ಅಥವಾ

ಒಟ್ಟು 561 ಕಡೆಗಳಲ್ಲಿ , 31 ವಚನಕಾರರು , 254 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ, ಶ್ರೀಗುರುಲಿಂಗಜಂಗಮ ಕರುಣ ಕಟಾಕ್ಷೆಯಿಂದ ಶ್ರುತಿ ಗುರು ಶ್ವಾನುಭಾವವಿಡಿದು ಹಿಡಿದಂಥ ಸನ್ಮಾರ್ಗಾಚಾರಕ್ರಿಯೆಗಳ ಅಪಮೃತ್ಯು ಬಂದು ತಟ್ಟಿ ಪ್ರಾಣತ್ಯಾಗವ ಮಾಡಿದಡು ಅಂಜಿ ಅಳುಕದೆ, ಪರಮ ಪತಿವ್ರತತ್ವದಿಂದ ಹಿಂದು ಮುಂದಣ ಪುಣ್ಯಪಾಪವನೆಣಿಸದೆ, ಇಂತು ಶ್ರೀಗುರುವಾಕ್ಯವ ನಿಜನೈಷ್ಠಯಿಂದರಿದು, ನಿಜವೀರಶೈವ ಸದ್ಭಕ್ತಾಚಾರಲಿಂಗಮುಖದಿಂದ ಬಂದ ಸ್ವಪಾಕವಾದಡು ಸರಿಯೆ, ಷಣ್ಮತದಿಂದ ಧನ-ಧಾನ್ಯರೂಪಿನಿಂದ ಬಂದ ಪದಾರ್ಥವಾದಡು ಸರಿಯೆ, ಭಕ್ತಾಶ್ರಯದಲ್ಲಿ ಸ್ವಪಾಕವ ಮಾಡಿ, ಸಂಬಂಧಾಚರಣೆಗಳಿಂದ ಪವಿತ್ರಸ್ವರೂಪ ಪಾದೋದಕ ಪ್ರಸಾದವೆನಿಸಿ, ನಿರ್ವಂಚಕತ್ವದಿಂದ ಸಂಚಲಚಿತ್ತವನಳಿದು, ಮಂತ್ರಸ್ಮರಣೆಯಿಂದ ಸರ್ವಾಚಾರ ಸಂಪತ್ತಿನಾಚರಣೆಯನೊಳಕೊಂಡು, ಸಮಸ್ತಲೋಕ ಪಾವನಮೂರ್ತಿ ನಿಷ್ಕಲ ಪರಶಿವಲಿಂಗಜಂಗಮಕ್ಕೆ ಕೊಟ್ಟುಕೊಂಬ ಸದ್ಭಕ್ತ ಜಂಗಮದ ಚರಣಕಮಲಧೂಳನವೆ ದ್ವಿತೀಯ ಕೈಲಾಸ ಶಿವಮಂದಿರವೆಂದು ಹಿಂದು-ಮುಂದಣ ಆಶೆ-ಆಮಿಷದ ಭ್ರಾಂತು-ಭ್ರಮೆಗಳನುಳಿದು, ಧ್ಯಾನ-ಮೌನ-ನೇಮ-ನಿತ್ಯ-ಸತ್ಯ-ಸದ್ಭಾವವೆಂಬ ಷಡ್ಗುಣೈಶ್ವರ ಸಂಪದವ ನಿಷ್ಕಲಪರತತ್ವಲಿಂಗದಿಂ ಪಡದು, ಆ ಲಿಂಗದೊಡನೆ ಭೋಗಿಸಿ, ನಿಷ್ಕಲ ಪರತತ್ವಮೂರ್ತಿ ತಾನಾದ ನಿಜಮೋಕ್ಷದಿರವೆ ಸದ್ಯೋನ್ಮುಕ್ತಿದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿರಾಲಂಬ ನಿಃಕಳಂಕ ನಿಃಪ್ರಪಂಚತ್ವದಿಂದ ನಾಲ್ವತ್ತೆಂಟು ಪ್ರಣಮಸ್ಮರಣೆಯಿಂದ ಏಕಾದಶಲಿಂಗಂಗಳಿಗೆ ಏಕಾದಶಪ್ರಸಾದವ ಸಮರ್ಪಿಸಿ, ತಾನಾ ಸಂತೃಪ್ತಿಮಹಾಪ್ರಸಾದದಲ್ಲಿ ಲೋಲುಪ್ತನಾದಡೆ ನಿಜಪ್ರಸಾದಿಯೆಂಬೆ ನೋಡ. ಅದರ ವಿಚಾರವೆಂತೆಂದಡೆ : ನಾಲ್ವತ್ತೆಂಟು ಪ್ರಣವದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಆಪ್ಯಾಯನಪ್ರಸಾದ, ಸಮಯಪ್ರಸಾದ, ಗುರುಪ್ರಸಾದವ ಆಚಾರಲಿಂಗ-ಗುರುಲಿಂಗ-ಇಷ್ಟಲಿಂಗದೇವಂಗೆ ಸುಚಿತ್ತ, ಸುಬುದ್ಧಿ, ನಿರುಪಾದ್ಥಿಕಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿನಿಃಕಳಂಕ ಗುರುಬಸವರಾಜನೆಂಬೆ ನೋಡ. ಛತ್ತೀಶಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಪಂಚೇಂದ್ರಿಯವಿರಹಿತಪ್ರಸಾದ, ಕರಣಚತುಷ್ಟಯವಿರಹಿತಪ್ರಸಾದ, ಲಿಂಗಪ್ರಸಾದವ ಶಿವಲಿಂಗ-ಜಂಗಮಲಿಂಗ-ಪ್ರಾಣಲಿಂಗದೇವಂಗೆ ನಿರಹಂಕಾರ, ಸುಮನ, ನಿರಾಲಂಬಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿಃಕಾಮ ಶೂನ್ಯಲಿಂಗಸ್ವರೂಪ ಚೆನ್ನಬಸವರಾಜನೆಂಬೆ ನೋಡ ! ಇಪ್ಪತ್ತುನಾಲ್ಕು ಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಸಮತಾಪ್ರಸಾದ-ಪ್ರಸಾದಿಯಪ್ರಸಾದ-ಜಂಗಮಪ್ರಸಾದವ ಪ್ರಸಾದಲಿಂಗ-ಮಹಾಲಿಂಗ-ಭಾವಲಿಂಗದೇವಂಗೆ ಸುಜಾÕನ, ಸದ್ಭಾವ, ನಿಃಪ್ರಪಂಚಹಸ್ತದಿಂದ ಸಮರ್ಪಿಸಿ, ಆ ಪರಿಣಾಮಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿರಂಜನ ಜಂಗಮ ಸ್ವರೂಪ ಪ್ರಭುದೇವರೆಂಬೆ ನೋಡ. ಇನ್ನು ಉಳಿದ ದ್ವಾದಶಪ್ರಣಮಸ್ಮರಣೆಯಿಂದ ಸದ್ಭಾವಪ್ರಸಾದ-ಜಾÕನಪ್ರಸಾದವ ಇಂತು ನವಲಿಂಗಪ್ರಸಾದ ಪಾದೋದಕಂಗಳ ಸಂತೃಪ್ತಿಯಲ್ಲಿ ಸಾಕಾರ ನಿರಾಕಾರನಾದ ಪರತತ್ವಜ್ಯೋತಿರ್ಮಯಲಿಂಗದೇವಂಗೆ ನಿಜಾನಂದಹಸ್ತದಿಂದ ಸಮರ್ಪಿಸಿ, ಮತ್ತಾ ಅನಾದಿಕುಳಸನ್ಮತನಾದ ದಶವಿಧಪಾದೋದಕ, ಏಕಾದಶಪ್ರಸಾದದಲ್ಲಿ ಕೂಡಿ, ಘನಸಾರದಂತಾದಡೆ ಅನಾದಿಪೂರ್ಣಮಯ ನಿಜವಸ್ತು ತಾನೆ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಕಟ್ಟಕಡೆಯಲಿಂದ ನಟ್ಟನಡುಮಧ್ಯಕ್ಕೆ ಬರಲು, ಸಟ್ಟಸರಿರಾತ್ರಿ ಕವಿಯಿತ್ತು ನೋಡಾ ! ಹುಸಿಗಳ್ಳರೊತ್ತಿಬಂದಲ್ಲಿ ಹೆಸರು ಅಡಗಿ ಹೋಯಿತ್ತು. ಮತ್ತೆ ನೋಡ ಕಂಡ, ಮಿಥ್ಯದೃಷ್ಟರೊಡ ಕಂಡ, ನಿರಂಜನ ಚನ್ನಬಸವಲಿಂಗವ ನೋಡ ಕಂಡ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹರಹರ, ಶಿವಶಿವ, ಜಯಜಯ, ಕರುಣಾಕರ ಮತ್ಪ್ರಾಣನಾಥ ಮಹಾಶ್ರೀಗುರುವೆ ನಿಷ್ಕಲ ಪರಶಿವತತ್ವವಯ್ಯ. ಗುರುವೆ ಸಕಲಾಗಮಂಗಳ ಮೂರ್ತಿಯಯ್ಯ. ಗುರುವೆ ಅಜ್ಞಾನವೆಂಬ ಕಾವಳಕ್ಕೆ ಚಿತ್ಸೂರ್ಯನಯ್ಯ. ಗುರುವೆ ನಂಬಿದ ಭಕ್ತರ ವಿಷಯವೆಂಬ ವನಾಂತರಕ್ಕೆ ಚಿಚ್ಚಂದ್ರನಯ್ಯ. ಗುರುವೆ ಆಸೆಯೆಂಬ ಪಾಶವ ದಹಿಸುವುದಕ್ಕೆ ಚಿದಗ್ನಿಯಯ್ಯ. ಗುರುವೆ ಪರಾತ್ಪರಮೂರ್ತಿಯಯ್ಯ. ಗುರುವೆ ಸಕಲಾಧಾರಮೂರ್ತಿಯಯ್ಯ. ಗುರುವೆ ಸಚ್ಚಿದಾನಂದಮೂರ್ತಿಯಯ್ಯ. ಗುರುವೆ ಸರ್ವಲೋಕ ಸೂತ್ರಾಧಾರಮೂರ್ತಿಯಯ್ಯ. ಗುರುವೆ ಪರಬ್ರಹ್ಮವಸ್ತುವಯ್ಯ. ಗುರುವೆ ನಿತ್ಯನಿರುಪಮನಯ್ಯ. ಗುರುವೆ ನಿಷ್ಕಳಂಕ ನಿಷ್ಪ್ರಪಂಚನಯ್ಯ ಗುರುವೆ ನಿರುಪಾದ್ಥಿಕ ನಿಶ್ಚಿಂತನಯ್ಯ ಗುರುವೆ ಆದಿ ಅನಾದಿಯಿಂದತ್ತತ್ತಲಾದ ನಿರವಯಮೂರ್ತಿಯಯ್ಯ. ಗುರುವೆ ಶಾಂತ ಸರ್ವಜÕಸ್ವರೂಪನಯ್ಯ. ಗುರುವೆ ನಿರಾಳ ನಿಷ್ಕಾಮ ನೋಡ. ಶ್ರೀಗುರುವೆ ಸಗುಣಾನಂದಮೂರ್ತಿ ನೋಡ ! ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹುಟ್ಟಿತ್ತಲ್ಲಾ ಉಂಟೆನಿಸಿತ್ತಲ್ಲಾ. ಕರುವಿಟ್ಟಿತ್ತಲ್ಲಾ ರೂಪಾಯಿತ್ತಲ್ಲಾ. ನೋಡ ನೋಡ ವಾಯುಗುಂದಿತ್ತಲ್ಲಾ. ನೋಡ ನೋಡ ಭಾವಗುಂದಿತ್ತಲ್ಲಾ. ಅರಿವು ವಿಕಾರದಲ್ಲಿ ಆಯಿತ್ತು, ಹೋಯಿತ್ತು, ಮಹಾಲಿಂಗ ತ್ರಿಪುರಾಂತಕಾ, ನಿಮಗೆರಗದ ತನು.
--------------
ಕಿನ್ನರಿ ಬ್ರಹ್ಮಯ್ಯ
ಎನ್ನ ಹೊತ್ತಿಪ್ಪವಳ ನೆತ್ತಿಯ ಕಣ್ಣಿನಲ್ಲಿಪ್ಪ ಂಗವ ನಾನೆಚ್ಚತ್ತು ನೋಡುವ ತೆರನೆಂತಯ್ಯಾ. ನೋಡ ಹೋದಡೆ ನೆತ್ತಿ ಒಡೆದು ಕಣ್ಣಾಯಿತ್ತು. ನೋಡರ್ದಡೆ ಎನಗವಳು ತೋರಳು. ಎನಗೆ ಕಾಬ ತೆರನ ತೋರಾ, ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ.
--------------
ಸಿದ್ಧರಾಮೇಶ್ವರ
ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಆಡಾಡಿ ಉಂಡುಹೋಗುವರ ನಾಡಸಂಪನ್ನರ ಮಾಡಿಟ್ಟರೆ ನೋಡ ಬಂದವರನುವನವರೆತ್ತ ಬಲ್ಲರಯ್ಯಾ? ಬಾ ಎನ್ನ ಕೂಡಿ ಉಂಡು ಕುಲವ ನೋಡಯ್ಯಾ ನಿಮ್ಮಲ್ಲಿ ಗುರುನಿರಂಜನ ಚನ್ನ ಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹರಹರ ಶಿವಶಿವ ಜಯಜಯ ಹರಗಣಂಗಳಾಚರಿಸಿದ ಸತ್ಕಾಯಕದಿಂದ ಬಹುಜನ್ಮದ ದೋಷ ತೊಲಗುವುದಯ್ಯ. ಸತ್ಕಿøಯದಿಂದ ಕಾಲಕಾಮರ ಭಯ ಹರಿವುದಯ್ಯ. ಸಮ್ಯಜ್ಞಾನದಿಂದ ಮಾಯಾಪಾಶ ಹಿಂದಾಗುವುದಯ್ಯ. ಸದ್ಭಕ್ತಿಯಿಂದ ಪಾವನಸ್ವರೂಪರಾಗುವುರಯ್ಯ. ಲಿಂಗಾಚಾರದಿಂದ ತನು ಶುದ್ಧವಾಗುವುದಯ್ಯ. ಸದಾಚಾರದಿಂದ ಮನ ಸಿದ್ಧವಾಗುವುದಯ್ಯ. ಶಿವಾಚಾರದಿಂದ ಧನ ಪ್ರಸಿದ್ಧವಾಗುವುದಯ್ಯ. ಗಣಾಚಾರದಿಂದ ನಡೆ ಪರುಷವಾಗುವುದಯ್ಯ. ಭೃತ್ಯಾಚಾರದಿಂದ ನುಡಿ ಪರುಷವಾಗುವುದಯ್ಯ. ಕ್ರಿಯಾಚಾರದಿಂದ ಕರ್ಮೇಂದ್ರಿಯಂಗಳು ಪವಿತ್ರವಾಗುವವಯ್ಯ. ಜ್ಞಾನಾಚಾರದಿಂದ ಜ್ಞಾನೇಂದ್ರಿಯಂಗಳು ಪಾವನವಾಗುವವಯ್ಯ. ಭಾವಾಚಾರದಿಂದ ಕರಣಂಗಳು ನಿಜಸ್ವರೂಪವಾಗುವವಯ್ಯ. ಸತ್ಯಾಚಾರದಿಂದ ವಿಷಯಂಗಳು ಲಿಂಗಮುಖವಾಗುವವಯ್ಯ. ನಿತ್ಯಾಚಾರದಿಂದ ವಾಯುಗಳು ಮಹಾಪ್ರಸಾದವಾಗುವವಯ್ಯ. ಧರ್ಮಾಚಾರದಿಂದ ಲಿಂಗಾಂಗ ಏಕವಾಗುವುದಯ್ಯ. ಸರ್ವಾಚಾರದಿಂದ ಸರ್ವಾಂಗ ಜ್ಞಾನಜ್ಯೋತಿಯಪ್ಪುದು ತಪ್ಪದು ನೋಡ. ಸತ್ಕಾಯಕ ಮೊದಲಾದ ಷೋಡಶ ಕಲೆನೆಲೆಗಳೆ ಸದ್ಗುರುಮುಖದಿಂ ಚಿದಂಗವ ಮಾಡಿಕೊಂಡು, ಷೋಡಶವರ್ಣವೆ ಸದ್ಗುರುಮುಖದಿಂ ಚಿದ್ಘನಲಿಂಗವ ಮಾಡಿಕೊಂಡು ಸದ್ಗುರುಮುಖದಿಂ ಎರಡಳಿದು ಏಕಸ್ವರೂಪದಿಂದ ಜ್ಯೋತಿಜ್ಯೋತಿ ಬೆರದಂತೆ ಬಸವ ಮೊದಲಾದ ಪ್ರಮಥಗಣಂಗಳೆಲ್ಲ ಬಯಲೊಳಗೆ ಮಹಾಬಯಲಾದರು ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹರಹರ, ಶಿವಶಿವ, ಜಯಜಯ ಶ್ರೀಗುರುಲಿಂಗಜಂಗಮ ಶರಣಗಣಂಗಳಲ್ಲಿ ಕಿಂಕರ ಭೃತ್ಯಭಾವಸದ್ಭಕ್ತಿಯೆ ನಿಜಶಿವಯೋಗವಯ್ಯ. ಸದ್ಭಕ್ತಿಯೆ ನಿಜಕೈವಲ್ಯಪದವಯ್ಯ. ಸದ್ಭಕ್ತಿಯೆ ಪರಮಕೈ¯oಸವಯ್ಯ. ಸದ್ಭಕ್ತಿಯೆ ನಿಜಮೋಕ್ಷಮಂದಿರವಯ್ಯ. ಸದ್ಭಕ್ತಿಯೆ ರುದ್ರಲೋಕವಯ್ಯ. ಸದ್ಭಕ್ತಿಯೆ ಶಿವಲೋಕ ಶಾಂಭವಲೋಕವಯ್ಯ. ಸದ್ಭಕ್ತಿಯೆ ನಾಗಲೋಕ ದೇವಲೋಕವಯ್ಯ. ಸದ್ಭಕ್ತಿಯೆ ಕಾಮಧೇನು - ಕಲ್ಪವೃಕ್ಷ - ಚಿಂತಾಮಣಿಯಯ್ಯ. ಸದ್ಭಕ್ತಿಯೆ ಸಂಜೀವನ ಪರಮಾಮೃತವಯ್ಯ. ಸದ್ಭಕ್ತಿಯೆ ನಿತ್ಯತ್ವ ಪರಮಪದವಯ್ಯ. ಸದ್ಭಕ್ತಿಯೆ ಚಿದೈಶ್ವರ್ಯ ಚಿದಾಭರಣವಯ್ಯ. ಸದ್ಭಕ್ತಿಯೆ ಮಹಾತೀರ್ಥವಯ್ಯ. ಸದ್ಭಕ್ತಿಯೆ ಮಹಾಶಿವಕ್ಷೇತ್ರವಯ್ಯ. ಸದ್ಭಕ್ತಿಯಿಂದ ಮಹಾಪಾಪಂಗಳು ಕುಸಿದು ಹೋಹವಯ್ಯ. ಸದ್ಭಕ್ತಿಯಿಂದ ಸಕಲಲೋಕಪಾವನವಯ್ಯ. ಸದ್ಭಕ್ತಿಯಿಂದ ಸದ್ಯೋನ್ಮುಕ್ತಿಯಯ್ಯ. ಸದ್ಭಕ್ತಿಯಿಂದ ಅನಂತರು ಮುಕ್ತರಾದರಯ್ಯ. ಸದ್ಭಕ್ತಿಯೆ ಮಹಾಜ್ಞಾನದರ್ಪಣ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿರ್ವಂಚಕತ್ವದಿಂದ ದಶವಿಧಲಿಂಗಗಳಿಗೆ ಏಕವಿಂಶತಿ ಮಂತ್ರಸ್ಮರಣೆಯಿಂದ ದಶವಿಧಪಾದೋದಕವನರ್ಪಿಸಿ, ಸಂತೃಪ್ತಾನಂದಜಲದಲ್ಲಿ ಪರಿಣಾಮಿಸಬಲ್ಲಡೆ ನಿಜಪ್ರಸಾದಿಯೆಂಬೆನಯ್ಯ. ಅದರ ವಿಚಾರವೆಂತೆಂದಡೆ : ಏಕವಿಂಶತಿ ಪ್ರಣಮದೊಳಗೆ ಷಡ್ವಿಧಪ್ರಣಮಸ್ಮರಣೆಯಿಂದ ಸ್ವರ್ಶನೋದಕ ಅವಧಾರೋದಕ-ಗುರುಪಾದೋದಕವ ಆಚಾರಲಿಂಗ-ಗುರುಲಿಂಗ-ಇಷ್ಟಲಿಂಗದೇವಂಗೆ ಅರ್ಪಿಸಿ, ತಾನಾ ಪರಿಣಾಮದಲ್ಲಿ ಲೋಲುಪ್ತನಾದಡೆ ಅನಾದಿಗುರುಲಿಂಗಸ್ವರೂಪ ಬಸವಣ್ಣನೆಂಬೆ ನೋಡ. ದಶಪಂಚಪ್ರಣಮದೊಳಗೆ ಷಡ್ವಿಧಪ್ರಣಮಸ್ಮರಣೆಯಿಂದ ಆಪ್ಯಾಯನೋದಕ-ಹಸ್ತೋದಕ-ಲಿಂಗಪಾದೋದಕವ ಶಿವಲಿಂಗ-ಜಂಗಮಲಿಂಗ-ಪ್ರಾಣಲಿಂಗದೇವಂಗೆ ಸಮರ್ಪಿಸಿ ತಾನಾ ಪರಿಣಾಮದಲ್ಲಿ ಲೋಲುಪ್ತನಾದಡೆ ಅನಾದಿಲಿಂಗಸ್ವರೂಪ ಚೆನ್ನಬಸವಣ್ಣನೆಂಬೆ ನೋಡ. ನವವಿಧಪ್ರಣಮದೊಳಗೆ ಷಡ್ವಿಧಪ್ರಣಮಸ್ಮರಣೆಯಿಂದ ಪರಿಣಾಮೋದಕ-ನಿರ್ನಾಮೋದಕ-ಜಂಗಮಪಾದೋದಕವ ಪ್ರಸಾದಲಿಂಗ-ಮಹಾಲಿಂಗ ಭಾವಲಿಂಗದೇವಂಗೆ ಸಮರ್ಪಿಸಿ, ತಾನಾ ಸಂತೃಪ್ತಿಯಲ್ಲಿ ಲೋಲುಪ್ತನಾದಡೆ ಅನಾದಿಜಂಗಮಸ್ವರೂಪ ಅಲ್ಲಮಪ್ರಭುರಾಯನೆಂಬೆ ನೋಡಾ. ಇನ್ನು ಉಳಿದ ತ್ರಿವಿಧಪ್ರಣಮಸ್ಮರಣೆಯಿಂದ ನವವಿಧೋದಕವನೊಳಕೊಂಡ ಸತ್ಯೋದಕವ ನವವಿಧಲಿಂಗಕ್ಕೆ ಮಾತೃಸ್ವರೂಪವಾದ ನಿಃಕಲಪರತತ್ವಲಿಂಗದೇವಂಗೆ ಸಮರ್ಪಿಸಿ, ನಿತ್ಯತೃಪ್ತತ್ವದಿಂದ ಸರ್ವಾವಸ್ಥೆಯ ನೀಗಬಲ್ಲಡೆ ಅನಾದಿಶರಣಪ್ರಸನ್ನ ಮೂರ್ತಿಯೆಂಬೆ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಮಣ್ಣಿಂಗೆ ಹೊಡೆದಾಡುವಾತನ ಗುರುವೆಂಬೆನೆ? ಆತ ಗುರುವಲ್ಲ. ಹೆಣ್ಣಿಂಗೆ ಹೊಡೆದಾಡುವಂತಾ [ಗೆ?]À ಲಿಂಗವೆಂಬೆನೆ ? ಅದು ಲಿಂಗವಲ್ಲ. ಹೊನ್ನಿಂಗೆ ಹೊಡೆದಾಡುವಾತನ ಜಂಗಮವೆಂಬೆನೆ ? ಆತ ಜಂಗಮವಲ್ಲ. ಈ ತ್ರಿವಿಧಮಲಕ್ಕೆ ಹೊಡೆದಾಡುವಾತನ ಶರಣನೆಂಬೆನೆ ? ಆತ ಶರಣನಲ್ಲ ನೋಡಾ. ಈ ವಿಚಾರವನರಿದು, ಮಲತ್ರಯಂಗಳ ಸರ್ವಾವಸ್ಥೆಯಲ್ಲಿ ಹೊದ್ದಲೀಯದೆ ಗೌರವ ಬುದ್ಧಿ ಲಿಂಗಲೀಯ ಜಂಗಮಾನುಭಾವ ಸರ್ವಾಚಾರಸಂಪತ್ತಿನಾಚರಣೆಯ ಶ್ರುತಿ_ಗುರು_ಸ್ವಾನುಭಾವದಿಂದರಿದು ಆಚರಿಸಿದಡೆ, ಗುಹೇಶ್ವರಲಿಂಗದಲ್ಲಿ ಪರಾತ್ಪರಗುರುಲಿಂಗಜಂಗಮಶರಣನೆಂಬೆ ನೋಡ ಜೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಪುರಜನಂಗಳ ಮೆಚ್ಚಿಸುವಾಗ ಪುರುಷಾರ್ಥಿಯೆ ಶರಣ? ಪರಿಜನಂಗಳ ಮೆಚ್ಚಿಸುವಾಗ ಪಾದರಗಿತ್ತಿಯೆ ಶರಣ? ಸರ್ವರ ಮೆಚ್ಚಿಸುವಾಗ ಸಂತೆಯ ಸೂಳೆಯೇ ಶರಣ? ತನ್ನ ಲಿಂಗದ ನಚ್ಚು ಮಚ್ಚು ಪರಬ್ರಹ್ಮದಚ್ಚು. ನಿಂದಕರ ಸುಡುವ ಎದೆಗಿಚ್ಚು ನೋಡ. ಕೆಂಡವ ಕೊಂಡು ಮಂಡೆಯ ತುರಿಸುವಂತೆ ಕೆಂಡಗಣ್ಣನ ಶರಣರ ಇರವನರಿಯದೆ ದೂಷಣೆಯ ಮಾಡುವ ನರಕಿಜೀವಿಗಳ ನರಕದಲ್ಲಿಕ್ಕದೆ ಮಾಬನೇ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಯ್ಯ ! ಕಾರ್ಯನಲ್ಲ ಕಾರಣನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಭೇದಕನಲ್ಲ ಸಾಧಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಪಾತಕನಲ್ಲ ಸೂತಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದ್ವೈತನಲ್ಲ ಅದ್ವೈತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕಾಟಕನಲ್ಲ ಕೀಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಎನ್ನವನಲ್ಲ ನಿನ್ನವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಸಂಕಲ್ಪನಲ್ಲ ವಿಕಲ್ಪನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಒಮ್ಮೆ ಆಚಾರದವನಲ್ಲ ಒಮ್ಮೆ ಅನಾಚಾರದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕುಂಟಣಿಯಲ್ಲ ನೆಂಟಣಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದುಶ್ಶೀಲನಲ್ಲ ದುರ್ಮಾರ್ಗಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಜಾತಿಯವನಲ್ಲ ಅಜಾತಿಯವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಇಂದು ಉಭಯವಳಿದು ಬೆಳಗುವ ಸಂಗನಬಸವಣ್ಣನ ಉನ್ಮನಾಗ್ರದಲಿ ಹೊಳೆವಾತ ತಾನೆ ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಗಗನ ಮಂಡಲದಲ್ಲಿ ಹುಟ್ಟಿದ ಶಶಿಕಳೆ ಭೂಮಂಡಲದಲ್ಲಿ ಉದಯವಾದುದ ಕಂಡೆನಯ್ಯ. ಭೂಮಂಡಲದಲುದಯವಾದ ಶಶಿಕಳೆ, ತ್ರೆ ೈಜಗವ ನುಂಗಿತ್ತು ನೋಡ. ನಾರಿಯರ ತಲೆಯ ಮೆಟ್ಟಿ, ಮೇರುವೆಯ ಹೊಕ್ಕಿತ್ತು ನೋಡಾ. ಮೇರುಗಿರಿಯ ಪರ್ವತದಲ್ಲಿಪ್ಪಾತನನೆಯ್ದೆ ನುಂಗಿತ್ತು ನೋಡಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->