ಅಥವಾ

ಒಟ್ಟು 1307 ಕಡೆಗಳಲ್ಲಿ , 66 ವಚನಕಾರರು , 1071 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಯಾಣವೆ ಭಾಜನವೆಂಬರು; ಪರಿಯಾಣ ಭಾಜನವಲ್ಲ, ಲಿಂಗಕ್ಕೆ ತನ್ನ ಮನವೆ ಭಾಜನ. ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ ಕೂಡಿಕೊಂಡಿಪ್ಪ, ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಮಕರತರ್ಕದ ಪ್ರಸ್ತಾವನ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜಾÕನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಅಡವಿಯಲೊಬ್ಬ ಕಡು ನೀರಡಿಸಿ, ಎಡೆಯಲ್ಲಿ ನೀರ ಕಂಡಂತಾುತ್ತಯ್ಯಾ. ಕುರುಡ ಕಣ್ಣ ಪಡೆದಂತೆ, ಬಡವ ನಿಧಾನವ ಹಡೆದಂತಾುತ್ತಯ್ಯಾ. ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ. 376
--------------
ಬಸವಣ್ಣ
ಕಾಯವೆಂಬ ಕಲ್ಪಿತವ ಕಳೆದು, ಪ್ರಾಣವೆಂಬ ಸೂತಕವ ಹರಿದು, ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು ?) ಅನು ಮಾಡಿದೆ, ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ. ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಸಹಜದಿಂದ ನಿರಾಲಂಬವಾಯಿತ್ತು, ನಿರಾಲಂಬದಿಂದ ನಿರಾಳವಾಯಿತ್ತು. ನಿರಾಳದಿಂದ ನಿರವಯವಾಯಿತ್ತು, ನಿರವಯದಿಂದ ಅನಾದಿಯಾಗಿತ್ತು. ಅನಾದಿಯಲ್ಲಿ ಮೂರ್ತಿಯಾದನೊಬ್ಬ ಶರಣ. ಆ ಶರಣನ ಮೂರ್ತಿಯಿಂದ ಸದಾಶಿವನಾದ, ಆ ಸದಾಶಿವನ ಮೂರ್ತಿಯಿಂದ ಶಿವನಾದ, ಆ ಶಿವನ ಮೂರ್ತಿಯಿಂದ ರುದ್ರನಾದ, ಆ ರುದ್ರನ ಮೂರ್ತಿಯಿಂದ ವಿಷ್ಣುವಾದ. ಆ ವಿಷ್ಣುವಿನ ಮೂರ್ತಿಯಿಂದ ಬ್ರಹ್ಮನಾದ. ಆ ಬ್ರಹ್ಮನ ಮೂರ್ತಿಯಿಂದಾದವು ಸಕಲ ಜಗತ್ತುಗಳೆಲ್ಲಾ_ ಇವರೆಲ್ಲ ನಮ್ಮ ಗುಹೇಶ್ವರನ ಕರಸ್ಥಲದ ಹಂಗಿನಲ್ಲಿ ಹುಟ್ಟಿ ಬೆಳೆದರು
--------------
ಅಲ್ಲಮಪ್ರಭುದೇವರು
ಎಂಟಕ್ಕೆ ಗಂಟಾಗಿ ನಂಟನ ತಾಯಿ ನಮ್ಮೂರಿಗೆ ಹೋದಳು. ಅರಸುಗಳೈವರು ಅರಸಿಯ ಮುದ್ದಾಡ ಹೋದರು. ರೂಪುಳ್ಳ ಹೆಂಡತಿ ಕಂಡಡೆ ಏನೆಂದೊ: ನಮ್ಮ ಕಪಿಲಸಿದ್ಧಮಲ್ಲಿನಾಥ ಉಂಬಡೆ ಓಗರವಿಲ್ಲವೆಂದನು.
--------------
ಸಿದ್ಧರಾಮೇಶ್ವರ
ಮರ್ಮವರಿದು ಮಾಡುವಂಗೆ ಕರ್ಮವಿಲ್ಲ, ಹೆಮ್ಮೆಯಲ್ಲಿ ಮಾಡಿದವನ ವಿಧಿಯ ನೋಡಾ. ಸಜ್ಜನ ಸದಾಚಾರವರಿದು ಮಾಡುವನು ಕೂಡಲಚೆನ್ನಸಂಗಯ್ಯನಲ್ಲಿ ನಮ್ಮ ಬಸವಣ್ಣನು
--------------
ಚನ್ನಬಸವಣ್ಣ
ಧನ ಧಾನ್ಯ ಅಷ್ಟಮಹದೈಶ್ವರ್ಯದೊಳು ಮನ ಹೀನನಾಗಿ ಮಾರ್ಗತಪ್ಪಿತು. ಬೆನಕನ ಮದುವೆಯಂತೆಯಾಯಿತು. ಇಂದು ನಾಳೆಯೆಂಬ ಸಂದೇಹಮಾತ್ರದಿಂದ ವನಿತೆ ಸುತ ಮಿತ್ರ ಕಳತ್ರಯದಿಂದ ಅನಾಚಾರ ಹೊಂದಿತು. ಮುನಿವ ವೈರಿಯ ಕೈಯ ಚಂದ್ರಾಯುಧದ ಮೊನೆಗೆ ಇದಿರು ಆದಂತಾಯಿತು ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಲಿಂಗಕ್ಕೆ ಕೊಟ್ಟು ಕೊಂಡರೆ ಪ್ರಸಾದ. ಜಂಗಮವಾರೋಗಣೆಯ ಮಾಡಿ ಮಿಕ್ಕುದು ಪ್ರಸಾದ, ಇದೇ ಪ್ರಸಾದದಾದಿ ಕಂಡಯ್ಯಾ. ಆದಿಯ ಪ್ರಸಾದವ ವೇದಿಸಬಲ್ಲರೆ ಇದೆ ಕಂಡಯ್ಯಾ. ಲಿಂಗಕ್ಕೆ ಕೊಡದೆ, ಜಂಗಮಕ್ಕೆ ನೀಡದೆ ಕೊಂಡರೆ ಹುಳುಕುಂಡುದಲಿಕ್ಕುವ ನಮ್ಮ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ಅಸಂಖ್ಯಾತ ಆದಿಬ್ರಹ್ಮರುತ್ಪತ್ಯವಾಗದಂದು, ಅಸಂಖ್ಯಾತ ಆದಿನಾರಾಯಣರುತ್ಪತ್ಯವಾಗದಂದು, ಅಸಂಖ್ಯಾತ ಸುರೇಂದ್ರಾದಿಗಳು ಉತ್ಪತ್ಯವಾಗದಂದು, ಅಸಂಖ್ಯಾತ ಮನುಮುನಿ ದೈತ್ಯರು ಉತ್ಪತ್ಯ ಲಯವಾಗದಂದು, ಓಂಕಾರವೆಂಬ ಆದಿಪ್ರಣವವಾಗಿದ್ದನು ನೋಡಾ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಾಂತ್ಯತೀತೋತ್ತರಕಲೆ, ಶಾಂತ್ಯತೀತಕಲೆಗಳಿಲ್ಲದಂದು, ಶಾಂತಿಕಲೆ ವಿದ್ಯಾಕಲೆಗಳಿಲ್ಲದಂದು, ಪ್ರತಿಷ್ಠೆಕಲೆ ನಿವೃತ್ತಿಕಲೆಗಳಿಲ್ಲದಂದು, ಮಹಾಸಾದಾಖ್ಯ ಶಿವಸಾದಾಖ್ಯವಿಲ್ಲದಂದು, ಅಮೂರ್ತಿಸಾದಾಖ್ಯ ಮೂರ್ತಿಸಾದಾಖ್ಯವಿಲ್ಲದಂದು, ಕರ್ತೃಸಾದಾಖ್ಯ ಕರ್ಮಸಾದಾಖ್ಯವಿಲ್ಲದಂದು, ಅವಾಚ್ಯಪ್ರಣವವಾಗಿದ್ದನಯ್ಯ ಇಲ್ಲದಂತೆ, ನಮ್ಮ ಅಪ್ರಮಾಣಕೂಡಲಸಂಗಮದೇವನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಹಳದಿಯ ಸೀರೆಯನುಟ್ಟು, ಬಳಹದೋಲೆಯ ಕಿವಿಯಲಿಕ್ಕಿ ಮೊಳಡಂಗೆಯ ಪಿಡಿದು, ಗುಲಗಂಜಿ ದಂಡೆಯ ಕಟ್ಟಿ ತುತ್ತುರುತುರು ಎಂಬ ಕೊಳಲ ಬಾರಿಸುತ ಅಪಳ ಚಪಳನೆಂಬ ಉಲಿವ ಗಂಟೆಯ ಕಟ್ಟಿ ತುತ್ತುರು ಜಂಗುಳಿ ದೈವಗಳನೆಲ್ಲವ ಹಿಂಡುಮಾಡಿ ಕಾವ ನಮ್ಮ ಶಂಭು ತೆಲುಗೇಶ್ವರನು ಮನೆಯ ಗೋವಳನೀತ.
--------------
ತೆಲುಗೇಶ ಮಸಣಯ್ಯ
ಕೊಡುವವ ಮಾನವನೆಂದು ಒಡಲಾಸೆಯ ತೋರದಿರು, ಕೊಡುವವ ಮಾನವನಲ್ಲ. ಕೊಡುವವ ಕೊಂಬುವವ ಮಾನವರ ನಡುವಿಪ್ಪ ಮಹಾತ್ಮ ಸಂಜೀವಂಗೆ ಒಡಲಾಸೆ ತೋರಿ ಬೇಡಿಕೊ. ಜೀವನ ಬುದ್ಧಿಯಿಂದ ನರನನಾಸೆಗೈಯದಿರು. ಆಸೆಗೈದರೆ ಕಾವವರಲ್ಲ , ಕೊಲ್ಲುವವರೂ ಅಲ್ಲ , ಕೊಡುವವರೂ ಅಲ್ಲ , ಬಿಡುವವರೂ ಅಲ್ಲ . ನಾಯ ಬಾಲವ ನಂಬಿ ಹೊಳೆಯ ಹಾದವರುಂಟೇ ? ವೈಷಭನ ಬಾಲವ ಪಿಡಿದರೆ ನದಿಯ ತಡಿಯ ಸೇರುವರಲ್ಲದೆ. ನಂಬು ನಂಬು ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲನೆಂಬ ಮಹಾಭಾಗ್ಯವ ನಂಬಿದರೆ ನಿನಗೆ ಬಡತನವೆ ಆತ್ಮ ?
--------------
ಹೇಮಗಲ್ಲ ಹಂಪ
ಹರತೇರು ಬಿತ್ತಿದ ಗಿಡವಿನ ಹೂವ್ವ ಕೊಯ್ದು ಊರೆಲ್ಲ ಕಟ್ಟಿದ ಕೆರೆ ನೀರ ತಂದು ನಾಡೆಲ್ಲ ನೋಡಿರಿಯೆಂದು ಪೂಜಿಸುವ ಪುಣ್ಯ ನೀರಿಗೊ ಹುವ್ವಿಗೊ ನಾಡೆಲ್ಲಕ್ಕೊ ಪೂಜಿಸಿದಾತಗೊ ಇದ ನಾನರಿಯೆ ನೀ ಹೇಳೆಂದಾತ ನಮ್ಮ ದಿಟ್ಟ ವೀರಾದ್ಥಿವೀರ ನಿಜ ಭಕ್ತ ಅಂಬಿಗರ ಚವುಡಯ್ಯನು
--------------
ಅಂಬಿಗರ ಚೌಡಯ್ಯ
ಏನೂ ಏನೂ ಎನಲಿಲ್ಲದಂದು ಮಹಾಘನಕ್ಕೆ ಘನವಾದ ಮಹಾಘನ ನಿರಂಜನಾತೀತಪ್ರಣವದ ನೆನಹು ಮಾತ್ರದಲ್ಲಿ ನಿರಂಜನಪ್ರಣವ ಉತ್ಪತ್ಯವಾಯಿತ್ತು. ಆ ನಿರಂಜನಪ್ರಣವದ ನಿರ್ದೇಶ ಸ್ಥಲದ ವಚನವೆಂತೆಂದಡೆ : ಅವಾಚ್ಯಪ್ರಣವ ಕಲಾಪ್ರಣವ ಉತ್ಪತ್ಯವಾಗದತ್ತತ್ತ , ಪ್ರಣವನಾದ ಪ್ರಣವಬಿಂದು ಪ್ರಣವಕಲೆಗಳುತ್ಪತ್ಯವಾಗದತ್ತತ್ತ , ನಿರಂಜನಪ್ರಣವವಾಗಿದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->