ಅಥವಾ

ಒಟ್ಟು 10 ಕಡೆಗಳಲ್ಲಿ , 7 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರ ನೋಡುವಡೆ ಭಗದೇಹಿ; ಚಂದ್ರ ನೋಡುವಡೆ ಗುರುಪತ್ನೀಗಮನಿ; ಉಪೇಂದ್ರ ನೋಡುವಡೆ ಬಾರದ ಭವದಲ್ಲಿ ಬಂದ ಅವತಾರಿ; ಬ್ರಹ್ಮ ನೋಡುವಡೆ ಸುಪುತ್ರೀಪತಿ ಮುನಿಗಣ ನೋಡುವಡೆ ಕುಲಹೀನರು; ಗಣಪತಿ ನೋಡುವಡೆ ಗಜಾನನ; ವೀರಭದ್ರ ನೋಡುವಡೆ ಮಹತ್ಪ್ರಳಯಾಗ್ನಿ ಸಮಕ್ರೋದ್ಥಿ; ಷಣ್ಮುಖ ನೋಡುವಡೆ ತಾರಕಧ್ವಂಸಿ. ಇವರೆಲ್ಲರು ಎಮ್ಮ ಪೂಜೆಗೆ ಬಾರರು. ನೀ ನೋಡುವಡೆ ಶ್ಮಶಾನವಾಸಿ, ರುಂಡಮಾಲಾದ್ಯಲಂಕಾರ; ನಿನ್ನ ವಾಹನ ಚಿದಂಗ ಆದಿವೃಷಭ. ನಿರೂಪಿಸಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಪ್ಪು ಬಲಿದು ಪೃಥ್ವಿಯ ಮೇಲೆ ಶತಕೋಟಿ ಸಹಸ್ರಕೋಟಿ ಬಯಲಿಂದತ್ತ ಭರಿತವಪ್ಪುದೊಂದು ರಥ. ಆ ರಥಕ್ಕೆ ಬ್ರಹ್ಮ ವಿಷ್ಣು ಸೂರ್ಯ ಚಂದ್ರ (?) ವೇದಶಾಸ್ತ್ರಪುರಾಣಸಕಲಾಗಮಪ್ರಮಾಣಗೂಡಿದ ಷಟ್ಕಲೆ ಮೇರುಮಂದಿರವೆಂಬ ಅಚ್ಚುಗಂಬವ ನೆಟ್ಟಿದೆ. ಆ ರಥದ ಸುತ್ತಲು ದೇವಾದಿದೇವರ್ಕಳೆಲ್ಲರ ತಂದು ಸಾರಥಿಯನಿಕ್ಕಿ ಆ ರಥದ ನಡುಮಧ್ಯಸ್ಥಾನದಲ್ಲಿ ಅಷ್ಟದಳಕಮಲವಾಯಾಗಿ ಅನಂತಸಹಸ್ರಕೋಟಿ ಕಮಲಪದ್ಮಾಸನವ ರಚಿಸಿದೆ. ಆ ಪದ್ಮಾಸನದ ಮೇಲೆ ಶಂಭು ಸದಾಶಿವನೆಂಬ ಮಹಾದೇವನ ತಂದು ನೆಲೆಗೊಳಿಸಿದೆ. ಆ ರಥದ ಪೂರ್ವಬಾಗಿಲಲ್ಲಿ ಆದಿಶಕ್ತಿಯ ನಿಲಿಸಿದೆ. ಉತ್ತರ ಬಾಗಿಲಲ್ಲಿ ಓಂ ಪ್ರಣಮಸ್ವರೂಪಿಣಿಯೆಂಬ ಶಕ್ತಿಯ ನಿಲಿಸಿದೆ. ಆ ಪಶ್ಚಿಮಬಾಗಿಲಲ್ಲಿ ಕ್ರಿಯಾಶಕ್ತಿಯ ನಿಲಿಸಿದೆ. ದಕ್ಷಿಣದ ಬಾಗಿಲಲ್ಲಿ ಚಿಚ್ಫಕ್ತಿಯ ನಿಲಿಸಿದೆ. ಭೈರವ ವಿಘ್ನೆಶ್ವರ ಷಣ್ಮುಖ ವೀರಭದ್ರರೆಂಬ ನಾಲ್ಕು ಧ್ವಜಪಟಗಳನೆತ್ತಿ, ಆ ರಥದ ಅಷ್ಟದಿಕ್ಕುಗಳಲ್ಲಿ ನಾನಾ ಚಿತ್ರವಿಚಿತ್ರವೈಭವಂಗಳೆಂಬ ಕೆಲಸವ ತುಂಬಿ, ಅದರ ಗಾಲಿಯ ಕೀಲುಗಳಲ್ಲಿ ಈರೇಳುಭುವನವೆಂಬ ಹದಿನಾಲ್ಕುಲೋಕಂಗಳ ಧರಿಸಿ ಆಡುತ್ತಿರ್ಪವು. ಅನಾದಿ ಶೂನ್ಯವೆಂಬ ಮಹಾರಥದೊಳಗಿಪ್ಪ ನಮ್ಮ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ನಿರಾಳ ನಿಶ್ಚಿಂತ ನಿರ್ಲೇಪನು.
--------------
ಬಾಚಿಕಾಯಕದ ಬಸವಣ್ಣ
ನಂದೀಶ್ವರ, ಭೃಂಗೀಶ್ವರ, ವೀರಭದ್ರ, ದಾರುಕ, ರೇಣುಕ, ಶಂಖುಕರ್ಣ, ಗೋಕರ್ಣ, ಏಕಾಕ್ಷರ, ತ್ರಯಕ್ಷರ, ಪಂಚಾಕ್ಷರ, ಷಡಕ್ಷರ, ಸದಾಶಿವ, ಈಶ್ವರ, ಮಹೇಶ್ವರ, ರುದ್ರ, ಘಂಟಾಕರ್ಣ, ಗಜಕರ್ಣ, ಏಕಮುಖ, ದ್ವಿಮುಖ, ತ್ರಿಮುಖ, ಚತುರ್ಮುಖ, ಪಂಚಮುಖ, ಷಣ್ಮುಖ, ಶತಮುಖ, ಸಹಸ್ರಮುಖ ಮೊದಲಾದ ಗಣಾಧೀಶ್ವರರು ಇವರು, ನಿತ್ಯಪರಿಪೂರ್ಣವಹಂಥ ಪರಶಿವತತ್ವದಲ್ಲಿ ಜ್ಯೋತಿಯಿಂದ ಜ್ಯೋತಿ ಉದಿಸಿದಂತೆ ಉದಯಿಸಿದ ಶುದ್ಧ ಚಿದ್ರೂಪರಪ್ಪ ಪ್ರಮಥರು. ಅನಾದಿಮುಕ್ತರಲ್ಲ, ಅವಾಂತರಮುಕ್ತರೆಂಬ ನಾಯ ನಾಲಗೆಯ ಹದಿನೆಂಟು ಜಾತಿಯ ಕೆರಹಿನಟ್ಟಿಗೆ ಸರಿಯೆಂಬೆ. ಆ ಶ್ವಾನಜ್ಞಾನಿಗಳಪ್ಪವರ ಶೈವಪಶುಮತವಂತಿರಲಿ, ಅವರಾಗಮವಂತಿರಲಿ. ನಿಮ್ಮ ಶರಣರಿಗೆ, ನಿಮಗೆ, ಬೇರೆ ಮಾಡಿ ಸಂಕಲ್ಪಿಸಿ ನುಡಿವ ಅಜ್ಞಾನಿ ಹೊಲೆಯರ ಎನಗೊಮ್ಮೆ ತೋರದಿರಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆ ಪರಶಿವನ ಅಷ್ಟಾಂಗದಿಂದಾದ ಬ್ರಹ್ಮಾಂಡದ ಸ್ಥಿರ ಚರ ಪ್ರಾಣಿಗಳ ಲಯವ ನೋಡಿ ಚಿಂತೆಯೊಳಗಾಗಿ, ಕಂತುಹರನ ಧ್ಯಾನವ ಮಾಡಲು, ಆ ಹರ ಗುರುರೂಪವ ತಾಳ್ದು ಬಂದು, ತನ್ನ ಚಿಂತಿಸಿದ ಸುಜ್ಞಾನಿಗಳಿಗೆ, ಮನವನೊಬ್ಬುಳಿಗೊಳಿಸುವುದಕ್ಕೆ ಕಾರಣವೆಂದು ಹೇಳಿದ ಷಣ್ಮುಖ, ಶಾಂಭವಿ, ಖೇಚರಿ, ಭೂಚರಿ, ಸಾಚರಿ, ಕುರಂಗ, ಪಾಲೋತಕ, ಹಠ, ಲಯ, ಲಂಬಿಕ, ಮೊದಲಾದ ಅನಂತ ಮುದ್ರೆಗಳ ಸಾಧಿಸಿ, ಆ ಮುದ್ರೆ ಸಾಧನದಲ್ಲಿ ಕಂಡ, ಮಾಯ, ಛಾಯ, ಅಭ್ರಛಾಯ, ಪುರುಷಛಾಯ, ಮಿಂಚಿನ ಛಾಯ, ಬಳ್ಳಿಮಿರುಪಿನ ಛಾಯ, ಆರು ವರ್ಣದ ಛಾಯ, ಮೃತ್ಯುವಿನ ಛಾಯ, ಜೀವ ಜಪ ಮರಣ ಚಿನ್ನ ಕನಸಸಂಭ್ರಮ, ಕುಂಡಲಿನೋಟ, ಘೋಷಲಂಪಟ, ಮಾನಸಪೂಜೆ, ಬೈಲವಾಣಿ, ಪಶ್ಚಿಮಕೋಣೆ, ಆತ್ಮಭೆಟ್ಟಿ, ಮಂತ್ರಪಾಠ, ಒಳಬೆಳಗು, ಹೊರಬೆಳಗು ಪರಿಪರಿಯ ಬೆರಗುಗಳ ತಿಳಿದು, ಇದೇ ನಿಜಬ್ರಹ್ಮವೆಂದು ಹೆಮ್ಮೆ ೈಸಿ, ಆಸೆವೊಡಿಯದೆ, ಕ್ಲೇಶ ಕಡಿಯದೆ, ಘಾಶಿಯಾಗಿ ಹೇಸಕಿಯೊಳಗೆ ಮುಳಿಗಿ ಮುಂದುಗಾಣದೇ ಹೋದರು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಕೇಳು ಕೇಳಾ, ಎಲೆ ಅಯ್ಯಾ, ಬಸವಣ್ಣನು ಅನಿಮಿಷಂಗೆ ಲಿಂಗವ ಕೊಟ್ಟ ಕಾರಣ ಮತ್ರ್ಯಕ್ಕೆ ಬಂದೆನೆಂಬರು. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ ಜೈನ ಚಾರ್ವಾಕ ಕಾಳಾಮುಖ ಎನಿಸುವ ಷಡ್ದರ್ಶನಾಗಳು ಹೆಚ್ಚಿ, ವಿಭೂತಿ ರುದ್ರಾಕ್ಷಿ ಪಂಚಾಕ್ಷರವನರಿಯದೆ ನರಕಕ್ಕೆ ಭಾಜನವಾಗಿ ಪೋಪರೆಂದು, ದೇವರು ನಂದಿಕೇಶ್ವರನ ಮುಖವ ನೋಡಲು, ಆ ಪ್ರಶ್ನೆಯಿಂದ ಬಂದನಯ್ಯಾ ಬಸವಣ್ಣ ಪರಹಿತಾರ್ಥನಾಗಿ. ದೇವರು ದೇವಿಯರಿಗೆ ಪ್ರಣವಾರ್ಥವ ಬೋಧಿಸುವಾಗ ದೇವಿಯರ ಮುಡಿಯಲ್ಲಿ ಹೊನ್ನ ತುಂಬಿಯಾಗಿ ಷಣ್ಮುಖ ಕೇಳಿದ ಪ್ರಶ್ನೆಯಿಂದ ಬಂದನೆಂಬರಯ್ಯಾ, ಚೆನ್ನಬಸವಣ್ಣನು. ಸಟೆ ಸಟೆ! ಆ ನುಡಿಯ ಕೇಳಲಾಗದು. ಅದೇನು ಕಾರಣವೆಂದಡೆ: ಷಡ್ವಿಧಸ್ಥಲಕ್ಕೆ ಸ್ಥಾಪನಾಚಾರ್ಯನಾಗಿ ಸಕಲ ಪ್ರಮರ್ಥರ್ಗೆ ವೀರಶೈವವ ಪ್ರತಿಷೆ*ಯ ಮಾಡಲೋಸ್ಕರ ಬಂದನಯ್ಯಾ ಚೆನ್ನಬಸವಣ್ಣನು. ದೇವರ ಸಭೆಯಲ್ಲಿ ನಿರಂಜನನೆಂಬ ಗಣೇಶ್ವರನು ಮಾಯಾಕೋಳಾಹಳನೆಂದು ಹೊಗಳಿಸಿಕೊಂಡು ಬರಲಾಗಿ ಆ ಸಮಯದಲ್ಲಿ ದೇವಿಯರು ದೇವರ ಮಾಯಾಕೋಳಾಹಳನಾದ ಪರಿಯಾವುದೆಂದು ಬೆಸಗೊಳಲು, ಆ ಪ್ರಶ್ನೆಯಿಂದ ಪ್ರಭುದೇವರು ಮತ್ರ್ಯಕ್ಕೆ ಬಂದರೆಂಬರಯ್ಯಾ. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ: ಸುಜ್ಞಾನಿ ನಿರಹಂಕಾರರ ಭಕ್ತಿಗೋಸ್ಕರ ಪ್ರತ್ಯಕ್ಷವಾಗಿ ಬಸವಾದಿ ಪ್ರಮಥರ್ಗೆ ಬೋಧಿಸಿ, ತನ್ನ ನಿಜಪದವ ತೋರಬಂದರಯ್ಯಾ ಪ್ರಭುದೇವರು. ದಕ್ಷಸಂಹಾರದಿಂದ ಬರುವಾಗ ಗುಪ್ತಗಣೇಶ್ವರನ ನಿರಿ ಸೋಂಕಲು, ಆ ಪ್ರಶ್ನೆಯಿಂದ ಬಂದನೆಂಬರಯ್ಯಾ ಮಡಿವಾಳನು. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ: ಬಿಜ್ಜಳ ಪರವಾದಿಗಳ ಸಂಹರಿಸಲೋಸ್ಕರ ಬಸವಣ್ಣನ ನಿಮಿತ್ತವಾಗಿ ಬಂದನಯ್ಯಾ ಮಡಿವಾಳ ಮಾಚಯ್ಯಗಳು. ಇಂತಿವರು ಮುಖ್ಯವಾದ ಏಳುನೂರು ಎಪ್ಪತ್ತು ಅಮರಗಣಂಗಳಿಗೆ ವಾಸನಾಧರ್ಮವೆಂದಡೆ ಅಘೋರ ನರಕ ತಪ್ಪದಯ್ಯಾ. ಇವರು ಮುಖ್ಯವಾದ ಪ್ರಮಥ ಗಣಂಗಳಿಗೆ ಶಾಪವೆಂದು ಕಲ್ಪಸಿದಡೆ, ನಾಯಕ ನರಕ ತಪ್ಪದು, ಎಲೆ ಶಿವನೆ ಕಪಿಲಸಿದ್ಧಮಲ್ಲಿಕಾರ್ಜುನ, ನಿಮ್ಮಾಣೆ
--------------
ಸಿದ್ಧರಾಮೇಶ್ವರ
ಜಂಗಮಪ್ರಸಾದವ ಲಿಂಗಕ್ಕೆ ಸಲಿಸಬಾರದೆಂಬ ಮಾತ ಕೇ?ಲಾಗದು. ಪ್ರಸಾದವೆ ಲಿಂಗ, ಆ ಲಿಂಗವೆ ಅಂಗ; ಆ ಜಂಗಮವೆ ಚೈತನ್ಯ, ಆ ಚೈತನ್ಯವೆ ಪ್ರಸಾದ. ಇಂತೀ ಉಭಯದ ಬೇಧವನರಿಯರು ನೋಡಾ ! ಜಿಹ್ವೆಯಲ್ಲಿ ಉಂಡ ರಸ ಸರ್ವೇಂದ್ರಿಯಕ್ಕೆ ಬೇರೆಯಾಗಬಲ್ಲುದೆ ? ಪ್ರಾಣಲಿಂಗದಲ್ಲಿ ಸವಿದು ಭಾವಲಿಂಗದಲ್ಲಿ ತೃಪ್ತಿಯಾದ ಬಳಿಕ ಇಷ್ಟಲಿಂಗಕ್ಕೆ ಭಿನ್ನವುಂಟೆ ? ಇದನರಿದು ಅರ್ಪಿಸಿ ಸುಖಿಸಲೊಲ್ಲರು. ದೇಹಭಾವದಲ್ಲಿ ಕೊಂಬುದು ಅನರ್ಪಿತವೆಂದರಿಯರು. ಲಿಂಗಕ್ಕೂ ಭಕ್ತಂಗೂ ಭೇದವಿಲ್ಲೆಂಬುದನರಿಯಲರಿಯರು. ಜಂಗಮಮುಖದಿಂದೊಗೆದುದು ಪ್ರಸನ್ನಪ್ರಸಾದವೆಂದರಿಯರು. ಸರ್ವೇಂದ್ರಿಯಮುಖದ್ವಾರೇ ಸದಾ ಸನ್ನಿಹಿತಃ ಶಿವಃ ಪ್ರಾಣೇ ಲಿಂಗಸ್ಥಿತಿಂ ಮತ್ವಾ ಯೋ ಭುಂಕ್ತೇ ಲಿಂಗವರ್ಜಿತಃ ಸಃ ಸ್ವಮಾಂಸಂ ಸ್ವರುಧಿರಂ ಸ್ವಮಲಂ ಭಕ್ಷಯತ್ಯಹೋ ತಸ್ಮಾಲ್ಲಿಂಗಪ್ರಸಾದಂ ಚ ನಿರ್ಮಾಲ್ಯಂ ತಜ್ಜಲಂ ತಥಾ ನೈವೇದ್ಯಂ ಚರಲಿಂಗಸ್ಯ ಶೃಣು ಷಣ್ಮುಖ ಸರ್ವದಾ ಇದು ಕಾರಣ, ಪ್ರಸಾದವೆ ಇಷ್ಟ ಪ್ರಾಣ ಭಾವವಾಗಿ ನಿಂದುದನರಿಯರು. ಇಂತೀ ಮರ್ಮವ ನಮ್ಮ ಬಸವಣ್ಣ ಬಲ್ಲ. ಇದನೆಲ್ಲರಿಗೆ ತೋರಿ, ಲಕ್ಷದ ಮೇಲೆ ತೊಂಬತ್ತುಸಾವಿರ ಜಂಗಮದ ಒಕ್ಕುದನೆತ್ತಿಕೊಂಬ; ಅಚ್ಚಪ್ರಸಾದವ ಲಿಂಗಕ್ಕಿತ್ತುಕೊಂಬ. ಪ್ರಸಾದಿಗಳು ಮೂವತ್ತಿರ್ಛಾಸಿರದೊಳಗೆ ತಾನೊಬ್ಬನಾಗಿ ಸುಖಿಸುವುದ ನಾನು ಬಲ್ಲೆನಾಗಿ, ಸಂದೇಹವಳಿದು ಬದುಕಿದೆನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸಾಕ್ಷಿ:`ಶೈವಂ ಚತುರ್ವಿಧಂ ಜ್ಞೇಯಂ ಸಮಾಸಾತ್ ಶ್ರುಣು ಷಣ್ಮುಖ || ಸಾಮಾನ್ಯಂ ಮಿಶ್ರಕಂ ಶೈವಂ ಶುದ್ಧಂ ವೀರಂ ಯಥಾ ಕ್ರಮಂ' || ಇಂತೆಂದು ಶಿವ ಸಂಬಂಧವಾದ ದರ್ಶನವು ನಾಲ್ಕು ಪ್ರಕಾರವಾಗಿದಂಥಾದೆಂದು ಅರಿಯಲ್ತಕ್ಕುದು. ಆ ಚತುರ್ವಿಧ [ದ]ಲಿ ಶೈವವನು ಹೇಳಿಹನು ಎಲೆ ಷಣ್ಮುಖನೆ ಕೇಳು, ಅವಾವವೆಂದೊಡೆ:ಸಾಮಾನ್ಯ ಶೈವ ಮಿಶ್ರಶೈವ ಶುದ್ಧಶೈವ ವೀರಶೈವವೆಂದು ಕ್ರಮದಿಂದಪ್ಪುವೆಂದು ಶಿವನು ನಿರೂಪಿಸುತ್ತಿದ್ದನಯ್ಯಾ, ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
`ಇತಿ ವ್ರತಸಮಾಯುಕ್ತೋ ವೀರಶೈವೋ' ವಿಶಿಷ್ಟತೇ ಇತ್ಯಾದಿ ವ್ರತಂ ಗಳೊಡನೆ ಮಾಡಿ ದಾತನೆ ವೀರಶೈವವನೆಂದು ವಿಶೇಷಿಸಲ್ಪಡುತ್ತಿಹನಯ್ಯ. `ವಿಶೇಷ ಶೈವಮಾಖ್ಯಾತಂ ನಿರಾಭಾರಂ ತತಃ ಶ್ರುಣು' ಎಂದುದಾಗಿ, ಈ ಪ್ರಕಾರದಿಂ ವಿಶೇಷ ವೀರಶೈವವೆಂಬ ಭಕ್ತಸ್ಥಲವು ಹೇಳಲ್ಪಟ್ಟಿತ್ತು. ಆನಂತರದಲ್ಲಿ ನಿರಾಭಾರಿವೀರಶೈವವೆಂಬ ಜಂಗಮಸ್ಥಲಮಂ ಕೇಳೆಂದು ಈಶ್ವರನು ಷಣ್ಮುಖ ದೇವರಿಗೆ ನಿರೂಪಿಸುತ್ತಿರ್ದನಯ್ಯ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
`ಷಟ್ಚಕ್ರಂ ಚ ಷಡಂಗಂ ಚ | ಷಡಧ್ವಾನಂ ಷಡಾನನ || ತತ್ಸ್ಥಾನೇಷು ವಿನ್ಯ ಸ್ಯೇತ್ಪಂಚಬ್ರಹ್ಮನ್ಯಸ್ಯೇತ್ತತಃ || ಇಂತೆಂದು, ಎಲೆ ಷಣ್ಮುಖ, ಷಟ್ಚಕ್ರವನು ಷಡಂಗವನು ಷಡಧ್ವವನು ಆಯಾ ಪೂರ್ವೋಕ್ತನಾದ ಶಿವಾವಯವಂಗಳಲ್ಲಿ ನ್ಯಾಸವಂ ಮಾಡುವುದು. ಅದರಿಂದ ಮೇಲೆ ಪಂಚಬ್ರಹ್ಮ ಮಂತ್ರಗಳಂ ನ್ಯಾಸವಂ ಮಾಡುವುದು ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
-->