Some error occurred
ಅಥವಾ

ಒಟ್ಟು 16 ಕಡೆಗಳಲ್ಲಿ , 11 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು11121111322ಒಟ್ಟು36ಆದಯ್ಯ32ಉರಿಲಿಂಗಪೆದ್ದಿ92ಗಣದಾಸಿವೀರಣ್ಣ 7ಚನ್ನಬಸವಣ್ಣ1ಬಸವಣ್ಣ41ಬಾಲಸಂಗಯ್ಯಅಪ್ರಮಾಣದೇವ137ಬೊಕ್ಕಸದಚಿಕ್ಕಣ್ಣ 22ಶಾಂತವೀರೇಶ್ವರ25ಷಣ್ಮುಖಸ್ವಾಮಿ53ಸಂಗಮೇಶ್ವರದಅಪ್ಪಣ್ಣ 4ಹೇಮಗಲ್ಲಹಂಪ 024
ಮಿಂಚುಬುಳು ಒಮ್ಮೆ ಪ್ರಚಂಡ ತೇಜೋಮಯ ಸೂರ್ಯಂಗೆ ಸರಿಯಾದಂದು, ಹರಿ ಹರಂಗೆ ಸರಿಯಹನು. ಕಹಿಬೇವಿನ ಕೊರಡು ಬಾವನ್ನ ಶ್ರೀಗಂಧಕ್ಕೆ ಸರಿಯಾದಂದು, ವಿರಿಂಚಿ ಗಿರೀಶಂಗೆ ಸರಿಯಹನು. ಅಜ್ಞಾನ ಸುಜ್ಞಾನಕ್ಕೆ ಸರಿಯಾದಂದು, ವಜ್ರಪಾಣಿ ಮೊದಲಾದ ದೇವ ದಾನವ ಮಾನವರು ಶೂಲಪಾಣಿಗೆ ಸರಿಯಹರು. ಏನ ಹೇಳುವೆ, ಅಜ್ಞಾನಿ ಜನರ ಅಜ್ಞಾನಪ್ರಬಲ ಚೇಷ್ಟೆಯನು ? ಅದೆಂತೆಂದಡೆ: ಖದ್ಯೋತೋಯದಿ ಚಂಡಭಾನು ಸದೃಶಸ್ತುತ್ಯೋ ಹರಿಃ ಶಂಭುನಾ ಕಿಂ ಕಾಷ್ಠಂ ಹರಿಚಂದನೇನ ಸದೃಶಂ ತುಲ್ಯೋಹಮೀಶೇನ ಚ | ಅಜ್ಞಾನಂ ಯದಿ ವೇದನೇನ ಸದೃಶಂ ದೇವೇನ ತುಲ್ಯೋ ಜನಾ ಕಿಂ ವಕ್ಷ್ಯೇ ಸುರಪುಂಗವಾ ಅಹಮಹೋಮೋಹಸ್ಯದುಶ್ಚೇಷ್ಟಿತಂ ನಿಮಗೆ ಸರಿಯೆಂಬವರಿಗೆ ನರಕವೆ ಗತಿಯಯ್ಯಾ, ಬಸವಪ್ರಿಯ ಕೂಡಲಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಗುರುಭಕ್ತರಾದವರು ತ್ರಿಕಾಲದಲ್ಲಿ ಹರಸ್ಮರಣೆಯಲ್ಲದೆ ಹರಿಯೆಂದು ನುಡಿಯಲಾಗದು. ಹರಿ ಶಬ್ದವ ಕೇಳಲಾಗದು, ಹರಿಯ ರೂಪವ ನೋಡಲಾಗದು. ಅದೇನು ಕಾರಣವೆಂದೊಡೆ : ಪೂರ್ಣಾಯುಷ್ಯವು, ವಿಮಲಮತಿಯು, ಸತ್ಕೀರ್ತಿಯು, ಮಹಾಬಲವು, ಕೆಟ್ಟು ಹೋಗುತ್ತಿಹುದು ನೋಡಾ ! ಅದೆಂತೆಂದೊಡೆ :ಬ್ರಹ್ಮಾಂಡಪುರಾಣೇ ``ನ ಪ್ರದೋಷೇ ಹರಿಂ ಪಶ್ಯೇತ್ ಯದಿ ಪಶ್ಯೇತ್ ಪ್ರಮಾದತಃ | ಚತ್ವಾರಿ ತಸ್ಯ ನಶ್ಯಂತಿ ಆಯುಃ ಪ್ರಜ್ಞಾ ಯಶೋ ಬಲಮ್ ||'' ಎಂದುದಾಗಿ, ಸತ್ತು ಹುಟ್ಟುವ ಹರಿಗೆ ಇನ್ನೆತ್ತಣ ದೇವತ್ವ ಹೇಳಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಹರಿಗೆ ಇಂದ್ರನೀಲಲಿಂಗ, ಬ್ರಹ್ಮಂಗೆ ಶೈಲಲಿಂಗ, ಶಕ್ರಂಗೆ ಮಣಿಮಯಲಿಂಗ, ಸೂರ್ಯಂಗೆ ತಾಮ್ರಲಿಂಗ, ಸೋಮಂಗೆ ಮೌಕ್ತಿಕಲಿಂಗ, ಕುಬೇರಂಗೆ ಹೇಮಲಿಂಗ, ನಾಗರ್ಕಳಿಗೆ ಪವಳದ ಲಿಂಗ, ಅಷ್ಟವಸುಗಳಿಗೆ ಕಂಚಿನ ಲಿಂಗ, ವರುಣಂಗೆ ರತ್ನದ ಲಿಂಗ, ನೈರುತ್ಯಂಗೆ ಪರುಷದ ಲಿಂಗ, ವಾಯವ್ಯಗೆ ಹಿತ್ತಾಳಿಯ ಲಿಂಗ, ಕಾಮಂಗೆ ಕುಸುಮ ಲಿಂಗ, ಋಷಿಗಳಿಗೆ ಪರ್ವತದ ಲಿಂಗ, ಅಸುರರಿಗೆ ಕಬ್ಬುನದ ಲಿಂಗ, ದಶರಥಗೆ ಸುವರ್ಣದ ಲಿಂಗ, ಅಶ್ವಿನಿಗೆ ಕರಪಾತ್ರೆಯ ಲಿಂಗ, ಅಂತಕಂಗೆ ಪರಿಪರಿಯ ಲಿಂಗ, ಗಾಯತ್ರಿಗೆ ಮರಕತದ ಲಿಂಗ, ಚಾಮುಂಡಿಗೆ ವಜ್ರದ ಲಿಂಗ, ಭೂದೇವಿಗೆ ಪಚ್ಚದ ಲಿಂಗ, ದುರ್ಗಿಗೆ ಕನಕದ ಲಿಂಗ, ಸಪ್ತಮಾತೃಕೆಯರಿಗೆ ಮಳಲ ಲಿಂಗ, ಇದೆಂತೆಂದಡೆ: ಇಂದ್ರನೀಲಮಯಂ ಲಿಂಗಂ ವಿಷ್ಣುಃ ಪೂಜಯತೇ ಸದಾ ವಿಷ್ಣುತ್ವಂ ಪ್ರಾಪ್ಯತೇ ತೇನ ಸಾದ್ಭುತೈಕಂ ಸನಾತನಂ ಬ್ರಹ್ಮಾ ಪೂಜಯತೇ ನಿತ್ಯಂ ಲಿಂಗಂ ಶೈಲಮಯಂ ಶುಭಂ ತಸ್ಯ ಸಂಪೂಜನಾದೇವ ಪ್ರಾಪ್ತಂ ಬ್ರಹ್ಮತ್ವಮುತ್ತಮಂ ಶಕ್ರೋ[s]ಪಿ ದೇವ ರಾಜೇಂದ್ರೋ ಲಿಂಗಂ ಮೃಣ್ಮಯಂ ಶುಭಂ ಭಕ್ತ್ಯಾ ಪೂಜಯತೇ ನಿತ್ಯಂ ತೇನ ಶಕ್ರತ್ವಮಾಪ್ನುಯಾತ್ ತಾಮ್ರಲಿಂಗಂ ಸದಾಕಾಲಂ ಭಕ್ತ್ಯಾ ದೇವೋ ದಿವಾಕರಃ ತ್ರಿಕಾಲಂ ಯಜತೇ ತೇನ ಪ್ರಾಪ್ತಂ ಸೂರ್ಯತ್ವಮುತ್ತಮಂ ಮುಕ್ತಾಫಲಮಯಂ ಲಿಂಗಂ ಸೋಮಃ ಪೂಜಯತೇ ಸದಾ ತೇನ ಸೋಮೇನ ಸಂಪ್ರಾಪ್ತಂ ಸೋಮತ್ವಂ ಸತತೋಜ್ವಲಂ ಲಿಂಗ ಹೇಮಮಯಂ ಕಾಂತಂ ಧನದೋ[s]ರ್ಚಯತೇ ಸದಾ ತೇನ ಸಾಧನತೋ ದೇವಃ ಧನದತ್ವಮವಾಪ್ತವಾನ್ ವಸವಃ ಕಾಂಸ್ಯಕಂ ಲಿಂಗಂ ಪೂಜ್ಯ ಕಾಮಾನವಾಪ್ನುಯಾತ್ ನಾಗಾಃ ಪ್ರವಾಳಜಂ ಲಿಂಗಂ ಪೂಜ್ಯ ರಾಜ್ಯಾನಿ ಲೇಬ್ಥಿರೇ ಲಿಂಗಂ ರತ್ನಮಯಂ ಚಾರು ವರುಣೋಡಿರ್ಚಯತೇ ಸದಾ ತೇನ ತದ್ವರುಣತ್ವಂ ಹಿ ಪ್ರಾಪ್ತಂ ಭದ್ರಸಮನ್ವಿತಂ ಲಿಂಗಮಧ್ಯೇ ಜಗತ್ಸರ್ವಂ ಸರ್ವಂ ಲಿಂಗೇ ಪ್ರತಿಷ್ಠಿತಂ ತಸ್ಮಾತ್ ಸಂಪೂಜಯೇಲ್ಲಿಂಗಂ ಯದಿ ಚೇತ್ಸಿದ್ಧಿಮಾತ್ಮನಃ ಐವಂ ದೇವಾಶ್ಚ ಗಂಧರ್ವಾ ಯಕ್ಷೋರಗರಾಕ್ಷಸಾಃ ಪೂಜಯಂತಿ ಸದಾಕಾಲಮೀಶಾನಂ ಸುರನಾಯಕಂ ಬ್ರಹ್ಮಾವಿಷ್ಣುಸ್ತಥಾ ಶಕ್ರೋ ಲೋಕಪಾಲಾಶ್ಚ ದೇವತಾಃ ಲಿಂಗಾರ್ಚನರತಾ ಹ್ಯೇತೇ ಮಾನುಷೇಷು ಚ ಕಾ ಕಥಾ ? ಇಂತೆಂದುದಾಗಿ ಸುರಪ ಹರಿ ವಿರಂಚಿ ಗಂಧರ್ವ ಯಕ್ಷ ರಾಕ್ಷಸ ಋಷಿ ದೇವತೆಗಳೆಲ್ಲರೂ ಲಿಂಗವ ಪೂಜಿಸಿ ಇಷ್ಟಕಾಮ್ಯಸಿದ್ಧಿಯ ಪಡೆದು ಭವಭಾರಿಗಳಾದರು. ಸೌರಾಷ್ಟ್ರ ಸೋಮೇಶ್ವರನ ಶರಣರು ಫಲಪದಂಗಳ ಮೀರಿ ಅರಿಕೆಯರತು ಬಯಕೆ ಬರತು ಹುಟ್ಟುಗೆಟ್ಟು ಭವಹಿಂಗಿ ಅಭಂಗರಾದರು
--------------
ಆದಯ್ಯ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ಭಕ್ತಾಂಗನೆಯರು ತಮ್ಮ ಲಿಂಗಶರೀರಂಗ? ಮಧ್ಯದಲ್ಲಿ ಹರಭಕ್ತಿಗೆ ಹೊರಗಾದ ಅಸು[ರಾಂಶಿ] ಕವಪ್ಪ ಹಸುರು ಹಚ್ಚೆಗಳೆಂಬ ಪತಿತ ಲೇಖನ ಇವಾದಿಯಾದ ಅನ್ಯ ಚಿಹ್ನೆಗಳನು ಅಂಕಿತಧಾರಣ ಲೇಖನಂಗ? ಮಾಡಿಕೊಂಡು ಮತ್ತೆ ತಾವು ಲಿಂಗವನರ್ಚಿಸಿ ಭಕ್ತರಾದೆವೆಂಬ ಈ ಭಂಗಮಾರಿ ಹೊಲೆಜಂಗುಳಿಗಳಿಗೆ ಉಪದೇಶವ ಕೊಟ್ಟ ಗುರು, ಪ್ರಸಾದ ನೀಡುವ ಜಂಗಮ, ಅವರಗೊಡಗೂಡಿಕೊಂಡು ನಡೆವ ಭಕ್ತತತಿ ಈ ಚತುರ್ವಿಧರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರ ವೇಳೆ ಬಂದು ನರಕವಿಪ್ಪತ್ತೆಂಟುಕೋಟಿಯನೈದುವರು, ಅದೆಂತೆಂದೊಡೆ: ``ಭಕ್ತನಾರೀ ಸ್ವಯಾಂಗೇಷು ಪತಿತಾದ್ಯನ್ಯ ಚಿಹ್ನೆಯೇತ್ ಲೇಖನಾಂಕಂ ಯದಿ ಕೃತ್ವಾ ತೇ[s]ಪಿ ಸ್ತ್ರೀ ಪತಿತ ಸ್ತ್ರೀಣಾಂ ತಸ್ಯೋಪದೇಶಶೇಷಂಚ ದತ್ವಾಶ್ಚೈ ಗುರುಃ ಚರಾನ್ ತಪತ್ಸಂಗ ಸಯೋದ್ಭಕ್ತಾ ತದಾದಿ ಚತುರಾನ್ವಯಂ ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾತಿ ಸಧ್ರುವಂ ಇಂತೆಂದುದಾಗಿ ಇದು ಕಾರಣ ಇಂತಪ್ಪ ಅನಾಚಾರಿಗಳನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ನಿಜವೀರಶೈವ ಸಂಪನ್ನರು ತಮ್ಮ ಸ್ವಯಾಂಗಲಿಂಗವನರ್ಚಿಸುವಲ್ಲಿ ಭವಿಶೈವ ಭಿನ್ನ ಕರ್ಮಿಗಳಂತೆ ಅಂಗನ್ಯಾಸ ಪಂಚಮಶುದ್ಧಿ ಮೊದಲಾದ ಅಶುದ್ಧಭಾವವಪ್ಪ ಕ್ಷುದ್ರ ಕರ್ಮಂಗಳ ಹೊದ್ದಲಾಗದು. ಅದೆಂತೆಂದೊಡೆ:``ನಕಾರಮಾತ್ಮಶುದ್ಧಿಶ್ಚ ಮಕಾರಂ ಸ್ನಾನಶೋಧನಂ ಶಿಕಾರಂ ಲಿಂಗಶುದ್ಧಿಶ್ಚ ವಾಕಾರಂ ದ್ರವ್ಯಶೋಧನಂ ಯಕಾರಂ ಮಂತ್ರಶುದ್ಧಿಶ್ಚ ಪಂಚಶುದ್ಧಿಃ ಪ್ರಕೀರ್ತಿತಾಃ ಕಾಯಶುದ್ಧಿಶ್ಚಾತ್ಮಶುದ್ಧಿಶ್ಚಾಂಗನ್ಯಾಸಕರಸ್ಯ ಚ ಸರ್ವಶುದ್ಧಿರ್ಭವೇ ನಿತ್ಯಂ ಲಿಂಗಧಾರಣಮೇವ ಚ'_ ಇಂತೆಂದುದಾಗಿ. ಅವಲ್ಲದೆ ಅಘ್ರ್ಯ ಪಾದ್ಯ ಆಚಮನಂಗಳು ಮೊದಲಾದ ಉಪಪಾತ್ರಗ?ಲ್ಲಿ ಅಗಣಿತಂಗೆ ಅಳತೆಯ ನೀರನೆರೆದು ಸುಖಮುಖಾರ್ಪಿತಕ್ಕೆ ಸಲುವ ಸುರಸದ್ರವ್ಯಂಗಳಪ್ಪ ಪಂಚಾಮೃತಂಗಳ ನಿರ್ಮಲನಪ್ಪ ನಿಜಲಿಂಗದ ಮಸ್ತಕಕ್ಕೆರೆದು ಜಿಡ್ಡು ಮಾಡಿ ತೊಳೆವ ಅಜ್ಞಾನಿ ನರಕಜೀವಿಗಳ ಮುಖವ ನೋಡಲಾಗದು. ಅದೇನುಕಾರಣವೆಂದಡೆ: ``ಅಘ್ರ್ಯಂ ಪಾದ್ಯಂ ತಥಾಚಮ್ಯಂ ಸ್ನಾನಂ ಪಂಚಾಮೃತಂ ಯದಿ ಲಿಂಗದೇಹೀ ಸ್ವಲಿಂಗೇಷು ಕೃತ್ವಾಚ್ರ್ಯಂತೇ ಬಹಿರ್ನರಾಃ ತೇ ಪಾಷಂಡಾಃ ಕೃತಾಸ್ತೇನ ಕೃತಂಕರ್ಮನರಂ ನಾರಕಂ ಇಂತೆಂದುದಾಗಿ. ಇದು ಕಾರಣ ಸ್ವಯಾಂಗಲಿಂಗದೇಹಿಗಳು ತಮ್ಮ ಲಿಂಗಮಂತ್ರವಿಡಿದು ಬಂದು ಲಿಂಗೋದಕ ಪಾದೋದಕಂಗಳಲ್ಲಿ ತಮ್ಮ ಕರ ಮುಖ ಪದ ಪ್ರಕ್ಷಾಲನವ ಮಾಡಿಕೊಂಬುದೆ ? ಅಂಗಲಿಂಗಿಗಳಿಗೆ ಸ್ವರ್ಯಾಘ್ರ್ಯ ಪಾದ್ಯಾಚಮನವೆಂಬುದನರಿಯದೆ ಕೃತಕರ್ಮ ಭವಿಜೀವಿ ಶೈವಪಾಷಂಡರಂತೆ ಭಿನ್ನವಿಟ್ಟು ಮಾಡಿ ಫಲಪದಂಗಳನೈದಿಹೆನೆಂಬ ನರಕಜೀವಿಗಳನು ಕೂಡಲಚೆನ್ನಸಂಗಯ್ಯ ರವಿ ಸೋಮರುಳ್ಳನ್ನಕ್ಕ ನಾಯಕ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಆಚಾರಕರ್ಪರ, ವಿಚಾರಕರ್ಪರ, ಅವಿಚಾರಕರ್ಪರದ ನಿರ್ಣಯವಾವುದೆನಲು, ಅನ್ಯದೈವ ಭವಿಮಿಶ್ರ ಅನಾಚಾರ ಭಕ್ಷಾಭಕ್ಷ ಪೇಯಾಪೇಯ ಅನ್ಯಾಯ ಇಂತಿವರನುಸರಣಿಗೊಳ್ಳದೆ ವಿಚಾರಿಸಿ ಭಕ್ತರ ಗೃಹವ ಹೋಗುವುದೀಗ ಆಚಾರಕರ್ಪರ. ನಾನಾರೊ ? ಎಂದು ವಿಚಾರಿಸಿ ತನಗೆ ಮುಸುಕಿದ ಮಾಯಾಪಟಲದ ಭ್ರಮೆಯಂ ಪರಿದು ಶ್ರೀಗುರುವಿನ ಸದ್ಭಾವಜ್ಞಾನಮನಕರಣದಿಂ ಉದಯಿಸಿದವನಜಾತಸ್ವಯಂಭುವೆಂದರಿದು, ಆಶೆಯಾಮಿಷ ಕಾಯಗುಣ ಇಂದ್ರಿಯದುರವಣೆ ಮನೋವಿಕಾರಾದಿಗಳಿಗೆ ಸಿಲ್ಕದೆ, ಆ ಮನ ಮೊದಲಾದ ಕಾರಣಂಗಳ ತನ್ನರಿವಿನಾಜ್ಞೆಯಿಂ ಲಿಂಗದಲ್ಲಿ ನೆನಹು ನೆಲೆಗೊಳಿಸಿ, ನೋಟವನಿಮಿಷವೆನಿಸಿ, ಅನ್ಯನುಡಿ ಅನ್ಯನಡೆಯೆಲ್ಲಮಂ ಮುನ್ನವೆ ತ್ಯಜಿಸಿ, ಲಿಂಗದ ನಡೆ ನುಡಿ ಚೈತನ್ಯವಳವಟ್ಟು, ಪರಶಿವನ ಪರತತ್ವವೆ ಪರಮಕರ್ಪರ ವಿಷಯ, ಶಿಕ್ಷಾದಂಡವೆ ಕಟ್ಟಿಗೆ, ಪಂಚಭೂತಕಾಯವನುಳಿದ ಅಕಾಯವೆ ಕಂಥೆ, ಪರಮವೈರಾಗ್ಯವೆ ಯೋಗವಟ್ಟಿಗೆ, ನಿರಾಶಾಪಥವೆ ಯೋಗವಾವುಗೆ, ನಿಷ್ಕಾಮಿತವೆ ಒಡ್ಯಾಣ. ಬಿಂದುಚಲಿಸಿದ ಸಂಧಾನಗತಿ ನಿಂದು ಲಿಂಗಸಂಯೋಗದ ಸಮರತಿಯ ಮುಕ್ತ್ಯಂಗನೆಯೆನಿಸುವ ಚಿಚ್ಛಕ್ತಿಯ ಕೂಟದ ಊಧ್ರ್ವರೇತಸ್ಸಿನ ಪರಮವಿಶ್ರಾಂತಿಯೆ ಕೌಪೀನ, ಅಪ್ರಮಾಣ ಚಾರಿತ್ರ್ಯವೆ ಆಧಾರಘುಟಿಕೆ, ಲಿಂಗಗಂಭೀರದ ಮಹದೈಶ್ವರ್ಯವೆ ವಿಭೂತಿ, ನಿರುಪಾಧಿಕ ತೇಜೋಮಯವಾದ ಮಹಾಲಿಂಗದ ಪ್ರಕಾಶವೆ ಭಸ್ಮೋದ್ಧೂಳನಾಗಿ, ಆ ಭಸ್ಮೋದ್ಧೂಳನ ಪ್ರಕಾಶದಿಂ ಅಜ್ಞಾನತಮವಳಿದ ಸಜ್ಞಾನಕ್ಷೇತ್ರದಲ್ಲಿ ಸುಳಿವ ಸುಳುಹೆ ದೇಶಾಂತರವಾಗಿ ಚರಿಸುವುದೆಂತೆಂದಡೆ: ಜಂಗಮಸ್ಯ ಗೃಹಂ ನಾಸ್ತಿ ಸ ಗಚ್ಛೇತ್ ಭಕ್ತಮಂದಿರಂ ಯದಿ ಗಚ್ಛೇತ್ ಭವೇರ್ಗೇಹಂ ತದ್ಧಿಗೋಮಾಂಸಭಕ್ಷಣಂ ಎಂದುದಾಗಿ ಇಂತೀ ವಿಚಾರದಲ್ಲಿ ಸುಳಿವ ಸುಳುಹೆ ವಿಚಾರಕರ್ಪರ. ವೇದಾತೀತಾಗಮಾತೀತಃ ಶಾಸ್ತ್ರಾತೀತೋ ನಿರಾಶ್ರಯಃ ಆನಂದಾಮೃತಸಂತುಷ್ಟೋ ನಿರ್ಮಮೋ ಜಂಗಮಃ ಸ್ಮೃತಃ ಇಂತೆಂದುದಾಗಿ, ಕಾಯಗುಣವಳಿದು, ಪರಕಾಯಗುಣವುಳಿದು, ಇಂದ್ರಿಯಗುಣವಳಿದು, ಅತೀಂದ್ರಿಯತ್ವದಲ್ಲಿ ವಿಶ್ರಾಂತಿಯನೈದಿ, ರಣಗುಣವಳಿದು, ನಿರಾವರಣ ನಿರ್ಮಲ ನಿರ್ವಿಕಾರ ನಿಜಲಿಂಗದಲ್ಲಿ ನಿಶ್ಚಲಿತನಾಗಿ, ಜೀವನ ಗುಣವಳಿದು, ಪರಮಾತ್ಮಲಿಂಗದಲ್ಲಿ ಘನಚೈತನ್ಯ ತಲ್ಲೀಯವಾಗಿ, ತನಗಿದಿರಿಟ್ಟು ತೋರುವ ತೋರಿಕೆಯೆಲ್ಲವೂ ತಾನಲ್ಲದೇನು ಇಲ್ಲವೆಂದರಿದು, ಕಾಬವೆಲ್ಲವೂ ಶಿವರೂಪು, ಕೇಳುವವೆಲ್ಲವೂ ಶಿವಾನುಭಾವ, ನಡೆದುದೆಲ್ಲವೂ ಶಿವಮಾರ್ಗ, ನುಡಿದುದೆಲ್ಲವೂ ಶಿವತತ್ವ, ಕೊಡುವ ಕೊಂಬೆಡೆಯಲ್ಲಿ ಎಡೆದೆರಪಿಲ್ಲದೆ ಅಖಂಡಾದ್ವಯ ಪರಿಪೂರ್ಣಚಿದಾನಂದರೂಪ ತಾನೆಂದರಿದು, ನಿಂದ ನಿಲವೆ ಅವಿಚಾರಕರ್ಪರ. ಅದೆಂತೆಂದಡೆ: ಚರಾಚರವಿಹೀನಂ ಚ ಸೀಮಾಸೀಮಾವಿವರ್ಜಿತಂ ಸಾಕ್ಷಾನ್ ಮುಕ್ತಿಪದಂ ಪ್ರಾಹುರುತ್ತಮಂ ಜಂಗಮಸ್ಥಲಂ ಎಂದುದಾಗಿ, ಶಬ್ದ ಚಲನೆಯಿಲ್ಲದುದೆ ಲಿಂಗವೆಂದರಿದು, ಬಿಂದುಚಲನೆಯಿಲ್ಲದುದೆ ಜಂಗಮವೆಂದರಿದು, ಆ ಬಿಂದುವನೆ ಲಿಂಗಮುಖದಲ್ಲಿ ನಿಲಿಸಿ ಆ ನಾದವನೆ ಘನಚೈತನ್ಯಜಂಗಮಮುಖದಲ್ಲಿ ನಿಲಿಸಿ, ಆ ನಾದಬಿಂದುವನೊಂದು ಮಾಡಿ ನಿಂದ ನಿಲವೆ ಉಪಮಾತೀತವದೆಂತೆಂದಡೆ: ನಾದನಿಶ್ಚಲತೋ ಲಿಂಗಂ ಬಿಂದುನಿಶ್ಚಲತೋ ಚರಃ ನಾದಬಿಂದು ಸಮಾಯುಕ್ತ ಶ್ರೇಷ*ಂ ತಲ್ಲಿಂಗಜಂಗಮಂ ಎಂದುದಾಗಿ, ಮನಶ್ಚಂದಿರ ಇತ್ಯುಕ್ತಂ ಚಕ್ಷುರಾದಿತ್ಯ ಉಚ್ಯತೇ ಚಂದಿರಾದಿತ್ಯಸಂಯುಕ್ತಂ ಉತ್ತಮಂ ಜಂಗಮಸ್ಥಲಂ ಎಂದುದಾಗಿ, ಮನಸ್ಥಂ ಮನೋಮಧ್ಯಸ್ಥಂ ಮನೋಮಧ್ಯಸ್ಥ ವರ್ಜಿತಾಃ ಮನಸಾ ಮನ ಆಲೋಕ್ಯ ಸ್ವಯಂ ಸಿದ್ಧಾ ಸುಯೋಗಿನಃ ಇಂತೆಂದುದಾಗಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ, ನಿಮ್ಮ ಶರಣರಜಾತಜನಿತರು, ಅನುಪಮಚರಿತರು.
--------------
ಉರಿಲಿಂಗಪೆದ್ದಿ
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬಂದು ಬಲ್ಲಹ ಬಿಡಲು ಹೊಲೆಗೇರಿ ಎಂಬ ಹೆಸರೊಳವೆ ಅಯ್ಯಾ ಲಿಂಗವಿದ್ದವರ ಮನೆ ಕೈಲಾಸವೆಂದು ನಂಬಬೇಕು, ಚಾಂಡಾಲವಾಟಿಕಾಯಾಂ ವಾ ಶಿವಭಕ್ತಃ ಸ್ಥಿತೋ ಯದಿ ತತ್‍ಶ್ರೇಣಿಃ ಶಿವಲೋಕಸ್ಯ ತದ್ ಗೃಹಂ ಶಿವಮಂದಿರಮ್ ಎಂದುದಾಗಿ, ಲೋಕದ ಡಂಬಕರ ಮಾತು ಬೇಡ, ಕೂಡಲಸಂಗನಿದ್ದುದೇ ಕೈಲಾಸ.
--------------
ಬಸವಣ್ಣ
ಶಿವಾಚಾರಸಂಪನ್ನನಾಗಿ ಶಿವಭಕ್ತನೆನಿಸಿಕೊಂಡು ಶಿವಲಿಂಗವು ಕರಸ್ಥಲ ಉರಸ್ಥಲ ಶಿರಸ್ಥಲದಲ್ಲಿರುತಿರೆ ಅದ ಮರೆದು, ಹಲವು ದೇವರ ಪೂಜೆಮಾಡಿ, ಹಲವು ದೇವರ ಬಳಿಯಲ್ಲಿ ನೀರ ಕುಡಿದು, ಹಲವು ದೇವರ ನೈವೇದ್ಯವ ತಿಂಬ ಹೊಲೆಯನ ಶಿವಭಕ್ತನೆನಬಹುದೆ ? ಎನಲಾಗದು. ಅದೇನು ಕಾರಣವೆಂದಡೆ, ಅದಕ್ಕೆ ಸಾಕ್ಷಿ : ``ಶಿವಾಚಾರೇಣ ಸಂಪನ್ನಃ ಪ್ರಸಾದಂ ಭುಂಜತೇ ಯದಿ | ಅಪ್ರಸಾದೀ ಅನಾಚಾರೀ ಸರ್ವಭಕ್ತಶ್ಚ ವಾಯಸಃ ||'' ಎಂಬುದನರಿಯದೆ, ಮತ್ತೆ ಕೇಳು ಗ್ರಂಥ ಸಾಕ್ಷಿಯ ಮನುಜ : ಸಾಕ್ಷಿ :``ಲಿಂಗಾರ್ಚನೈಕ ಪರಾಣಾಂ ಅನ್ಯದೈವಂತು ಪೂಜನಂ | ಶ್ವಾನಯೋನಿಶತಂ ಗತ್ವಾ ರೌರವಂ ನರಕಂ ವ್ರಜೇತ್ ||'' ಎಂಬುದನರಿಯದೆ, ಮತ್ತೆ ಮೇಣ್, ಸಾಕ್ಷಿ :``ಶಿವಲಿಂಗಂ ಪರಿತ್ಯಜ್ಯ ಅನ್ಯದೈವಮುಪಾಸತೇ | ಪ್ರಸಾದಂ ನಿಷ್ಫಲಂ ಚೈವ ರೌರವಂ ನರಕಂ ವ್ರಜೇತ್ ||'' ಹೀಗೆಂಬುದನರಿಯದೆ, ಲಿಂಗವಿದ್ದು ಅನ್ಯದೈವಂಗಳಿಗೆರಗಿ, ಆಚಾರಭ್ರಷ್ಟನಾಗಿ ಪಾದೋದಕ ಪ್ರಸಾದವ ಕೊಂಡರೆ ಎಂದೆಂದಿಗೂ ಭವಹಿಂಗದು. ಅದೇನುಕಾರಣ ಹಿಂಗದೆಂದರೆ ಹೇಳುವೆ ಕೇಳಿರಣ್ಣಾ : ಹೆಗ್ಗಣವನೊಳ ಹೋಗಿಸಿ ನೆಲಗಟ್ಟ ಹೊರೆದಂತೆ, ಅನ್ಯಕೆ ಹರಿವ ದುರ್ಗುಣವ ಕೆಡೆಮೆಟ್ಟದೆ ಶಿವಭಕ್ತರೆಂದೆಂದು ನುಡಿದುಕೊಂಡು ನಡೆದರೆ, ಹಂದಿ ನಾಯಿ ನರಿ ವಾಯಸನ ಜನ್ಮ ತಪ್ಪದೆಂದಾತ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಶಿವಭಕ್ತ ಆವ ಊರೊಳಗಿದ್ದರೇನು ? ಆವ ಕೇರಿಯಲಿದ್ದರೇನು ? ಹೊಲಗೇರಿಯೊಳಗಿದ್ದರೇನು ? ಶಿವಭಕ್ತನಿದ್ದುದೇ ಕೈಲಾಸ ! ಆತನ ಮನೆಯೇ ಶಿವನ ಅರಮನೆ ! ಆತನ ಮನೆಯ ಸುತ್ತಮುತ್ತಲಿದ್ದ ಲೋಕವೆಲ್ಲ ಶಿವಲೋಕ ! ಸಾಕ್ಷಿ : 'ಚಾಂಡಾಲವಾಟಿಕಾಯಾಂ ಚ ಶಿವಭಕ್ತಃ ಸ್ಥಿತೋ ಯದಿ | ಅತ್ಯ್ರಾಪಿ ಶಿವಲೋಕಃ ಸ್ಯಾತ್ ತದ್ಗøಹಂ ಶಿವಮಂದಿರಂ ||' ಎಂದುದಾಗಿ, ಇಂತಪ್ಪ ಶಿವಭಕ್ತನ ಅಂಗಳವ ಕಂಡಡೆ ಕೋಟಿ ಬ್ರಹ್ಮಹತ್ಯ ಕೋಟಿ ಶಿಶುಹತ್ಯ ಇವೆಲ್ಲ ಅಳಿದುಹೋಗುವವು. ಅವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದವರಿಗೆ ಅಷ್ಟೈಶ್ವರ್ಯ ಅಷ್ಟಮಹಾಸಿದ್ಧಿ ಫಲವು ತಪ್ಪದು. ಅವರ ಒಕ್ಕುಮಿಕ್ಕ ಪ್ರಸಾದವ ಕೊಂಡಡೆ ಸದ್ಯೋನ್ಮುಕ್ತರಪ್ಪುದು ತಪ್ಪದು. ಇಂತಪ್ಪ ಶಿವಭಕ್ತರಿಗೆ ಏನೆಂದು ಉಪಮಿಸುವೆನಯ್ಯ ಆತನು ಮಹಾದೇವನಲ್ಲದೆ ಬೇರುಂಟೆ ? ಆತ ಅಗಮ್ಯ ಅಗೋಚರ ಅಪ್ರಮಾಣ ಆನಂದಮಹಿಮನು. ಅಂತಪ್ಪ ಸದ್ಭಕ್ತನ ಶ್ರೀಚರಣವ ಎನ್ನೊಳಗೆ ತೋರಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗರುಡ ಉವಾಚ:`ಅಶೇಷ ಪಾಶವಿಶ್ಲೇಷೋ, ಯದಿ ದೇವೇಶ ದೀಕ್ಷೆಯಾ| ಜಾತಾಯಾಮರ್ಥನಿಷ್ಟ್ಯತ್ಯಾ ಕಥಂ ಸ್ಯಾದ್ವಪುಷಃ ಸ್ಥಿತಿಃ || ಭಗವಾನ್ ಉವಾಚ| ಜಾತಾಯಾಂ ಘಟನಿಷ್ಪತ್ತೌ ಯಥಾ ಚಕ್ರಂ ಭ್ರಮತ್ಯಪಿ| ಪೂರ್ವಸಂಸ್ಕಾರ ಸಂಸಿದ್ಧಂ ತಥಾ ವಪುರಿದಂ ಸ್ಥಿತಂ || ಭಗ್ನೇ ಘಟೇ ಯಥಾ ದೀಪಃ ಸರ್ವತಃ ಸಂಪ್ರಕಾಶತೇ | ದೇಹಪಾತೇ ತಥಾ|| ಚಾತ್ಮಾ ಭಾತಿ ಸರ್ವತ್ರ ಸರ್ವದಾ ಇಂತೆಂದು ಪೂರ್ವೋಕ್ತವಾದ ನಿರ್ಬೀಜಾದಿ ಶಿವದೀಕ್ಷೆಗಳಿಂದಮಲವಾದಾತನೆ ಮುಕ್ತನೆನಿಸಿಕೊಂಬನು. ಆ ಶಿವದೀಕ್ಷೆಗೆ ಯೋಗ್ಯವಾದ ಸಮಯಮಂ ವಾತೂಲದೊಳು ಪೇಳ್ದಪಂ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಸತ್ತು ಚಿತ್ತಾನಂದ ನಿತ್ಯ ಪರಿಪೂರ್ಣ ವಸ್ತು ತನ್ನ ವಿನೋದಕ್ಕೆ ತಾನೆ ಕರ್ತೃ ಭೃತ್ಯನಾದ ಭೇದಮಂ ಪೇಳ್ವೆ, ಅದೆಂತೆಂದಡೆ : ಒಂದು ಎರಡಾದ ಭೇದಮಂ ತಿಳುಹುವೆ. ಅದು ತಾನೆ ಸಂಗನಬಸವಣ್ಣನೆಂದು, ಚೆನ್ನಬಸವಣ್ಣನೆಂದು ಎರಡು ನಾಮ ಅಂಗ-ಪ್ರಾಣದ ಹಾಂಗೆ. ಚನ್ನಬಸವಣ್ಣನಿಂದ ಸಂಗನಬಸವಣ್ಣ ಧನ್ಯನಪ್ಪನು. ಈ ಎರಡು ವಸ್ತುವನೊಳಕೊಂಡು ಆಚರಿಸುವ ಜ್ಞಾನಿಜಂಗಮದ ನಿಲವೆಂತೆಂದೊಡೆ : ಆವನಾನೊಬ್ಬನು ಭಸಿತಮಂ ಪಿಡಿದು ಅಯ್ಯಾ ಶರಣಾರ್ಥಿ ಎಂದು ಕರೆಯಲು, ಒಯ್ಯನೆ ನಿರೀಕ್ಷಿಸುವುದೆ ಜ್ಞಾನಿಜಂಗಮಕ್ಕೆ ಕರ್ತೃತ್ವ. ಇದಲ್ಲದೆ, ನಡೆಯದೆ ಜಂಗಮ ಎಲವೋ ಎಂದು ಕರೆವುತ್ತಿರಲು ನಸುಗೆಂಪಿನ ಭಾವವೇರಿ ಹೋದರೆ ಭಸಿತಕ್ಕೆ ದೂರ. ಸಾಕ್ಷಿ : ವರ್ಣಿ ವಕಾಪೋಸೋವಾಸಿ ಶೂದ್ರೋಪಿ ಯದಿ ಭೂತಿದಃ| ಸಾ ಭೂತಿಃ ಸರ್ವಥಾ ಗ್ರಾಹ್ಯಾ ನೋ ಚೇದ್ಧ್ರೋಹಿ ಮಮೈವ ನಃ || ದುರಾಯ ಲೆಕ್ಕಕ್ಕೆ ಹರಣವ ಕೊಟ್ಟವರುಂಟು. ವಿಶ್ವಾಸಕ್ಕೆ ಅಂಗಕ್ಕೆ ಅರಿವನರಸುವ ಪರಿಯಂತರ ಇದೇ ದೃಷ್ಟ. ಲಿಂಗದೇವನು ಮನವ ನೋಡಬೇಕೆಂದು ಭಕ್ತಿಯೆಂಬ ಭಿನ್ನಹಕ್ಕೆ ಅವಿಶ್ವಾಸದಿಂದ ಅಡ್ಡಬರಲು ಇದರ ವಿಶ್ವಾಸವನರಿದು ವಿಚಾರಿಸಬೇಕು. ಕಿಚ್ಚು ಹತ್ತಿದಲ್ಲಿ ಊರಡವಿ ಕಾಡಡವಿಯೆಂದುಂಟೆ? ಚಿದಗ್ನಿ ಸ್ವರೂಪಮಪ್ಪ ಶ್ರೀಭಸಿತವ ಕಂಡಲ್ಲಿ ಹೋಗಲಮ್ಮೆನು, ಆವನಾದರಾಗಲಿ ಶ್ರೀ ಮಹಾದೇವನ ನೆನವನೆ ದೇವನೆಂದುದಾಗಿ, ಭವಿಯಾದರಾಗಲಿ ಹೋಗಲಮ್ಮೆನು. ಇದು ಎನಗೆ ಚೆನ್ನಬಸವಣ್ಣನಿಕ್ಕಿದ ಕಟ್ಟು. ಭವಿಯಾದರೆ ಕರೆದು ಒಡಂಬಡಿಸೂದು. ಭಕ್ತನಾದರೆ ಬಿನ್ನಹವ ಕೈಕೊಂಬುದು. ಆವನಾದರಾಗಲಿ ಶ್ರೀ ಮಹಾದೇವನ ನೆನವವನೆ ದೇವನೆಂದುದಾಗಿ, ಭವಿಯಾದರೆ ಹಾಲು ಹಣ್ಣು ಕಾಯಿ ವಸ್ತ್ರವ ಕೈಕೊಂಬುದು. ಮತ್ತಾ ಭಸಿತಕ್ಕೆ ಶರಣೆಂದು ಅವನ ಕಳುಹುವುದು. ಭಕ್ತನಾದರೆ ಬಿನ್ನಹವ ಕೈಕೊಂಡು ಆತನ ತ್ರಿವಿಧಕ್ಕೆ ತಾ ಕರ್ತನಾಗಿ ಆತನ ತನ್ನೊಳಗೆ ಇಂಬಿಟ್ಟುಕೊಂಬುದು ಜ್ಞಾನಜಂಗಮದ ಲಕ್ಷಣ. ಇನ್ನು ಕ್ರಿಯಾಮಾಹೇಶ್ವರ ಭೇದಮಂ ಪೇಳ್ವೆ : ಶಿವಭಕ್ತರು ಬಂದು ಬಿನ್ನಹವ ಕೈಕೊಳ್ಳಿಯೆಂದು ಉದಾಹರಣೆಯಿಂದ ಬಿನ್ನವಿಸುತ್ತಿರಲ ಅದಕ್ಕೆ ಒಡಂಬಟ್ಟು ಕೈಕೊಂಬುದು ; ಅಲ್ಲದಿರ್ದಡೆ ಕಳುಹುವುದು. ಇದಲ್ಲದೆ ಬಾಯಿಗೆ ಬಂದಂತೆ ನುಡಿದು ಅಡ್ಡ ಮೋರೆಯ ಹಾಕೋದು ಜಂಗಮಕ್ಕೆ ಕರ್ತೃತ್ವವಲ್ಲ. ಜ್ಞಾನಿಜಂಗಮ ತ್ರಿವಿಧಪದಾರ್ಥವ ಕೈಕೊಂಬುದು. ಕ್ರಿಯಾಜಂಗಮ ಎರಡು ಪದಾರ್ಥವಂ ಬಿಟ್ಟು ಒಂದು ಪದಾರ್ಥವ ಕೈಕೊಂಬುದು. ಭಾವಜಂಗಮ ಇಂತೆರಡ ಮೀರಿ ತ್ರಿವಿಧರಹಿತವಾಗಿ ತೋರ್ಪುದು. ಗೋಣಿಯ ಮರೆಯ ಕೇಟೇಶ್ವರಲಿಂಗವು ತ್ರಿವಿಧಜಂಗಮದ ನಿಲವಿನ ನಿರುಗೆಯ ನಿರೂಪಿಸಿದರು.
--------------
ಬೊಕ್ಕಸದ ಚಿಕ್ಕಣ್ಣ
ಭವರೋಗ ಮೊದಲಾದ ಎಲ್ಲಾ ರೋಗಂಗಳಿಗೆಯೂ ಶಿವಲಿಂಗ ಪ್ರಸಾದವಲ್ಲದೆ ಮತ್ತೇನೂ ಇಲ್ಲವೆಂದುದು ವೇದ. ದ್ವಿಪಾದಿಗಳು ಚತುಃಪಾದಿಗಳು ಮೊದಲಾದ ಸಕಲಪ್ರಾಣಿಗಳೆಲ್ಲವಕ್ಕೆ ಇದೇ ಔಷಧಿಯೆಂದುದು ಯಜುರ್ವೇದ. ಗಾಮೇಸ್ವಾಯ ಪುರುಹಾಯ ಭೇಷಜಂ ಅಧೋಲಿಸ್ಮಭ್ಯಂ | ಭೇಷಜಂ ಸುಖೇಷಜಂ ಯದಿ ಸತಿ ಸುಗಮ್ಯೇಷ್ಯಾಂ | ಅವಾಂಬ ರುದ್ರಮದಿ ಮಹೀಯದ ದೇವಂ ತ್ರ್ಯಂಬಕ || ಎಂದುದು ಶ್ರುತಿ, ಬಸವಪ್ರಿಯ ಕೂಡಲಚೆನ್ನಸಂಗಾ.
--------------
ಸಂಗಮೇಶ್ವರದ ಅಪ್ಪಣ್ಣ
ಹೊಲೆಯೊಳು ಹುಟ್ಟಿ, ಹೊಲೆಯೊಳು ಬೆಳೆದು, ಕುಲಮದಕೆ ಹೋರಾಡುತಿಪ್ಪರಯ್ಯಾ. ಅದು ಎಂತೆಂದರೆ : ಹುಟ್ಟುವುದು ಹೊಲೆ, ಹೊಂದುವುದು ಹೊಲೆ. ಬಾಹ್ಯದ ಹೊಲೆಯ ಹೇಳೇನೆಂದರಳವಲ್ಲ. ಕರುಳ ಜಾಳಿಗೆ, ಅಮೇಧ್ಯದ ಹುತ್ತು , ರಕ್ತದ ಮಡು, ಮಾಂಸದ ಕೊಗ್ಗೆಸರು, ಕೀವಿನ ಹೊಲಸು, ಕ್ರಿಮಿಕೀಟಕ ಜಂತಿನ ರಾಸಿ, ಎಲುವಿನ ಹಂಜರು, ಚರ್ಮದ ಮೇಲುಹೊದಿಕೆ. ಇಂತೀ ಹೊಲೆಯೊಳು ಜನಿತವಾದ ಕರ್ಮಕಾಯವೆಂದರಿಯದೆ ಕುಲಮದಕ್ಕೆ ಹೋರಾಡುವರು. ಕುಲವ ಕೇಳೇನೆಂದರೆ, ಇಂದ್ರ ಶೂದ್ರ, ಬ್ರಹ್ಮ ವೈಶ್ಯ, ವಿಷ್ಣು ಕ್ಷತ್ರಿಯ, ಈಶ್ವರ ಬ್ರಾಹ್ಮಣ. ಸಾಕ್ಷಿ :``ಪಿತಾಮಹಸ್ತು ವೈಶ್ಯಸ್ಯ ಕ್ಷತ್ರಿಯಸ್ಯ ಪರೋ ಹರಿಃ | ಬ್ರಾಹ್ಮಣೋ ಭಗವಾನ್ ರುದ್ರಃ ಇಂದ್ರಃ ಶೂದ್ರಕುಲಸ್ಯ ಚ || '' ಎಂದುದಾಗಿ, ಇನ್ನುಳಿದ ಮುನಿಕುಲ ಕೇಳ್ವರೆ- ಹೊಲೆಮಾದಿಗರ ಅಗಸರ ಬಸುರಲ್ಲಿ ಬಂದು ಶಿವನ ಪೂಜೆಯ ಮಾಡಿ, ಶಿವಕುಲವಾದುದನರಿಯದೆ ಕುಲಕ್ಕೆ ಹೋರಾಡುತಿಪ್ಪರಯ್ಯಾ. ಸಾಕ್ಷಿ:``ಚಾಂಡಾಲವಾಟಿಕಾಯಾಂ ವಾ ಶಿವಭಕ್ತಃ ಸ್ಥಿತೋ ಯದಿ | ತತ್‍ಶ್ರೇಣೀ ಶಿವಲೋಕಸ್ಯ ತದ್ಗೃಹಂ ಶಿವಮಂದಿರಂ || ಯಸ್ಯ ಚಿತ್ತಂ ಶಿವೇ ಲೀನಂ ತಸ್ಯ ಜಾತಿಃ ಕರೋತಿ ಕಿಂ | ಶಿವಲಿಂಗಶೀಲಬುದ್ಧಿಂ ಕುರ್ವಣಮೇವ ಪಾತಕಂ ||'' ಎಂದುದಾಗಿ, ಇದುಕಾರಣ, ಶಿವಕುಲವಾದವರೊಳು ಕುಲವನರಸುವರುಂಟೆ ? ಅರಸಲಿಲ್ಲ. ಅರಸಿದರೆ ಪಾತಕ. ಅದಕ್ಕೆ ಸಾಕ್ಷಿ : ``ಶಿವಕುಲಂ ಶಿವಭಕ್ತಸ್ಯ ಅನ್ಯಾಶ್ರಯೇಷು ನಿಂದಕಃ | ಶ್ವಾನಯೋನಿಶತಂ ಗತ್ವಾ ರೌರವಂ ನರಕಂ ವ್ರಜೇತ್ ||'' ಎಂದುದಾಗಿ, ಪರಮಾತ್ಮಾ, ನಿನ್ನ ಕುಲವಾದವರಿಗೆ ಕುಲವನೆತ್ತಿನುಡಿವ ಪಾತಕರನೆನಗೊಮ್ಮೆ ತೋರದಿರು ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಶ್ವವ ಕೊಂದವನಾದಡಾಗಲಿ, ಪಶುವ ಕೊಂದವನಾದಡಾಗಲಿ, ಬ್ರಾಹ್ಮಣನ ಕೊಂದವನಾದಡಾಗಲಿ, ಶಿಶುವ ಕೊಂದವನಾದಡಾಗಲಿ, ಸ್ತ್ರೀಯ ಕೊಂದವನಾದಡಾಗಲಿ, ಅನಂತ ಪಾತಕಂಗಳ ಮಾಡಿದವನಾದಡಾಗಲಿ, ಶಿವಲಿಂಗದ ದರ್ಶನವಾದಾಕ್ಷಣದಲ್ಲಿಯೇ ಆ ಪಾತಕಂಗಳು ಪಲ್ಲಟವಾಗಿಹವು ನೋಡಾ. ಅದೆಂತೆಂದೊಡೆ : ``ಅಭಕ್ಷ್ಯಭಕ್ಷಕೋ ವಾಪಿ ಬ್ರಹ್ಮಹಾ ಯದಿ ಮಾತೃಹಾ | ಪಿತೃಹಾ ಬಾಲಘಾತೀ ಚ ಗೋಘ್ನಃ ಸ್ತ್ರೀ ಶೂದ್ರಘಾತಕಃ || ವಕ್ತಾಚ ಪರದೋಷಸ್ಯ ಪರಸ್ಯ ಗುಣದೂಷಕಃ | ಕೃಪಣೋýನೃತವಾದೀ ಚ ಮಣಿರತ್ನಾಪಹಾರಕಃ | ಸರ್ವಪಾಪಮಯಃ ಪೂತೋ ಮುಚ್ಯತೇ ಲಿಂಗದರ್ಶನಾತ್ ||'' ಎಂದುದಾಗಿ, ಪರಮಪದವಿಯನೈದುತಿಹನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->
Some error occurred