ಅಥವಾ

ಒಟ್ಟು 291 ಕಡೆಗಳಲ್ಲಿ , 64 ವಚನಕಾರರು , 232 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಕರತರ್ಕದ ಪ್ರಸ್ತಾವನ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜಾÕನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಶಿವನೆ, ನೀನು ಗುರುವಾದೆ ಲಿಂಗವಾದೆ ಜಂಗಮವಾದೆ ಭಕ್ತನಾದೆ. ಗುರುವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಗುರುವಿಂಗೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಗುರುವು ತನ್ನೊಳಡಗಿದ. ಲಿಂಗವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಲಿಂಗಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಲಿಂಗವು ಭಕ್ತನೊಳಡಗಿದ. ಜಂಗಮವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಜಂಗಮಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆ ಜಂಗಮವು ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಜಂಗಮವು ಭಕ್ತನೊಳಡಗಿದ. ಇಂತಡಗುವರೆ ಹಿರಿಯರು; ಇಂತಡಗುವರೆ ಗುರುವರು; ಇಂತಡಗುವರೆ ಮಹಿಮರು; ಇವರಿಗೆ ಭಾಜನವೊಂದೆ ಭೋಜನವೊಂದೆ. ಈ ನಾಲ್ಕು ಒಂದಾದ ಘನಕ್ಕೆ ಪರಿಯಾಣಬೇರೆಂಬ ಶಾಸ್ತ್ರದ ಸೂತಕಿಗಳನೆನಗೆ ತೋರದಿರಯ್ಯಾ, ಮಸಣಯ್ಯಪ್ರಿಯ ಗಜೇಶ್ವರಾ.
--------------
ಗಜೇಶಮಸಣಯ್ಯಗಳ ಪುಣ್ಯಸ್ತ್ರೀ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನು ವಿಶ್ವಾದ್ಥಿಕ ಮಹಾರುದ್ರನುತ್ಪತ್ಯವೆಂತೆಂದಡೆ : ಅನಂತ ಬ್ರಹ್ಮಾಂಡ ಅನಂತ ಕೋಟಿ ಲೋಕಧರನಾದ ಪರಾಪರನಾದ ಮಹಾಸದಾಶಿವನಾದವನು ತನ್ನ ನಿಜಜಾÕನ ಹಿರಿಣ್ಯಗರ್ಭದಲ್ಲಿ ವಿಶ್ವಾದ್ಥಿಕ ಮಹಾರುದ್ರನಂ ನಿರ್ಮಿಸಿ ತನ್ನ ಪಂಚಮುಖದಿಂದ ಪೃಥ್ವಿ ತೇಜ ವಾಯುವಾಕಾಶವೆಂಬ ಮಹಾಭೂತ ಬ್ರಹ್ಮಾಂಡದೊಳು ಚತುರ್ದಶ ಭುವನಂಗಳು, ಸಪ್ತ ಕುಲಪರ್ವತಂಗಳು ಮೊದಲಾದ ಅನಂತ ಗಿರಿ ಗಹ್ವರಂಗಳಂ, ಸಮಸ್ತ ಗ್ರಹರಾಶಿ ತಾರಾಪಥಂಗಳಂ ಗಬ್ರ್ಥೀಕರಿಸಿಕೊಂಡು ನಿರ್ಮಿಸೆಂದು ಬೆಸನಂ ಕೊಟ್ಟು ಕಳುಹಲು, ಮಹಾಪ್ರಸಾದವೆಂದು ಕೈಕೊಂಡು ಆ ಭೂತಬ್ರಹ್ಮಾಂಡದೊಳು ನಿರ್ಮಿಸಿದನೆಂತೆಂದಡೆ : ಜಲದ ಮೇಲೆ ಕಮಠನ ನಿರ್ಮಿಸಿದ. ಆ ಕಮಠನ ಮೇಲೆ ಮಹಾವಾಸುಗಿಯಂ ನಿರ್ಮಿಸಿದ. ಆ ಮಹಾವಾಸುಗಿಯ ಮೇಲೆ ಅಷ್ಟದಿಗ್ಗಜಂಗಳ ನಿರ್ಮಿಸಿದನು ಆ ವಿಶ್ವಾದ್ಥಿಕ ಮಹಾರುದ್ರನು. ಆ ಅಷ್ಟದಿಗ್ಗಜಂಗಳ ಮೇಲೆ ಸಕಲವಾದ ಜೀವಂಗಳಿಗೂ ಸಕಲವಾದ ಪದಾರ್ಥಂಗಳಿಗೂ ಇಹಂತಾಗಿ ಮಹಾಪೃಥ್ವಿಯಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಮಹಾಮೇರುಪರ್ವತದ ತಾವರೆಯ ನಡುವಣ ಪೀಠಿಕೆಯ ಕ್ರಮದಲ್ಲಿ ನಡೆಯ ಪ್ರಮಾಣು ಹದಿನಾರು ಸಾವಿರದ ಯೋಜನ ಪ್ರಮಾಣು. ಉದ್ದ ಎಂಬತ್ನಾಲ್ಕು ಸಾವಿರ ಯೋಜನದುದ್ದ. ವಿಸ್ತೀರ್ಣ ಮೂವತ್ತೆರಡು ಸಾವಿರಯೋಜನ ಪ್ರಮಾಣು ಉಂಟಾಗಿಹಂತಾಗಿ ಮೇರುತನಕ ಸುತಾಳ ತಾಳ, ಪಂಚಾಶತಕೋಟಿ ಸೋಪಾನಂಗಳುಂಟಾಗಿ ದಿವ್ಯರೂಪಾಗಿ ನಿರ್ಮಿಸಿದನು. ಆ ಮೇರುವಿನ ಪೂರ್ವದೆಸೆಯಲ್ಲಿ ಪದ್ಮರಾಗವು, ಆಗ್ನೆಯಲ್ಲಿ ವಜ್ರ, ದಕ್ಷಿಣದಲ್ಲಿ ಮೌಕ್ತಿಕ, ನೈರುತ್ಯಭಾಗದಲ್ಲಿ ನೀಲ, ಪಶ್ಚಿಮದ ದೆಸೆಯ ವಿಭಾಗದಲ್ಲಿ ವೈಡೂರ್ಯ, ವಾಯುವ್ಯದಲ್ಲಿ ಚಿಂತಾಮಣಿ, ಉತ್ತರದಲ್ಲಿ ರತ್ನಕನಕ, ಈಶಾನ್ಯದಲ್ಲಿ ತಾಮ್ರ, ಮೇರುವಿನ ಮಧ್ಯದಲ್ಲಿ ಪುಷ್ಯರಾಗ ಜಾÕನ ದೃಷ್ಟಿಗಳುಂಟಾಗಿ ಪರಿಪೂರಿತಗಳಿಹಂತಾಗಿ ಗಿರಿಯ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಮೇಲುಳ್ಳ ವೃಕ್ಷಂಗಳೆಲ್ಲ ಕಲ್ಪವೃಕ್ಷಂಗಳು. ಆ ಮೇರುವಿನ ಮೇಲುಳ್ಳ ಮೃಗಂಗಳೆಲ್ಲ ಅಚಾಮಚರಿತ್ರಂಗಳು. ಆ ಮೇರುವಿನ ಮೇಲುಳ್ಳ ಗೋವೆಲ್ಲ ಕಾಮಧೇನುಗಳು. ಅಲ್ಲಿದ್ದ ಮನುಷ್ಯರೆಲ್ಲ ಪರಮಾತ್ಮರು. ಅಲ್ಲಿದ್ದ ಸ್ತ್ರೀಯರೆಲ್ಲ ದೇವಸ್ತ್ರೀಯರು. ಆಹಾರಂಗಳೆಲ್ಲ ಅಮೃತಾಹಾರ, ನೀರೆಲ್ಲ ರಜಸ್ತಳೇಯ ; ಅಲ್ಲಿಯ ಮಣ್ಣೆಲ್ಲ ಕಸ್ತೂರಿ ಕುಂಕುಮಾದಿಗಳೆನಿಸಿಕೊಂಬುದು. ಅಲ್ಲಿಯ ಕಾಷ್ಠಂಗಳೆಲ್ಲ ಸುಗಂಧಂಗಳು. ಆ ಮೇರುವಿನ ದೇವತೆಗಳಿಗೂ ಮುನಿಗಳಿಗೂ ಅನಂತ ಸಿದ್ಧರಿಗೂ ಅನಂತ ಯೋಗಿಗಳಿಗೂ ಜೋಗಿಗಳಿಗೂ ಪುರಂಗಳು ಗೃಹಂಗಳು ಗುಡಿಗಳು ಬಿಲದ್ವಾರಂಗಳುಂಟಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮಹಾಮೇರುವಿಗೆ ನಾಲ್ಕು ಬಾಗಿಲು, ಎಂಟು ಸ್ವರ್ಣಕಂಡಿಗಳು, ಹದಿನಾರು ಮಕರತೋರಣಗಳು, ಮೂವತ್ತೆರಡು ಸೋಮವೀದಿಗಳು, ಅರವತ್ನಾಲ್ಕು ಸಂದುಗಳುಂಟಾಗಿ ಸರ್ವಸಂಪೂರ್ಣವಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮಹಾಮೇರುವಿನ ಮಧ್ಯದಲ್ಲಿ ಶ್ರೀ ಮಹಾದೇವರಿಗೆ ಶಿವಪುರಮಂ ನಿರ್ಮಿಸಿದನು. ಪಂಚಸಹಸ್ರಯೋಜನ ಚತುಃಚಕ್ರಾಕಾರವಾಗಿ, ನವರತ್ನಖಚಿತವಾಗಿ, ಅಷ್ಟದಳವೇಷ್ಟಿತವಾಗಿ, ಅಷ್ಟಧ್ವಾನಂಗಳುಂಟಾಗಿ, ಶತಸಹಸ್ರಕೋಟಿ ಕನಕಗೃಹಂಗಳುಂಟಾಗಿ. ಪ್ರಮಥಗಣಂಗಳು, ನಂದಿ, ಮಹಾನಂದಿಕೇಶ್ವರ ಮಹಾಗಣಂಗಳು ಅಷ್ಟದಿಕ್ಪಾಲರು, ಏಕಾದಶರುದ್ರರು, ದ್ವಾದಶಾದಿತ್ಯರು, ನವಗ್ರಹಂಗಳು, ಬ್ರಹ್ಮ ವಿಷ್ಣು ನಾರದ ಸುಖದಲ್ಲಿಪ್ಪಂತಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಬಲದ ದೆಸೆಯಲ್ಲಿ ಬ್ರಹ್ಮಪುರವು ತ್ರಿಕೋಣಾಕಾರವಾಗಿ ಅನಿಲಪ್ರಕಾರವೇಷ್ಟಿತವಾಗಿ, ಅಷ್ಟದ್ವಾರಂಗಳುಂಟಾಗಿ ಐನೂರು ಕೋಟಿ ಕನಕಗೃಹಂಗಳು ಅಸಂಖ್ಯಾತಕೋಟಿ ಮಹಾಋಷಿಗಳು ಒಡ್ಡೋಲಂಗಗೊಟ್ಟು, ನಾಲ್ಕು ವೇದಂಗಳು ಮೂರ್ತಿಬಾಂಧವರಾಗಿ ಸರಸ್ವತಿಸಮೇತವಾಗಿ ಬ್ರಹ್ಮದೇವರು ಪರಮಾನಂದಸುಖದೊಳಿಪ್ಪಂತಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ವಾಮಭಾಗದಲ್ಲಿ ವಿಷ್ಣುವಿಂಗೆ ವೈಕುಂಠವೆಂಬ ಪುರ ಚಕ್ರಾಕಾರವಾಗಿ ಪದ್ಮರಾಗಪ್ರಕಾಶವೇಷ್ಟಿತವಾಗಿ ಅಷ್ಟದ್ವಾರಂಗಳು ಹತ್ತುನೂರುಕೋಟಿ ಕನಕಗೃಹಂಗಳುಂಟಾಗಿ ಅನಂತಕೋಟಿ ಶಂಕ ಚಕ್ರ ಗದಾಹಸ್ತನಾಗಿ ವೇದ ಓಲೈಸಲಾಗಿ ಶ್ರೀಲಕ್ಷ್ಮೀ ಸಮೇತನಾಗಿ ವಿಷ್ಣು ಪರಮಾನಂದಸುಖದಲ್ಲಿಪ್ಪಂತೆ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಪೂರ್ವದೆಸೆಯಲ್ಲಿ ದೇವೇಂದ್ರಂಗೆ ಅಮರಾವತಿಯ ಪುರಮಂ ನಿರ್ಮಿಸಿದನು. ಆಗ್ನೇಯ ದೆಸೆಯಲ್ಲಿ ಅಗ್ನಿದೇವಂಗೆ ತೇಜೋವತಿಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ದಕ್ಷಿಣದಿಶಾಭಾಗದಲ್ಲಿ ಯಮದೇವಂಗೆ ಸಿಂಹಾವತಿಯ ಪುರಮಂ ನಿರ್ಮಿಸಿದನು. ನೈಋತ್ಯ ದಿಶಾಭಾಗದಲ್ಲಿ ನೈಋತ್ಯಂಗೆ ಕೃಷ್ಣವತಿಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಪಶ್ಚಿಮ ದಿಶಾಭಾಗದಲ್ಲಿ ವರುಣಂಗೆ ಜಂಜನಿತಪುರಮಂ ನಿರ್ಮಿಸಿದನು. ವಾಯುವ್ಯದಲ್ಲಿ ವಾಯುವಿಂಗೆ ಗಂಗಾವತಿಯಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಉತ್ತರದೆಶೆಯಲ್ಲಿ ಕುಬೇರಂಗೆ ಅಳಕಾಪುರಮಂ ನಿರ್ಮಿಸಿದನು. ಈಶಾನ್ಯದಿಶಾಭಾಗದಲ್ಲಿ ಈಶಾನ್ಯದೇವಂಗೆ ಧವಳಾವತಿಪುರಮಂ ಮೊದಲಾಗಿ ಸಮಸ್ತವಾದ ಪುರಗಳಂ ನಿರ್ಮಿಸಿದನು ವಿಶ್ವಾದ್ಥಿಯಕಮಹಾರುದ್ರನು. ಆ ಮಹಾಮೇರುವಿಂಗೆ ವಳಯಾಕೃತವಾಗಿ ಲವಣ ಇಕ್ಷು ಸುರೆ ಘೃತ ದದ್ಥಿ ಕ್ಷೀರ ಶುದ್ಧಜಲಂಗಳೆಂಬ ಸಪ್ತಸಮುದ್ರಂಗಳಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಸಮುದ್ರಂಗಳ ನಡುವೆ ಜಂಬೂದ್ವೀಪ, ಪ್ಲಕ್ಷದ್ವೀಪ, ಶುಕ್ಲದ್ವೀಪ, ಕುಶದ್ವೀಪ, ಶಾಕದ್ವೀಪ, ಶಾಲ್ಮಲೀದ್ವೀಪ, ಪುಷ್ಕರದ್ವೀಪ, ಕ್ರೌಂಚದ್ವೀಪವೆಂಬ ಸಪ್ತದ್ವೀಪಂಗಳ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ದ್ವೀಪಂಗಳಿಗೆ ವಳಯಾಕೃತವಾಗಿ ಮಲಯಜಪರ್ವತ, ನೀಲಪರ್ವತ, ಶ್ವೇತಪರ್ವತ, ಋಕ್ಷಪರ್ವತ, ರಮ್ಯಪರ್ವತ, ಉತ್ತರಕುರುಪರ್ವತ, ಸುಗಂಧಪರ್ವತ, ನಿರಾಕಾರಪರ್ವತ, ಉದಾರಪರ್ವತ, ಮಣಿಶಿಖರಪರ್ವತ, ಅರ್ಧಚಂದ್ರಪರ್ವತ, ಮಧುರಪರ್ವತ, ಮಣಿನಾಗಪರ್ವತ, ಮೈನಾಕಪರ್ವತ, ಉದಯಾದ್ರಿಪರ್ವತ, ತ್ರಿಪುರಾಂತಕಪರ್ವತ, ಶ್ರೀರಾಮಪರ್ವತ, ಮಾಲ್ಯವಂತಪರ್ವತ, ನಿಷಧಪರ್ವತ, ಹೇಮಕೂಟಪರ್ವತ, ನಿರಾಚಲಪರ್ವತ, ಗಂಧಾಚಲಪರ್ವತ, ನೀಲಾಚಲಪರ್ವತ, ಮಂದಾಚಲಪರ್ವತ, ಮೇರುಮಂದಿರಪರ್ವತ, ಶುಬರೀಶ್ವರಪರ್ವತ, ಕುಮುದಉದಯಾದ್ರಿ, ದೇವಕೂಟ, ವಿಂಧ್ಯಾಚಲ, ಪವನಾಚಲ, ಪರಿಯಾಚಲ, ಚಂದ್ರಾಚಲ, ಧಾರಾಚಲ, ಷಡುಲಕ್ಷ್ಮಿಗಿರಿ, ಮಾನಸಾಂತಗಿರಿ, ತಮಂಧಗಿರಿ, ಚಂದ್ರಗಿರಿ, ನಾಗಗಿರಿ, ಲಘುಗಿರಿ, ಮಕರಗಿರಿ, ದ್ರೋಣಗಿರಿ, ಅನಂತವಜ್ರಗಿರಿ, ಕಪಿಲಗಿರಿ, ನೀಲಗಿರಿ, ಪರಗಿರಿ, ತ್ರಿಪುರಗಿರಿ, ಸಿಂಹಗಿರಿ, ಶ್ರೀಕಂಠಗಿರಿ, ಚಕ್ರವಾಳಗಿರಿಪರ್ವತ, ಇಂದ್ರಗಿರಿಪರ್ವತ, ಲೋಕಪರ್ವತಂಗಳು ಮೊದಲಾದ ಪರ್ವತಂಗಳೆಲ್ಲವಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಇದಕ್ಕೆ ದೇಶಂಗಳಾಗಬೇಕೆಂದು ಪಾಂಚಾಲ, ಬರ್ಬರ, ಮತ್ಸ್ಯ, ಮಗಧ, ಮಲೆಯಾಳ, ತೆಲುಂಗ, ಕಳಿಂಗ, ಕುಕರ, ಕೊಂಕಣ, ತ್ರಿಕರರಾಷ್ಟ್ರ, ಶ್ವಾಸಿನಿ, ಕಂಠರಹಿತ, ಕುತಿಷ್ಟ, ದಶಾರ್ಣ, ಕುರು, ಮುಖಸರ, ಕೌಸಯಿವರ್ಣ, ಆವಂತಿ, ಲಾಳ, ಮಹೇಂದ್ರ, ಪಾಂಡ್ಯ, ಸರ್ವೇಶ್ವರ, ವಿಷ್ಣು, ಶಾಂತಕ, ತುರಾದ್ರ, ಮಗಧಾದ್ರ, ವಿದೇಹ, ಮಗಧ, ದ್ರವಿಳ, ಕಿರಾಂತ, ಕುಂತಳ, ಕಾಮೀರ, ಗಾಂಧಾರ, ಕಾಂಭೋಜ, ಕೀಳುಗುಜ್ಜರ, ಅತಿದೃಷ್ಟ, ನೇಪಾಳ, ಬಂಗಾಳ, ಪುಳಿಂದ್ರ, ಜಾಳೇಂದ್ರ, ಕಲ್ವರ-ಇಂಥಾ ದೇಶಂಗಳೆಲ್ಲವಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಇನ್ನು ಭೂಮಿಯಿಂದಂ ಮೇಲೆ ಮೇಘಮಂಡಲ ಮೊದಲಾಗಿ ಶಿವಾಂಡ ಚಿದ್ಬ ್ರಹ್ಮಾಂಡ ಕಡೆಯಾಗಿ ಎಲ್ಲಾ ಲೋಕಂಗಳಂ ನಿರ್ಮಿಸಿ, ಸಪ್ತಪಾತಾಳವ ನಿರ್ಮಿಸಿದನದೆಂತೆಂದಡೆ: ಅಲ್ಲಿ ಪೃಥ್ವಿಯ ಕೆಳಗೆ ಶತಕಯೋಜನದಲ್ಲಿ ಅತಳಲೋಕದಲ್ಲಿ ಇಶಿತಮಂಡಲಮಂ ನಿರ್ಮಿಸಿದನು. ಅತಳಲೋಕದಿಂದಂ ಕೆಳಗೆ ಕೋಟಿಯೋಜನದುದ್ದದಲ್ಲಿ ವಿತಳಲೋಕದಲ್ಲಿ ಸ್ವರ್ಣ ನಾಗಮಂಡಲಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ವಿತಳಲೋಕದಿಂದಲು ಕೆಳಗೆ ದ್ವಿಕೋಟಿ ಯೋಜನದುದ್ದದಲ್ಲಿ ಸುತಳತೋಲಕದಲ್ಲಿ ಕೃಷ್ಣನಾಗಮಂಡಲಮಂ ನಿರ್ಮಿಸಿದನು. ಆ ಸುತಳಲೋಕದಿಂದಲು ಕೆಳಗೆ ರಸಾತಳಲೋಕದಲ್ಲಿ ರತ್ನನಾಗಮಂಡಲಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ರಸಾತಳಲೋಕದಿಂದಲು ಕೆಳಗೆ ಚತುಃಕೋಟಿ ಯೋಜನದುದ್ದದಲ್ಲಿ ಮಹಾತಳಲೋಕದಿಂದಲು ಕೆಳಗೆ ಶತಕೋಟಿ ಯೋಜನದುದ್ದದಲ್ಲಿ ಪಾತಾಳಲೋಕದಲ್ಲಿ ಅವಿಷ್ಟಕೆ ಆಧಾರವಾಗಿ ಕಮಠನಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಕಮಠನ ಮೇಲೆ ಜಲಂಗಳಂ, ಕಮಲಂಗಳಂ, ಮಹಾಪೃಥ್ವಿಯಂ, ಮೇರುಪರ್ವತ ಸಮಸ್ತದೇವಾಸುರಂಗಳಂ ಮಹಾಪೃಥ್ವಿಯು ಸಮಸ್ತ ಸಪ್ತಸಮುದ್ರಂಗಳಂ, ಸಪ್ತದ್ವೀಪಂಗಳಂ ಮೊದಲಾದ ಲೋಕಾದಿಲೋಕ ಪರ್ವತಂಗಳ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ವಿತಳಲೋಕದಿಂದಲೂ ಕೆಳಗೆ ದ್ವಿಕೋಟಿ ಯೋಜನದುದ್ದದಲ್ಲಿ ಅತಳ ವಿತಳ ಸುತಳ ರಸಾತಳ ತಳಾತಳ ಮಹಾತಳ ಪಾತಾಳ ಭೂಲೋಕ, ಭುವರ್ಲೋಕ, ಸ್ವರ್ಲೋಕ, ಮಹರ್ಲೋಕ, ಜನರ್ಲೋಕ, ತಪರ್ಲೋಕ, ಸತ್ಯರ್ಲೋಕ-ಇಂಥ ಲೋಕಂಗಳೆಂಬ ಹದಿನಾಲ್ಕು ಲೋಕಂಗಳಂ ನಿರ್ಮಿಸಿ ಮತ್ತೆ ಸ್ವರ್ಗ-ಮತ್ರ್ಯ-ಪಾತಾಳಗಳ ವಿವರಿಸಿ ನೋಡಿ ಆ ಲೋಕದವರಿಗೆ ವೇದಶಾಸ್ತ್ರಂಗಳಂ ನಿರ್ಮಿಸಿದನದೆಂತೆಂದಡೆ : ವೇದ ವೇದಾಂಗ, ಮಂತ್ರಶಾಸ್ತ್ರ, ತರ್ಕಶಾಸ್ತ್ರ, ಯೋಗಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ವೈದ್ಯಶಾಸ್ತ್ರ, ನೀತಿಶಾಸ್ತ್ರ, ಧರ್ಮಶಾಸ್ತ್ರ, ಶಕುನಶಾಸ್ತ್ರ, ಶಸ್ತ್ರಶಾಸ್ತ್ರ, ಶಿಲ್ಪಶಾಸ್ತ್ರ, ಜಲಶಾಸ್ತ್ರ, ಸಾಮುದ್ರಿಕಶಾಸ್ತ್ರ, ನೃಪತಿಶಾಸ್ತ್ರ, ಅಂಜನಶಾಸ್ತ್ರ, ರಸವೈದ್ಯಶಾಸ್ತ್ರ, ಬಿಲ್ಲುಶಾಸ್ತ್ರ, ಗೋಪಶಾಸ್ತ್ರ, ಮನುಷ್ಯಶಾಸ್ತ್ರ, ರಥಿಕಶಾಸ್ತ್ರ, ಅಂಗುಲಿಶಾಸ್ತ್ರ, ಶ್ರವಣಶಾಸ್ತ್ರ, ಗಂಧಪಾದ್ಯಶಾಸ್ತ್ರ, ಭುಜಗಶಾಸ್ತ್ರ, ಯೋಗಿಣಿಶಾಸ್ತ್ರ, ಯಕ್ಷಿಣಿಶಾಸ್ತ್ರ, ಶಬ್ದನೀತಿಶಾಸ್ತ್ರ, ಅಲಂಕಾರಶಾಸ್ತ್ರ, ವಿಶ್ವಶಾಸ್ತ್ರ, ಗಂಡಶಾಸ್ತ್ರ, ವ್ಯಾದ್ಥಿಶಾಸ್ತ್ರ, ಯುದ್ಧಶಾಸ್ತ್ರ, ಹಸರಶಾಸ್ತ್ರ, ಶುಂಭನಶಾಸ್ತ್ರ, ಮುಖಶಾಸ್ತ್ರ, ಬಂಧಶಾಸ್ತ್ರ, ಜಲಸ್ತಂಭಶಾಸ್ತ್ರ, ಅಗ್ನಿಶಾಸ್ತ್ರ, ಕರ್ಮಶಾಸ್ತ್ರ, ಪುರಾಣಿಕಶಾಸ್ತ್ರ, ಇಂಗಶಾಸ್ತ್ರ, ವೈದ್ಯಶಾಸ್ತ್ರ, ಇಂದ್ರಜಾಲ, ಮಹೇಂದ್ರಜಾಲ ಶಾಸ್ತ್ರಂಗಳು ಮೊದಲಾದ ಚೌಷಷ್ಠಿ ವಿದ್ಯಂಗಳ ನಿರ್ಮಿಸಿದನು ನೋಡಾ [ಅಪ್ರಮಾಣ] ಕೂಡಲಸಂಗಯ್ಯನ ಶರಣ ವಿಶ್ವಾದ್ಥಿಕಮಹಾರುದ್ರನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕಾಲು ಮೂರು, ಬಸುರು ನಾಲ್ಕು, ಕೈ ಐದು, ತಲೆ ಎಂಟು, ಬಾಯಿ ಒಂಬತ್ತು, ಕಿವಿ ಆರು, ಕಣ್ಣು ಮೂವತ್ತೆರಡು. ಇಂತೀ ಪಿಂಡಕ್ಕೆ ಐವತ್ತೊಂದು ಕಳೆ. ಆ ಜೀವಕ್ಕೆ ಪರಮನೊಂದೆ ಕಳೆ. ಈ ಗುಣ ಜಾÕನಪಿಂಡದ ಭೇದ. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ವೀರಶೈವಸಂಪನ್ನರಾದ ಸದ್ಭಕ್ತ ಶರಣಗಣಂಗಳಾದಡೆಯೂ ವೀರಮಾಹೇಶ್ವರರಾದಡೆಯೂ ಕ್ರಿಯಾಪಾದೋದಕ ಮಾಡಬೇಕಾದಡೆ, ತನ್ನ ಎರಡು ಅಂಗುಲಗಳಿಂದ, ಆ ಮಾಹೇಶ್ವರರ ಅಂಗುಷ್ಠ ಎಂಟು ಅಂಗುಲಗಳಲ್ಲಿ ತರ್ಜನಿ ಬೆರಳಿನಿಂದ ಬಲದ ಪಾದಾಂಗುಷ್ಠದ ಮೇಲೆ ಮೂರು ವೇಳೆ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳೆಗೆ ಅದೇ ಬಲಪಾದದ ನಾಲ್ಕು ಬೆರಳುಗಳನ್ನು ಒಂದು ವೇಳೆ ಸ್ಪರ್ಶನ ಮಾಡಿದಡೆ ಗುರುಪಾದೋದಕವೆನಿಸುವುದು. ಇದೇ ರೀತಿಯಲ್ಲಿ ಎಡದ ಪಾದವ ಮಾಡಿದಡೆ ಲಿಂಗೋದಕವೆನಿಸುವುದು. ಈ ಎರಡರ ಕೂಟವೆ ಜಂಗಮಪಾದೋದಕವೆನಿಸುವುದು. ತನ್ನ ಹಸ್ತದಿಂದ ಪಾದವ ಮುಟ್ಟಿ ಮಾಡಿದಂತಹದೆ ಸ್ಪರ್ಶನೋದಕವೆನಿಸುವುದು. ಆ ಪಾದದ ಮೇಲಣ ದ್ರವವ ತೆಗೆದಂತಹದೆ ಅವಧಾನೋದಕವೆನಿಸುವುದು. ಅದರ ಮೇಲಣ ಅಪೇಕ್ಷೆ ಮುಂದುಗೊಂಡು ತಾನು ಮಾಡಿಕೊಂಡಂತಹದೆ ಅಪ್ಯಾಯನೋದಕವೆನಿಸುವುದು. ಹಸ್ತದಿಂದ ಮುಟ್ಟಿ ಮಾಡಿದಂತಹದೆ ಹಸ್ತೋದಕವೆನಿಸುವುದು. ಆ ಭಾಜನವ ತನ್ನ ಕೈಯಲ್ಲಿ ತೆಗೆದುಕೊಂಡು ಆ ಜಂಗಮಕ್ಕೆ ನಮಸ್ಕರಿಸುವಂತಹದೆ ನಿರ್ಣಾಮೋದಕವೆನಿಸುವುದು. ಆ ಜಂಗಮಕ್ಕೆ ನಮಸ್ಕರಿಸಿ ಆ ಭಾಜನವನ್ನು ತನ್ನ ಕ್ರಿಯೆಗೆ ಇಟ್ಟುಕೊಂಡಂತಹುದೆ ಸತ್ಯೋದಕವೆನಿಸುವುದು_ ಈ ಪ್ರಕಾರದಲ್ಲಿ ಹತ್ತು ಪಾದೋದಕವು, ಶಿಕ್ಷಾಪಾದೋದಕದಲ್ಲಿ ಆಗುವುದೆಂದು ಅರಿದು ಆಚರಿಸುವುದು. ಆಚರಿಸಲಾಗದೆಂಬ ಹಚ್ಚಮಾನವರನೇನೆಂಬೆನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
ಮಹಾಮನೆಯ ಮಂಟಪದಲ್ಲಿ ನಾಲ್ಕು ನಡುವಳ ಕಂಬದ ನಡುವಳ ಕಂಬದಲ್ಲಿ ಒಂದು ಒರಲೆ ಮನೆಯ ಮಾಡಿತ್ತು. ಅದಕ್ಕೆ ಎಂಟು ಕಂಬ, ಒಂಬತ್ತು ಬಾಗಿಲು, ಹತ್ತು ಕದ; ಮಿಗಿಲೊಂದು ಮುಚ್ಚುವುದಕ್ಕೆ ಬಾಗಿಲಿಲ್ಲ. ತುಂಬಿ ಅಲ್ಲಿ ಹಾರಿತ್ತು. ಆ ಆತ್ಮನ ನೆಲೆಯನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ವೇದಶ್ರುತಿಯಿಂದ ವಸ್ತುವನರಿತೆಹೆನೆಂದಡೆ ಆ ವೇದವೆ ಹಾದಿಯೆ ವಸ್ತುವ ಕಾಬುದಕ್ಕೆ ? ಆ ವೇದ ಸರ್ವವು ಬ್ರಹ್ಮವೆಂದಲ್ಲಿ ವಸ್ತು ಎಲ್ಲಿ ಉಳಿಯಿತ್ತು ? ಆ ತೆರನ ತಿಳಿದು ವೇದವಾರನರಸಿತ್ತು ? ಶ್ರುತಿ ಯಾರ ಭೇದಿಸಿತ್ತು ? ಆ ಗುಣ ನಾದಬಿಂದುಕಳೆಯೊಳಗಾದಲ್ಲಿ ವಸ್ತುತತ್ವರೂಪಾಯಿತ್ತು. ಆ ಸ್ವರೂಪದ ಭೇದದಿಂದ ಪಂಚಭೌತಿಕದ ಗುಣದಿಂದ ಪಂಚವಿಂಶತಿತತ್ವಂಗಳೆಲ್ಲವೂ ಗೊತ್ತಾದವು. ನಾಲ್ಕು ವೇದ, ಹದಿನಾರು ಶಾಸ್ತ್ರ, ಇಪ್ಪತ್ತೆಂಟು ದಿವ್ಯಪುರಾಣಂಗಳಲ್ಲಿ ವೇದ್ಥಿಸಿ ಭೇದಿಸಿ ಕಂಡೆನೆಂಬಲ್ಲಿ ನಿಂದಿತ್ತು ನಿಜ ಸಂದೇಹಕ್ಕೆ ಒಳಗಾದುದಾಗಿ. ತರ್ಕಂಗಳಿಂದ ತರ್ಕಿಸಿ ನೋಡಿ ಮಿಕ್ಕಾದ ತತ್ವಂಗಳಲ್ಲಿ ಲಕ್ಷಿಸಿ ಪ್ರಮಾಣಿಸಿದಲ್ಲಿ ವಸ್ತು ಹಲವು ಕುಲವೆಂದು ಕಲ್ಪಿಸಿ ನುಡಿವಲ್ಲಿ ವಿಭೇದ ಪಕ್ಷವಲ್ಲದೆ ವಸ್ತು ಏಕರೂಪು. ಜಲ ಬಹುನೆಲಂಗಳಲ್ಲಿ ನಿಂದು ಒಲವರವಿಲ್ಲದೆ ಸಸಿ ವೃಕ್ಷಂಗಳ ಸಲಹುವಂತೆ ಸರ್ವಗುಣಸಂಪನ್ನನಾದೆಯಲ್ಲಾ ಪರಮಪ್ರಕಾಶ ಪರಂಜ್ಯೋತಿ ಪಂಚಬ್ರಹ್ಮಸ್ವರೂಪನಾದೆಯಲ್ಲಾ ಎನಗೆ ನೀನಾದೆಹೆನೆಂದು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಾ.
--------------
ಪ್ರಸಾದಿ ಭೋಗಣ್ಣ
ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ ಸಾರುತ್ತೈದಾವೆ, ನೋಡಾ, ಶ್ರುತಿಗಳೂ ನಾಲ್ಕು ವೇದವೂ ಹುಸಿಯಿದೆ `ಭರ್ಗೋ ದೇವಸ್ಯ ದ್ಥೀಮಹಿ' ಎಂದುದಾಗಿ, ಕೂಡಲಸಂಗನಲ್ಲದಿಲ್ಲೆಂದುದು ವೇದ.
--------------
ಬಸವಣ್ಣ
ಪಾವನವಾದೆನು ಬಸವಣ್ಣಾ, ನಿಮ್ಮ ಪಾವನಮೂರ್ತಿಯ ಕಂಡು. ಪರತತ್ವವನೈದಿದೆ ಬಸವಣ್ಣಾ, ನಿಮ್ಮ ಪರಮಸೀಮೆಯ ಕಂಡು. ಪದ ನಾಲ್ಕು ಮೀರಿದೆ ಬಸವಣ್ಣಾ, ನಿಮ್ಮ ಪರುಷಪಾದವ ಕಂಡು ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿದೆ; ಬಸವಣ್ಣಾ, ಬಸವಣ್ಣಾ, ಬಸವಣ್ಣಾ, ನೀನು ಗುರುವಾದೆಯಾಗಿ.
--------------
ಸಿದ್ಧರಾಮೇಶ್ವರ
ಇನ್ನು ನಿರಾಳ ಷಡುಚಕ್ರಂಗಳ ಮೇಲಣ ನಾಲ್ಕು ಚಕ್ರಂಗಳ ಕ್ರಮವೆಂತೆಂದಡೆ : ನಿರ್ವಾಣಲಿಂಗಚಕ್ರವೆಂದು, ಮಹಾನಿರ್ವಾಣಲಿಂಗಚಕ್ರವೆಂದು, ಅತಿಮಹಾನಿರ್ವಾಣಘನಲಿಂಗಚಕ್ರವೆಂದು, ಅತಿಮಹಾತೀತ ಮಹಾನಿರ್ವಾಣ ಘನಲಿಂಗಚಕ್ರವೆಂದು. ನಾಲ್ಕು ಚಕ್ರಕ್ಕೂ ಪದ್ಮವಿಲ್ಲ ವರ್ಣವಿಲ್ಲ, ಅಕ್ಷರಂಗಳಿಲ್ಲ, ಶಕ್ತಿಯಿಲ್ಲ, ಅದ್ಥಿದೇವತೆ ಇಲ್ಲ, ನಾದವಿಲ್ಲ, ಬೀಜಾಕ್ಷರವಿಲ್ಲದೆ ಬೆಳಗುತ್ತಿಹುದು. ಆ ಚಕ್ರಂಗಳು ವರ್ಣಕ್ಕೂ ವರ್ಣಾತೀತವಾಗಿಹುದು, ಉಪಮೆಗೆ ಉಪಮಾತೀತವಾಗಿಹುದು ಚಕ್ರಕ್ಕೂ ಚಕ್ರಾತೀತವಾಗಿಹುದೆಂದು ಚಕ್ರಾತೀತಾಗಮದಲ್ಲಿ ಪ್ರಸಿದ್ಧವಾಗಿ ಹೇಳುತ್ತಿಹುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ತನುವೆಂಬ ದೇವಸ್ಥಾನದೊಳಗೆ ಮಸ್ತಕಾಗ್ರವೆಂಬ ಸೆಜ್ಜಾಗೃಹದಲ್ಲಿ ಪ್ರಾಣಲಿಂಗಸ್ವಯಂಬ ಪ್ರತಿಷ್ಠೆಯಾಗಿರಲು, ಗುರುವೆಂಬ ಆರ್ಚಕನು ಮಂತ್ರವೆಂಬ ಆಗಮಿಕನು ಸಹ ಲಿಂಗವೆಂಬ ಉಚ್ಚಾಯ ವಿಗ್ರಹವನು ಕರಸ್ಥಲವೆಂಬ ರಥದಲ್ಲಿ ಮೂರ್ತಿಗೊಳಿಸಿ_ ಆ ಕರಸ್ಥಲವೆಂಬ ರಥಕ್ಕೆ ಜ್ಞಾನಕ್ರಿಯೆ ಎರಡು ಪಾದದ್ವಯ ಎರಡು ಕೂಡಿ ನಾಲ್ಕು ಗಾಲಿಗಳಂ ಹೂಡಿ, ಪಂಚೇಂದ್ರಿಯಗಳೆಂಬ ಪತಾಕೆಗಳಂ ಧರಿಸಿ ಏಕೋಭಾವವೆಂಬ ಕಳಸವನಿಟ್ಟು, ದಶವಾಯುಗಳೆಂಬ ಪಾಶವಂ ಬಂಧಿಸಿ ಷಡಂಗಗಳೆಂಬ ಮೊಳೆಗಳಂ ಬಲಿದು, ಸಪ್ತಧಾತುವೆಂಬ ಝಲ್ಲಿ ಪಟ್ಟೆಯನಲಂಕರಿಸಿ ಅಷ್ಟಮದ ಸಪ್ತವ್ಯಸನಂಗಳೆಂಬ ಆನೆ ಕುದುರೆಗಳು ಸಹ ಮಹಾನಾದವೆಂಬ ಭೇರಿ ವಾದ್ಯಂಗಳಿಂ ಷೋಡಶವಿಕಾರಂಗಳೆಂಬ ನರ್ತಕೀಮೇಳದಾರತಿಯಿಂ ಅಂತಃಕರಣ ಚತುಷ್ಟಯಗಳೆಂಬ ಚಾಮರಧಾರಕರಿಂ ಮನವೆಂಬ ಹೊರಜೆಯಿಂ ಕರಣಂಗಳೆಂಬ ಕಾಲಾಳ್ಗಳಿಂ_ಪಿಡಿಸಿ,_ ಸುಬುದ್ಧಿಯೆಂಬ ಭೂಮಿಯಲ್ಲಿ ಆನಂದವೆಂಬರಸು ರಥಮಂ ನಡೆಸಿ ನೆನಹು ನಿಷ್ಪತ್ತಿಯೆಂಬ ಸ್ಥಾನದಲ್ಲಿ ನಿಲಿಸಿ_ ಇಷ್ಟಲಿಂಗವೆಂಬ ಉಚ್ಚಾಯ ವಿಗ್ರಹವನ್ನು ಹೃದಯಕಮಲವೆಂಬ ಅಂತರಾಳದಲ್ಲಿ ಮೂರ್ತಿಗೊಳಿಸಿ ಆನಂದವೆಂಬ ಅರಸು ನಿರಾಳವೆಂಬ ಅಪರಿಮಿತ ಪಟ್ಟಣವ ಪ್ರವೇಶವಾದನು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಒಂದನೆ ದೆಸೆಯಲ್ಲಿ ಒಂದು ಮುಖದ ಭೈರವನು. ಎರಡನೆಯ ದೆಸೆಯಲ್ಲಿ ಎರಡು ಮುಖದ ಭೈರವನು. ಮೂರನೆಯ ದೆಸೆಯಲ್ಲಿ ಮೂರು ಮುಖದ ಭೈರವನು. ನಾಲ್ಕನೆಯ ದೆಸೆಯಲ್ಲಿ ನಾಲ್ಕು ಮುಖದ ಭೈರವನು. ಐದನೆಯ ದೆಸೆಯಲ್ಲಿ ಐದು ಮುಖದ ಭೈರವನು. ಆರನೆಯ ದೆಸೆಯಲ್ಲಿ ಆರು ಮುಖದ ಭೈರವನು. ಏಳನೆಯ ದೆಸೆಯಲ್ಲಿ ಏಳು ಮುಖದ ಭೈರವನು. ಎಂಟನೆಯ ದೆಸೆಯಲ್ಲಿ ಎಂಟು ಮುಖದ ಭೈರವನು. ಇಂತಿರುವ ಅಷ್ಟಭೈರವರು ಹೊರಸುತ್ತಿನಲ್ಲಿ ಪಹರಿಕರು. ತುತ್ತರಸಿನವೆಂಬ ಚಕ್ರವು ಸುರಗಿಯಂದದಿ ಸುತ್ತಿ, ತೆರಹು ಇಲ್ಲವೆ ತಿರುಗುತ್ತಿಹುದು. ಅದು ಕಾಣಬಾರದಂತಿಹುದು ನೋಡಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಇನ್ನಷ್ಟು ... -->