ಅಥವಾ

ಒಟ್ಟು 64 ಕಡೆಗಳಲ್ಲಿ , 25 ವಚನಕಾರರು , 44 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಟದೊಳಗೆ ರಸವಿದ್ದು, ರಸದೊಳಗೆ ಘಟವಿದ್ದು, ಸಂಗಗುಣದಿಂದ ನೀರಾಗಿ. ಸಂಗ ಹಿಂಗಲಿಕೆ ಉಭಯದಂಗ ಒಂದಾದ ತೆರನಂತೆ, ಈ ಗುಣ ಲಿಂಗಾಂಗಿಯ ಸಂಗದ ವಿವರ, ನಿಃಕಳಂಕ ಮಲ್ಲಿಕಾರ್ಜುನಲಿಂಗವ ಕೂಡಿದ ಪರಮಸುಖಿಯಂಗ.
--------------
ಮೋಳಿಗೆ ಮಾರಯ್ಯ
ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ಇನ್ನು ಪ್ರಥಮಲಿಂಗ ದ್ವಿತೀಯಲಿಂಗ ತೃತೀಯಲಿಂಗದಲ್ಲಿ ಸಮುದ್ಭವವಾದ, ಪ್ರಥಮ ದ್ವಿತೀಯ ತೃತೀಯ ಪ್ರಸಾದದ ವಿವರ ಅದೆಂತೆಂದಡೆ : ಪ್ರಥಮಲಿಂಗದಲ್ಲಿ ಶುದ್ಧ , ದ್ವಿತೀಯಲಿಂಗದಲ್ಲಿ ಸಿದ್ಧ , ತೃತೀಯಲಿಂಗದಲ್ಲಿ ಪ್ರಸಿದ್ಧ. ಶುದ್ಧ ಗುರುಪ್ರಸಾದ, ಸಿದ್ಧ ಲಿಂಗಪ್ರಸಾದ, ಪ್ರಸಿದ್ಧ ಜಂಗಮಪ್ರಸಾದ, ಶಿವಜ್ಞಾನವೇ ಮಹಾಪ್ರಸಾದ -ಇಂತು ಚತುರ್ವಿಧ ಪ್ರಸಾದ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭಕ್ತಿಪ್ರಸಾದ, ಮುಕ್ತಿಪ್ರಸಾದ, ಇರಪರಪ್ರಸಾದದ ನೆಲೆಯ ಕಂಡು ಸುಖಿಸಿದೆವೆಂಬರು. ತಾವರಿಯದ ವಿವರ ತಮಗೆಲ್ಲಿಯದೊ ? ಸಂಗಯ್ಯನಲ್ಲಿ ಬಸವ ಕಾಯರಹಿತನಲ್ಲದೆ ಮತ್ತಾರನೂ ಕಾಣೆನಯ್ಯಾ.
--------------
ನೀಲಮ್ಮ
ಅಂತರಂಗದ ಅಷ್ಟಮದ ಅವಾವೆಂದರೆ ಹೇಳುವೆ ಕೇಳಿರಣ್ಣಾ : ಪೃಥ್ವಿಮದ ಸಲಿಲಮದ ಪಾವಕಮದ ಪವನಮದ ಅಂಬರಮದ ರವಿಮದ ಶಶಿಮದ ಆತ್ಮಮದವೆಂಬ ಅಷ್ಟಮೂರ್ತಿಯ ಮದಂಗಳು. ಇವರ ಗುಣಧರ್ಮಕರ್ಮವೆಂತೆಂದಡೆ, ಅದಕ್ಕೆ ವಿವರ ; ಪೃಥ್ವಿಮದವೆತ್ತಿದಲ್ಲಿ ತನುಗುಣಭರಿತನಾಗಿ, ಆಭರಣ ಅನುಲೇಪನ ತಾಂಬೂಲವಂ ಬಯಸುತ್ತಿಹನು. ಸಲಿಲಮದವೆತ್ತಿದಲ್ಲಿ ಸಂಸಾರಭರಿತನಾಗಿ, ಎನಗೆ ಬೇಕು, ಮನೆಗೆ ಬೇಕು, ಮಕ್ಕಳಿಗೆ ಬೇಕು ಎನುತಿಹನು. ಪಾವಕಮದವೆತ್ತಿದಲ್ಲಿ ಕಾಮರಸಭರಿತನಾಗಿ, ಕರಸಬೇಕು ನುಡಿಸಬೇಕು ಆಲಿಂಗಿಸಬೇಕು ಎನುತಿಹನು. ಪವನಮದವೆತ್ತಿದಲ್ಲಿ ಕೋಪಾಗ್ನಿಭರಿತನಾಗಿ, ಕೊಂದೇನು ತಿಂದೇನು ಸಾದ್ಥಿಸೇನು ಭೇದಿಸೇನು [ಎನುತಿಹನು]. ಶಶಿಮದವೆತ್ತಿದಲ್ಲಿ ಚಿಂತಾಭರಿತನಾಗಿ, ಆದೀತೊ ಆಗದೊ, ಇದ್ದೀತೊ ಇಲ್ಲವೊ ಎನುತಿಹನು. ಆತ್ಮಮದವೆತ್ತಿದಲ್ಲಿ ಅಹಂಕಾರಭರಿತನಾಗಿ, ಎನಗಿಂದು ಅದ್ಥಿಕರಿಲ್ಲ, ಎನಗಿಂದು ಇದಿರಿಲ್ಲವೆಂದು ಅಹಂಭಾವದಿಂದ ಅಹಂಕರಿಸುತ್ತಿಹನು. ಇಂತೀ ಅಷ್ಟಮೂರ್ತಿಮದಂಗಳ ಭ್ರಾಂತಿನ ಬಲೆಯೊಳಿಟ್ಟೆನ್ನನಗಲದಿರು ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಭಾಜನಕ್ಕೆ ಸರ್ವಾಂಗವ ಬಾಸಣಿಸುವಾಗ ಅದು ಆ ಕುಂಭಕ್ಕೊ, ತನ್ನಂಗಕ್ಕೊ ಎಂಬುದನರಿತು, ಸರ್ವಾಂಗ ಪಾವಡವ ಕಟ್ಟುವ ವಿವರ ; ಮನ, ಬುದ್ಧಿ, ಚಿತ್ತ, ಅಹಂಕಾರ ಎಂಬ ಚತುರ್ಭಾವದ ಸೆರಗಿನಲ್ಲಿ ಗುಹ್ಯೇಂದ್ರಿಯವಂ ಕಳೆದು, ಜಿಹ್ವೇಂದ್ರಿಯವೆಂಬ ಅಂಗ ಭಾಜನಕ್ಕೆ ಸರ್ವಾಂಗ ಪಾವಡವಂ ಕಟ್ಟಿ, ಮಣ್ಣೆಂಬ ಆಸೆಯ ಬಿಟ್ಟು, ಹೊನ್ನೆಂಬ ಆಸೆಯ ಬಿಟ್ಟು, ಹೆಣ್ಣೆಂಬ ಮೋಹದಲ್ಲಿ ಮಗ್ನವಾಗದೆ, ಮಣ್ಣೆಂಬ ಆಸೆಯ ಗುರುವಿನಲ್ಲಿ, ಹೊನ್ನೆಂಬ ಆಸೆಯ ಲಿಂಗದಲ್ಲಿ, ಹೆಣ್ಣೆಂಬ ಮೋಹವ ಜಂಗಮದಲ್ಲಿ, ಕೊಡುವ ವ್ರತವನರಿಯದೆ ಆಚಾರ ಅಂಗದಲ್ಲಿ ಇಂತೀ ವ್ರತನೇಮವಲ್ಲದ ಮಣ್ಣ ಮಡಕೆಯ ಗನ್ನದಲ್ಲಿ ಕಟ್ಟಿದಡೆ ಪ್ರಸನ್ನನ ವ್ರತದಣ್ಣಗಳೆಲ್ಲರು ಇದ ಚೆನ್ನಾಗಿ ತಿಳಿದು ನೋಡಲಾಗಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ವ್ರತ ನೇಮ ಹರಿತವಾಯಿತ್ತು.
--------------
ಅಕ್ಕಮ್ಮ
ಒಂದೆಂದಡೆ ಬೆಸ, ಎರಡೆಂದಡೆ ಸರಿ ಎಂಬ ಭೇದದಂತೆ ದ್ವೈತ ಅದ್ವೈತಗಳ ವಿವರ : ಎಷ್ಟು ಲೆಖ್ಖದಲ್ಲಿ ಸಮಗಂಡು ಬಪ್ಪಲ್ಲಿ ದ್ವೈತ. ಹೆಚ್ಚುಗೆಯಲ್ಲಿ ಬಪ್ಪಲ್ಲಿ ಅದ್ವೈತ. ಇಂತೀ ಉಭಯದ ಸಂದನಳಿದಲ್ಲಿ ಸ್ವಯ ಸ್ವಯಂಭು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಕಪಿಲವರ್ಣ ನೀಲವರ್ಣ ಮಾಂಜಿಷ್ಟವರ್ಣ ಪೀತವರ್ಣ ಕಪ್ಪುವರ್ಣ ಶ್ವೇತವರ್ಣ ಗೌರವರ್ಣವೆಂಬ ಸಪ್ತಧಾತುಗಳು. ಇವಕ್ಕೆ ವಿವರ : ಕಪಿಲವರ್ಣದ ಧಾತು ಪೃಥ್ವಿ ಅಂಶ, ದೇಹವ ಅಳುುಕುತ್ತಿಹುದು. ನೀಲವರ್ಣದ ಧಾತು ಅಪ್ಪುವಿನ ಅಂಶ, ದೇಹವ [ನಡುಗುತ್ತಿಹುದು]. ಮಾಂಜಿಷ್ಟವರ್ಣದ ಧಾತು ಅಗ್ನಿ ಅಂಶ, ದೇಹ ಕನಸ ಕಾಣುತಿಹುದು. ಪೀತವರ್ಣದ ಧಾತು ವಾಯು ಅಂಶ, ದೇಹವತ್ತರ ಒತ್ತುತ್ತಿಹುದು. ಕಪ್ಪವರ್ಣದ ಧಾತು ಆಕಾಶದ ಅಂಶ, ಎತ್ತರ ತತ್ತರಗೆಡಹುತಿಹುದು. ಶ್ವೇತವರ್ಣದ ಧಾತು ಚಂದ್ರನ ಅಂಶ, ದೇಹ ಕಳವಳಿಸುತಿಹುದು. ಗೌರವರ್ಣದ ಧಾತು ಸೂರ್ಯನ ಅಂಶ, ಶರೀರ ಸಂಚಲಿಸುತಿಹುದು. ಇಂತೀ ಸಪ್ತಧಾತುಗಳ ಸ್ವಸ್ಥಾನವಂ ಮಾಡಿ ಲಿಂಗಾರ್ಚನೆಯ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುತಿಹನು
--------------
ಚನ್ನಬಸವಣ್ಣ
ನೀತಿಭಕ್ತಿ ಕ್ರಿಯಾಭಕ್ತಿ ಭಾವಭಕ್ತಿ ಸದ್ಭಾವಭಕ್ತಿ ಜ್ಞಾನಭಕ್ತಿ ಇಂತೀ ಭಕ್ತಿಯ ವಿವರ: ನೀತಿಭಕ್ತಿಗೆ ಸರ್ವಗುಣಪ್ರೀತಿವಂತನಾಗಿ, ಕ್ರಿಯಾಭಕ್ತಿಗೆ ಬಿಡುಮುಡಿ ಉಭಯವನರಿದು, ಭಾವಭಕ್ತಿಗೆ ಸಂಕಲ್ಪವಿಕಲ್ಪ ದೋಷವ ಕಂಡು ಸದ್ಭಾವಭಕ್ತಿಗೆ ಮನ ವಚನ ಕಾಯ ತ್ರಿಕರಣವನರಿದು, ಜ್ಞಾನಭಕ್ತಿಗೆ ಜ್ಞಾತೃ ಜ್ಞಾನ ಜ್ಞೇಯ ಮುಂತಾದ ಮರ್ಕಟ ವಿಹಂಗ ಪಿಪೀಲಿಕ ಸಂಚಿತ ಪ್ರಾರಬ್ಧ ಆಗಾಮಿಗಳೆಂಬ ತೆರನ ತಿಳಿದು, ವಿಷ ಚರಣಾಂಗುಲದಲ್ಲಿ ವೇದ್ಥಿಸಿ, ಕಪಾಲದಲ್ಲಿ ನಿಂದು ಅಂಗ ಮೂರ್ಛೆಗೊಂಡಂತೆ, ಇಂತೀ ಭಕ್ತಿಸ್ಥಲದ ವಿವರ. ಹೆಚ್ಚು ಕುಂದನರಿದು ಕೊಡುವಲ್ಲಿ ಕೊಂಬಲ್ಲಿ ತಟ್ಟುವಲ್ಲಿ ಮುಟ್ಟುವಲ್ಲಿ, ತಾಗುವಲ್ಲಿ ಸೋಂಕುವಲ್ಲಿ ನಾನಾಗುಣಂಗಳಲ್ಲಿ ವಿವರವನರಿತು ವರ್ಮಜ್ಞನಾಗಿಪ್ಪ ಭಕ್ತನಂಗ, ಆ ಸುಖದ ಸಂಗ ಸದ್ಯೋಜಾತಲಿಂಗದ ನಿರಂಗ.
--------------
ಅವಸರದ ರೇಕಣ್ಣ
ಅಷ್ಟಾವರಣಗಳು ಯಾರಿಗೆ ಸಾಧ್ಯವಾಯಿತ್ತೆಂದಡೆ ಹೇಳಿಹೆ ಕೇಳಿರಣ್ಣ : ಗುರು ಸಾಧ್ಯವಾಯಿತ್ತು ಗುರುಭಕ್ತಂಗೆ ; ಲಿಂಗ ಸಾಧ್ಯವಾಯಿತ್ತು ನೀಲಲೋಚನೆತಾಯಿಗೆ ; ಜಂಗಮವು ಸಾಧ್ಯವಾಯಿತ್ತು ಬಸವೇಶ್ವರದೇವರಿಗೆ ; ಪಾದೋದಕ ಸಾಧ್ಯವಾಯಿತ್ತು ವೇಮನಾರಾಧ್ಯಂಗೆ ; ಪ್ರಸಾದ ಸಾಧ್ಯವಾಯಿತ್ತು ಬಿಬ್ಬಿಬಾಚಯ್ಯಂಗೆ ; ವಿಭೂತಿ ಸಾಧ್ಯವಾಯಿತ್ತು ಓಹಿಲಯ್ಯಗಳಿಗೆ ; ರುದ್ರಾಕ್ಷಿ ಸಾಧ್ಯವಾಯಿತ್ತು ಚೇರಮರಾಯಗೆ ; ಪಂಚಾಕ್ಷರಿ ಸಾಧ್ಯವಾಯಿತ್ತು ಅಜಗಣ್ಣಂಗೆ. ಇನ್ನು ಷಟ್‍ಸ್ಥಲದ ನಿರ್ಣಯವ ಕೇಳಿ : ಭಕ್ತಸ್ಥಲ ಬಸವಣ್ಣಂಗಾಯಿತ್ತು ; ಮಾಹೇಶ್ವರಸ್ಥಲ ಮಡಿವಾಳಯ್ಯಂಗಾಯಿತ್ತು ; ಪ್ರಸಾದಿಸ್ಥಲ ಚೆನ್ನಬಸವಣ್ಣಂಗಾಯಿತ್ತು ; ಪ್ರಾಣಲಿಂಗಿಸ್ಥಲ ಸಿದ್ಭರಾಮಯ್ಯಂಗಾಯಿತ್ತು ; ಶರಣಸ್ಥಲ ಪ್ರಭುದೇವರಿಗಾಯಿತ್ತು; ಐಕ್ಯಸ್ಥಲ ಅಜಗಣ್ಣಂಗಾಯಿತ್ತು. ಇನ್ನು ಷಡುಸ್ಥಲದ ವಿವರವಂ ಪೇಳ್ವೆನು.- ಭಕ್ತಸ್ಥಲದ ವಿವರವು : ಗುರುಲಿಂಗಜಂಗಮವು ಒಂದೆಯೆಂದು ಕಂಡು ಸದಾಚಾರದಲ್ಲಿ ನಡೆವನು, ತ್ರಿಕಾಲ ಮಜ್ಜನವ ನೀಡುವನು, ಲಾಂಛನಧಾರಿಗಳ ಕಂಡಡೆ ವಂದನೆಯ ಮಾಡುವನು, ಆಪ್ಯಾಯನಕ್ಕೆ ಅನ್ನವ ನೀಡುವನು, ಜಂಗಮಕ್ಕೆ ಪ್ರತಿ ಉತ್ತರವ ಕೊಡನು. ಪೃಥ್ವಿ ಅಂಗವಾಗಿಪ್ಪುದೆ ಭಕ್ತಿಸ್ಥಲವು. ಸಾಕ್ಷಿ : 'ಮಜ್ಜನಂ ತು ತ್ರಿಕಾಲೇಷು ಶುಚಿಪಾಕಸಮರ್ಪಿತಂ | ಭವಿಸಂಗಪರಿತ್ಯಾಗಂ ಇತ್ಯೇತೇ ಭಕ್ತಿಕಾರಣಂ || ಸದಾಚಾರೇ ಶಿವಭಕ್ತಿಃ ಲಿಂಗಜಂಗಮೇಕಾದ್ಥಿಕಂ | ಲಾಂಛನೇನ ಶರಣ್ಯಂ ಚ ಭಕ್ತಿಸ್ಥಲಂ ಮಹೋತ್ತಮಂ ||' ಇನ್ನು ಮಾಹೇಶ್ವರಸ್ಥಲದ ವಿವರವು : ಪರಸ್ತ್ರೀ ಪರನಿಂದೆ ಪರದ್ರವ್ಯ ಪರಹಿಂಸೆ ಅನೃತ ಇವು ಪಂಚಮಹಾಪಾತಕವು, ಇವ ಬಿಟ್ಟು ಲಿಂಗನಿಷ್ಠೆಯಲ್ಲಿ ಇರ್ದು ಜಲವೆ ಅಂಗವಾಗಿಪ್ಪುದೆ ಮಾಹೇಶ್ವರಸ್ಥಲವು. ಸಾಕ್ಷಿ : 'ಪರಸ್ತ್ರೀಯಂ ಪರಾರ್ಥಂ ಚ ವರ್ಜಿತೋ ಭಾವಶುದ್ಧಿಮಾನ್ | ಲಿಂಗನಿಸ್ಸಂಗಿಯುಕ್ತಾತ್ಮಾ ಮಹೇಶಸ್ಥಲಮುತ್ತಮಂ ||' ಇನ್ನು ಪ್ರಸಾದಿಸ್ಥಲದ ವಿವರ : ಲಿಂಗಕ್ಕೆ ಅರ್ಪಿಸಿದುದ ಲಿಂಗನೆನಹಿನಿಂದೆ ಸ್ವೀಕರಿಸುವುದು, ಅನರ್ಪಿತವ ವರ್ಜಿಸುವುದು, ಲಿಂಗದೊಡನೆ ಉಂಬುವುದು, ಅಗ್ನಿಯೆ ಅಂಗವಾಗಿಪ್ಪುದೆ ಪ್ರಸಾದಿಸ್ಥಲ. ಇನ್ನು ಪ್ರಾಣಲಿಂಗಿಸ್ಥಲದ ವಿವರವು : ಸುಗುಣ ದುರ್ಗುಣ ಉಭಯವನತಿಗಳೆದು ಸುಖ ದುಃಖ ಸ್ತುತಿ ನಿಂದೆ ಶತ್ರು ಮಿತ್ರಾದಿಗಳೆಲ್ಲರಂ ಸಮಾನಂಗಂಡು ವಾಯುವೆ ಅಂಗವಾಗಿಪ್ಪುದೆ ಪ್ರಾಣಲಿಂಗಿಸ್ಥಲ. ಇನ್ನು ಶರಣಸ್ಥಲದ ವಿವರವು : ಸತಿಪತಿಭಾವ ಅಂಗಲಿಂಗವಾಗಿಪ್ಪುದು, ಪಂಚೇಂದ್ರಿಯಸುಖ ನಾಸ್ತಿಯಾಗಿಪ್ಪುದು, ಆಕಾಶವೆ ಅಂಗವಾಗಿಪ್ಪುದು, ಇದು ಶರಣಸ್ಥಲವು. ಸಾಕ್ಷಿ : 'ಪತಿರ್ಲಿಂಗಂ ಸತೀ ಚಾsಹಂ ಇತಿ ಯುಕ್ತಂ ಸನಾತನಃ | ಪಂಚೇಂದ್ರಿಯಸುಖಂ ನಾಸ್ತಿ ಶರಣಸ್ಥಲಮುತ್ತಮಂ ||' ಇನ್ನು ಐಕ್ಯಸ್ಥಲದ ವಿವರವು : ಅರಿಷಡ್ವರ್ಗಂಗಳಿಲ್ಲದಿಹರು, ನಿರ್ಭಾವದಲ್ಲಿಹರು, ಷಡೂರ್ಮಿಗಳಿಲ್ಲದಿಹರು, ಅಷ್ಟವಿಧಾರ್ಚನೆ ಇಲ್ಲದಿಹರು, ಉರಿಯುಂಡ ಕರ್ಪುರದ ಹಾಗೆ ಇಹರು, ಆತ್ಮನೆ ಅಂಗವಾಗಿಪ್ಪುದು ಐಕ್ಯಸ್ಥಲವು. ಸಾಕ್ಷಿ : 'ಷಡೂರ್ಮಿಯೋಗಷಡ್ವರ್ಗಂ ನಾಸ್ತಿ ಚಾಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಸಯೋಗವತ್||' ಹೀಗೆ ಗಣಂಗಳು ನಡೆದ ಮಾರ್ಗದಲ್ಲಿ ನಡೆದಡೆ ಅಂದೇನೊ ಇಂದೇನೊ ? ಇಂತೀ ಅಷ್ಟಾವರಣಗಳ, ಷಡುಸ್ಥಲದ ಮಾರ್ಗವನು ಎನ್ನೊಳು ಅರುಹಿದಾತ, ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ನ ಎಂಬಕ್ಷರದ ಭೇದ ಜನನ ನಾಸ್ತಿಯಾದ ವಿವರ. ಮ ಎಂಬಕ್ಷರದ ಭೇದ ಮರಣ ನಾಸ್ತಿಯಾದ ವಿವರ. ಶಿ ಎಂಬಕ್ಷರದ ಭೇದ ಸ್ವೀಕರಣೆ ನಾಸ್ತಿಯಾದ ವಿವರ. ವ ಎಂಬಕ್ಷರದ ಭೇದ ವಕಾರ ನಾಸ್ತಿಯಾಗಿ ಸಾಕಾರವಳಿದ ಭೇದ. ಯ ಎಂಬಕ್ಷರದ ಭೇದ ತತ್ವಮಸಿಯೆಂಬ ಬ್ಥಿತ್ತಿಯ ಮೆಟ್ಟದೆ ಉತ್ಪತ್ಯ ಸ್ಥಿತಿ ಲಯವೆಂಬ ತ್ರಿವಿಧವ ಮುಟ್ಟದೆ ಅದು ನಿಶ್ಚಯವಾದಲ್ಲಿ ಪಂಚಾಕ್ಷರಿಯ ಭೇದ. ಇಂತೀ ಭೇದಂಗಳಲ್ಲಿ ಜಪಧ್ಯಾನವ ಧ್ಯಾನಿಸಿ ಇಷ್ಟ ಕಾಮ್ಯ ಮೋಕ್ಷಂಗಳೆಂಬ ಮೂರಂಗುಲವನರಿವುದು. ಸದೃಷ್ಟ ತನ್ನಷ್ಟವೆಂಬ ಉಭಯದ ಅಂಗುಲವ ಕಂಡು ಚತುರ್ವಿಧಫಲಪದಂಗಳಲ್ಲಿ ಭಾವಿಸಿ ಕಲ್ಪಿಸದಿಪ್ಪುದು ಜಪಧ್ಯಾನ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಮರ್ಕಟನ ಉಚಿತ, ವಿಹಂಗನ ಪವನ, ಪಿಪೀಲಿಕನ ಧ್ಯಾನ, ತ್ರಿವಿಧಾತ್ಮನ ಭೇದ, ಸ್ಥೂಲದ ವಿವರ, ಸೂಕ್ಷ ್ಮದ ಸುಳುಹ, ಕಾರಣದ ಚೋದ್ಯ. ಇಂತೀ ತ್ರಿವಿಧ ವಿವರಂಗಳಲ್ಲಿ ತತ್ವಮಸಿ ಎಂಬ ಭಿತ್ತಿಯ ವಿಚಾರಿಸಿ ಶ್ರುತದಲ್ಲಿ ಕೇಳದುದ ದೃಷ್ಟದಲ್ಲಿ ಕಂಡುದ ಅನುಮಾನದಲ್ಲಿ ಅರಿದುದ ಭಿನ್ನವಿಲ್ಲದೆ ಚಿನ್ಮಯಮೂರ್ತಿ ತಾನಾಗಿ ಕರ್ಮಕ್ರೀಯಲ್ಲಿಯೆ ಲೋಪ. ಶಂಭುವಿನಿಂದಿತ್ತ ಸ್ರಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 69 ||
--------------
ದಾಸೋಹದ ಸಂಗಣ್ಣ
ಇನ್ನು ಜಂಗಮಭಕ್ತಿಯ ವಿವರ ಅದೆಂತೆಂದಡೆ : ಶುದ್ಧವಹ ಪಾಕಪ್ರಯತ್ನಂಗಳಿಂದ, ಪ್ರಿಯವಾಕ್ಯಂಗಳಿಂದ, ಬಾಹ್ಯಪರಿಚಾರಂಗಳಿಂದ, ಸಹಜಹಸ್ತದಿಂದ, ಕುಲ ಛಲ ಧನ ಯವ್ವನ ರೂಪು ವಿದ್ಯೆ ರಾಜ್ಯ ತಪವೆಂಬ ಅಷ್ಟಮದಂಗಳ ಬಿಟ್ಟು, ಅಹಂಕಾರವಂ ಬಿಟ್ಟು ನಿರಹಂಕಾರಭರಿತನಾಗಿ, ಉಪಾಧಿಯ ಬಿಟ್ಟು ನಿರುಪಾಧಿಕನಾಗಿ, ದೇಹಾದಿಗುಣಂಗಳ ಬಿಟ್ಟು ನಿರ್ದೇಹಿಕನಾಗಿ, ಅಪೇಕ್ಷೆಯಂ ಬಿಟ್ಟು ನಿರಾಪೇಕ್ಷಿತನಾಗಿ, ಜಂಗಮವೇ ಲಿಂಗವೆಂದು ಮನಶುಚಿಯಿಂದ ಮಾಡುವುದೀಗ ಜಂಗಮಭಕ್ತಿ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದಿಂತು ಲಿಂಗಸ್ಥಲವಾರಕ್ಕಂ ವಿವರ: ಆಚಾರಲಿಂಗಸ್ಥಲ ತ್ರಿವಿಧ:ಸದಾಚಾರ, ನಿಯತಾಚಾರ, ಗಣಾಚಾರ ಇದಕ್ಕೆ ವಿವರ: ಎಲ್ಲ ಜನವಹುದೆಂಬುದೆ ಸದಾಚಾರ. ಹಿಡಿದ ವ್ರತನಿಯಮವ ಬಿಡದಿಹುದೆ ನಿಯತಾಚಾರ. ಶಿವನಿಂದೆಯ ಕೇಳದಿಹುದೆ ಗಣಾಚಾರ. ಗುರುಲಿಂಗಸ್ಥಲ ತ್ರಿವಿಧ:ದೀಕ್ಷೆ, ಶಿಕ್ಷೆ, ಸ್ವಾನುಭಾವ. ಇದಕ್ಕೆ ವಿವರ : ದೀಕ್ಷೆಯೆಂದಡೆ ಗುರು, ಶಿಕ್ಷೆಯೆಂದಡೆ ಜಂಗಮ, ಸ್ವಾನುಭಾವವೆಂದಡೆ ತನ್ನಿಂದ ತಾನರಿವುದು. ಶಿವಲಿಂಗಸ್ಥಲ ತ್ರಿವಿಧ:ಇಷ್ಟಲಿಂಗ, ಪ್ರಾಣಲಿಂಗ, ತೃಪ್ತಿಲಿಂಗ ಇದಕ್ಕೆ ವಿವರ : ಶ್ರೀಗುರು ಕರಸ್ಥಲದಲ್ಲಿ ಅನುಗ್ರಹವ ಮಾಡಿಕೊಟ್ಟುದೀಗ ಇಷ್ಟಲಿಂಗ, ತನುಗುಣ ನಾಸ್ತಿಯಾದುದೇ ಪ್ರಾಣಲಿಂಗ, ಜಾಗ್ರಸ್ವಪ್ನಸುಷುಪ್ತಿಯಲ್ಲಿ ಲಿಂಗವಲ್ಲದೆ ಪೆರತೊಂದನರಿಯದಿಪ್ಪುದೆ ತೃಪ್ತಿಲಿಂಗ. ಜಂಗಮಲಿಂಗಸ್ಥಲ ತ್ರಿವಿಧ :ಸ್ವಯ, ಚರ, ಪರ, ಇದಕ್ಕೆ ವಿವರ : ಸ್ವಯವೆಂದಡೆ ತಾನು. ಚರವೆಂದಡೆ ಲಾಂಛನ ಮುಂತಾಗಿ ಚರಿಸುವುದು. ಪರವೆಂದಡೆ ಅರಿವು ಮುಂತಾಗಿ ಚರಿಸುವುದು. ಪ್ರಸಾದಲಿಂಗಸ್ಥಲ ತ್ರಿವಿಧ :ಶುದ್ಧ, ಸಿದ್ಧ, ಪ್ರಸಿದ್ಧ ಇದಕ್ಕೆ ವಿವರ : ಶುದ್ಧವೆಂದಡೆ ಗುರುಮುಖದಿಂದ ಮಲತ್ರಯವ ಕಳೆದುಳಿದ ಶೇಷ, ಸಿದ್ಧವೆಂದಡೆ ಲಿಂಗಮುಖದಿಂದ ಕರಣಮಥನಂಗಳ ಕಳೆದುಳಿದ ಶೇಷ. ಪ್ರಸಿದ್ಧವೆಂದಡೆ ಜಂಗಮಮುಖದಿಂದ ಸರ್ವಚೈತನ್ಯಾತ್ಮಕ ತಾನೆಯಾಗಿ ಖಂಡಿತವಳಿದುಳಿದ ಶೇಷ. ಮಹಾಲಿಂಗಸ್ಥಲ ತ್ರಿವಿಧ:ಪಿಂಡಜ, ಅಂಡಜ, ಬಿಂದುಜ. ಇದಕ್ಕೆ ವಿವರ : ಪಿಂಡಜವೆಂದಡೆ ಘಟಾಕಾಶ. ಅಂಡಜವೆಂದಡೆ ಬ್ರಹ್ಮಾಂಡ. ಬಿಂದುಜವೆಂದಡೆ ಮಹಾಕಾಶ. ಇಂತು ಲಿಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಇನ್ನು ಅಂಗಸ್ಥಲವಾವುವೆಂದಡೆ: ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯ. ಇನ್ನು ಅಂಗಸ್ಥಲವಾರಕ್ಕೆ ವಿವರ : ಭಕ್ತಸ್ಥಲ ತ್ರಿವಿಧ :ಗುರುಭಕ್ತ, ಲಿಂಗಭಕ್ತ, ಜಂಗಮಭಕ್ತ. ತನುಕ್ರೀಯಿಂದ ತನುಮನಧನವನರ್ಪಿಸುವನಾಗಿ ಗುರುಭಕ್ತ. ಮನಕ್ರೀಯಿಂದ ಮನತನುಧನವನರ್ಪಿಸುವನಾಗಿ ಲಿಂಗಭಕ್ತ. ಧನಕ್ರೀಯಿಂದ ಧನಮನತನುವನರ್ಪಿಸುವನಾಗಿ ಜಂಗಮಭಕ್ತ. ಮಾಹೇಶ್ವರಸ್ಥಲ ತ್ರಿವಿಧ:ಇಹಲೋಕವೀರ, ಪರಲೋಕವೀರ, ಲಿಂಗವೀರ. ಅದಕ್ಕೆ ವಿವರ : ಮತ್ರ್ಯಲೋಕದ ಮಹಾಗಣಂಗಳು ಮೆಚ್ಚುವಂತೆ, ಷಡ್ದರ್ಶನಂಗಳ ನಿರಸನವ ಮಾಡಿ, ತನ್ನ ಸಮಯಕ್ಕೆ ಪ್ರಾಣವ ವೆಚ್ಚಿಸುವನಾಗಿ ಇಹಲೋಕವೀರ. ದೇವಲೋಕದ ದೇವಗಣಂಗಳು ಮೆಚ್ಚುವಂತೆ, ಸರ್ವಸಂಗಪರಿತ್ಯಾಗವ ಮಾಡಿ ಚತುರ್ವಿಧಪದಂಗಳ ಧರ್ಮಾರ್ಥಕಾಮಮೋಕ್ಷಂಗಳ ಬಿಟ್ಟಿಹನಾಗಿ ಪರಲೋಕವೀರ. ಅಂಗಲಿಂಗಸಂಗದಿಂದ ಸರ್ವಕರಣಂಗಳು ಸನ್ನಹಿತವಾಗಿಪ್ಪನಾಗಿ ಲಿಂಗವೀರ. ಪ್ರಸಾದಿಸ್ಥಲ ತ್ರಿವಿಧ :ಅರ್ಪಿತಪ್ರಸಾದಿ, ಅವಧಾನಪ್ರಸಾದಿ, ಪರಿಣಾಮಪ್ರಸಾದಿ ಅದಕ್ಕೆ ವಿವರ : ಕಾಯದ ಕೈಯಲ್ಲಿ ಸಕಲಪದಾರ್ಥಂಗಳು ಇಷ್ಟಲಿಂಗಕ್ಕೆ ಕೊಟ್ಟು ಕೊಂಬನಾಗಿ ಅರ್ಪಿತಪ್ರಸಾದಿ. ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಪ್ರತಿಷೆ*ಯ ಮಾಡಿ, ಅಲ್ಲಲ್ಲಿ ಬಂದ ಸುಖವನಲ್ಲಲ್ಲಿ ಮನದ ಕೈಯಲ್ಲಿ ಕೊಟ್ಟು ಕೊಂಬನಾಗಿ ಅವಧಾನಪ್ರಸಾದಿ. ಅಂಗಾಶ್ರಯವಳಿದು ಲಿಂಗಾಶ್ರಯವುಳಿದು, ಭಾವಭರಿತನಾಗಿಪ್ಪನಾಗಿ ಪರಿಣಾಮಪ್ರಸಾದಿ. ಪ್ರಾಣಲಿಂಗಿಸ್ಥಲ ತ್ರಿವಿಧ :ಆಚಾರಪ್ರಾಣಿ, ಲಿಂಗಪ್ರಾಣ, ಜಂಗಮಪ್ರಾಣಿ. ಅದಕ್ಕೆ ವಿವರ : ಮನೋವಾಕ್ಕಾಯದಲ್ಲಿ ಆಚಾರವ ಅವಗ್ರಹಿಸಿಹನಾಗಿ ಆಚಾರಪ್ರಾಣಿ. ಬಾಹ್ಯೋಪಚಾರಂಗಳ ಮರೆದು ಲಿಂಗಕ್ಕೆ ತನ್ನ ಪ್ರಾಣವನೆ ಪೂಜೆಯ ಮಾಡುವನಾಗಿ ಲಿಂಗಪ್ರಾಣಿ. ಬಾಹ್ಯಭಕ್ತಿಯ ಮರೆದು ಜಂಗಮಕ್ಕೆ ತನ್ನ ತನುಮನಪ್ರಾಣಂಗಳ ನಿವೇದಿಸುವನಾಗಿ ಜಂಗಮಪ್ರಾಣಿ ಶರಣಸ್ಥಲ ತ್ರಿವಿಧ:ಇಷ್ಟಲಿಂಗಾರ್ಚಕ, ಪ್ರಾಣಲಿಂಗಾರ್ಚಕ, ತೃಪ್ತಿಲಿಂಗಾರ್ಚಕ ಅದಕ್ಕೆ ವಿವರ : ಅನಿಷ್ಟ ನಷ್ಟವಾಯಿತ್ತಾಗಿ ಇಷ್ಟಲಿಂಗಾರ್ಚಕ. ಸ್ವಯಪರವನರಿಯನಾಗಿ ಪ್ರಾಣಲಿಂಗಾರ್ಚಕ. ಇಹಪರವನರಿಯನಾಗಿ ತೃಪ್ತಿಲಿಂಗಾರ್ಚಕ. ಐಕ್ಯಸ್ಥಲ ತ್ರಿವಿಧ :ಕಾಯಲಿಂಗೈಕ್ಯ, ಜೀವಲಿಂಗೈಕ್ಯ, ಭಾವಲಿಂಗೈಕ್ಯ. ಅದಕ್ಕೆ ವಿವರ : ಕ್ರಿಯೆಯರತುದೆ ಕಾಯಲಿಂಗೈಕ್ಯ. ಅನುಭಾವವರತುದೆ ಜೀವಲಿಂಗೈಕ್ಯ. ಅರಿವು ಸಿನೆ ಬಂಜೆಯಾದುದೆ ಭಾವಲಿಂಗೈಕ್ಯ. ಇಂತೀ ಅಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಉಭಯಸ್ಥಲ ಮೂವತ್ತಾರರೊಳಗಾದ ಸರ್ವಾಚಾರಸಂಪತ್ತನು ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನೆ ಬಲ್ಲ.
--------------
ಚನ್ನಬಸವಣ್ಣ
ಮತ್ತಂ ಶಿವಷಟ್ಚಕ್ರನಿರೂಪಣಾನಂತರದಲ್ಲಿ ಶಕ್ತಿ ಷಟ್ಚಕ್ರಗಳೆಂತನೆ- ಪಿಂದಣೈವತ್ತೊಂದು ರುದ್ರವಾಚ್ಯಬೀಜಂಗಳೆ ಶಕ್ತಿ ಬೀಜಂಗಳಿವಕ್ಕೆ ವಿವರಂ. ಆ ಪೂರ್ಣೋದರಿ ಆ ರಿಜೆ ಇ ಶಾಲ್ಮಲಿ ಈ ಲೋಲಾಕ್ಷಿ ಉ ವರ್ತುಲಾಕ್ಷಿ ಊ ದೀರ್ಘಘೋಣೆ ಋ ದೀರ್ಘಮುಖಿ Iೂ ಗೋಮುಖಿ ಒ ದೀರ್ಘಜಿಹ್ವಾ ಓ ಕುಂಡೋದರಿ ಏ ಊಧ್ರ್ವಕೇಶಿ ಐ ವಿಕೃತಮುಖಿ ಓ ಜ್ವಾಲಾಮುಖಿ ಔ ಉಲ್ಕಮುಖಿ ಅಂ ಶ್ರೀಮುಖಿ ಅಃ ವಿದ್ಯಾಮುಖಿ ಇಂತೀ ಮಹಾಲಿಂಗದ ಶಕ್ತಿಯೂಧ್ರ್ವಪಟ್ಟಿಕಾಖ್ಯ ವಿಶುದ್ಧಿಚಕ್ರದ ಷೋಡಶಕೋಷ*ದಳ ನ್ಯಸ್ತ ಷೋಡಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನಷ್ಟು ... -->