ಭಕ್ತ, ಭೃತ್ಯನಾಗಿ ಮಾಡುವ ಮಾಟದಲ್ಲಿ ವಿಚಾರವುಂಟಯ್ಯಾ,
ಅದೆಂತೆಂದರೆ:ಸಂಸಾರಚ್ಛೇದನೆಯುಳ್ಳರೆ ಜಂಗಮಲಿಂಗವಹುದು,
ಅದಕ್ಕೆ ಮಾಡಿದ ಫಲಂ ನಾಸ್ತಿ.
ಸಂಸಾರಚ್ಛೇದನೆ ಇಲ್ಲದಿದ್ದರೆ ಆ ಜಂಗಮ ಭವಭಾರಿಯಹನು.
ಅದಕ್ಕೆ ಮಾಡಿದಲ್ಲಿ ಫಲವುಂಟು.
ಫಲವುಂಟಾದಲ್ಲಿ ಭವ ಉಂಟು, ಫಲವಿಲ್ಲದಲ್ಲಿ ಭವವಿಲ್ಲ.
`ಮನದಂತೆ ಮಂಗಳ' ಎಂಬ ಶ್ರುತಿಯ ದಿಟವ ಮಾಡಿ,
ಈ ಉಭಯದೊಳಗೆ ಆವುದ ಪ್ರಿಯವಾಗಿ ಮಾಡುವರು ಅಹಂಗೆ ಇಹರು ಕಾಣಾ
ಕೂಡಲಚೆನ್ನಸಂಗಮದೇವಾ