ಅಥವಾ

ಒಟ್ಟು 19 ಕಡೆಗಳಲ್ಲಿ , 11 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಋಗ್ವೇದ ಯಜುರ್ವೇದ ತಾನಿರ್ದಲ್ಲಿ, ಸಾಮದೇವ ಅಥರ್ವಣವೇದ ತಾನಿರ್ದಲ್ಲಿ, ಉದಾತ್ತ ಅನುದಾತ್ತ ಸ್ವರಿತ ಪ್ರಚರವೆಂಬ ಸ್ವರಂಗಳು ಮೊದಲಾಗಿ, ಅನಂತ ವೇದಸ್ವರಂಗಳೆಲ್ಲ ತಾನಿರ್ದಲ್ಲಿ, ಅಜಪೆ ಗಾಯತ್ರಿ ತಾನಿರ್ದಲ್ಲಿ, ಛಂದಸ್ಸು ನಿಘಂಟು ಶಾಸ್ತ್ರಂಗಳೆಲ್ಲ ತಾನಿರ್ದಲ್ಲಿ, ಅಷ್ಟಾದಶಪುರಾಣಂಗಳು ತಾನಿರ್ದಲ್ಲಿ, ಅಷ್ಟವಿಂಶತಿ ದಿವ್ಯಾಗಮಂಗಳು ತಾನಿರ್ದಲ್ಲಿ, ಅನಂತಕೋಟಿ ವೇದಂಗಳು ತಾನಿರ್ದಲ್ಲಿ, ಇವೆಲ್ಲ ತನ್ನಲ್ಲಿ ಉತ್ಪತ್ತಿ ಸ್ಥಿತಿ ಲಯವಲ್ಲದೆ ಮತ್ತಾರುಂಟು ಹೇಳಾ ? ತನ್ನಿಂದದ್ಥಿಕವಪ್ಪ ಪರಬ್ರಹ್ಮವಿಲ್ಲವಾಗಿ ತಾನೇ ಸಹಜ ನಿರಾಲಂಬವಾಗಿಹ ಸ್ವಯಂಭುಲಿಂಗ ನೋಡಾ ಅನಂತ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಯ್ಯ, ದಂಡಾಕೃತಿ, ಮಕಾರಪ್ರಣಮ, ಘಂಟಾನಾದ, ಸ್ವಾಧಿಷಾ*ನಚಕ್ರ, ಶ್ವೇತವರ್ಣ, ಮಹೇಶ್ವರಸ್ಥಲ, ಸ್ಥೂಲತನು, ಸುಬುದ್ಧಿಹಸ್ತ, ಗುರುಲಿಂಗ, ಜಿಹ್ವೆಮುಖ, ನೈಷಿ*ಕಾಭಕ್ತಿ, ಸುರಸಪದಾರ್ಥ, ಸುರಪ್ರಸಾದ, ವಿಷ್ಣುಪೂಜಾರಿ, ವಿಷ್ಣುವಧಿದೇವತೆ, ಕತೃಸಾದಾಖ್ಯ, ಚಿತ್ತವೆಂಬ ಲಕ್ಷಣ, ಗೂಢವೆಂಬ ಸಂಜ್ಞೆ, ಪಶ್ಚಿಮದಿಕ್ಕು, ಯಜುರ್ವೇದ, ಅಪ್ಪುವೆ ಅಂಗ, ಅಂತರಾತ್ಮ, ಜ್ಞಾನಶಕ್ತಿ, ಪ್ರತಿಷೆ*ಕಲೆ ಇಂತು ಇಪ್ಪತ್ತುನಾಲ್ಕು ಸಕೀಲಂಗಳನೊಳಕೊಂಡು ಎನ್ನ ಸ್ವಾಧಿಷಾ*ನಚಕ್ರವೆಂಬ ಸೇತುಬಂಧಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಮಂತ್ರಮೂರ್ತಿಸ್ವರೂಪವಾದ ಗುರುಲಿಂಗವೆ ರಾಮೇಶ್ವರಲಿಂಗವೆಂದು ತನುತ್ರಯವ ಮಡಿಮಾಡಿ, ಪರಿಣಾಮವೆಂಬ ಜಲದಿಂ ಮಜ್ಜನಕ್ಕೆರದು, ಅಪ್ಪು ನಿವೃತ್ತಿಯಾದ ಗಂಧವ ಧರಿಸಿ, ಬುದ್ಧಿ ಸುಬುದ್ಧಿಯಾದಕ್ಷತೆಯನಿಟ್ಟು, ಅಲ್ಲಿಹ ಷಡ್ದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಶ್ವೇತವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ಸ್ವಪ್ನಾವಸ್ಥೆಯೆಂಬ ನವೀನ ವಸ್ತ್ರವ ಹೊದ್ದಿಸಿ, ನಿಃಕ್ರೋಧವೆಂಬಾಭರಣವ ತೊಡಿಸಿ, ಸುರುಚಿಯೆಂಬ ನೈವೇದ್ಯವನರ್ಪಿಸಿ, ನೈಷೆ*ಯೆಂಬ ತಾಂಬೂಲವನಿತ್ತು. ಇಂತು ಗುರುಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಕೋಟಿ ಸೂರ್ಯನ ಪ್ರಭೆಯಂತೆ ಬೆಳಗುವ ಗುರುಲಿಂಗಮೂರ್ತಿಯನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು ಆ ಗುರುಲಿಂಗ ಪೂಜೆಯ ಸಮಾಪ್ತವ ಮಾಡಿ ಓಂ ಮಂ ಮಂ ಮಂ ಮಂ ಮಂ ಮಂ ಎಂಬ ಮಕಾರ ಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಲಿಂಗವೆ ತಾನೆಂದರಿದು ಕೂಡಿ ಎರಡಳಿದು ನಿಶ್ಚಿಂತದಿಂದ ಬೆರಸಬಲ್ಲಾತನೆ ನೈಷಾ*ಭಕ್ತಿಯನುಳ್ಳ ವೀರಮಾಹೇಶ್ವರ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಓಂಕಾರವೆಂಬ ವೃಕ್ಷದಲ್ಲಿ ಋಗ್ವೇದ ಯಜುರ್ವೇದ ಸಾಮವೇದ ಅಥರ್ವಣವೇದಗಳೆಂಬ ನಾಲ್ಕು ಶಾಖೆಗಳು, ಅನಂತವೈ ಉಪವೇದಂಗಳೆಂಬ ಉಪಶಾಖೆಗಳು, ಶಾಸ್ತ್ರಂಗಳೆಂಬ ಅಂಕುರ ಪಲ್ಲವ, ಪುರಾಣಂಗಳೆಂಬ ಪುಷ್ಪ ಆಗಮಂಗಳೆಂಬ ಕಾಯಿ ಬಲಿದು, ಶ್ರೀ ಪಂಚಾಕ್ಷರಿ ಎಂಬ ಮಧುರಪಣ್ಣುಗಳು. ಅಗಣಿತಫಲವನೂ ಅನಂತಕಾಲ ಭೋಗಿಸಲು ಮತ್ತಂ ಜಿಹ್ವೆಯೊಳಗೆ ಬಂದಿರಲು ಭೋಗಿಸಿ ಸುಖಿಯಹುದಲ್ಲದೆ ಇದಿರ ವಿದ್ಯೆಗಳೆಂಬ ಸಸಿಯ ಸಾಕಿ ಸಲಹಲುಂಟೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ?
--------------
ಉರಿಲಿಂಗಪೆದ್ದಿ
ಶಿವ ತನ್ನ ನಿಜರೂಪವನು ಸದ್ಭಕ್ತರಿಗಲ್ಲದೆ ತೋರನೆಂಬುದು ವೇದ. ಆ ಸದ್ಭಕ್ತನೆ ಬ್ರಾಹ್ಮಣ, ಆ ಸದ್ಭಕ್ತನೆ ಸತ್ಕುಲಜ, ಆ ಸದ್ಭಕ್ತನೆ ಎನಗಿಂದಧಿಕನೆಂದು ಶ್ರೀರುದ್ರವೇದ ಬೊಬ್ಬಿಡುತ್ತಿದೆ. ಯಾತೇ ರುದ್ರ ಶಿವ ತನೂರಘೋರಾ ಪಾಪಕಾಶಿನೀ | ತಯಾನಸ್ತನುವಾ ಶಂತಮಯಾ ಗಿರೀಶಂ ತಾಭಿ ಚಾಕಶೀಃ || ಎಂದುದಾಗಿ, ಶಿವಲಿಂಗಭಕ್ತನಲ್ಲದೆ ಅತಃಪರವೊಂದು ಇಲ್ಲ ಕೇಳಿಭೋ. ನಿಮ್ಮ ಮನದೊಳಗೆ ಯಜುರ್ವೇದ ಶ್ರುತಿಯ ವಿಚಾರಿಸಿ ನೋಡಿರಣ್ಣಾ. ಓಂ ಸಪದಸ್ತ್ರೈದ್ರ್ಯಾವಾ ಭೂಮೀ ಜನಯನ್ ದೇವಃ ಎಂದುದಾಗಿ, ಶೈವಪುರಾಣೇ : ಯಥಾ ಪಂಕೇ ಸರೋಜಂ ಚ ಯಥಾ ಕಾಷೆ*ೀ ಹುತಾಶನಃ | ಸುಪ್ರತಿಷಿ* ತಲಿಂಗೇ ತು ನಯಥಾ ಪೂರ್ವಭಾವನಂ || ಮತ್ತಂ ಲೈಂಗೇ: ಶಿವದೀಕ್ಷಾಭಿಜಾತಸ್ಯ ಪೂರ್ವಜಾತಿಂ ನ ಚಿಂತಯೇತ್ | ಯಥಾ ಸುವರ್ಣಪಾಷಾಣೇ ಭಕಶ್ಚಂಡಾಲವಂಶಜಃ || ಇಂತೆಂದು ಪುರಾಣವಾಕ್ಯಂಗಳು ಸಾರುತ್ತಿವೆ. ಶಿಲಿಂಗಬಕ್ತನೇ ಶ್ರೇಷ*ನು. ಶ್ವಪಚನಾದಡೆಯೂ ಆ ಲಿಂಗಭಕ್ತನೇ ಕುಲಜನು, ಆ ಲಿಂಗಭಕ್ನೇ ಉತ್ತಮನಯ್ಯ, ಮಹಾಲಿಂಗಕಲ್ಲೇಶ್ವರಾ.
--------------
ಹಾವಿನಹಾಳ ಕಲ್ಲಯ್ಯ
ಸಾಕಾರವಿಡಿದು ಪರಬ್ರಹ್ಮ, ನಿರಾಕಾರವಿಡಿದು ಪರಬ್ರಹ್ಮವೆಂಬಿರಿ. ಪರಬ್ರಹ್ಮವ ನುಡಿವಿರಿ, ಪರಬ್ರಹ್ಮವನರಿದಿಹೆವೆಂಬಿರಿ, ಅರಿಹಿಸಿಹೆವೆಂಬಿರಿ, ಆನೆ ಪರಬ್ರಹ್ಮವೆಂಬಿರಿ, ಪರಬ್ರಹ್ಮವನರಿಯದೆ ನುಡಿವಿರಿ, ಬ್ರಹ್ಮದೊಡಕು ಅರಿದು ಕಂಡಿರಣ್ಣಾ. ಈ ಬ್ರಹ್ಮದೊಡಕಿಂದ ಮುನ್ನೊಮ್ಮೆ ದೇವಜಾತಿಗಳು ಋಷಿಜನಂಗಳು ಬ್ರಹ್ಮನನು, ಪರಬ್ರಹ್ಮವ ಬೆಸಗೊಳಲು ಅಹಂ ಬ್ರಹ್ಮವೆಂದು ತಲೆಯ ಹೋಗಾಡಿಕೊಂಡುದು ಸರ್ವಪುರಾಣಪ್ರಸಿದ್ಧ, ಇನ್ನೂ ತಲೆಯ ಮೋಟು ಕಾಣಬರುತ್ತದೆ. ಬ್ರಹ್ಮನ ಶಿರ ಪರಬ್ರಹ್ಮದ ಕೈಯಲ್ಲಿದೆ. ಆನೆ ಪರಬ್ರಹ್ಮವೆಂದು ಸನತ್ಕುಮಾರ ಒಟ್ಟೆಯಾದುದು ಸ್ಕಂದ ಪುರಾಣಪ್ರಸಿದ್ಧ. ಅವರಂತಾಗದೆ, ಪರಬ್ರಹ್ಮದ ನೆಲೆಯ ಕೇಳಿರಣ್ಣಾ: ಲಿಂಗವೇ ಪರಬ್ರಹ್ಮವೆಂದು ಅಥರ್ವಣ ಹೇಳುತ್ತದೆ, `ಏಕೋ ರುದ್ರಸ್ಸ ಈಶಾನಃ ಸ ಭಗವಾನ್ ಸ ಮಹೇಶ್ವರೋ ಮಹಾದೇವ ಇತಿ ಈ ಪ್ರಕಾರದಲೆ ಯಜುರ್ವೇದ ಹೇಳುತ್ತಿದ್ದಿತ್ತು. ಋತಂ ಸತ್ಯಂ ಪರಂ ಬ್ರಹ್ಮ ಪುರುಷಂ ಕೃಷ್ಣ ಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮಃ ಈ ಪ್ರಕಾರದಲ್ಲಿ ಶಿವಸಂಕಲ್ಪೋಪನಿಷತ್ ಹೇಳುತ್ತಿದೆ. ಋತಂ ಸತ್ಯಂ ಪರಂ ಬ್ರಹ್ಮಪುರುಷಂ ಕೃಷ್ಣ ಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ತನ್ಮೇ ಮನಶ್ಶಿವಸಂಕಲ್ಪಮಸ್ತು ಎಂದುದಾಗಿ ಲಿಂಗವೇ ಪರಬ್ರಹ್ಮ. ಮುನ್ನೊಮ್ಮೆ ಹರಿಬ್ರಹ್ಮರ ಸಂವಾದದಲ್ಲಿ ಉರಿಲಿಂಗ ಉದ್ಭವವಾದಲ್ಲಿ ಹರಿಬ್ರಹ್ಮಾದಿಗಳು ಸ್ತೋತ್ರವ ಮಾಡಿದರು. ಲೈಂಗ್ಯ ಪುರಾಣದಲ್ಲಿ, ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಶ್ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಇದು ಮುನ್ನೊಮ್ಮೆ ಬ್ರಹ್ಮಕಾರಣ ಲಿಂಗವೇ ಪರಬ್ರಹ್ಮ, ಶಿವನೇ ಪರಬ್ರಹ್ಮವೆಂದು ಮತ್ತೆ ಯಜುರ್ವೇದ ನುಡಿಯುತ್ತಿದೆ. ಈಶಾನಸ್ಸರ್ವವಿದ್ಯಾನಾಮೀಶ್ವರಸ್ಸರ್ವಭೂತಾನಾಂ ಬ್ರಹ್ಮಾಧಿಪತಿ ಬ್ರಹ್ಮಣೋ[s]ಧಿಪತಿಬ್ರ್ರಹ್ಮಾ ಶಿವೋ ಮೇ[s]ಸ್ತು ಸದಾಶಿವೋಂ ಆದಿತ್ಯ ಪುರಾಣದಲೂ ಮಹಾಪುರುಷ ಆದಿತ್ಯ ಹೇಳುತ್ತಿದ್ದಾನೆ: ಪರಬ್ರಹ್ಮಾ ಚ ಈಶಾನ ಏಕೋ ರುದ್ರಸ್ಸ ಏವ ಚ ಭಗವಾನ್ ಮಹೇಶ್ವರಸ್ವಾಕ್ಷಾನ್ಮಹಾದೇವೋ ನ ಸಂಶಯಃ ಯಸ್ಯಾಂತಸ್ಥಾನಿ ಭೂತಾನಿ ಯೇನೇದಂ ಧಾರ್ಯತೇ ಜಗತ್ ಬ್ರಹ್ಮೇತಿ ಯಂ ಜಹುರ್ವೇದಾಃ ಸರ್ವೇ ತಂ ಶರಣಂ ವ್ರಜೇತ್ ಕೂರ್ಮ ಈಶ್ವರಗೀತೆಯಲ್ಲಿ, ಆವ್ಯಕ್ತಂ ಕಾರಣಂ ಪ್ರಾಹುರಾನಂದಂ ಜ್ಯೋತಿರಕ್ಷರಂ ಅಹಮೇವ ಪರಬ್ರಹ್ಮ ಮತ್ತೋ[s]ನ್ಯಂ ಹಿ ನ ವಿದ್ಯತೇ ಅಹಂ ತತ್ಪರಮಂ ಬ್ರಹ್ಮ ಪರಮಾತ್ಮಾ ಸನಾತನಃ ಮಹಾಪುರುಷ ಮನು ಮಾನವಪುರಾಣದಲ್ಲೂ ಹೇಳಿದನು: ಋತಂ ಸತ್ಯಂ ಪರಬ್ರಹ್ಮಪುರುಷಂ ಸೋಮವೀಶ್ವರಂ ಊಧ್ರ್ವರೇತಂ ಸಮುತ್ಪತ್ತಿಸ್ಥಿತಿಸಂಹಾರಕಾರಣಂ ವಿಶ್ವರೂಪಂ ವಿರೂಪಾಕ್ಷಂ ಚಂದ್ರಮೌಳಿಂ ಘೃಣಾನಿಧಿಂ ಹರಣ್ಯಬಾಹುಮದ್ವಂದ್ವಂ ಹಿರಣ್ಯಪತಿಮೀಶ್ವರಂ ಅಂಬಿಕಾಯಾಃ ಪತಿಂ ಸಾಕ್ಷಾದುಮಾಯಾಃ ಪತಿಮಕ್ರಿಯಂ ಪರತತ್ವಂ ಸಮಾಖ್ಯಾತಂ ಶಿವಂ ಧ್ಯಾಯಂತಿ ಸಂತತಂ ತೈತ್ತಿರೀಯ ಶ್ರುತಿ, `ಸದ್ವಿಪ್ರಾಹಿ..... ಎಂದುದಾಗಿ, ಬಹಳ ಬಹಳ ಚಕ್ಷು, ಬಹಳ ಬಹಳ ಮುಖನು, ಬಹಳ ಬಹಳ ಬಾಹು, ಬಹಳ ಪಾದನು, ಇಂತಹ ಬಹಳ ಲಿಂಗವೆ, ಬ್ರಹ್ಮ ಕಾಣಿರಣ್ಣಾ. `ಅಣೋರಣೀಯಾನ್ ಮಹತೋ ಮಹೀಯಾನ್' ಎಂದುದಾಗಿ, ಬಹಳಕ್ಕೆ ಬಹಳ, ಮಹಾಬಹಳ ಲಿಂಗವೆ ಬಹಳಬ್ರಹ್ಮ ಕಾಣಿರಣ್ಣಾ. ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಳಾತೀತಂ ಗುರುಣಾ ಲಿಂಗಮುದ್ಭವಂ ಎಂದುದಾಗಿ, ಮನೋವಾಕ್ಕಾಯ ನಾದಬಿಂದುಕಳೆಗೆ ಅತೀತನಾದ ಮಹಾಬಹಳ ಲಿಂಗವನು ಶ್ರೀಗುರು ನಿರೂಪಿಸಿ ಕೊಟ್ಟನಾಗಿ ಈ ಲಿಂಗವೇ ಪರಬ್ರಹ್ಮ ಕಾಣಿರಣ್ಣಾ. ಇದು ಕಾರಣ, ಪರಬ್ರಹ್ಮಲಿಂಗವೆಂದು ಧ್ಯಾನಿಸಿ ಪೂಜಿಸಿ ಮಹಾನಂದ ಪರಮುಕ್ತಿಯನೈದಿದರು ಪೂರ್ವದಲ್ಲಿ ದೇವಜಾತಿಗಳು ಹಲಬರು, ಇದು ಪುರಾಣ ಪ್ರಸಿದ್ಧ. ಕಲಿಯುಗದಲ್ಲಿ ದೃಷ್ಟ: ಬಸವರಾಜದೇವರು ಮೊದಲಾದ ಅಸಂಖ್ಯಾತ ಮಾಹೇಶ್ವರರು ಇದನರಿದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಲಿಂಗವೆ ಪರಬ್ರಹ್ಮವೆಂದು ಅರಿದು ಧ್ಯಾನಿಸಿ ಪೂಜಿಸಿ ಮಹದಾನಂದಮುಕ್ತಿಯನೈದಿದರಣ್ಣಾ.
--------------
ಉರಿಲಿಂಗಪೆದ್ದಿ
ಶ್ರುತಿವಿಧಿಸಿದ ಶ್ರೀವಿಭೂತಿಯ ಪರಂಜ್ಯೋತಿಯೆಂದರಿದು ಭವಭೀತಿ ಮೃತ್ಯುಭಯಕ್ಕಂಜಿ ಜಮದಗ್ನಿ ಅಗಸ್ತ್ಯ ಕಸ್ಯಪ ಮೊದಲಾದ ಎಲ್ಲಾ ಋಷಿಗಳು ಧರಿಸಿ ಕೊರಜರಾದರು ನೋಡಾ. ಶ್ರೀವಿಭೂತಿಯ ಪರಂಜ್ಯೋತಿಯೆಂದರಿದು ಎಲ್ಲಾ ದೇವರ್ಕಳು ಎಲ್ಲಾ ಶ್ರುತಿ ಸ್ಮøತಿಗಳು ಧರಿಸಿದವು ನೋಡಾ. ಶ್ರೀವಿಭೂತಿಯೆ ಪರಂಜ್ಯೋತಿಯೆಂದರಿದು ಗಾಯತ್ರಿ ಬ್ರಹ್ಮ ವಿಷ್ಣು ಇಂದ್ರಾದಿ ದೇವರ್ಕಳು ಧರಿಸಿದರು ನೋಡಾ. ಶ್ರೀವಿಭೂತಿಯ ಪರಂಜ್ಯೋತಿ ನಿರುತವಿದು ನಂಬಿ ಧರಿಸಿ ಬದುಕು ಮನುಜಾ. ಶ್ರೀವಿಭೂತಿಯೆ ಪರಂಜ್ಯೋತಿಯೆಂಬುದು. ಇದಕ್ಕೆ ಜಾಬಾಲೋಪನಿಷತ್ : ``ಓಂ ಸ ಏಷ ಭಸ್ಮ ಜ್ಯೋತಿ ಸ್ಸಏಷ ಭಸ್ಮ ಜ್ಯೋತಿರಿತ'' ಇಂತೆಂದುದು ಶ್ರುತಿ. ಇದಕ್ಕೆ ಮಾನವಪುರಾಣೇ : ``ಭಸ್ಮ ಜ್ಯೋತಿರ್ಭವತ್ಯೇವ ಶಿವಾಖ್ಯಂ ನ ಹಿ ಸಂಶಯಃ | ಜಾಬಾಲೋಪನಿಷತ್ಸರ್ವಂ ಪ್ರಾಹೇದಂ ಪರಯಾ ಮುದಾ ||'' ಇಂತೆಂದುದಾಗಿ, ಇನ್ನು ವಿಭೂತಿ ಅಭಿಮಂತ್ರ ವಿಭೂತಿಧಾರಾ ಎಂಬುದಕ್ಕೆ ಕಾತ್ಯಾಯನ ಗೃಹ್ಯೇ, ಕಾತ್ಯಾಯನ ಸ್ಮೃತಿ, ಬೋಧಾಯನ ಸ್ಮೃತಿ, ಅಭಿಮಂತ್ರ ಶ್ರುತಿ : ``ಮಾನಸ್ತೋಕೇ ತನಯೇ ಮಾನ ಆಯುಷಿ ಮಾನೋ ಗೋಷು ಮಾನೋ ಅಶ್ವೇಷು ರೀರಿಷಃ | ವೀರಾನ್ಮಾನೋ ರುದ್ರ ಭಾಮಿತೋ ವಧೀರ್ಹವಿಷ್ಮಂತೋ ಶಮಿತ್ವಾ ಹವಾಮಹೇ ||'' ಇಂತೆಂದುದು ಶ್ರುತಿ. ಇನ್ನು ವಿಭೂತಿಧಾರಾ ಎಂಬುದಕ್ಕೆ ಶ್ರುತಿ: ``ಓಂ, ಕುಕ್ಷರುಷಿ ರುದ್ರೋ ದೇವತಾ ಜಗತೀ ಛಂದಃ | ಓಂ, ತ್ರಿಯಾಯುಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ | ಅಗಸ್ತ್ಯಸ್ಯ ತ್ರಿಯಾಯುಷಂ ತನ್ಮೇ ಅಸ್ತು ತ್ರಿಯಾಯುಷಂ | ಯದ್ದೇವಾನಾಂ ತ್ರಿಯಾಯುಷಂ ಶತಾಯುಷಂ ಕುರು ತ್ವಾನಿ || ಲಲಾಟ ಭುಜದ್ವಯಂ ನಾಭೇರುತ್ವಾರುಷಿ | ಬ್ರಹ್ಮಣ ರುಷಿ ವೈದಿಕಂ ಸದಾ || '' ಇಂತೆಂದುದು ಶ್ರುತಿ. ಇದಕ್ಕೆ ಬೋಧಾಯನ ಶ್ರುತಿ : ``ಮಾನಸ್ತೋಕೇತ್ಯಾದಿ ಮಂತ್ರೇಣ ಮಂತ್ರಿತಂ ಭಸ್ಮ ಧಾರಯೇತ್ | ಊಧ್ರ್ವಪುಂಡ್ರಂ ಭವೇತ್ ಸಾಮ ಮಧ್ಯಪುಂಡ್ರಂ ಯಜೂಂಷಿ ಚ | ಅಧಃ ಪುಂಡ್ರಮೃಚಃ ಸಾಕ್ಷಾತ್ ತಸ್ಮಾತ್ ಪುಂಡ್ರಂ ತ್ರಿಯಾಯುಷಂ ||'' ಇದಕ್ಕೆ ಲೈಂಗ್ಯ ಪುರಾಣೇ : ``ಅಕಾರೋನಾಮಿಕಂ ಪ್ರೋಕ್ತಂ ಉಕಾರೋ ಮಧ್ಯಮಾಂಗುಲಿಃ | ಮಕಾರೋ ತಜ್ರ್ಜನಿಸ್ಥಾನಂ ತ್ರಿಭಿಃ ಕುರ್ಯಾತ್ ತ್ರಿಪುಂಡ್ರಕಂ ||'' ಇಂತೆಂದುದಾಗಿ. ಇದಕ್ಕೆ ಕಾಲಾಗ್ನಿರುದ್ರೋಪನಿಷತ್ : ``ಹರಃ ಓಂ, ಅಥ ಕಾಲಾಗ್ನಿರುದ್ರಂ ಭಗವಂತಂ ಸನತ್ಕುಮಾರಃ ಅಪಪ್ರಚ್ಛಧೀಹಿ ಭಗವನ್ ತ್ರಿಪುಂಡ್ರವಿಧಿಂ ಸತತ್ವಂ ಕಿಂ ದ್ರವ್ಯಂ ಕ್ರಿಯತ್ ಸ್ಥಾನಂ ಕತಿ ಪ್ರಮಾಣಂ ಕಾ ರೇಖಾ ಕೇ ಮಂತ್ರಾಃ ಕಾ ಶಕ್ತಿಃ ಕಿಂ ದೈವತಂ ಕಃ ಕರ್ತಾ ಕಿಂ ಫಲಮಿತಿ ಚ || ತಂ ಹ್ಯೋವಾಚ ಭಗವಾನ್ ಕಾಲಾಗ್ನಿ ರುದ್ರಃ ಯದ್ದ್ರವ್ಯಂ ತದಾಗ್ನೇಯಂ ಭಸ್ಮ, ಸದ್ಯೋಜಾತಾದಿ ಪಂಚಬ್ರಹ್ಮ ಮಂತ್ರೈಃ ಪರಿಗೃಹ್ಯ ಅಗ್ನಿರಿತಿ ಭಸ್ಮೇತ್ಯನೇನ ಚಾಭಿಮಂತ್ರ್ಯ ಮಾನಸ್ತೋಕ ಇತಿ ಸಮುದ್ದøತ್ಯ, ಮಾನೊ ಮಹಾಂತಮಿತಿ ಜಲೇನ ಸಂಸೃಜ್ಯ, ತ್ರಿಯಾಯುಷಮಿತಿ ಶಿರೋ ಲಲಾಟವಕ್ಷ ಸ್ಕಂಧೇಷು ತ್ರಿಯಾಯುಷೈಸ್ತ್ರ್ಯಂಬಕೈಸ್ತ್ರಿಶಕ್ತಿಭಿಸ್ತಿರ್ಯಕ್ ತಿಸ್ರೋ ರೇಖಾಃ ಪ್ರಕುರ್ವೀತ ವ್ರತಮೇತಚ್ಛಾಂಭವಂ ಸರ್ವೇಷು ದೇವೇಷು ವೇದವೇದಾದಿಭಿರುಕ್ತಂ ಭವತಿ ತಸ್ಮಾತ್ತತ್ಸಮಾಚರೇನ್ಮುಮುಕ್ಷುರ್ನಪುನರ್ಭವಾಯ || ಅಥ ಸನತ್ಕುಮಾರಃ ಪಪ್ರಚ್ಛ ಪ್ರಮಾಣಮಸ್ಯ ತ್ರಿಪುಂಡ್ರಧಾರಣಸ್ಯ ತ್ರಿಧಾರೇಖಾಭವತ್ಯಾಲಲಾಟಾದಾಚಕ್ಷುಷೋರಾಮೂಧ್ರ್ನೋರಾಭ್ರುವೋರ್ಮ- ಧ್ಯತಶ್ಚ ಪ್ರಥಮಾ ರೇಖಾ ಸಾ ಗಾರ್ಹಪತ್ಯಶ್ಚಾಕಾರೋ ರಜೋ ಭೂರ್ಲೋಕಃ ಸ್ವಾತ್ಮಾ ಕ್ರಿಯಾಶಕ್ತಿಃ ಋಗ್ವೇದಃ ಪ್ರಾತಃ ಸವನಂ ಮಹೇಶ್ವರೋ ದೇವತೇತಿ || ಯಾsಸ್ಯ ದ್ವಿತೀಯಾ ರೇಖಾ ಸಾ ದಕ್ಷಿಣಾಗ್ನಿರುಕಾರಃ ಸ್ವತ್ವ ಮಂತ್ರರಿಕ್ಷಮಂತರಾತ್ಮಾ ಚೇಚ್ಛಾಶಕ್ತಿಃ ಯಜುರ್ವೇದೋ ಮಾಧ್ಯಂ ದಿನಂ ಸವನಂ ಸದಾಶಿವೋ ದೇವತೇತಿ || ಯಾsಸ್ಯ ತೃತೀಯಾ ರೇಖಾ ಸಾsಹವನೀಯೋ ಮಕಾರಸ್ತಮೋ - ದ್ಯೌರ್ಲೋಕಃ ಪರಮಾತ್ಮಾ ಜ್ಞಾನಶಕ್ತಿಃ ಸಾಮವೇದಸ್ತøತೀಯಂ ಸವನಂ ಮಹಾದೇವೋ ದೇವತೇತಿ || ಏವಂ ತ್ರಿಪುಂಡ್ರವಿಧಿಂ ಭಸ್ಮನಾ ಕರೋತಿ ಯೋ ವಿದ್ವಾನ್ ಬ್ರಹ್ಮಚಾರೀ ಗೃಹೀ ವಾನಪ್ರಸ್ಥೋ ಯತಿರ್ವಾ ಸಃ ಸಮಸ್ತ ಮಹಾಪಾತಕೋ - ಪಪಾತಕೇಭ್ಯಃ ಪೂತೋ ಭವತಿ, ಸ ಸರ್ವೇಷು ತೀರ್ಥೇಷು ಸ್ನಾತೋ ಭವತಿ, ಸ ಸರ್ವಾನ್ ಜ್ಞಾತೋ ಭವತಿ, ಸ ಸರ್ವಾನ್ ವೇದಾನಧೀತೋ ಭವತಿ, ಸ ಸತತಂ ಸಕಲರುದ್ರಮಂತ್ರಜಾಪೀ ಭವತಿ, ಸ ಸಕಲಭೋಗಾನ್‍ಭುಂಕ್ತೆ ದೇಹಂತ್ಯಕ್ತ್ವ ಶಿವಸಾಯುಜ್ಯಮೇತಿ ನ ಸ ಪುನರಾವರ್ತತೇನ ಸ ಪುನರಾವರ್ತತ ಇತ್ಯಾಹ ಭಗವಾನ್ ಕಾಲಾಗ್ನಿರುದ್ರಃ ||'' ಇಂತೆಂದುದಾಗಿ, ಇದಕ್ಕೆ ಭೀಮತಂತ್ರಾಗಮೇ : ``ಸರ್ವತೀರ್ಥೇಷು ಯತ್‍ಪುಣ್ಯಂ ಸರ್ವಯಜ್ಞೇಷು ಯತ್‍ಫಲಂ| ತತ್‍ಫಲಂ ಕೋಟಿಗುಣಿತಂ ಭಸ್ಮಸ್ನಾನಾನ್ನಸಂಶಯಃ||'' ಇಂತೆಂದುದಾಗಿ, ಇದಕ್ಕೆ ಭವಿಷ್ಯೋತ್ತರಪುರಾಣೇ : ``ಶಿವಾಗ್ನಿಕಾರ್ಯಂ ಯಃ ಕೃತ್ವಾ ಕುರ್ಯಾತ್ರಿಯಾಯುಷಂ | ಆತ್ಮವಿತ್ ವಿಶುದ್ಧ ಃ ಸರ್ವಪಾಪೈಶ್ಚ ಸಿತೇನ ಭಸ್ಮನಾ || '' ಇಂತೆಂದುದಾಗಿ, ಇದಕ್ಕೆ ಪರಾಶರಪುರಾಣೇ : ``ಕ್ರಿಯಾಯುಷ್ಯಾಣಿ ಕುರುತೇ ಲಲಾಟೇಚ ಭುಜದ್ವಯೇ | ನಾಶಿಕಾಂತೇ ಚ ಧೃತ್ವಾರ್ಷೇ | '' (?) ಇದಕ್ಕೆ ಬ್ರಹ್ಮಪುರಾಣೇ : ``ಶ್ರಾದ್ಧೇ ಯಜ್ಞೇ ಜಪೇ ಹೋಮೇ ವೈಶ್ವದೇವೇ ಸುರಾರ್ಚನೇ | ಧೃತತ್ರಿಪುಂಡ್ರಪೂತಾತ್ಮಾ ಮೃತ್ಯುಂ ಜಯತಿ ಮಾನವ ಃ || '' ಇಂತೆಂದುದಾಗಿ, ಇದಕ್ಕೆ ಆದಿತ್ಯಪುರಾಣೇ : ``ಸರ್ವಾಶ್ರಮಾಣಾಂ ವರ್ಣಾನಾಂ ಭಸ್ಮ ರುದ್ರಾಕ್ಷ ಧಾರಣಂ | ಕರ್ತವ್ಯಂ ಮಂತ್ರತಶ್ಚೋಕ್ತಂ ದ್ವಿಜಾನಾಂ ನಾತ್ರ ಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ ಃ ``ವಿಪ್ರಾದೀನಾಂಚ ಸರ್ವೇಷಾಂ ಲಲಾಟಂ ಭಸ್ಮಶೂನ್ಯಕಂ | ಭಿಕ್ಷಾ ಚ ಜಪಹೋಮಂ ಚಾರ್ಪಣಂ ನಿಷ್ಫಲಂ ಭವೇತ್ || '' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಸಿತೇನ ಭಸ್ಮನಾ ಕಾರ್ಯಂ ತ್ರಿಸಂಧ್ಯಾಂ ತ್ರಿಪುಂಡ್ರಕಂ | ಸರ್ವಪಾಪವಿನಿರ್ಮುಕ ್ತಃ ಶಿವಸಾಯುಜ್ಯಮಾಪ್ನುಯಾತ್ || '' ಇಂತೆಂದುದಾಗಿ, ಇದಕ್ಕೆ ಲೋಕಾಕ್ಷಿ ಸ್ಮೃತಿ : ``ಮಧ್ಯಮಾನಾಮಿಕಾಂಗುಷೆ*ೀ ತ್ರಿಪುಂಡ್ರಂ ಭಸ್ಮನಾ ಧೃತಂ | ತತ್ತ್ರಿಪುಂಡ್ರಂ ಭವೇತ್ಪುಣ್ಯಂ ಮಹಾಪಾತಕನಾಶಕಂ ''|| ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ನೃಪಾಣಾವಿೂೀಶ್ವರಾಣಾಂ ಚ ಭಸ್ಮೀ ತ್ರೇಣ ಚ ಚಂದನಂ | ತ್ರಿಪುಂಡ್ರಂ ವಿಧಿವತ್ಕುರ್ಯಾತ್ ಸುಗಂಧೇನಾಪಿ ವಾಗುಹಾಂ || ಭಸ್ಮನಾಯೈ ತ್ರಿಸಂಧ್ಯಾಂ ಚ ಗೃಹಸ್ಥೋ ಜಲಸಂಯುತಂ | ಸರ್ವಕಾಲೇ ಭವೇತ್ ಸ್ತ್ರೀಣಾಂ ಯತಿನಾಂ ಜಲವರ್ಜಿತಂ || ವಾನಪ್ರಸ್ಥೇಷು ಕಾಂಸ್ಯಾನಾಂ ದೀಕ್ಷಾಹೀನಂ ಮೃಣಂ ತಥಾ | ಮಧ್ಯಾಹ್ನೇ ಪ್ರಾಕ್‍ಜಲಯುಕ್ತಂ ಪರಾಕ್ ಜಲವಿವರ್ಜಿತಂ ||'' ಇಂತೆಂದುದಾಗಿ, ಇದಕ್ಕೆ ಕ್ರಿಯಾಸಾರೇ : ``ಶುದ್ಧ ತಾ ಜಲೇನೈೀವ ಭಸ್ಮಸ್ಯಾತ್ ತ್ರಿಪುಂಡ್ರಕಂ | ಯೋ ಧಾರಯೇತ್ ಪರಬ್ರಹ್ಮ ಸಂಪ್ರಾಪ್ನೋತಿ ನ ಸಂಶಯಃ|| ಮಧ್ಯಮಾನಾಮಿಕಾಂಗುಷೆ* ೈರನುಲೋಮವಿಲೋಮತಃ ||'' ಧಾರಯದ್ಯಗ್ನಿ ತ್ರಿಪುಂಡ್ರಾಂತಂ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುಗಾಗಿ, ಇದಕ್ಕೆ ಕ್ರಿಯಾಸಾರೇ : ``ಮಧ್ಯಾಂಗುಲಿ ತ್ರಯೇಣೈವ ಸ್ವದಕ್ಷಿಣ ಕರಸ್ಯ ತು | ಷಡಂಗುಲಾಯತಂ ಮಾನಮಪಿವಾsಲಿಕಮಾನನಂ || ಷಡಂಗುಲಪ್ರಮಾಣೇನ ಬ್ರಾಹ್ಮಣಾನಾಂ ತ್ರಿಪುಂಡ್ರಕಂ | ನೃಪಾನಾಂ ಚತುರಂಗುಲ್ಯಂ ವೈಶ್ಯಾನಾಂ ಚ ದ್ವಿರಂಗುಲಂ | ಶೂದ್ರಾಣಾಂ ಚ ಸರ್ವೇಷಾಂ ಏಕಾಂಗುಲಾ ತ್ರಿಪುಂಡ್ರಕಂ ||'' ಇಂತೆಂದುಗಾಗಿ, ಇದಕ್ಕೆ ಭೀಮಸಂಹಿತಾಯಾಂ : ``ಮೂಧ್ರ್ನಾ ಲಲಾಟಕಂ ದ್ಯೌಶ್ಚ ಶ್ರೋತ್ರೇ ಬಾಹೂ ತಥೈೀವ ಚ | ಹೃದಯಂ ನಾಭಿಪೃಷೌ* ಚ ಹಸ್ತೋ ವೈ ಸಂಧಯಃ ಕ್ರಮಾತ್ || ಮೂಧ್ರ್ನಿಃ ಸ್ಯಾತ್ ಬ್ರಹ್ಮಣ ಪ್ರೀತಿಃ ಲಲಾಟೇ ಚ ಸರಸ್ವತೀ | ಕಂಠೋ ಲಕ್ಷ್ಮ್ಯಾ ಭವೇತ್ ಪ್ರೀತಿಃ ಸ್ಕಂದೇ ಪೀಣಾತಿ ಪಾರ್ವತಿ || ಇಂದ್ರ ಪ್ರೀತಿ ಕರಂ ಬಾಹೋ ಹೃದಯಂ ಚ ಶರಪ್ರಿಯಂ | ಅನೇನ ವಿಧಿನಾ ಚೈವ ವಿಭೂತಿಂ ಧಾರಯೇತ್ ಸುಧೀಃ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ತ್ರಿಪುಂಡ್ರಂ ಬ್ರಹ್ಮಣೋ ವಿದ್ವಾನ್ ಮನಸಾsಪಿ ನ ಲಂಘಯೇತ್ | ಶ್ರುತ್ವಾ ವಿಧೀಯತೇ ಯಸ್ಮಾತ್ ತತ್ಯಾನಿ ಪತಿತೋ ಭವೇತ್ ||'' ಇಂತೆಂದುದಾಗಿ, ಇದಕ್ಕೆ ಮತ್ಸ್ಯಪುರಾಣೇ : ``ನ ಚ ಶೌಚಂ ತಪೋ ಯಜ್ಞಂ ತೀರ್ಥಂ ದೇವಾಗ್ನಿಪೂಜನಂ | ಅಶ್ವಮೇಧಮಿದಂ ವ್ಯರ್ಥಂ ತ್ರಿಪುಂಡ್ರೋ ಯೋ ನ ಧಾರಯೇತ್ ||'' ಇಂತೆಂದುದಾಗಿ, ಇದಕ್ಕೆ ಬ್ರಹ್ಮಾಂಡಪುರಾಣೇ : ``ವಿಪ್ರಾಣಾಂ ವೇದವಿದುಷಾಂ ವೇದಾಂತಜ್ಞೇನ ವೇದಿನಾಂ | ಸಿತೇನ ಭಸ್ಮನಾ ಕಾರ್ಯಂ ತ್ರಿಪುಂಡ್ರಮಿತಿ ಪದ್ಮಭೂಃ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಸರ್ವೇ ತಪಸ್ವಿನಃ ಪ್ರೋಕ್ತಾಃ ಸರ್ವೇ ಯಜ್ಞೇಷು ಭಾಗಿನಃ | ರುದ್ರಭಕ್ತಾ ಸ್ಮøತಾಸ್ಸರ್ವೇ ತ್ರಿಪುಂಡ್ರಾಂಕಿತಮಸ್ತಕಾಃ ||'' ಇಂತೆಂದುದಾಗಿ, ಇದಕ್ಕೆ ಕ್ರಿಯಾಸಾರೇ : ``ಶಿರೋ ಲಲಾಟೇ ಶ್ರವಣೋದ್ವಯಾಗ್ನಿರ್ವಾಭುಜದ್ವಯಂ | ವಕ್ಷೋ ನಾಭಿಃ ಪೃಷ*ಭಾಗೇ | ಕಕುದಿತ್ಯೇಕದೋದಶ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಮೂಧ್ನೇ ಲಾಲಟೇ ಕರ್ಣೇ ಚ ಚಕ್ಷುಷೇ ಮಸ್ತಕಸ್ತಥಾ | ಅನ್ಯ ಬಾಹು ಭುಜದ್ವಂದ್ವಂ ಸ್ಥಾನಾವಪ್ಯುದರಂ ತಥಾ || ಮಣಿಬಂಧೇಷು ಧೃತ್ವಾ ಪಾಶ್ರ್ವೇ ನಾಭಿಮೇಢ್ರಂ ಚ ಪೃಷ್ಟಕಂ | ಊರೂ ಚ ಚಾಮಕಾಶ್ಚ ೈವ ಸಂಷ್ಟಪಿ ಯಥಾಕ್ರಮಂ || ವಿಧಿವತ್‍ಭಸ್ಮಸ್ನಾನಂ ಧಾರಣಂ ಮೋಕ್ಷಕಾರಣಂ || '' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಶಿರೋ ಫಾಲಃ ಕರ್ಣಕಂ ತೌಚ ಬಾಹೂ ಚ ಮಣಿಬಂಧಕೇ | ಹೃದಯಂ ಚ ಪರಂ ಚೈವ ನಾಭಿ ಭುಜದ್ವಯಂ ತಥಾ || ಓಷಾ*ವಪಿ ಚ ವಿಜ್ಞೇಯೋ ಷೋಡಶಃ ಸಂಧಯಃ ಸ್ಮøತಾಃ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಲಲಾಟಾಂಘ್ರಿವಾಂ ಭುಜಾತ್ ಹೃದಯಂ ನಾಭಿರೇವ ಚ | ಅಪರೇ ಸಂಧಯೋ ಜ್ಞೇಯಾ ಅಷ್ಟಸ್ಥಾನಂ ಚ ಭೂಷಣಂ || ಭಸ್ಮಸ್ನಾನಂ ನರೋ ತೀರ್ಥಂ ಗಂಗಾಸ್ನಾನಂ ದಿನೇ ದಿನೇ | ಭಸ್ಮರೂಪಂ ಶಿವಂ ಸಾಕ್ಷಾದ್ಭಸ್ಮ ತ್ರೈಲೋಕ್ಯಸಾಧನಂ || '' ಇಂತೆಂದುದಾಗಿ, ಇದಕ್ಕೆ ಯಜುರ್ವೇದ : ``ಓಂ ಭಾಗದ್ವಯೇವಾಯೇವಂ ಪ್ರಣಯೇತಿ ಬ್ರಾಹ್ಮಣಃ | ಆ ಋಷಯಃ ಉದ್ಧರೇವ ಬ್ರಾಹ್ಮಣೋ ವೈ ಸರ್ವದೇವತಾಃ | ಸರ್ವಾದಿ ದೇವೈಃ ಆನಂದೇವತಾಭಿರುದ್ಧತಿ || '' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಜಲಸ್ನಾನಂ ತಪಃ ಪುಣ್ಯಂ ಮಂತ್ರಸ್ನಾನಂ ಕುಲಕ್ಷಯಃ| ವಿಭೂತಿರೇಣುಮಾತ್ರೇಣ ತತ್ಫಲಂ ಶ್ರುಣು ಪಾರ್ವತಿ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಶ್ರೀಮತ್ ತ್ರಿಪುಂಡ್ರಮಹಾತ್ಮ್ಯಂ ಯಃ ಪಠೇತ್ ಸತತಂ ನರಃ | ಈಹೇಷ್ಟಾನ್ ಸಕಲಾನ್ ಪ್ರಾಪ್ಯ ಗಚ್ಛಂತಿ ಪರಮಂ ಪದಂ ||'' ಇಂತೆಂದುದಾಗಿ, ಇದನರಿದು ಶ್ರೀ ವಿಭೂತಿಯ ಧರಿಸದ ಕರ್ಮಿಯ ಎನಗೊಮ್ಮೆ ತೋರದಿರಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ವ್ಯಾಸಾದಿಗಳಂತೆ ಶ್ವಾನಜ್ಞಾನಿಗಳಪ್ಪರೆ ಸತ್ಯಶುದ್ಧಶರಣರು ? `ನ ದೇವಃ ಕೇಶವಾತ್ಪರಂ' ಎಂದ ವ್ಯಾಸ, ತನ್ನ ತೋಳುಗಳನೆರಡನು ಹೋಗಲಾಡನೆ ? ಹಿಡಿಯರೆ ಅಂದು ಆಕಾಶಗಣಂಗಳು ? ಮರಳಿ ಈಶ್ವರನಲ್ಲದೆ ದೈವವಿಲ್ಲೆಂದು ಶ್ರುತ್ಯರ್ಥವನರಿದು ದೇವಾರ್ಚನೆಯಂ ಮಾಡಲಾಗಿ ಆ ವ್ಯಾಸನ ಎರಡು ಕರಂಗಳು ಬಂದು, ಅಶೇಷವಹಂತಹ ಚರ್ಮ ಈಶ್ವರನ ಆಲಯದ ಮುಂದೆ ಧ್ವಜಪತಾಕೆಗಳಾಗದೆ ? ಈರೇಳು ಲೋಕವು ಅರಿಯೆ. ಅನಂತಪುರಾಣಾಗಮಗಳಲ್ಲಿ ಕೇಳಿರೆ: ಈಶ್ವರಾರ್ಚನೆಯ ಮಾಡಿ ಮರಳಿ ವಿತಥವಾಗಿ ಪರದಾರಕಿಚ್ಚೈಸಿದಡೆ ಇವಂಗಿದೆ ಪ್ರಿಯವೆಂದು ಆ ಇಂದ್ರನ ಮೈಯೆಲ್ಲಾ ಅನಂಗನಹಂತಹ ಅಂಗವಾಗದೆ ? ಈರೇಳು ಭುವನವರಿಯೆ. ಮರಳಿ ಈಶ್ವರಾರ್ಚನೆಯ ಮಾಡಲು ಆ ಅಂಗದ ಯೋನಿ[ಕೂ]ಪೆಲ್ಲಾ ನಯನಂಗಳಾಗವೆ ಇಂದ್ರಂಗೆ ? ಇದನರಿದು ಶಿವಾರ್ಚನೆಯಂ ಮಾಡಿ ಶಿವನವರಿಗೆ ಧನಸಹಿತ ತ್ರಿವಿಧವ ನಿವೇದಿಸುವುದು ಶಿವಾಚಾರ ಕೇಳಿರಣ್ಣಾ. ಅರಿದರಿದು ಬರಿದೊರೆ ಹೋಗಬೇಡ. ಋಷಿಗಳ ಶಿವಾರ್ಚನೆಯ ವಿಶೇಷವಹಂತಹ ಫಲವ ಕೇಳಿರಣ್ಣಾ: ಕೀಳುಗುಲದ ಋಷಿಗಳ ಕುಲನಾಮಂಗಳ ತೊಡೆದು ಮೇಲುಗುಲನಾಮವ ಕೇಳಿರಣ್ಣಾ. ಅದು ಹೇಗೆಂದಡೆ: ಮುಖದಿಂದುತ್ಪತ್ಯವಾದ ಬ್ರಾಹ್ಮಣನು ಆ ಋಷಿಗಳ ಶಾಖೆಯಾದನು, ಅವರ ಗೋತ್ರವಾದನು. ಶಿವಾಚಾರ ವಿಶೇಷವೊ ? ಕುಲ ವಿಶೇಷವೊ ? ಹೇಳಿರಣ್ಣಾ. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬ ಕ್ರೂರಹೃದಯರ ಮಾತ ಕೇಳಲಾಗದು. ಹೋಹೋ ಶಿವನ ಮುಖದಿಂದ ಹುಟ್ಟಿ ಉತ್ತಮವಹಂತಹ ಬ್ರಾಹ್ಮಣಧರ್ಮದಲ್ಲಿ ಜನಿಸಿದಂತಹ ವರ್ಣಿಗಳು ಕ್ಷತ್ರಿಯನ ಭಜಿಸ ಹೇಳಿತ್ತೆ ಈ ವೇದ ? `ಶಿವ ಏಕೋ ಧ್ಯೇಯಃ ಶಿವಂಕರಃ ಸರ್ವಮನ್ಯತ್ಪರಿತ್ಯಜೇತ್' ಎಂದುದಾಗಿ_ ಶಿವನನೆ ಧ್ಯಾನಿಸಿ, ಇತರ ದೇವತೆಗಳ ಬಿಡಹೇಳಿತ್ತಲ್ಲವೆ ? ಅದಂತಿರಲಿ, ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಸತ್ತ ಕಪಿಲೆಯ ಕಡಿದು ಹಂಚಿ ತಿನ್ನ ಹೇಳಿತ್ತೆ ವೇದ ? ಆಗದು ಅವದಿರ ಸಂಗ. ಅಧಮರ ವರ್ಣಾಶ್ರಮಹೀನರ ಕರ್ಮವ ಕಳೆದೆಹೆವೆಂದು ದತ್ತಪುತ್ರರಾಗಿ ಹೊರಸಿ[ನಡಿ]ಯಲಿ ನುಸುಳ ಹೇಳಿತ್ತೇ ಆ ವೇದ ? ಭುಂಜಿಸಿ ಮುಕ್ತಿಯನಿತ್ತಿಹೆವೆಂದಡೆ ಅದಂತಿರಲಿ, ಹಲ ಕೆಲ ಕಾಲ ವಂದಿಸಿದ ಗೌತಮಂಗೆ ಬಾರದೆ ಅಂದು ಗೋವಧೆ ? ಅದಂತಿರಲಿ, ಬ್ರಾಹ್ಮಣರೆ ದೈವವೆಂದು ದಾನಾದಿಗಳ ಮಾಡಿದ ಕರ್ಣನ ಶಿರಕವಚ ಹೋಗದೆ ಜಗವರಿಯೆ ? ವಿಷ್ಣುದೈವವೆಂದರ್ಚಿಸಿದ ಬಲಿ ಬಂಧನಕ್ಕೆ ಬಾರನೆ ಮೂಜಗವರಿಯೆ ? ಶಿಬಿಯ ಮಾಂಸವ ಕೊಂಡು ಇತ್ತ ಮುಕ್ತಿಯ ಕೇಳಿರಣ್ಣಾ. ಅವಂಗೆ ಬಂದ ವಿಧಿಯ ಹೇಳಲಾಗದು. ಅದಂತಿರಲಿ, ಶಿವನ ಭಕ್ತರಿಗೆ ಪರಮಾಣುವಿನಷ್ಟು ಕಾಂಚನವನೀಯೆ ಅಣಿಮಾದ್ಯಷ್ಟಮಹದೈಶ್ವರ್ಯವನೀವರು, ಮೇಲೆ ಮುಕ್ತಿಯಹುದು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವ ಸಾಯುಜ್ಯಮಾಪ್ನುಯಾತ್ ಎಂದುದಾಗಿ, ಅದಲ್ಲದೆ ಮತ್ತೆ ದಾನಪರಿಗ್ರಹಂಗಳಂ ಕೊಂಡ ಕೆಲಬರ ಮುಕ್ತರ ಮಾಡಿ ಶಿವಲೋಕಕ್ಕೆ ಕೊಂಡೊಯ್ದುದುಂಟಾದಡೆ ಹೇಳಿರಣ್ಣಾ ? ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ನ ಸಂಶಯಃ ಇದು ಕಾರಣ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ ಶರಣಮಹಾತ್ಮೆಯನ್ನು ಯಜುರ್ವೇದ ಸಾಕ್ಷಿಯಾಗಿ ಪೇಳುವೆ ಕಾಶಿಯ ಕಾಂಡದಲ್ಲಿ.
--------------
ಉರಿಲಿಂಗಪೆದ್ದಿ
ಅಜ್ಞಾನ ಮತ ಲಗ್ನ ಸುಮೂರ್ತ ನಕ್ಷತ್ರವೆಂಬವು ವರ್ಗಮೂಲ ವಕ್ರಮೂಲ ವಾಚಾಸಿದ್ಧಿ- ಸುಜ್ಞಾನಕ್ಕೆ ಸುಖ ದುಃಖವು ಏಕವು. ಅವಿವೇಕಯುಕ್ತಿ ಹೋಕರು ಋಗ್ವೇದ ಯಜುರ್ವೇದ ಅಥರ್ವಣವೇದ ದಿಗ್ಬಲೆ ಅಸಂತಕೆ ಲಗ್ನಕ್ಕೆ ಮರಣ ಮುಹೂರ್ತಕ್ಕಪಜಯ ಸದ್ಗುರು ಕಟಾಕ್ಷಯೆಂತಿಪ್ಪುದು ಅಂತು ಅಪ್ಪದು ತಪ್ಪದು ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಮತ್ತಂ,ಆ ಶಿಷ್ಯನು ಸದ್ಗುರುಸ್ವಾಮಿಗೆ ದೀರ್ಘದಂಡ ನಮಸ್ಕಾರವಂ ಮಾಡಿ ಭಯ ಭಕ್ತಿಯಿಂದ `ಎಲೆ ಸದ್ಗುರುಸ್ವಾಮಿ ಆದಿಮೂಲ ಆನಾದಿಮೂಲಂಗಳಿಗತ್ತತ್ತವಾಗಿಹ ಚಿದ್ಬ ್ರಹ್ಮಾಂಡ ಮೊದಲಾಗಿ ಪ್ರಣವಬ್ರಹ್ಮಾಂಡ ಕಡೆಯಾಗಿ ಅನಂತಕೋಟಿ ಬ್ರಹ್ಮಾಂಡಗಳೇನೂ ಇಲ್ಲದಂದು, ಇನ್ನೂರಿಪ್ಪತ್ನಾಲ್ಕು ಭುವನಂಗಳು ಮೊದಲಾಗಿ ಮಹಾಭುವನ, ಅತಿಮಹಾಭುವನಂಗಳು ಕಡೆಯಾಗಿ, ಅತಿಮಹಾತೀತ ಮಹಾ ಅನಂತಕೋಟಿ ಭುವನಾದಿಭುವನಂಗಳೇನೂ ಎನಲಿಲ್ಲದಂದು, ಆದಿಮೂಲ ಆನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲ ಸ್ವಾಮಿಗತ್ತತ್ತವಾಗಿಹ ಅಖಂಡಮಹಾಮೂಲಸ್ವಾಮಿಯ ರೂಪು-ಲಾವಣ್ಯ-ಸೌಂದರ್ಯ-ಅಂಗ-ಪ್ರತ್ಯಂಗ-ಸ್ವರೂಪ-ಸ್ವಭಾವಂಗಳು ಹೇಗಿರ್ದವೆಂಬುದನು, ನಿರಂಜನಾತೀತ ಪ್ರಣವದುತ್ಪತ್ಯವನು, ಅವಾಚ್ಯ ಪ್ರಣವದುತ್ಪತ್ಯವನು ಕಲಾಪ್ರಣವದುತ್ಪತ್ಯದ ಭೇದವನು, ಅನಾದಿಪ್ರಣವದುತ್ಪತ್ಯದ ಭೇದವನು, ಅನಾದಿ ಅಕಾರ ಉಕಾರ ಮಕಾರದುತ್ಪತ್ಯವನು, ಆದಿಪ್ರಣವದುತ್ಪತ್ಯದ ಭೇದವನು, ಆದಿ ಅಕಾರ ಉಕಾರ ಮಕಾರಂಗಳುತ್ಪತ್ಯವನು, ನಾದ ಬಿಂದುಕಳೆಗಳ ಭೇದವನು, ಆ ಆದಿ ಅಕಾರ ಉಕಾರ ಮಕಾರದಲ್ಲಿ ತಾರಕಸ್ವರೂಪ ದಂಡಕಸ್ವರೂಪ ಕುಂಡಲಾಕಾರ ಅರ್ಧಚಂದ್ರಕ ದರ್ಪಣಾಕಾರ ಜ್ಯೋತಿಸ್ವರೂಪದುತ್ಪತ್ಯ ಲಯದ ಭೇದವನು, ಅದಕ್ಕೆ ಅಧಿದೇವತೆಯನು, ತಾರಕಸ್ವರೂಪ ದಂಡಕಸ್ವರೂಪ ಕುಂಡಲಾಕಾರ ಅರ್ಧಚಂದ್ರಕ ದರ್ಪಣಾಕಾರ ಜ್ಯೋತಿಸ್ವರೂಪವು ಅಕಾರ ಉಕಾರ ಮಕಾರದಲ್ಲಿ ಅಡಗಿದ ಭೇದವನು, ಅಕಾರ-ಉಕಾರ-ಮಕಾರ-ನಾದ-ಬಿಂದು-ಕಳೆ-ಪ್ರಕೃತಿ-ಪ್ರಾಣ ಆಧಾರಂಗಳ ಭೇದವನು, ನಾದಬಿಂದುಕಳೆ ಪ್ರಕೃತಿ ಪ್ರಾಣಂಗಳ ಆಧಾರಂಗಳ ಭೇದವನು, ನಾದ-ಬಿಂದು-ಕಳೆ-ಅಕಾರ-ಉಕಾರ-ಮಕಾರವು ಕೂಡಿ ಓಂಕಾರದುತ್ಪತ್ಯವನು, ಅಖಂಡ ಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವದುತ್ಪತ್ಯದ ಭೇದವನು, ಅಖಂಡ ಸ್ವಯಂಭುಲಿಂಗದುತ್ಪತ್ಯವನು, ಅನಾದಿ ಸದಾಶಿವದುತ್ಪತ್ಯದ ಭೇದವನು, ಅನಾದಿ ಈಶ್ವರತತ್ವದುತ್ಪತ್ಯವನು, ಅನಾದಿ ಮಹೇಶ್ವರತತ್ವದುತ್ಪತ್ಯದ ಭೇದವನು, ಆದಿ ಸದಾಶಿವತತ್ವದುತ್ಪತ್ಯದ ಭೇದವನು, ಆದಿ ಈಶ್ವರತತ್ವದುತ್ಪತ್ಯದ ಭೇದವನು, ಆದಿ ಮಹೇಶ್ವರತತ್ವದುತ್ಪತ್ಯದ ಭೇದವನು, ದಶಚಕ್ರದ ಉತ್ಪತ್ಯಭೇದವನು, ದಶಚಕ್ರದ ನ್ಯಾಸವನು, ದಶಚಕ್ರದ ನಿವೃತ್ತಿಯನು, ನವಪದ್ಮದ ನಿವೃತ್ತಿಯನು, ನವಪದ್ಮದ ನೆಲೆಯನು, ನವಪದ್ಮದ ನಿವೃತ್ತಿಯನು, ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವದ ತಾರಕಸ್ವರೂಪ ಕುಂಡಲಾಕಾರ ಜ್ಯೋತಿಸ್ವರೂಪದಲ್ಲಿ ಅಕಾರ ಉಕಾರ ಮಕಾರದುತ್ಪತ್ಯವನು, ಆ ಅಕಾರ ಉಕಾರ ಮಕಾರದಲ್ಲಿ ಪೃಥ್ವಿ ಅಗ್ನಿ ಋಗ್ವೇದ ಭೂಲೋಕ ಬ್ರಹ್ಮಾಂಡ ಅಂತರೀಕ್ಷ ಯಜುರ್ವೇದ ವಾಯು ಭುವರ್ಲೋಕ, ವಿಷ್ಣು ದಿವಿ ಸೂರ್ಯ ಸಾಮವೇದ ಸ್ವರ್ಗಲೋಕ ಮಹೇಶ್ವರನುತ್ಪತ್ಯ ಲಯವನು, ಆ ಅಕಾರ ಉಕಾರ ಮಕಾರ ಸಂಯುಕ್ತವಾಗಿ ಓಂಕಾರ ಉತ್ಪತ್ಯವಾದ ಭೇದವನು, ಆ ಓಂಕಾರ ತಾರಕಸ್ವರೂಪ ಕುಂಡಲಾಕಾರ ಅರ್ಧಚಂದ್ರಕ ದರ್ಪಣಾಕಾರ ಜ್ಯೋತಿಸ್ವರೂಪದ ಕಾಂತಿಯನು, ಅತಿಸೂಕ್ಷ್ಮ ಪಂಚಾಕ್ಷರಿಯ ಉತ್ಪತ್ಯವನು, ಅತಿಸೂಕ್ಷ್ಮ ಪಂಚಾಕ್ಷರಿಯ ನೆಲೆಯನು, ಅತಿಸೂಕ್ಷ್ಮ ಪಂಚಾಕ್ಷರಿಯ ನಿವೃತ್ತಿಯನು, ಅತಿಸೂಕ್ಷ್ಮ ಪಂಚಾಕ್ಷರಿಯ ಕಾಂತಿಯನು, ಚಿದಾತ್ಮ ಪರಮಾತ್ಮನುತ್ಪತ್ಯವನು, ಚಿದಾತ್ಮ ಪರಮಾತ್ಮನ ನೆಲೆಯನು, ಚಿದಾತ್ಮ ಪರಮಾತ್ಮನ ನಿವೃತ್ತಿಯನು, ಏಕಾಕ್ಷರದುತ್ಪತ್ಯವನು, ತ್ರಿಯಾಕ್ಷರದುತ್ಪತ್ಯವನು, ಸಹಸ್ರಾಕ್ಷರದುತ್ಪತ್ಯವನು, ಏಕಾಕ್ಷರದ ನೆಲೆಯನು, ತ್ರಿಯಾಕ್ಷರದ ನೆಲೆಯನು, ಸಹಸ್ರಾಕ್ಷರದ ನೆಲೆಯನು, ಏಕಾಕ್ಷರದ ನಿವೃತ್ತಿಯನು, ತ್ರಿಯಾಕ್ಷರದ ನಿವೃತ್ತಿಯನು, ಸಹಸ್ರಾಕ್ಷರದ ನಿವೃತ್ತಿಯನು, ಷಡ್ವಿಧಮುಖಂಗಳುತ್ಪತ್ಯವನು, ಷಡ್ವಿಧಮುಖಂಗಳ ನೆಲೆಯನು, ಷಡ್ವಿಧಮುಖಂಗಳ ನಿವೃತ್ತಿಯನು, ಷಡ್ವಿಧಭೂತಂಗಳುತ್ಪತ್ಯವನು, ಷಡ್ವಿಧಭೂತಂಗಳ ನೆಲೆಯನು, ಷಡ್ವಿಧಭೂತಂಗಳ ನಿವೃತ್ತಿಯನು, ಷಡ್ವಿಧಲಿಂಗದುತ್ಪತ್ಯವನು, ಷಡ್ವಿಧಲಿಂಗಗಳ ನೆಲೆಯನು, ಷಡ್ವಿಧಲಿಂಗಗಳ ನಿವೃತ್ತಿಯನು, ಷಡ್ವಿಧಕಲೆಗಳುತ್ಪತ್ಯವನು, ಷಡ್ವಿಧಕಲೆಗಳ ನೆಲೆಯನು, ಷಡ್ವಿಧಕಲೆಗಳ ನಿವೃತ್ತಿಯನು, ಷಡ್ವಿಧಸಾದಾಖ್ಯದುತ್ಪತ್ಯವನು, ಷಡ್ವಿಧಸಾದಾಖ್ಯದ ನೆಲೆಯನು, ಷಡ್ವಿಧಸಾದಾಖ್ಯದ ನಿವೃತ್ತಿಯನು, ಷಡ್ವಿಧಹಸ್ತಂಗಳುತ್ಪತ್ಯವನು, ಷಡ್ವಿಧಹಸ್ತಂಗಳ ನೆಲೆಯನು, ಷಡ್ವಿಧಹಸ್ತಂಗಳ ನಿವೃತ್ತಿಯನು, ನವಶಕ್ತಿಯ ಉತ್ಪತ್ಯವನು, ನವಶಕ್ತಿಯ ನೆಲೆಯನು, ನವಶಕ್ತಿಯ ನಿವೃತ್ತಿಯನು, ನವ ಅಧಿದೇವತೆಗಳುತ್ಪತ್ಯವನು, ನವ ಅಧಿದೇವತೆಗಳ ನೆಲೆಯನು, ನವ ಅಧಿದೇವತೆಗಳ ನಿವೃತ್ತಿಯನು, ಅಷ್ಟನಾದದುತ್ಪತ್ಯವನು, ಅಷ್ಟನಾದದ ನೆಲೆಯನು, ಅಷ್ಟನಾದದ ನಿವೃತ್ತಿಯನು, ಷಡ್ವಿಧಭಕ್ತಿಯ ಉತ್ಪತ್ಯವನು, ಷಡ್ವಿಧಭಕ್ತಿಯ ನೆಲೆಯನು, ಷಡ್ವಿಧಭಕ್ತಿಯ ನಿವೃತ್ತಿಯನು, ಷಡ್ವಿಧಪರಿಣಾಮದುತ್ಪತ್ಯವನು, ಷಡ್ವಿಧಪರಿಣಾಮದ ನೆಲೆಯನು, ಷಡ್ವಿದ ಪರಿಣಾಮದ ನಿವೃತ್ತಿಯನು, ಚತುರ್ವೇದದುತ್ಪತ್ಯವನು, ಚತುರ್ವೇದದ ನೆಲೆಯನು, ಚತುರ್ವೇದದ ನಿವೃತ್ತಿಯನು, ಅಜಪೆ ಗಾಯತ್ರಿ ಉತ್ಪತ್ಯವನು, ಅಜಪೆ ಗಾಯತ್ರಿ ನೆಲೆಯನು, ಅಜಪೆ ಗಾಯತ್ರಿಯ ನಿವೃತ್ತಿಯನು, ಷಡ್ವಿಧ ಚಕ್ರಾರ್ಪಣದ ಭೇದವನು, ಮಿಶ್ರಾರ್ಪಣ ಷಡುಸ್ಥಲ ಭೇದವನು, ಇಷ್ಟ-ಪ್ರಾಣ-ಭಾವಲಿಂಗದ ಭೇದವನು, ಇಷ್ಟ-ಪ್ರಾಣ-ಭಾವಲಿಂಗದಲ್ಲಿ ತಾರಕಸ್ವರೂಪ ದಂಡಕಸ್ವರೂಪ ಕುಂಡಲಾಕಾರ ಅರ್ಧಚಂದ್ರಕ ದರ್ಪಣಾಕಾರ ಜ್ಯೋತಿಸ್ವರೂಪವು ಅಡಗಿಹ ಭೇದವನು ಅಕಾರ ಉಕಾರ ಮಕಾರ ಈ ಮೂರು ಕೂಡಿ ಏಕಾರ್ಥವಾಗಿ ಅಖಂಡಜ್ಯೋತಿರ್ಮಯಲಿಂಗವಾದ ಭೇದವನು. ಆತ್ಮನುತ್ಪತ್ಯವನು, ಆತ್ಮನ ನೆಲೆಯನು, ಆತ್ಮನ ನಿವೃತ್ತಿಯನು, ಪೃಥ್ವಿ ಅಪ್ಪು ತೇಜ ವಾಯು ಆಕಾಶದ ನೆಲೆಯನು, ಪೃಥ್ವಿ ಅಪ್ಪು ತೇಜ ವಾಯು ಆಕಾಶದ ನಿವೃತ್ತಿಯನು, ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನುತ್ಪತ್ಯವನು, ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನ ನೆಲೆಯನು, ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನ ನಿವೃತ್ತಿಯನು, ಷಡ್ವಿಧ ಅರ್ಪಿತ ಅವಧಾನದ ಭೇದವನು, ನಿರಾಳ ದಶಚಕ್ರಂಗಳ ಭೇದವನು, ನಿರಾಮಯ ಷಟ್ಸ್ಥಲದ ಭೇದವನು, ನಿರಂಜನ ದಶಚಕ್ರಂಗಳ ಭೇದವನು, ನಿರಾಮಯಾತೀತ ಷಟ್ಸ್ಥಲದ ಭೇದವನು, ಷಟ್ಸ್ಥಲ ಬ್ರಹ್ಮದುತ್ಪತ್ಯವನು, ಆ ಷಟ್ಸ್ಥಲಬ್ರಹ್ಮದಲ್ಲಿ ಮೂವತ್ತಾರು ತತ್ತ್ವಂಗಳುತ್ಪತ್ಯವನು, ಷಡುಶಕ್ತಿಗಳುತ್ಪತ್ಯವನು, ಷಡಂಗಂಗಳುತ್ಪತ್ಯವನು, ಶಿವಶಕ್ತಿಗಳುತ್ಪತ್ಯವನು, ಪ್ರೇರಕಾವಸ್ಥೆಯ ದರ್ಶನದ ಭೇದವನು, ಮಧ್ಯಾವಸ್ಥೆಯ ದರ್ಶನದ ಭೇದವನು, ಕೆಳಗಾದವಸ್ಥೆಯ ದರ್ಶನವನು, ಮೇಲಾದವಸ್ಥೆಯ ದರ್ಶನದ ಭೇದವನು, ಕೇವಲಾವಸ್ಥೆಯ ದರ್ಶನವನು, ಸಕಲಾವಸ್ಥೆಯ ದರ್ಶನದ ಭೇದವನು, ಶುದ್ಧಾವಸ್ಥೆಯ ದರ್ಶನದ ಭೇದವನು, ಪಂಚಮಲಂಗಳ ದರ್ಶನವನು, ನಿರ್ಮಲಾವಸ್ಥೆಯ ದರ್ಶನದ ಭೇದವನು, ನಿರಾಳವಸ್ಥೆಯ ದರ್ಶನವನು, ನಿರಂಜನಾವಸ್ಥೆಯ ದರ್ಶನದ ಭೇದವನು, ಜ್ಞಾನವಸ್ಥೆಯ ದರ್ಶನವನು, ಶಿವಾವಸ್ಥೆಯ ದರ್ಶನದ ಭೇದವನು, ಮಂತ್ರಾಧ್ವದುತ್ಪತ್ಯವನು, ಮಂತ್ರಾಧ್ವದ ವರ್ತನೆಯನು, ಪದಾಧ್ವದುತ್ಪತ್ಯವನು, ಪದಾಧ್ವದ ವರ್ತನೆಯನು, ವರ್ಣಾಧ್ವದುತ್ಪತ್ಯವನು, ವರ್ಣಾಧ್ವದ ವರ್ತನೆಯನು, ಭುವನಾಧ್ವದುತ್ಪತ್ಯವನು, ಭುವನಾಧ್ವದ ವರ್ತನೆಯನು, ತತ್ವಾಧ್ವದುತ್ಪತ್ಯವನು, ತತ್ವಾಧ್ವದ ವರ್ತನೆಯನು, ಕಲಾಧ್ವದುತ್ಪತ್ಯವನು, ಕಲಾಧ್ವದ ವರ್ತನೆಯನು, ಗುರುಲಿಂಗಜಂಗಮವೆಂದು ಸುಳಿವ ಅಣ್ಣಗಳ, ತಾಮಸನಿರಸನವ ಮಾಡಿ ನುಡಿದ ವಚನದ ಭೇದವನು, ತತ್‍ಪದ ತ್ವಂಪದ ಅಸಿಪದಂಗಳ ಭೇದವನು, ಆ ತ್ವಂಪದ ತತ್ಪದ ಅಕಾರ ಉಕಾರ ಮಕಾರಂಗಳಲ್ಲಿ ಅಡಗಿಹ ಭೇದವನು, ಆ ಆಕಾರ ಉಕಾರ ಮಕಾರ ಏಕವಾಗಿ ಷಟ್ಸ್ಥಲಬ್ರಹ್ಮವಾದ ಭೇದವನು, ವಚನಾನುಭಾವದ ಭೇದವನು ಅರಿಯೆನು, ಎಲೆ ಸದ್ಗುರುಸ್ವಾಮಿ ನಿರೂಪಿಸೆಂದು, ಆ ಶಿಷ್ಯನು ಬಿನ್ನವಿಸಲು ಆ ಸದ್ಗುರುಸ್ವಾಮಿ ನಿರೂಪಿಸಿದ ವಚನವೆಂತೆಂದಡೆ : ಅನಂತಕೋಟಿ ಮಹಾಬ್ರಹ್ಮಾಂಡ ಮೊದಲಾಗಿ ಅನಂತಕೋಟಿ ಪ್ರಣವಬ್ರಹ್ಮಾಂಡ ಕಡೆಯಾಗಿ ಅನಂತಕೋಟಿ ಅತಿಮಹಾಬ್ರಹ್ಮಾಂಡಂಗಳೇನೂಯೇನೂ ಎನಲಿಲ್ಲದಂದು, ಅನಂತಕೋಟಿ ಮಹಾಬ್ರಹ್ಮಾಂಡಂಗಳನೊಳಕೊಂಡು ಇನ್ನೂರಿಪ್ಪತ್ನಾಲ್ಕು ಮಹಾಭುವನ ಮೊದಲಾಗಿ ಅತಿಮಹಾಭುವನಂಗಳು ಅತಿಮಹಾತೀತವೆಂಬ ಮಹಾಭುವನಂಗಳು ಕಡೆಯಾಗಿ ಅನಂತಕೋಟಿ ಅತಿಮಹಾತೀತ ಭುವನಂಗಳು ಏನೂಯೇನೂ ಇಲ್ಲದಂದು ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಮಹಾಘನವ ಮೀರಿದತ್ತತ್ತವಾಗಿಹ ಅಖಂಡ ಅಖಂಡಮಹಾಮೂಲಸ್ವಾಮಿಯ ಅಂಗ-ಪ್ರತ್ಯಂಗ-ಸ್ವರೂಪ-ಸ್ವಭಾವಂಗಳನರಿಯದೆ ಅನಂತಕೋಟಿ ರುದ್ರ ಈಶ್ವರ ಸದಾಶಿವ ಬ್ರಹ್ಮ ನಾರಾಯಣರಳಿದುಳಿದರು ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಅಂಗ ಪ್ರತ್ಯಂಗ ಸ್ವರೂಪ-ಸ್ವಭಾವಂಗಳನರಿಯದೆ ಅನಂತಕೋಟಿ ದೇವರ್ಕಳಳಿದರು ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಅಂಗ ಪ್ರತ್ಯಂಗ ಸ್ವರೂಪ ಸ್ವಭಾವಂಗಳನರಿಯದೆ ಅನಂತಕೋಟಿ ವೇದಂಗಳು, ಅನಂತಕೋಟಿ ಮುನಿಗಳು, ಅನಂತಕೋಟಿ ಲೋಕಾದಿಲೋಕಂಗಳೆಲ್ಲ ಪ್ರಳಯಕ್ಕೊಳಗಾದರು ನೋಡಾ. ಆ ಅಖಂಡಮಹಾಮೂಲಸ್ವಾಮಿಯ ಅಂಗ ಪ್ರತ್ಯಂಗ ಸ್ವರೂಪ ಸ್ವಭಾವಂಗಳ ಈ ಲೋಕದ ಜಡರುಗಳೆತ್ತ ಬಲ್ಲರಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆಧಾರದಲ್ಲಿ ಸಾಮವೇದ, ಸ್ವಾಧಿಷಾ*ನದಲ್ಲಿ ಅಥರ್ವಣವೇದ. ಮಣಿಪೂರಕದಲ್ಲಿ ಯಜುರ್ವೇದ, ಅನಾಹತದಲ್ಲಿ ಋಗ್ವೇದ. ಆಜ್ಞೆಯಲ್ಲಿ ಉತ್ತರ ಖಂಡಣೆ, ವಿಶುದ್ಧಿಯಲ್ಲಿ ಪ್ರಣಮದ ಲಕ್ಷಿತ. ಇಂತೀ ವೇದವೇದ್ಯರು ನೋಡಾ ಎಮ್ಮವರು. ಲಲಾಮಭೀಮಸಂಗಮೇಶ್ವರಲಿಂಗವನೊಳಕೊಂಡ ಶರಣರಂಗ.
--------------
ವೇದಮೂರ್ತಿ ಸಂಗಣ್ಣ
ಭವರೋಗ ಮೊದಲಾದ ಎಲ್ಲಾ ರೋಗಂಗಳಿಗೆಯೂ ಶಿವಲಿಂಗ ಪ್ರಸಾದವಲ್ಲದೆ ಮತ್ತೇನೂ ಇಲ್ಲವೆಂದುದು ವೇದ. ದ್ವಿಪಾದಿಗಳು ಚತುಃಪಾದಿಗಳು ಮೊದಲಾದ ಸಕಲಪ್ರಾಣಿಗಳೆಲ್ಲವಕ್ಕೆ ಇದೇ ಔಷಧಿಯೆಂದುದು ಯಜುರ್ವೇದ. ಗಾಮೇಸ್ವಾಯ ಪುರುಹಾಯ ಭೇಷಜಂ ಅಧೋಲಿಸ್ಮಭ್ಯಂ | ಭೇಷಜಂ ಸುಖೇಷಜಂ ಯದಿ ಸತಿ ಸುಗಮ್ಯೇಷ್ಯಾಂ | ಅವಾಂಬ ರುದ್ರಮದಿ ಮಹೀಯದ ದೇವಂ ತ್ರ್ಯಂಬಕ || ಎಂದುದು ಶ್ರುತಿ, ಬಸವಪ್ರಿಯ ಕೂಡಲಚೆನ್ನಸಂಗಾ.
--------------
ಸಂಗಮೇಶ್ವರದ ಅಪ್ಪಣ್ಣ
ಐವತ್ತೆರಡು ಅಕ್ಷರಕ್ಕೆ ಈ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಅಜಪೆ ಗಾಯತ್ರಿ ಪ್ರಾಣಾಯಾಮನಕ್ಕೆ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಅನೇಕ ವೇದಾಗಮ ಶಾಸ್ತ್ರಪುರಾಣಂಗಳಿಗೆ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಮೊದಲಾದ ಸಮಸ್ಥ ದೇವರ್ಕಳಿಗೆ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಪ್ರಣವವೇ ಪರಂಜ್ಯೋತಿ, ಪ್ರಣವವೇ ಪರಮಾನಂದ, ಪ್ರಣವವೇ ಪರಬ್ರಹ್ಮ, ಪ್ರಣವವೇ ಅಖಂಡ ಲೋಕಾದಿಲೋಕಕ್ಕೆ ಮೂಲಪ್ರಣವ ಓಂ ನಮಃಶಿವಾಯ ಪ್ರಣವ. ಓಂ ನಮಃ ಶಿವಾಯ ಪ್ರಣವ ಸಪ್ತಕೋಟಿ ಮಂತ್ರಗಳ ಸಾರ ; ಅನಂತಕೋಟಿ ವೇದಾಗಮಶಾಸ್ತ್ರಪುರಾಣಂಗಳ ಸಾರ. ಇದಕ್ಕೆ ಈಶ್ವರ ಉವಾಚ : ``ಸಪ್ತಕೋಟಿ ಮಹಾಮಂತ್ರ ಚಿತ್ತವ್ಯಾಕುಲ ಕಾರಣಂ | ಏಕಯೇಕಾಕ್ಷರಂ ದೇವೀ ತೂರ್ಯಾತೀತಂ ಮನೋಲಯಃ || ಸಪ್ತಕೋಟಿ ಮಹಾಮಂತ್ರಂ ಉಪಮಂತ್ರಂ ಸನೇಕತಾ | ಓ ಮಿತ್ಯೇಕಾಕ್ಷರಂ ಮೂಲಂ ಇತಿ ಭೇದಂ ವರಾನನೇ ||'' ಇಂತೆಂದುದಾಗಿ, ಇದಕ್ಕೆ ಚಿತ್ಪಿಂಡಾಗಮೇ : ``ಓಂಕಾರೇ ಬೀಜರೂಪಂ ಚ ವೃಕ್ಷಂ ವಿಶ್ವವಿಶಾಲಯೋಃ | ಓಮಿತ್ಯೇಕಾಕ್ಷರಂ ಬ್ರಹ್ಮ ಓಂಕಾರೇ ವಿಶ್ವಮೂರ್ತಯೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಅಕಾರೋಕಾರ ಸಂಯೋಗ ಓಂಕಾರಃ ಸ್ವರ ಉಚ್ಯತೇ | ಓಮಿತ್ಯೇಕಾಕ್ಷರಂ ಬ್ರಹ್ಮ ವದಂತಿ ಶಿವಯೋಗಿನಃ ||'' ಇಂತೆಂದುದಾಗಿ, ಇದಕ್ಕೆ ಮಹಾಗಮಸಾರೇ : ``ಓಂಕಾರೇ ತ್ರಿಗುಣಾತ್ಮಾ ಚ ತದರ್ಭೇತಿ ತ್ರಿಯಕ್ಷರಂ | ಅಕಾರೇ ಚ ಉಕಾರೇ ಚ ಮಕಾರೇ ಚ ತ್ರಿಯಕ್ಷರಂ || ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂತು ಕಲಾಚೈವ ನಾದಬಿಂದುಕಲಾತ್ಮನೇ | ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ ||'' ಇಂತೆಂದುದಾಗಿ, ಇದಕ್ಕೆ ಗೀತಸಾರೇ : ``ಪೃಥಿವಿಶ್ಚಾಗ್ನಿಶ್ಚ ಋಗ್ವೇದೋ ಭೂರಿತ್ಯೇವ ಪಿತಾಮಹಃ | ಅಕಾರೇ ತು ಲಯಂ ಪ್ರಾಪ್ತೇ ಪ್ರಥಮೇ ಪ್ರಣವಾಂಶಿಕೈಃ || ಅಂತರಿಕ್ಷಂ ಯಜುರ್ವೇದಂ ಭುಜೋವಿಷ್ಣುಃ ಸನಾತನವಃ | ಉಕಾರೇತು ಲಯಂ ಪ್ರಾಪ್ತೇ ದ್ವಿತಿಯೈೀ ಪ್ರಣವಾಂಶಿಕೇ || ದಿವಿ ಸೂರ್ಯಂ ಸಾಮವೇದಸ್ಸ್ಯೋರಿತ್ಯೇವ ಮಹೇಶ್ವರಃ | ಮಕಾರೇ ತು ಲಯಂ ಪ್ರಾಪ್ತೇ ತೃತೀಯೇ ಪ್ರಣವಾಂಶಿಕೇ | ಅಕಾರೇ ಚ ಉಕಾರೇ ಚ ಮಕಾರೇ ಚ ತ್ರಿಯಕ್ಷರಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಒಂಕಾರ ಪ್ರಭವಾತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಓಮಿತ್ಯೇಕಾಕ್ಷರಂ ಬ್ರಹ್ಮ ಹೃತ್ಪದ್ಮೇಪಿ ವ್ಯವಸ್ಥಿತಂ | ಸದ್ಯೋದಹತಿ ಪಾಪಾನಿ ದೀರ್ಘೋ ಮೋಕ್ಷಂ ಪ್ರಯಚ್ಛತಿ ||'' ಇಂತೆಂದುದಾಗಿ, ಇದಕ್ಕೆ ಪ್ರಣವೋಪನಿಷತ್ : ಅಕಾರವೆಂಬ ಪ್ರಣವದಲ್ಲಿ - ``ಅಗ್ನಿಶ್ಚ ಋಗ್ವೇದೋ ಭವತಿ | ಒಂ ರುದ್ರೋ ದೇವತಾ | ಅಕಾರೇಚ ಲಯಂ ಪ್ರಾಪ್ತೇ ಪ್ರಥಮಂ ಪ್ರಣವಾಂಶಿಕೇ ||'' ಉಕಾರವೆಂಬ ಪ್ರಣಮದಲ್ಲಿ- ``ಅಂತರಿಕ್ಷಜುರ್ವೇದಾದ್ಭವತಿ | ಓಮೀಶ್ವರೋ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಿಕೇ ||'' ಮಕಾರವೆಂಬ ಪ್ರಣವದಲ್ಲಿ- ``ವಿದ್ಯೇಸ್ಸಾಮವೇದಾ ಭವತಿ | ಓಂ ಸದಾಶಿವೋ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ತೃತೀಯಂ ಪ್ರಣವಾಂಶಿಕೇ || ಅಕಾರೇ ಚ ಉಕಾರೇ ಚ ಮಕಾರೇ ಚ ತೃತೀಯಕಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಓಂಕಾರಪ್ರಭವಾ ವೇದಾ ಓಂಕಾರ ಪ್ರಭವಾತ್ಸ್ವರಾಃ | ಓಂಕಾರಪ್ರಭವಾತ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರನ್ಯತ್ರ ನ ಭವೇತ್ | ಪ್ರಣವಂ ಹಿ ಪರಂ ಬ್ರಹ್ಮಂ ಪ್ರಣವಂ ಪರಮಂ ಪದಂ | ಓಂಕಾರಂ ನಾದರೂಪಂ ಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಪ್ರಣಮಂ ನಕಾರರೂಪಂ ಚ | ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ | ಪ್ರಣವಂ ಮಕಾರರೂಪಕಂ || ಪ್ರಣವಂ ಶಿಕಾರರೂಪಂ ಚ | ಪ್ರಣವಂ ವಕಾರರೂಪಕಂ | ಪ್ರಣವಂ ಯಕಾರರೂಪಂ ಚ | ಪ್ರಣವಂ ಷಡಕ್ಷರಮಯಂ | ಇತಿ ಪ್ರಣವ ವಿಜ್ಞೇಯಂ | ಗುಹ್ಯಾದ್ಗುಹ್ಯಂ ವರಾನನೇ ||'' ಇಂತೆಂದುದಾಗಿ, ಇದಕ್ಕೆ ಯರ್ಜುವೇದೋಪನಿಷತ್ : ``ಓಮಿತ್ಯೇಕಾಕ್ಷರಂ ಬ್ರಹ್ಮ ನಮಃ ಶಿವಾಯೇತ್ಯ ಜಾಯತ ||'' ಇಂತೆಂದುದಾಗಿ, ಇದಕ್ಕೆ ಶ್ರೀರುದ್ರೇ : ``ಓಂ ನಮಃ ಶಿವಾಯ ಚ ಶಿವ ತರಾ ಯ ಚ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದೇ : ``ಓಂಕಾರೋಭ್ಯೋ ಜಗಕ್ಷೇತ್ರಾ | ಯಜಿತಾಂ ಪತಯೇ ನಮೋ ನಮೋ | ಅಕಾರೇಭ್ಯೋ ಬ್ರಹ್ಮಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ಉಕಾರೇಭ್ಯೋ ವಿಷ್ಣುಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ಮಕಾರೇಭ್ಯೋ ರುದ್ರಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ಓಂಕಾರೇಭ್ಯೋ ಅಧ್ವಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ನಮಃ ಶಿವಾಯೇಭ್ಯೋ ಸರ್ವ | ಕ್ಷೇತ್ರಾನಾಂ ಪತಯೇ ನಮೋ ನಮೋ ||'' ಇಂತೆಂದುದಾಗಿ, ಪ್ರಣವವ ಬಲ್ಲಾತನೆ ಬ್ರಾಹ್ಮಣನು. ಪ್ರಣವವ ಬಲ್ಲಾತನೆ ವೇದಾಧ್ಯಾಯಿ. ಪ್ರಣವವ ಬಲ್ಲಾತನೆ ಆಗಮಿಕನು. ಪ್ರಣವವ ಬಲ್ಲಾತನೆ ಶಾಸ್ತ್ರಿಕನು. ಪ್ರಣವವ ಬಲ್ಲಾತನೆ ಪುರಾಣಿಕನು. ಪ್ರಣವವ ಬಲ್ಲಾತನೆ ದಿವ್ಯಯೋಗಿ. ಪ್ರಣವವ ಬಲ್ಲಾತನೆ ನಿಜಾನಂದಯೋಗಿ. ಪ್ರಣವವ ಬಲ್ಲಾತನೆ ಪರಮಜ್ಞಾನಿ. ಪ್ರಣವವ ಬಲ್ಲಾತನೆ ಪರಮಯೋಗಿ. ಪ್ರಣವವ ಬಲ್ಲಾತನೆ ಪರಮಾನಂದಯೋಗಿ. ಪ್ರಣವವ ಬಲ್ಲಾತನೆ ನಿಜಯೋಗಿ. ಪ್ರಣವವ ಬಲ್ಲಾತನೆ ಶಿವಯೋಗಿ. ಪ್ರಣವವ ಬಲ್ಲಾತನೆ ಶಿವಾನಂದಯೋಗಿ. ಪ್ರಣವವ ಬಲ್ಲಾತನೆ ಜ್ಞಾನಯೋಗಿ. ಪ್ರಣವವ ಬಲ್ಲಾತನೆ ಜ್ಞಾನಾನಂದಯೋಗಿ. ಪ್ರಣವವ ಬಲ್ಲಾತನೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಋಗ್ವೇದ ಕಾಣವಯ್ಯಾ, ಸದ್ಯೋಜಾತನನು. ಯಜುರ್ವೇದ ಕಾಣವಯ್ಯಾ, ವಾಮದೇವನನು. ಸಾಮವೇದ ಕಾಣವಯ್ಯಾ, ತತ್ಪುರುಷನನು. ಅಥರ್ವಣವೇದ ಕಾಣವಯ್ಯಾ, ಅಘೋರನಾಥನು. ಅತೀತಃ ಪಂಥಾನಂ ತವ ಚ ಮಹಿಮಾ ವಾಙ್ಮನಸಯೋ | ರತದ್ವ್ಯಾತ್ಯೇಯಂ ಚಕಿತಮಭಿದತ್ತೇ ಶೃತಿರಪಿ | ಸ ಕಸ್ಯ ಸ್ತೋತವ್ಯಃ ಕತಿ ವಿಧಗುಣಃ ಕಸ್ಯ ವಿಷಯಃ | ಪದೇ ತ್ವರ್ವಾಚೀನೇ ಪತತಿ ನ ಮನಃ ಕಸ್ಯ ನ ವಚಃ || ಎಂದುದಾಗಿ, ಚತುರ್ಮುಖ ಬ್ರಹ್ಮಂಗೆ ಅಗಮ್ಯ ದೇವನಾದನೆಂದು, ಅನಂತವೇದ ಕಾಣಲಾರವು, ಈಶಾನ್ಯ ಸಕಳೇಶ್ವರದೇವನ.
--------------
ಸಕಳೇಶ ಮಾದರಸ
ಇನ್ನಷ್ಟು ... -->