ವಶಿಷ*ಗೋತ್ರದಲ್ಲಿ ಹುಟ್ಟಿದವನು ವಶಿಷ*ಗೋತ್ರದವನೆಂಬಂತೆ,
ಭಾರದ್ವಾಜಗೋತ್ರದಲ್ಲಿ ಹುಟ್ಟಿದವನು ಭಾರದ್ವಾಜಗೋತ್ರದವನೆಂಬಂತೆ,
ಕಾಶ್ಯಪಗೋತ್ರದಲ್ಲಿ ಹುಟ್ಟಿದವನು ಕಾಶ್ಯಪಗೋತ್ರದವನೆಂಬಂತೆ,
ವಿಶ್ವಾಮಿತ್ರಗೋತ್ರದಲ್ಲಿ ಹುಟ್ಟಿದವನು ವಿಶ್ವಾಮಿತ್ರಗೋತ್ರದವನೆಂಬಂತೆ
ಆ ಪರಿ ಆವಾವ ಗೋತ್ರದಲ್ಲಿ ಆವಾವ ಋಷಿಗಳ ವಂಶದಲ್ಲಿ ಜನಿಸಿದವನು
ಆ ಗೋತ್ರ, ಆ ಸಂತತಿ, ಆ ಸುತನು
ಎಂಬುದು ಉಪಚರ್ಯವೆ ? ಅಸತ್ಯವೇ ಹೇಳಿರಣ್ಣಾ ?
ಅದು ತಾತ್ಪರ್ಯ, ಅದು ಸತ್ಯ.
ಆ ಪರಿ ಬ್ರಾಹ್ಮಣನ ಮಗ ಬ್ರಾಹ್ಮಣನು, ಕ್ಷತ್ರಿಯನ ಮಗ ಕ್ಷತ್ರಿಯನು,
ವೈಶ್ಯನ ಮಗ ವೈಶ್ಯನು, ಶೂದ್ರನ ಶೂದ್ರನು, ಆ ಪರಿ ತಪ್ಪದು.
ದಿಟ ದಿಟ ವಿಚಾರಿಸಿ ನೋಡಿರೆ.
ಅದು ಹೇಗೆಂದಡೆ ಶ್ರುತಿ:
`ಮಹಾಬ್ರಾಹ್ಮಣಮೀಶಾನಂ' ಎಂದುದಾಗಿ
ಮತ್ತಂ `ವಿರೂಪಾಕ್ಷಂ ದ್ವಿಜೋತ್ತಮಂ' ಎಂದುದಾಗಿ
ಮಹಾಬ್ರಾಹ್ಮಣನೇ ಮಹಾದೇವನು.
ಇದಕ್ಕೆ ಮತ್ತೆ ಶಿವರಹಸ್ಯದಲ್ಲಿ
ಗುರುದೇವೋ ಮಹಾದೇವೋ ಗುರುದೇವಸ್ಸದಾಶಿವಃ
ಗುರುದೇವಃ ಪರಂ ತತ್ತ್ವಂ ತಸ್ಮೈ ಶ್ರೀಗುರುವೇ ನಮಃ
ಎಂದುದಾಗಿ,
ಮಹಾದೇವನೇ ಶ್ರೀಗುರು ಕಾಣಿರಣ್ಣಾ.
ಆ ಶ್ರೀಗುರುವಿನ ಕರಕಮಲದಲ್ಲಿ ಉದ್ಭವಿಸಿದ
ತಚ್ಛಿಷ್ಯನೇ ಮಹಾಬ್ರಾಹ್ಮಣನು, ಇಂತೆಂಬುದು ಹುಸಿಯಲ್ಲ.
ಜಾತಿ ಅಜಾತಿ ಎಂದು ಅಷ್ಟಾದಶಜಾತಿಯೊಳಗೆ ಇಕ್ಕಲಾಗದು.
ಅಷ್ಟಾದಶಜಾತಿಯೊಳಗೊಂದೂ ಭಾವಿಸಲಾಗದು.
ಆ ಮಹಿಮನೇ ಸತ್ಕುಲಜನು.
ಇದಕ್ಕೆ ಮತ್ತುಂ
`ಬ್ರಹ್ಮಣಾ ಚರತೀ ಬ್ರಾಹ್ಮಣಃ' ಎಂದುದಾಗಿ
ಆ ಮಹಾಮಹಿಮನು ಬ್ರಹ್ಮವ ಆಚರಿಸುವನಾಗಿ ಬ್ರಾಹ್ಮಣ
ಮತ್ತಂ ಕೂರ್ಮಪುರಾಣದಲಿ
`ಸ ಏವ ಭಸ್ಮಜ್ಯೋತಿಃ' ಎಂದುದಾಗಿ
ವಿಭೂತಿಯ ಧರಿಸಿಪ್ಪವನಾಗಿ ಆ ಮಹಾತ್ಮನೇ ಜ್ಯೋತಿರ್ಲಿಂಗವು.
ಮತ್ತಂ ಶಿವಧರ್ಮದಲ್ಲಿ
`ರುದ್ರಾಕ್ಷಂ ಧಾರಯೇನ್ನಿತ್ಯಂ ರುದ್ರಸ್ಸಾಕ್ಷಾದಿವ ಸ್ಮøತಃ' ಎಂದುದಾಗಿ
ರುದ್ರಾಕ್ಷಿಯಂ ಧರಿಸಿಪ್ಪª
ತಾನಾಗಿ ಆ ಮಹಾಮಹಿಮನೇ ರುದ್ರನು.
ಮತ್ತಂ ಕಾಳಿಕಾಗಮದಲ್ಲಿ
`ತಸ್ಮಿನ್ವೇದಾಶ್ಚ ಶಾಸ್ತ್ರಾಣಿ ಮಂತ್ರಃ ಪಂಚಾಕ್ಷರೀ ತಥಾ ಎಂದುದಾಗಿ,
ಶ್ರೀ ಪಂಚಾಕ್ಷರಿಯ ಜಪಿಸುವನಾಗಿ
ಆ ಮಹಿಮನೇ ವೇದವಿತ ಶಾಸ್ತ್ರಜ್ಞನು.
ಮತ್ತಂ ಲೈಂಗೇ
ಮೂಢನಾಮಪ್ಯಯುಕ್ತಾನಾಂ ಪಾಪಿನಾಂ ಚಾಭಿಚಾರಿಣಾಂ
ಯಮಲೋಕೋ ನ ವಿದ್ಯೇತ ಸದಾ ವೈ ಲಿಂಗಧಾರಣಾತ್
ಎಂದುದಾಗಿ
ಲಿಂಗವ ಧರಿಸಿಪ್ಪನಾಗಿ ಆ ಮಹಾಮಹಿಮನೇ ಲಿಂಗದೇಹಿ,
ಲಿಂಗಕಾಯನು, ಲಿಂಗಪ್ರಾಣನು
ಶಿವಲಿಂಗಾರ್ಚನೆಯಂ ಮಾಡುವನಾಗಿ, ಆ ಮಹಾಮಹಿಮನೇ ಶಿವನು
ಮತ್ತಂ ಆದಿತ್ಯಪುರಾಣೇ
ಅಕೃತ್ವಾ ಪೂಜನಂ ಶಂಭೋರ್ಯೋ ಭುಂಕ್ತೇ ಪಾಪಕೃದ್ದ್ವಿಜಃ
ಕುಣಪಂ ಚ ಮಲಂ ಚೈವ ಸಮಶ್ನಾತಿ ದಿನೇ ದಿನೇ
ಎಂದುದಾಗಿ
ಶಿವಲಿಂಗಕ್ಕೆ ಅರ್ಪಿಸದೇ ಕೊಳ್ಳನಾಗಿ ಆ ಮಹಾಮಹಿಮನೇ ರುದ್ರನು.
ಮತ್ತಂ ಶಾಂಕರಸಂಹಿತೆಯಲ್ಲಿ
ತಿಲಷೋಡಶಭಾಗಂ ತು ತೃಣಾಗ್ರಾಂಬುಕಣೋಪಮಂ
ಪಾದೋದಕಪ್ರಸಾದಾನಾಂ ಸೇವನಾನ್ ಮೋಕ್ಷಮಾಪ್ನುಯಾತ್
ಎಂದುದಾಗಿ
ಪಾದೋದಕ ಪ್ರಸಾದವಂ ಕೊಂಬನಾಗಿ
ಆ ಮಹಾತ್ಮರು ತಾನೇ ಲಿಂಗೈಕ್ಯನು.
ಇನ್ನು ನಾನಾವೇದಶಾಸ್ತ್ರಪುರಾಣಾಗಮಂಗಳ ಸಮ್ಮತ
ದೃಷ್ಟವಾಕ್ಯಂಗಳನು ವಿಚಾರಿಸಿ ನೋಡಿದಡೆಯೂ
ಶಿವಭಕ್ತನೇ ಕುಲಜನು, ಶಿವಭಕ್ತನೇ ಉತ್ತಮನು.
ಇಂತಹ ಶಿವಭಕ್ತನನು ಜಾತಿವಿಜಾತಿ ಎಂದು ಭಾವಿಸಿದಡೆ,
ಮತ್ರ್ಯನೆಂದು ಭಾವಿಸಿದಡೆ ನರಕ ತಪ್ಪದು.
ವಶಿಷ* ಪುರಾಣದಲ್ಲಿ ಕೇಳಿರೆ:
ಮತ್ರ್ಯವನ್ಮನುತೇ ಯಸ್ತು ಶಿವನಿಷ*ಂ ದ್ವಿಜಂ ನರಃ
ಕುಂಭೀಪಾಕೇ ತು ಪತತಿ ನರಕೇ ಕಾಲಮಕ್ಷಯಂ
ಎಂದುದಾಗಿ ಇದು ಕಾರಣ
ಅಷ್ಟಾದಶವಿದ್ಯಂಗಳನು ವಿಚಾರಿಸಿ ತಿಳಿದು ನೋಡಿದಡೆ
ಋಷಿಪುತ್ರನ ಋಷಿ ಎಂಬಂತೆ
ಶ್ರೀಗುರುಪುತ್ರನನು ಶ್ರೀಗುರು ಎಂಬುದಯ್ಯಾ.
ಆ ಮಹಾಮಹಿಮನ ದರ್ಶನವ ಮಾಡಿ ಪಾದೋದಕ ಪ್ರಸಾದವ
ಕೊಂಡು ಮುಕ್ತರಪ್ಪುದಯ್ಯಾ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.