ಅಥವಾ

ಒಟ್ಟು 246 ಕಡೆಗಳಲ್ಲಿ , 54 ವಚನಕಾರರು , 230 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಲ ನೆಲ ಅನಲ ಅನಿಲ ಮಿಕ್ಕಾದ ದೃಷ್ಟಂಗಳೆಲ್ಲವನೂ ನಿರೀಕ್ಷಿಸಿ ಸಾದ್ಥಿಸಿಕೊಂಡು ಶ್ರುತ ದೃಷ್ಟ ಅನುಮಾನಂಗಳಲ್ಲಿ ತಿಳಿದು, ಹಿಂದಣ ಮುಂದಣ ಸಂದೇಹವ ಹರಿದು ಮುಟ್ಟೂದು ಘಟಕ್ರಿಯಾಭೇದ ಮನಕ್ಕೆ ಮನೋಹರ ಸಂಕೇಶ್ವರ ಲಿಂಗವನರಿವುದಕ್ಕೆ.
--------------
ಕರುಳ ಕೇತಯ್ಯ
ಜಗವನೊಳಕೊಂಡ ಲಿಂಗವು ಸೊಗಸಿಂದೆ ಎನ್ನ ಕರಸ್ಥಲಕ್ಕೆ ಬಂದಿರಲು, ಕಂಡು ಹಗರಣವಾಯಿತ್ತೆನಗೆ. ಗುರುಲಿಂಗಜಂಗಮಸ್ವರೂಪವಾಗಿ ಮೂರ್ತಿಗೊಂಡಿತ್ತು ನೋಡಾ. ಆಹಾ ಎನ್ನ ಪುಣ್ಯವೇ ! ಆಹಾ ಎನ್ನ ಭಾಗ್ಯವೇ ! ಆಹಾ ಅಖಂಡೇಶ್ವರಾ, ನಿಮ್ಮ ಘನವ ಕಂಡು ಎನ್ನ ಮನಕ್ಕೆ ಮಂಗಳವಾಯಿತ್ತು ನೋಡಾ.
--------------
ಷಣ್ಮುಖಸ್ವಾಮಿ
ನಿಷ್ಕಳಂಕಾತ್ಮನು ನಿಜಪ್ರಕೃತಿವಶದಿಂ ಮನ ನೆನಹು ಭಾವದೆ ತ್ರಿವಿಧಸ್ವರೂಪವಾಯಿತ್ತು. ಆ ಮನವೊಗ್ದಿದುದೆ ನೆನಹಿಗೆ ಬಂದಿತ್ತು. ಅದೇ ಭಾವದಲ್ಲಿ ತೋರಿತ್ತು ; ಅದೇ ಪ್ರಾಣವಾಯಿತ್ತು ; ಅದೇ ಚೈತನ್ಯಸ್ವರೂಪಮಾಗಿ ತನುವನೆಳದಾಡಿತ್ತು. ಅದಕ್ಕೆ ವಾಯುವೇ ಅಂಗವಾಗಿ ಕರ್ಮಾದ್ಥೀನಮೆನಿಸಿ, ತಾನೆಂಬಹಂಕಾರದಿಂ ತನ್ನ ತಾ ಮರೆತು ತೊಳಲಿಬಳಲುತ್ತಿರಲು, ಅನೇಕಜನ್ಮ ಸಂಚಿತಕರ್ಮ ಸಮೆದು, ಗುರುಕರುಣ ನೆಲೆಗೊಂಡಲ್ಲಿ ಗಗನಾಂಗಿಯಾಗಿ, ಆ ಮನಕ್ಕೆ ತಾನೇ ಆಧಾರಮಾಗಿ, ತಾನೇ ಪರಮನಾಗಿ, ತಾನೇ ಪ್ರಸನ್ನಮಾಗಿರ್ದ ಮಹಾಜಾÕನಶಕ್ತಿಯಂ ಕಂಡದರೊಳಗೆ ಕೂಡಿ, ಸಾಧಕಕ್ಕೊಳಗಾದ ಮನವೇ ಘನವಾಯಿತ್ತು. ಆ ಘನವೇ ಲಿಂಗವಾಯಿತ್ತು, ಆ ಲಿಂಗವೇ ಪ್ರಾಣವಾಯಿತ್ತು, ಆ ಪ್ರಾಣವೇ ಪರಮಾತ್ಮಸ್ವರೂಪಮಾಗಿ ತತ್ತ್ವಮಸಿಪದದಿಂದತ್ತತ್ತ ಹಮ್ಮನಳಿದು ಸುಮ್ಮನೆಯಾದುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯ ಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಮನಕ್ಕೆ ನಾಚದ ವಚನ, ವಚನಕ್ಕೆ ನಾಚದ ಮನ ! ಕುಂದು-ಹೆಚ್ಚ ನುಡಿವೆ. ಒಂದು ಮಾತಿನ ಗೆಲ್ಲಕ್ಕೆ ಹಿಡಿದು ಹೋರುವೆ, ಕೂಡಲಸಂಗನ ಶರಣರ ಎನ್ನಾಳ್ದರೆಂಬೆ. 256
--------------
ಬಸವಣ್ಣ
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿ ಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
--------------
ಕರುಳ ಕೇತಯ್ಯ
ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆ ನಿಮ್ಮ ನಿಲವ ನೋಡಿಹೆನೆಂದಡೆ ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ, ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ, ನಿತ್ಯತೃಪ್ತಮಹಿಮಾ, ನಿಮಗೆಂದಳವಡಿಸಿದ ಪದಾರ್ಥವ ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ, ಕೂಡಲಸಂಗಮದೇವಾ.
--------------
ಬಸವಣ್ಣ
ಆದಿಯಲ್ಲಿ ಹುಟ್ಟಿತ್ತಲ್ಲ, ಅನಾದಿಯಲ್ಲಿ ಬೆಳೆಯಿತ್ತಲ್ಲ; ಮೂರ್ತಿಯಲ್ಲಿ ನಿಂದುದಲ್ಲ, ಅಮೂರ್ತಿಯಲ್ಲಿ ಭಾವಿಯಲ್ಲ; ಅರಿವಿನೊಳಗೆ ಅರಿದುದಲ್ಲ, ಮರಹಿನೊಳಗೆ ಮರೆದುದಿಲ್ಲ; ಎಂತಿರ್ದಡಂತೆ ಬ್ರಹ್ಮ ನೋಡಾ ! ಮನ ಮನ ಲೀಯವಾಗಿ ಘನ ಘನ ಒಂದಾದಡೆ ಮತ್ತೆ ಮನಕ್ಕೆ ವಿಸ್ಮಯವೇನು ಹೇಳಾ ? ಕೂಡಲಚೆನ್ನಸಂಗನ ಶರಣರು ಕಾಯವೆಂಬ ಕಂಥೆಯ ಕಳೆಯದೆ ಬಯಲಾದಡೆ ನಿಜವೆಂದು ಪರಿಣಾಮಿಸಬೇಕಲ್ಲದೆ ಅಂತಿಂತೆನಲುಂಟೆ ಸಂಗನಬಸವಣ್ಣಾ ?
--------------
ಚನ್ನಬಸವಣ್ಣ
ಸಜ್ಜನಸನ್ನಹಿತವಾದ ಭಕ್ತಿ, ಹೊತ್ತಿಗೊಂದು ಪರಿಯುಂಟೆ ಹೇಳಾ ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ, ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ತನುವಿಂಗೆ ತನುವಾಗಿ, ಮನಕ್ಕೆ ಮನವಾಗಿ, ಜೀವಕ್ಕೆ ಜೀವವಾಗಿ, ಇದ್ದುದನಾರು ಬಲ್ಲರೊ? ಅದು ದೂರವೆಂದು, ಸಮೀಪವೆಂದು, ಮಹಂತ ಗುಹೇಶ್ವರ[ನು]À, ಒಳಗೆಂದು ಹೊರಗೆಂದು, ಬರುಸೂರೆವೋದರು.
--------------
ಅಲ್ಲಮಪ್ರಭುದೇವರು
ದೃಷ್ಟಿ ಕಾಮ್ಯಾರ್ಥದಲ್ಲಿ ನೆಟ್ಟು ನೋಡಿ, ಒಡೆಯರು ಭಕ್ತರ ವಧುಗಳಲ್ಲಿ ಮತ್ತಾ ದೃಷ್ಟಿಯ ಮುಟ್ಟಲೇತಕ್ಕೆ? ಮತ್ತೆ ಇತ್ಯಾದಿಗಳ ಬಿಟ್ಟು ಹೆಣ್ಣವ್ರತ ಕಟ್ಟೆಂದು ಮಾಡಬಹುದೆ? ಮತ್ತದ ಕಟ್ಟಿಕೊಂಡು ಮಿಟ್ಟಿಯ ಭಂಡರಂತೆ ಕುಟ್ಟಿಯಾಡಬಹುದೆ? ಇಂತೀ ಬಾಹ್ಯ ದೃಷ್ಟಿಗಳ್ಳರ, ಆತ್ಮಚಿತ್ತಗಳ್ಳರ ವ್ರತಸ್ಥರೆಂದು ಎನಲಾಗದು. ಮನಕ್ಕೆ ಮನೋಹರ ಶಂಕೇಶ್ವರ ಲಿಂಗವು ಅವರುವ ಮುಟ್ಟದಿಹನಾಗಿ
--------------
ಕರುಳ ಕೇತಯ್ಯ
ಸರ್ವ ಇಂದ್ರಿಯಗಳ ಒಂದು ಮುಖವ ಮಾಡಿ ಸರ್ವ ಮೋಹಂಗಳಲ್ಲಿ ನಿರ್ಮೋಹಿತನಾಗಿ, ಅಂಗದಿಚ್ಫೆಯ ಮರೆದು ವ್ರತವೆಂಬ ಆಚಾರಲಿಂಗವ ಧರಿಸಬೇಕಲ್ಲದೆ ತನುವಿಗೆ ಬಂದಂತೆ ಮುಟ್ಟಿ, ಮನಕ್ಕೆ ಬಂದಂತೆ ಹರಿದು, ನಾನಿಲ್ಲಿ ಒಬ್ಬ ಶೀಲವಂತನಿದ್ದೇನೆ ಎಂದು ಕಲಹಟ್ಟಿಯಂತೆ ಕೂಗುತ್ತ ಕೊರಚುತ್ತ ಅಲ್ಲಿ ಬೊಬ್ಬಿಡುತ್ತ ಶೂಲವನೇರುವ ಕಳ್ಳನಂತೆ ಬಾಹ್ಯದಲ್ಲಿ ಬಾಯಾಲುವ, ಮನದಲ್ಲಿ ಸತ್ತೆಹೆನೆಂಬ ಸಂದೇಹದವನಂತೆ ಸಾಯದೆ, ಹೊರಗಣ ಕ್ರೀ ಶುದ್ಭವಾಗಿ, ಒಳಗಳ ಆತ್ಮ ಶುದ್ಧವಾಗಿ, ಉಭಯ ಶುದ್ಧವಾಗಿಪ್ಪುದು ಪಂಚಾಚಾರ ನಿರುತ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಸರ್ವಾಂಗಭರಿತನು
--------------
ಅಕ್ಕಮ್ಮ
ತನುವಿಂಗೆ ತನುರೂಪಾಗಿ ತನುವಿಂಗಾಧಾರವಾದೆ. ಮನಕ್ಕೆ ಮನರೂಪಾಗಿ ಮನಕ್ಕೆ ನೆನಹಿನ ಶಕ್ತಿಯನಿತ್ತು ಮನಕ್ಕಾಧಾರವಾದೆ. ಪ್ರಾಣಕ್ಕೆ ಪ್ರಾಣರೂಪಾಗಿ. ಪ್ರಾಣಕ್ಕಾಧಾರವಾದೆ. ಎನ್ನಂಗೆ ಮನ ಪ್ರಾಣದಲ್ಲಿ ನೀವೆ ನಿಂದು, ಸರ್ವಕರಣಂಗಳ ನಿಮ್ಮವ ಮಾಡಿಕೊಂಡ ಕಾರಣ ಎನ್ನ ಪ್ರಾಣ ನಿಮ್ಮಲ್ಲಿ ಆಡಗಿತ್ತು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆ ಪುನರಪಿ ಪುನರ್ದೀಕ್ಷೆಯುಂಟೆ ? ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ? ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ ಅಮುಗೇಶ್ವರಲಿಂಗದಲ್ಲಿ.
--------------
ಅಮುಗೆ ರಾಯಮ್ಮ
ತನ್ನ ಲಿಂಗವ ಶಿಷ್ಯಂಗೆ ಬಿಜಯಂಗೈಸಿ ಕೊಟ್ಟು ಮುಂದೆ ತಾನೇನಾಗುವನೆಲವೊ ? ಅವನ ಧರ್ಮಕ್ಕೆ ಗುರುವಾದನಲ್ಲದೆ ಅವನ ಮನಕ್ಕೆ ಗುರುವಾದುದಿಲ್ಲ. ಹಿಂದಾದ ಮುಕ್ತಿಯ ಮಾರಿಕೊಂಡುಂಬ ಭಂಗಗಾರರ ತೋರದಿರಾ_ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಲಗಲಗು ಮೋಹಿಸಿದಲ್ಲದೆ ಕಲಿತನವ ಕಾಣಬಾರದು. ನುಡಿದ ನುಡಿ ಜಾರಿದಡೆ ಮನಕ್ಕೆ ಮನ ನಾಚಬೇಕು, ಶಬ್ದಲೊಟ್ಟೆಯತನದಲ್ಲಿ ಎಂತಪ್ಪುದಯ್ಯಾ ಭಕ್ತಿ, ಪಾಪಿಯ ಕೂಸನೆತ್ತಿದಂತೆ. ಕೂಡಲಸಂಗಮದೇವರ ಭಕ್ತಿ ಅಳಿಮನದವರಿಗೆ ಅಳವಡದಯ್ಯಾ.
--------------
ಬಸವಣ್ಣ
ಇನ್ನಷ್ಟು ... -->