ಅಥವಾ

ಒಟ್ಟು 155 ಕಡೆಗಳಲ್ಲಿ , 46 ವಚನಕಾರರು , 140 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನ್ನವ ಸವೆವ ಕನ್ನಗತ್ತಿಗೆ ಕನ್ನ ಸವೆಯಿತ್ತೆ ಕೈ ತಟ್ಟಿತೆಂಬಂತೆ, ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು, ಬಳಲುವಣ್ಣಗಳ ಬಾಯ ಟೊಣೆದು, ಇವು ಮೂರು ತನ್ನಿಂದ ಬಲ್ಲಿದರಲ್ಲಿಗೆ ಹೋಗದೆ ಮಾಣವು. ಇವರಲ್ಲಿ ಬನ್ನಬಟ್ಟು ಬಳಲುವ ಕರ್ಮಿಗಳಿಗಿನ್ನೆಲ್ಲಿಯ ಮುಕ್ತಿಯಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಕಣ್ಣ, ಕಾಡುವ ಗುಂಗುರ ತಿಂದು, ಬಾಯ, ಕಾಡುವ ಕೈಯ ತಿಂದು, ಆಪ್ಯಾಯನವಡಸಿದ ಹೊಟ್ಟೆಯ ತಿಂದು, ಮತ್ತಿವರ ಹುಟ್ಟು ಮೆಟ್ಟನರಿಯಲೇಕೆ ? ಅರ್ಕೇಶ್ವರಲಿಂಗವನರಿಯಿರಣ್ಣಾ.
--------------
ಮಧುವಯ್ಯ
ತತ್ಕಾಲವನರಿವ ಕುಕ್ಕುಟನ ಬಾಯ ತುತ್ತನಿಕ್ಕಿಸಿಕೊಂಡವನಾರಯ್ಯ? ಆ ತುತ್ತು ಮುತ್ತದವರ ಮುಕ್ತಿಯ ಬಲೆಗೀಡು ಮಾಡುವುದು. ತುತ್ತ ಮುಟ್ಟದೆ ಕುಕ್ಕುಟನ ಕುಲವ ಕರೆ. ಕರೆದಲ್ಲಿ ಬಂದು ನಿಂದುಳುಮೆ, ಅದರಂಗವ ಆರೆಂದರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅಂಗಸೋಂಕೆಂಬುದು ಅಧಮವು. ಉರಸೆಜ್ಜೆಯೆಂಬುದು ಎದೆಯ ಗೂಂಟ. ಕಕ್ಷೆಯೆಂಬುದು ಕವುಚಿನ ತವರುಮನೆ. ಅಮಳೋಕ್ಯವೆಂಬುದು ಬಾಯ ಬಗದಳ. ಮುಖಸೆಜ್ಜೆಯೆಂಬುದು ಪಾಂಡುರೋಗ. ಕರಸ್ಥಳವೆಂಬುದು ಮರವಡದ ಕುಳಿ. ಉತ್ತಮಾಂಗವೆಂಬುದು ಸಿಂಬಿಯ ಕಪ್ಪಡ. ಎಲ್ಲರಿಗೆಯೂ ಸೋಂಕಾಯಿತ್ತು ! ಈ ಹಸಿಯ ಗೂಂಟದಲ್ಲಿ ಕಟ್ಟಿ, ಒಣಗಿದ ಗೂಂಟದಲ್ಲಿ ಬಿಡುವ ಬಾಲಭಾಷೆಯ ಭಂಡರ ನುಡಿಯ ಕೇಳಲಾಗದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನೀರ ನೆಳಲನೆ ಕಡಿದು, ಮೇರುವೆಂಬುದ ನುಂಗಿ, ಶಾರದೆಯೆಂಬವಳ ಬಾಯ ಕಟ್ಟಿ, ಕಾರ ಮೇಘದ ಬೆಳಸ ನೀರ ಹರಿ ನುಂಗಲು ದಾರಿ ಮೃತ್ಯುವ ನುಂಗಿ ನಗುತ್ತಿದ್ದಿತು. ನಾರಿಯ ಬೆನ್ನ ಮೇಲೆ ಗಂಡ ಬಂದು ಕುಳ್ಳಿರಲು, ನೀರ ಹೊಳೆಯವರೆಲ್ಲರ ಕೊಡನೊಡೆದವು. ಕಾರೆಯ ಮುಳ್ಳೆರ್ದು ಕಲಿಗಳನಟ್ಟಿ ಸದೆವಾಗ, ಸೋರುಮುಡಿಯಾಕೆ ಗೊರವನ ನೆರೆದಳು. ಬಳ್ಳು ಆನೆಯ ನುಂಗಿ, ಹೊಳೆ (ಒಳ್ಳೆ ?) ಸಮುದ್ರವ ಕುಡಿದು, ಕುಳ್ಳಿರ್ದ ಶಿಶು ಹಲಬರನೆಯ್ದೆ ನುಂಗಿ, ಅತ್ತೆ ಅಳಿಯನ ಕೂಡಿ ಕೋಡಗವ ಹಡೆದಲ್ಲಿ, ಹತ್ತಿರಿರ್ದ ಹಾವಾಡಿಗನನು ಅದು ನುಂಗಿತ್ತು! ಕಪ್ಪೆ ಸರ್ಪನ ಹಿಡಿದು ಒತ್ತಿ ನುಂಗುವಾಗ, ಕಪ್ಪೆಯ ಕೊರಳಲ್ಲಿ ಬಿಳಿದು ಕೆಂಪಡರಲು, ನಿಶ್ಚಿಂತವಾಯಿತ್ತು ಗುಹೇಶ್ವರನ ಶರಣಂಗೆ, ಕಟ್ಟಿದಿರ ಕರ್ಪುರದ ಜ್ಯೋತಿಯಂತೆ!
--------------
ಅಲ್ಲಮಪ್ರಭುದೇವರು
ರಕ್ಕಸಿ ಮಗುವ ಹೆತ್ತು, ಕರುಳ ನೇಣ ಮಾಡಿ, ಹೆಣೆದ ತೊಟ್ಟಿಲ ಕಟ್ಟಿ, ರಕ್ತದ ಪಾಲನೆರೆದು, ಮತ್ತ ಜೀವವ, ಜಗವನೊತ್ತಿ ತಿಂಬವನೆ, ರಕ್ಕಸಿಯ ಹೊತ್ತು ಹೋಗದವನೆಯೆಂದು ತೊಟ್ಟಿಲ ಹಿಡಿದು ತೂಗೆ, ಬಾಯ ಮುಚ್ಚಿ ಕಣ್ಣಿನಲ್ಲಿ ಅಳುತ್ತಿದ್ದಿತ್ತು, ಬಂಕೇಶ್ವರಲಿಂಗವ ನೋಡಿಹೆನೆಂದು.
--------------
ಸುಂಕದ ಬಂಕಣ್ಣ
ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ ಆಪ್ಯಾಯನ ಬಿಡದು. ಕಾಯವರ್ಪಿತವೆಂಬ ಹುಸಿಯ ನೋಡಾ. ನಾನು ಭಕ್ತಳೆಂಬ ನಾಚಿಕೆಯ ನೋಡಾ. ನಾನು ಯುಕ್ತಳೆಂಬ ಹೇಸಿಕೆಯ ನೋಡಾ. ಓಗರವಿನ್ನಾಗದು, ಪ್ರಸಾದ ಮುನ್ನಿಲ್ಲ ; ಚೆನ್ನಮಲ್ಲಿಕಾರ್ಜುನಯ್ಯ ಉಪಚಾರದರ್ಪಿತವನವಗಡಿಸಿ ಕಳೆವ
--------------
ಅಕ್ಕಮಹಾದೇವಿ
ಆಗರದಲ್ಲಿ ಅಡಕೆ ಸಣ್ಣಾದಾಗ ತೋಟದ ಎಲೆ ಉದುರಿತ್ತು. ಉದುರುವುದಕ್ಕೆ ಮೊದಲೆ ಸುಣ್ಣವ ಸುಡುವವ ಸತ್ತ. ಇವರ ಮೂವರ ಹಂಗಿಗತನ ಬಿಟ್ಟಿತ್ತು, ಬಾಯ ಹಂಬಲಿಲ್ಲದೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಮೂರರ ಹಂಗ ಬಿಟ್ಟ ಕಾರಣ.
--------------
ಸಗರದ ಬೊಮ್ಮಣ್ಣ
ಆವ ಜಾತಿಯಾದಡೂ ಆಗಲಿ; ಪುರಾತನ ಚಾರಿತ್ರದಲ್ಲಿ ನಡೆದು, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನಮಂ ಕೊಟ್ಟು, ಅಹಂಕಾರವಳಿದಿಹಂತಹ ಮಹಾತ್ಮರ ಬಾಯ ತಂಬುಲವ ಮೆಲುವೆ, ಬೀಳುಡಿಗೆಯ ಹೊದಿವೆ. ಅವರ ಪಾದರಕ್ಷೆಗಳೆರಡನೂ, ಮಂಡೆಯ ಮೇಲೆ ಹೊತ್ತುಕೊಂಡು ಬದುಕುವೆನಯ್ಯಾ. ಆ ಗಣಂಗಳ ದಾಸನ ದಾಸ ನಾನು, ಜನ್ಮ ಜನ್ಮದಲ್ಲಿ ಆಗುವೆ ಕಾಣಾ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಆವಾವ ದೆಸೆಗೆ ಬಾಯ ಬಿಟ್ಟು ಅರಸಿ ಕಾಣದೆ ಕಂಗೆಡ್ಕ್ತುದ್ದೆನಯ್ಯಾ. ದೇವಾ, ಈ ಬಾಯ ಬಿಡುವುದ ಮಾಣಿಸಿ, ಎನಗೆ ಪರಮಪ್ರಸಾದವ ಕರುಣಿಸಿ ರಕ್ಷಿಸಯ್ಯಾ; ಕಪಿಲಸಿದ್ಧಮಲ್ಲಿನಾಥಯ್ಯಾ, ನಿಮ್ಮ ಧರ್ಮವಯ್ಯಾ.
--------------
ಸಿದ್ಧರಾಮೇಶ್ವರ
ಕಣ್ಣ ಮುಚ್ಚಿ ದೃಷ್ಟಿಯಲ್ಲಿ ನೋಡಬಲ್ಲಡೆ ಆತನ ಬಲ್ಲವನೆಂಬೆ. ಬಾಯ ಮುಚ್ಚಿ ನಾಲಗೆಯಲ್ಲಿ ಉಂಡಡೆ, ಆತ ಸಂ[ಗ]ಗೊಳಿಸಿದವನೆಂಬೆ. ತನುವ ಮರೆದು, [ಆ ತ]ನುವ ಕಂಡಡೆ, ಆತನ ಅರಿದವನೆಂಬೆನಯ್ಯಾ. ಬೆಳಗಿನೊಳಗಣ ಬೆಳಗು ಕಳೆಯೊಳಗಣ ಕಾಂತಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಒಡಲ ಕಳವಳಕ್ಕೆ, ಬಾಯ ಸವಿಗೆ, ಬಯಸಿ ಉಂಡೆನಾದಡೆ ನಿಮ್ಮ ತೊತ್ತಿನ ಮಗನಲ್ಲ. ಬೇಡೆ, ಬೇಡೆ, ನಿಮ್ಮ ನಂಬಿದ ಸದ್ಭಕ್ತರ. ಅವರೊಕ್ಕುದನುಂಬೆನೆಂದಂತೆ ನಡೆವೆ. ಎನ್ನೊಡೆಯ ಕೂಡಲಸಂಗಮದೇವನೊಲ್ಲದವರ ಹಿಡಿದೆನಾದಡೆ ನಿಮ್ಮ ಪಾದದಾಣೆ.
--------------
ಬಸವಣ್ಣ
ಮಗು ಸತ್ತು ಕೊರಳು ಕುಗ್ಗದು, ಅಂಗುಳಾರದು, ಬಾಯ ಬರೆ ಹಿಂಗದು. ಇನ್ನಾವ ನೇಣ ಹಾಕುವೆ ಕೊರಳಿಗೆ ? ಒಂದು ನೇಣಿನಲ್ಲಿ ಸಂದೇಹ ಬಿಡದು. ಎರಡು ನೇಣಿನಲ್ಲಿ ಹಿಂಗಿ ಹೋಗದು. ಮೂರು ನೇಣಿನಲ್ಲಿ ಮುಗಿತಾಯವಾಗದು. ಹಲವು ನೇಣಿನಲ್ಲಿ ಕಟ್ಟುವಡೆದ ಕೂಸು, ಅದಕ್ಕೆ ಒಲವರವೇಕೆ, ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ತನ್ನಯ ಬಾಯ ಶೇಷವ ಲಿಂಗಕ್ಕೆ ತೋರಿ, ಲಿಂಗದ ಶೇಷವ ತಾ ಕೊಂಡೆನೆಂದು ಕೊಂಡುದು ಪ್ರಸಾದ. ಇದ್ದುದು ಸಯಿದಾನವೆಂದು ಉಂಡು ಉಂಡು ಲಿಂಗಕ್ಕೆ ಕೊಡಬಹುದೆ ಅಯ್ಯಾ? ಅದು ಮುನ್ನವೆ ಲಿಂಗಾರ್ಪಿತ. ತನ್ನಯ ಸಂದೇಹಕ್ಕೆ ಕೊಟ್ಟುಕೊಂಡೆನೆಂಬ ಭೇದವಲ್ಲದೆ, ಇಂತೀ ಗುಣ ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಭಕ್ತಿಯೆಂಬುದು ಬಾರಿ ಬಾಯ ಧಾರೆ, ಅದೆಂತೆಂದಡೆ: ಕಂಗಳಿನ ವರಿಯದಂತೆ ಸುತ್ತಲರಿದು; ಮಧ್ಯಾಹ್ನದ ಆದಿತ್ಯನಂತೆ ನೋಡಲರಿದು, ಪಾಪಿಯ ಕೂಸಿನಂತೆ ಎತ್ತಲರಿದು, ಒಳು(ವಾಳಿರಿ)ಗುದುರಿಯಂತೆ ಒ(ಹ ರಿ)ತ್ತಲರಿದು, ಸಜ್ಜನವುಳ್ಳ ಸತಿಯಂತೆ ಉಳಿಯಲರಿದು, ಪಾದರಸದಂತೆ ಹಿಡಿಯಲರಿದು, ಮೊದಲುಗೆಟ್ಟ ಹರದನಂತೆ ಕೆತ್ತಿಕೊಂಡಿಹುದು, ಭಕ್ತಿಯ ಮುಖ ಎತ್ತಲೆಂದರಿಯಬಾರದು. ಇದು ಕಾರಣ_ಕೂಡಲಚೆನ್ನಸಂಗಯ್ಯ ಹಿಡಿಯಬಲ್ಲವರಿಗಳವಟ್ಟಿತ್ತು ಹೊಡೆ(ಹಿಡಿರಿ)ಯಲರಿಯದವರಿಗೆ ವಿಗುರ್ಬಣೆಯಾಗಿತ್ತು.
--------------
ಚನ್ನಬಸವಣ್ಣ
ಇನ್ನಷ್ಟು ... -->