ಅಥವಾ

ಒಟ್ಟು 116 ಕಡೆಗಳಲ್ಲಿ , 39 ವಚನಕಾರರು , 107 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಲಯಜದ ಮಧ್ಯದಲ್ಲಿ ವಂಶ ಪುದಿದಿರೆ ಮುಟ್ಟದು ಗಂಧ ಅದೇಕೆ? ಮಧ್ಯದ ದ್ವಾರದ ಲಕ್ಷಣದಿಂದ, ಪಾದಪದ ಜಾತಿಬ್ಥಿನ್ನದಿಂದ. ಆ ತೆರನನರಿದಲ್ಲಿ ಇದಿರಿಟ್ಟು ಕುರುಹು ಬ್ಥಿನ್ನವಾಯಿತ್ತು. ಆತ್ಮಂಗೆ ಅರಿವು ಸೂಜಿಯ ಮೊನೆಯಂತೆ ಕುರುಹು ಹಿಂಗಿದ ದ್ವಾರದಂತೆ ಉಭಯವ ಭೇದಿಸಿ ಆ ದ್ವಾರದಲ್ಲಿ ಎಯ್ದುವ ನೂಲು ಮುಂದಳ ಹರಿಯ ಮುಚ್ಚುವಂತೆ ಕರುಹಿನ ಬ್ಥಿನ್ನ ನಾಮನಷ್ಟವಾಗುತ್ತದೆ, ನಿಜತತ್ವದ ಬೆಳಗು ತೋರುತ್ತದೆ ಸದಾಶಿವಮೂರ್ತಿಲಿಂಗದಲ್ಲಿ,
--------------
ಅರಿವಿನ ಮಾರಿತಂದೆ
ಆದಿಶಕ್ತಿವಿಡಿದಾಡುವರೆಲ್ಲರು ಜಂಗಮವಲ್ಲ, ಅನಾದಿಶಕ್ತಿವಿಡಿದಾಡುವರೆಲ್ಲರು ಜ್ಞಾನಿಗಳಲ್ಲ, ಆದಿ ಅನಾದಿಯೆಂಬೀ ಎರಡ ಭೇದಿಸಿ ದಾಂಟಿ, ಇಚ್ಛಾಶಕ್ತಿಯ ಇಚ್ಛೆಯ ಮರೆದು, ಕ್ರಿಯಾಶಕ್ತಿಯ ಭಾವವ ಬಿಟ್ಟು, ಜ್ಞಾನಶಕ್ತಿಯ ಠಾವವನೊಲ್ಲದೆ, ತಾನು ತಾನಾದವಂಗೆ ಏನೂ ಇದಿರಿಲ್ಲಾ, ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಸದಮಲದರುಹಿನಿಂದ ಸಾದ್ಥಿಸಿದಮಲಲಿಂಗವ ಕಂಡು ಭೇದಿಸಿ ನಿಜದಲ್ಲಿ ನಿಂದು, ಸ್ವಾನುಭವ ಸಿದ್ಧಾಂತನಾದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ವೇದಶ್ರುತಿಯಿಂದ ವಸ್ತುವನರಿತೆಹೆನೆಂದಡೆ ಆ ವೇದವೆ ಹಾದಿಯೆ ವಸ್ತುವ ಕಾಬುದಕ್ಕೆ ? ಆ ವೇದ ಸರ್ವವು ಬ್ರಹ್ಮವೆಂದಲ್ಲಿ ವಸ್ತು ಎಲ್ಲಿ ಉಳಿಯಿತ್ತು ? ಆ ತೆರನ ತಿಳಿದು ವೇದವಾರನರಸಿತ್ತು ? ಶ್ರುತಿ ಯಾರ ಭೇದಿಸಿತ್ತು ? ಆ ಗುಣ ನಾದಬಿಂದುಕಳೆಯೊಳಗಾದಲ್ಲಿ ವಸ್ತುತತ್ವರೂಪಾಯಿತ್ತು. ಆ ಸ್ವರೂಪದ ಭೇದದಿಂದ ಪಂಚಭೌತಿಕದ ಗುಣದಿಂದ ಪಂಚವಿಂಶತಿತತ್ವಂಗಳೆಲ್ಲವೂ ಗೊತ್ತಾದವು. ನಾಲ್ಕು ವೇದ, ಹದಿನಾರು ಶಾಸ್ತ್ರ, ಇಪ್ಪತ್ತೆಂಟು ದಿವ್ಯಪುರಾಣಂಗಳಲ್ಲಿ ವೇದ್ಥಿಸಿ ಭೇದಿಸಿ ಕಂಡೆನೆಂಬಲ್ಲಿ ನಿಂದಿತ್ತು ನಿಜ ಸಂದೇಹಕ್ಕೆ ಒಳಗಾದುದಾಗಿ. ತರ್ಕಂಗಳಿಂದ ತರ್ಕಿಸಿ ನೋಡಿ ಮಿಕ್ಕಾದ ತತ್ವಂಗಳಲ್ಲಿ ಲಕ್ಷಿಸಿ ಪ್ರಮಾಣಿಸಿದಲ್ಲಿ ವಸ್ತು ಹಲವು ಕುಲವೆಂದು ಕಲ್ಪಿಸಿ ನುಡಿವಲ್ಲಿ ವಿಭೇದ ಪಕ್ಷವಲ್ಲದೆ ವಸ್ತು ಏಕರೂಪು. ಜಲ ಬಹುನೆಲಂಗಳಲ್ಲಿ ನಿಂದು ಒಲವರವಿಲ್ಲದೆ ಸಸಿ ವೃಕ್ಷಂಗಳ ಸಲಹುವಂತೆ ಸರ್ವಗುಣಸಂಪನ್ನನಾದೆಯಲ್ಲಾ ಪರಮಪ್ರಕಾಶ ಪರಂಜ್ಯೋತಿ ಪಂಚಬ್ರಹ್ಮಸ್ವರೂಪನಾದೆಯಲ್ಲಾ ಎನಗೆ ನೀನಾದೆಹೆನೆಂದು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಾ.
--------------
ಪ್ರಸಾದಿ ಭೋಗಣ್ಣ
>ಸಾವ ಜೀವ ಬಿಂದುವಿನ ಸಂಚ, ಸಾಯದ ನಾದ ಪ್ರಾಣದ ಸಂಚ. ಸಾವ ಜೀವದ, ಸಾಯದ ಪ್ರಾಣದ _ಎರಡರ ಭೇದವನರಿಯದಿರ್ದಡೆ ಲಾಂಛನಧಾರಿ, ಸಾವ ಜೀವದ, ಸಾಯದ ಪ್ರಾಣದ ಎರಡರ ಭೇದವ ಭೇದಿಸಿ ಅರಿವು ಕಣ್ದೆರೆದ ಪ್ರಾಣಲಿಂಗಸಂಬಂಧವಂತಿರಲಿ, ಮತ್ತೆಯೂ ಪ್ರಾಣಲಿಂಗಸಂಬಂಧವೇ ಬೇಕು. ಇಂತೀ ಉಭಯ ಸಂಬಂಧವಳಿದ ಸಂಬಂಧ ನಿಜವಾಯಿತ್ತು. ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ
--------------
ಚನ್ನಬಸವಣ್ಣ
ಅರ್ಪಿತ ವಿಡಿದು ಸಯಿದಾನವಾಯಿತ್ತೀಯೊಡಲಿಂಗೆ, ಅನರ್ಪಿತವಿಡಿದು ಪ್ರಸಾದವಾಯಿತ್ತೀ ಪ್ರಾಣಕ್ಕೆ. ತನು ಭೋಗಿಸುವುದು ಉಪಾಧಿ [ಕ] ಪ್ರಸಾದ, ಪ್ರಾಣ ಭೋಗಿಸುವುದು ಪರಿಣಾಮಪ್ರಸಾದ. ಈ ಭೇದವ ಭೇದಿಸಿ ಪ್ರಾಣಚೈತನ್ಯ ಲಿಂಗವೆಂದರಿದೆನಾಗಿ ಕೂಡಲಚೆನ್ನಸಂಗನೆಂಬ ಲಿಂಗ ಸ್ವಯವಾಯಿತ್ತು.
--------------
ಚನ್ನಬಸವಣ್ಣ
ದೀಕ್ಷಾತ್ರಯದಲ್ಲಿ ವ್ಯಕ್ತನಾದೆ ಶಿಕ್ಷ ಸಂಬಂದ್ಥಿಸುವಲ್ಲಿ ಬ್ಥೀತನಾದೆ ಮುಗ್ಧೆಯ ಕನಸಿನಲ್ಲಿ ಮುಕ್ತನಾದೆ ಧನ-ತನು-ಮನಂಗಳ ಮೂರ ಮರೆದವನ ತಾಮಸಂಗಳು ಹಲವನಳಿದವನ ರಜಂಗಳು ಕೆಲವನುಳಿದವನ ಭೇದಿಸಿ ಕಂಡೆ. ಅದೇನು ಗುಣ? ಅವ್ಯಯ ನಾನಾ ವಾಯಸ್ಥಾನದಲ್ಲಿ ಶುದ್ಧ ಸಂಗಮ ಪ್ರಯೋಗಿಸಿದ ಕಾರಣ! ೀಕ್ಷೆಯಾಯಿತ್ತು ಕಾಯಕ್ಕೆ, ಶಿಕ್ಷೆಯಾಯಿತ್ತು ಸರ್ವಾಂಗಕ್ಕೆ ಸ್ವಾನುಭಾವವಾಯಿತ್ತು ಕರಣೇಂದ್ರಿಯ ಸರ್ವಕ್ಕೆ. ದೀಕ್ಷಾತ್ರಯವು ಸಂಬಂದ್ಥಿಸಿದ ಕಾರಣ ನೀ ನಾನಾದೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಶಬ್ದಮಧ್ಯದಲ್ಲಿರ್ಪ ಅರ್ಥವೇ ಜೀವನು, ತಮೋರೂಪಮಾಗಿಹನು. ಜ್ಞಾನಮಧ್ಯದಲ್ಲಿರ್ಪ ಅರ್ಥವೇ ಪರಮನು, ಸತ್ವರೂಪಮಾಗಿಹನು. ಜ್ಞಾನಶರೀರದಲ್ಲಿರ್ಪ ಪರಮಾರ್ಥಭಾವವೆಂಬ ಹಸ್ತದಲ್ಲಿ ಬುದ್ಧಿಯೆಂಬ ತ್ರಿಗುಣಾತ್ಮಕಮಪ್ಪ ಮುನ್ಮೊನೆಯಲಗಂ ಪಿಡಿದು, ಆ ಶಬ್ದಶರೀರಂ ಭೇದಿಸಿ, ತನ್ಮಧ್ಯದಲ್ಲಿರ್ಪ ಅರ್ಥವನ್ನು ಆ ಜ್ಞಾನವು ಗ್ರಹಿಸಿದಲ್ಲಿ, ಜ್ಞಾನಾರ್ಥದೊಳಗೆ ಬೆರೆದು, ಎರಡೂ ಒಂದಾಗಿ, ಆ ಅರ್ಥವೇ ಸತ್ಯವಾಗಿ ಆನಂದಮಯಮಪ್ಪುದು. ಜ್ಞಾನವು ಗ್ರಹಿಸದೇ ಬಿಟ್ಟರೆ ಶಬ್ಧಾರ್ಥವೇ ದುರರ್ಥವಾಗಿ, ಸೃಷ್ಟಿಸ್ಥತಿಸಂಹಾತಂಗಳಲ್ಲಿ ಕೋಟಲೆಗೊಳ್ಳುತ್ತಿರ್ಪುದೇ ಜೀವನು, ಅದೇ ಪರಮನು. ತತ್ಪರಿಗ್ರಹವೇ ಐಕ್ಯಮಾದಲ್ಲಿ ಎರಡೂ ಒಂದೇ ಆಗಿರ್ಪುದೇ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಅನಾದಿಪುರುಷ ಬಸವಣ್ಣಾ, ಕಾಲ ಮಾಯೆಗಳೆರಡೂ ನಿಮ್ಮ ಮುಂದಿರ್ದು, ನಿಮ್ಮ ಕಾಣೆವೆನುತ್ತಿಹವು. ಆದಿಪುರುಷ ಬಸವಣ್ಣಾ; ಸುರಾಸುರರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ನಾದಪುರುಷ ಬಸವಣ್ಣಾ, ನಾದ ಮಂತ್ರಗಳು ಪಂಚಮಹಾವಾದ್ಯಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ವೇದಪುರುಷ ಬಸವಣ್ಣಾ, ವೇದಶಾಸ್ತ್ರಾಗಮ ಪುರಾಣಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ಆಗಮ್ಯಪುರುಷ ಬಸವಣ್ಣಾ, ಅಂಗಾಲ ಕಣ್ಣವರು ಮೈಯೆಲ್ಲ ಕಣ್ಣವರು ನಂದಿವಾಹನರು ಗಂಗೆವಾಳುಕರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಗೋಚರಪುರುಷ ಬಸವಣ್ಣಾ, ಈ ಗೋಚರಿಸಿದ ಮನುಮುನಿ ದೇವದಾನವ ಮಾನವರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಪ್ರಮಾಣಪುರುಷ ಬಸವಣ್ಣ, ಈ ಪ್ರಮಾಣರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಸರ್ವಜ್ಞಪುರುಷ ಬಸವಣ್ಣಾ, ಈ ಸರ್ವರು ನಿಮ್ಮ ಬಳಸಿರ್ದು ನಿಮ್ಮ ಕಾಣೆವೆನುತ್ತಿಹರು. ಇಂತೀ ಸರ್ವಪ್ರಕಾರದವರೆಲ್ಲರೂ ನಿಮ್ಮ ಸಾಧಿಸಿ ಭೇದಿಸಿ ಪೂಜಿಸಿ ತರ್ಕಿಸಿ ಹೊಗಳಿ ಕಾಣದೆ ನಿಮ್ಮಿಂದವೆ ಉತ್ಪತ್ತಿ ಸ್ಥಿತಿಲಯಂಗಳಾಗುತ್ತಿಹರು. ಅದು ಕಾರಣ,_ನಮ್ಮ ಗುಹೇಶ್ವರಲಿಂಗದಲ್ಲಿ ಭಕ್ತಿವಡೆದ ಅನಂತ ಭಕ್ತರೆಲ್ಲ ಬಸವಣ್ಣ ಬಸವಣ್ಣ ಬಸವಣ್ಣ ಎನುತ್ತ ಬದುಕಿದರಯ್ಯಾ.
--------------
ಅಲ್ಲಮಪ್ರಭುದೇವರು
ಕಂಗಳೊಳಗಣ ಕಟ್ಟಿಗೆಯ ಮುರಿಯದ, ಕೈಯೊಳಗಣ ಕಪ್ಪರವನೊಡೆಯದ, ತನ್ನೊಳಗಿಪ್ಪ ನಿಕ್ಷೇಪವ ಭೇದಿಸಿ ಕಾಣಲರಿಯದ ಬಿನುಗರೆಲ್ಲ, ಹಲುಗಿರಿವುತ್ತಿಹರು ಕಾಣಾ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಅಂದಂದಿನ ಮಾತನು ಅಂದಂದಿಗೆ ಅರಿಯಬಾರದು. ಹಿಂದೆ ಹೋದ ಯುಗಪ್ರಳಯಂಗಳ ಬಲ್ಲವರಾರಯ್ಯಾ ? ಮುಂದೆ ಬಪ್ಪ ಯುಗಪ್ರಳಯಂಗಳ ಬಲ್ಲವರಾರಯ್ಯಾ ? ಬಸವಣ್ಣನು ಆದಿಯಲ್ಲಿ ಲಿಂಗಶರಣನೆಂಬುದ ಭೇದಿಸಿ ನೋಡಿ ಅರಿವರಿನ್ನಾರಯ್ಯಾ ? ಲಿಂಗ ಜಂಗಮ ಪ್ರಸಾದದ ಮಹಾತ್ಮೆಗೆ ಬಸವಣ್ಣನೆ ಆದಿಯಾದನೆಂಬುದನರಿದ ಸ್ವಯಂಭು ಜ್ಞಾನಿ, ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನೊಬ್ಬನೆ.
--------------
ಅಲ್ಲಮಪ್ರಭುದೇವರು
ಆದಿ ಅನಾದಿ ಅಂತರಾದಿ ನಾದ ಬಿಂದು ಕಳೆ ಸ್ಥೂಲ ಸೂಕ್ಷ್ಮ ಕಾರಣ ಆದಿ ಮಧ್ಯಾವಸಾನಂಗಳಲ್ಲಿ ಜಗದಲ್ಲಿ ಸಾದ್ಥಿಸುತ್ತಿರ್ದ ಬೋಧರುಗಳು ನೀವು ಕೇಳಿರೊ. ಅಭ್ಯೇದ್ಯಲಿಂಗವ ಭೇದಿಸಿ ಸುಬುದ್ಧಿಯಿಂದ ಕಂಡ ಪರಿ ಇನ್ನೆಂತೊ? ಮಾತಿನ ಮಾಲೆಯ ಕಲಿತು ಸಂತೆಯ ಹೋತಿನಂತೆ ಹೋರುವ ತೂತಜ್ಞಾನಿಗಳಿಗಿನ್ನೇತರ ಭಕ್ತಿ ವಿರಕ್ತಿ, ನಿಃಕಳಂಕ ಮಲ್ಲಿಕಾರ್ಜುನಾ?
--------------
ಮೋಳಿಗೆ ಮಾರಯ್ಯ
ಅಗ್ನಿಯ ಅಡಕವ, ನೀರಿನಲ್ಲಿ[ಯ] ಸಾರವ ನಿರವಯದ ಹೊರೆಯ ಭೇದಿಸಿ ಕಾಬಂತೆ ಅಗ್ನಿಗೆ ಮಥನದಿಂದ, ನೀರಿನ ಸಾರಕ್ಕೆ ಮಧುರದಿಂದ ನಿರವಯದ ಹೊರೆಯಕ್ಕೆ ತನ್ನರಿವಿನ ಭೇದದಿಂದ ಕಾಣಿಸಿಕೊಂಬುದು ತ್ರಿವಿಧಲಿಂಗಭೇದ, ಪ್ರಾಣಲಿಂಗಿಯ ಸಂಗ. ಈ ಗುಣ ಸಂಗನಬಸವಣ್ಣನ ಸುಸಂಗ. ಬ್ರಹ್ಮೇಶ್ವರಲಿಂಗವ ಕೂಡುವ ಕುರುಹಿನ ನಿರಂಗ.
--------------
ಬಾಹೂರ ಬೊಮ್ಮಣ್ಣ
ಜೀವತಾಮಸದ ಮಾಯದ ಬಲೆಯ ಭ್ರಾಂತಿಂಗೆ ಸೋಲುವ ಶರೀರ ! ಸಂಸಾರ ಸಂಗವ ಭೇದಿಸಿ ನೋಡುವಡೆ ದೂರ, ಚಿಂತೆಯನೆ ಗೆಲಿದು ಸುಳಿದಡೆ, ಗುಹೇಶ್ವರನೆಂದರಿದ ಶರಣಸಾರಾಯನು.
--------------
ಅಲ್ಲಮಪ್ರಭುದೇವರು
ಷಟ್‍ಸ್ಥಲ ಮುಂತಾದ ಪಂಚವಿಂಶತಿತತ್ವ, ಏಕೋತ್ತರಶತಸ್ಥಲ ಮುಂತಾದ ಕ್ರಿಯಾಧರ್ಮಂಗಳಲ್ಲಿ ಆಚರಿಸುವುದು ಪೂರ್ವಕಕ್ಷೆಯ ಭೇದ. ಉತ್ತರಕಕ್ಷೆಯಲ್ಲಿ ಲಕ್ಷಿಸಿ ನೋಡಿಹೆನೆಂದಡೆ, ದ್ವೈತಾದ್ವೈತಂಗಳ ತಿಳಿದು, ಸಕಲ ನಿಃಕಲವ ವಿಚಾರಿಸಿ, ಸ್ಥೂಲ ಸೂಕ್ಷ್ಮ ಕಾರಣ ತನುತ್ರಯಂಗಳ ಕಂಡು, ಇಷ್ಟಕಾಮ್ಯಮೋಕ್ಷಂಗಳ ಗೊತ್ತಗೆಟ್ಟು ತೂರ್ಯಾತುರೀಯವೆಂಬವ ಪರಿಹರಿಸಿ, ತೀತ ಅತೀತವಪ್ಪುದನು ಕುರುಹಿಟ್ಟು, ಸುರಾಳ ನಿರಾಳ ನಿರವಯಸ್ಥಾನವ ಭೇದಿಸಿ ವೇದಿಸಿ, ಘೃತಪಾನವ ಸ್ವೀಕರಿಸಿದ ನಾಲಗೆಯಂತೆ ಬಂಧವಿಲ್ಲದೆ ತತ್ವಮಸಿಯೆಂಬ ಬ್ಥಿತ್ತಿಯ ಮೆಟ್ಟದೆ ಜಲವ ಹೊಯಿದಡೆ ಆ ಜಲಕ್ಕೆ ಆಯುಧದ ಕಲೆದೋರದಂತೆ ನಿಂದ ನಿಜದೊಳಗು ಉತ್ತರಕಕ್ಷೆಯ ಭೇದ. ಇಂತೀ ಉಭಯಕಕ್ಷೆಯಲ್ಲಿ ರಾಗವಿರಾಗವನರಿದು, ನಿಶ್ಶಬ್ದ ನಿರ್ಲೇಪವಾಗಿ ಸದ್ಯೋಜಾತಲಿಂಗವ ಕೊಡಬೇಕು.
--------------
ಅವಸರದ ರೇಕಣ್ಣ
ಇನ್ನಷ್ಟು ... -->