ಒಟ್ಟು 48 ಕಡೆಗಳಲ್ಲಿ , 3 ವಚನಕಾರರು , 48 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಚಿನ್ನ ವಿಶೇಷ ಮಣ್ಣು ಅಧಮವೆಂದಡೆ,ಅದು ನಿಂದು ಕರಗುವುದಕ್ಕೆಮಣ್ಣಿನ ಕೋವೆಯೆ ಮನೆಯಾಯಿತ್ತು.ಇಷ್ಟವನರಿವ ವಸ್ತುವ ನೆಮ್ಮುವುದಕ್ಕೆ ಇದೇ ದೃಷ್ಟ,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ನೀರೊಳಗಣ ಕಿಚ್ಚು ತಾಯಲ್ಲಿ ಅಡಗಿತ್ತು.ಶಿಲೆಯೊಳಗಣ ಕಿಚ್ಚು ತಾಯನುಳುಹಿ, ಇದಿರ ಸುಟ್ಟಿತ್ತು.ಮರದೊಳಗಣ ಕಿಚ್ಚು ಮರನನೂ ಸುಟ್ಚು,ಇದಿರನೂ ಸುಟ್ಟು, ಪರಿಸ್ಪಂದಕ್ಕೆ ಹರಿಯಿತ್ತು.ಇಂತೀ ತ್ರಿವಿಧಭೇದದಿಂದ, ಜ್ಞಾನದ ಭೇದವನರಿಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಮಣ್ಣಿನಲ್ಲಿ ನೀರ ಬೆರಸಿ, ಮಥಿತಾಗಿ ನಿಂದು,ನಿಲಿಸಿ ತೋರಿ, ಮುನ್ನಿನಂತಾಯಿತ್ತು.ಅಪ್ಪು ಸಂಗವನೆಯ್ದಿದಂತೆ ಇರಬೇಕು,ಇಷ್ಟಪ್ರಾಣಯೋಗಸಂಬಂಧ,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಕಾಲವಿರಹಿತ ಗುರುವಾಗಬೇಕು.ಕರ್ಮವಿರಹಿತ ಲಿಂಗವಾಗಬೇಕು.ಭವವಿರಹಿತ ಜಂಗಮವಾಗಬೇಕು.ಮೂರನರಿತು bs್ಞೀದಿಸಿ, ವಿರಕ್ತನಾಗಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಮೆಟ್ಟಿದ ಅಡಿಯ ದೃಢವಾಗಿ ಮೆಟ್ಟಿ, ಆಚೆಯಲ್ಲಿ ಕಿತ್ತಡಿಯಿಡಬೇಕು.ಮುಂದಕ್ಕೆ ಒದಗು, ಹಿಂದಕ್ಕೆ ದೂರವಾಯಿತ್ತು.ಇಷ್ಟದಲ್ಲಿ ಚಿತ್ತ ನೆಮ್ಮಿ, ಮತ್ತೆ ಪ್ರಾಣನ ಪಥ್ಯವನರಿಯಬೇಕು.ಫಲದ ತೊಡಪು ಕೈಗೆ ತಾಹಂತೆ, ಘಟಜ್ಞಾನಕ್ಕೆ ಬ್ಥಿನ್ನವಿಲ್ಲ,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಮರುತ ಸಂಗವ ಮಾಡಿದ ಉರಿ, ವಾರಿ ಗಂಧದಂತೆ,ವಾಳುಕ ಸಂಬಂದ್ಥಿಯಾದ ಜಲದ ಇರವಿನಂತೆ,ಶಿಲೆ ತೈಲದ ಒಲುಮೆಯಂತಿರಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ನಾನಾ ಫಲವ ಸಲಹುವಲ್ಲಿ, ಮೂಲದ ಬೆಳೆಯನರಿತು ನೀರನೆರೆಯಬೇಕು.ವ್ರತ ನೇಮ ಕೃತ್ಯ ನಿತ್ಯವ ಮಾಡುವಲ್ಲಿ, ಅತಿಶಯನಾಗಿರಬೇಕು.ಪಟುಭಟನಾದಲ್ಲಿ ಉಭಯದಳ ಪಿತಾಮಹನಾಗಿರಬೇಕು.ಗತಿ ಬಟ್ಟೆಯ ತೋರುವ ಚರಗುರುದ್ವಯ ಗತಿಮಹನಾಗಿರಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಮನ ಮುಟ್ಟದ ಪೂಜೆ,ಮಣ್ಣುಗೋಡೆಯ ತೊಳೆದು, ನಿರ್ಮಲವನರಸುವನಂತೆ.ವಸ್ತುವ ಮುಟ್ಟದ ಅರ್ಪಿತ,ಕುಕ್ಕರ ಅಸ್ಥಿಯ ಕಡಿದು, ತನ್ನಯ ಶೋಣಿತಕ್ಕೆ ಚಪ್ಪರಿವಂತೆ,ಇದು ನಿಶ್ಚಯದ ಮುಟ್ಟಲ್ಲ,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಕಾಳಿಕೆ ಹರಿದ ಹೇಮದಂತೆ,ನಾರಿಕೇಳಫಲವ ನುಂಗಿದ ವಾರಣದಂತೆ,ಬೆರಸಿ ಬೆರಸದಂತಿರಬೇಕು.ಅದು ನಾಲಿಗೆಯ ಹುಣ್ಣಿನಂತೆ,ಮೀರಬಾರದು, ಅಂಗೀಕರಿಸಬಾರದು.ಕ್ರೀಜ್ಞಾನಸಂಪದದಲ್ಲಿ ಕಾಬವಂಗೆಭಾವಶುದ್ಧವಾಗಿರಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಮನೆಯ ಹೊರಗಿದ್ದವನ, ಮನೆಯ ಒಳಗಿದ್ದವ ಕರೆದಡೆವಿರೋಧವುಂಟೆ ಅಯ್ಯಾ ?ಕ್ರೀ ಹೊರಗಾಗಿ ಆತ್ಮನೊಳಗಾದಲ್ಲಿ, ನಾನೆಂಬನ್ನಕ್ಕ ಕ್ರೀ ಶೂನ್ಯವಿಲ್ಲದಿರಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಆಸೆ ತ್ರಿವಿಧದ ಗೊತ್ತು, ನಿರಾಸೆ ಏಕಮಯನ ಗೊತ್ತು.ಅಲ್ಲ, ಅಹುದೆಂಬುದು ಬಲ್ಲವನ ಮತವಲ್ಲ.ಎಲ್ಲಿಯೂ ಸದ್ಗುಣ, ಎಲ್ಲರಲ್ಲಿ ನಿಜಭಾವ,ಪರಿಪೂರ್ಣ ತಾನಾಗಿರಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಕುಟಿಲಕ್ಕಲ್ಲದೆ ಜಗ ಸಿಕ್ಕದು.ವಾಚಕಂಗಲ್ಲದೆ ಭೋಗವಿಲ್ಲ. ಘಟಧರ್ಮಕ್ಕೆ ಹೊರಗು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಬೀಜ ಕೊಳೆತಾಗ ಅಂಕುರ ನಷ್ಟವಾಯಿತ್ತು.ಸಸಿಯಿಲ್ಲದ ಫಲವುಂಟೆ ಅಯ್ಯಾ ?ಇಷ್ಟದ ಅರ್ಚನೆ ಅರತು, ಚಿತ್ತ ದೃಷ್ಟವ ಕಾಬುದಕ್ಕೆಗೊತ್ತಾವುದು ಹೇಳಯ್ಯಾ ?ಅದು ಮುಟ್ಟಿದ ಮುಟ್ಟಿನಲ್ಲಿ ಒದಗು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಕ್ರಿಯಾಸಂಪದನಾದಲ್ಲಿ, ಉರಿ ಕಾಷ್ಠವ ವೇದ್ಥಿಸಿದಂತಿರಬೇಕು.ಆ ಚರಪರ ಒಡಗೂಡಿದಂತಿರಬೇಕು.ಜಲ ಜಲವ ಕೂಡಿದಂತೆ ಹೆರೆಹಿಂಗುವುದಕ್ಕೊಡಲಿಲ್ಲ.ವಾರಿಯ ಶಿಲೆ ಬಲಿದು ನೋಡ ನೋಡ ನೀರಾದಂತಿರಬೇಕು.ಇಷ್ಟಲಿಂಗಸಂಬಂಧದ ನಿಷ್ಠೆ, ಪ್ರಾಣಕೂಟ ಉಭಯ ಮೋಸವಿಲ್ಲದಿರಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
ಗರ್ಭದಲ್ಲಿ ಶಿಶು ಬಲಿದು,ಹಸಿದೆನೆಂದು ಅತ್ತುದುಂಟೆ ಅಯ್ಯಾ ?ಬೆಸನಾಗಿ ಪ್ರತಿರೂಪಿಂಗೆ ಕುಚಕ್ಷೀರವಲ್ಲದೆಘಟದಿಂದಡಗಿದಲ್ಲಿ, ಸುಖ ತಾಯ ಇರವಿನಲ್ಲಿ ನಿಂದಂತೆ,ಉಭಯಭೇದ, ಇಷ್ಟಲಿಂಗಸಂಬಂಧಯೋಗ.ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆಇದಿರಿಟ್ಟ ಭೇದ.