ಅಥವಾ

ಒಟ್ಟು 136 ಕಡೆಗಳಲ್ಲಿ , 31 ವಚನಕಾರರು , 93 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನು ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಮನ ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಾರ್ಪಿತವಲ್ಲ, ಕಂUಳು ನೋಡಿದ ಪದಾರ್ಥ ಲಿಂಗಾರ್ಪಿತವಲ್ಲ, ಘ್ರಾಣ ಸೋಂಕಿದ ಪದಾರ್ಥ ಲಿಂಗಾರ್ಪಿತವಲ್ಲ, ಜಿಹ್ವೆ ತಾಗಿದ ಪದಾರ್ಥ ಲಿಂಗಾರ್ಪಿತವಲ್ಲ. ಅಹುದೆಂಬುದ ನಡೆಯ (ನುಡಿಯ?), ಅಲ್ಲೆಂಬುದ ನುಡಿಯ, ಬೇಕು ಬೇಡೆಂಬುದಿಲ್ಲ, ಸಾವಯವೆಂಬುದಿಲ್ಲ. ನಿರವಯದಲ್ಲಿ ಸಕಲಭೋಗಂಗಳ ಭೋಗಿಸುವನು,
--------------
ಚನ್ನಬಸವಣ್ಣ
>ಸಾವ ಜೀವ ಬಿಂದುವಿನ ಸಂಚ, ಸಾಯದ ನಾದ ಪ್ರಾಣದ ಸಂಚ. ಸಾವ ಜೀವದ, ಸಾಯದ ಪ್ರಾಣದ _ಎರಡರ ಭೇದವನರಿಯದಿರ್ದಡೆ ಲಾಂಛನಧಾರಿ, ಸಾವ ಜೀವದ, ಸಾಯದ ಪ್ರಾಣದ ಎರಡರ ಭೇದವ ಭೇದಿಸಿ ಅರಿವು ಕಣ್ದೆರೆದ ಪ್ರಾಣಲಿಂಗಸಂಬಂಧವಂತಿರಲಿ, ಮತ್ತೆಯೂ ಪ್ರಾಣಲಿಂಗಸಂಬಂಧವೇ ಬೇಕು. ಇಂತೀ ಉಭಯ ಸಂಬಂಧವಳಿದ ಸಂಬಂಧ ನಿಜವಾಯಿತ್ತು. ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ
--------------
ಚನ್ನಬಸವಣ್ಣ
ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು. ಅದೆಂತೆಂದಡೆ, ಫಲಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ. ಇದು ಕಾರಣ, ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂತರಂಗದ ಅಷ್ಟಮದ ಅವಾವೆಂದರೆ ಹೇಳುವೆ ಕೇಳಿರಣ್ಣಾ : ಪೃಥ್ವಿಮದ ಸಲಿಲಮದ ಪಾವಕಮದ ಪವನಮದ ಅಂಬರಮದ ರವಿಮದ ಶಶಿಮದ ಆತ್ಮಮದವೆಂಬ ಅಷ್ಟಮೂರ್ತಿಯ ಮದಂಗಳು. ಇವರ ಗುಣಧರ್ಮಕರ್ಮವೆಂತೆಂದಡೆ, ಅದಕ್ಕೆ ವಿವರ ; ಪೃಥ್ವಿಮದವೆತ್ತಿದಲ್ಲಿ ತನುಗುಣಭರಿತನಾಗಿ, ಆಭರಣ ಅನುಲೇಪನ ತಾಂಬೂಲವಂ ಬಯಸುತ್ತಿಹನು. ಸಲಿಲಮದವೆತ್ತಿದಲ್ಲಿ ಸಂಸಾರಭರಿತನಾಗಿ, ಎನಗೆ ಬೇಕು, ಮನೆಗೆ ಬೇಕು, ಮಕ್ಕಳಿಗೆ ಬೇಕು ಎನುತಿಹನು. ಪಾವಕಮದವೆತ್ತಿದಲ್ಲಿ ಕಾಮರಸಭರಿತನಾಗಿ, ಕರಸಬೇಕು ನುಡಿಸಬೇಕು ಆಲಿಂಗಿಸಬೇಕು ಎನುತಿಹನು. ಪವನಮದವೆತ್ತಿದಲ್ಲಿ ಕೋಪಾಗ್ನಿಭರಿತನಾಗಿ, ಕೊಂದೇನು ತಿಂದೇನು ಸಾದ್ಥಿಸೇನು ಭೇದಿಸೇನು [ಎನುತಿಹನು]. ಶಶಿಮದವೆತ್ತಿದಲ್ಲಿ ಚಿಂತಾಭರಿತನಾಗಿ, ಆದೀತೊ ಆಗದೊ, ಇದ್ದೀತೊ ಇಲ್ಲವೊ ಎನುತಿಹನು. ಆತ್ಮಮದವೆತ್ತಿದಲ್ಲಿ ಅಹಂಕಾರಭರಿತನಾಗಿ, ಎನಗಿಂದು ಅದ್ಥಿಕರಿಲ್ಲ, ಎನಗಿಂದು ಇದಿರಿಲ್ಲವೆಂದು ಅಹಂಭಾವದಿಂದ ಅಹಂಕರಿಸುತ್ತಿಹನು. ಇಂತೀ ಅಷ್ಟಮೂರ್ತಿಮದಂಗಳ ಭ್ರಾಂತಿನ ಬಲೆಯೊಳಿಟ್ಟೆನ್ನನಗಲದಿರು ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಹೊತ್ತಾರೆ ಪೂಜಿಸಲು ಬೇಡ ಕಂಡಾ. ಬೈಗೆಯೂ ಪೂಜಿಸಲು ಬೇಡ ಕಂಡಾ. ಇರುಳುವುನು ಹಗಲುವನು ಕಳೆದು, ಪೂಜೆಯನು ಪೂಜಿಸಲು ಬೇಕು ಕಂಡಾ, ಇಂತಪ್ಪ ಪೂಜೆಯನು ಪೂಜಿಸುವರ, ಎನಗೆ ನೀ ತೋರಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಜನ್ಮವನೊಮ್ಮೆ ಧರಿಸಿದ ಬಳಿಕ, ಜನನವಿನಾಶ ವಿಗ್ರಹ ಮೂರ್ತಿಯ ಪೂಜಿಸಲೆ ಬೇಕು. ಜನ್ಮವನೊಮ್ಮೆ ಧರಿಸಿದ ಬಳಿಕ, ಶ್ರೀಶೈಲ ಮಹಿಮೆಯ ಸಾದ್ಥಿಸಿ ನೋಡಲೇಬೇಕು ನೋಡಾ, ಕಪಿಲಸಿದ್ಧಮಲ್ಲಿಗಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಪ್ರಾಣದ ತತ್ವದ ಪ್ರಾಪಂಚುವಿಲ್ಲದಿರು, ಏಕ ಏಕಾರ್ಥವೆಂದು ನಿರ್ವಾಣದ ಆಕಾರಧ್ಯಾನವು ಬೇಕು ಮನ ಕರದಲ್ಲಿ. ಸಾಕಾರದಿಂದತ್ತ ಶೂನ್ಯಭೇದ ಅನೇಕ ರೂಪನು ಕಪಿಲಸಿದ್ಧಮಲ್ಲಿಕಾರ್ಜುನನ ಬೇಕಾದವೀ ಪರಿಯ ತಪ್ಪದಿಹುದು.
--------------
ಸಿದ್ಧರಾಮೇಶ್ವರ
ಗುರುವಿಂಗಾದಡೆಯು ಬಸವಣ್ಣನೆ ಬೇಕು; ಲಿಂಗಕ್ಕಾದಡೆಯು ಬಸವಣ್ಣನೆ ಬೇಕು; ಜಂಗಮಕ್ಕಾದಡೆಯು ಬಸವಣ್ಣನೆ ಬೇಕು. ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ನಿಮಗೂ ಎನಗೂ ನಿಮ್ಮ ಶರಣರಿಗೂ ಬಸವಣ್ಣನೆ ಬೇಕು.
--------------
ಸಿದ್ಧರಾಮೇಶ್ವರ
ಲಿಂಗ ಜಂಗಮ ಒಂದಾದ ಬಳಿಕ ಲಿಂಗಾರ್ಚನೆ ಸಲ್ಲದು ಜಂಗಮಕ್ಕೆ. ಲಿಂಗಾರ್ಚನೆ ಬೇಕು ಭಕ್ತಂಗೆ. ಲಿಂಗಾರ್ಚನೆ ವಿರಹಿತ ಭಕ್ತನ ಮುಖ ನೋಡಲಾಗದು, ನುಡಿಸಲಾಗದು, ಅವನ ಹೊರೆಯಲ್ಲಿರಲಾಗದಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಕುರುಹುಳ್ಳನ್ನಕ್ಕ ಸಮಯದ ಹಂಗು, ಅರಿದಹೆನೆಂಬನ್ನಕ್ಕ ಆತ್ಮದ ಹಂಗು, `ಅಲ್ಲ' `ಅಹುದು' ಎಂಬನ್ನಕ್ಕ ಎಲ್ಲರ ಹಂಗು, ಗುಹೇಶ್ವರನೆಂಬನ್ನಕ್ಕ ಲಿಂಗದ ಹಂಗು ಬೇಕು ಘಟ್ಟಿವಾಳಣ್ಣಾ.
--------------
ಅಲ್ಲಮಪ್ರಭುದೇವರು
ಕಾಮಧೇನುವೆಂದಡೆ ಇಹುದಕ್ಕೆ ನೆಲೆ ಬೇಕು, ಕಲ್ಪತರುವೆಂದಡೆ ಹುಟ್ಟೂದಕ್ಕೆ ಭೂಮಿ ಬೇಕು, ಚಿಂತಾಮಣಿಯೆಂದಡೆ ತಾನೊಂದ ಚಿಂತಿಸಿ ಬೇಡಿಯಲ್ಲದೆ ಕೊಡದೊಂದುವ. ಇವಕ್ಕೆಲ್ಲಕ್ಕೂ ಒಂದೊಂದು ನಿಂದ ನೆಲೆ ವಾಸವಾಯಿತ್ತು. ಮನದರಿವಿಂಗೆ, ಕೈಯ ಕುರುಹಿಂಗೆ, ವಿಚಾರದಿಂದ ಒಳಹೊಕ್ಕು ನಿಂದು ನೋಡಲಾಗಿ, ಹಿಂದಳ ಕತ್ತಲೆಯ ಮುಂದಳ ಬೆಳಗಿನ ಉಭಯದ ಸಂದ್ಥಿಯಲ್ಲಿ ಸಲೆ ಸಂದು ತೋರುತ್ತದೆ, ನಿಜದ ಬೆಳಗು ತೋರುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ಕಾಯವಿಡಿದಿಹನ್ನಕ್ಕ ಕೈಯ ಕುರುಹು. ಜೀವವಿಡಿದಿಹನ್ನಕ್ಕ ಭವಪಾಶ. ಈ ಉಭಯವನರಿದಿಹನ್ನಕ್ಕ ಮಹಾಶರಣರ ಸಂಗಸುಖ ಬೇಕು. ಸುಖ ನಿಶ್ಚಯವಾದಲ್ಲಿ, ನಾ ನೀನೆಂಬ ಭಾವ ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಅಯ್ಯಾ, ಇಹಪರಂಗಳಂ ಗೆಲಿದ ಭಕ್ತ ಜಂಗಮಕ್ಕೆ, ಸದಾಚಾರವೆ ವಸ್ತು ನೋಡಾ. ಸದಾಚಾರವನರಿಯದ ಪಾಪಿ, ಸೂಕರನಿಂದ ಕಷ್ಟ ನೋಡಾ. ಭಕ್ತ ಜಂಗಮಕ್ಕೆ ಸದಾಚಾರವೇ ಬೇಕು. ಸದಾಚಾರವಿಲ್ಲದವಂಗೆ ಭವವುಂಟು. ಭವವುಂಟಾದವಂಗೆ ಆಚಾರವಿಲ್ಲ. ಆಚಾರವಿಲ್ಲದವ ಭಕ್ತನಲ್ಲ, ಜಂಗಮವಲ್ಲ ಕಾಣಾ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಲೋಕ ಅಳುತ್ತಿದೆ, ಇದ ಬೇಕು ಬೇಡ ಎಂಬವರ ಒಬ್ಬರನು ಕಾಣೆ. ದೇಹವೆಂಬುದೊಂದು ವಿಮಾನವ ಮಾಡಿ ದೇವರೆಂಬುದೊಂದು ಹೆಣನ ಮಾಡಿ ಕುಳ್ಳಿರಿಸಿ, ದೇವರು ಸತ್ತರೂ ತಮ್ಮಡಿ ಉಳಿದಡೆ ದೇಗುಲ ಹಾಳಾಯಿತ್ತ ನಾ ಕಂಡೆ. ಅಂಡಜದವರೆಲ್ಲ (ಪಿಂಡಜದವರೆಲ್ಲ ?) ಮುಂಡೆಯರಾದರು ನಿಮ್ಮ ಕಂಡವರು ಉ(ಅ?)ಳಿದರೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ದೇವ ದೇವ ಮಹಾಪ್ರಸಾದ. ತನ್ನ ರೂಪವ ತಿಳಿದು ನೋಡಬೇಕೆಂದು ಕನ್ನಡಿಯನುಪಾಸ್ತಿ ಮಾಡಲು ಆ ಕನ್ನಡಿ ಬೇಕು ಬೇಡೆಂಬುದೆ ಅಯ್ಯಾ ? ಪತಿಯಾಜ್ಞೆಯಂತೆ ಸತಿಪತಿಭಾವವ ಧರಿಸಿದಡೆ ಸಂಯೋಗಕಾಲದಲ್ಲಿ ಅಲ್ಲವೆಂದೆನಬಹುದೆ ? ನೀವೆ ಮಾಡಿದಡೆ ನೀವೆ ಮಾಡಿದುದು ನಾನೆ ಮಹಾಪ್ರಸಾದವೆಂದು ಸ್ವೀಕರಿಸಿದಡೂ ನೀವೆ ಮಾಡಿದುದು. ಅಂಗೈಯ ಲಿಂಗದ ಲಕ್ಷಣವ ನೋಡಿ ಎಂದು ಕೈಯಲ್ಲಿ ಕೊಟ್ಟಡೆ, ಲಿಂಗದಲ್ಲಿ ಲಕ್ಷಣವನರಸಲಾಗದೆಂದು ಚೆನ್ನಸಂಗಮನಾಥನ `ಕೋ' ಎಂದು ಕೊಟ್ಟಡೆ ಮಹಾಪ್ರಸಾದವೆಂದು ಕೈಕೊಂಡೆನು ಗುರುವೆ. ಬೆದರಿ ಅಂಜಿದಡೆ ಮನವ ಸಂತೈಸಿ ಏಕಾರ್ಥದ ಭೇದದ ತೋರಿ ಬಿನ್ನಹವ ಮಾಡಿದೆನು. ಕೂಡಲಚೆನ್ನಸಂಗಮದೇವರ ಮಹಾಮನೆಯ ಗಣಂಗಳು ಮೆಚ್ಚಲು, ಸಂಗನಬಸವಣ್ಣನ ಕರುಣದ ಶಿಶುವೆಂಬುದ ಮೂರುಲೋಕವೆಲ್ಲವು ಅಂದು ಜಯ ಜಯ ಎನುತಿರ್ದುದು.
--------------
ಚನ್ನಬಸವಣ್ಣ
ಇನ್ನಷ್ಟು ... -->