ಪೂರ್ವಿವಾದಿಯಾಗಿ ಮಂಡಲತ್ರಯದೊಳ್ಮೊದಲಗ್ನಿ
ಮಂಡಲದೀಶಾನಂ ತೊಡಗಿ
ಸ ಷ ಶ ವ ಲ ರ ಯ ಮ ಗಳೆಂಬ
ವ್ಯಾಪಕಾಕ್ಷರಂಗಳೆಂಟೆ ಸಳಳೊಳಿರ್ಪವಾ
ಹಕಾರವೆ ಶಿವಬೀಜವಾದಕಾರಣವಾ ಚಕ್ರದ ಕರ್ಣಿಕಾಕ್ಷಾರವೆನಿಸಿತ್ತು.
ಳಕಾರಮೆ `ಲಳಯೋರ್ಭೇದಃ' ಎಂದು ಲಳಂಗಳ್ಗೆ
ಭೇದಮಿಲ್ಲಮದರಿಂ
ಳಕಾರಂ ಲಕಾರದೊಳಂತರ್ಭಾವಮಾದುದುಮಲ್ಲದೆಯು
ಮಾತ್ಮಬೀಜವಾದ ಳಕಾರಂ ಕರ್ಣಿಕಾದಳಂ
ನ್ಯಸ್ತಾತ್ಮಬೀಜವಾದ ಕಾರಣದೊಳ್ಪುದಿದಿರ್ಪುದಿಂತು
ಕರ್ಣಿಕಾಗ್ನಿಮಂಡಲನ್ಯಸ್ತ ದಶವ್ಯಾಪಕಾಕ್ಷರಂಗಳಂ ಪೇಳ್ದೆಯಯ್ಯಾ,
ಪರಮ ಶಿವಲಿಂಗೇಶ್ವರ ಪಟುವೇದಾಂತ ಭಾಸ್ವರ.