೇವಿಸಿದಬಳಿಕ ತಾವು ಪ್ರಸಾದವೇ ಪರಬ್ರಹ್ಮವೆಂದು ಭಾವಿಸಿ, ಕೊಂಡು ಸಲಿಸುವರಯ್ಯ. ಇಂತೀ ಕ್ರಮದಿಂದ ಕೊಂಬುದು ಪಾದೋದಕಪ್ರಸಾದವಲ್ಲ. ಇಂತೀ ಉಭಯದ ಹಂಗು ಹಿಂಗದೆ ಭವಹಿಂಗದು, ಮುಕ್ತಿದೋರದು. ಮತ್ತಂ, ಹಿಂದಕ್ಕೆ ಪೇಳಿದ ಕ್ರಮದಿಂದಾಚರಿಸಿ, ಗುರುಲಿಂಗಜಂಗಮದಲ್ಲಿ ಪಾದೋದಕ ಪ್ರಸಾದವ ಸೇವಿಸಬಲ್ಲವರಿಗೆ ಪ್ರಸಾದಿಗಳೆಂಬೆ. ಇಂತಪ್ಪವರಿಗೆ ಭವ ಹಿಂಗುವದು, ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಈ ಪಾದೋದಕದ ಭೇದವ ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಖ್ಯವಾದ ಏಳುನೂರೆಪ್ಪತ್ತು ಪ್ರಮಥಗಣಂಗಳು ಬಲ್ಲರಲ್ಲದೆ ಮಿಕ್ಕಿನ ಜಡಮತಿ ಕಡುಪಾತಕರಾದ ಭಿನ್ನಭಾವ ಜೀವಾತ್ಮರೆತ್ತ ಬಲ್ಲರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನ ಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅರ್ಚನೆ ಪೂಜನೆ ನೇಮವಲ್ಲ; ಮಂತ್ರತಂತ್ರ ನೇಮವಲ್ಲ; ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ. ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ
--------------
ಸತ್ಯಕ್ಕ
ಶೈವಸಿದ್ಧಾಂತಿಗಳೆಂಬ ಅಬದ್ಧ ಭವಿಗಳ ಮುಖವ ನೋಡಲಾಗದು. ಅದೇನು ಕಾರಣವೆಂದೊಡೆ : ಸಾಂಗೋಪಾಂಗ ಶುದ್ಧಶರೀರಿಯಾಗಿ ಉನ್ನತಾಸನ ಗದ್ದುಗೆಯಲ್ಲಿ ಕುಳಿತು ಕಣ್ಣುಮುಚ್ಚಿ ಅಂತರಂಗದಲ್ಲಿ ಪರಮಾತ್ಮನ ಕಳೆಯ ಧ್ಯಾನಿಸಿ ಮನಸ್ಸಿನಲ್ಲಿ ಕಟ್ಟಿ ದೃಷ್ಟಿಗೆ ತಂದು, ಆ ದೃಷ್ಟಿಯಿಂದ ಪುಷ್ಪದಲ್ಲಿ ತುಂಬಿ ಮೃತ್ತಿಕೆ ಪಾಷಾಣಾದಿ ನಾನಾ ತರಹದ ಲಿಂಗಾಕಾರದ ಮೂರ್ತಿಯ ಸ್ಥಾಪಿಸಿ, ದೇವರೆಂದು ಭಾವಿಸಿ, ಜಲ ಗಂಧ ಅಕ್ಷತೆ ಪುಷ್ಪ ಧೂಪ ದೀಪ ನೈವೇದ್ಯ ತಾಂಬೂಲಾದಿ ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನೆ ಮಾಡಿ, ಆ ಪೂಜಾಂತ್ಯದಲ್ಲಿ ಎನ್ನ ಮಲಿನ ದೇಹದಲ್ಲಿ ನೀನು ನಿರ್ಮಲವಾದ ವಸ್ತುವು ಇರಬೇಡ ಹೋಗೆಂದು ತನ್ನ ದೇವರ ಬಾವಿ ಕೆರೆ ಹಳ್ಳ ಕೊಳ್ಳಾದಿ ಸ್ಥಾನಂಗಳಲ್ಲಿ ಹಾಕಿ ಬಿಡುವ ಶಿವದ್ರೋಹಿಗಳಿಗೆ ಕುಂಭೀಪಾತಕ ನಾಯಕ ನರಕ ತಪ್ಪದಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಬಳಿಕ ನಿಷ್ಕಾಮನಾದ ಮೋಕ್ಷಾಧಿಕಾರಿಗಭ್ಯಂತರದಲ್ಲಿ ಮುಖ್ಯಮಾಗಿ ಜ್ಞಾನ ಮಯನಾದ ಪೂಜೆ ಕತ್ರ್ಯವ್ಯಮಾ ಪೂಜೋಪಚಾರಂಗಳಲ್ಲಿ ಉಪಚಾರಮಂ ಉಪಚಾರ್ಯಮಾದ ದೇವತೆಯ ಗುಣಂಗಳನಾರೋಪಿಸಿ ಮಾಡಲು ತಕ್ಕು ದದೆಂತೆಂದೊಡೆ :ಮೊದಲು ತದನಂತರದಲ್ಲಿ ಶಿವಧರ್ಮವೆ ಕಂದ, ಸುಜ್ಞಾನವೆ ನಾಳ, ಅಷ್ಟಮಹ ದೈಶ್ವರ್ಯವೆ ದಳ, ರುದ್ರೇಶ್ವರಾದಿಕವೆ ಕೇಸರ, ವೈರಾಗ್ಯವೆ ಕರ್ಣಿಕೆಗಳಾಗಿ ಚಂದ್ರಪ್ರಭಾಮಯವೆನಿಸಿ ಮೆರೆವ ಹೃದಯಕಮಲದ ಸೋಮ ಸೂರ್ಯಾಗ್ನಿ ಮಂಡಲತ್ರಯದ ಮಧ್ಯದಲ್ಲಿ ಸತ್ತೆಂಬ ದಿವ್ಯಮೂರ್ತಿಯಿಂ, ಚಿತ್ತೆಂಬ ಕಾಯ ಕಾಂತಿಯಿಂ, ಆನಂದವೆಂಬ ಲಾವಣ್ಯದಿಂ, ತತ್ವ ಪರಿಕಲ್ಪಿತಮಾ ದಾಭರಣಾಯುಧಾದಿಗಳಿಂದಲಂಕೃತ ಮಾಗಿ, ಸ್ಫಟಿಕದೊಳಗಣ ದೀಪದಂತೆ ಒಳಹೊರಗೆ ಬೆಳಗುತ್ತಿರ್ದೀಶ್ವರನಂ ಪರಿಭಾವಿಸಿ ಬಳಿಕ ಸರ್ವಾಧಾರ ನೀಶ್ವರನೆಂಬ ಬುದ್ಧಿಯೆ ಆಸನ, ಪರಮಾತ್ಮನು ಪರಿಪೂರ್ಮನೆಂಬ ಮತಿ[ಯೆ] ಆವಾಹನ, ಜಗಕೆಲ್ಲಂ ಶಿವನ ಶ್ರೀಪಾದವೆಂಬ ತಿಳಿವೆ ಪಾದ್ಯಂ, ಸುಖಾಂಬುಧಿ ಶಂಭುವೆಂಬನುಸಂಧಾನವೆ ಅಘ್ರ್ಯ, ಪರಮಪವಿತ್ರ ಸ್ವರೂಪನಭವನೆಂಬರಿವೆ ಆಚಮನೀಯ, ನಿತ್ಯನಿರ್ಮಳ ನೀಶ್ವರನೆಂಬುಪಲಬ್ದಿಯೆ ಸ್ನಾನ, ಜಗವೆಲ್ಲವನತಿ ಕ್ರಮಿಸಿರ್ಪ ಶುದ್ಧವಿದ್ಯೆಯ ವಸ್ತ್ರ, ತ್ರಿಗುಣಾಗಮಾತೀತಮಾದ ಜ್ಞಾನವೆ ಯಜ್ಞ ಸೂತ್ರ, ಚೈತನ್ಯವೆ ಜಗದಲಂಕಾರಮೆಂಬ ಪ್ರತಿಭೆಯ ಆಭರಣ, ಶುದ್ಧಚಿಚ್ಛಕ್ತಿಯೆ ಅನುಲೇಪನ, ಕಾರುಣ್ಯವೆ ಅಕ್ಷತೆ, ಪ್ರಣವಾತ್ಮಕ ಸತ್ಯವಚನವೆ ಪುಷ್ಪ, ವಿಷಯ ವಾಸನಾವಿಲಯವೆ ಧೂಪ, ಜಗದ್ವರ್ತಿ ವಿಡಿದುಜ್ವಲಿಪ ಪರಂಜ್ಯೋತಿಯೆ ದೀಪ, ಜಗವೆಲ್ಲಮಂ ಕಬಳೀಕರಿಸಿಕೊಂಡಿಪ್ಪಾತ್ಮನೆ ನಿತ್ಯತೃಪ್ತನೆಂಬ ಸಂವಿತ್ತೇ ನೈವೇದ್ಯ, ತ್ರಿಗುಣಂಗಳ ನೊಳಕೊಂಡು ನಿಂದ ಜ್ಞಪ್ತಿಯೆ ತಾಂಬೂ, ಸೋಹಂ ಭಾವದಾವೃತ್ತಿಯೆ ಪ್ರದಕ್ಷಿಣ, ಸಮಸ್ತ ತತ್ತ್ವಂಗಳನತಿಕ್ರಮಿಸಿನಿಂದ ನಿಜವೆ ನಮಸ್ಕಾರ, ಶಿವೈಕ್ಯಸ್ಥಿತಿಯೆ ವಿಸರ್ಜನವೆಂಬ ಉಪಚಾರಂಗಳಿಂದಂತಃಪೂಜೆಯಂ ರಚಿಸೆಂದೊರೆದಿರಯ್ಯಾ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ನಿತ್ಯಾನಂದ ಸಂವಿದಾಕಾರ ಜ್ಯೋತಿರ್ಲಿಂಗಮೂರ್ತಿಯಾದ ಶಿವನು ಜಲ ಗಂಧ ಅಕ್ಷತೆ ಪತ್ರೆ ಪುಷ್ಪ ಧೂಪ ದೀಪ ನೈವೇದ್ಯ ತಾಂಬೂಲಂಗಳಿಂದ ಪೂಜೆ ಮಾಡುವ ಪೂಜಕರ ಭಾವಕ್ಕೆ ನಿಲುಕವನಲ್ಲ ನೋಡಾ. ಮತ್ತೆಂತೆಂದಡೆ: ಭಾವವ ಬಲಿದು ನೆನಹ ನೇತಿಗೊಳಿಸಿ, ಜ್ಞಾನಪೂಜೆಯ ಮಾಡುವ ಮಹಂತರಿಗೆ ಸಿಲ್ಕುವ, ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.
--------------
ಸ್ವತಂತ್ರ ಸಿದ್ಧಲಿಂಗ
ಕಲ್ಲುದೇವರ ನಂಬಿದವರೆಲ್ಲ ಕಲಿಯುಗದ ಕತ್ತಲೆಯೊಳಗಾಗಿ ಕತ್ತೆಗಳಾಗಿ ಹೋದರು. ಅದೇನು ಕಾರಣವೆಂದರೆ: ತಮ್ಮ ದೇವರು ಇಕ್ಕಿದ ಓಗರವನುಣ್ಣಲೊಲ್ಲದೆ, ಒಡನೆ ಮಾತಾಡದು. ಗುಡಿಯ ಕಲ್ಲು ಮೇಲೆ ಬಿದ್ದರೆ ಒಡೆದು ಹಾಳಾಗಿ ಹೋಗುತ್ತದೆ. ಇಂತಪ್ಪ ಕಲ್ಲ ಪೂಜಿಸಿ, ಸಲ್ಲದೆ ಹೋದರು. ಅದಂತಿರಲಿ, ಮಣ್ಣ ದೇವರು ಎಂದು ಪೂಜಿಸಿ, ಮಜ್ಜನಕ್ಕೆ ನೀಡಲಮ್ಮದೆ, ಲಜ್ಜೆಗೆಟ್ಟು ನಾಯಾಗಿ ಬೊಗುಳಿ ಹೋದರು. ಆದಂತಿರಲಿ, ಮರನ ದೇವರೆಂದು ಪೂಜಿಸಿ ಧೂಪ ದೀಪವ ಮುಂದಿಡಲಮ್ಮರು. ಅದೊಂದು ವ್ಯಾಪಾರಕ್ಕೊಳಗಾಗಿ, ತಾಪತ್ರಯಕ್ಕೆ ಸಿಲ್ಕಿ ಪಾಪಿಗಳಾಗಿ ಸತ್ತುಹೋದರು. ಸಲ್ಲದು ಶಿವನಲ್ಲಿ. ಎಮ್ಮ ಭಕ್ತರಿಗೆ ಈ ಪರಿಯಲ್ಲ ಕೇಳಿರಣ್ಣಾ. ಇದೆಲ್ಲ ಪಾಪಿಗಳ ಹಾಗೆ, ಎನ್ನ ದೇವ ನಡೆವ, ನುಡಿವ, ಇಕ್ಕಿದರುಂಬ, ಕೊಟ್ಟರೆ ತಕ್ಕೊಂಬ, ಪೂಜಿಸಿದರೆ ಪೂಜೆಗೊಂಬ, ಅನೇಕ ಪೂಜೆಯಲ್ಲಿ. ತನ್ನ ನಂಬಿದ ಭಕ್ತರಿಗೆ-ಬುದ್ಧಿಯ ಹೇಳುವ, ಶುದ್ಧಾತ್ಮನ ತೋರುವ. ತಾ ಮುದಿನಲ್ಲಿ ಸಜ್ಜನ ಸದ್ಭಕ್ತರಲ್ಲಿ ಇದ್ದೂ ಇಲ್ಲದಂತಿಪ್ಪ. ಪ್ರಸಿದ್ಧ ಜಂಗಮಲಿಂಗವ ಪೂಜಿಸಿ, ಸ್ವಯಲಿಂಗಿಗಳಾದರು ಎಮ್ಮ ಶರಣರು. ಅವರು ಹೋದ ಹಾದಿಯ ನೋಡಿದರೆ, ಎನಗೊಂದು ಹಾದಿ ಸಿಕ್ಕಿತ್ತು. ಆ ಹಾದಿಗೊಂಡು ಹೋಗಿ ಅವರ ಪಾದವಕಂಡು, ಕೆಟ್ಟು ಬಟ್ಟಬಯಲಾದೆ ನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಜಲ ಗಂಧ ಅಕ್ಷತೆ ಪುಷ್ಪ ಧೂಪ ದೀಪ ನೈವೇದ್ಯ, ತಾಂಬೂಲ ಪಂಚವರ್ಣದ ಪತ್ರೆ ಪುಷ್ಪದ ಪೂಜೆಯ ರಚನೆಯ ಮಾಡುವೆನಯ್ಯಾ. ಅಷ್ಟವಿಧಾರ್ಚನೆ ಷೋಡಶೋಪಚಾರ ಮುಖ್ಯವಾಗಿ ಮಾಡುವೆನಯ್ಯಾ. ಸಕಲಕ್ಷೇಮದಿಂದ ನಡೆದು ನಿಮ್ಮಲ್ಲಿಗೆ ಸಾರುವೆನು ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಅನಂತರದಲ್ಲಿ ದಾಂತ್ಯಾದಿ ಸಾಧನಸಂಪನ್ನಾಗಿ, ಶ್ರೀಗುರುವಿಂ ಶಾಸನೀಯ ನಪ್ಪುದರಿಂ ಶಿಷ್ಯನಾದಾತ್ಮನು ಶುಭಕಾಲದೇಶಾದಿಗಳಂ ಪರೀಕ್ಷಿಸಿ ಬಳಿಕಾ ಚಾರ್ಯ ಸಂಪ್ರದಾಯಸಿದ್ಧನಾದ ಸಕಲಸದ್ಗುಣಸಹಿತನಾದ ಶ್ರೀಗುರುವನೆಯಿ, ಮತ್ತಮಾ ಗುರುವಿನನುಮತದಿಂ ಶಿವಪೂಜಾ ಪಾರಾಯಣರಾದ ಕೀರ್ತಿಮಯ ರಾದ ನಾಲ್ವರು ಋತ್ವಿಕ್ಕುಗಳಂ ಸ್ನಾನಧವಲಾಂಬರ ಆಭರಣ ಪುಷ್ಪಾದಿ ಗಳಿಂದಲಂ ಕರಿಸಿ, ಬಳಿಕಾ ಶ್ರೀಗುರುವಿನಾಜ್ಞೆಯಿಂ ತಾನಾ ರಾತ್ರೆಯಲ್ಲಿ, ಕ್ಷೀರಾಹಾರಿಯಾಗಿರ್ದು, ಮೇಲೆ ಪ್ರಭಾತಸಮಯದಲ್ಲಿ ದಂತಧಾವನಂಗೆಯ್ದು, ಮಂಗಲಸ್ನಾನಂ ಮಾಡಿ ಧವಲಾಂಬರವನುಟ್ಟು ಪೊದೆದು, ಭಸಿತೋದ್ಧೂಳನಂ ರಚಿಸಿ, ತ್ರಿಪುಂಡ್ರ ಧಾರಣಮಂ ವಿಸ್ತರಿಸಿ, ರುದ್ರಾಕ್ಷಮಾಲೆಗಳಂ ಧರಿಸಿ, ಸುವರ್ಣಾಭರಣಾದಿಗಳಿಂ ಸಿಂಗರಂಬಡೆದು, ಬಳಿಕಾಚಾರ್ಯನ ಸವಿೂಪಕ್ಕೆ ಬಂದು, ಭಯಭಕ್ತಿಯಿಂದಷ್ಟಮಂತ್ರಪೂರ್ವಕದಿಂ ವಿನಯವಿನಮಿತನಾಗಿ ಸುವರ್ಣ ಪುಷ್ಪಾದಿಗಳಿಂ ವಿತ್ತಾನುಸಾರಮಾಗಿ ಗುರುಪೂಜನಂಗೆಯ್ದು ಮರಳಿ ಗಂಧ ಪುಷ್ಪಾದಿಗಳಿಂ ಋತ್ವಿಕ್ಕುಗಳಂ ಭಜಿಸಿ, ಮೇಲೆ ಶ್ರೀಗುರು ಮುಖ್ಯಸಕಲಮಾಹೇಶ್ವರರಂ ವಂದಿಸಿ ವಿಭೂತಿ ವೀಳೆಯಂಗಳಂ ಸಮರ್ಪಿಸಿ, ಬಳಿಕ ಖನನ ದಹನ ಶೋಧನ ಸಂಪ್ರೋಕ್ಷಣ ಮರ್ದನ ಲೇಪನವೆಂಬ ಷಟ್ಕಮರ್ಂಗಳಿಂ ಸಾರಣೆ ಕಾರಣೆ ತಳಿರತೋರಣ ಕುಸುಮತೋರಣ ಸರವಿಸರ ಪಳವಳಿಗೆ ಧೂಪ ಧೂಮ್ನಾದಿಗಳಿಂ ಪರಿಶೋಭೆವಡೆದು, ಮನೋಹರಮಾದ ದೀಕ್ಷಾಮಂಟಪದಲ್ಲಿ ಗೋಚರ್ಮ ಮಾತೃಭೂಮಿಯಂ ಚೌಕಮಾಗಿ, ಗೋರೋಜನ ಗೋಮಯ ಗೋಮೂತ್ರ ಗೋದಧಿ ಘೃತ ಗೋಕ್ಷೀರಯೆಂಬ ಷಟ್ಸಮ್ಮಾರ್ಜನಂಗೆಯು, ಬಳಿಕಾ ಚೌಕಮಧ್ಯದಲ್ಲಿ ಪ್ರವಾಳ ಮೌಕ್ತಿಕ ಶುಭ್ರ ಪಾಷಾಣ ಸುವ್ಯರ್ಣ ಶ್ವೇತಾಭ್ರಕ ತಂಡುಲಾದಿಗಳ ಚೂರ್ಣಂಗಳಿಂದ ಷ್ಟದಳಕಮಲಮಂ ರಚಿಸಿ, ಮತ್ತದರಾ ವಿವರ:ಶಂಖ ಚಕ್ರ ಶೂಲ ಡಮರುಗ ಪರಶು ಘಂಟೆ ಛತ್ರ ಚಾಮರಮೃಷಭ ಚರಣಾದಿ ವಿಚಿತ್ರವರ್ಣಕಮಂ ತುಂಬುತ್ತದರ ಮೇಲೆ ಎಳ್ಳು ಜೀರಿಗೆ ಗೋದುವೆ ಅಕ್ಕಿ ಉದ್ದುಗಳೆಂಬ ಪಂಚಧಾನ್ಯವನಾದರೂ ಕೇವಲ ತಂಡುಲವನಾದರೂ ಮೂವತ್ತೆರಡಂಗುಲ ಪ್ರಮಾಣಿನ ಚತುರಸ್ರಮಾಗಿ ಹರಹುತ್ತದರ ಮೇಲೆ ತೀರ್ಥಾಂಬುಪೂರ್ಣ ಮಾದ ಸುವರ್ಣಾದಿ ನವೀನ ಪಂಚಕಳಶಂಗಳಂ ಪೂರ್ವದಕ್ಷಿಣ ಪಶ್ಚಿಮ ಉತ್ತರ ಮಧ್ಯ ಕ್ರಮದಿಂದಾಚಾರ್ಯನೆ ಸ್ಥಾಪಿಸುತ್ತಾ, ಕಳಶಂಗಳಂ ಬೇರೆ ಬೇರೆ ನೂತನ ವಸ್ತ್ರಂಗಳಿಂ ಸುತ್ತಿ, ನವಪಂಚತಂತುಗಳಿಂ ಪರಿವೇಷ್ಟಿಸಿ ಸುವರ್ಣಾದಿನಗಳನವ ರೊಳಿರಿಸಿ, ಬಳಿಕ್ಕಾಮ್ರಪಲ್ಲವ ದೂರ್ವಾಂಕುರ ಪೂಗ ಕುಸುಮ ನಾಗವಳಿ... (ಇಲ್ಲಿ ಒಂದು ಗರಿ ಕಳೆದುಹೋಗಿದೆ).
--------------
ಶಾಂತವೀರೇಶ್ವರ
ಕೊಟ್ಟ ದ್ರವ್ಯವನು ತಮ್ಮ ತಮ್ಮ ಲಿಂಗಕ್ಕೆ ಸಮರ್ಪಣೆಯ ಮಾಡಿಕೊಂಡು, ತನು ಭೋಗಾದಿ ಭೋಗಂಗಳ ಭೋಗಿಸುತ್ತಿರ್ದರಲ್ಲಾ ಹೊನ್ನಪರಿಯಾಣಂಗಳಲ್ಲಿ. ಅನಂತಪರಿಯ ಗುಗ್ಗುಳ ಧೂಪ ದಶಾಂಗವೆಸೆಯಲು, ಭರದಿಂದ ನಡೆತಂದು ಶೂನ್ಯಸಿಂಹಾಸನದ ಮುಂದೆ ನಿಂದಿರ್ಪರು. ಪಂಚಮಹಾವಾದ್ಯ ಮೊಳಗುತ್ತಿರಲು, ಅವರವರ ಕೈಯ ನಿವಾಳಿಗಳನೀಸಿಕೊಂಡು, ನಾಗಾಯವ್ವೆಗಳು ನಿಃಕಳಂಕ ಮಲ್ಲಿಕಾರ್ಜುನ ಪ್ರಭುವಿಂಗೆ ಆರತಿಯನೆತ್ತುತಿರ್ದರಲ್ಲಾ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->