ಅಥವಾ

ಒಟ್ಟು 370 ಕಡೆಗಳಲ್ಲಿ , 39 ವಚನಕಾರರು , 257 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ಸರ್ವವೂ ಶಿವನಿಂದ ಉದ್ಭವಿಸುವವೆಂದರೆ, ಉದ್ಭವಿಸುವವೆಲ್ಲವೂ ಶಿವನೆ? ಸಕಲ ಬೀಜವ ಬಿತ್ತುವನೊಕ್ಕಲಿಗನೆಂದರೆ ಆ ಬೆಳೆ ತಾನೊಕ್ಕಲಿಗನೆ? ಮಡಕೆಯ ಕುಂಬಾರ ಮಾಡುವನೆಂದರೆ, ಆ ಮಡಕೆ ತಾ ಕುಂಬಾರನೆ? ಕಬ್ಬುನವ ಕಮ್ಮಾರ ಮಾಡುವನೆಂದರೆ, ಆ ಕಬ್ಬುನ ತಾ ಕಮ್ಮಾರನೆ? ಆ ಪರಿಯಲಿ ಸಕಲ ಜಗತ್ತಿನ ಸಚರಾಚರವನು ಮಾಡುವನೆಂದರೆ, ಆ ಸಚರಾಚರವು ಶಿವನೆ? ಅಹಂಗಾದರೆ ಅಷ್ಟಾದಶವರ್ಣವೇಕಾದವು? ಚೌರಾಸಿಲಕ್ಷ ಜೀವರಾಶಿಗಳೇಕಾದವು? ಸುಖ-ದುಃಖ ಸ್ವರ್ಗ-ನರಕಂಗಳೇಕಾದವು? ಉತ್ತಮ-ಮಧ್ಯಮ-ಕನಿಷ್ಠಂಗಳೇಕಾದವು? ಪುಣ್ಯ-ಪಾಪ, ಭವಿ-ಭಕ್ತರೆಂದೇಕಾದವು? ಇದು ಕಾರಣ ಸದಾಚಾರ ಸದ್ಭಕ್ತಿಯಲ್ಲಿಪ್ಪಾತನೆ ಶಿವ. ಅಂತಲ್ಲದೆ ಸರ್ವವೂ ಶಿವನೆಂದರೆ ಅಘೋರ ನರಕ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ವಂಚಿಸುವ ಸತಿ ಸುತ ಬಂಧು ಮೊದಲಾದ ಲೋಕವ ನಂಬಿ, ನಿರ್ವಂಚಕರಪ್ಪ ಗುರು ಲಿಂಗ ಜಂಗಮರ ವಂಚಿಸಿ ನರಕಕ್ಕಿಳಿವರನೇನೆಂಬೆನಯ್ಯಾ ? ಅಕಟಕಟಾ, ಈ ಹೀಂಗೆ ಶಿವಾಚಾರ ? ಈ ಹೀಂಗೆ ಭೃತ್ಯಾಚಾರ ? ಭಕ್ತಿ ಮುಕ್ತಿಯನರಿಯದೆ ಹೋದರು. ತನು ಮನ ಧನ ಕೆಟ್ಟುಹೋಹುದೆಂಬ ಯುಕ್ತಿಯನರಿಯಿರಿ. ಇದನರಿದು, ವಂಚಿಸುವವರನೆ ವಂಚಿಸಿ ನಿರ್ವಂಚಕರಾಗಿ ಗುರು ಲಿಂಗ ಜಂಗಮಕ್ಕೆ ದಾಸೋಹವ ಮಾಡಲು ತನು ಕೆಡದು, ಮನ ಕೆಡದು, ಧನ ಕೆಡದು. ಮುಕ್ತಿಯುಂಟು ಭಕ್ತಿಯುಂಟು, ಇದು ಸತ್ಯ ಶಿವ ಬಲ್ಲ, ಶಿವನಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶಿವ ಶಿವ! ಮಹಾದೇವ ಶಿವನೇ ನೀನು ಸರ್ವಜ್ಞನಾಗಿ ಎನ್ನನೂ ನೀನು ಬಲ್ಲೆ. ಈ ಪರಿಯನು ಹರಿಬ್ರಹ್ಮದೇವದಾನವಮಾನವರು ಅರಿಯದೆ ಭ್ರಮಿಸುತ್ತಮಿಪ್ಪರು. ಈ ವಿದ್ಥಿಯನು ತಾತ್ಪಯ್ರ್ಯವೆಂದರಿದೆನಾಗಿ ಸದ್ಯೋನ್ಮುಕ್ತನು, ನಿರಂತರ ಪರಿಣಾಮಿ, ಪರಮಸುಖಸ್ವರೂ[ಪಿ] ನಾನೇ ಅಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಆವಾವ ದ್ರವ್ಯಪದಾರ್ಥಂಗಳನು ಶಿವಲಿಂಗಕ್ಕರ್ಪಿಸಿ ಪ್ರಸಾದವಾದಲ್ಲದೆ ಕೊಳ್ಳೆವೆಂಬ ಪ್ರಸಾದಿಗಳಿರಾ ನೀವು ಅರ್ಪಿಸಿದ ಪರಿಯೆಂತು ? ಪ್ರಸಾದವ ಕೊಂಡ ಪರಿಯೆಂತು ಹೇಳಿರೆ ? ರೂಪಾರ್ಪಿತವಾಯಿತ್ತು ನೇತ್ರದಿಂದ, ಮೃದು, ಕಠಿಣ, ಶೀತೋಷ್ಣಂಗಳು ಅರ್ಪಿತವಾದವು ಸ್ಪರ್ಶನದಿಂದ. ನೇತ್ರ ಹಸ್ತವೆರಡಿಂದ್ರಿಯಂಗಳಿಂದವೂ ರೂಪು ಸ್ಪರ್ಶನವೆಂಬೆರಡೆ ವಿಷಯಂಗಳರ್ಪಿತವಾದವು. ನೀವಾಗಳೇ ಪ್ರಸಾದವಾಯಿತ್ತೆಂದು ಭೋಗಿಸತೊಡಗಿದಿರಿ. ಇಂತು ದ್ರವ್ಯಂಗಳ ರಸವನೂ, ಗಂಧವನೂ, ಶಬ್ದವನೂ, ಶ್ರೋತೃ, ಘ್ರಾಣ, ಜಿಹ್ವೆಗಳಿಂದ ಮೂರು ವಿಷಯಂಗಳನೂ ಅರ್ಪಿಸದ ಮುನ್ನ ಪ್ರಸಾದವಾದ ಪರಿ ಎಂತೊ ? ಅರ್ಪಿತವೆಂದನರ್ಪಿತವ ಕೊಂಬ ಪರಿ ಎಂತೊ ? ಪ್ರಸಾದಿಗಳಾದ ಪರಿ ಎಂತೊ ಶಿವ ಶಿವಾ. ಪಂಚೇಂದ್ರಿಯಂಗಳಿಂದವೂ, ಶಿವಲಿಂಗಪಂಚೇಂದ್ರಿಯ ಮುಖಕ್ಕೆ ಪಂಚವಿಷಯಂಗಳನೂ ಅರ್ಪಿಸಬೇಕು. ಅರ್ಪಿಸಿ ಪ್ರಸಾದವ ಕೊಂಡಡೆ ಪ್ರಸಾದಿ. ಅಲ್ಲದಿರ್ದಡೆ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯೆ ಅಲ್ಲ. ಪ್ರಸಾದಿಯಲ್ಲ, ಭಕ್ತಿಯ ಪರಿಯೂ ಅಲ್ಲ. ಪೂಜಕರೆಂಬೆನೆ ಪೂಜೆಯ ಒಪ್ಪವಲ್ಲ. ಸಾಧಾರಣ ಪೂಜಕರಪ್ಪರು ಕೇಳಿರಣ್ಣಾ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಸಾವಧಾನಾರ್ಪಿತದಲ್ಲಿ ಸ್ವಯವಾಗರಯ್ಯ.
--------------
ಉರಿಲಿಂಗಪೆದ್ದಿ
ಶಶಿಮುಖಿಯರ ಸಂಗಕ್ಕೆ ಎಣಿಸುವ ಪಶುಪ್ರಾಣಿಗಳು ಪಶುಪತಿಯ ಸಂಗಸುಖಕ್ಕೆ ಯಾಕೆ ಎಣಿಸಲೊಲ್ಲರಯ್ಯ? ಶಿವ ಶಿವಾ! ನೀ ಮಾಡಿದ ವಿಷಯದ ವಿದ್ಥಿ, ಈರೇಳುಲೋಕವನಂಡಲೆವುತ್ತಿದೆ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮೊಲನ ಕಂಡ ನಾಯಂತೆ ಇಂದ್ರಿಯವಿಷಯಕ್ಕೆ ಮುಂದುವರಿಯದಿರಾ. ಅಂಗನೆಯರ ಸಮ್ಮೇಳದಿಂ ಭಂಗಿತನಾಗದಿರಾ. ಲಿಂಗವನಪ್ಪಿ ಸುಖಿಯಾಗಿ ಎಲೆ ಮನವೇ. ಅಂಗದಿಚ್ಛೆಗೆ ಆಯಸಂಬಡದಿರಾ. ಲಿಂಗ ಸಂಗಿಗಳು ನೋಡಿ ನಗುವರೆಲೆ[ಲೆಲೆ] ಮನವೇ. ಇಂದ್ರಿಯಭೋಗಂಗಳೆಂಬವು ಕನಸಿನ ಸಿರಿಯಂತೆ ತೋರಿ ಅಡಗುವವೋ. ಇವನೇಕೆ ನಚ್ಚುವೆ ಮಚ್ಚುವೆ ಹುಚ್ಚು ಮನವೇ? ಹರಹರಾ ಶಿವ ಶಿವಾ ಎನ್ನೆಯೋ ಎಲೆಲೆ ಮನವೇ. ನಿನ್ನ ನಾ ಬೇಡಕೊಂಬೆನಯ್ಯೋ ಎಲೆಲೆ ಮನವೇ. ಸಿಂಹನ ಕಂಡ ಕರಿಯಂತೆ ಕೆಡೆಬಡೆದೋಡದರಿಯ್ಯೋ ಪಾಪಿ ಮನವೇ. ಲಿಂಗ ಪಾದವ ಸಾರಿ, ಶಿವಭಕ್ತನಾಗಿ ಮುಕ್ತಿಸಮ್ಮೇಳನಾಗಯ್ಯ. ಕರ್ತೃ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವನೊಡಗೂಡಿ, ನಿತ್ಯನಾಗಬಲ್ಲರೆಲೆಲೆ ಮನವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶಿವನ ಕಾಯವೇ ಭಕ್ತ, ಭಕ್ತನ ಕಾಯವೇ ಶಿವ. ಶಿವನ ಚೈತನ್ಯವೇ ಭಕ್ತ, ಭಕ್ತನ ಚೈತನ್ಯವೇ ಶಿವನು ನೋಡಾ. ಭಕ್ತನ ಮನ ಭಾವ ಕರಣಂಗಳೇ ಭಕ್ತನು ನೋಡಾ. ಇದು ಕಾರಣ. ಶಿವನೇ ಭಕ್ತನು; ಭಕ್ತನೇ ಶಿವನು. ದೇವ ಭಕ್ತನೆಂಬ ಅಂತರವೆಲ್ಲಿಯದೋ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅತ್ತಿಯಹಣ್ಣಿಗಾಗಿ ಬಂದು ಸಿಕ್ಕಿದ ಪಿಕಳಿಯಂತೆ ವ್ಯರ್ಥ ಕಾಯರಸವಿಷಯಕ್ಕಾಸೆಗೈದು ಸತ್ತು ಸತ್ತು ಹುಟ್ಟಿ ಭವಕ್ಕೆ ಗುರಿಯಾಗಿ, ಮಾಯಾಬಲೆಯ ಸಂಸಾರಬಂಧನದೊಳು ಬಂದು ಸಿಲ್ಕಿದೆನಯ್ಯಾ. ಮಾಯೆಯ ಹರಿದು, ಸಂಸಾರಬಂಧನವ ಕೆಡಿಸಿ, ಭವರೋಗಕ್ಕೆ ವೈದ್ಯನ ಮಾಡೋ ಶಿವ ವಿಶ್ವಕುಟುಂಬಿ ಮಹಾದೇವ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಕೊರಡು ಕೊನರಾಗಬಲ್ಲುದೇ? ಬರಡು ಹಯನಾಗಬಲ್ಲುದೇ ಅಯ್ಯಾ? ಕುರುಡಗೆ ಕನ್ನಡಿಯ ತೋರಿದಡೆ ನೋಡಬಲ್ಲನೆ? ಮೂಗಗೆ ರಾಗವ ಹೇಳಿದರೆ ಹಾಡಬಲ್ಲನೆ ಅಯ್ಯ? ಹೇಗ ಬುದ್ಧಿಯ ಬಲ್ಲನೇ ಅಯ್ಯ? ಲೋಗರಿಗೆ ಉಪದೇಶವ ಹೇಳಿದರೆ ಶಿವಸತ್ಪಥದ ಹಾದಿಯ ಬಲ್ಲರೇ ಅಯ್ಯ?. ಇದು ಕಾರಣ, ಶಿವ ಸತ್ಪಥದ ಆಗೆಂಬುದು ಶಿವಜ್ಞಾನಸಂಪನ್ನಂಗಲ್ಲದೆ ಸಾಧ್ಯವಲ್ಲ ಕಾಣ. ಅಸಾಧ್ಯವಸ್ತುವಿನೊಳಗಣ ಐಕ್ಯ ಅವಿವೇಕಗಳಿಗೆ ಅಳವಡುವುದೇ ನಮ್ಮವರಿಗಲ್ಲದೆ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
``ನೇತ್ರಂ ದೇವೋ ನ ಚಾಪರಃ'' ಎಂಬ ಶ್ರುತಿಯುಂಟಾಗಿ ನೇತ್ರವು ಪರಶಿವಲಿಂಗ ಪರಬ್ರಹ್ಮವು. ``ನೇತ್ರಂ ಸರ್ವಜ್ಞ ಮೇ ವಪುಃ'' ಎಂಬ ಶ್ರುತಿಯುಂಟಾಗಿ, ನೇತ್ರವು ಶಿವಲಿಂಗಕ್ಕೆ ದೇಹವು. ``ನೇತ್ರಮಧ್ಯೋದ್ಭವಂ ಲಿಂಗಂ'' ಎಂಬ ಶ್ರುತಿಯುಂಟಾಗಿ ನೇತ್ರವು ಲಿಂಗಮೂರ್ತಿಯ ಹೆತ್ತ ತಾಯಿ. ``ನೇತ್ರಮಧ್ಯಜಚಿತ್ಸುಖಂ'' ಎಂಬ ಶ್ರುತಿಯುಂಟಾಗಿ ನೇತ್ರವು ಪರಶಿವೇಷ್ಟಲಿಂಗದ ಗುಹ್ಯಕ್ಕೆ ರಾಣಿವಾಸಮಕ್ಕುಂ. ``ದ್ವಿನೇತ್ರಕುಚಯೋರ್ಲಿಂಗಂ'' ಎಂಬ ಶ್ರುತಿಯುಂಟಾಗಿ ನೇತ್ರವು ಪ್ರಾಣಲಿಂಗದ ಹಸ್ತಂಗಳಿಗೆ ಪಿಡಿವ ಕುಚಂಗಳಕ್ಕುಂ. ``ಚಕ್ಷುಶ್ಚ ಶಿವ ಪುಷ್ಪಂ ಚ'' ಎಂಬ ಶ್ರುತಿಯುಂಟಾಗಿ ನೇತ್ರವು ಲಿಂಗಕ್ಕೆ ಅವಿರಳ ಪುಷ್ಪಮಕ್ಕುಂ. ``ಲಿಂಗಜ್ಯೋತಿಶ್ಚ ನೇತ್ರಯೋಃ'' ಎಂಬ ಶ್ರುತಿಯುಂಟಾಗಿ ನೇತ್ರಂಗಳು ಲಿಂಗಕ್ಕೆ, ಅಖಂಡ ಜ್ಯೋತಿಯಕ್ಕುಂ. ``ಲಿಂಗಾಭಿಷೇಕಂ ಚಕ್ಷುಶ್ಚ'' ಎಂಬ ಶ್ರುತಿಯುಂಟಾಗಿ ನೇತ್ರಂಗಳು ಲಿಂಗಕ್ಕೆ ಅಭಿಷೇಕವ ಮಾಡುವ ಕಳಸಂಗಳಕ್ಕುಂ ``ಲಿಂಗಸ್ಯ ಸಾಯಕಂ ನೇತ್ರಂ'' ಎಂಬ ಶ್ರುತಿಯುಂಟಾಗಿ ನೇತ್ರಂಗಳು ಲಿಂಗವನೊಳಗುಮಾಡಿಕೊಂಬುದಕ್ಕೆ ಹಾಕುವ ಬಾಣಂಗಳಕ್ಕುಂ. ``ಚಕ್ಷುರ್ಲಿಂಗಸ್ಯ ಚಾಕ್ಷುಷಿ'' ಎಂಬ ಶ್ರುತಿಯುಂಟಾಗಿ, ನೇತ್ರಂಗಳು ಲಿಂಗಮೂರ್ತಿಯ ನೇತ್ರಂಗಳಲ್ಲದೇ ಸ್ವಯಕ್ಕೆ ನೇತ್ರವಿಲ್ಲ. ಈ ನೇತ್ರಂಗಳು ಲಿಂಗಮೂರ್ತಿಯ ನೋಟ ಬೇಟ ಕೂಟದಿಂ, ಭಾವ ಮನ ದೃಕ್ಕೀಲೈಸಿ ನಟ್ಟ ದೃಷ್ಟಿಯಿಂ ನೋಳ್ವ (ನೋಟ) ಲಿಂಗೈಕ್ಯ ಶರಣಂಗಲ್ಲದೆ ಲೋಗರಿಗೆಲ್ಲಿಯದೊ ? ಇದು ಗುಹ್ಯಕ್ಕೆ ಗುಹ್ಯ, ಗೋಪ್ಯಕ್ಕೆ ಗೋಪ್ಯ, ರಹಸ್ಯಕ್ಕೆ ರಹಸ್ಯ ಈ ನೇತ್ರದ ಮಹಿಮೆಯ ಗುಹೇಶ್ವರನೇ ಬಲ್ಲನಲ್ಲದೆ ಕಣ್ಣುಗೆಟ್ಟಣ್ಣಗಳಿವರೆತ್ತ ಬಲ್ಲರು ನೋಡಾ.
--------------
ಅಲ್ಲಮಪ್ರಭುದೇವರು
ನೆಲನಿಲ್ಲದ ಬಯಲಭೂಮಿಯಲ್ಲಿ ನಿರ್ಬಯಲ ಬೀಜ ನೋಡಾ. ಅದರಂಕುರ ಮೂರು, ಫಲವಿಪ್ಪತ್ತೆ ೈದು ನೋಡಾ. ಪ್ರಥಮಾಂಕುರ ಶಿವ, ದ್ವಿತೀಯಾಂಕುರ ಸದಾಶಿವ, ಮೂರನೆ ಅಂಕುರ ಮಹೇಶ್ವರ. ಫಲವಿಪ್ಪತ್ತೆ ೈದು, ಪಂಚವಿಂಶತಿ ಲೀಲಾವಿಗ್ರಹ ನೋಡಾ. ಫಲವಿಪ್ಪತ್ತೆ ೈದು, ಅಂಕುರ ಮೂರನೊಳಕೊಂಡು ನಿಂದ ನಿರ್ವಯಲ ಪ್ರಾಣಲಿಂಗವೆಂದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದೈವವೆನಿಸಿಕೊಂಬ ಎಲ್ಲ ದೈವಂಗಳ ಬಿಟ್ಟು, ಶಿವನನೊಬ್ಬನೆ ಹಿಡಿಯೆಂದುದಥರ್ವಣ ವೇದ. ಶಿವನ ಪೂಜಿಸಿ, ಶಿವನ ನೆನೆದು, ಶಿವನ ಸ್ತುತಿಸುವುದೆಂದುದಥರ್ವಣ ವೇದ. `ಈಶೋವಾ ಶಿವ ಏಕೋಧ್ಯೇಯಃ ಶಿವಂಕರಃ ಸರ್ವಮನ್ಯತ್ಪರಿತ್ಯಜೇತ್' ಎಂದುದು ಶ್ರುತಿ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ ಸಲಹುತ್ತ, ಶಿವ ಶಿವಾ ಎಂದೋದಿಸಯ್ಯಾ. ಭಕ್ತಿಯೆಂಬ ಪಂಜರದೊಳಗಿಕ್ಕಿ ಸಲಹು, ಕೂಡಲಸಂಗಮದೇವಾ. 58
--------------
ಬಸವಣ್ಣ
ಇನ್ನಷ್ಟು ... -->