ಅಥವಾ

ಒಟ್ಟು 12 ಕಡೆಗಳಲ್ಲಿ , 5 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂತೆಂಬ ಭಕ್ತ ಜಂಗಮಸ್ಥಲದ ಆದಿ ಅನಾದಿಯನರಿದು, ಮಾಯಾಭೋಗ ಮರೆದು, ಜಂಗಮಾರಾಧನೆಯಂ ಮಾಡಿ, ಘನಪಾದತೀರ್ಥವ ಪಡಕೊಂಬುವ ಶಿವಶರಣನು ಅನಿಮಿಷಾವಲೋಕನ ಪೂರ್ಣದೃಷ್ಟಿಯಿಂದ ಚಿತ್ಸೂರ್ಯ ಜ್ಯೋತಿರ್ಮಂಡಲಸಂಬಂಧವಾದ ಬಲದಂಗುಷ*ದ ಮೇಲೆ ಚತುರಂಗುಲಿಪ್ರಮಾಣದಿಂದ ಬಿಂದು ಬಿಂದುಗಳದುರಿದಂತೆ ನೀಡುವಾಗ, ಆ ಸ್ಥಾನದಲ್ಲಿ ತನ್ನ ದೀಕ್ಷಾಗುರು ಇಷ್ಟಲಿಂಗಮೂರ್ತಿಯ ಧ್ಯಾನಿಸುವುದು. ಅಲ್ಲಿ ನಾದಬಿಂದುಕಳೆ ಚಿನ್ನಾದಬಿಂದುಕಳೆಗಳ ದೀರ್ಘಬಿಂದುಗಳು ಕೂಡಿದಲ್ಲಿ ಮೂಲಷಡಕ್ಷರವೆನಿಸುವುದು. ಆ ಷಡಕ್ಷರಂಗಳ ಆರುವೇಳೆ ಘನಮನಮಂತ್ರವಾಗಿ ಅಲ್ಲಿಂದ ಚಿಚ್ಚಂದ್ರ ಅಖಂಡ ಜ್ಯೋತಿರ್ಮಂಡಲಸಂಬಂಧವಾದ ಎಡದಂಗುಷ*ದಮೇಲೆ ಮೊದಲಂತೆ ನೀಡುವಾಗ, ಆ ಸ್ಥಾನದಲ್ಲಿ ತನ್ನ ಶಿಕ್ಷಾಗುರು ಪ್ರಾಣಲಿಂಗಮೂರ್ತಿಯ ಧ್ಯಾನಿಸುವುದು. ಅಲ್ಲಿ ಸತ್ತುಚಿತ್ತಾನಂದನಿತ್ಯಪರಿಪೂರ್ಣವೆಂಬ ಪಂಚಾಕ್ಷರದೊಳು ದೀರ್ಘಬಿಂದು ಕೂಡಲಾಗಿ ಪರಮಪಂಚಾಕ್ಷರವೆನಿಸುವುದು. ಆ ಪರಮಪಂಚಾಕ್ಷರವು ಐದು ವೇಳೆ ಮನಮಂತ್ರಧ್ಯಾನವಾಗಿ ಅಲ್ಲಿಂದಚಿದಗ್ನಿ ಅಖಂಡಮಹಾಪರಿಪೂರ್ಣಜ್ಯೋತಿರ್ಮಂಡಲಸಂಬಂಧವಾದ ಉಭಯಾಂಗುಷ*ಮಧ್ಯದಲ್ಲಿ ನೀಡುವಂತೆ ನೀಡುವಾಗ್ಗೆ , ಆ ಸ್ಥಾನದಲ್ಲಿ ತನ್ನ ಮೋಕ್ಷಗುರು ಅನಾದಿಭಾವಲಿಂಗಮೂರ್ತಿಯ ಧ್ಯಾನಿಸುವುದು. ಅವಿರಳಮೂರ್ತಿ ಪರಾತ್ಪರ ಜ್ಯೋತಿರ್ಮಯ ಅಖಂಡಜ್ಯೋತಿರ್ಮಯ ಅಖಂಡ ಮಹಾಜ್ಯೋತಿರ್ಮಯ ನಿತ್ಯತೃಪ್ತ ನಿಃಕಳಂಕ ನಿಶ್ಶೂನ್ಯ ನಿರಾತಂಕವೆಂಬ ನವಮಾಕ್ಷರದೊಳಗೆ ದೀರ್ಘಬಿಂದು ಕೂಡಲಾಗಿ, ಅನಾದಿಮೂಲದೊಡೆಯ ನವಪ್ರಣಮಮಂತ್ರವೆನಿಸುವುದು. ಆ ಪ್ರಣಮಂಗಳಂ ಒಂದೆವೇಳೆ ಪರಿಪೂರ್ಣ ನಿಜದೃಷ್ಟಿಯಿಂದ ಉನ್ಮನಘನಮಂತ್ರವೆ ಧ್ಯಾನವಾಗಿ ಅಲ್ಲಿಂದ ಮಿಳ್ಳಿಯ ಮುಚ್ಚಿಟ್ಟು ದ್ರವವನಾರಿಸಿ, ನಿರವಯತೀರ್ಥವ ನಿರವಯಲಿಂಗಜಂಗಮಕ್ಕೆ ಸ್ಪರಿಶನತೃಪ್ತಿಯ ಸಮರ್ಪಿಸಿದ ಪರಿಣಾಮತೃಪ್ತರೆ ನಿರವಯಪ್ರಭು ಮಹಾಂತರೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಪರತರ ಪರಮ ಸಮರಸಸ್ವರೂಪವಾದ ತಾರಕಬ್ರಹ್ಮವು ಅಂತರ್ಲಕ್ಷ್ಯವೆಂದು ಬಹಿರ್ಲಕ್ಷ್ಯವೆಂದು ಮಧ್ಯಲಕ್ಷ್ಯವೆಂದು ತ್ರಿವಿಧಮಪ್ಪುದು. ಅದರಲ್ಲಿ ಮೊದಲು ಅಂತರ್ಲಕ್ಷ್ಯವೆಂತೆನೆ : ಮೂಲಾಧಾರದಿಂದೆ ಬ್ರಹ್ಮರಂಧ್ರ ಪರಿಯಂತರಮಾಗಿ ಕೋಟಿಮಿಂಚುಗಳಿಗೆ ಸದೃಶವಾದ ಬಿಂದುವನು ಮನಸ್ಸಿನಿಂದ ಧ್ಯಾನಿಸುವುದು. ಮತ್ತಂ, ಗೋಲಾಟಮಂಡಲವೆನಿಸುವ ಲಲಾಟದುಪರಿಭಾಗದಲ್ಲಿ ಮಿನುಗುತಿರ್ದ ನಕ್ಷತ್ರಾಕಾರವನು ಮನಸ್ಸಿನಿಂದೆ ಸ್ಮರಿಸುವುದು. ಮತ್ತಂ, ಶ್ರವಣಂಗಳೆರಡನು ಬೆರಳಿನಿಂದೆ ಮಿಗಿಲಾಗಿ ಒತ್ತಲಾಗಿ ಕಪಾಲಕುಹರದಲ್ಲಿ ಘಮುಘಮುಧ್ವಾನಸ್ವರೂಪಮಾದ ಪ್ರಣವಘೋಷವನಾಲಿಪುದು. ಮತ್ತಂ, ಲೋಚನಂಗಳ ಮಧ್ಯದ ಕರಿಯ ನಕ್ಷತ್ರರೂಪಮಂ ಲಕ್ಷಿಪುದೇ ಅಂತರ್ಲಕ್ಷ್ಯವಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಹಠಯೋಗ ಲಂಬಿಕಾಯೋಗ ಆತ್ಮಯೋಗ ಸಿದ್ಧಯೋಗ ಪಿಶಾಚಯೋಗ ಅಷ್ಟಾಂಗಯೋಗಂಗಳೆಂಬ ಷಡುವಿಧ ಕರ್ಮಯೋಗಂಗಳೊಳು ಶೋಷಣೆ, ದಾಹನೆ, ಪ್ಲಾವನೆ, ಚಾಲನೆ ಖಾಳಾಪಖಾಳಮಂ ಮಾಡಿ ತ್ರಿದೋಷಾದಿಗಳಂ ಪ್ರವರ್ತಿಸಲೀಯದೆ ಮಲಯುಗಮಂ ನೆಲೆಗೊಳ್ಳಲೀಯದೆ ಗಜಕರಣಂಗಳಿಂ ಪವನಧಾರಣೆಯಿಂ ಕಲ್ಪಯೋಗಂಗಳಿಂ ಮೂಲಿಕಾಬಂಧದಿಂ ಬಂಧಿಸಿ, ಘಟಮಂ ನಟಿಸುವುದು ಹಠಯೋಗ. ಪವನಾಭ್ಯಾಸಂಗಳಿಂದಭ್ಯಾಸಯೋಗ, ಕ್ರಮಕ್ರಮಂಗಳಿಂ ಜಿಹ್ವೆಯಂ ಬೆಳಸಿ ಹಠಸಮ್ಮಿಶ್ರದಿಂ ಷಡಾಧಾರದ ಪಶ್ಚಿಮಪಥವಿಡಿದು ಪ್ರಾಣಪವನನ ಮಸ್ತಕಕ್ಕೇರಿಸಿ ಜಿಹ್ವೆಯ ಸುಷುಮ್ನೆಯಲ್ಲಿಟ್ಟು ಸೋಮಪಾನಮಂ ಸೇವಿಸಿ ಸಪ್ತಸ್ಥಾನ ನವಚಕ್ರದಲ್ಲಿ ನಿಂದು ಮುಕ್ತ್ಯಂಬಿಕೆಯೊಡಗೂಡುನವುದು ಲಂಫಬಿಕಾಯೋಗ. ಆತ್ಮನಂ ಭೇದಿಸಿ ಪ್ರಾಣವಾಯು ನಾಡಿಗಳನರಿತು ಹಿಡಿವ ಭೇದಮಂ ತಿಳಿದು, ತೆಗೆವ ಬಿಗಿವ ಸಂಚಮಂ ಕಂಡು ಒಡ್ಡಿಯಾಣಬಂಧ ಜಾಳಾಂಧರಬಂಧ ಠಾಣಿಕಾಮುದ್ರೆ ಭ್ರೂಸಂಕೋಚ ಬ್ರಹ್ಮಸ್ಥಾನದುತ್ತರನಾಡಿಯಿಂದ ಆತ್ಮನನಾತ್ಮಲಿಂಗದಲ್ಲಿ ಸಂಯೋಗಮಾಡುವದಾತ್ಮಯೋಗ. ಅಂಜನಾಸಿದ್ಧಿ ಘುಟಿಕಾಸಿದ್ಧಿ ಶರೀರಸಿದ್ಧಿ ಪರಕಾಯಪ್ರವೇಶ ತ್ರಿಕಾಲಜ್ಞಾನ ದೂರಶ್ರವಣ ದೂರದೃಷ್ಟಿಯೊಳಗಾದ ಅಷ್ಟಮಹಾಸಿದ್ಧಿಯಂ ಪಡೆದು, ರಸಸಿದ್ಧಿ ಪಾಷಾಣಸಿದ್ಧಿ ಲೋಹಸಿದ್ಧಿ ವಯಸ್ತಂಭ ಸ್ವರವಂಚನೆ ಕಾಯವಂಚನೆ ವೇದಶಾಸ್ತ್ರಸಿದ್ಧಿ ಭರತಸಿದ್ಧಿ ಗಾಂಧರ್ವಸಿದ್ಧಿ ಕಿನ್ನರಸಿದ್ಧಿ ವಾಚಾಸಿದ್ಧಿ ಖೇಚರತ್ವ ಮಹೇಂದ್ರಜಾಲದೊಳಗಾದ Zõ್ಞಷಷ್ಟಿವಿದ್ಯಾಸಿದ್ಧಿ ಅಣಿಮಾದಿ ಮಹಿಮಾ ದಿ ಈಶಿತ್ವ ವಶಿತ್ವ ಪ್ರಾಪ್ತಿ ಪ್ರಾಕಾಮ್ಯವೆಂಬ ಅಷ್ಟೈಶ್ವರ್ಯಸಿದ್ಧಿ ವ್ಯಾಳಿ ಚರ್ಪಟಿ ಕೋರಾಂಟ ರತ್ನಘೋಷ ಭೂತನಾಥ ನಾಗಾರ್ಜುನ ಮಚ್ಚೇಂದ್ರ ಗೋರಕ್ಷ ಮಂಜಿನಾಥ ನವನಾಥ ಸಿದ್ಧರೊಳಗಾದ ಸಮಸ್ತ ಸಿದ್ಧಿಬುದ್ಧಿಗಳಿಂ ಲಿಂಗವನರಿಸಿ ಅಟ್ಟಿಮುಟ್ಟಿ ಹಿಡಿದೆಹೆನೆಂಬುದು ಸಿದ್ಧಯೋಗ. ಪಿಶಾಚತ್ವದಿಂ ತ್ರಿಭುವನಿಯಂ ಸೇವಿಸಿ ಅಮರಿಗಳಂ ಸೇವಿಸಿ ಅಮರೀ ಭ್ರಮರಾದೇವಿ ಅಮರೀ ತ್ರಿಪುರಾಂತಕೀ ಅಮರೀ ಕಾಲಸಂಹಾರೀ ಅಮರೀ ತ್ರೈಲೋಕ್ಯಸಾಧನೀ ಇಂತೆಂಬ ಶ್ರುತಿಗೇಳ್ದು, ವಜ್ರಿ ಅಮರಿಗಳನಂಗಲೇಪಂ ಮಾಡಿ ಶುಕ್ಲಮಂ ಸೇವಿಸಿ ಭೂತಸಂಕುಳಂಗಳೊಡನಾಡಿ ಅಜ್ಞಾನವಶದಿಂ ಲಿಂಗವನೇನೆಂದರಿಯದ ಕ್ಷೀಣವೃತ್ತಿಯ ಪಿಶಾಚತ್ವದಿಂದಿಪ್ಪುದು ಪಿಶಾಚಯೋಗ. ಹಿಂಸೆಯನುಳಿದ ±õ್ಞಚತ್ವದಿಂ ಬ್ರಹ್ಮಚರ್ಯದಿಂ ತತ್ವಂಗಳನಾಹ್ವಾನಿಸುತ್ತಿಪ್ಪುದು ಯಮಯೋಗ. ವಿವೇಕ ವಿಚಾರದಿಂ ತತ್ವಂಗಳನರಿತು ಆಚರಿಸಿ ಅಡಿುಟ್ಟು ನಡೆವುದು ನಿಯಮಯೋಗ. ಪದ್ಮಾಸನ ಸಿದ್ಧಾಸನ ಬದ್ಧಾಸನ ವಜ್ರಾಸನ ಮಯೂರಾಸನ ಕೂರ್ಮಾಸನ ಕಕ್ಕುಟಾಸನ ಅರ್ಧಾಸನ ವೀರಾಸನ ಶ್ಮಶಾನಾಸನ ಹಸ್ತಾಸನ ಮಸ್ತಕಾಸನ ಕುಠಾರಾಸನ ಸಿಂಹಾಸನ ಮಧ್ಯಲವಣಿ ಶಿರೋಲವಣಿಯೊಳಗಾದ ಆಸನಬಂಧಂಗಳಿಂದಾಚರಿಸುವುದಾಸನಯೋಗ. ತತ್ವ ಮೂವತ್ತಾರಕ್ಕೆ ಪ್ರಣವ ಮೂಲವೆಂದರಿತು ಷಡಾಧಾರಚಕ್ರಂಗಳ ಅಕ್ಷರವರ್ಣಂಗಳಿಂ ತಿಳಿದು ಮೇರಣ ಅಜನಾಳ ಬ್ರಹ್ಮಸ್ಥಾನ ತುರೀಯಾತೀತದ ಓಂಕಾರಮಪ್ಪ ಪ್ರಣವವನರಿವುದು ಪ್ರಾಣಾಯಾಮಯೋಗ. ಪ್ರತ್ಯಾಹಾರಯೋಗಕ್ರಮಗಳಿಂದ ಸತ್ಪ್ರಣವವನಾಹಾರಿಸುವುದು ಪ್ರತ್ಯಾಹಾರಯೋಗ. ಪ್ರಣವಕ್ಕೆ ಅತೀತವಾದ ಪರಶಿವಮೂರ್ತಿ ಮನದಲ್ಲಿ ಚಿಗುರ್ತು ಅಂತರಂಗದಲ್ಲಿ ಧ್ಯಾನಾರೂಢನಾಗಿ ಧ್ಯಾನಿಸುವುದು ಧ್ಯಾನಯೋಗ. ಆ ಪರಶಿವಮೂರ್ತಿಯೆ ಇಷ್ಟಲಿಂಗವೆಂಬ ಭಾವನೆಯಿಂದ ಅಷ್ಟವಿಧಾರ್ಚನೆ ಷೋಡಶೋಪಚರ್ಯಂಗಳಿಂದಿಷ್ಟಲಿಂಗಧಾರಣದಿಂದ ಇಪ್ಪುದು ಧಾರಣಯೋಗ. ಅಪ್ರಶಿಖಾಸ್ಥನದಿಂದುತ್ತರವಿಭಾಗೆಯ ಅಜಪೆಯಿಂದತ್ತಣ ಚಿತ್‍ಪ್ರಭೆಯಿಂದುಜ್ವಳತೇಜ ಸ್ವಯಂಪ್ರಕಾಶ ದಿವ್ಯತೇಜದಿಂದೊಪ್ಪಿಪ್ಪ ಮಹಾಘನ ಪರವಸ್ತುವನಿದಿರಿಟ್ಟೀಕ್ಷಿಸಿ ಆಮಹಾಪ್ರಕಾಶದಲ್ಲಿ ಒಡಗೂಡಿ ತಾನು ತಾನಾಗಿ ಜಗದ್ವಿಹರಣೀಯನೇನೆಂದರಿಯದ ಪರಮಕಾಷೆ*ಯ ಸಮಾಧಿಯಲ್ಲಿಪ್ಪುದು ಸಮಾಧಿಯೋಗ. ಇಂತಪ್ಪ ಅಷ್ಟಾಂಗವೊಳಗಾದ ಷಡುವಿಧಕರ್ಮಯೋಗಂಗಳಂ ಮೆಟ್ಟಿ ಚತುರ್ವಿಧಪದವಿಯಂ ಹೊದ್ದದೆ ಫಲಭೋಗಂಗಳಂ ಮುಟ್ಟದೆ ಖ್ಯಾತಿ ಲಾಭ ಪೂಜೆಯಂ ತಟ್ಟದೆ ಇಹಪರಂಗಳಂ ಸಾರದೆ, ಭವಬಂಧನಕ್ಕೆ ಬಾರದೆ ಗೆಲ್ಲ ಸೋಲಕ್ಕೆ ಹೋರದೆ, ತನುವಿನಿಚ್ಛೆಯಲ್ಲಿ ಸುಳಿಯದೆ ಮನದಿಚ್ಛೆಯಲ್ಲಿ ಹರಿಯದೆ, ಪ್ರಾಣನ ಸುಳುಹಿನಲ್ಲಿ ಸಿಕ್ಕದೆ ಪ್ರಕೃತಿವಶಕ್ಕೊಳಗಾಗದೆ, ಇಂದ್ರಿಯಂಗಳಿಗೆ ಮೈಯೊಡ್ಡದೆ ಸರ್ವಸಂದೇಹನಿವೃತ್ತಿಯಾಗಿ, ನಿಂದಲ್ಲಿ ನಿರಾಳ, ನಡೆದಲ್ಲಿ ನಿರ್ಗಮನಿ, ನುಡಿದಲ್ಲಿ ನಿಶ್ಶಬ್ದಿ, ಸುಳಿದಲ್ಲಿ ಒಡಲಿಲ್ಲದುಪಾಧಿಯರತು ಅಂಗವೆ ಲಿಂಗವಾಗಿ ಲಿಂಗವೆ ಪ್ರಾಣವಾಗಿ ಪ್ರಾಣವೆ ಪ್ರಸಾದವಾಗಿ, ಪ್ರಸಾದವೆ ಪರಿಪೂರ್ಣವಾಗಿ ನಿಜಲಿಂಗೈಕ್ಯವಾಗಿ ನಿಜಸುಖಸಂಬಂಧಿಯಾಗಿ ನಿಜಯೋಗ ಸನ್ನಿಹಿತವಾಗಿ ಕಾಯವಿದ್ದಂತೆ ಬಯಲಾಗಿಪ್ಪರಯ್ಯಾ ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ಶರಣರು.
--------------
ಆದಯ್ಯ
ಪರಬ್ರಹ್ಮದಿಂದ ಅಪರವ ಕಾಬುದು ಅಪರದಿಂದ ಪರಾಪರವ ಧ್ಯಾನಿಸುವುದು. ಧ್ಯಾನ ತದ್ದಾ ್ಯನವಾದಲ್ಲಿ ಮೂರ್ತಿಯ ನಿಜ ನಿಃಕಲಲೀಯ ಅದು ತ್ರಿವಿಧ ನಾಮನಷ್ಟ. ತ್ರಿವಿಧಾತ್ಮಸೂತಕ ನಾಶನ ಗೋಪತಿನಾಥ ವಿಶ್ವೇಶ್ವರಲಿಂಗವು ಅವಿರಳ ಸಂಬಂಧಿ.
--------------
ತುರುಗಾಹಿ ರಾಮಣ್ಣ
ಇನ್ನು ಯೋಗೀಶ್ವರರ ಧ್ಯಾನಯೋಗಕ್ಕೆ ಸ್ಥಾನಂಗಳಾವುವೆನೆ : ಆಧಾರ ಸ್ವಾಧಿಷಾ*ನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞೇಯ ಭ್ರೂಮಧ್ಯಾದಿ ಸ್ಥಾನಂಗಳಲ್ಲಿ ಬಂಧಮುದ್ರೆಗಳಿಂದೆ ಧ್ಯಾನಮಂ ಮಾಳ್ಪುದೆಂತೆನೆ : ಆಧಾರಚಕ್ರಗಳ ನಾಲ್ಕೆಸಳಮಧ್ಯದಲ್ಲಿ ಇಷ್ಟಾರ್ಥಮಂ ಕೊಡುವ ಸುವರ್ಣ ಕಾಂತಿಯನುಳ್ಳ ಆಧಾರಶಕ್ತಿಯಂ ಧ್ಯಾನಿಸುವುದು. ಸ್ವಾಧಿಷಾ*ನಚಕ್ರ ಆರೆಸಳಮಧ್ಯದಲ್ಲಿ ಸಕಲವರ್ಣದಿಂ ಲಿಂಗಸ್ವರೂಪನಾದ ಶಿವನಂ ಧ್ಯಾನಿಸುವುದು. ಮಣಿಪೂರಕಚಕ್ರ ಹತ್ತೆಸಳಮಧ್ಯದಲ್ಲಿ ಸುಪ್ತ ಸರ್ಪಾಕಾರದ ಮಿಂಚಿಗೆ ಸಮಾನದೀಪ್ತಿಯುಳ್ಳ ಸಕಲಸಿದ್ಧಿಗಳಂ ಕೊಡುವ ಕುಂಡಲಿಶಕ್ತಿಯಂ ಧ್ಯಾನಿಸುವುದು. ಅನಾಹತಚಕ್ರ ಹನ್ನೆರಡೆಸಳಮಧ್ಯದಲ್ಲಿ ಜ್ಯೋತಿರ್ಮಯಲಿಂಗಮಂ ಧ್ಯಾನಿಸುವುದು. ವಿಶುದ್ಧಿಚಕ್ರ ಷೋಡಶದಳಮಧ್ಯದಲ್ಲಿ ಸುಸ್ಥಿರಮಾದ ಆನಂದರೂಪಿಣಿಯಾದ ಸುಷುಮ್ನೆಯಂ ಧ್ಯಾನಿಸುವುದು. ಆಜ್ಞಾಚಕ್ರ ದ್ವಿದಳಮಧ್ಯದಲ್ಲಿ ವಾಕ್ಸಿದ್ಧಿಯಂ ಕೊಡುವ ದೀಪದ ಜ್ವಾಲೆಗೆ ಸಮಾನವಾದ ಜ್ಞಾನನೇತ್ರವೆನಿಸುವ ಶುದ್ಧಪ್ರಸಾದಜ್ಯೋತಿಯಂ ಧ್ಯಾನಿಸುವುದೇ ಧ್ಯಾನಯೋಗ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು ಆಧಾರ ತೊಡಗಿ ಆಜ್ಞಾಚಕ್ರವೇ ಕಡೆಯಾಗುಳ್ಳ ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು. ಆಜ್ಞಾಚಕ್ರದತ್ತಣಿಂದೆ ಊರ್ಧ್ವ ಭಾಗವಾದ ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ ಸಹಸ್ರದಳ ಕಮಲವನು ಭಾವಿಸುವುದು. ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ ಚಂದ್ರಮಂಡಲವನು ಧ್ಯಾನಿಸುವುದು. ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು. ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.
--------------
ಅಕ್ಕಮಹಾದೇವಿ
-->