Some error occurred
ಅಥವಾ

ಒಟ್ಟು 77 ಕಡೆಗಳಲ್ಲಿ , 25 ವಚನಕಾರರು , 56 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು62213121161111013111161111ಒಟ್ಟು10ಅಕ್ಕಮಹಾದೇವಿ28ಅಕ್ಕಮ್ಮ37ಅಂಬಿಗರಚೌಡಯ್ಯ18ಅರಿವಿನಮಾರಿತಂದೆ3ಅಲ್ಲಮಪ್ರಭುದೇವರು86ಉರಿಲಿಂಗದೇವ32ಉರಿಲಿಂಗಪೆದ್ದಿ15ಕೋಲಶಾಂತಯ್ಯ 92ಗಣದಾಸಿವೀರಣ್ಣ 7ಚನ್ನಬಸವಣ್ಣ11ದೇಶಿಕೇಂದ್ರಸಂಗನಬಸವಯ್ಯ 9ನಗೆಯಮಾರಿತಂದೆ112ಪ್ರಸಾದಿಭೋಗಣ್ಣ 1ಬಸವಣ್ಣ13ಮಧುವಯ್ಯ19ಮೋಳಿಗೆಮಾರಯ್ಯ 75ವಚನಭಂಡಾರಿಶಾಂತರಸ119ವೀರಗೊಲ್ಲಾಳ/ಕಾಟಕೋಟ 25ಷಣ್ಮುಖಸ್ವಾಮಿ40ಸಗರದಬೊಮ್ಮಣ್ಣ 5ಸಿದ್ಧರಾಮೇಶ್ವರ31ಸೊಡ್ಡಳಬಾಚರಸ 42ಸ್ವತಂತ್ರಸಿದ್ಧಲಿಂಗ 107ಹಾವಿನಹಾಳಕಲ್ಲಯ್ಯ115ಹೆಂಡದಮಾರಯ್ಯ 051015
ಆಲಸ್ಯ(ಆಲಯಳ)ವಿಲ್ಲದೆ ಲಿಂಗಲೀಯ ಮಾಡುತ್ತಿದ್ದವು ತವತವಗೆ ಪ್ರಾಣಾದಿಗಳು. ತಾಗಿದ ಸುಖ ಲೇಸು ಲಿಂಗಕ್ಕೆಂಬವಯ್ಯಾ, ಲಿಂಗಭೋಗೋಪಭೋಗದಲ್ಲಿ ತವತವಗೆ ಪ್ರಾಣಾದಿಗಳು. ಕಲಸದೆ ಬೆರಸದೆ ವಿವರಿಸಿ ಕಳೆದು, ಸವಿಯ ಸಂಪುಟದ ಸುಖವ ಕೂಡಲಚೆನ್ನಸಂಗಾ ನಿಮ್ಮ ಶರಣ ಬಲ್ಲ.
--------------
ಚನ್ನಬಸವಣ್ಣ
ಎರವಿನ ಬದುಕು ಸ್ಥಿರವಲ್ಲ. ಅಭ್ರಛಾಯದಂತೆ ನಿಮುಷದಲ್ಲಿ ತೋರಿಯಡಗಲು, ಈ ಸಂಸಾರದಲ್ಲೇನು ಲೇಸು ಕಂಡು ನಚ್ಚುವೆ? ನಚ್ಚದಿರು. ನಚ್ಚಿದವರ ಕೆಟ್ಟ ಕೇಡಿಂಗೆ ಕಡೆಯಿಲ್ಲ. ಬರಿಯ ಬಯಲ ಭ್ರಮೆ ಸಟೆಯ ಸಂಸಾರ. ಇದರಲ್ಲೇನೂ ಲೇಸಿಲ್ಲವೆಂದರಿದು ದೃಢವಿಡಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶ್ರೀಚರಣವನು.
--------------
ಸ್ವತಂತ್ರ ಸಿದ್ಧಲಿಂಗ
ಹಸಿವು ತೃಷೆಯಂಡಲೆಯಾವರಿಸಿ, ಕುಸಿವುತಿರ್ಪುದು ನೋಡಾ ತನುವು. ವಿಷಯವಿಕಾರದಂಡಲೆಯಾವರಿಸಿ, ದೆಸೆದೆಸೆಗೆ ನುಸುಳುತಿಪ್ಪುದು ನೋಡಾ ಮನವು. ಈ ತನುಮನದಲ್ಲಿ ಮುಸುಕಿದ ಮಾಯಾವಾಸನೆಯ ಕಳೆದು ನಿಮ್ಮ ಭಕ್ತಿಯ ಲೇಸು ತೋರಿಸಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಬೆಟ್ಟದ ಲಿಂಗವ ಹಿರಿದುಮಾಡಿ, ತನ್ನ ಇಷ್ಟಲಿಂಗವ ಕಿರಿದುಮಾಡುವ ಮೂಳಹೊಲೆಯರಿರಾ, ಅಣುರೇಣುತೃಣಕಾಷ್ಠ ಮೊದಲಾದ ಬ್ರಹ್ಮಾಂಡ ಪರಿಪೂರ್ಣವಾದ ಮಹಾಲಿಂಗವೆ ಅಂಗಕ್ಕೆ ಗುರುವು ಎಂದು ಸಂಬಂದ್ಥಿಸಿ ಸರ್ವಸಂ[ಕು]ಲವ ತೋರಿದ ಬಳಿಕ, ಇಂತಪ್ಪ ಮೋಕ್ಷಕ್ಕೆ ಕಾರಣವಾದ ಲಿಂಗವನು ಅಡಿಮಾಡಿ ನಟ್ಟ ಕಲ್ಲಿಂಗೆ ಅಡ್ಡಬೀಳುವ ಹೊಲೆಯರಿಗೆ ಲಿಂಗ ಕಟ್ಟುವುದು ಕಿರಿದು, ಗೊಡ್ಡೆಮ್ಮೆಗೆ ಲಿಂಗವದು ಕರ ಲೇಸು. ಇಂಥ ಮೂಳ ಹೊಲೆಯರು ಶಿವಭಕ್ತರೆಂದು ನುಡಿವ ಭ್ರಷ್ಟರನು ಕತ್ತೆಯನೇರಿಸಿ ಕೆರಹಿನಟ್ಟೆಯಲಿ ಹೊಡೆಯೆಂದಾತ ನಮ್ಮ ಅಂಬಿಗರ ಚೌಡಯ್ಯನೆಂಬ ನಿಜಶರಣನು.
--------------
ಅಂಬಿಗರ ಚೌಡಯ್ಯ
ಅಷ್ಟಮದಕ್ಕೂ ಒಂದರ ಹೆಚ್ಚಿಗೆ. ನಾನಾ ವಿಕಾರಕ್ಕೂ ಒಂದೇ ವಿಕಾರ. ನಾನಾ ಬುದ್ಧಿಗೂ ಒಂದೇ ಬುದ್ಧಿ. ಒಂದು ಘಟ್ಟದಲ್ಲಿ ತೋರುವ ತಂತುವಿನ ದನಿಬ್ಥಿನ್ನದಂತೆ, ಅದು ಬಿಗಿವ, ಸಡಿಲಿಸುವ ತಂತ್ರದ ಭೇದ. ಅರಿವು ಮರವೆಯಿಂದಾದ ಮದವ ನೆರೆ ಹೊತ್ತುಬಂದೆ. ಕೊಂಡಡೆ ಲೇಸು, ಕಂಡಡೆ ಲೇಸು, ಕಾಣದಿರ್ದಡೆ ಕರಲೇಸು, ಧರ್ಮೇಶ್ವರ[ಲಿಂಗಾ].
--------------
ಹೆಂಡದ ಮಾರಯ್ಯ
ಅಂದಂದಿನ ದಿನವ ಸಂಸಾರವಂದಂದಿಗೆ ಗ್ರಹಿಸುತ್ತಿದೆ. ಎಂದಯ್ಯಾ ನಿಮ್ಮ ನೆನೆವೆ, ಎಂದಯ್ಯಾ ನಿಮ್ಮ ಪೂಜಿಸುವೆ. ಸಮಚಿತ್ತದಿಂದ ನಿಮ್ಮ ನೆನೆವಡೆ, ನಾಳಿಗಿಂದೇ ಲೇಸು ಮಹಾಲಿಂಗ ಕಲ್ಲೇಶ್ವರಾ.
--------------
ಹಾವಿನಹಾಳ ಕಲ್ಲಯ್ಯ
ಸತ್ಯ ಶೌಚ ನಿತ್ಯನೇಮವ ತಪ್ಪದೆ ಮಾಡಬಲ್ಲಡೆ ಅದು ಲೇಸು. ಮತ್ಸ್ಯ ಕೂರ್ಮ ಮಂಡೂಕ ಜಲದೊಳಗಿರ್ದಲ್ಲಿ ಫಲವೇನು ಚಿತ್ತಮಂತರ್ಗತಂ ದೃಷ್ಟ್ವಾ ತೀರ್ಥಸ್ನಾನಾನ್ನ ಶುಧ್ಯತಿ ಶತಕುಂಭಜಲೇ ಶೌಚಂ ಸುರಾಭಾಂಡಮಿವಾ[s] ಶುಚಿಃ ಆಗಡವ ಮಾಡಿ ಮಾಗುಡವ ಮಿಂದಡೆ, ತಾ [ಕೂ]ಡಬಲ್ಲನೆ ಕೂಡಲಸಂಗಮದೇವ
--------------
ಬಸವಣ್ಣ
ಹೊಲೆಯ ಹೊಲಬಿಗನಾದಡೆ, ಅವನ ಹೊರೆಯಲಿಪ್ಪುದು ಲೇಸು ಕಂಡಯ್ಯಾ. ಹೊಲಬುಗೆಡದೆ ಲಿಂಗ ಶರಣೆನ್ನಿರಯ್ಯಾ. ಹೊಲಬುಗೆಡಬೇಡ, ಶಿವ ಶರಣೆನ್ನಿರಯ್ಯಾ. ನಮ್ಮ ಕೂಡಲಸಂಗನ ಮಹಾಮನೆಯಲು ಮಾದಾರ ಚೆನ್ನಯ್ಯ ಹೊಲಬಿಗನಯ್ಯಾ. 135
--------------
ಬಸವಣ್ಣ
ಕೇಳಾ ಹೇಳುವೆನು: ಮಹಾಘನಲಿಂಗಭಕ್ತನು ಆಚರಿಸುವ ಸದ್ವರ್ತನನಿರ್ಣಯವ, ಅದು ಪರಶಿವಲಿಂಗದ ನಿತ್ಯಪದದ ಮಾರ್ಗ: ಗೌರವಂ ಲೈಂಗಿಕಂ ಚಾರಂ ಪ್ರಸಾದಂ ಚರಣಾಂಬುಕಂ ಭೌಕ್ತಿಕಂ ಚ ಮಯಾ ಪ್ರೋಕ್ತಂ ಷಡ್ವಿಧಂ ವ್ರತಮಾಚರೇತ್ ಗುರುದೇವಃ ಶಿವಃ ಸಾಕ್ಷಾತ್ ತಚ್ಚಿಷ್ಯೋ ಜ್ಞಾನಸಾರವಿತ್ ತ್ರಿವಿಧಂ ಹೃದಿ ಸಂಭಾವ್ಯ, ಕೀರ್ತಿತಂ ಗೌರವಂ ವ್ರತಂ ಗುರುಣಾ ಚಾರ್ಪಿತಂ ಲಿಂಗಂ ಪ್ರಾಣಲಿಂಗಂ ಪ್ರಕಥ್ಯತೇ ತಥೈವ ಭಾವನಾದ್ವೈತಂ ತದ್ವ್ರತಂ ಲೈಂಗಿಕಂ ಸ್ಮøತಂ ಗುರುಲಿಂಗಚರಾಧೀನಂ ನಿರ್ಮಾಲ್ಯಂ ಭೋಜನಾದಿಕಂ ತಸ್ಯಾನುಭಾವನಂ ದೇವಿ ತತ್ಪರಂ ವ್ರತಮುತ್ತಮಂ ಗುರುಪಾದಾಬ್ಜಸಂಭೂತಂ ಉಜ್ಜಲಂ ಲೋಕಪಾವನಂ ತಜ್ಜಲಸ್ನಾನಪಾನಾದಿ ತದ್ವ್ರತಂ Z್ಪರಣಾಂಬುಕಂ|| ಗುರುಲಿಂಗಚರಾಣಾಂ ಚ ಪ್ರಸಾದಂ ಪಾದವಾರುಣಂ| ಪರ್ಯಾಯಭಜನಂ ಭಕ್ತ್ಯಾ ತದ್ವ್ರತಂ ಸ್ಮøತಂ|| ಕ್ರಿಯಾದ್ವೈತಂ ನ ಕರ್ತವ್ಯಂ ಭಾವಾದ್ವೈತಂ ಸಮಾಚರೇತ್| ಕ್ರಿಯಾಂ ನಿರ್ವಹತೇ ಯಸ್ತು ಭಾವಶುದ್ದಂ ತು ಶಾಂಕರಿ|| ಎಚಿದುದಾಗಿ, ಪೂಜಿತೈಃ ಶಿವಭಕ್ತೈಶ್ಚ ಪರಕರ್ಮ ಪ್ರಪಚಿಚಿತಂ| ಪುಣ್ಯಸ್ಸಶಿವಧರ್ಮಃ ಸ್ಯಾತ್ ವಜ್ರಸ್ರಚಿಸ್ಸಮಬ್ರವೀತ್|| ಪಾತ್ರಶಾಸನಯೋರ್ಮಧ್ಯೇ ಶಾಸನಂ ತು ವಿಶಿಷ್ಯತೇ| ತಸ್ಮಾತ್ ಶಾಸನಮೇವಾದೌ ಪೂಜ್ಯತೇ ಚ ಶವೋ ಯಥಾ|| ಗುಣವತ್ಪಾತ್ರಪ್ರಜಾಯಾಂ ವರಂ ಶಾಸನಪೂಜನಂ| ಶಾಸನಂ ಪೂಜಾಯೇತ್ತಸ್ಮಾಸವಿZ್ಫರಂ ಶಿವಾಜÐಯಾ|| ಸ ನರೋ ಭೃತ್ಯಸದ್ಭಕ್ತಃ ಪತಿಕರ್ಮಾ ಚ ಜಂಗಮಃ| ರೂಪಂ ಚ ಗುಣಶೀಲಂ ಚ ಅವಿZ್ಫರಂ ಶುಭಂ ಭವೇತ್|| ಗುಣೋಗುಣಶ್ಚ ರೂಪಂ ಚ ಅರೂಪಂ ಚ ನ ವಿದ್ಯತೇ ಪಶ್ಶತ್ಯಮೋಹಭಾವೇನ ಸ ನರಃ ಸುಖಮೇಧತೇ ದುಶ್ಶೀಲಃ ಶೀಲಸರ್ವಜ್ಞಂ ಮೂರ್ಖಭಾವೇನ ಪಶ್ಯತಿ ಪಶ್ಯಂತಿ ಲಿಂಗಭಾವೇನ ಸದ್ಭಕ್ತಾ ಮೋಕ್ಷಭಾವನಾಃ ಯಥಾ ಲಿಂಗಂ ತಥಾ ಭಾವಃ ಸತ್ಯಂ ಸತ್ಯಂ ನ ಸಂಶಯಃ ಯಥಾ ಭಕ್ತಿಸ್ತಥಾ ಸಿದ್ಧಿಃ ಸತ್ಯಂ ಸತ್ಯಂ ನ ಸಂಶಯಃ ಸತ್ಯಭಾವಿ ಮಹಾಸತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ಮಿಥ್ಯಭಾವೀತ್ವಹಂ ಮಿಥ್ಯಾ ಸತ್ಯಂ ಸ್ಯಾಚ್ಚಿವಲಕ್ಷಣಂ ದಕ್ಷಿಣೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅದಕ್ಷೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅರಿರ್ಮಿತ್ರಂ ವಿಷಂ ಪಥ್ಯಂ ಅಧರ್ಮೋ ಧರ್ಮವದ್ಭವೇತ್ ಪ್ರಸನ್ನ ಏವ ದೇವೇ ತು ವಿಪರೀತಂ ಭವೇದ್ಧೃವಂ ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಚ್ಯತೆ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಪಲಂ ಭವೇತ್ ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋ[s]ಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಸಃ ಪೂಜ್ಯಶ್ಚ ಯಥಾ ಹ್ಯಹಂ ಸದ್ಗುರುರ್ಭಾವಲಿಂಗಂ ಚ ತಲ್ಲಿಂಗಂ ಚಿತ್ಸ್ವರೂಪಕಂ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಗುರುಃ ಪರಶಿವಶ್ಚೈವ ಜಂಗಮೋ ಲಿಂಗಮೇವ ಚ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಲಿಂಗಾಂಗೀ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ .................................................................. ತತ್ತ್ವದೀಪಿಕಾಯಾಂ ಪ್ರಸಾದೋ ಮುಕ್ತಿಮೂಲಂ ಚ ತತ್ಪ್ರಸಾದಸ್ತ್ರಿಧಾ ಮತಃ ಶಿವಃ ಸರ್ವಾಧಿದೇವಃ ಸ್ಯಾತ್ ಸರ್ವಕರ್ಮ ಶಿವಾಜ್ಞಯಾ ತತ್ತ್ವದೀಪಿಕಾಯಾಂ ಮಾಹೇಶ್ವರಸ್ಯ ಸಂಗಾದ್ಧಿ ಶಿವಯೋಗಂ ಲಭೇನ್ನರಃ ಪ್ರಸಾದಂ ತ್ರಿವಿಧಂ ಗ್ರಾಹ್ಯಂ ಮಹಾಪಾಪವಿನಾಶಕಂ ತತ್ತ್ವದೀಪಿಕಾಯಾಂ ಧನಪುತ್ರಕಲತ್ರಾದಿಮೋಹಂ ಸಂತ್ಯಜ್ಯ ಯೋ ನರಃ ಶಿವಭಾವೇನ ವರ್ತೇತ ಸದ್ಯೋನ್ಮುಕ್ತಸ್ಸುಖೀ ಭವೇತ್ ಪ್ರಾಣಲಿಂಗೇತ್ವವಿಶ್ವಾಸಾತ್ ಭಕ್ತಿಮುಕ್ತಿದ್ವಯಂ ನ ಚ ಪ್ರಾಣಲಿಂಗಸ್ಯ ವಿಶ್ವಾಸಾತ್ ಸಿದ್ದಿಃ ಸ್ಯಾತ್ ಭಕ್ತಿಮುಕ್ತಿದಾ ಪ್ರಾಣಲಿಂಗಮವಿಶ್ವಸ್ಯ ತೀರ್ಥಲಿಂಗಮುಪಾಸತೇ ಸ ನರಃ ಸ್ವರ್ಗಮಾಪ್ನೋತಿ ಗಣತ್ವಂ ನ ಪ್ರಯುಜ್ಯತೇ ಪ್ರಾಣಲಿಂಗಸಮಾಯುಕ್ತಃ ಪರಹಸ್ತಸಮರ್ಚನಾತ್ ತತ್ಪೂಜಾ ನಿಷ್ಫಲಾ ದೇವಿ ರೌರವಂ ನರಕಂ ವ್ರಜೇತ್ ಪ್ರಾಣಲಿಂಗಸಮಾಯುಕ್ತಃ ಪರಹಸ್ತೇ ದದಾತಿ ಚೇತ್ ನಿಮಿಷಾರ್ಧವಿಯೋಗೇನ ವಿಶೇಷಂ ಪಾತಕಂ ಭವೇತ್ ಪ್ರಾಣಲಿಂಗಸಮಾಯುಕ್ತ ಏಕಭುಕ್ತೋಪವಾಸತಃ ಗುರುಲಂಘನಮಾತ್ರೇಣ ಪೂಜಾ ಯಾ ನಿಷ್ಪಲಾ ಭವೇತ್ ಇಷ್ಟಲಿಂಗಂ ಸಮುತ್ಸೃಜ್ಯ ಅನ್ಯಲಿಂಗಸ್ಯ ಪೂಜನಾತ್ ಸ್ವೇಷ್ಟಂ ನ ಲಭತೇ ಮತ್ರ್ಯಃ ಪರಂ ತತ್ತ್ವಂ ನಿಹತ್ಯಸೌ ಅತ್ಯಂತಮಹಿಮಾರೂಢಂ ಶಿವಮಾಹಾತ್ಮ್ಯವಿಸ್ತರಂ ಯೋ[s]ಪಿ ದೃಷ್ಟ್ವಾಪ್ಯವಿಶ್ವಾಸೀ ಸ ಭಕ್ತೋ ನರಕಂ ವ್ರಜೇತ್ ಅಥ ಯೋ ಯಾದವ ಶ್ಚೈವ ರಾಜಾನಶ್ಯವೋ ಗ್ರಹಾ ನೈವ ಪೀಡ್ಯಸ್ತು ಯತ್ಕೃತ್ವಾ ನರಂ ಹಾರಪರಾಯಣಂ ಹಿರಣ್ಯರೂಪದೇಹಸ್ತಂ ಹಿರಣ್ಯಪತಿಪ್ರಾಣಿನಾಂ ಆಶಾದನ್ಯಂ ಹಿರಣ್ಯಂ ಚ ತದ್ದೇಹಂ ಲಿಂಗವರ್ಜಯೇತ್ ಘೃಣಾಮೂರ್ತಿರ್ಮಹಾದೇವೋ ಹಿರಣ್ಯೋದ್ಭಾಹು ಶಂಕರಃ ವರದಾಭಯ ಮತ್ಸ್ವಾಮಿನ್ ಯೇ ಆಶಾದನ್ಯಂ ವಿವರ್ಜಯೇತ್ ಆಶಾ ಚ ನರಕಂ ಚೈವ ನಿರಾಶಾ ಮುಕ್ತಿರೇವ ಹಿ ಆಶಾನಿರಾಶಯೋರ್ನಾಸ್ತಿ ತತ್ಸುಖಸ್ಯ ಸಮಂ ಪರಂ ಶಿವರಹಸ್ಯೇ ಜಪಶ್ರಾಂತಃ ಪುನಧ್ರ್ಯಾಯೇತ್ ಧ್ಯಾನಶ್ರಾಂತಃ ಪುನರ್ಜಪೇತ್ ಜಪಧ್ಯಾನಾದಿಯೋಗೇನ ಶಿವಃ ಕ್ಷಿಪ್ರಂ ಪ್ರಸೀದತಿ ಗಚ್ಚನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ ಶುಚಿರ್ವಾಪ್ಯಶುಚಿರ್ವಾಪಿ ಶಿವಂ ಸರ್ವತ್ರ ಚಿಂತಯೇತ್ ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂ ಗತೋ[s]ಪಿ ವಾ ಯಸ್ಸ್ಮರೇತ್ ಸತತಂ ರುದ್ರಂ ಸ ಬಾಹ್ಯಾಭ್ಯಂತರಃ ಶುಚಿಃ ದುರ್ಲಭಂ ಮಾನುಷಂ ಜನ್ಮ ವಿವೇಕಸ್ತ್ವತಿದುರ್ಲಭಃ ದುರ್ಲಭಾ ಚ ಶಿವೇ ಭಕ್ತಿಃ ಶಿವಜ್ಞಾನಂ ತು ದುರ್ಲಭಂ ಇಂ್ರಯಪ್ರೀತಿದಾತಾರಃ ಪುಮಾಂಸೋ ಬಹವಃ ಕಿಲ ಶಿವಜ್ಞಾನಾರ್ಥದಾತಾರಃ ಪುಮಾಂಸೋ ಲೋಕದುರ್ಲಭಾಃ ಲಿಂಗಭಕ್ತ್ಯಾ ಮನಃ ಪೂತಂ ಅಂಗಂ ಪೂತಂ ತು ದೇಶಿಕಾತ್ ಭಾವಸ್ತು ಜಂಗಮಾತ್ ಪೂತಸ್ತ್ರಿವಿಧಾ ಭಕ್ತಿರುತ್ತಮಾ ಅಷ್ಟವಿಧಾರ್ಚನಂ ಲಿಂಗೇ ಅಷ್ಟಭೋಗಸ್ತು ಜಂಗಮೇ ಲಿಂಗೇ ಷೋಡಶೋಪಚಾರಾಃ ಸರ್ವೇ ತಾತ್ಪರ್ಯಜಂಗಮೇ ಮನೋ ಲೀನಂ ಮಹಾಲಿಂಗೇ ದ್ರವ್ಯಂ ಲೀನಂ ತು ಜಂಗಮೇ ತನುರ್ಲೀನೋ ಗುರೌ ಲಿಂಗೇ ಇತಿ ಭಕ್ತಸ್ಯ ವೈ ಧೃವಂ ಸಕಲಂ ಭಕ್ತರೂಪಂ ಚ ನಿಷ್ಕಲಂ ಶಿವರೂಪಕಂ ಸಕಲಂ ನಿಷ್ಕಲಂ ಮಿಶ್ರಂ ಚರರೂಪಂ ವಿಧೀಯತೇ ಸತ್ಕ್ರಿಯಾಂ ಪೂಜಯೇತ್ಪ್ರಾತರ್ಮಧ್ಯಾಹ್ನೇ ಭೋಜನಾವಧಿಂ ಸಾಯಂಕಾಲೇ ಮಹಾಪೂಜಾಂ ತತ್ಕ್ರಮಸ್ತು ವಿಶಿಷ್ಯತೇ ಮನಃಪೂತಾರ್ಚನಂ ಭಕ್ತ್ಯಾ ಪ್ರಾತಃಕಾಲವಿಧಿಕ್ರಮಃ ಸುಜಲಂ ಸುರಸಂ ಚೈವ ಯಥಾಸಂಭವದ್ರವ್ಯಕಂ ಅರ್ಪಯೇಚ್ಚರಲಿಂಗಾಯ ಮಧ್ಯಾಹ್ನೇ ಪೂಜನಕ್ರಮಃ ಗಂಧಂ ಪುಷ್ಪಂ ಚ ಕರ್ಪೂರಂ ಚಂದನಂ ಲೇಪನಂ ತಥಾ ಅರ್ಪಯೇತ್ ಫಲತಾಂಬೂಲಂ ಸಂಧ್ಯಾಪೂಜಾರ್ಚನಾವಿಧಿಕ್ರಮಃ ಧೂಪಮುಷ್ಣಾಧಿಕಂ ಸರ್ವಂ ಪ್ರಾತಃಕಾಲಾರ್ಚನಾವಿಧಿಃ ಪೂಜೋಪಚಾರಸ್ಸರ್ವೇಷಾಂ ಶೈತ್ಯಂ ಮಧ್ಯಾಹ್ನಸಂಧಿಷು ತ್ರಿಸಂಧ್ಯಾ ತ್ರಿಷು ಕಾಲೇಷು ಉಷ್ಣಂ ನೈವೇದ್ಯಮುತ್ತಮಂ ಯಥಾಸಂಭವಂ ಸಂಧ್ಯಾಯಾಂ ನಾದಾದೀನಿ ವಿಧಿಕ್ರಮಾತ್ ಶರಸಂಯುಕ್ತಪೂಜಾಯಾಂ ಕೇವಲಂ ನರಕಂ ಭವೇತ್ ನಿಶ್ಶಠಃ ಪೂಜಕಶ್ಚೈವ ಕೇವಲಂ ಮುಕ್ತಿಕಾರಣಂ ಅಷ್ಟಾದಶಾನಾಂ ಜಾತೀನಾಂ ಶಠಕರ್ಮಸ್ವಭಾವತಃ ನಿಶ್ಯಠಾಃ ಕುಲಮರ್ಯಾದಾಃ ಸದ್ಭಕ್ತಾಶ್ಚ ಶಿವಪ್ರಿಯಾಃ ಲಿಂಗಧಾರೀ ಮಹಾಲಿಂಗಂ ನ ಭೇದೋ ತತ್ರ ದೃಶ್ಯತೇ ಸದ್ವೈತ್ತೋ ಭೃತ್ಯರೂಪಶ್ಚ ಸತ್ಯಂ ಸತ್ಯಂ ಸಮೋ ನ ಚ ಕರ್ತೃಭೃತ್ಯಸ್ಯ ಸನ್ಮಾರ್ಗದುರ್ಮಾರ್ಗಸಮಭಾವತಃ ಅಹಂಕಾರೋ ಮಹಾಪಾಪಂ..... ಜನ್ಮಾಂತರಸಹಸ್ರೇಷು ತಪೋಧ್ಯಾನಪರಾಯಣೈಃ ನರಾಣಾಂ ಕ್ಷೀಣಪಾಪಾನಾಂ ಶಿವೇ ಭಕ್ತಿಃ ಪ್ರಜಾಯತೇ ತತೋ ವಿಷಯವೈರಾಗ್ಯಂ ವೈರಾಗ್ಯಾತ್ ಜ್ಞಾನಸಂಭವಃ ಜ್ಞಾನೇನ ತು ಪರಾ ಭಕ್ತಿಃ ಪ್ರಸಾದಸ್ತದನಂತರಂ ಪ್ರಸಾದಾನ್ಮುಚ್ಯತೇ ಜಂತುರ್ಮುಕ್ತಃ ಶಿವಸಮೋ ಭವೇತ್ ಅಸಾರೇ ದಗ್ಧಸಂಸಾರೇ ಸಾರಂ ದೇವಿ ಶಿವಾರ್ಚನಂ ಸತ್ಯಂ ವಚ್ಮಿ ಹಿತಂ ವಚ್ಮಿ ವಚ್ಮಿ ಪಥ್ಯಂ ಪುನಃ ಪುನಃ ಉಪಾಧಿಃ ಸ್ಯಾನ್ಮಹಾಭಕ್ತಿರುಪಾಧಿಸ್ಯಾತ್ಪ್ರಸಾದಕಃ ಉಪಾಧಿಃ ಸ್ಯಾತ್ಕ್ರಿಯಾಸ್ಸರ್ವಾಶ್ಯಿವಸ್ಯಾಸ್ಯಾ[s] ಪ್ರಸಾದತಃ ನಿುಪಾಧಿಕಮದ್ಭಕ್ತಿರ್ನಿರುಪಾಧಿಕಪ್ರಸಾದತಃ ನಿರೂಪಾಧಿಕ್ರಿಯಾಸ್ಸರ್ವಾಃ ಶಿವಃ ಶೀಘ್ರಂ ಪ್ರಸೀದತಿ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಮಹಾದ್ಭುತಂ ವತ್ಸರೇ ವತ್ಸರೇ ಚೋದ್ಯಂ ಸದ್ಭಕ್ತಸ್ಯಾಭಿವರ್ಧನಂ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಹಿ ದೃಶ್ಯತಾಂ ವತ್ಸರೇ ವತ್ಸರೇ ನಷ್ಟಾ ಮಹಾವಾಸಕ್ರಿಯಾಸ್ತಥಾ ದಾಸೋ[s]ಹಂ ಚ ಮಹಾಖ್ಯಾತಿರ್ದಾಸೋ[s]ಹಂ ಲಾಭ ಏವ ಚ ದಾಸೋ[s]ಹಂ ಚ ಮಹತ್ಪೂಜ್ಯಂ ದಾಸೋ[s]ಹಂ ಸತ್ಯಮುಕ್ತಿದಂ ಸದ್ಭಕ್ತಸಂಗಸಿದ್ಧಿಃ ಸ್ಯಾತ್ ಸರ್ವಸಿದ್ಧಿರ್ನ ಸಂಶಯಃ ಭಕ್ತಿಜ್ರ್ಞಾನಂ ಚ ವೈರಾಗ್ಯಂ ವರ್ಧತಾಂ ಚ ದಿನೇ ದಿನೇ ಮಹತ್ಸುಖಂ ಮಹಾತೋಷೋ ಲಿಂಗಭಕ್ತ್ಯಾ ಯಥಾ ಶಿವೇ ಪ್ರಾಣಲಿಂಗಪ್ರತೀಕಾರಂ ಕುರ್ವಂತೀಹ ದುರಾತ್ಮನಃ ಅತ್ಯುಗ್ರನರಕಂ ಯಾಂತಿ ಯುಗಾನಾಂ ಸಪ್ತವಿಂಶತಿ ಹುತಭುಗ್ಪತಿತಾಂಭೋಜಗತಿಃ ಪಾತಕಿನಾಂ ಭವೇತ್ ಸುಜ್ಞಾನ ಸದ್ಭಕ್ತಿ ಪರಮವೈರಾಗ್ಯಕ್ಕೆ ಶಿವನೊಲಿವನಲ್ಲದೆ ಸಾಮಾನ್ಯ ತಟ್ಟು ಮುಟ್ಟು ತಾಗು ನಿರೋಧದಲ್ಲಿ ಅನುಸರಿಸಿದಡೆ ಶಿವ ಮೆಚ್ಚುವನೆ ? ಸತ್ಯಶುದ್ಧ ನಿತ್ಯಮುಕ್ತ ಶರಣರು ಮೆಚ್ಚುವರೆ? ಶಿವನೊಲವು ಶರಣರೊಲವು ಸೂರೆಯೇ? ದೇವದಾನವ ಮಾನವರಂತೆ ಶಿವನಲ್ಲಿ ಭಕ್ತಿಯನು ಅನುಸರಿಸಿ ನಡೆವುದು ಭಕ್ತಿಯೇ ಅಲ್ಲ. ತಾಮಸ ರಾಜಸ ಉಳ್ಳುದು ಭಕ್ತಿಯ ಕುಳವಲ್ಲ, ಸದ್ಭಕ್ತಿಗೆ ಸಲ್ಲದು. ಗುರು ಲಿಂಗ ಜಂಗಮಕ್ಕೆ ಮರುಗಿ ತ್ರಿವಿಧಪದಾರ್ಥವ ಮನೋವಾಕ್ಕಾಯದಲ್ಲಿ ವಂಚನೆಯಿಲ್ಲದೆ ಮನ ಧನವನರ್ಪಿಸಿ ಮನ ಮುಟ್ಟಿದಡೆ ಗುರು ಲಿಂಗ ಜಂಗಮದ ಘನಮಹಿಮೆಯ ವೇದಪುರಾಣಾಗಮಂಗಳಿಂ ಗುರುವಾಕ್ಯದಿಂ ಪುರಾತನರ ಮತದಿಂದರಿದು ಮರೆವುದು ಜ್ಞಾನವಲ್ಲ. ಅರಿದು ಮರೆವುದು ಶ್ವಾನಜ್ಞಾನವಲ್ಲದೆ ಇಂತಪ್ಪ ಅಜ್ಞಾನಕ್ಕೆ ಒಲಿವನೇ ಶಿವನು? ಮೆಚ್ಚುವರೇ ಶರಣರು? ಶ್ರೀಗುರುಲಿಂಗಜಂಗಮವೊಂದೆಂಬರಿವು ಕರಿಗೊಂಡು ಸದ್ಭಾವದಿಂ ಭಾವಿಸಿ ಭಾವಶುದ್ಧಿಯಾದುದು ಸುಜ್ಞಾನ. ಗುರುಲಿಂಗಜಂಗಮದ ಅರ್ಚನೆ ಪೂಜನೆ ಅರ್ಪಿತ ದಾಸೋಹಕ್ರೀವಿಡಿದು ಸಂಸಾರಕ್ರೀ ಪರಧನ ಪರಸ್ತ್ರೀ ಅನ್ಯದೈವ ಭವಿಯನು ಅನುಸರಿಸಿ ಹಿಡಿದುದು ವೈರಾಗ್ಯವೇ ? ಅಲ್ಲ, ಅದು ಮರ್ಕಟ ವೈರಾಗ್ಯ. ಇವ ಬಿಟ್ಟು ಸದ್ಭಕ್ತಿ ಸಮ್ಯಗ್‍ಜ್ಞಾನ ಪರಮವೈರಾಗ್ಯಯುತನಾಗಿ ಗುರುಲಿಂಗಜಂಗಮಕ್ಕೊಲಿದು ಒಲಿಸುವುದು, ಸದ್ಭಕ್ತಿಪ್ರಸಾದಮುಕ್ತಿಯ ಹಡೆವುದು. ಈ ಸತ್ಕ್ರಿಯಾಭಕ್ತಿಯುಳ್ಳಡೆ ಲೇಸು, ಅಲ್ಲದಿದ್ದಡೆ ಸಾವುದೇ ಲೇಸಯ್ಯ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಹಡೆದೊಡವೆ ವಸ್ತುವನು ಮೃಡಭಕ್ತರಿಗಲ್ಲದೆ ಕಡಬಡ್ಡಿಯ ಕೊಡಲಾಗದು. ಬಂದಡೊಂದು ಲೇಸು, ಬಾರದಿದ್ದಡೆರಡು ಲೇಸು. ಅಲ್ಲಿದ್ದಡೆಯೂ ಲಿಂಗಕ್ಕೆ ಬೋನ. ಇಲ್ಲಿದ್ದಡೆಯೂ ಲಿಂಗಕ್ಕೆ ಬೋನ. ಲಿಂಗದೊಡವೆ ಲಿಂಗಕ್ಕೆ ಸಾರಿತ್ತಾಗಿ ಬಂದಿತ್ತೆಂಬ ಪರಿಣಾಮವಿಲ್ಲ, ಬಾರದೆಂಬ ದುಃಖವಿಲ್ಲ. ಇದು ಕಾರಣ ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆ, ಕಡಬಡ್ಡಿಯ ಕೊಡಲಾಗದು. 229
--------------
ಬಸವಣ್ಣ
ಕಟೆದ ಕಲ್ಲ ಲಿಂಗವ ಮಾಡಿಕೊಟ್ಟಾತ ಗುರುವೆಂಬರು; ಆ ಂಗವ ಧರಿಸಿದಾತ ಶಿಷ್ಯನೆಂಬರು. ಕೊಟ್ಟ ಗುರು ದೇಶಪಾಲಾದ; ಕೊಟ್ಟ ಕಲ್ಲು ಲಿಂಗವೊ? ಕಲ್ಲಿನ ಕಲ್ಲು ಕಲ್ಲೆಂಬಡೆ, ಲಿಂಗವ ಮಾಡಿ ಕೊಟ್ಟ; ಲಿಂಗವೆಂದಡೆ ಪೂಜಾವಿರಹಿತವಾಯಿತ್ತು. ಪೂಜೆಯಿಲ್ಲದ ಲಿಂಗ ಪಾಷಾಣ. ಹೋದ ಗುರುವಿನ ಲಿಂಗ ಪಾಷಾಣಭೇದಿ; ಭೇದಿಸಿದಡೆ ಹುರುಳಿಲ್ಲ. ನದಿಯ ದಾಟುವಲ್ಲಿ ಭೈತ್ರವ ಹಿಡಿದು, ದಾಂಟಿದಂತ್ಯದಲಿ ಬಿಟ್ಟುಹೋದರು. ಬಿಟ್ಟ ನಾವೆ ಮತ್ತೊಬ್ಬರಿಗೆ ಲೇಸು, ಈ ಲಿಂಗ ಬರದು ಆರಿಗೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. ಶಿವಭಕ್ತರು ಪರಿಣಾಮಿಸಿದಡೆ, ಶಿವನು ಪರಿಣಾಮಿಸುವ ನೋಡಾ. ಭಕ್ತದೇಹಿಕದೇವನೆಂದು ಶ್ರುತಿ ಹೊಗಳುವ ಕಾರಣ, ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ನೋಡಾ. ತಾಯಿನೊಂದಡೆ ಒಡಲಶಿಶು ನೋವತೆರನಂತೆ, ಭಕ್ತರು ನೊಂದಡೆ ತಾ ನೋವ ನೋಡಾ ಚೆನ್ನಮಲ್ಲಿಕಾರ್ಜುನ.
--------------
ಅಕ್ಕಮಹಾದೇವಿ
ಎನ್ನಂತರಂಗ ನೀವಯ್ಯಾ, ಎನ್ನ ಬಹಿರಂಗ ನೀವಯ್ಯಾ, ಎನ್ನ ಅರಿವು ನೀವಯ್ಯಾ, ಎನ್ನ ಮರಹು ನೀವಯ್ಯಾ, ಎನ್ನ ಭಕ್ತಿ ನೀವಯ್ಯಾ, ಎನ್ನ ಯುಕ್ತಿ ನೀವಯ್ಯಾ, ಎನ್ನ ಆಲಸ್ಯ ನೀವಯ್ಯಾ, ಎನ್ನ ಪರವಶ ನೀವಯ್ಯಾ, ಸಮುದ್ರವ ಹೊಕ್ಕ ಕಾಲುವಳ್ಳದಲ್ಲಿ ಕೊರತೆಯನರಸುವುದೆ, ಆ ಸಮುದ್ರವು ಎನ್ನ ಲೇಸು ಹೊಲ್ಲೆಹವೆಂಬುದು ನಿಮ್ಮದೆಂಬುದ ನೀವೆ ಬಲ್ಲಿರಿ, ಇದಕ್ಕೆ ನಿಮ್ಮ ಪಾದವೆ ಸಾಕ್ಷಿ, ಎನ್ನ ಮನವೆ ಸಾಕ್ಷಿ, ಕೂಡಲಸಂಗಮದೇವಾ.
--------------
ಬಸವಣ್ಣ
ಕಾಯಗುಣದಲ್ಲಿದ್ದು ಕರಣಂಗಳಂತಾಡದಿದ್ದಡೆ, ಕಾಯದ ಸಂಗವೇ ಲೇಸು, ಇಂದ್ರಿಯಂಗಳ ಸಂಸರ್ಗದಲ್ಲಿದ್ದು ಮುಟ್ಟುವ ಸಂಗವ ಬಲ್ಲಡೆ, ಇಂದ್ರಿಯಂಗಳ ಸಂಗವೇ ಲೇಸು. ಅವಗುಣದಲ್ಲಿದ್ದು ಅರತು, ತನ್ನಯ ಸಾವರಿತಡೆ, ಸಾವಯವ ಲೇಸು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಕೂಡಿ ಕೂಟವಾದ ಮತ್ತೆ.
--------------
ಸಗರದ ಬೊಮ್ಮಣ್ಣ
ಸುರಿವ ಜಲಕ್ಕೆ ನೆಲೆ(ನೆಲ?), ಹೊಲೆಯೆಂದು ಪ್ರಮಾಣಿಸಬಹುದೆ ? ಉರಿವ ಅನಲಂಗೆ ಶತಡೊಂಕು ಸಸಿನವೆಂಬುದುಂಟೆ ? ಗುಹೇಶ್ವರಲಿಂಗಕ್ಕೆ ಲೇಸು ಕಷ್ಟವೆಂಬುದಿಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->
Some error occurred