ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆದರದಿರು ಮನವೆ, ಬೆದರದಿರು ತನುವೆ, ನಿಜವನರಿತು ನಿಶ್ಚಿಂತನಾಗಿರು. ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ, ಎಲವದಮರನ ಇಡುವರೊಬ್ಬರ ಕಾಣೆ. ಭಕ್ತಿಯುಳ್ಳವರ ಬೈವರೊಂದುಕೋಟಿ, ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ. ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಎಲವದ ಮರ ಹೂತು ಫಲವಾದ ತೆರನಂತೆ; ಸಿರಿಯಾದಡೇನು, ಶಿವಭಕ್ತಿುಲ್ಲದನ್ನಕ್ಕ ಫಲವಾದಡೇನು ಹೇಳಾ, ಹಾವುಮೆಕ್ಕೆಯ ಕಾು ಕುಲವಿಲ್ಲದ ರೂಹು ಎಲ್ಲದ್ದಡೇನು ಬಚ್ಚಲ ನೀರು ತಿಳಿದಲ್ಲಿ ಫಲವೇನು ಅವಗುಣಿಗಳನು ಮೆಚ್ಚ ಕೂಡಲಸಂಗಮದೇವ. 121
--------------
ಬಸವಣ್ಣ
ಉಲುಹು ಅಡಗಿದ ವೃಕ್ಷದಲ್ಲಿ ಫಲವಾದ ಹಣ್ಣ ಸವಿದು ಮೇಲುಗಿರಿಯ ಶಿವಾಲಯವ ಪೊಕ್ಕು, ಚಿದ್ಬಿಂದುಕಳಾಸ್ವರೂಪನಾಗಿ, ಬರಿಯ ಬಯಲಿಂಗೆÀ ಹೋಗಿ ಬರಿದಾದರು ನೋಡಾ ಝೇಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
-->