ಅಥವಾ

ಒಟ್ಟು 168 ಕಡೆಗಳಲ್ಲಿ , 46 ವಚನಕಾರರು , 147 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಚ್ಚಿದಾನಂದ ಬ್ರಹ್ಮೋಪದೇಶ ಭಕ್ತಮಹೇಶ್ವರರು ಪರಮಪಾತಕಸೂತಕಂಗಳ ಬಾಹ್ಯಾಂತರಂಗದಲ್ಲಿ ಹೊದ್ದದೆ, ಸತ್ಯಶರಣರು ಮಾಡುಂಡುದೊಂದು ಕಾಯಕ, ಬೇಡುಂಡುದೊಂದು ಕಾಯಕದಿಂದ ಗಳಿಸಿದಂಥ ಪದಾರ್ಥಗಳ, ಗುರುಚರಪರಸ್ಥಿರಕ್ಕೆ ಷಟ್‍ಸ್ಥಲಸಂಬಂಧಗಳಿಂದ, ಷಡ್ವಿಧಮಂತ್ರಗಳ ಸೊಮ್ಮಿನಿಂ ಸಂತೃಪ್ತರಾಗಿರ್ಪುದು. ಆ ನಿಲುಕಡೆಯೆಂತೆಂದಡೆ : ಶ್ರುತಿಗುರುಸ್ವಾನುಭವ ಸಾಕ್ಷಿಯಾಗಿ, ಶ್ರೀಗುರುಲಿಂಗಜಂಗಮವೆ ಪರಾತ್ಪರವೆಂದು ಕಂಡು, ಷಡುಸ್ಥಲಮಾರ್ಗವಿಡಿದು, ತನ್ನ ನಿಜವ ತಾನರಿಯದೆ, ಭವಿಶೈವ ಬ್ಥಿನ್ನ ಕರ್ಮಿಗಳಂತೆ ಭಾವಭ್ರಮೆಗೆಟ್ಟು, ಹೊಲಬುದಪ್ಪಿ, ಭೋಗಾಪೇಕ್ಷಿತರಾಗಿ, ಹಲವು ಶಾಸ್ತ್ರೋಪದೇಶವಿಡಿದು, ಕಾಶಿ ರಾಮೇಶ್ವರ ಕಂಚಿ ಕಾಳಹಸ್ತಿ ಪಂಪಾಕ್ಷೇತ್ರ ಗೋಕರ್ಣ ಶ್ರೀಶೈಲಾದಿಯಾದ ತೀರ್ಥಯಾತ್ರೆ, ವೀರಣ್ಣ ಬಸವಣ್ಣ ಮಲ್ಲಣ್ಣ ಹಾವಿಗೆ ದಂಡಾಗ್ರ ಗಿಳಿಲು ಶಂಖ ಭಸ್ಮಗುಂಟಿಕೆ ತೀರ್ಥದಗುಂಬ ಹಾದಿಬೆನವ ಹಳ್ಳದ ಬೆನವ ವಾಸರದಯ್ಯ ವಿನಾಯಕ ಶಕ್ತಿ ಗಣೇಶ ಚಂಡಿ ಚಾಮುಂಡಿಯಲ್ಲಿ ಏಕನಾತಿ ಹಿರಿಹೊಳೆ ಜಟ್ಟಿಂಗ ತೆಪ್ಪದಾರತಿ ಪಂಚಪಾಂಡವರು ಬನ್ನಿಮಹಾಂಕಾಳಿ ತುಳಸಿ ಬಿಲ್ವವೃಕ್ಷ ಸಮಾದ್ಥಿ ಗದ್ದುಗೆ ಪುರಾಣ ವಚನಾರ್ಥಪುಸ್ತಕ ಲೆಕ್ಕದ ಓಹಿ ಕತ್ತಿ ಕಂಡೇಪೂಜೆ, ಊರಬೀರ ಪೀರ ಗೋರಿ ಸತ್ತವರ ತಿಥಿ ಚಿತ್ತಹೊಲೆ ಕರ್ಮದ ಗಂಗೆ ಗುಗ್ಗುಳ ಗೌರೀನೋಂಪಿ ದೀಪಹರಕೆ ಪೂಜೆ ಕರಿಯಸೀರೆ ಊರ ಮಾರಿದೇವತೆ ಅಂಬಲಿ ಮಜ್ಜಿಗೆ ಕುಂಭ ಹೊಸ್ತಲ ಮದುವೆಯಕಂಭ ಕುಂಭ ಸರಕಿನಗಂಟು ಮಹತ್ವ ಮೆರೆದವರ ಪಾದಮುದ್ರೆ ಕಡೆಯಾದವಕ್ಕೆ, ತನ್ನ ಕಾಯ ವಾಚ ಮನದಲ್ಲಿ ಹೊಳೆದು, ಪಿತ-ಮಾತೆ ಸತಿ-ಸುತ ಒಡಹುಟ್ಟಿದವರು ಸೇವಕ ಕಡೆಯಾದವರಿಂದೆ ತನ್ನ ಮನೆಯಲ್ಲಿ ಮಾಡಿದ ಎಡೆ ವಾರಮೃತ್ಯೋದಕ, ಪಾದೋದಕಸಂಬಂಧವಾದ, ವಿಭೂತಿ-ಗಂಧಾಕ್ಷತೆ-ಪುಷ್ಪ-ಪತ್ರಿ ಧೂಪ-ದೀಪ ಹಣ್ಣು-ಕಾಯಿ ವಸ್ತ್ರಾಭರಣ-ಪಂಚಕಳಸ ಕಾಣಿಕೆ ಮೊದಲಾದ ಬ್ಥಿನ್ನವ ಕರ್ಮಕ್ರಿಯಾಚಾರಲಿಂಗಬಾಹ್ಯರಾದ ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಪಾಶುಪತ ಕಾಳಾಮುಖಿ ಯೋಗಿ-ಜೋಗಿ ಶ್ರವಣ-ಸನ್ಯಾಸಿ ಯತಿ-ವ್ರತಿ ಮನು-ಮುನಿ ಗರುಡ-ಗಂಧರ್ವ ಯಕ್ಷ-ರಾಕ್ಷಸ ಸಿದ್ಧ-ಸಾಧ್ಯರುಪದೇಶವಿಡಿದು ಚರಲಿಂಗೋದಯಘನಪಾದತೀರ್ಥವರ್ಪಿಸಿ, ನೈವೇದ್ಯ ಮಾಡಿಸುವಂಥಾದ್ದೆ ಅನಾಚಾರ. ಇದೇ ಭವಿಮಾಟಕೂಟ ಅಸತ್ಯದ ನಡೆನುಡಿಯ ವಿಚಾರದ ಪ್ರಥಮಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಶಿವಾಚಾರಸುಸಂಪನ್ನಃ ಕೃತ್ವ್ದಾನ್ಯದೈವಸ್ಯ ಪೂಜನಂ | ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಅನಾಚಾರಿಕೃತಂ ಪಾಕಂ ಲಿಂಗನೈವೇದ್ಯಕಿಲ್ಬಿಷಂ | ಲಿಂಗಾಚಾರಿಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ || ತದ್ದಿನಂ ದಿನದೋಷೇಣ ಶೋಣಿತಂ ಸುರಾಮಾಂಸಯೋಃ | ಏಕಭುಕ್ತೋಪವಾಸೇನ ನರಕೇ ಕಾಲಮಕ್ಷಯಂ || ಸೌಮೇ ಭೌಮೇ ವ್ಯತಿಪಾತೇ ಸಂಕ್ರಾಂತಿಶಿವರಾತ್ರಿಯೋ | ಶೈವಕರ್ಮೋಪವಾಸಿನಾಂ ನರಕೇ ಕಾಲಮಕ್ಷಯಂ || ಕಾರ್ತೀಕಮಾಘಶ್ರಾವಣ ಶೈವಪೂಜಾವಿಶೇಷತಃ | ವೀರಶೈವಸ್ತಥಾ ಕೃತ್ವಾ ಸನ್ತಶ್ಟ ಪ್ರಾಕೃತೈಃ ಸಮಾಃ || ಸ್ಥಾವರಾರ್ಪಿತನೈವೇದ್ಯಾತ್ ನ ತೃಪ್ತಿರ್ಮಮ ಪಾರ್ವತಿ | ಜಂಗಮಾರ್ಪಿತನೈವೇದ್ಯಾತ್ ಮಮ ತೃಪ್ತಿಶ್ಚ ಸರ್ವದಾ || ಸತ್ಪಾತ್ರದತ್ತವಿತ್ತಸ್ಯ ತದ್ಧನಂ ಸ್ವಧನಂ ಸುಖಂ | ಅಪಾತ್ರದತ್ತ ವಿತ್ತಸ್ಯ ತದ್ಧನಂ ಸ್ವಸುಖಂ ಭವೇತ್ || ಚರಸ್ಯ ಗಮನೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ | ಅನ್ಯಗೃಹಂ ಗಮಿಷ್ಯಂತಿ ಸದ್ಯೋ ಗೋಮಾಂಸಭಕ್ಷಣಮ್ || ಇಷ್ಟಲಿಂಗಮವಿಶ್ವಸ್ಯ ಅನ್ಯದೈವಮುಪಾಸತೇ | ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಬಹುಲಿಂಗಪೂಜಕಸ್ಯ ಬಹುಭಾವಗುರುಸ್ತಥಾ | ಬಹುಪ್ರಸಾದಂ ಭುಂಜಂತಿ ವೇಶ್ಯಾಪುತ್ರಸ್ತಥೈವ ಚ || ಅಭಕ್ತಜನಸಂಗಶ್ಚ ಮಂತ್ರಸ್ಯ ಚ ಆಗಮಃ | ಅನ್ಯದೈವಪರಿತ್ಯಾಗಃ ಲಿಂಗಭಕ್ತಸ್ಯ ಲಕ್ಷಣಂ || ಲಿಂಗಧಾರಕಭಕ್ತಾನಾಂ ಲಿಂಗಬಾಹ್ಯಸತೀಸುತಾಃ | ಆಲಿಂಗಿತಾ ಚುಂಬಿತಾಶ್ಚ ರೌರವಂ ನರಕಂ ವ್ರಜೇತ್ ||'' ಇಂತೆಂಬ ಹರಗುರುವಾಕ್ಯಪ್ರಮಾಣವದಾಗಿ, ಸದ್ಭಕ್ತಶರಣಗಣಾರಾಧ್ಯರು ಭೂಪ್ರತಿಷ್ಠಾದಿಗಳ ಹೊದ್ದಿದಡೆ, ಭವಬಂಧನವಪ್ಪದು ತಪ್ಪದು. ಅದು ಕಾರಣವಾಗಿ ಗುರುಮಾರ್ಗಿಕರು ಹೊದ್ದದೆ, ಭವಸಾಗರವ ದಾಂಟಿ, ನಿರ್ಧರದಿಂದಿಪ್ಪುದೊಂದು ನರಗುರಿಗಳ ಪ್ರಥಮಪಾತಕನಿರಸನ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಮೂರ ಬಿಟ್ಟವಂಗಲ್ಲದೆ ಸತ್ಯವ ಸಾದ್ಥಿಸಬಾರದು. ಆರ ಬಿಟ್ಟವಂಗಲ್ಲದೆ ಆದರಿಸಬಾರದು. ಎಂಟ ಬಿಟ್ಟವಂಗಲ್ಲದೆ ಸಾಕಾರದ ಕಂಟಕವನರಿಯಬಾರದು. ರಣದಲ್ಲಿ ಓಡಿ ಮನೆಯಲ್ಲಿ ಬಂಟತನವನಾಡುವನಂತೆ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ, ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ಮಂಗಳದ ಮನೆಯಲ್ಲಿ ಸಂಗ ತನಗಾನಂದ ಸಂಗವೆ ನೆಲೆಮನೆಯು, ನಿತ್ಯವಾಗಿಪ್ಪ ಶ್ವೇತ ಜಲದಲಿಪ್ಪ ರೀತಿ ಸಂಖ್ಯೆಯನರಿದು, ಧಾತುವನು ಅತಿಗಳೆದು, ತೂಗಿ ತೂಗಿ ಆಡಿವೋದಾತನು ಮೀರಿ ಕಂಡನು. ಒಂದ ತೋರಿದನು ಅತಿಶಯವ ಲೋಕಕೆಲ್ಲಾ, ನಿರ್ಲೋಕ ನಿರ್ನಾಮ ನಿತ್ಯನು. ಕಪಿಲಸಿದ್ಧಮಲ್ಲಿಕಾರ್ಜುನಯ್ಯ ತೋರಿದನು ಸಾಯುಜ್ಯಪದವ ಮೀರಿ.
--------------
ಸಿದ್ಧರಾಮೇಶ್ವರ
ಜಾಲಗಾರನ ಕಾಲು ಮುಳ್ಳು ತಾಗಿ ನೊಂದಿತ್ತೆಂಬಂತೆ, ಸೂನೆಗಾರನ ಮನೆಯಲ್ಲಿ ಹೆಣ ಹೋಗಿ ಅಳುವಂತೆ, ಕನ್ನಗಳ್ಳನ ಮನೆಯಲ್ಲಿ ಬಟ್ಟಲು ಹೋಗಿ ಮರಗುವಂತೆ,_ ಠಕ್ಕನ ಪೂಜೆಗೆ ಮೆಚ್ಚುವನೆ ನಮ್ಮ ಗುಹೇಶ್ವರನು?
--------------
ಅಲ್ಲಮಪ್ರಭುದೇವರು
ಮಾಯಾಗುಣ ರೂಪಾದಲ್ಲಿ ಮಲಕ್ಕೊಡಲಾಯಿತ್ತು ಮಲಸ್ಥರೂಪವಾಗಿ ನಿಂದಲ್ಲಿ ಬಲವಂತರೆಲ್ಲರು ಮಲದ ಬೆಂಬಳಿಯಲ್ಲಿ ಮರುಳಾದರು. ಮರುಳಾಟದಲ್ಲಿ ಮಾರಿ ಒಲವರವಾಗಿ ಮನ ಶುದ್ಧವಿಲ್ಲದವರ ಮನೆ ಮನೆಯಲ್ಲಿ ತನುವಿಕಾರವನಾಡಿಸುತ್ತೈದಾಳೆ. ಮಾರಿಯ ಮುರಿದು ದಾರಾವತಿಯ ಕೆಡಿಸಿ ಕೈಯ ಡಕ್ಕೆಯ ಗತಿಯ ಹಿಂಗಿ ಮಾಯೆಯ ಬಾಗಿಲ ಭ್ರಾಂತಿಯ ಬಿಟ್ಟಲ್ಲಿ ಕಾಲಾಂತಕ ಬ್ಥೀಮೇಶ್ವರಲಿಂಗವನರಿದುದು.
--------------
ಡಕ್ಕೆಯ ಬೊಮ್ಮಣ್ಣ
ಶಿವಶಿವಾ, ಈ ಮಾಯಾಸಂಸಾರಯುಕ್ತವಾದ ದೇಹದ ಸುಖ ಹೇಳಲಂಜುವೆ. ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಈ ದೇಹದ ವಿಸ್ತಾರ ಪೇಳ್ವೆ, ಎಲೆ ಮರುಳ ಮಾನವರಿರಾ, ಲಾಲಿಸಿ ಕೇಳಿರಿ, ಎಲುವಿನ ಕಂಬ, ಎಲುವಿನ ತೊಲೆಗಳು, ಸಂದೆಲವುಗಳೆ ಬಿಗಿ ಮೊಳೆಗಳು, ಕರುಳಜಾಳಿಗೆ ಬಿಗಿಜಂತಿಗಳು, ಬರುಕಿ ಎಲವುಗಳೆ ಜಂತಿಗಳು, ಬೆರಳೆಲವುಗಳೆ ಚಿಲಿಕೆಗಳು. ಇಂತೀ ಗೃಹಕ್ಕೆ ಮಾಂಸದ ಮೇಲುಮುದ್ದೆಗಳು, ರಕ್ತದ ಸಾರಣೆಗಳು, ಮಜ್ಜದ ಮಡುಗಳು, ಕೀವಿನ ಕುಣಿಗಳು, ಪಿತ್ತದ ಕೊಂಡಗಳು, ಶೋಣಿತದ ಕಾವಲಿಗಳು, ಮೂತ್ರದ ಹಳ್ಳಗಳು, ಅಮೇಧ್ಯದ ಹುತ್ತಗಳು, ಹುಳುವಿನ ಡೋಣಿಗಳು, ಜಂತಿನ ಬಣವೆಗಳು-ಇಂತಪ್ಪ ಮನಗೆ ಎಂಟು ಗವಾಕ್ಷಗಳು. ಬಾಯಿ ಎಂಬುದೊಂದು ದೊಡ್ಡ ದರವಾಜು. ಇಂತೀ ದುರಾಚಾರಯುಕ್ತವಾದ ದೇಹವೆಂಬ ಗೃಹಕ್ಕೆ ಮೂವರು ಕರ್ತೃಗಳಾಗಿಹರು. ಅವರು ಆರಾರೆಂದಡೆ: ಹೊನ್ನೊಂದು ಭೂತ, ಹೆಣ್ಣೊಂದು ಭೂತ, ಮಣ್ಣೊಂದು ಭೂತ. ಇಂತೀ ತ್ರಿವಿಧ ಭೂತಸ್ವರೂಪರಾದ ಬ್ರಹ್ಮ ವಿಷ್ಣು ರುದ್ರರೆಂಬ ತ್ರಿವಿಧದೇವತೆಗಳು. ಅದೆಂತೆಂದಡೆ: ಹೊನ್ನು ರುದ್ರನಹಂಗು, ಹೆಣ್ಣು ವಿಷ್ಣುವಿನಹಂಗು, ಮಣ್ಣು ಬ್ರಹ್ಮನಹಂಗು, ಇಂತಪ್ಪ ತ್ರಿಮೂರ್ತಿಗಳ ಹಂಗಿನಿಂದಾದ ದೇಹವು ಮಿಥೆಯೆಂದು ತಿಳಿದು ವಿಸರ್ಜಿಸಲರಿಯದೆ, ಆ ಅನಿತ್ಯದೇಹದ ಸುಖವನು ಮೆಚ್ಚಿ ಮರುಳಾಗಿ, ಬಿಡಲಾರದೆ, ಈ ಹೇಸಿಕಿ ಹೊಲೆಸಂಸಾರದಲ್ಲಿ ಶಿಲ್ಕಿ ಮಲತ್ರಯದಾಶೆಗೆ ಹೊಡದಾಡಿ ಹೊತ್ತುಗಳೆದು ಸತ್ತುಹೋಗುವ ಕತ್ತೆಗಳಿಗಿನ್ನೆತ್ತಣ ಮುಕ್ತಿ ಹೇಳಾ ! ಮುಂದೆ ಹೊಲೆಮಾದಿಗರ ಮನೆಯಲ್ಲಿ ಶುನಿ ಶೂಕರ ಕುಕ್ಕುಟನ ಬಸುರಲ್ಲಿ ಹುಟ್ಟಿಸದೆ ಬಿಡನೆಂದಾತ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಂಗಮವ ಕರತಂದು ಮನೆಯಲ್ಲಿ ಕುಳ್ಳಿರಿಸಿ, ಅಂಗದ ಮೇಲಣ ಜಪವನೆಣಿಸುವ ಭಕ್ತನ ಜಪದ ಬಾಯಲ್ಲಿ ಕೆರಹನಿಕ್ಕಲಿ! ಅವನ ಲಿಂಗಾರ್ಚನೆಯ ಬಾಯಲ್ಲಿ ಹುಡಿಯ ಹೊಯ್ಯಲಿ! ಜಂಗಮದ ತೃಪ್ತಿಯನರಿಯದೆ ಲಿಂಗವಂತನೆಂತಾದನೊ ? ಮರುಳೆ! ಅವ ಪಿಸುಣ, ಹೊಲೆಯನೆಂದಾತನಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಜಂಗಮವೆಂದು ಮಾಡಿ ಪಙÂ್ತಯಲ್ಲಿ ವಿಂಗಡಿಸಿ, ಲೆಕ್ಕವ ಮಾಡುವ ದಂಡದ ಮನೆಯಲ್ಲಿ ಕೂಳನುಂಬ ಜಂಗಮಕ್ಕೆ ಭಂಡುಗೆಲಿದು ಬೇಡಿ ತಂದ ಭಂಡನ ಎಂಜಲ ತಿಂದಂತೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಬೆಳಗಿಲ್ಲದ ಬೆಳಗಿನ ಮನೆಯಲ್ಲಿ ಇಳೆಯಾಂಬರ ನಿಸ್ಸಾರದೇವ ಬಳಿವಿಡಿಯೆ ಕರ್ಮಕ್ಕನುಗೆಯ್ದ ಸುಖರತಿಯ ಬೆಳಗ ಹೇಳಲಾರಳವಲ್ಲ ಕೇಳಲಾರಳವಲ್ಲ ನೋಡಲಾರಳವಲ್ಲ ಕೂಡಲಾರಳವಲ್ಲ ಗುರುನಿರಂಜನ ಚನ್ನಬಸವಲಿಂಗವ ಬ್ಥಿನ್ನವಿಟ್ಟು.
--------------
ದೇಶಿಕೇಂದ್ರ ಸಂಗನಬಸವಯ್ಯ
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ ಧರೆ ಹತ್ತಿ ಉರಿದಡೆ ನಿಲಲುಬಾರದು. ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ, ನಾರಿ ತನ್ನ ಮನೆಯಲ್ಲಿ ಕಳುವಡೆ, ತಾಯ ಮೊಲೆವಾಲು ನಂಜಾಗಿ ಕೊಲುವಡೆ, ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ ! 26
--------------
ಬಸವಣ್ಣ
ಊರ ಹೊರಗಣ ಹೊಲೆಯರ ಮನೆಯಲ್ಲಿ ಈರೈದು ಮಗ್ಗ. ಆ ಮಗ್ಗಕ್ಕೆ ಒಬ್ಬನೆ ಹಾರುವ ನೈವಾತ. ಆ ಮಗ್ಗದೊಳಗಿದ್ದು ಸುಂಕಕಂಜಿ ಹೊಲೆಯನಾದ, ಬಂಕೇಶ್ವರಲಿಂಗವನರಿಯದೆ.
--------------
ಸುಂಕದ ಬಂಕಣ್ಣ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನೀಲಲೋಚನೆಯಮ್ಮನವರ ಮನೆಯಲ್ಲಿ ನಿರ್ಮಲಪ್ರಸಾದವ ಕಂಡು ನಿತ್ಯ ಸೇವಿಸಿ ಸುಖಾನಂದಸುಗ್ಗಿಯೊಳೋಲಾಡುತಿರ್ದೆನು. ನಾಗಲಾಂಬಿಕೆಯವರ ಮನೆಯಲ್ಲಿ ಚಿತ್ಕಲಾಪ್ರಸಾದವ ಕಂಡು ನಿತ್ಯ ಸೇವಿಸಿ ಸುಖಾನಂದಸುಗ್ಗಿಯೊಳೋಲಾಡುತಿರ್ದೆನು. ಅಕ್ಕಮಹಾದೇವಿಯವರ ಮನೆಯಲ್ಲಿ ನಿರಂಜನಪ್ರಸಾದವ ಕಂಡು ನಿತ್ಯ ಸೇವಿಸಿ ಸುಖಾನಂದಸುಗ್ಗಿಯೊಳೋಲಾಡುತಿರ್ದೆನು. ಮುಕ್ತಾಯಕ್ಕಳ ಮನೆಯಲ್ಲಿ ನಿರವಯ ಸಂವಿತ್ಪ್ರಭಾನಂದಪ್ರಸಾದವ ಕಂಡು ನಿತ್ಯ ಸೇವಿಸಿ ಗುರುನಿರಂಜನ ಚನ್ನಬಸವಲಿಂಗದಲ್ಲಿ ಸುಖಾನಂದಸುಗ್ಗಿಯೊಳೋಲಾಡುತಿರ್ದೆನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಭಕ್ತರು ಮನೆಗೆ ಬಂದಡೆ, ತಮ್ಮ ಮನೆಯಲ್ಲಿ ತಾವಿಪ್ಪಂತಿರಬೇಕು. ಅಂಜದೆ ಅಳುಕದೆ ನಡುಗುತ್ತಿರದೆ, ತಮ್ಮ ಶುದ್ಧಿ ತಾವಿರಬೇಕು. ತಾವು ಆಳ್ವವರು ಅಲಿನಂತಿದ್ದಡೆ, ಬಸವಪ್ರಿಯ ಕೂಡಲಚೆನ್ನಸಂಗ ಹಲ್ಲ ಕಳೆವ.
--------------
ಸಂಗಮೇಶ್ವರದ ಅಪ್ಪಣ್ಣ
ರಂಜನಿಪುರದಲ್ಲಿ ಕಪಿ ಉಡವ ಕಚ್ಚಿ ತಿರುಗಾಡುವದ ಕಂಡೆನಯ್ಯ. ಆ ಉಡುವಿನ ಬಾಯೊಳಗೆ ಮೂರುಲೋಕವೆಲ್ಲ ಏಳುತ್ತ ಬೀಳುತ್ತ ಇರ್ಪುದ ಕಂಡೆ. ಆ ಕೋಡಗದಾಟವ ಕಂಡು ಈರೇಳುಲೋಕದ ಪ್ರಾಣಿಗಳು ಬೆರಗಾದುದ ಕಂಡೆ. ಅದಾರಿಗೂ ಸಾಧ್ಯವಲ್ಲ. ಅಷ್ಟರಲ್ಲಿಯೇ ಅರಸನ ಮನೆಯಲ್ಲಿ ಒಂದು ಎಳೆ ಶಿಶು ಹುಟ್ಟಿ, ಕಸ ನೀರು ಹೊರುವ ಗಾಡಿಯ ಕೊಂದು, ಕೋತಿಯ ತಿಂದು, ಉಡವ ನುಂಗಿ, ತ್ರೈಲೋಕದ ಬಂಧನವ ಬಿಡಿಸಿ, ತಂಗಿಯನೊಡಗೂಡಿ, ಅಕ್ಕನ ಸಂಗವ ಮಾಡಿ, ಅರಸಿನ ಅರಮನೆಯಲ್ಲಿ ಆರು ಕಾಣದೆ ಅಡಗಿಹೋಯಿತ್ತು. ಇದರಂದಚಂದವ ನಿಮ್ಮ ಶರಣ ಬಲ್ಲ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->