ಅಥವಾ

ಒಟ್ಟು 31 ಕಡೆಗಳಲ್ಲಿ , 14 ವಚನಕಾರರು , 27 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಇನ್ನು ಷಟ್ಸ್ಥಲದ ಭೇದವೆಂತೆಂದಡೆ : ಸದಾಚಾರದಲ್ಲಿ ನಡಹ, ಶಿವನಲ್ಲಿ ಭಕ್ತಿಯಾಗಿಹ, ಲಿಂಗಜಂಗಮ ಒಂದೆಯೆಂಬ ಬುದ್ಧಿಯಾಗಿಹ, ಲಾಂಛನಧಾರಿಗಳ ಕಂಡಡೆ ಒಂದಿಸುವುದೀಗ ಭಕ್ತಸ್ಥಲ ನೋಡಾ. ಇದಕ್ಕೆ ಈಶ್ವರ್ದೋವಾಚ : ``ಸದಾಚಾರಂ ಶಿವೇ ಭಕ್ತಿಃ ಲಿಂಗಜಂಗಮೇ ರತಿಃ | ಲಾಂಛನಂ ಚ ಶರಣ್ಯಂ ಚ ಭಕ್ತಿಸ್ಥಲಸುಬುದ್ಧಿಮಾನ್ || '' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಲಿಂಗಜಂಗಮ ಸಂಗಸನ್ನಿಹಿತನಾದ ಶರಣಂಗೆ ಭಾವವಿಲ್ಲದ ಕಾಯ, ಕಲ್ಪನೆಯಿಲ್ಲದ ಮನ, ಗುಣಶೂನ್ಯ ಪ್ರಾಣ, ಭ್ರಾಂತಿವಿರಹಿತ ಭಾವ, ಧರ್ಮವಿಲ್ಲದ ಇಂದ್ರಿಯ, ಇಂತು ಸಕಲ ವಿಷಯ ಹೊಂದಿ ಶರಣೆಂದು ನೈಷ್ಠೆವೆರೆದು ನಲಿಯುತಿರ್ದವು ಗುರುನಿರಂಜನ ಚನ್ನಬಸವಲಿಂಗಕ್ಕೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗಜಂಗಮ ಜಂಗಮಲಿಂಗದ ಮುಖವ ನೀವಲ್ಲದೆ ಇನ್ನು ಬಲ್ಲವರಾರಯ್ಯಾ ? ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದಲ್ಲಿ ಪರವಾದಿ ಬಿಜ್ಜಳನು ಒರೆದು ನೊಡಲೆಂದಟ್ಟಿದಡೆ ಹಗರಣಿಗರ ಜಂಗಮಮುಖದಲ್ಲಿ ಲಿಂಗವ ಮಾಡಿದವರಾರು ಹೇಳಾ ನೀವಲ್ಲದೆ ? ಮರದ ಮಾನಿಸನ ಕರೆದು `ಓ' ಎನಿಸಿ ನುಡಸಿ ಉಡಿಸಿ ಉಣಿಸಿ ಜಂಗಮಲಿಂಗಪ್ರಾಣಿ ಬಸವಣ್ಣನೆಂಬ ಧ್ವಜವನೆತ್ತಿ ಮೆರೆದವರಾರು ಹೇಳಾ ಈ ಕಲ್ಯಾಣದಲ್ಲಿ ನೀವಲ್ಲದೆ ? ಜಂಗಮಮುಖಲಿಂಗವನರಿಯೆನೆಂದು ಎನ್ನ ಮನಕ್ಕೆ ಸಂದೇಹವನೊಡ್ಡಿ ಜಾರಿದಡೆ ನಾನು ಸೈರಿಸಬಲ್ಲೆನೆ ? ನೀನು ಜಂಗಮಮುಖಲಿಂಗಸಂಬಂಧಿ ಎಂಬುದ ಕೇಳಿ ಆದಿಗಣನಾಥನು ಅಲ್ಲಮಪ್ರಭುವೆಂಬ ನಾಮವ ಧರಿಸಿ ನಿನ್ನನರಿಸಿಕೊಂಡು ಬರುತ್ತಲೈದಾನೆ. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ, ಸಂಗನಬಸವಣ್ಣಾ, ನೀನೇ ಜಂಗಮಪ್ರಾಣಿಯೆಂದು ನಾನು ನಂಬಿದೆನು.
--------------
ಚನ್ನಬಸವಣ್ಣ
ನಿಶ್ಚಿಂತ ನಿರಾಕಾರ ಪರಂಜ್ಯೋತಿ ಪರಮಪ್ರಕಾಶ ಆನಂದ ಸ್ವರೂಪನೆ ಜಂಗಮಲಿಂಗ. ಚೈತ್ಯರೂಪವೆ ಲಿಂಗಜಂಗಮ, ಸತ್ವರೂಪವೆ ಗುರುಲಿಂಗ. ಸತ್ತು ಚಿತ್ತಾನಂದವೆ ಸದ್ಭಕ್ತನಲ್ಲಿ ಉದಯ ಇಂತಿವರ ನೆಲೆಯ ವೇದಾಗಮ ಶಾಸ್ತ್ರ ಪುರಾಣಗಳು ಕಾಯದೆ ವಾಗತೀತಃ ಮನೋತೀತಃ ಭಾವಾತೀತಃ ಪರಃ ಶಿವಃ ಸರ್ವಶೂನ್ಯ ನಿರಾಕಾರಂ ನಿತ್ಯತ್ವಂ ಪರಮಂ ಪದಂ || ಎಂದುದಾಗಿ, ಇಂತಪ್ಪ ಶ್ರುತಿ ಒಳ ಹೊರಗಿಪ್ಪ ಜಂಗಮಲಿಂಗವೆ ಜಗತ್ಪಾವನ ಜಂತು ಜಯ ಶರಣಾಗು. ಬಸವಪ್ರಿಯ ಕೂಡಲಸಂಗಮದೇವಾ ಮಾಂ ತ್ರಾಹಿ ತ್ರಾಹಿ ಕರುಣಾಕರನೆ.
--------------
ಹಡಪದ ಅಪ್ಪಣ್ಣ
ಶಿವಭಕ್ತನೆನಿಸುವಾತಂಗೆ ಆವುದು ಚಿಹ್ನವೆಂದೊಡೆ : ಸದಾಚಾರದಲ್ಲಿ ನಡೆವುದು, ಶಿವನಲ್ಲಿ ಭಕ್ತಿಯಿಂದಿರುವುದು, ಲಿಂಗಜಂಗಮ ಒಂದೆಯೆಂದು ಕಾಂಬುದು. ವಿಭೂತಿ ರುದ್ರಾಕ್ಷಿ ಲಿಂಗಧಾರಣ ಮುಂತಾದ ಶಿವಲಾಂಛನವನುಳ್ಳ ಶಿವಶರಣರಲ್ಲಿ ಅತಿಭಕ್ತಿಯಾಗಿರ್ಪಾತನೇ ಸದ್‍ಭಕ್ತ ನೋಡಾ ! ಅದೆಂತೆಂದೊಡೆ : ``ಸಾದಾಚಾರಃ ಶಿವೇ ಭಕ್ತಿರ್ಲಿಂಗೇ ಜಂಗಮ ಏಕದ್ಥೀಃ| ಲಾಂಛನೇ ಶರಣೇ ಭಕ್ತಿಃ ಭಕ್ತಸ್ಥಲಮನುತ್ತಮಮ್ ||'' ಎಂದುದಾಗಿ, ಇಂತಪ್ಪ ಸಹಜ ಭಕ್ತರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶರಣಭರಿತ ಲಿಂಗ ಎಲ್ಲಾ ಎಡೆಯಲ್ಲಿ ಉಂಟು. ಲಿಂಗಭರಿತ ಶರಣನಪೂರ್ವ ನೋಡಾ. ಗಮನವುಳ್ಳುದೇ ಜಂಗಮಲಿಂಗ, ನಿರ್ಗಮನಿಯಾದುದೆ ಲಿಂಗಜಂಗಮ. ಅದರ ಸಂಯೋಗ ಸಂಬಂಧವ ವೇದಿಸಿ ನಡೆಯಬಲ್ಲರೆ, ಕೂಡಲಚೆನ್ನಸಂಗಮದೇವನೆಂಬೆನು.
--------------
ಚನ್ನಬಸವಣ್ಣ
ಲಿಂಗಸಾರಾಯಸುಖಸಂಗಿಗಳನುಭಾವ ಲಿಂಗವಂತಂಗಲ್ಲದೆ ಕಾಣಬಾರದು. ಏಕೋ ಲಿಂಗ ಪ್ರತಿಗ್ರಾಹಕನಾದರೆ, ಅನ್ಯಲಿಂಗವ ಮುಟ್ಟಲಾಗದು. ದೃಷ್ಟಲಿಂಗವಲ್ಲದೆ ಬಹುಲಿಂಗದ ಅರ್ಪಿತ ಕಿಲ್ಬಿಷವೆಂದುದು. ಅನರ್ಪಿತವ ಮುಟ್ಟಲಾಗದು ಲಿಂಗಸಜ್ಜನರಿಗೆ ಅನುಭಾವದಿಂದಲ್ಲದೆ ಲಿಂಗಜಂಗಮ ಪ್ರಸಾದವರಿಯಬಾರದು. ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣಸಂಬಂಧವಪೂರ್ವ.
--------------
ಚನ್ನಬಸವಣ್ಣ
ಲಿಂಗಜಂಗಮ ಒಂದೇ ಎಂದು ಕಂದೊಳಲುಗೊಂಡಿರಲ್ಲಾ! ಮೂರೆಡೆಯ ಮುಟ್ಟಿತ್ತು ತ್ರಿವಿಧಾಚಾರ;_ ಲಿಂಗ ಒಂದೆಡೆಯಲ್ಲಿ, ಜಂಗಮ ಒಂದೆಡೆಯಲ್ಲಿ, ಪ್ರಸಾದ ಒಂದೆಡೆಯಲ್ಲಿ. _ಇಂತು ಎಲ್ಲಿಯ ಪ್ರಸಾದವೊ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭೂವಳಯ ಮಧ್ಯದ ಎಂಟೆಸಳ ಪದ್ಮದ ಮೇಲೆ ಸುಳಿವನ ಎಚ್ಚರಲೀಯ, ಕಂಟಕ ವಿರಹಿತನು, ನಂಟರಿಗೆ ವಿರೋಧಿಸಿ, ಇಳೆಯ ಗುಣ ರಹಿತನು, ಗಗನಕಮಲಕುಸುಮ ಪರಿಣಾಮದೊಳಗೆ ಪರಿಣಾಮಿ ನೋಡಾ ! ತಾನೆಂಬುದ ಹುಸಿ ಮಾಡಿ, ಲಿಂಗಜಂಗಮ ದಿಟವೆಂದು ಸಕಲ ಸುಖಭೋಗಂಗಳನರ್ಪಿಸಿದ. ಗುಹೇಶ್ವರಾ [ಅದು], ನಿಮ್ಮ ಶರಣ ಬಸವಣ್ಣಂಗಲ್ಲದೆ ಇನ್ನಾರಿಗೂ ಅಳವಡದು.
--------------
ಅಲ್ಲಮಪ್ರಭುದೇವರು
ಲಿಂಗಜಂಗಮ ಭಕ್ತಿಯ ಮಾಡಿಸಿಕೊಂಬಲ್ಲಿ ವಿವರವುಂಟು; ¯õ್ಞಕಿಕ ಅಲೌಕಿಕ ಸಹಜವೆಂಬ ಮಾಟತ್ರಯವನರಿದು_ ¯õ್ಞಕಿಕಭಕ್ತರಲ್ಲಿ ಅವರಿಚ್ಛೆಯಲ್ಲಿರ್ದು ಭಕ್ತಿಯ ಮಾಡಿಸಿಕೊಂಬುದು. ಅ¯õ್ಞಕಿಕ ಭಕ್ತರಲ್ಲಿ ತಾ ಕರ್ತನಾಗಿ ಅವರು ಭೃತ್ಯರಾಗಿ ಭಕ್ತಿಯ ಮಾಡಿಸಿಕೊಂಬುದು. ಸಹಜಭಕ್ತರಲ್ಲಿ ಕರ್ತೃತ್ವ ಭೃತ್ಯತ್ವವಿಲ್ಲದೆ ಭಕ್ತಿಯ ಮಾಡಿಸಿಕೊಂಬುದು. ಇಂತಿದು ಲಿಂಗಜಂಗಮದ ಜಾಣಿಕೆ ಕಾಣಿರೆ ! ಹೀಗಿಲ್ಲದೆ ಅವರ ಕಾಡಿ ಕರಕರಿಸಿ ಅವರ ಭಂಡು ಮಾಡಿ ತಾ ಭಂಡನಹ ಭಂಡನ ಮುಖವ ತೋರದಿರು ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಅನುಭಾವಮಾಡಬಲ್ಲವರೆಂದು ಮನ ಭಾವ ಕಳೆಯೊಳು ನಡೆವ ಲಿಂಗಜಂಗಮ ದ್ರೋಹಿಗಳ ಸಂಗಸಮರಸ ಮಾಡಲಾಗದು ಶಿವಜ್ಞಾನಿಗಳು. ಅದೇನು ಕಾರಣವೆಂದೊಡೆ: ಶುಕನ ಮಾತು, ಚೆಲುವು ನೀತಿ, ಹೊಲೆಯ ವಿಹಂಗನ ಊಟ ವಿಸರ್ಜನೆಯಂತೆ ಗುರುನಿರಂಜನ ಚನ್ನಬಸವಲಿಂಗಕ್ಕೆ ದೂರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಪರವನರಿದುದೆ ಖರ್ಪರ, ತ್ರಿವಿಧವ ಮುರಿದುದೆ ಕಟ್ಟಿಗೆ. ಸರ್ವವ ಕೇಳಿ ಕೇಳದಂತಿಪ್ಪುದೆ ಕುಂಡಲ. ರುದ್ರಪಾಶವ ಕಿತ್ತು ಗಟ್ಟಿಗೊಂಬುದೆ ಜಡೆ. ಜ್ಞಾನ ವಿಜ್ಞಾನ ಸುಜ್ಞಾನ ಮಹಾಜ್ಞಾನ ಅಪರಜ್ಞಾನ. ಇಂತೀ ಪಂಚಜ್ಞಾನ ದಹ್ಯಮಂ ಮಾಡಿ, ಬ್ರಹ್ಮಲಿಖಿತವ ತೊಡೆವಂತೆ ಧರಿಸುವುದು ತ್ರಿಪುಂಡ್ರವ. ಇಂತೀ ವೇಷವ ಧರಿಸಿ ಭಕ್ತನೆಂಬ ಭೂಮಿಯಲ್ಲಿ, ಸಕಲಕರಣಂಗಳ ತೀರ್ಥಯಾತ್ರೆಯಂ ಮಾಡುತ್ತ, ಕಳೆದುಳಿಯಬಲ್ಲಡೆ, ಆತನೇ ಲಿಂಗಜಂಗಮ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಲಿಂಗಜಂಗಮ ಒಂದೆಂದರಿಯದೆ ಲಿಂಗಜಂಗಮವ ಭಿನ್ನವಿಟ್ಟು ಅರ್ಚಿಸುವರು. ಅದೆಂತೆಂದಡೆ: ದೇಹಕ್ಕೆ ಪ್ರಾಣಕ್ಕೆ ಭೇದ ಉಂಟೆ? ಬೀಜ ವೃಕ್ಷಕ್ಕೆ ಭೇದವುಂಟೆ? ಜ್ಯೋತಿ ಪ್ರಭೆಗೆ ಭೇದ ಉಂಟೆ? ಹಾಗೆ ಲಿಂಗಜಂಗಮಕ್ಕೆ ಭೇದವಿಲ್ಲ. ಅದೇನು ಕಾರಣವೆಂದಡೆ: ಲಿಂಗವೇ ಅಂಗ, ಜಂಗಮವೇ ಪ್ರಾಣ. ಲಿಂಗವೇ ಬೀಜ, ಜಂಗಮವೇ ವೃಕ್ಷ. ಲಿಂಗವೇ ಜ್ಯೋತಿ, ಜಂಗಮವೇ ಪ್ರಕಾಶ. ಇಂತೀ ನಿರ್ಣಯವ ತಿಳಿದರೆ ಪ್ರಾಣಲಿಂಗಿ, ತಿಳಿಯದಿದ್ದರೆ ಜಡಲಿಂಗಿಗಳೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಬೇಡುವನೆ ಲಿಂಗಜಂಗಮ ? ಬೇಡಿಸಿಕೊಂಡು ಮಾಡುವಾತ ಭಕ್ತನೆ ? ಬೇಡಲಾಗದು ಲಿಂಗಜಂಗಮಕ್ಕೆ, ಬೇಡಿಸಿಕೊಂಡು ಮಾಡಲಾಗದು ಭಕ್ತಂಗೆ, ಹಿರಿಯರು ನರಮಾಂಸವ ಭುಂಜಿಸುವರೆ ಕೂಡಲಚೆನ್ನಸಂಗಮದೇವಾ ?
--------------
ಚನ್ನಬಸವಣ್ಣ
ಇನ್ನಷ್ಟು ... -->