ಅಥವಾ

ಒಟ್ಟು 81 ಕಡೆಗಳಲ್ಲಿ , 13 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೃಥ್ವ್ಯಾದಿ ಪಂಚಭೂತಂಗು ಇದಕ್ಕೆ ವಿವರ: ಅಸ್ಥಿ ಚರ್ಮ ಮಾಂಸ ರೋಮ ಮಜ್ಜೆ ಇವೈದು ಪೃಥ್ವಿಯ ಅಂಶ. ಶುಕ್ಲ ಶೋಣಿತ ಶ್ಲೇಷ್ಮ ಪಿತ್ತ ರಕ್ತ ಇವೈದು ಅಪ್ಪುವಿನ ಅಂಶ. ಹಸಿವು ತೃಷೆ ನಿದ್ರೆ ಆಲಸ್ಯ ಸ್ತ್ರೀಸಂಗ ಇವೈದು ಅಗ್ನಿಯ ಅಂಶ. ಹವುದು ಕುಳ್ಳಿರುವುದು ಏಳುವುದು ಮೈಮುರಿವುದು ನಡೆವುದು ಈ ಐದು ವಾಯುವಿನ ಅಂಶ. ಡಂಬು ಪ್ರಕಟ ಪ್ರಪಂಚು ಅಭ್ರಚ್ಛಾಯ ಆನಂದ ಇವೈದು ಆಕಾಶದ ಅಂಶ. ಇಂತೀ ಅಂಗ ಶುದ್ಧಂಗಳ ಬಿಟ್ಟು ಲಿಂಗಾಂಗವ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು
--------------
ಚನ್ನಬಸವಣ್ಣ
ಸ್ಥಲಂಗಳ ಭೇದ ವಿವರ: ವೇಣು ವೀಣೆ ಮೌರಿ ವಾದ್ಯಂಗಳಲ್ಲಿ ವಾಯು ಅಂಗುಲಿಯ ಭೇದದಿಂದ ರಚನೆಗಳ ತೋರುವಂತೆ ಘಟದ ಸ್ಥೂಲ ಸೂಕ್ಷ್ಮಂಗಳಲ್ಲಿ ತ್ರಾಣ ತತ್ರಾಣವಾದಂತೆ ಅದು ಭಾವಜ್ಞಾನ ಷಟ್‍ಸ್ಥಲ ಕ್ರಿಯಾಭೇದದ ವಾಸ. ಇಂತೀ ಉಭಯದೃಷ್ಟ ನಾಶವಹನ್ನಕ್ಕ ಐಕ್ಯಲೇಪನಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಜಂಗಮಪ್ರಸಾದ ಮುಂತಾಗಿಯಲ್ಲದೆ ಒಲ್ಲೆನೆಂಬ ಭಕ್ತನ ಕಟ್ಟಳೆಯ ವಿವರ: ಶಿಶು, ಬಂಧುಗಳು, ಚೇಟಿ, ಬೆವಸಾಯವ ಮಾಡುವವರು ಮುಂತಾದ ಇವರಿಗೆಲ್ಲಕ್ಕೂ ಒಡೆಯರಿಗೆ ಸಲುವುದಕ್ಕೆ ಮುನ್ನವೆ ಸೀತಾಳ ಶಿವದಾನವೆಂದು ಇಕ್ಕಬಹುದೆ? ಒಡೆಯರ ಕಟ್ಟಳೆಯಠಾವಿನಲ್ಲಿ ನಿಮ್ಮ ಕೃತ್ಯಕ್ಕೆ ನಿಮ್ಮ ಮನವೆ ಸಾಕ್ಷಿ. ಇದು ದಂಡವಲ್ಲ, ನೀವು ಕೊಂಡ ಅಂಗದ ನೇಮ. ಇದಕ್ಕೆ ನಿಮ್ಮ ಏಲೇಶ್ವರಲಿಂಗವೆ ಸಾಕ್ಷಿ.
--------------
ಏಲೇಶ್ವರ ಕೇತಯ್ಯ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಧಾರಾದಿ ಷಡುಚಕ್ರಂಗಳು ಇವಕ್ಕೆ ವಿವರ: ಆಧಾರಸ್ಥಾನದಲ್ಲಿ ಚತುರ್ದಳ ಪದ್ಮವಿಹುದು ಅದು ಸುವರ್ಣವರ್ಣ ಅದಕ್ಕೆ ಅಕ್ಷರ ವಶಷಸ ಎಂಬ ನಾಲ್ಕಕ್ಷರ, ಅಧಿದೈವ ಬ್ರಹ್ಮನು. ಸ್ವಾಧಿಷ್ಠಾನ ಸ್ಥಾನದಲ್ಲಿ ಷಡ್ದಳ ಪದ್ಮವಿಹುದು, ಅದು ಕಪ್ಪುವರ್ಣ ಅದಕ್ಕೆ ಅಕ್ಷರ ಬಭಮಯರಲ ಎಂಬ ಷಡಕ್ಷರ, ವಿಷ್ಣು ಅಧಿದೈವ. ಮಣಿಪೂರದ ಸ್ಥಾನದಲ್ಲಿ ದಶದಳ ಪದ್ಮವಿಹುದು, ಅದು ಕೆಂಪುವರ್ಣ ಅದಕ್ಕೆ ಅಕ್ಷರ ಡಢಣ ತಥದಧನ ಪಫ ಎಂಬ ದಶ ಅಕ್ಷರ, ರುದ್ರನಧಿದೈವ. ಅನಾಹತಸ್ಥಾನದಲ್ಲಿ ದ್ವಾದಶದಳದ ಪದ್ಮವಿಹುದು, ಅದು ನೀಲವರ್ಣ, ಅದಕ್ಕೆ ಅಕ್ಷರ ಕಖಗಘಙ ಚ ಛ ಜಝಞ ಠ ಎಂಬ ದ್ವಾದಶ ಅಕ್ಷರ ಅದಕ್ಕೆ ಮಹೇಶ್ವರ ಅಧಿದೈವ. ವಿಶುದ್ಧಿಸ್ಥಾನದಲ್ಲಿ ಷೋಡಶದಳ ಪದ್ಮವಿಹುದು, ಅದು ಸ್ಪಟಿಕವರ್ಣ ಅದಕ್ಕೆ ಅಕ್ಷರ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಷೋಡಶಾಕ್ಷರ, ಅದಕ್ಕೆ ಸದಾಶಿವ ಅಧಿದೈವ. ಆಜ್ಞಾಸ್ಥಾನದಲ್ಲಿ ದ್ವಿದಳದ ಪದ್ಮವಿಹುದು. ಅದು ಮಾಣಿಕ್ಯವರ್ಣ, ಅದಕ್ಕೆ ಅಕ್ಷರ `ಹಕ್ಷ ಎಂಬ ದ್ವಯಾಕ್ಷರ. ಅದಕ್ಕೆ ಮಹಾಶ್ರೀಗುರು ಅಧಿದೈವ. ಅಲ್ಲಿಂದ ಮೇಲೆ ಬ್ರಹ್ಮರಂಧ್ರಸ್ಥಾನದಲ್ಲಿ ಸಹಸ್ರದಳ ಪದ್ಮವಿಹುದು. ಅದು ಹೇಮವರ್ಣ ಅಲ್ಲಿಗೆ ಓಂಕಾರವೆಂಬ ಅಕ್ಷರ ಪರಂಜ್ಯೋತಿ ಪರಬ್ರಹ್ಮ ಅದು ಅನಂತಕೋಟಿ ಸೂರ್ಯಪ್ರಕಾಶವಾಗಿ ಬೆಳಗುತ್ತಿಹುದು. ಅಲ್ಲಿಗೆ ಅಧಿದೈವ ಶ್ರೀಗುರು ಮೂರ್ತಿಯೇ ಕರ್ತನು. ಇಂತೀ ಷಟ್ ಚಕ್ರಂಗಳಂ ತಿಳಿದು ಪರತತ್ವದಲ್ಲಿ ಇರಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ನೀತಿಭಕ್ತಿ ಕ್ರಿಯಾಭಕ್ತಿ ಭಾವಭಕ್ತಿ ಸದ್ಭಾವಭಕ್ತಿ ಜ್ಞಾನಭಕ್ತಿ ಇಂತೀ ಭಕ್ತಿಯ ವಿವರ: ನೀತಿಭಕ್ತಿಗೆ ಸರ್ವಗುಣಪ್ರೀತಿವಂತನಾಗಿ, ಕ್ರಿಯಾಭಕ್ತಿಗೆ ಬಿಡುಮುಡಿ ಉಭಯವನರಿದು, ಭಾವಭಕ್ತಿಗೆ ಸಂಕಲ್ಪವಿಕಲ್ಪ ದೋಷವ ಕಂಡು ಸದ್ಭಾವಭಕ್ತಿಗೆ ಮನ ವಚನ ಕಾಯ ತ್ರಿಕರಣವನರಿದು, ಜ್ಞಾನಭಕ್ತಿಗೆ ಜ್ಞಾತೃ ಜ್ಞಾನ ಜ್ಞೇಯ ಮುಂತಾದ ಮರ್ಕಟ ವಿಹಂಗ ಪಿಪೀಲಿಕ ಸಂಚಿತ ಪ್ರಾರಬ್ಧ ಆಗಾಮಿಗಳೆಂಬ ತೆರನ ತಿಳಿದು, ವಿಷ ಚರಣಾಂಗುಲದಲ್ಲಿ ವೇದ್ಥಿಸಿ, ಕಪಾಲದಲ್ಲಿ ನಿಂದು ಅಂಗ ಮೂರ್ಛೆಗೊಂಡಂತೆ, ಇಂತೀ ಭಕ್ತಿಸ್ಥಲದ ವಿವರ. ಹೆಚ್ಚು ಕುಂದನರಿದು ಕೊಡುವಲ್ಲಿ ಕೊಂಬಲ್ಲಿ ತಟ್ಟುವಲ್ಲಿ ಮುಟ್ಟುವಲ್ಲಿ, ತಾಗುವಲ್ಲಿ ಸೋಂಕುವಲ್ಲಿ ನಾನಾಗುಣಂಗಳಲ್ಲಿ ವಿವರವನರಿತು ವರ್ಮಜ್ಞನಾಗಿಪ್ಪ ಭಕ್ತನಂಗ, ಆ ಸುಖದ ಸಂಗ ಸದ್ಯೋಜಾತಲಿಂಗದ ನಿರಂಗ.
--------------
ಅವಸರದ ರೇಕಣ್ಣ
ಮಾಡುವ ಭಕ್ತನ ವಿವರ: ತ್ರಾಸಿನ ನಾಲಗೆಯಂತೆ ಹೆಚ್ಚು ಕುಂದನೊಳಕೊಳ್ಳದೆ, ಗುರುಲಿಂಗಜಂಗಮ ತ್ರಿವಿಧಮುಖವು ಒಂದೆಯೆಂದು ಪ್ರಮಾಳಿಸಿ, ಮಾಡುವ ದ್ರವ್ಯ ಕೇಡಿಲ್ಲದಂತೆ ಮಾಡುವುದು ಸದ್ಭಕ್ತಿಸ್ಥಲ. ಹೀಗಲ್ಲದೆ ಗುರುವಿನ ಆಢ್ಯಕ್ಕಂಜಿ, ಜಂಗಮದ ಸಮೂಹದ ವೆಗ್ಗಳವ ಕಂಡು ಅಂಜಿ ಮಾಡಿದಡೆ, ಭಕ್ತಿಗೂಣೆಯ, ದ್ರವ್ಯದ ಕೇಡು, ಸತ್ಯಕ್ಕೆ ಹೊರಗು ಸದಾಶಿವಮೂರ್ತಿಲಿಂಗಕ್ಕೆ ದೂರ.
--------------
ಅರಿವಿನ ಮಾರಿತಂದೆ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದಿಂತು ಲಿಂಗಸ್ಥಲವಾರಕ್ಕಂ ವಿವರ: ಆಚಾರಲಿಂಗಸ್ಥಲ ತ್ರಿವಿಧ:ಸದಾಚಾರ, ನಿಯತಾಚಾರ, ಗಣಾಚಾರ ಇದಕ್ಕೆ ವಿವರ: ಎಲ್ಲ ಜನವಹುದೆಂಬುದೆ ಸದಾಚಾರ. ಹಿಡಿದ ವ್ರತನಿಯಮವ ಬಿಡದಿಹುದೆ ನಿಯತಾಚಾರ. ಶಿವನಿಂದೆಯ ಕೇಳದಿಹುದೆ ಗಣಾಚಾರ. ಗುರುಲಿಂಗಸ್ಥಲ ತ್ರಿವಿಧ:ದೀಕ್ಷೆ, ಶಿಕ್ಷೆ, ಸ್ವಾನುಭಾವ. ಇದಕ್ಕೆ ವಿವರ : ದೀಕ್ಷೆಯೆಂದಡೆ ಗುರು, ಶಿಕ್ಷೆಯೆಂದಡೆ ಜಂಗಮ, ಸ್ವಾನುಭಾವವೆಂದಡೆ ತನ್ನಿಂದ ತಾನರಿವುದು. ಶಿವಲಿಂಗಸ್ಥಲ ತ್ರಿವಿಧ:ಇಷ್ಟಲಿಂಗ, ಪ್ರಾಣಲಿಂಗ, ತೃಪ್ತಿಲಿಂಗ ಇದಕ್ಕೆ ವಿವರ : ಶ್ರೀಗುರು ಕರಸ್ಥಲದಲ್ಲಿ ಅನುಗ್ರಹವ ಮಾಡಿಕೊಟ್ಟುದೀಗ ಇಷ್ಟಲಿಂಗ, ತನುಗುಣ ನಾಸ್ತಿಯಾದುದೇ ಪ್ರಾಣಲಿಂಗ, ಜಾಗ್ರಸ್ವಪ್ನಸುಷುಪ್ತಿಯಲ್ಲಿ ಲಿಂಗವಲ್ಲದೆ ಪೆರತೊಂದನರಿಯದಿಪ್ಪುದೆ ತೃಪ್ತಿಲಿಂಗ. ಜಂಗಮಲಿಂಗಸ್ಥಲ ತ್ರಿವಿಧ :ಸ್ವಯ, ಚರ, ಪರ, ಇದಕ್ಕೆ ವಿವರ : ಸ್ವಯವೆಂದಡೆ ತಾನು. ಚರವೆಂದಡೆ ಲಾಂಛನ ಮುಂತಾಗಿ ಚರಿಸುವುದು. ಪರವೆಂದಡೆ ಅರಿವು ಮುಂತಾಗಿ ಚರಿಸುವುದು. ಪ್ರಸಾದಲಿಂಗಸ್ಥಲ ತ್ರಿವಿಧ :ಶುದ್ಧ, ಸಿದ್ಧ, ಪ್ರಸಿದ್ಧ ಇದಕ್ಕೆ ವಿವರ : ಶುದ್ಧವೆಂದಡೆ ಗುರುಮುಖದಿಂದ ಮಲತ್ರಯವ ಕಳೆದುಳಿದ ಶೇಷ, ಸಿದ್ಧವೆಂದಡೆ ಲಿಂಗಮುಖದಿಂದ ಕರಣಮಥನಂಗಳ ಕಳೆದುಳಿದ ಶೇಷ. ಪ್ರಸಿದ್ಧವೆಂದಡೆ ಜಂಗಮಮುಖದಿಂದ ಸರ್ವಚೈತನ್ಯಾತ್ಮಕ ತಾನೆಯಾಗಿ ಖಂಡಿತವಳಿದುಳಿದ ಶೇಷ. ಮಹಾಲಿಂಗಸ್ಥಲ ತ್ರಿವಿಧ:ಪಿಂಡಜ, ಅಂಡಜ, ಬಿಂದುಜ. ಇದಕ್ಕೆ ವಿವರ : ಪಿಂಡಜವೆಂದಡೆ ಘಟಾಕಾಶ. ಅಂಡಜವೆಂದಡೆ ಬ್ರಹ್ಮಾಂಡ. ಬಿಂದುಜವೆಂದಡೆ ಮಹಾಕಾಶ. ಇಂತು ಲಿಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಇನ್ನು ಅಂಗಸ್ಥಲವಾವುವೆಂದಡೆ: ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯ. ಇನ್ನು ಅಂಗಸ್ಥಲವಾರಕ್ಕೆ ವಿವರ : ಭಕ್ತಸ್ಥಲ ತ್ರಿವಿಧ :ಗುರುಭಕ್ತ, ಲಿಂಗಭಕ್ತ, ಜಂಗಮಭಕ್ತ. ತನುಕ್ರೀಯಿಂದ ತನುಮನಧನವನರ್ಪಿಸುವನಾಗಿ ಗುರುಭಕ್ತ. ಮನಕ್ರೀಯಿಂದ ಮನತನುಧನವನರ್ಪಿಸುವನಾಗಿ ಲಿಂಗಭಕ್ತ. ಧನಕ್ರೀಯಿಂದ ಧನಮನತನುವನರ್ಪಿಸುವನಾಗಿ ಜಂಗಮಭಕ್ತ. ಮಾಹೇಶ್ವರಸ್ಥಲ ತ್ರಿವಿಧ:ಇಹಲೋಕವೀರ, ಪರಲೋಕವೀರ, ಲಿಂಗವೀರ. ಅದಕ್ಕೆ ವಿವರ : ಮತ್ರ್ಯಲೋಕದ ಮಹಾಗಣಂಗಳು ಮೆಚ್ಚುವಂತೆ, ಷಡ್ದರ್ಶನಂಗಳ ನಿರಸನವ ಮಾಡಿ, ತನ್ನ ಸಮಯಕ್ಕೆ ಪ್ರಾಣವ ವೆಚ್ಚಿಸುವನಾಗಿ ಇಹಲೋಕವೀರ. ದೇವಲೋಕದ ದೇವಗಣಂಗಳು ಮೆಚ್ಚುವಂತೆ, ಸರ್ವಸಂಗಪರಿತ್ಯಾಗವ ಮಾಡಿ ಚತುರ್ವಿಧಪದಂಗಳ ಧರ್ಮಾರ್ಥಕಾಮಮೋಕ್ಷಂಗಳ ಬಿಟ್ಟಿಹನಾಗಿ ಪರಲೋಕವೀರ. ಅಂಗಲಿಂಗಸಂಗದಿಂದ ಸರ್ವಕರಣಂಗಳು ಸನ್ನಹಿತವಾಗಿಪ್ಪನಾಗಿ ಲಿಂಗವೀರ. ಪ್ರಸಾದಿಸ್ಥಲ ತ್ರಿವಿಧ :ಅರ್ಪಿತಪ್ರಸಾದಿ, ಅವಧಾನಪ್ರಸಾದಿ, ಪರಿಣಾಮಪ್ರಸಾದಿ ಅದಕ್ಕೆ ವಿವರ : ಕಾಯದ ಕೈಯಲ್ಲಿ ಸಕಲಪದಾರ್ಥಂಗಳು ಇಷ್ಟಲಿಂಗಕ್ಕೆ ಕೊಟ್ಟು ಕೊಂಬನಾಗಿ ಅರ್ಪಿತಪ್ರಸಾದಿ. ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಪ್ರತಿಷೆ*ಯ ಮಾಡಿ, ಅಲ್ಲಲ್ಲಿ ಬಂದ ಸುಖವನಲ್ಲಲ್ಲಿ ಮನದ ಕೈಯಲ್ಲಿ ಕೊಟ್ಟು ಕೊಂಬನಾಗಿ ಅವಧಾನಪ್ರಸಾದಿ. ಅಂಗಾಶ್ರಯವಳಿದು ಲಿಂಗಾಶ್ರಯವುಳಿದು, ಭಾವಭರಿತನಾಗಿಪ್ಪನಾಗಿ ಪರಿಣಾಮಪ್ರಸಾದಿ. ಪ್ರಾಣಲಿಂಗಿಸ್ಥಲ ತ್ರಿವಿಧ :ಆಚಾರಪ್ರಾಣಿ, ಲಿಂಗಪ್ರಾಣ, ಜಂಗಮಪ್ರಾಣಿ. ಅದಕ್ಕೆ ವಿವರ : ಮನೋವಾಕ್ಕಾಯದಲ್ಲಿ ಆಚಾರವ ಅವಗ್ರಹಿಸಿಹನಾಗಿ ಆಚಾರಪ್ರಾಣಿ. ಬಾಹ್ಯೋಪಚಾರಂಗಳ ಮರೆದು ಲಿಂಗಕ್ಕೆ ತನ್ನ ಪ್ರಾಣವನೆ ಪೂಜೆಯ ಮಾಡುವನಾಗಿ ಲಿಂಗಪ್ರಾಣಿ. ಬಾಹ್ಯಭಕ್ತಿಯ ಮರೆದು ಜಂಗಮಕ್ಕೆ ತನ್ನ ತನುಮನಪ್ರಾಣಂಗಳ ನಿವೇದಿಸುವನಾಗಿ ಜಂಗಮಪ್ರಾಣಿ ಶರಣಸ್ಥಲ ತ್ರಿವಿಧ:ಇಷ್ಟಲಿಂಗಾರ್ಚಕ, ಪ್ರಾಣಲಿಂಗಾರ್ಚಕ, ತೃಪ್ತಿಲಿಂಗಾರ್ಚಕ ಅದಕ್ಕೆ ವಿವರ : ಅನಿಷ್ಟ ನಷ್ಟವಾಯಿತ್ತಾಗಿ ಇಷ್ಟಲಿಂಗಾರ್ಚಕ. ಸ್ವಯಪರವನರಿಯನಾಗಿ ಪ್ರಾಣಲಿಂಗಾರ್ಚಕ. ಇಹಪರವನರಿಯನಾಗಿ ತೃಪ್ತಿಲಿಂಗಾರ್ಚಕ. ಐಕ್ಯಸ್ಥಲ ತ್ರಿವಿಧ :ಕಾಯಲಿಂಗೈಕ್ಯ, ಜೀವಲಿಂಗೈಕ್ಯ, ಭಾವಲಿಂಗೈಕ್ಯ. ಅದಕ್ಕೆ ವಿವರ : ಕ್ರಿಯೆಯರತುದೆ ಕಾಯಲಿಂಗೈಕ್ಯ. ಅನುಭಾವವರತುದೆ ಜೀವಲಿಂಗೈಕ್ಯ. ಅರಿವು ಸಿನೆ ಬಂಜೆಯಾದುದೆ ಭಾವಲಿಂಗೈಕ್ಯ. ಇಂತೀ ಅಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಉಭಯಸ್ಥಲ ಮೂವತ್ತಾರರೊಳಗಾದ ಸರ್ವಾಚಾರಸಂಪತ್ತನು ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನೆ ಬಲ್ಲ.
--------------
ಚನ್ನಬಸವಣ್ಣ
ಮಾಧವನ ಪಟ್ಟಣದಿಂದ ಓಡಿದರು ಮೂವರು ಸೂಳೆಯರು. ಅವರು ಹೋದ ಹಾದಿಯಲ್ಲದೆ, ಬೇರೊಂದು ಹಾದಿಯಲ್ಲಿ ಅರಸಿ ಕಂಡರು ಸೂಳೆಯರ. ಅವರ ಮೂವರ ಸೆರೆಯ ವಿವರ: ಬಾಯಿಗೆ ಕೋಳ, ಕಾಲಿಗೆ ನೂಲೆಳೆಯ ಕಟ್ಟು, ಕೈಹೋಗದಂತೆ ಕೂರಲಗಿನ ಸಂಭವ ಕಟ್ಟು, ಮೂವರ ಅಗಡ ಹಿಂಗಿತ್ತು. ಇನ್ನೈವರ ಕೇಳಿ, ಬಂಕೇಶ್ವರಲಿಂಗವ.
--------------
ಸುಂಕದ ಬಂಕಣ್ಣ
ವಾಗಾದಿ ಕರ್ಮೇಂದ್ರಿಯಂಗಳು ಇವಕ್ಕೆ ವಿವರ: ವಾಕು:ನುಡಿವುದು, ಪಾಣಿ:ಮಾಡುವುದು ಪಾದ:ನಡೆವುದು, ಪಾಯು:ಸರ್ವಾಂಗದಲ್ಲಿ ಕೂಡುವುದು. ಗುಹ್ಯ:ಸೇರಿಸುವುದು. ಇಂತೀ ಪಂಚಕರ್ಮೇಂದ್ರಿಯಂಗಳಲ್ಲಿ ಚರಿಸದೆ ಸುಚಾರಿತ್ರದಲ್ಲಿ ನಡೆಯಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಪೃಥ್ವಿಯ ಗುಣವ ಅಪ್ಪು ನುಂಗಿತ್ತಾಗಿ, ಪೃಥ್ವಿಯ ಗುಣವಿಲ್ಲ. ಅಪ್ಪುವಿನ ಗುಣವ ಅನಲ ನುಂಗಿತ್ತಾಗಿ, ಅಪ್ಪುವಿನ ಗುಣವಿಲ್ಲ. ಅನಲನ ಗುಣವ ಅನಿಲ ನುಂಗಿತ್ತಾಗಿ, ಅನಲನ ಗುಣವಿಲ್ಲ. ಅನಿಲನ ಗುಣವ ಆಕಾಶ ನುಂಗಿತ್ತಾಗಿ, ಆನಿಲನ ಗುಣವಿಲ್ಲ ಅನಿಲನ ಗುಣವ ತನ್ನನೆ ನುಂಗಿತ್ತಾಗಿ, ಆಕಾಶದ ಗುಣವಿಲ್ಲ. ಆಕಾಶದ ಗುಣವ ತನ್ನ ತನ್ನನೆ ನುಂಗಿತ್ತಾಗಿ, ಆಕಾಶದ ಗುಣವಿಲ್ಲ. ಇದು ಕಾರಣ, ಐದರ ಗುಣದಲ್ಲಿ ಅರ್ಪಿಸಿ, ಮುಕ್ತಿಯ ಕಂಡೆಹೆನೆಂಬ ನಿಷೆ* ನಿನಗೆಲ್ಲಿಯದೊ? ಹೊಯ್ದಿರಿಸಿದ ಹೊಯ್ಗಲದಂತೆ ಭೋಗಿಸಿಹೆನೆಂದಡೆ ಕರ್ತೃತ್ವವಿಲ್ಲ. ದರುಶನವ ಹೊತ್ತು ಹೊತ್ತು ತಿರುಗುವುದಕ್ಕಲ್ಲದೆ, ಜ್ಞಾನಕ್ಕೆ ಸಂಬಂಧಿಗಳಲ್ಲ. ಐದರ ಗುಣವಡಗಿ, ಮೂರರ ಗುಣ ಮುಗಿದು, ಆರರ ಗುಣ ಹಾರಿ, ಎಂಟರ ಗುಣದ [ನೆ]ಂಟತನವ ಬಂಧಿಸಿ, ತೋರುವುದಕ್ಕೆ ಮುನ್ನವೆ ಮನ ಜಾರಿ ನಿಂದ ಮತ್ತೆ ಮೀರಲಿಲ್ಲವಾಗಿ, ಸ್ವಯ ಚರ ಪರ ತ್ರಿವಿಧವನರಿದು ಹೊರಗಾಗಿ, ಮೂರು ಮಾಟದ ಬೆಡಗನರಿದು ವಿಚಾರಿಸದೆ, ಉದರ ಘಾತಕತನಕ್ಕೆ ಹೊಟ್ಟೆಹೊರಕರೆಲ್ಲ ಜಂಗಮವೆ ? ಅಂತಲ್ಲ, ನಿಲ್ಲಿರಣ್ಣಾ. ನೀವೆ ಲಿಂಗ ಜಂಗಮವಾಗಬಲ್ಲಡೆ ನಾನೆಂಬುದ ವಿಚಾರಿಸಿಕೊಳ್ಳಿರಣ್ಣಾ. ನೀವು ಪೂಜೆಯ ಮಾಡಿಸಿಕೊಂಬುದಕ್ಕೆ ವಿವರ: ಪೂಜೆಯ ಮಾಡುವ ಭಕ್ತಂಗೆ, ಭಾರಣೆಯ ವಿದ್ಯವ ಹೊತ್ತ ವಿಧಾತೃನಂತಿರಬೇಕು. ಜಲವ ನಂಬಿದ ಜಲಚರದಂತಿರಬೇಕು, ಆಡುವ ಪಶುವಿನ ಲಾಗಿನಂತಿರಬೇಕು. ಇಂತಿವನೆಲ್ಲವಂ ಕಳೆದುಳಿದು, ಆ ಚರಲಿಂಗಮೂರ್ತಿ ತಾನಾಗಿ ನಿಂದಾತನೆ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಶ್ರೋತ್ರಾದಿ ಜ್ಞಾನೇಂದ್ರಿಯಂಗಳು, ಇವಕ್ಕೆ ವಿವರ: ಶ್ರೋತ್ರವು ಸ್ವರ ಶಬ್ದ ನಾದಂಗಳುಂ ಬಲ್ಲುದು, ನೇತ್ರಂಗಳು ಸಪ್ತವರ್ಣಂಗಳಂ ಕಂಡು ಸುಖಿಸುವುವು[ಸಬಲ್ಲವು], ಘ್ರಾಣವು ಗಂಧ ದುರ್ಗಂಧಂಗಳಂ ಬಲ್ಲುದು, ಜಿಹ್ವೆ ಮಧುರ ಆಮ್ಲ ತಿಕ್ತ ಕಟು ಕಷಾಯವಂ ಬಲ್ಲುದು, ತ್ವಕ್ಕು ಸ್ಪರ್ಶವ ಮೃದು ಕಠಿಣ ಶೀತೋಷ್ಣವಂ ಬಲ್ಲುದು, ಇಂತೀ ಜ್ಞಾನೇಂದ್ರಿಯಂಗಳ ಸಂಚಲನವರಿದು ನಿಜ ಉಳಿಯ ಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯ ಪ್ರಸಾದಿಗಳ ವಿವರ: ಗುರು ಮೊದಲು `ಆಚರಿಸುವಂತಹ ಮರ್ಮವನು ತಿಳಿದು ಶಿವಸಂಸ್ಕಾರವನು ಹೊಂದಿ ನಡೆ' ಎಂದು, ಅತಿ ಮೋಹನದಿಂದ ಸಮಸ್ತ ಮರ್ಮವನು ತಿಳುಹಿ ಹಿಡಿದ ವ್ರತಾಚರಣೆಗೆ ಸಂದು ಇಲ್ಲದ ಹಾಗೆ ಅಪಮೃತ್ಯು ಬಂದು ಸೋಂಕದ ಹಾಗೆ ಪ್ರಮಥಕೃಪಾಕಟಾಕ್ಷದಿಂದ ನಡೆದು ಹೋಗುವರು; ಅವರೆ ಅಚ್ಚಪ್ರಸಾದಿಗಳು, ಮತ್ರ್ಯಲೋಕದ ಮಹಾಗಣಂಗಳೆನಿಸುವರು. ಮಿಕ್ಕಿನ ನಿಚ್ಚಪ್ರಸಾದಿಗ? ಸಮಯ ಪ್ರಸಾದಿಗಳು_ ಅವರು ನಡೆದ ಮೇಲು ಪಂಕ್ತಿ ಆಚರಣೆಯ ನೋಡಿ, ಅವರಂತಹ ಸುವಿವೇಕ ನಮಗೆ ಬಾರದೆಂಬುದ ತಿಳಿದು, ಅವರೆ ತಮ್ಮ ಇಷ್ಟಲಿಂಗವಾಗಿ, ತಾವೆ ಅವರ ಭೃತ್ಯರಾಗಿ ನಡೆಯುತ್ತ ಏಕಾರ್ಥ ಪರಮಾರ್ಥಕ್ಕೆ ಸಮಾನವಾಗಿ ಆಚರಿಸಬೇಕೆಂಬ ಅನುಸರಣೆ ಅವರಲ್ಲಿ ಹುಟ್ಟಿದ ನಿಮಿತ್ತ, ಅದೇ ಜಂಗಮ ಬಂದು ನಿಚ್ಚಪ್ರಸಾದಿಗಳಿಗೆ ಎರಡರಲ್ಲಿ ಅಶಕ್ತರೆಂದು ತಿಳಿದು ಅತಿ ಸೂಕ್ಷ್ಮವಾಗಿ ಅವರಿಬ್ಬರ ಆಚರಣೆಯ ಅವರಿಬ್ಬರಲ್ಲಿ ಹರಸಿ, ಆಯಾಯ ತತ್ಕಾಲಕ್ಕೆ ಜಂಗಮ ದೊರೆದಂತಹದೆ ಆಚರಣೆ, ಜಂಗಮ ದೊರೆಯದಂತಹದೆ ಸಂಬಂಧ ಎಂದು ಅರುಹಿಕೊಟ್ಟಲ್ಲಿ, ದೊರೆದಾಗಲಿಂತು ಆಚಾರ ಒಡಂಬಡಿಕೆ, ದೊರೆಯದಾಗ ಆಚಾರ ಒಡಂಬಡಿಕೆಯಾಗದು_ಎಂದು ಮರ್ಮವ ತಿಳಿದು, ಜಂಗಮವು ಇಲ್ಲದ ವೇಳೆಗೆ ಅತಿಸೂಕ್ಷ್ಮವಾಗಿ ಅತಿವಿಶಾಲದಿಂದ ನಿರೂಪಿಸುತಿರ್ದರು_ ಆ ಗುರು ಮೊದಲಲ್ಲಿ ಲಿಂಗವ ಕರುಣಿಸಿ ಕೊಟ್ಟಂತಹುದೆ ನಿಮ್ಮ ಕಳೆ; ನಾ ನಿಮ್ಮ ಚಿತ್ತು; ಎರಡರ ಸಮರಸವೆ ನಿಮ್ಮ ಬಿಂದು; ಆ ಬಿಂದುವೆ `ಅ'ಕಾರ ಪ್ರಣವ; ನಿಮ್ಮ ಇಷ್ಟಲಿಂಗದ ಶಕ್ತಿಪೀಠದಲ್ಲಿ ಗುರುವಾಗಿ, ಆ ಕಳೆಯೆ `ಮ'ಕಾರ ಪ್ರಣವ. ನಿಮ್ಮ ಲಿಂಗದ ಗೋಮುಖದಲ್ಲಿ ಜಂಗಮವಾಗಿ, ಆ ಎರಡರ ಕೂಟವೆ ನಾದ; ಅದೆ `ಉ'ಕಾರ ಪ್ರಣವ. ನಿಮ್ಮ ಲಿಂಗದ ಗೋಳಕದಲ್ಲಿ ಲಿಂಗವಾಗಿ, ಆ ಲಿಂಗವೆ ನಿಮ್ಮ ರಮಣನೆಂದು ಭಾವಿಸಿದ ನಿಮಿತ್ತ ನೀವೆ ಲಿಂಗವಾದ ಕಾರಣ ಆ ಲಿಂಗವೆ ನಿಮ್ಮ ಅಂಗವಾಗಿ, ಆ ಜಂಗಮವೆ ನಿಮ್ಮ ಪ್ರಾಣವಾಗಿ, ಗುರುವೆ ನಿಮ್ಮ ಆಚರಣೆಯಾಗಿರ್ದ ನಿಮಿತ್ತ, ಅದೇ ಗುರುವೆ ನಿಮ್ಮ ವಾಙ್ಮನದಲ್ಲಿ, ಅದೇ ಲಿಂಗವೆ ನಿಮ್ಮ ಕರಕಮಲದಲ್ಲಿ ಅದೇ ಜಂಗಮವೆ ನಿಮ್ಮ ವಿಗ್ರಹದಲ್ಲಿ, ನೆಲೆಗೊಂಡಿರ್ಪುದೆಂದು ಸಂಬಂಧಿಸಿಕೊಟ್ಟಲ್ಲಿ ಆ ಗುರು ಹೇಳಿದಂತಹ ಪತಿವ್ರತಾಧರ್ಮ ತಿಳಿಯದೆ ಆಚರಿಸಿದ ಕಾರಣ ಆಯಾಯ ತತ್ಕಾಲದಲ್ಲಿ ಬಂದೊದಗುವವು, ಅದೇ ಸಮರಸಾಚರಣೆಯ ಉಪಚಾರವು. ನೀವು ಯಾವಸ್ಥಲವಿಡಿದು ಆಚರಿಸಿದಡೆಯೂ, ಆಯಾಯ ಸ್ಥಲಂಗಳಲ್ಲಿ ಆರು ಸ್ಥಲಂಗಳು ಬಂದು ಸಂಬಂಧವಾಗುವುವು. ಮಿಕ್ಕಿನ ಉಪದೇಶವಿಲ್ಲದೆ ಶುದ್ಧಶೈವರಿಗೆ ಗುರು, ಅಷ್ಟಷ್ಟು ಜಪ_ಶಿವಾರ್ಚನೆಯ ಹೇಳಿ `ಹೀಗೆ ಆಚರಿಸು' ಎಂದರುಹಿಕೊಟ್ಟಲ್ಲಿ, ಅವರಿಗೆ ಒಂದೆ ಸ್ಥಲ ಸಂಬಂಧವು. ಅವರಿಗೆ ಮತ್ತೊಂದು ಸ್ಥಲದ ಮರ್ಮವ ಗುರು ಅರುಹಿ ಕೊಡಲಿಲ್ಲ. ಏನು ಕಾರಣವೆಂದಡೆ ಅವರು ಅಶಕ್ತರಾದ ನಿಮಿತ್ತ. ಅವರು ಖಂಡಿತಾಚರಣೆಯುಳ್ಳವರು. ಅವರಿಗೆ ಸಮರಸಾಚರಣೆ ಹೊಂದದ ನಿಮಿತ್ತ ಅವರು ಮೂರು ಜನ್ಮಕ್ಕೆ ಮುಕ್ತರು. ಅದರಲ್ಲಿ ತಪ್ಪಿ ನಡೆದಡೆ ನೂರು ಜನ್ಮಕ್ಕೆ ಮುಕ್ತರು. ಹಾಗಾದಡೆಯೂ ಖಂಡಿತಮುಕ್ತರಲ್ಲದೆ ನಿಜಮುಕ್ತರಲ್ಲ. ಇದನರಿತು ಶ್ರಿಗುರುನಾಥನು ಅವರಿಗೆ ತಕ್ಕಂತಹ ನಡತೆಯ ಅರುಹಿಕೊಡುವನಲ್ಲದೆ ಹೆಚ್ಚಾಗಿ ಅರುಹಿಕೊಡನು. ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹಲವು ಪಥದಿಂದ ಬಂದ ಜಲ ನಿಲುವುದೊಂದು ಸ್ಥಾಯಿಯಾಗಿ, ಕಟ್ಟು[ವಡೆ]ದಲ್ಲಿ ಒಂದೆ ದ್ವಾರದಿಂದ ಸೂಸಿ ಹಲವು ಸ್ಥಲಂಗಳ ಬೆಳೆಗೆ ಹೊಲಬಾದುದಾಗಿ. ಇಂತೀ ಗುಣದಲ್ಲಿ ನಾನಾ ವಿವರ: ಇಂದ್ರಿಯಂಗಳನೊಂದುಗೂಡಿ, ಸತ್ಕ್ರೀಮಾರ್ಗಂಗಳೆಂಬ ಘಟತಟಾಂಕಗಳಲ್ಲಿ ವಿಶ್ರಮಿಸಿ, ಏಕಚಿತ್ತದಲ್ಲಿ ನಾನಾ ಸ್ಥಲಂಗಳನಾರೋಪಿಸಿ, ವಿಶ್ವಸ್ಥಲಂಗಳಲ್ಲಿ ಪರಿಪೂರ್ಣವಾಗಿ, ವಸ್ತುವನೊಡಗೂಡಿಪ್ಪುದು ಕ್ರಿಯಾಪಿಂಡ ಜ್ಞಾನಪಿಂಡವಾದ ಭೇದ. ಉಭಯಲೇಪವಾದಲ್ಲಿ ಪಿಂಡಜ್ಞಾನ, ಜ್ಞಾನಲೇಪವಾದಲ್ಲಿ ಶಬ್ದಮುಗ್ಧ, ಸದ್ಯೋಜಾತಲಿಂಗದಲ್ಲಿ ಐಕ್ಯಭಾವ.
--------------
ಅವಸರದ ರೇಕಣ್ಣ
ಇನ್ನಷ್ಟು ... -->