ಅಥವಾ

ಒಟ್ಟು 159 ಕಡೆಗಳಲ್ಲಿ , 41 ವಚನಕಾರರು , 122 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ. ಪವನವೆಂದಡೆ ಎಲ್ಲೆಡೆಯಲ್ಲಿ ಸೂಸಿ ಆಡುವಂತಹದು. ಬಿಂದುವೆಂದಡೆ ಆಗುಮಾಡುವಂತಹದು. ಈ ಮನ ಪವನ ಬಿಂದು ಮೂರನು ಒಡಗೂಡಿ ನೋಡಲು, ಪರಂಜ್ಯೋತಿಪ್ರಕಾಶದಂತಹ ಬೆಳಗೆ ಎನ್ನ ಕಂಗಳ ಮುಂದೆ ನಿಂದಿತ್ತು. ಆ ಮಹಾಬೆಳಗನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ, ಎನ್ನಂಗದ ಒಳಹೊರಗೆ ಪರಿಪೂರ್ಣವಾಗಿದ್ದಿತ್ತು ಕಾಣಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ, ನಿಮ್ಮ ಪಾದಕರುಣದಿಂದ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಟ್ಟಬಯಲಿನಲ್ಲಿ ಒಂದು ಮರ ಹುಟ್ಟಿತ್ತು. ಅದಕ್ಕೆ ಸುತ್ತಲು ಬೇರು ಆವರಿಸಿತ್ತು. ಅದಕ್ಕೆ ಶತಕೋಟಿ ಕೊನೆ ಬಿಟ್ಟಿತ್ತು. ಅಡಗಿದ ಬೇರನೆ ಸವರಿ, ಶತಕೋಟಿ ಕೊನೆಯನೆ ಕಡಿಯೆ, ಮರ ಒಣಗಿತ್ತು, ಉಲುಹು ನಿಂದಿತ್ತು, ಎಲೆ ಉದುರಿತ್ತು. ತರಗೆಲೆಯಾದ ಶರಣರ ಚರಣವಿಡಿದು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಹದಿನಾರಂಗುಲದುದ್ದ ಸರ್ಪನ ವಿಷ ಕೆಟ್ಟು ಎರಡು ಕಾಲನಾಕಾಶದಲೂರಿ ನಿಂದಿತ್ತು. ಬಹುಮುಖದ ಪಕ್ಷಿ ಏಕಮುಖವಾಗಿ ಚಂಚುಪುಟದಲ್ಲಿರ್ದ ರತ್ನಪಕ್ಷಿಯ ನುಂಗಿ ರತ್ನ ಕೆಟ್ಟಿತ್ತು. ಸೌರಾಷ್ಟ್ರ ಸೋಮೇಶ್ವರನಲ್ಲಿ ಅರಸುವ ಬನ್ನಿರೆ, ಸುಜ್ಞಾನಭರಿತರು.
--------------
ಆದಯ್ಯ
ಎಲೆ ಕಲಿದೇವಯ್ಯಾ, ಆದಿಯ ಕುಳವೂ ಅನಾದಿಯ ಕುಳವೂ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಮೂಲಶುದ್ಧದ ಮುಕ್ತಾಯ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಉಭಯಕುಳದ ಕಿರಣಶಕ್ತಿ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಭಾವವೂ ನಿರ್ಭಾವವೂ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅರ್ಥ ಪ್ರಾಣ ಅಬ್ಥಿಮಾನ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅಂಗಲಿಂಗಸಂಗ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅಷ್ಟದಳಕಮಲದ ಸಪ್ತಕರ್ಣಿಕೆಯು ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಎನ್ನ ನಡೆಗೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನುಡಿಗೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ ಎನ್ನ ನೋಟ ಕೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ. ಎನ್ನ ಮಾಟ ಸಮಾಪ್ತಿಯಾಯಿತ್ತು ನಿಮ್ಮ ಜಂಗಮಮೂರ್ತಿಯಿಂದ. ನಿಮ್ಮ ಪ್ರಸಾದದಿಂದ ತನು ಶುದ್ಧವಾಯಿತ್ತು. ಬಸವಣ್ಣ ತೋರಿದ ಕಾರಣ, ನಿಮ್ಮ ಜಂಗಮಮೂರ್ತಿಯ ಕಂಡು ಬದುಕಿದೆನು ಕಾಣಾ ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ವೇದಶ್ರುತಿಯಿಂದ ವಸ್ತುವನರಿತೆಹೆನೆಂದಡೆ ಆ ವೇದವೆ ಹಾದಿಯೆ ವಸ್ತುವ ಕಾಬುದಕ್ಕೆ ? ಆ ವೇದ ಸರ್ವವು ಬ್ರಹ್ಮವೆಂದಲ್ಲಿ ವಸ್ತು ಎಲ್ಲಿ ಉಳಿಯಿತ್ತು ? ಆ ತೆರನ ತಿಳಿದು ವೇದವಾರನರಸಿತ್ತು ? ಶ್ರುತಿ ಯಾರ ಭೇದಿಸಿತ್ತು ? ಆ ಗುಣ ನಾದಬಿಂದುಕಳೆಯೊಳಗಾದಲ್ಲಿ ವಸ್ತುತತ್ವರೂಪಾಯಿತ್ತು. ಆ ಸ್ವರೂಪದ ಭೇದದಿಂದ ಪಂಚಭೌತಿಕದ ಗುಣದಿಂದ ಪಂಚವಿಂಶತಿತತ್ವಂಗಳೆಲ್ಲವೂ ಗೊತ್ತಾದವು. ನಾಲ್ಕು ವೇದ, ಹದಿನಾರು ಶಾಸ್ತ್ರ, ಇಪ್ಪತ್ತೆಂಟು ದಿವ್ಯಪುರಾಣಂಗಳಲ್ಲಿ ವೇದ್ಥಿಸಿ ಭೇದಿಸಿ ಕಂಡೆನೆಂಬಲ್ಲಿ ನಿಂದಿತ್ತು ನಿಜ ಸಂದೇಹಕ್ಕೆ ಒಳಗಾದುದಾಗಿ. ತರ್ಕಂಗಳಿಂದ ತರ್ಕಿಸಿ ನೋಡಿ ಮಿಕ್ಕಾದ ತತ್ವಂಗಳಲ್ಲಿ ಲಕ್ಷಿಸಿ ಪ್ರಮಾಣಿಸಿದಲ್ಲಿ ವಸ್ತು ಹಲವು ಕುಲವೆಂದು ಕಲ್ಪಿಸಿ ನುಡಿವಲ್ಲಿ ವಿಭೇದ ಪಕ್ಷವಲ್ಲದೆ ವಸ್ತು ಏಕರೂಪು. ಜಲ ಬಹುನೆಲಂಗಳಲ್ಲಿ ನಿಂದು ಒಲವರವಿಲ್ಲದೆ ಸಸಿ ವೃಕ್ಷಂಗಳ ಸಲಹುವಂತೆ ಸರ್ವಗುಣಸಂಪನ್ನನಾದೆಯಲ್ಲಾ ಪರಮಪ್ರಕಾಶ ಪರಂಜ್ಯೋತಿ ಪಂಚಬ್ರಹ್ಮಸ್ವರೂಪನಾದೆಯಲ್ಲಾ ಎನಗೆ ನೀನಾದೆಹೆನೆಂದು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಾ.
--------------
ಪ್ರಸಾದಿ ಭೋಗಣ್ಣ
ಆದಿ ಮಧ್ಯ ಅವಸಾನವರಿಯಬೇಕೆಂಬರು, ಆದಿಯಲ್ಲಿ ನಿಂದು, ಮಧ್ಯದಲ್ಲಿ ಕಂಡು, ಅವಸಾನದಲ್ಲಿ ಅರಿದು ಇರಬೇಕೆಂಬರು. ಅರಿವುದು ಒಂದೊ ಮೂರೊ ಎಂದಲ್ಲಿ ನಿಂದಿತ್ತು. ನಿಂದುದ ಕಳೆದು ಸಂದ ಹರಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಮೂರಂಗುಲದಲ್ಲಿ ಅಳೆದು, ಐದಂಗುಲದಲ್ಲಿ ಪ್ರಮಾಣಿಸಿ ಆರಂಗುಲದಲ್ಲಿ ವಟ್ಟಕ್ಕೆ ಶುದ್ಧವಾಯಿತ್ತು. ಎಂಟರಳತೆ ಹದಿನಾರರ ಚದುರಸ ಮೂವತ್ತೆರಡರ ಮಧ್ಯದಲ್ಲಿ ಹಸ್ತಕಂಬಿಯನಿಕ್ಕಿ ಮೂರರಲ್ಲಿ ಭಾಗಿಸಲಾಗಿ, ಎರಡು ಒಳಗು ನಿಂದಿತ್ತು. ಒಂದು ಹೊರಗಾದ ಕೈಸಾಲೆಯಾಯಿತ್ತು. ಈ ಕೆಲಸವ ಹೊರಗೆ ಬಾಚಿಯಲ್ಲಿ ಸವೆದೆ, ಒಳಗೆ ಉಳಿಯಲ್ಲಿ ಸವೆದೆ. ಇಂತೀ ತೆರನ ತಿಳಿದಡೆ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವಲ್ಲದಿಲ್ಲಾ ಎಂದೆ.
--------------
ಬಾಚಿಕಾಯಕದ ಬಸವಣ್ಣ
ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದಿತ್ತು. ಅರ್ಥ ಪ್ರಾಣ ಅಬ್ಥಿಮಾನ ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದಿತ್ತು. ಅಂಗಲಿಂಗಸಂಗ ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದವು. ಎನ್ನ ನಡೆಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನುಡಿಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನೋಟಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ಮಾಟ ಸಮಾಪ್ತವಾಯಿತ್ತು, ನಿಮ್ಮ ಜಂಗಮಮೂರ್ತಿಯಿಂದ. ನಿಮ್ಮ ಪ್ರಸಾದದಿಂದ ಎನ್ನ ತನು ಶುದ್ಧವಾಯಿತ್ತು. ಬಸವಣ್ಣನ ತೋರಿದ ಕಾರಣ, ನಿಮ್ಮ ಜಂಗಮಮೂರ್ತಿಯ ಕಂಡು, ಬದುಕಿದೆನು ಕಾಣಾ, ಕಲಿದೇವರದೇವಯ್ಯಾ.
--------------
ಮಡಿವಾಳ ಮಾಚಿದೇವ
ಎತ್ತಬಾರದ ಕಲ್ಲು ನೀರಿನ ಮೇಲೆ ತೆಪ್ಪದಂತೆ ಹೋದಾಗ ಮೇಲೆ ಕುಳಿತು ಒತ್ತುವರ ನುಂಗಿತ್ತು. ನುಂಗಿದವರು ಅಲ್ಲಿದಂತೆ ಹೊಳೆಯ ನೀರ ತಪ್ಪಲಿಕ್ಕೆ ಕುಡಿದು, ಆ ತೆಪ್ಪ ಪೃಥ್ವಿಯಲ್ಲಿ ನಿಂದಿತ್ತು. ಈ ಗುಣಬ್ಥಿತ್ತಿಯ ಕೇಳಿಹರೆಂದು, ಅಲೇಖನಾದ ಶೂನ್ಯ ಶಿಲೆಯ ಮರೆಯಾದ.
--------------
ವಚನಭಂಡಾರಿ ಶಾಂತರಸ
ಕಪ್ಪೆ ಸತ್ತು ಸರ್ಪನ ನುಂಗಿತ್ತು ನೋಡಾ. ಮೊಲ ಸತ್ತು ಬಲೆಯ ಮೀರಿತ್ತು ನೋಡಾ. ಮತ್ತೊಡೆದು ಜಲವ ನುಂಗಿತ್ತು ನೋಡಾ. ಜೀವ ಸತ್ತು ಕಾಯ ನುಂಗಿತ್ತು ನೋಡಾ. ಉದಕ ಒಡೆದು ಏರಿ ತುಂಬಿತ್ತು, ರೆಕ್ಕೆ ಮುರಿದು ಪಕ್ಷಿ ಹಾರಿತ್ತು. ಹಾರುವ ಪಕ್ಷಿಯ ಮೀರಿ ನಿಂದಿತ್ತು ಬಯಲು. ನುಂಗಿದ ಬಯಲವ, ಹಿಂಗಿದ ಪಕ್ಷಿಯ ಕಂಗಳು ನುಂಗಿತ್ತು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಜ ಹರಿ ಸುರರಿಗೆ ಶರೀರವ ತೊಡಿಸಿ ಕರಣದೋಕುಳಿಯಾಡಿ ವಿಷಯದ ಮಳೆಯ ಕರೆವುತ್ತಿದ್ದಾಳೆ ನೋಡಾ. ಹರಣದ ಮಧ್ಯದಲ್ಲಿ ನಿಂದು, ಹೆಣ್ಣು ಹೊನ್ನು ಮಣ್ಣು ತೋರಿ, ಕಣ್ಣ ಕಟ್ಟಿದಳು ನೋಡಾ, ನಿಮ್ಮ ಕಾಣಲೀಯದೆ. ತಾನು ತಲೆಕೆಳಗಾಗಿ ಕಾಲುಮೇಲಾಗಿ ನಡೆವಳು. ಕರಿಯಾಗಿ ನಿಂದು, ಹರಿಯಾಗಿ ಹರಿದು, ಉರಿಯಾಗಿ ಸುಡುತಿಪ್ಪಳು ನೋಡಾ. ಕರಿಯ ಶಿರದಲ್ಲಿ ಉರಿ ಹುಟ್ಟಲು ಕರಿ ಬೆಂದಿತ್ತು, ಹರಿ ನಿಂದಿತ್ತು, ಉರಿ ಕೆಟ್ಟಿತ್ತು. ಶರೀರಗುಣವಳಿದು ಸದ್ಭಕ್ತಿಸಾಮ್ರಾಜ್ಯವನಾಳುತ್ತಿರ್ದೆನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅರಗಿನ ದೇಗುಲದಲ್ಲಿ ಒಂದು ಉರಿಯ ಲಿಂಗವ ಕಂಡೆ. ಮತ್ತೆ ದೇವರ ಪೂಜಿಸುವರಾರೂ ಇಲ್ಲ. ಉತ್ತರಾಪಥದ ದಶನಾಡಿಗಳಿಗೆ, ಸುತ್ತಿಮುತ್ತಿದ ಮಾಯೆ ಎತ್ತಲಿಕೆ ಹೋಯಿತ್ತು ? ಮರನೊಳಗಣ ಕಿಚ್ಚು ಮರನ ಸುಟ್ಟುದ ಕಂಡೆ ! ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದಿತ್ತು
--------------
ಅಲ್ಲಮಪ್ರಭುದೇವರು
ಮೊದಲು ರೂಪಾದ ಬಿತ್ತು, ಭೂಮಿಯಲ್ಲಿ ಬಿತ್ತಿ, ಅದು ಬೀಜ ನಾಮ ನಿಂದು, ಸಸಿಯೆಂಬ ನಾಮವಾಯಿತ್ತು. ಸಸಿ ಬಲಿದು ಬೆಳೆದು, ಉಂಡಿಗೆಯ ಬೀಜವೆಂಬ ಉಭಯನಾಮವ ತಾಳಿದುದು. ಬೀಜ ಒಂದೋ, ಎರಡೋ ? ಎಂಬುದನರಿದಲ್ಲಿ, ಕ್ರೀ ಶೂನ್ಯವೆಂಬ ಉಭಯನಾಮವಡಗಿತ್ತು. ಐಘಟದೂರ ರಾಮೇಶ್ವರಲಿಂಗ[ದ] ಉಭಯನಾಮ ನಿಂದಿತ್ತು.
--------------
ಮೆರೆಮಿಂಡಯ್ಯ
ಇಷ್ಟಲಿಂಗಸಂಬಂದ್ಥಿಗಳು ಭಕ್ತಿಸ್ಥಲವನರಿಯರು. ಪ್ರಾಣಲಿಂಗಸಂಬಂದ್ಥಿಗಳು ಮಾಹೇಶ್ವರಸ್ಥಲವನರಿಯರು. ಪ್ರಸಾದಲಿಂಗಸಂಬಂದ್ಥಿಗಳು ಪ್ರಾಣಲಿಂಗಸ್ಥಲವನರಿಯರು. ಶರಣಸ್ಥಲಭರಿತರು ಪ್ರಾಣಲಿಂಗಸಂಬಂಧವನರಿಯರು. ಐಕ್ಯ ನಿರ್ಲೇಪವಾದಲ್ಲಿ ಶರಣಸ್ಥಲ ನಿಂದಿತ್ತು. ಇಂತೀ ಐದು ಸ್ಥಲವ ಆರೋಪಿಸಿ, ಇದಿರಿಟ್ಟು ಕೂಡಿದಲ್ಲಿ ಆರುಸ್ಥಲವಾಯಿತ್ತು. ಆರುಸ್ಥಲ ವೇದ್ಥಿಸಿ ನಿಂದಲ್ಲಿ, ನೀ ನಾನೆಂಬ ಭಾವ, ಎಲ್ಲಿ ಅಡಗಿತ್ತು ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಬ್ರಹ್ಮಜ್ಞಾನದಿಂದ ಬ್ರಹ್ಮವನರಿತರಿವು ಆ ಪರಬ್ರಹ್ಮದೊಡವೆರಸಿ ನಿಂದಿತ್ತು. ಅದೆಂತೆಂದಡೆ: ಬ್ರಹ್ಮಬ್ರಹ್ಮಾಂಡ ಬೇರಿಲ್ಲದಿಪ್ಪಂತೆ, ಆಕಾಶವನಿಲ ಬೇರಿಲ್ಲದಿಪ್ಪಂತೆ, ಹಣ್ಣುರುಚಿ ಬೇರಿಲ್ಲದಿಪ್ಪಂತೆ. ದ್ವೈತವೆ ಅದ್ವೈತವಾದ ಬಳಿಕ ದ್ವೈತವೆಂದೆನಲುಂಟೆ ? ಇಲ್ಲವಾಗಿ. ಅರಿವು ಮರಹಿಗೆ ತೆರಹಿಲ್ಲದ ಕರಿಗೊಂಡರಿವು ತಾನಾಗಿರಲು ನಾನಾ ಪರಿಯ ವಿಚಿತ್ರಚಿತ್ರಂಗಳತ್ಯಾಶ್ಚರ್ಯವಪ್ಪಂತೆ ತೋರುತಿರಲು ಅದು ವಿಪರೀತವೆಂದೆನಲುಂಟೆ ? ಮುನ್ನ ತಾನಾಗಿರ್ದು ಇನ್ನು ಬೇರೆನಲುಂಟೆ ? ಇಲ್ಲವಾಗಿ. ಆದಿಮಧ್ಯಾಂತ ವಿರಹಿತವಾದ ಮಹಾಘನವೆ ಊಹಿಸಲಿಲ್ಲದ ಉಪಮೆ, ಭಾವಿಸಲಿಲ್ಲದ ಭಾವ, ಅರಿಯಲಿಲ್ಲದರಿವು ತಾನಾಗಿ, ಸೌರಾಷ್ಟ್ರ ಸೋಮೇಶ್ವರನೆಂಬ ನುಡಿಯನೊಳಕೊಂಡು ನಿಂದ ಸಹಜ ಭರಿತವಾಗಿರ್ದಿಲ್ಲದಂತೆ ಇಹ ಭೇದವನೇನೆಂಬೆನಯ್ಯಾ.
--------------
ಆದಯ್ಯ
ಇನ್ನಷ್ಟು ... -->