ಅಥವಾ

ಒಟ್ಟು 305 ಕಡೆಗಳಲ್ಲಿ , 70 ವಚನಕಾರರು , 243 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದು ಮುಂದು ಸಂದಳಿದ ಬಳಿಕ ಆನು ನೀನೆಂಬ ಭೇದವೇತಕಯ್ಯ? ಆನಂದ ಅಪರಸ್ಥಾನದಲ್ಲಿ ಶುದ್ಧ ಸಂಯೋಗವಾದ ಬಳಿಕ ದಳ ಪ್ರತಿಷ್ಠೆಯ ಮಾಡಿನೆಂದು ಏನೆಂಬೆನಯ್ಯ? ಪೂರ್ವದಳದಲ್ಲಿ ಲಕ್ಷವು ಇಪ್ಪತ್ನಾಲ್ಕುಸಾವಿರ ಎಸಳು, ಅಪರದಳದಲ್ಲಿ ಹದಿನಾಲ್ಕುಸಾವಿರ ಎಸಳು, ನಾನಾ ವರ್ಣ ಆನಂದನೆಂಬ ಅದ್ಥಿದೇವತೆ ಮಧ್ಯಮಸ್ಥಾನದಲ್ಲಿ, ಸಿದ್ಧ ಸಂಯೋಗವೆಂಬ ಸರೋವರದಲ್ಲಿ, ವೈನೈಯೆಂಬ ಕೊಳಂಗಳು ಹನಾರೆಸಳಿನ ಕಮಳ ಬೀಜಾಕ್ಷರಂಗಳೆಂಟು, ಅದ್ಥಿದೇವತೆ ಸಚ್ಚಿದಾನಂದನೆಂಬ ಗಣೇಶ್ವರ ಆನಂದ ಬ್ರಹ್ಮಲೋಕದಲ್ಲಿ ಗುರುವೆಂಬ ಸರೋವರದಲ್ಲಿ ನಿತ್ಯವೆಂಬ ಕೊಳ. ಶುದ್ಥಶ್ವೇತನೆಂಬ ಅಮೃತ ಪ್ರವಾಹ, ದಳವೊಂದು, ಮೂಲ ಮೂರು, ಫಲವಾರು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಅದ್ಥಿದೇವತೆ.
--------------
ಸಿದ್ಧರಾಮೇಶ್ವರ
ಶ್ರೀಕರ ಬ್ರಹ್ಮಾದಿಗಳೇನು ಕಾರಣ ಯೋನಿ, ನಾನಾ ಭವಂಗಳಲಿ ಬಂದರಯ್ಯ. ಧ್ಯಾನ ಮೌನ ಸಮಾದ್ಥಿಕಾರಣದ ಸಮತೆಯನು ಭೇದಿಸಲು ಅರಿಯದೆ, ನಾನಾ ಭವಂಗಳ ಮಗ್ನವಾಗಿ, ಅನಾದಿ ಸಂಸಿದ್ಧ ಕಪಿಲಸಿದ್ಧಮಲ್ಲಿಕಾರ್ಜುನ ಆದಿಯಕ್ಷರ ಸಮತೆ ಸಮಗೂಡದು
--------------
ಸಿದ್ಧರಾಮೇಶ್ವರ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಮನವೆಂಬ ವಿಧಾಂತನು ಕಾಯವೆಂಬ ಕಣೆಯ ನೆಟ್ಟು, ನಾನಾ ಬಹುವಿಷಯಂಗಳೆಂಬ ಸುತ್ತ ನೇಣ ಕಟ್ಟಿ, ನೋಡುವ ಕರಣಂಗಳು ಮೆಚ್ಚುವಂತೆ ಕಾಮದ ಕತ್ತಿಯ ತಪ್ಪಿ, ಕ್ರೋಧದ ಇಟ್ಟಿಯ ತಪ್ಪಿ, ಮೋಹದ ಕಠಾರಿಯ ತಪ್ಪಿ, ಮೆಟ್ಟಿದ ಮಿಳಿಗೆ ತಪ್ಪದೆ ಲೆಂಗಿಸಿ, ಸುತ್ತಣ ಕೈದ ತಪ್ಪಿಸಿ, ಚಿತ್ತ ಅವಧಾನವೆಂದು ಹಾಯ್ದುಳಿದು, ಮನವೆಂಬ ವಿಧಾಂತನಾಡಿ, ಗೆದ್ದ ಜಗಲೋಲ ಡೊಂಬರ. ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗದ ಬಹುವಿಷಯ ಹಿಂಗಿದ ಕೂಟ.
--------------
ಸಗರದ ಬೊಮ್ಮಣ್ಣ
ನಾನಾ ಭೇದಂಗಳಲ್ಲಿ ಷಡ್ದರುಶನವ ಹೊಕ್ಕು ತಿಳಿದಡೂ ಶ್ರುತಿ ವೇದ ಶಾಸ್ತ್ರ ಪುರಾಣ ಆಗಮಂಗಳ ಕಲಿತಡೂ ಮೂರುಮಲದ ಭೇದವನರಿತು ಬಿಡುಮುಡಿಯಲ್ಲಿ ಕಳೆದುಳಿಯಬೇಕು. ಇದು ಪ್ರಸಿದ್ಧವಪ್ಪ ತೆರ. ಇದು ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವ ಕೂಡಬೇಕು.
--------------
ಬಾಹೂರ ಬೊಮ್ಮಣ್ಣ
ನಾನಾ ರೋಗಂಗಳು ಬಂದು ದೇಹವ ಹಿಡಿದಲ್ಲಿ ಶಿವಾರ್ಚನೆಯ ಬೆರಕೊಳ್ಳಿ, ಸಕಲಪುಷ್ಪಂಗಳಿಂದ ಪೂಜೆಯ ಮಾಡಿಕೊಳ್ಳಿ, ಪಂಚಾಕ್ಷರಿ ಪ್ರಣಮವ ತಪ್ಪದೆ ತ್ರಿಸಂದ್ಥಿಯಲ್ಲಿ ನೆನಹುಗೊಳ್ಳಿ, ಇವರಿಂದ ರುಜೆದರ್ಪಂಗಡಗು, ಮರುಳಶಂಕರಪ್ರಿಯ ಸಿದ್ಧರಾಮೇಶ್ವರ ಲಿಂಗ ಸಾಕ್ಷಿಯಾಗಿ.
--------------
ವೈದ್ಯ ಸಂಗಣ್ಣ
ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.
--------------
ಪ್ರಸಾದಿ ಲೆಂಕಬಂಕಣ್ಣ
ಬಯಲೆಂದಡೆ ಕೀಳು ಮೇಲಿನೊಳಗಾಯಿತ್ತು. ನಿರವಯವೆಂದಡೆ ಸಾವಯದಿಂದ ಕುರುಹುದೋರಿತ್ತು. ಸವಿದ ಸವಿಯನುಪಮಿಸಬಾರದೆಂದಡೆ ಜಿಹ್ವೆಯಿಂದ ಕುರುಹುಗೊಂಡಿತ್ತು. ಆ ಜಿಹ್ವೆ ಸಾಕಾರ, ಸವಿದ ಸವಿ ನಿರಾಕಾರವೆಂದಡೆ, ನಾನಾ ಭೇದಂಗಳಿಂದ ರುಚಿಮಯವಾಯಿತ್ತು. ಆ ಜಿಹ್ವೆಯ ಕೊನೆಯ ಮೊನೆಯಲ್ಲಿ ನಿಂದು, ಅಹುದಲ್ಲವೆಂಬುದ ತಾನೆ ಕುರುಹಿಟ್ಟುಕೊಂಡಂತೆ ಜಿಹ್ವೆ ಬಲ್ಲುದೆಂದಡೆ ತನ್ನಡಿಗೆ ಬಾರದುದನರಿಯಿತ್ತೆ ? ಸಾರ ಸ್ವಾದ ಲೇಸೆಂದಡೆ ಜಿಹ್ವೆ ಹೊರತೆಯಾಗಿ ಕುರುಹುಗೊಂಡಿತ್ತೆ ? ಇದು ಕ್ರೀ ಜ್ಞಾನ ಸಂಪುಟಸ್ಥಲ. ಈ ಉಭಯಸ್ಥಲ ಲೇಪವಾದ ಮತ್ತೆ ನಿರುತ ನಿರ್ಯಾಣವೆಂಬುದು ನನ್ನಲ್ಲಿಯೊ ? ನಿನ್ನಲ್ಲಿಯೊ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ ಸದಾತ್ಮದಲ್ಲಿ ನಿನ್ನ ಕುರುಹೇಕೆ ಅಡಗದು ?
--------------
ಮೋಳಿಗೆ ಮಹಾದೇವಿ
ನಾನಾ ಭೇದವ ತಂತಿಗೆ ಜೀವ ಸೆವರಿನಲ್ಲಿ ಅಡಗುವಂತೆ ನಾನಾ ಜೀವದ ಕಳೆ ನಿನ್ನ ಕಾರುಣ್ಯದಲ್ಲಿ ಬೆಳೆವುತಿಪ್ಪ ಮೂರುತಿ ನೀನೆ ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಸಹಭೋಜನವ ಮಾಡುವನ ಇರವು ಹೇಗೆಂದಡೆ: ದಗ್ಧಪಟದಂತೆ, ಮಂಜಿನ ರಂಜನೆಯ ವಾರಿಯ ಧೂಮದಂತೆ, ಒಡಲಿನ ಆತ್ಮನ ಭೇದದಂತಿರಬೇಕು. ಆಕಾಶದ ಸಾಕಾರದಲ್ಲಿ ತೋರುವ ನಾನಾ ಛಾಯದಂತೆ, ಒಂದು ವರ್ಣದಲ್ಲಿ ನಿಲ್ಲದೆ ತೋರುವ ತೋರಿಕೆಯಂತೆ, ಕಾಯದ ಛಾಯವ ತೊಟ್ಟಿದ್ದಲ್ಲಿ ಲಿಂಗಕ್ಕೂ ತನಗೂ ಸಹಭೋಜನ ಸಲವುದೆಂದೆ. ಅದು ಉರಿಯೊಳಗಳ ಕರ್ಪುರದಂತೆ, ಕರ್ಪುರದೊಳಗಳ ಉರಿಯಂತೆ. ಅನ್ಯಬ್ಥಿನ್ನವಿಲ್ಲದಿರಬೇಕು, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ಗುರುಸ್ಥಲವೆಂದು ಬಂದೆ, ಆಚಾರ್ಯನಾಗಿ. ಲಿಂಗಸ್ಥಲವೆಂದು ಬಂದೆ, ಆರೋಹ ಅವರೋಹಂಗಳ ಪರಿಹರಿಸಿಹೆನೆಂದು. ಶರಣನಾಗಿ ಬಂದೆ, ಭಕ್ತಿಜ್ಞಾನ ವೈರಾಗ್ಯ ತ್ರಿವಿಧದ ಗೊತ್ತ ಮುಕ್ತಿಯ ಮಾಡಿಹೆನೆಂದು. ದುತ್ತೂರಕ್ಕೆ, ಕಲ್ಪತರುವಿಂಗೆ ಮತ್ತಾವ ವೃಕ್ಷಫಲಾದಿಗಳಿಗೆ ಅಪ್ಪುವೊಂದು, ಹಲವು ವೃಕ್ಷಂಗಳು ತಮ್ಮ ತಮ್ಮ ಸಶ್ಚಿತ್ತದ ಸವಿಯಾದಂತೆ, ನಾನಾ ಸ್ಥಲಕ್ಕೆ ದೇವನೊಬ್ಬನೆ. ಊರೊಳಗಾದಲ್ಲಿ ಅರಸು ಆಳಿನೊಳಗಾದಂತೆ ಆದೆಯಲ್ಲಾ. ಕ್ರೀಗೆ ತುತ್ತಾಗಿ ಸಿಕ್ಕಿದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕಾಮದಲ್ಲಿ ಅಳಿದು, ಕ್ರೋಧದ ದಳ್ಳುರಿಯಲ್ಲಿ ಬೆಂದು, ಮೋಹದ ಸಮುದ್ರದಲ್ಲಿ ಮುಳುಗಿ, ನಾನಾ ಭವರಸಂಗಳನುಂಡು ಘೋರಸರಾಗಬೇಡ. ಅರಿ, ಐಘಟದೂರ ರಾಮೇಶ್ವರಲಿಂಗವ.
--------------
ಮೆರೆಮಿಂಡಯ್ಯ
ಮೂರುವರ್ಣದ ಬೊಟ್ಟುಗ, ಆರು ವರ್ಣದ ಅಳಗ, ಐದು ವರ್ಣದ ಸಂಚಿಗ ಇವರೊಳಗಾದ ನಾನಾ ವರ್ಣದ ಅಜಕುಲ, ಕುರಿವರ್ಗ, ಕೊಲುವ ತೋಳನ ಕುಲ, ಮುಂತಾದ ತ್ರಿವಿಧದ ಬಟ್ಟೆಯ ಮೆಟ್ಟದೆ ಮೂರ ಮುಟ್ಟದೆ, ಆರ ತಟ್ಟದೆ, ಐದರ ಬಟ್ಟೆಯ ಮೆಟ್ಟದೆ, ಒಂದೇ ಹೊಲದಲ್ಲಿ ಮೇದು, ಮಂದೆಯಲ್ಲಿ ನಿಂದು, ಸಂದೇಹ ಕಳೆದು, ಉಳಿಯದ ಸಂದೇಹವ ತಿಳಿದು, ವೀರಬೀರೇಶ್ವರಲಿಂಗದಲ್ಲಿಗೆ ಹೋಗುತ್ತಿರಬೇಕು.
--------------
ವೀರ ಗೊಲ್ಲಾಳ/ಕಾಟಕೋಟ
ಅಯ್ಯಾ, ತನ್ನ ತಾನರಿಯದೆ, ತನ್ನ ಇಷ್ಟಲಿಂಗದ ಹೊಲಬು ತಿಳಿಯದೆ, ಕಾಮವ ತೊರೆಯದೆ, ಹೇಮವ ಜರೆಯದೆ, ನಾವು ಹರ ಗುರು ಚರ ಷಟ್‍ಸ್ಥಲದ ವಿರಕ್ತರೆಂದು ಚೆನ್ನಾಗಿ ನುಡಿದುಕೊಂಡು, ಕಾವಿ ಕಾಷಾಯಾಂಬರವ ಹೊದ್ದು, ಶಂಖ ಗಿಳಿಲು ದಂಡಾಗ್ರವ ಹೊತ್ತು, ಕೂಳಿಗಾಗಿ ನಾನಾ ದೇಶವ ತಿರುಗಿ, ಕಾಂಚನಕ್ಕೆ ಕೈಯೊಡ್ಡುವ ಪಂಚಮಹಾಪಾತಕರನು ಕಾಗೆಯ ಗರ್ಭದಲ್ಲಿ ಹುಟ್ಟಿಸಿ ಕಾಕಾ ಎಂದು ಕೂಗಿಸುತಿರ್ಪ[ನು] ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಇನ್ನಷ್ಟು ... -->