ಅಥವಾ

ಒಟ್ಟು 157 ಕಡೆಗಳಲ್ಲಿ , 45 ವಚನಕಾರರು , 130 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದ ದ್ರವ್ಯಕ್ಕೆ ವ್ರತವೊ ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ ? ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ. ವ್ರತವಾವುದೆಂದಡೆ ತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ, ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ, ಆ ಸೂಕ್ಷ್ಮತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ. ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ, ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿ ಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ. ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ, ಇಂತೀ ಉಭಯ ಸಿದ್ಭವಾಗಿ ನಡೆವುದೆ ವ್ರತ ಆಚಾರz ಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ, ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.
--------------
ಅಕ್ಕಮ್ಮ
ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗರಾ ಮನವೆ. ಅಂಗೈಯಲ್ಲಿ ಫಲ ಅಂಗ ಲಿಂಗ ನೋಡಿದಂತೆ ನೋಡಾ ಮನವೆ. ಅಂಗೈಯ ಫಲ ಲಿಂಗಯ್ಯನಾಗರೆ ಪೂಜಿಸುವರೆ ಪ್ರಮಥರು? ನೋಡಾ ಮನವೆ. ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿ ಪೂಜಿಸಿ ಬದುಕು ಮನವೆ.
--------------
ಸಿದ್ಧರಾಮೇಶ್ವರ
ಬ್ರಹ್ಮವೆಂಬ ವೃಕ್ಷದಲ್ಲಿ ಫಲಪತ್ರಕುಸುಮಂಗಳೆಂಬ ಸಚರಾಚರಂಗಳಷ್ಟಮೂರ್ತಿಗಳಾಗಿ ಆಗಿ ಆಗಿ ಅಳಿವುತ್ತಿಪ್ಪವಯ್ಯಾ. ಇದಕ್ಕೆ ಶ್ರುತಿ: ಬ್ರಹ್ಮಣೋ ವೃಕ್ಷಾನ್ಮಹತೋ ಪತ್ರಂ ಕುಸುಮಿತಂ ಫಲಂ ಚರಾಚರಾಷ್ಟಮೂರ್ತಿಂ ಚ ಫಲಿತಂ ಫಲಶೂನ್ಯವತ್ ಇಂತೆಂದುದಾಗಿ, ಅಷ್ಟಮೂರ್ತಿಗಳು ನಷ್ಟವಾದಲ್ಲಿ ಸೌರಾಷ್ಟ್ರ ಸೋಮೇಶ್ವರಲಿಂಗ ನಷ್ಟವಾಯಿತ್ತೆಂಬ ಮಿಟ್ಟಿಯ ಭಂಡರನೇನೆಂಬೆನಯ್ಯಾ.
--------------
ಆದಯ್ಯ
ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅನಲನ ತಾಹಲ್ಲಿ, ಅನಿಲನ ಗಂಧ ಒಡಗೂಡಿ ಸೋಂಕುವಲ್ಲಿ, ಅಲ್ಲಿ ವ್ರತದಾಯತದ ಲಕ್ಷಣವನರಿಯಬೇಕು; ಮಿಕ್ಕಾದ ತಿಲ, ತೈಲ, ಫ್ಸೃತ, ಕ್ಷೀರ, ದದ್ಥಿ, ಮಧುರ, ಇಕ್ಷುದಂಡ, ಕ್ರಮುಕ, ಪರ್ಣ, ಚೂರ್ಣ, ರಸ, ದ್ರವ್ಯ ಮುಂತಾದವಿಂತು ಮಿಕ್ಕಾದ ಫಲ ಕುಸುಮ ವಿದಳ ಬಹುಧಾನ್ಯ ಮುಂತಾದ ಸಕಲಸುಯಿಧಾನಂಗಳಲ್ಲಿ ಲಿಂಗವ್ಯವಧಾನದಲ್ಲಿ ತಂದು ಸತ್ಕ್ರೀ ತಪ್ಪದೆ, ವ್ರತಕ್ಕೆ ಭಂಗವಿಲ್ಲದೆ, ನಾಣ್ಣುಡಿಗೆ ಇದಿರೆಡೆಯಾಗದೆ, ವಿಶ್ವಲಕ್ಷಣ ಶಸ್ತ್ರ ಅಭ್ಯಾಸಿಯಂತೆ, ಆವೆಡೆಯಲ್ಲಿ ಇದಿರಿಂಗೆ ತೆರಪಿಲ್ಲದೆ, ತಾ ಮುಟ್ಟುವಲ್ಲಿ ಒಳಗೆ ಕೊಂಡಂತೆ ಇರಬೇಕು. ಇಷ್ಟನರಿತು ಆಚರಣೆಯಲ್ಲಿ ಆದರಿಸಿ ನುಡಿವುದೆ ಸದ್ಭಕ್ತನ ಸ್ಥಲ. ಆತ ಸರ್ವಶೀಲಸಂಪನ್ನ ಸರ್ವಾಂಗಲಿಂಗ ಸನ್ನದ್ಧ ಆತ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಭಕ್ತ ಭೂಮಿಯಾಗಿ, ಜಂಗಮ ಬೀಜವಾಗಿ, ಆ ಜಂಗಮದರಿವು ಅಪ್ಪುವಾಗಿ, ಆ ಸುಭೂಮಿಯ ಬೀಜದ ಮೇಲೆ ಸುರಿಯೆ, ಆ ಭೂಮಿ ಶೈತ್ಯವಾಗಿ, ಆ ಬೀಜದ ಒಳಗು ಒಡೆದು ಅಂಕುರ ತಲೆದೋರಿ, ಭಕ್ತಿ ಜ್ಞಾನ ವೈರಾಗ್ಯವೆಂಬ ಮರ ಶಾಖೆ ಫಲ ಬಲಿದು ತುರೀಯ ನಿಂದು ಹಣ್ಣಾಯಿತ್ತು. ಆ ಹಣ್ಣ ಮೇಲಣ ಜಡವ ಕಳೆದು ಒಳಗಳ ಬಿತ್ತ ಮುಂದಕ್ಕೆ ಹುಟ್ಟದಂತೆ ಹಾಕಿ ಉಭಯದ ಮಧ್ಯದಲ್ಲಿ ನಿಂದ ಸವಿಸಾರವ ಸದಾಶಿವಮೂರ್ತಿಲಿಂಗಕ್ಕೆ ಅರ್ಪಿತವ ಮಾಡು.
--------------
ಅರಿವಿನ ಮಾರಿತಂದೆ
ಸ್ವಸ್ಥಿರವೆಂಬ ಭೂಮಿಯಲ್ಲಿ ಸ್ತಂಭಂಗಳು ಮೂರಾಗಿ, ಫಲಂಗಳಾರಾದವು. ಆ ಫಲ ಮೀರಿತ್ತು, ಮೇಲಣ ಮೂವತ್ತಾರ ಮೀರಿ, ಅವ್ವೆಗೆ ಯೋಗ್ಯವಾಗಿ, ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿ ತತ್ವವಿದೆಂದರಿತು ತತ್ವಮಸಿಯಾದಳವ್ವೆ.
--------------
ಸಿದ್ಧರಾಮೇಶ್ವರ
ಧರೆ ಸಲಿಲ ಅನಲ ಅನಿಲ ಆಕಾಶ ಮುಂತಾದ ಭೇದಂಗಳ ಕಲ್ಪಿಸುವಲ್ಲಿ, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವಮೂರ್ತಿಗಳು ಕುರುಹುಗೊಂಬಲ್ಲಿ, ನಾದಬಿಂದುಕಳೆ ಲಕ್ಷಿಸುವಲ್ಲಿ, ಆ ಪರಶಿವತತ್ವದ ಅಂಗ ಗುರುರೂಪಾಗಿ, ಆ ಪರತತ್ವದ ಅಂಗ ಲಿಂಗವಾಗಿ, ಆ ಪರತತ್ವದ ಅಂಗ ಜಂಗಮವಾಗಿ, ಆ ಜಂಗಮ ಲಿಂಗದಲ್ಲಿ ಲೀಯವಾಗಿ, ಆ ಲಿಂಗ ಗುರುವಿನಲ್ಲಿಲೀಯವಾಗಿ, ಆ ಗುರು ಉಭಯಸ್ಥಲವ ಗಬ್ರ್ಥೀಕರಿಸಿ, ಗುರುವೆಂಬ ಭಾವ ತನಗಿಲ್ಲದೆ ತರು ಫಲವ ಹೊತ್ತಂತೆ, ಫಲ ರಸವ ಇಂಬಿಟ್ಟುಕೊಂಡಂತೆ, ಅಂಗಕ್ಕೆ ಆತ್ಮತೇಜವರತು, ಭಾವಕ್ಕೆ ಬ್ಥೀಷ್ಮ ನಿಂದು, ಮನ ಮಹವನೊಡಗೂಡಿದಲ್ಲಿ, ಆತ ಸದ್ಗುರುಮೂರ್ತಿಯ ಕರದಲ್ಲಿ ಬಂದ ಲಿಂಗ, ಕರ್ಣದಲ್ಲಿ ಹೇಳಿದ ಮಂತ್ರ, ಕಪಾಲವ ಮುಟ್ಟಿದ ತಂತ್ರ. ಆದು ಸದ್ಗುರು ಕಾರುಣ್ಯ, ಆ ಶಿಷ್ಯಂಗೆ ಜೀವನ್ನುಕ್ತಿ. ಇದು ಆಚಾರ್ಯಮತ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಏನನೋದಿ ಏನ ಕೇಳಿ ಏನ ಹೇಳಿದಡೆ ಏನು ಫಲ ತನ್ನಲ್ಲಿದ್ದ ವಸ್ತುವ ತಾನರಿಯದನ್ನಕ್ಕ? ಚಿನ್ನದ ತೊಡಹದ ತಾಮ್ರದಂತೆ ಒಳಗೆ ಕಾಳಿಕೆ ಬಿಡದು. ನುಣ್ಣಗೆ ಬಣ್ಣಗೆ ನುಡಿವ ಅಣ್ಣಗಳೆಲ್ಲರು ಕಣ್ಣು ಕಾಣದೇ ಕಾಡಬಿದ್ದರು. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮನರಿಯದ ಅಂಧಕರೆಲ್ಲರು.
--------------
ಸ್ವತಂತ್ರ ಸಿದ್ಧಲಿಂಗ
ಎಲೆಯಿಲ್ಲದೆ ಮರ ಕಾಯಾಯಿತ್ತು, ಆ ಮರ ಫಲವಾಯಿತ್ತು, ಆ ಫಲ ನಿಃಫಲವಾಯಿತ್ತು ಆ ನಿಃಫಲವನುಂಡೀಗ ನನಗೆ ಸುಖಸಂಯೋಗವಾಯಿತ್ತಯ್ಯ ಸಂಗಯ್ಯ.
--------------
ನೀಲಮ್ಮ
ಆಹಾ ಎನ್ನಪುಣ್ಯದ ಫಲ ! ನಿರಾಕಾರ ಗುರುವೆನಗೆ ಸಾಕಾರವಾಗಿ ಬಂದುದು. ಆಹಾ ಎನ್ನ ಬಹುಜನ್ಮದ ತಪಸ್ಸಿನ ಫಲ ! ನಿರವಯಾನಂದ ನಿಜವೆನಗೆ ಸಾಧ್ಯವಾದುದು. ಆಹಾ ಎನ್ನ ಭಾಗ್ಯದ ನಿದ್ಥಿಯೆನಗಿತ್ತ ನಿರಂಜನ ಚನ್ನಬಸವಲಿಂಗವೆಂಬ ಸದ್ಗುರುದೇವನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಂಚಾಕ್ಷರವೆಂದಡೆ ಪರಬ್ರಹ್ಮ. ಪಂಚಾಕ್ಷರವೆಂದಡೆ ಪರಶಿವ. ಪಂಚಾಕ್ಷರವೆಂದಡೆ ಪರವಸ್ತುವಿನ ನಾಮ. ಪಂಚಾಕ್ಷರವೆಂದಡೆ ಭವದುರಿತ ಬಿಟ್ಟೋಡುವುದು. ಪಂಚಾಕ್ಷರವೆಂದಡೆ ಬಹುಜನ್ಮದ ದೋಷ ಪರಿಹಾರವಾಗುವುದು. ಪಂಚಾಕ್ಷರವೆಂದಡೆ ಸಕಲ ತೀರ್ಥಕ್ಷೇತ್ರಯಾತ್ರೆಯಾದ ಪುಣ್ಯಫಲಪ್ರಾಪ್ತಿಯಾಗುವುದು. ಪಂಚಾಕ್ಷರವೆಂದಡೆ ಅಷ್ಟಮಹಾಸಿದ್ಧಿ ನವಮಹಾಸಿದ್ಧಿ ಅಷ್ಟಾಂಗಯೋಗದ ಫಲ ಅಷ್ಟೈಶ್ವರ್ಯಸಂಪತ್ತು ದೊರಕೊಳ್ಳುವುದು ನೋಡಾ. ಇಂತಪ್ಪ ಪಂಚಾಕ್ಷರೀಮಂತ್ರದ ಮಹತ್ವವ ಕಂಡು ಮನ ಕರಗಿ ತನು ಉಬ್ಬಿ, ಪಂಚಾಕ್ಷರಿ, ಪಂಚಾಕ್ಷರಿಯೆಂದು ನೆನೆನೆನೆದು ಭವಹರಿದು ಪರಶಿವಲಿಂಗವ ಕೂಡಿ ಸುಖಿಯಾಗಿರ್ದೆನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಫಲ ಒಳಗೆ ಪಕ್ವವಾಗಿಯಲ್ಲದೆ, ಹೊರಗಳ ಸಿಪ್ಪೆ ಒಪ್ಪಗೆಡದು. ಕಾಮನ ಮುದ್ರೆಯ ಕಂಡು ನಿಮಗೆ ನೋವಾದಿಹಿತೆಂದು ಆ ಭಾವದಿಂದ ಮುಚ್ಚಿದೆ. ಇದಕ್ಕೆ ನೋವೇಕೆ ಕಾಡದಿರಣ್ಣಾ, ಚೆನ್ನಮಲ್ಲಿಕಾರ್ಜುನದೇವರದೇವನ ಒಳಗಾದವಳ.
--------------
ಅಕ್ಕಮಹಾದೇವಿ
ಉಡುಪ ತನ್ನ ಕಳೆಯ ತಾ ಕಾಣಿಸಿಕೊಂಬಂತೆ, ಸೂರ್ಯ ತನ್ನ ಬೆಳಗ ತಾ ಕಾಣಿಸಿಕೊಂಬಂತೆ, ಫಲ ತನ್ನ ರುಚಿಯ ತಾ ಕಾಣಿಸಿಕೊಂಬಂತೆ, ಇಂತೀ ತ್ರಿವಿಧ ಉಂಟೆನಬಾರದು, ಇಲ್ಲೆನಬಾರದು. ತನ್ನಿಂದರಿವಡೆ ಸ್ವತಂತ್ರಿಯಲ್ಲ, ಇದಿರಿನಿಂದರಿವಡೆ ಪರತಂತ್ರಿಯಲ್ಲ. ಈ ಉಭಯವನಿನ್ನಾರಿಗೆ ಹೇಳುವೆ? ಕಡಲೊಳಗೆ ಕರೆದ ವಾರಿಯಂತೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪರತತ್ವ ಪರಬ್ರಹ್ಮ ಪರಶಿವನಪ್ಪ ಮಂತ್ರಮೂರ್ತಿ ಸದ್ಗುರು ಕಣ್ಣಮುಂದಿರಲು ಸದಾ ಗುರುಸೇವೆಯಳವಟ್ಟು ಗುರು ಶುಶ್ರೂಷೆಯ ಮಾಡುವ ಶಿಷ್ಯಂಗೆ ಆ ಸದ್ಗುರು ಸೇವೆಯೇ ಚತುರ್ವಿಧ ಫಲ. ಗುರುಸೇವೆಯೇ ಅಷ್ಟಮಹದೈಶ್ವರ್ಯ, ಗುರುಸೇವೆಯೇ ಅಷ್ಟಭೋಗಂಗಳ ಅನು. ಇದು ಕಾರಣ ಸದ್ಗುರುಸೇವೆಯೇ ಸದ್ಯೋನ್ಮುಕ್ತಿ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಇನ್ನಷ್ಟು ... -->