ಅಥವಾ

ಒಟ್ಟು 174 ಕಡೆಗಳಲ್ಲಿ , 36 ವಚನಕಾರರು , 135 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವಸರ, ಆರೋಗಣೆ, ಆಪ್ಯಾಯನ-ತ್ರಿವಿಧವೂ, ಲಿಂಗ ಮುಖದಲ್ಲಿ ಅರ್ಪಿತವಾಗೆ, ಆತನ ಪ್ರಸಾದಿಯೆಂಬೆನು. ಅವಸರ ಅನವಸರ ಆತ್ಮ(ಅಂಗ?)ದಿಚ್ಛೆ ಲಿಂಗಮುಖದಲ್ಲಿ ಅರ್ಪಿತವಿಲ್ಲಾಗಿ ಆತನನೆಂತು ಪ್ರಸಾದಿಯೆಂಬೆನು? ಅವಸರ ಅನವಸರವರಿದು ವೇಧಿಸಬಲ್ಲರೆ ಆತನ ಪ್ರಸಾದಿಯೆಂಬೆನು- ``ಲಿಂಗಸ್ಯಾವಸರೇ ಯಸ್ತು ಅಚ್ರ್ಯಂ ದದ್ಯಾತ್ ಸುಖಂ ಭವೇತ್ ಎಂದುದಾಗಿ, ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಅವಸರವರಿದು ಅರ್ಪಿಸುವ ಅರ್ಪಣೆ ಸದ್ಭಾವಿಗಲ್ಲದಿಲ್ಲ.
--------------
ಚನ್ನಬಸವಣ್ಣ
ಇನ್ನು ಶರಣನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣ ಭೇದವೆಂತೆಂದಡೆ : ಆಕಾಶವೆ ಅಂಗವಾದ ಶರಣನ ಸುಜ್ಞಾನವೆಂಬ ಹಸ್ತದಲ್ಲಿ ಪ್ರಸಾದಲಿಂಗಕ್ಕೆ ಶ್ರೋತ್ರವೆಂಬ ಮುಖದಲ್ಲಿ ಪಾತ್ರದಲ್ಲಿ ಹುಟ್ಟಿದ ಸುನಾದಾಳಾಪನೆಯ ಶಬ್ದದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಒಳಗೊಂದು ಗಾಲಿ, ಹೊರಗೊಂದು ಗಾಲಿ ಎರಡಕ್ಕೆ ಹೂಡಿದುದೊಂದು ಹರಿಯಚ್ಚು, ಮೇಲೆ ಹಾಸಿದ ನೀಳ Zõ್ಞಕದ ಕುರುಗುಣಿಯ ಕೊಂಬಿಂಗೆ ಈಚೆರಡು. ಏಳು ಹುರಿಯ ಬಲುಮಿಣಿಯಿಂ ಆಳವನಿಕ್ಕಿದ ಕಾಮನ ನೊಗ. ಅರೆತ್ತು ಹೂಡಿ, ಹಾಸು ದಡಿಕೆ ಒಂದು, ಮೇಲು ದಡಿಕೆ ಎರಡು, ಒಂದು ದೊಡ್ಡದು, ಒಂದು ಚಿಕ್ಕದು, ಒಂದುರೆ ಚಿಕ್ಕದು, ಬಂಡಿಯ ಮೇಲೊಬ್ಬ ಮೊದಲೆತ್ತ ಹೊಡೆವ, ತಲೆಯಾರು ನಡುವಣಾರು ಹೊಡೆವರಿಬ್ಬರು. ಬಂಡಿ ನಡೆವ ಬಟ್ಟೆಯಯ್ದು, ತುಂಬಿದ ಭಂಡವೈದು, ಐದು ಬಟ್ಟೆಯಂ ತಪ್ಪಿಸಿ ಆರು ಬಟ್ಟೆಯಲಿ ನಡೆಸಿ, ಹೇರಿದ ಭಂಡವನೊಡೆಯಂಗೊಪ್ಪಿಸಲರಿಯದೆ, ಎಡೆಯ ಕಡಿದು ಭುಂಜಿಸಿ ಒಡೆಯಂಗೆ ದೂರಾಗಿ, ಬಹುಮುಖದ ದಂಡಣೆಗೊಳಗಾಗಿ ಬಹಳ ಮುಖದಲ್ಲಿ ಬಂದು, ಹೇರಡವಿಯ ಕಗ್ಗತ್ತಲಲ್ಲಿ ತೊಳಲಿ ಭ್ರಮಿಸುವ ಹೊಲಬರಿಯದೆ ಹೊಲಬುಗೆಟ್ಟ ಮಲಮಾಯಾದ್ಥಿಕರು ನಿಮ್ಮನೆತ್ತ ಬಲ್ಲರಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾರಿ
--------------
ಉರಿಲಿಂಗಪೆದ್ದಿ
ಲಿಂಗಪ್ರಸಾದವ ಜಂಗಮಕ್ಕೆ ಕೊಡುವ ಕರ್ಮಿ ನೀ ಕೇಳಾ ! ಜಂಗಮಪ್ರಸಾದವ ಲಿಂಗಕ್ಕೆ ಕೊಡುವ ಸುಧರ್ಮಿ ನೀ ಕೇಳಾ ! ಲಿಂಗಪ್ರಸಾದವ ಜಂಗಮಕ್ಕೆ ಕೊಡುವದು ಅನಾಚಾರ; ಜಂಗಮದ ಪ್ರಸಾದವ ಲಿಂಗಕ್ಕೆ ಕೊಡುವದು ಸದಾಚಾರ. ಅಅದೆಂತೆಂದಡೆ: ಲಿಂಗಾರ್ಪಿತಂ ಪ್ರಸಾದಂ ಚ ನ ದದ್ಯಾತ್ ಚರಮೂರ್ತಯೇ ಚರಾರ್ಪಿತಂ ಪ್ರಸಾದಂ ಚ ತದ್ದದ್ಯಾತ್ ಲಿಂಗಮೂರ್ತಯೇ ಎಂದುದಾಗಿ, ಇದು ಕಾರಣ, ಕೂಡಲಚೆನ್ನಸಂಗಯ್ಯಾ, ಜಂಗಮ ಮುಖದಲ್ಲಿ ಲಿಂಗ ನಿರಂತರ ಸುಖಿ
--------------
ಚನ್ನಬಸವಣ್ಣ
ಆ ಮಹಾಸದಾಶಿವ ತತ್ವದ ಪಂಚಮುಖದಲ್ಲಿ ಉತ್ಪತ್ಯವಾದ ಪಂಚಮಹಾಭೂತಬ್ರಹ್ಮಾಂಡಕಪಾಲದೊಳು ಪಂಚಭೂತ ಬ್ರಹ್ಮಾಂಡಕಪಾಲ ಉತ್ಪತ್ಯವದೆಂತೆಂದೊಡೆ : ಆ ಮಹಾಶಿವತತ್ವದ ನಿರ್ಭಾವ ಮುಖದಲ್ಲಿ ಆತ್ಮನುತ್ಪತ್ಯವಾದನು. ಆ ಆತ್ಮನಲ್ಲಿ ಆಕಾಶ ಉತ್ಪತ್ಯವಾಯಿತ್ತು. ಆ ಆಕಾಶದಲ್ಲಿ ವಾಯು ಉತ್ಪತ್ಯವಾಯಿತ್ತು. ಆ ವಾಯುವಿನಲ್ಲಿ ಅಗ್ನಿ ಉತ್ಪತ್ಯವಾಯಿತ್ತು. ಆ ಅಗ್ನಿಯಲ್ಲಿ ಅಪ್ಪು ಉತ್ಪತ್ಯವಾಯಿತ್ತು. ಆ ಅಪ್ಪುವಿನಲ್ಲಿ ಪೃಥ್ವಿ ಉತ್ಪತ್ಯವಾಯಿತ್ತು. ಇದಕ್ಕೆ ಈಶ್ವರ ಉವಾಚ : ``ಆತ್ಮನ್ಯಾಕಾಶಸಂಭೂತಿರಾಕಾಶಾದ್ವಾಯು ಸಂಭವಃ | ವಾಯೋರಗ್ನಿಃ ಸಮುತ್ಪತ್ತಿರಗ್ನೇರಾಪ ಉದಾಹೃತಂ | ಅಪ್ ಪೃಥ್ವೀಚ ಸಂಭೂತಿರ್ಲಕ್ಷಣೈಕಪ್ರಭಾವತಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪ್ರಕಾಶದ್ವಾರ ಗಂಧದ್ವಾರ ಶಬ್ದದ್ವಾರವೆಂಬ ಅರುದ್ವಾರ ಕೂಡಿದ ಠಾವಿನಲ್ಲಿ, ನಾದ ಬಿಂದು ಕಲೆಯೆಂಬ ಸಿಂಹಾಸನದ ಮೇಲೆ ಮೂರ್ತಿಗೊಂಡು, ಶಬ್ದ ರೂಪು ಗಂಧಂಗಳ ಗ್ರಹಿಸುವಾತ ನೀನಲ್ಲದೆ ಮತ್ತಾರು ಹೇಳಾ? ಗಳದಲ್ಲಿ ನಿಂದು ಷಡುರಸ್ನಾನದ ರುಚಿಯ ಜಿಹ್ವೆಯಲ್ಲಿ ಸ್ವಾದಿಸುವಾತ ನೀನಲ್ಲದೆ ಮತ್ತಾರು ಹೇಳಾ? ಸರ್ವಾಂಗದಲ್ಲಿ ನಿಂದು, ತ್ವಗಿಂದ್ರಿಯ ಮುಖದಲ್ಲಿ ಸ್ಪರ್ಶನವ ತಳೆದುಕೊಂಬಾತ ನೀನಲ್ಲದೆ ಮತ್ತಾರು ಹೇಳಾ? ಮನವೆಂಬ ಮುಖದಲ್ಲಿ ನಿಂದು ಪರಿಣಾಮವನನುಭವಿಸುವಾತ ನೀನಲ್ಲದೆ ಮತ್ತಾರು ಹೇಳಾ? ಸರ್ವಾವಯವಂಗಳಲ್ಲಿ ಸರ್ವಮುಖವಾಗಿ ಭೋಗಿಸಿ ಪ್ರಸಾದವ ಕರುಣಿಸಿದ ಕೃಪಾಮೂರ್ತಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನೀನಲ್ಲದೆ ಮತ್ತಾರು ಹೇಳಾ?
--------------
ಸ್ವತಂತ್ರ ಸಿದ್ಧಲಿಂಗ
ಆದಿ ಅನಾದಿಯೆಂಬವು ಸಂಗಷ್ಟವಾಗಿರ್ದು, ವಿಭೇದವಾಗುವಲ್ಲಿ ಕುಂಡಲಿಯ ಶಕ್ತಿಯಲ್ಲಿ ಪ್ರಾಣವಾಯು ಪ್ರಣವಸ್ವರವನೊಡಗೂಡಿ ಬ್ರಹ್ಮಸ್ಥಾನದಲ್ಲಿ ಸ್ಥಾಪ್ಯ ಶಿವನಾಗಿ, ಭ್ರೂಮಧ್ಯಕಂಠಸ್ಥಾನದಲ್ಲಿ ನಿಃಕಲಸ್ವರೂಪನಾಗಿ, ಹೃದಯನಾಬ್ಥಿಯಲ್ಲಿ ಸಕಲನಿಃಕಲನಾಗಿ, ಸ್ವಾದ್ಥಿಷ್ಠಾನ ಆಧಾರದಲ್ಲಿ ಕೇವಲಸಖನಾಗಿ, ಆ ಸಕಲಕ್ಕೆ ಎರಡು ಪಾದವನಿತ್ತು, ಒಂದು ಪಾದಕ್ಕೆ ಕ್ರಿಯಾಶಕ್ತಿ, ಒಂದು ಪಾದಕ್ಕೆ ಜ್ಞಾನಶಕ್ತಿಯ ಮಾಡಿ ನಿಲ್ಲಿಸಿ, ಮೇಲಣ ಸಕಲ ನಿಃಕಲತತ್ತ್ವಕೈದಿ, ಅಲ್ಲಿಗೆ ಎರಡು ಹಸ್ತವನಿತ್ತು, ಒಂದು ಹಸ್ತಕ್ಕೆ ಆದಿಶಕ್ತಿ, ಒಂದು ಹಸ್ತಕ್ಕೆ ಇಚ್ಛಾಶಕ್ತಿಯನಾದಿ ಮಾಡಿ ನಿಲಿಸಿ, ಮೇಲಣ ನಿಃಕಲತತ್ತ್ವವನೈದಿ, ಅಲ್ಲಿಗೆ ನಾಲ್ಕು ಪಾದವನಿತ್ತು, ಅವು ಆವವು ಎಂದಡೆ, ಜಿಹ್ವೆ ಘ್ರಾಣ ನೇತ್ರ ಶ್ರೋತ್ರವೆಂಬ ನಾಲ್ಕು ಪಾದ ವನಾದಿಮಾಡಿ ನಿಲ್ಲಿಸಿ, ನಾಲ್ಕು ಪಾದವಂ ನಿಲ್ಲಿಸಿದುದರಿಂದ ನಂದಿಯೆಂಬ ನಾಮವಾಯಿತ್ತು. ಆ ನಂದೀಶ್ವರಂಗೆ ಚಿತ್‍ಶಕ್ತಿಯೆ ಅಂಗ, ಪರಶಕ್ತಿಯೆ ಮುಖ. ಇಂತಪ್ಪ ನಂದೀಶ್ವರ ನಲಿದಾಡಿ ಅನಾದಿ ಪರಶಿವ ಅಖಿಳ ಬ್ರಹ್ಮಾಂಡವ ಹೊತ್ತಿಪ್ಪನಲಾಯೆಂದರಿದು, ಆದಿವಾಹನವಾದನು, ಅದೀಗ ಆದಿವೃಷಭನೆಂಬ ನಾಮವಾಯಿತ್ತು. ಆದಿವೃಷಭನ ಆದಿಯಲ್ಲಿ ಪರಶಿವನಿಪ್ಪನು, ಆ ಪರಶಿವನಾದಿಯಲ್ಲಿ ನಿಃಕಲವಿಪ್ಪುದು, ಆ ನಿಃಕಲದಾದಿಯಲ್ಲಿ ಸಕಲ ನಿಃಕಲವಿಪ್ಪುದು. ಆ ಸಕಲ ನಿಃಕಲದಾದಿಯಲ್ಲಿ ಕೇವಲ ಸಕಲವಿಪ್ಪುದು. ಆ ಸಕಲವೆಂದರೆ ಅನಂತತತ್ತ್ವ. ಬ್ರಹ್ಮಾಂಡ ಕೋಟ್ಯಾನುಕೋಟಿ ಲೋಕಾಲೋಕಂಗಳು ದೇವದಾನವ ಮಾನವರು ಸಚರಾಚರ ಎಂಬತ್ತನಾಲ್ಕು ಲಕ್ಷ ಜೀವಜಂತುಗಳುದ್ಭವಿಸಿದವು. ಆ ಪಿಂಡ ಬ್ರಹ್ಮಾಂಡದ ಹೊರೆಯಲ್ಲಿ ಸಕಲಪದಾರ್ಥಗಳುದ್ಭವಿಸಿದವು. ಸಕಲಪದಾರ್ಥಂಗಳ ಪುಣ್ಯಪಾಪದ ಸಾರವ ಕೈಕೊಂಬುದಕ್ಕೆ ದೇವನಾವನುಂಟೆಂದು ಆಹ್ವಾನಿಸಿ ನೋಡಲು, ಆ ನಿಃಕಲ ಮಹಾಲಿಂಗವೆ ಕ್ರಿಯಾಶಕ್ತಿಯ ಮುಖದಲ್ಲಿ ಇಷ್ಟಲಿಂಗವಾಗಿ ಬಂದು, ಜ್ಞಾನಶಕ್ತಿಮುಖದಲ್ಲಿ ಸಕಲಪದಾರ್ಥಂಗಳ ಕೈಕೊಂಬಲ್ಲಿ, ಪುಣ್ಯಪಾಪಂಗಳ ಸಾರವಳಿದು, ಲಿಂಗ ಸಾರವಾದ ರೂಪ ಇಷ್ಟಲಿಂಗಕ್ಕೆ ಕೊಟ್ಟು, ಆ ರುಚಿಪ್ರಸಾದವ ಜ್ಞಾನಶಕ್ತಿ ಆದಿಶಕ್ತಿ ಕೈಯಲ್ಲಿಪ್ಪ ಪ್ರಾಣಲಿಂಗಕ್ಕೆ ಇಚ್ಛಾಶಕ್ತಿಯ ಮುಖದಲ್ಲಿ ಕೊಡಲು, ಆ ರುಚಿ ಪ್ರಸಾದವ ಪ್ರಾಣಲಿಂಗವಾರೋಗಿಸಿ, ಪರಮ ಪರಿಣಾಮವನೈದಲು, ಆ ಪರಿಣಾಮ ಪ್ರಸಾದವ ಜ್ಞಾನಶಕ್ತಿಯು ನಂದೀಶ್ವರಂಗೆ ಕೊಡಲು, ಆ ಪರಮ ತೃಪ್ತಿಯ ಶೇಷ ನಂದೀಶ್ವರ ಆರೋಗಿಸಿ ಪರವಶವನೈದಲು, ಆ ಪರವಶದ ಶೇಷವ ಜ್ಞಾನಶಕ್ತಿ ಆರೋಗಿಸಿ, ಅಡಿಮುಡಿಗೆ ತಾನೆ ಆದಿಯಾಗಲು, ಅದೀಗ ಅಡಿಮುಡಿಯ ಶೇಷ ಹೊತ್ತಿಪ್ಪನೆಂದು ವೇದಾಗಮಶಾಸ್ತ್ರಪುರಾಣಪುರುಷರು ನುಡಿಯುತಿಪ್ಪರು. ಇಂತಪ್ಪ ಬಸವನ ಆದಿಮೂಲವ ಬಲ್ಲ ಶರಣನಾಯಿತ್ತು ತೊತ್ತು ಮುಕ್ಕುಳಿಸಿ ಉಗುಳುವ ಪಡುಗ, ಮೆಟ್ಟುವ ಚರ್ಮ ಹಾವುಗೆಯಾಗಿ ಬದುಕಿದೆನು ಕಾಣಾ, ಬಸವಪ್ರಿಯ ಕೂಡಲ[ಚೆನ್ನ]ಸಂಗಮದೇವಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಸಂಗಮೇಶ್ವರದ ಅಪ್ಪಣ್ಣ
ಇಂದ್ರಿಯಂಗಳಲ್ಲಿ ಲಿಂಗವು ಅರ್ಪಿತವ ಸಂದ್ಥಿಸಿಕೊಂಡು ಉಂ[ಬು]ದೆಂಬ ತ್ರಿಭಂಗಿ ಗ್ರಹಿತವ ನೋಡಾ. ಇಂದ್ರಿಯಂಗಳ ಮುಖದಲ್ಲಿ ಲಿಂಗವು ಬಂದು ಉಂಬಾಗ ಇಂದ್ರಿಯವೆ ಲಿಂಗಕ್ಕೆ ಬೀಜವೆ? ಅದು ಗರಿಗೋಲಿನ ಮೊನೆಯಂತೆ, ಲಿಂಗದಿಂದ ಸರ್ವೇಂದ್ರಿಯ ನಿಶ್ಚಯ. ಇದು ಲಿಂಗವ್ಯವಧಾನಿಯ ಅಂಗ, ಸದ್ಯೋಜಾತಲಿಂಗದ ಸಂಗ.
--------------
ಅವಸರದ ರೇಕಣ್ಣ
ಸಾರಾಯ ಪದಾರ್ಥವನಾರಯ್ಯಬೇಕೆಂದು ಶರಣ ಮತ್ರ್ಯಕ್ಕೆ ಬಂದು, ತನ್ನ ಇಪ್ಪತ್ತೈದಿಂದ್ರಿಯಂಗಳ ಭಕ್ತರ ಮಾಡಿ, ಮೆಲ್ಲಮೆಲ್ಲನೆ ಅವರ ಪೂರ್ವಾಶ್ರಯವ ಕಳೆದು ಕಲ್ಪಿತವಿಲ್ಲದೆ ಅರ್ಪಿತವ ಮಾಡಲು, ಇಂದ್ರಿಯಂಗಳು ತಮ್ಮ ತಮ್ಮ ಮುಖದಲ್ಲಿ ಗ್ರಹಿಸಲಮ್ಮದೆ ಕೂಡಲಚೆನ್ನಸಂಗಂಗೆ ಬೇಕೆಂದು ಹಿಡಿದು ಕೊಂಡೈದವೆ !
--------------
ಚನ್ನಬಸವಣ್ಣ
ಅಗ್ನಿಗೆ ಮೈಯೆಲ್ಲ ಮುಖ, ಬಲಕೆ ಮೈಯೆಲ್ಲ ಕಾಲು. ಆತ್ಮದೇಹಿಂಗೆ ದಶವಾಯುಗಳ ಮುಖದಲ್ಲಿ ಹರಿವ ಕರಣೇಂದ್ರಿಯಂಗಳೆಲ್ಲ ಮುಖ ಕಾಲಾಗಿ ಚರಿಸುತಿಪ್ಪವು. ತನುವೆಂಬ ಕೊಟಾರದೊಳು ಚರಿಸಿದರೇನು ? ಅವಕೆ ಬೆಸಸೆ ಎನ್ನ ಸ್ವತಂತ್ರವಲ್ಲ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನು ಮಹೇಶ್ವರನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣವೆಂತೆಂದಡೆ : ಅಪ್ಪುವೆ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ಓಗರಾದುರು ಚಿದ್ರವ್ಯವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಷ್ಟವಿಧಾರ್ಚನೆ ಷೋಡಶೋಪಚಾರವಲ್ಲದೆ ನಿಮ್ಮ ಮುಟ್ಟಲರಿಯದರ ಕಂಡಡೆ, ಅಯ್ಯ ಎಂತೆಂಬೆನವರ ಆವ ಭಾವದಲ್ಲಿ, ಆವ ಜ್ಞಾನದಲ್ಲಿ, ಆವ ಮುಖದಲ್ಲಿ ಅರಿವವರದಾರಯ್ಯಾ ಏನೆಂಬೆ ನಿಮ್ಮಲ್ಲಿ ಸಮ್ಯಕ್ಕರಾದ ಸತ್ಯಶರಣರ ಕಂಡು, ಕೂಡಲಸಂಗಮದೇವಾ, ಅವರನಯ್ಯ ಎಂಬೆನು.
--------------
ಬಸವಣ್ಣ
ಇಷ್ಟಲಿಂಗಕ್ಕೆ ತೋರಿ ಮೃಷ್ಟಾನ್ನ ಹೊಡದೆನೆಂಬುದೇನು ಆ ಇಷ್ಟಲಿಂಗ ಮುಖದಲ್ಲಿ ನಿಮಗೆ ತೃಪ್ತಿ ಆಗಲಿಲ್ಲವೆ. ಆ ಶರಣನ ಮುಖದಲ್ಲಿ ಲಿಂಗತೃಪ್ತಿ ಅಹುದಲ್ಲದೆ ಅಂಗಮುಖದಲ್ಲಿ ಶರಣತೃಪ್ತಿ ಆಗಲರಿಯದು. ''ವೃಕ್ಷಸ್ಯ ವದನಂ ಭೂಮಿಃ ಲಿಂಗಸ್ಯ ವದನಂ ಜಂಗಮಂ'' ಎಂಬ ಶ್ರುತಿ ನೋಡಿ ಮರುಳಾದ ಭಂಗಿತರಿಗೆ ಶಿವಲಿಂಗ ಮುನ್ನವಿಲ್ಲವೆಂದಾತ ನಿಮ್ಮ ಶರಣ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ತಮ್ಮ ತಮ್ಮ ಮುಖದಲ್ಲಿ; ಲಿಂಗವನೊಲಿಸಿದರು, ಆರಾಧಿಸಿದರು, ಬೇಡಿತ್ತ ಪಡೆದರು ಎಲ್ಲಾ_ ಲಿಂಗಭೋಗೋಪಭೋಗಿಗಳಾಗಿ ಭೋಗಿಸುವವರಿಲ್ಲ. ಗಂಗೆವಾಳುಕರೆಲ್ಲ ವರಮುಖಿಗಳಾಗಿ ಮೂರ್ತಿಯಳಿದು ಹೋದರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇಂತೀ ನಾನಾ ಮುಖದಲ್ಲಿ ಸ್ತೋತ್ರವ ಮಾಡಿ ಅಳುವ ಶಿಷ್ಯನಂ ಕಂಡು ಆ ಸದ್ಗುರುಸ್ವಾಮಿ ಆ ಶಿಷ್ಯನ ಹಣೆಯ ಹಿಡಿದೆತ್ತಿ ಕಂಬನಿಯಂ ತೊಡದು ಅಂಜದಿರು ಅಂಜದಿರು ನಿನ್ನ ಭವರೋಗಂಗಳಂ ಮಾಣಿಸುವೆನೆಂದು ಅಭಯಹಸ್ತವಂ ಕೊಟ್ಟು ಸಂತೈಸಿ ತಮ್ಮ ಕರುಣಪ್ರಸಾದವನಿತ್ತು ಸಲಹಿದನಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->