ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಋಣ ತಪ್ಪಿದ ಹೆಂಡಿರಲ್ಲಿಗುಣ ತಪ್ಪಿದ ನಂಟರಲ್ಲಿಜೀವವಿಲ್ಲದ ದೇಹದಲ್ಲಿ ಫಲವೇನೋ?ಆಳ್ದನೊಲ್ಲದಾಳಿನಲ್ಲಿ ಸಿರಿತೊಲಗಿದರಸಿನಲ್ಲಿವರವಿಲ್ಲದ ದೈವದಲ್ಲಿ ಫಲವೇನೋ?ಕಳಿದ ಹೂವಿನಲ್ಲಿ ಕಂಪನುಉಳಿದ ಸೊಳೆಯಲ್ಲಿ ಪೆಂಪನುಕೊಳೆಚೆನೀರಿನಲ್ಲಿ ಗುಣವನರಸುವಿರಿ!ಮರುಳೆ ವರಗುರು ವಿಶ್ವಕ್ಕೆಲ್ಲಗಿರಿಜಾಮನೋವಲ್ಲಭ ಪರಮ ಕಾರುಣಿಕ ನಮ್ಮ ಕೂಡಲಸಂಗಮದೇವ
ಧರೆಯ ಮೇಗಣ ಹುಲ್ಲೆ, ಚಂದ್ರಮನೊಳಗಣ ಎರಳೆ, ಕೂರ್ತಡೆ ಫಲವೇನೋ ಕೂಟವಿಲ್ಲದನ್ನಕ್ಕ ಇಂಬನರಿಯದ ಠಾವಿನಲ್ಲಿ ಕಣ್ಣೋಟವ ಮಾಡಿದಡೆ, ತುಂಬಿದ ತೊರೆಯ ನಡುವೆ ಮಾಮರ ಕಾತಂತೆ. ಚೆನ್ನಮಲ್ಲಿಕಾರ್ಜುನದೇವಾ, ದೂರದ ಸ್ನೇಹವಮಾಡಲು ಬಾರದ ಭವಕ್ಕೆ ಬಂದೆ.
ಪೃಥ್ವಿ ಅಪ್ಪು ತೇಜ ವಾಯುವಾಕಾಶವೆಂಬಪಂಚಭೂತ ವಿಕಾರತನುಗಳು ಲಿಂಗಪೂಜೆಯಬೆಬ್ಬನೆ ಬೆರವರು ಉಪದೇಶಮಾರ್ಗ.ತನುಮನಧನವ ಪ್ರಾಣಾದಿಗಳ ಗುರುಲಿಂಗಕ್ಕೆಕೊಟ್ಟೆವೆಂಬರು ನೋಡಾ! ನಾಚಿಕೆಯಿಲ್ಲದಹೇಸಿಗೆಗೆಟ್ಟ ಉನ್ಮತ್ತರು.ಲಿಂಗವಿದ್ದುದಕ್ಕೆ ಫಲವೇನೋ ಅಂಗವಿಕಾರವಳಿಯದನ್ನಕ್ಕ,ಇಂದ್ರಿಯ ಸಂಗ ಮರೆಯದನ್ನಕ್ಕ ಪ್ರಸಾದವಕೊಂಡೆವೆಂಬರು ನೋಡಾ ಬಹುಭಾಷಿಗಳು.ನಿಧಾನವಿದ್ದ ನೆಲ ನುಡಿವುದು.ಭೂತವಿಡಿದ ಮನುಷ್ಯ ತನ್ನ ತಾ ಮರೆದಿಹ.ಲಿಂಗವಿದ್ದುದಕ್ಕೆ ಪ್ರಮಾಣವೇನೋನಡೆತತ್ವ ನುಡಿ ಸಿದ್ಧಾಂತವಾಗಬೇಕು.ಪಂಚೇಂದ್ರಿಯಂಗಳ ಉನ್ಮತ್ತವಡಗಬೇಕು.ಸದಾಚಾರವೆಂತಳವಡುವದುಸದಾಚಾರ ತನ್ನಲ್ಲಿ ಸಾಹಿತ್ಯವಾಗದನ್ನಕ್ಕ.ಇಹಪರವನರಸುವ ಸಂದೇಹಿಗಳಿಗೆಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು.