ಅಥವಾ

ಒಟ್ಟು 9 ಕಡೆಗಳಲ್ಲಿ , 7 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ನಾನು ನಿಮ್ಮೊಡನೆ ನುಡಿವೆ ನುಡಿಯಲಂಜುವೆನಯ್ಯ. ಲಿಂಗದ ವಿನೋದಾರ್ಥವಾಗಿ ಗಮನವಂಕುರಿಸಿ ಒಂದಾದೊಂದು ದೆಸೆಗೆ ಹೋಗುತ್ತಿಪ್ಪಾಗ ಅರಣ್ಯಮಧ್ಯದಲ್ಲಿ ಹಸಿವೆದ್ದು ತನುವನಂಡಲೆವುತ್ತಿರುವಲ್ಲಿ ತೃಷೆಯೆದ್ದು ಮನವ ಮತಿಗೆಡಿಸಿ ಹಲ್ಲುಹತ್ತಿ ನಾಲಿಗೆ ಕರ್ರಗಾಗಿ ಮೂರ್ಛೆಯಾಗುತ್ತಿರಲು ಆ ಸಮಯದಲ್ಲಿ ಖರ್ಜೂರ ಮಾವು ಜಂಬುನೇರಳೆ ಮೊದಲಾದ ಎಲ್ಲಾ ಫಲಂಗಳು ಜೀವನ್ಮುಕ್ತಿಯೆಂಬ ಸಂಜೀವನರಸವ ತುಂಬಿಕೊಂಡು ವೃಕ್ಷಂಗಳಡಿಯಲ್ಲಿ ಬಿದ್ದಿರಲು ಕಣ್ಣಿನಲ್ಲಿ ನೋಡಿ ಮನದಲ್ಲಿ ಬಯಸಿ ಕೈಮುಟ್ಟಿ ಎತ್ತಿದೆನಾದರೆ ಎನ್ನ ವಿರಕ್ತಿಯೆಂಬ ಪತಿವ್ರತಾಭಾವಕ್ಕೆ ಅದೇ ಹಾನಿ ನೋಡಾ. ಅದೇನು ಕಾರಣವೆಂದೊಡೆ `ಅಂಗಭೋಗ ಅನರ್ಪಿತ ಲಿಂಗಭೋಗ ಪ್ರಸಾದ'ವೆಂದು ಆದ್ಯರ ವಚನ ಸಾರುತೈದಾವೆ ನೋಡಾ. ಇದು ಕಾರಣ- ಅನರ್ಪಿತವ ಭುಂಜಿಸಿ ತನುವ ರಕ್ಷಣೆಯ ಮಾಡಿ ಶ್ವಾನನ ಬಸುರಲ್ಲಿ ಬಂದು ಹೊಲೆಯರ ಬಾಗಿಲ ಕಾಯ್ದು ಹಲವು ಆಹಾರವನುಂಡು ನರಕಕ್ಕಿಳಿಯಲಾರದೆ ಮುಂದನರಿಯದೆ ನುಡಿದೆನಯ್ಯ. ಸತಿಯ ಭಾಷೆ ಪತಿಗೆ ತಪ್ಪದಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಮಾಮರದೊಳಗೊಂದು ಮಾಯದ ಮಂಜು ಕವಿದಡೆ, ಹೂ ಮಿಡಿ ಫಲಂಗಳು ಉದುರವಿನ್ನೆಂತೊ ? ಮಂಜಿನ ರಸವನುಂಡು ಫಲ ನಿಮಿರ್ದು ಬೆಳೆದಡೆ, ಆ ಫಲವ ನಾನು ಮುಟ್ಟೆನು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇಷ್ಟಲಿಂಗವೆಂಬ ಭ್ರಾಂತಿಗೇಡಿಗಳು ನೀವು ಕೇಳಿರೋ ಇಷ್ಟಲಿಂಗದ ಪೂಜೆಯ ನಿಷೆ*ಯಲ್ಲಿ ಮಾಡಿದರೆ ಅಷ್ಟೈಶ್ವರ್ಯ ದೊರಕೊಂಬುದೇನಯ್ಯ? ಪ್ರಾಣಲಿಂಗದ ನೆಲೆಯನರಿತು ಪೂಜೆಯಂ ಮಾಡಲು ಸಕಲ ಭವಬಂಧನಗಳು ಬಿಟ್ಟು ಚತುರ್ವಿಧ ಫಲಂಗಳು ಆ ಶರಣನ ಬಟ್ಟೆಯ ಸೋಂಕಲೊಲ್ಲವು. ಇದು ಕಾರಣ ಅಂಗಸಂಗವಾಗಿರ್ದ ಪ್ರಾಣ ಬಿಟ್ಟುಹೋಗುವಾಗ ಅಂಗವೊಂದೆಸೆಯಾಗಿ ಪ್ರಾಣವೊಂದೆಸೆಯಾಗಿ ಬಿದ್ದು ಹೋಗುವುದ ಕಂಡು ನಾಚಿತ್ತು ಎನ್ನ ಮನವು. ಇದು ಕಾರಣ ಪ್ರಾಣಲಿಂಗದ ಸಂಬಂಧದ ಭೇದವ ನಮ್ಮ ಪೂವಾಚಾರ್ಯ ಸಂಗನಬಸವಣ್ಣನ ಸಂತತಿಗಳಿಗಲ್ಲದೆ ಉಳಿದಂಥ ತಾಮಸದೇಹಿಗಳಿಗೆ ಅರಿಯಬಾರದಯ್ಯ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಆಯುಷ್ಯವ ಹಿರಿದಾಗಿ ಕೊಟ್ಟಡೆ, ಲಿಂಗ ಒಲಿದುದಲ್ಲ. ಭಾಷೆಯ ಹಿರಿದಾಗಿ ಕೊಟ್ಟಡೆ, ಲಿಂಗ ಒಲಿದುದಲ್ಲ. ಅಷ್ಟಮಹದೈಶ್ವರ್ಯವ ಹಿರಿದಾಗಿ ಕೊಟ್ಟಡೆ ಲಿಂಗ ಒಲಿದುದಕ್ಕೆ ಕುರುಹಲ್ಲ. ಕಾಯ ಬೆರಸಿ ಕೈಲಾಸಕ್ಕೆ ಕೊಂಡು ಹೋದರೂ ಲಿಂಗ ಒಲಿದುದಲ್ಲ. ಇವೆಲ್ಲಾ ಪೂಜಾ ಫಲಂಗಳು, ಕೈಕೂಲಿಕಾರತನವೈಸೆ. ಲಿಂಗ ಒಲಿದ ಪರಿ: ಗುರುಲಿಂಗಜಂಗಮ ಒಂದೆಂದು ಅರಿದು ನಿಶ್ಚಯ ಭಾವದಿಂ ತನು ಮನ ಧನವಲ್ಲಿಯೇ ಅರ್ಪಿಸುವುದು ಲಿಂಗ ಒಲಿದುದು. ಕಾಯಭಾವವಳಿದು ಲಿಂಗವೆಂದು ಭಾವಿಸಿ ಭಾವಸಿದ್ಧಿಯಾದುದು ಲಿಂಗ ಒಲಿದುದು. ಲಿಂಗವಲ್ಲದೆ ಇನ್ನಾವುದು ಘನ ? ಎದರಿದುವೆ ಲಿಂಗ ಒಲಿದುದು. ಲಿಂಗವಂತನೆ ಲಿಂಗವೆಂದರಿದುದು ಲಿಂಗ ಒಲಿದುದು. ಸದಾಚಾರ ಲಿಂಗ ಒಲಿದುದು. ನಿರ್ವಂಚನೆ ಲಿಂಗ ಒಲಿದುದು. ಸರ್ವಭೋಗವನು ಲಿಂಗವಂತರಿಗೆ ಭೋಗಿಸಲಿತ್ತು ಸಮಭೋಗವಲ್ಲದೆ ಲಿಂಗವಂತಗೆ ವಿಶೇಷ ಭೋಗ ತಾತ್ಪರ್ಯ ಮೋಹವಾಗದಡೆ ಲಿಂಗ ಒಲಿದುದು. ಪರಧನ ಪರಸ್ತ್ರೀ ಪರದ್ರವ್ಯ ಪರದೈವದಲ್ಲಿ ವರ್ತಿಸದಿದ್ದಡೆ ಲಿಂಗ ಒಲಿದುದು. ಲಿಂಗದಲ್ಲಿ ಭಕ್ತನಲ್ಲಿ ಅವಿನಾಭಾವವಳವಟ್ಟು ಭಾವಶುದ್ಧವಾಗಿ ಸರ್ವಕ್ರೀ ಲಿಂಗಕ್ರೀಯಾದಡೆ ಲಿಂಗ ಒಲಿದುದು ದೃಷ್ಟವಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಏಕೆನ್ನ ಸಿರಿಗಳು ಕೆರೆಗಳು ಮರಗಳು ಫಲಗಳು ಬೀಯದ ಮುನ್ನ ಒಯ್ಯನೆ ಮಾಡಿ ಭೋ, ಹಾಲುಳ್ಳಲ್ಲಿ ಹಬ್ಬವನು. ಎನ್ನ ಭಕ್ತಿ-ಮುಕ್ತಿ ಸವೆಯದ ಮುನ್ನ ಲಿಂಗವೆ ಜಂಗಮವೆಂದು ಮಾಡಿ ಭೋ. ಸ್ವಾತಂತ್ರಯ್ಯ ತನ್ನನೀವ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಸಂಸಾರವೆಂಬ ವಿಷವೃಕ್ಷಕ್ಕೆ ಪಂಚೇಂದ್ರಿಯಂಗಳೆ ಶಾಖೆಗಳು. ಪಂಚಕ್ಲೇಶಂಗಳೆ ಫಲಂಗಳು, ಪಂಚವಿಷಯಂಗಳೆ ರಸವು. ಈ ಫಲವ ಬಯಸಿ, ಮೆದ್ದವರೆಲ್ಲಾ ಮರಣಕ್ಕೊಳಗಾದರು. ಅದನರಿದು ಆ ಫಲವ ನಾನು ಮುಟ್ಟೆನು ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಮರನೊಳಗಣ ಪತ್ರೆ ಫಲಂಗಳು, ಮರಕಾಲವಶದಲ್ಲಿ ತೋರುವಂತೆ, ಹರನೊಳಗಣ ಪ್ರಕೃತಿಸ್ವಭಾವಂಗಳು, ಹರಭಾವದಿಚ್ಛೆಗೆ ತೋರುವವು. ಲೀಲೆಯಾದಡೆ ಉಮಾಪತಿ, ಲೀಲೆ ತಪ್ಪಿದಡೆ ಸ್ವಯಂಭು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಚಂದ್ರ ಚಂದ್ರಿಕೆಯಂತೆ, ಅಗ್ನಿ ಉಷ್ಣದಂತೆ, ರತ್ನ ಕಾಂತಿಯಂತೆ, ಬ್ರಹ್ಮವ ಬಿಡದೆ ತೋರುವ ಬ್ರಹ್ಮಶಕ್ತಿ ಬ್ರಹ್ಮದ ಅಂತಃಕರಣವಾದ ಕಾರಣ ವಿಶ್ವಭಾಜನವೆನಿಸಿತ್ತು. ಬೀಜದಲ್ಲಿ ವೃಕ್ಷ ಪತ್ರೆ ಫಲಂಗಳು ತೋರುವಂತೆ, ಬ್ರಹ್ಮದ ಹೃದಯಬೀಜದಲ್ಲಿ ವಿಶ್ವವು ತೋರುವುದಾಗಿ, ಆ ವಿಶ್ವಭಾಜನವಾದ ಚಿತ್ತೇ ತನ್ನ ಸ್ವರೂಪವೆಂದು ಕಂಡ ಜೀವನ್ಮುಕ್ತಂಗೆ ವಿಧಿ-ನಿಷೇಧ, ಸಂಕಲ್ಪ- ವಿಕಲ್ಪ, ಪ್ರಕೃತಿ-ವಿಕೃತಿ ಮೊದಲಾದ ಜಗದ್ವಾಪಾರವೆಂಬುದೇನೂ ಇಲ್ಲ. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣ ನಿಮ್ಮ ಕೂಡಿ ನಿಮ್ಮಂತಹನು.
--------------
ಸ್ವತಂತ್ರ ಸಿದ್ಧಲಿಂಗ
-->