ಅಥವಾ

ಒಟ್ಟು 128 ಕಡೆಗಳಲ್ಲಿ , 45 ವಚನಕಾರರು , 118 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂರ್ವದಿಂದ ಉತ್ತರಕ್ಕೆ ಬಂದ ಸೂರ್ಯನು ಅಸ್ತಮಯವಾಯಿತ್ತೆಂದು ಜಾಹ್ಯಗೆ ಒಡಲಾಗಿ, ಮತ್ತಾ ವರುಣಪ್ರದಕ್ಷಿಣದಿಂದ ಬಂದು ಪೂರ್ವದಲ್ಲಿ ಹುಟ್ಟಲಿಕ್ಕೆ ನಿನ್ನಿಂಗೆ ಇಂದಿಂಗೆಯೆಂಬುದು ಒಂದೊ ಎರಡೊ ? ಅಂದಿಗೆ ಜಾÕನ, ಇಂದಿಗೆ ಮರವೆ, ಎಂಬುದು ಒಂದೊ ಎರಡೊ ? ಅದು ಘಟದ ಪ್ರವೇಶದಿಂದ. ಪೂರ್ವ ಉತ್ತರಕ್ಕೆ ಬಂದಾತ್ಮನನರಿದು ಉಭಯವ ತಿಳಿದು ಸಂದು ನಾಶನವಾದಲ್ಲಿ ಸದ್ಯೋಜಾತಲಿಂಗವು ವಿನಾಶವಾದ.
--------------
ಅವಸರದ ರೇಕಣ್ಣ
ಅಯ್ಯಾ, ಕಾಲತೊಳೆದುಕೊಂಡು ಬಂದರೆ ಕಣ್ಣಮುಂದೆ ನಿಂದೆ. ಕೈಯ ತೊಳೆದುಕೊಂಡು ಬಂದರೆ ಮನದ ಮುಂದೆ ನಿಂದೆ. ತಲೆಯ ತೊಳೆದುಕೊಂಡು ಬಂದರೆ ಭಾವದ ಮುಂದೆ ನಿಂದೆ. ಸಂದು ಸಂಶಯ ಕುಂದು ಕಲೆಯ ಕಳೆದುಳಿದು ಬಂದರೆ ಸರ್ವಾಂಗಸನ್ನಿಹಿತನಾಗಿ ನಿಂದೆ. ಬಂದ ಬರವು ಚಂದವಾಗಿ ನಿಂದರೆ ಅಂದಂದಿಗೆ ಅವಧರಿಸು ಮುಂದುವರಿವೆನು ಮುದದಿಂದೆ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಗುರುಭಕ್ತನಾದಲ್ಲಿ ಘಟಧರ್ಮವಳಿದು ಲಿಂಗಭಕ್ತನಾದಲ್ಲಿ ಮನಸಂಚಲ ನಿಂದು ಜಂಗಮಭಕ್ತಿಯಲ್ಲಿ ಧನದಾಸೆಯಳಿದು ತ್ರಿವಿಧಾಂಗ ಸಲೆ ಸಂದು ತ್ರಿಕರಣ ಶುದ್ಧನಾಗಿದ್ದವಂಗೆ ಮತ್ರ್ಯ ಕೈಲಾಸವೆಂಬ ಕಾಳುಮಾತಿಲ್ಲ ಆತ ನಿಶ್ಚಿಂತ ನಿಜಮುಕ್ತನಯ್ಯಾ, ರಾಮನಾಥ.
--------------
ಜೇಡರ ದಾಸಿಮಯ್ಯ
ತನುವಿನ ಕ್ರಿಯಾಕಾರದಲ್ಲಿ ಒಡಲುಗೊಂಡಿಹವರು ಉಣ್ಣೆನೆಂದಡೆ ಅವರ ವಶವೆ? ತನುಗುಣ ನಾಸ್ತಿಯಾದವರು ಉಣ್ಣೆನೆಂದಡೆ ಸಲುವುದಲ್ಲದೆ ಕಾಮವಿಕಾರಕ್ಕೆ ಸಂದು, ತಾಮಸಕ್ಕೆ ಮೈಗೊಟ್ಟು ಇಪ್ಪವರೆಲ್ಲರೂ ಉಣ್ಣೆನೆಂದಡೆ ಹರಿವುದೆ? ನಿಜಗುರು ನಿಜಲಿಂಗ ನಿಜಜಂಗಮ ನಿತ್ಯಪ್ರಸಾದವ ಶ್ರೀಗುರು ಕರುಣದಿಂದ ಪಡೆದು ಅರಿದಾಚರಿಸಿದವರಿಗಲ್ಲದೆ ಭವವ ತಪ್ಪಿಸಬಾರದು ಕಾಣಾ ಪ್ರಭುವೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ನಸುಗಾಯವಡೆದವನಂತೆ ನೋವುಣ್ಣದೆ, ಸತ್ಕಿ ್ರೀವಂತನಂತೆ ಸಂದೇಹವಿಲ್ಲದೆ, ಖಳನಿಚ್ಚಟನಂತೆ ಆತ್ಮಕ್ಕೆ ಸಂದು ಸಂಶಯವಿಲ್ಲದೆ, ನೆರೆ ಅರಿದವನಂತೆ ಮರವೆಯ ಕುರುಹಿಗೆ ಬಾರೆದ, ಲಿಂಗದಲ್ಲಿ ಕರಿಗೊಂಡವನಂತೆ ಕೊಟ್ಟಿಹೆ ಕೊಂಡೆಹೆನೆಂಬ ಸೂತಕವಿಲ್ಲದೆ, ಬೊಮ್ಮವನರಿದವನಂತೆ ಅವರಿವರಲ್ಲಿ ಸುಮ್ಮಾನದ ಸುಖವ ನುಡಿಯದೆ, ಘಟಕರ್ಮ ಯೋಗಿಯಂತೆ ಆ ದೇಹ ಇಂದ್ರಿಯಂಗಳಿಲ್ಲದೆ, ಲಿಂಗಸಂಗಿಯಂತೆ ಬಾವಸರ್ವರ ಸಂಗ ಮಾಡದೆ ಇಂತೀ ಸರ್ವಗುಣಸಂಪನ್ನ ನವಬ್ರಹ್ಮಿ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 52 ||
--------------
ದಾಸೋಹದ ಸಂಗಣ್ಣ
ಸ್ಥಲಂಗಳನರಿದು ಆಚರಿಸುವಲ್ಲಿ ಮೂರನರಿದು ಮೂರ ಮರೆದು ಮೂರವೇದಿಸಿ ಐದ ಕಾಣಿಸಿಕೊಂಡು ಆರರ ಅರಿಕೆ ಹಿಂಗಿ ಮತ್ತಿಪ್ಪತ್ತೈದರ ಭೇದವಡಗಿ ಮತ್ತೊಂದರಲ್ಲಿ ಕಂಡೆಹೆನೆಂಬ ಸಂದು ಸಲೆ ಸಂದು ಒಂದಿ ಒಂದಾಹನ್ನಕ್ಕ ಗೋಪತಿನಾಥ ವಿಶ್ವೇಶ್ವರಲಿಂಗವೆಂಬ ಉಭಯನಾಮ ಬಿಡದು.
--------------
ತುರುಗಾಹಿ ರಾಮಣ್ಣ
ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ, ಸಂದು ಭೇದವಳಿವ ಪರಿ ಎಂತು ಹೇಳಾ ಅಂಗದಲ್ಲಿ ಸಂಗವ ಮಾಡಿಹೆನೆಂದಡೆ, ಮುಂದುಗೆಡಿಸಿ ಕಾಡುವನು ಶಿವನು. ಕಾಮವೆಂಬ ಬಯಕೆಯಲ್ಲಿ ಅಳಲಿಸುವ ಬಳಲಿಸುವ ಶಿವನು. ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ, ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು. ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು. ಕೂಡಲಸಂಗಮದೇವರ ಬೆರಸುವಡೆ, ಬ್ಥಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.
--------------
ಬಸವಣ್ಣ
ಪಂಚತತ್ವಂಗಳುವಿಡಿದಾಡುವ ಚತುರ್ದಶೇಂದ್ರಿಯ ವಿಕಾರಂಗಳು ತಾನಲ್ಲ, ತನ್ನವಲ್ಲ. ತನುವುಂಟೆಂದಡೆ ಅಹಮ್ಮಾದಿಗೆ ಸಂದು, ಬಂಧಮೋಕ್ಷಂಗಳಿಗೊಳಗಾಯಿತ್ತು ನೋಡಾ. ಕುರುಹಿಲ್ಲದ ಲಿಂಗ ಅರಿವಿನೊಳು ಬಳಿಸಂದಡೆ ಅರಿವು ಕುರುಹು ತೆರಹಿಲ್ಲದೆ ನಿಂದ ನಿಲವು ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ನಿಜ ತಾನಾದ ಶರಣ.
--------------
ಆದಯ್ಯ
ಗಂಧವೃಕ್ಷವ ಕಡಿದಲ್ಲಿ ನೊಂದೆನೆಂದು ಗಂಧವ ಬಿಟ್ಟಿತ್ತೆ ಅಯ್ಯಾ? ಚಂದದ ಸುವರ್ಣವ ತಂದು ಕಾಸಿ ಬಡಿದಡೆ, ನೊಂದನೆಂದು ಕಳಂಕ ಹಿಡಿಯಿತ್ತೆ ಅಯ್ಯಾ? ಸಂದು ಸಂದು ಕಡಿದ ಕಬ್ಬು ಯಂತ್ರದಲ್ಲಿಟ್ಟು ತಿರುಹಿ ಕಾಸಿದಡೆ, ನೊಂದೆನೆಂದು ಸಿಹಿಯಾಗುವುದ ಬಿಟ್ಟಿತ್ತೆ ಅಯ್ಯಾ? ತಂದು ತಂದು ಭವಕಟ್ಟಿಬಿಟ್ಟಡೆ, ನಿಮ್ಮರಿವು ಬಿಟ್ಟೆನೆ ಅಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಆದಿಯನರಿಯರು ಅನಾದಿಯನರಿಯರು, ಒಂದರೊಳಗಿಪ್ಪ ಎರಡನರಿಯರು, ಎರಡರೊಳಗಿಪ್ಪ ಮೂರರ ಕೀಲನರಿಯರು, ಮೂರರ ಸಂದು ಆರಾದುದನರಿಯರು. ಆರೆಂದು ನುಡಿವ ಗಾರು ಮಾತು ತಾನಲ್ಲ ಗುಹೇಶ್ವರ[ನ] ನಿಲವನರಿದಡೆ, _ಒಂದೂ ಇಲ್ಲ. ಅರಿಯದಿರ್ದಡೆ ಬಹುಮುಖವಯ್ಯಾ.
--------------
ಅಲ್ಲಮಪ್ರಭುದೇವರು
ಗುರುಭಕ್ತನಾದಲ್ಲಿ ಘಟಧರ್ಮವಳಿದು, ಲಿಂಗಭಕ್ತನಾದಲ್ಲಿ ಸಂಚಲ ನಿಂದು, ಜಂಗಮಭಕ್ತನಾದಲ್ಲಿ ತ್ರಿವಿಧಾಂಗ ಸಲೆ ಸಂದು, ಇಂತೀ ತ್ರಿವಿಧಭಕ್ತಿಯಲ್ಲಿ ತ್ರಿಕರಣಶುದ್ಧನಾದ ಆತ್ಮಂಗೆ ಮತ್ರ್ಯ-ಕೈಲಾಸವೆಂಬ ಕಾಳುಮಾತಿಲ್ಲ. ಆತ ನಿತ್ಯಮುಕ್ತ ಎನ್ನಯ್ಯ ಚೆನ್ನರಾಮನಾಗಿ.
--------------
ಏಕಾಂತರಾಮಿತಂದೆ
ಬೇಡಿ ಮಾಡುವ ಭಕ್ತನ ಇರವೆಂತೆಂದಡೆ: ಆ ಗಳಿಗೆಯಲ್ಲಿ ಆ ದ್ರವ್ಯ ಸಂದು ಈಗ-ಆಗವೆಂಬ ಬೈಕೆಯ ಮರೆದು, ಸತಿಸುತರಿಗೆಂದೆನ್ನದೆ, ಇಂತೀ ಭಕ್ತಿಯೆ ಗತಿಯಾಗಿ, ಸತ್ಯವೆ ಒಡಲಾಗಿ, ಇಂತೀ ಗುಣದಲ್ಲಿ ನಿತ್ಯ-ಅನಿತ್ಯವ ಅಳಿದು ಮಾಡುವ ಸದ್ಭಕ್ತ ಬೇಡಿ[ದ]ನೆಂಬ ಭಾವವಿಲ್ಲ. ಆ ದ್ರವ್ಯ ಏಲೇಶ್ವರಲಿಂಗದ ಬೈಚಿಟ್ಟ ಬಯಕೆ.
--------------
ಏಲೇಶ್ವರ ಕೇತಯ್ಯ
ಶುದ್ಧ ಮಿಶ್ರ ಸಂಕೀರ್ಣ ಪೂರ್ವ ಮಾರ್ಗಶೈವಂಗಳಲ್ಲಿ ಕರ್ಮಭಕ್ತಿಯಲ್ಲದೆ ನಿರ್ಮಳಸದ್ಭಕ್ತಿಯೆಲ್ಲಿಯದೊ ? ಒಮ್ಮೆ ಧರಿಸಿ ಒಮ್ಮೆ ಇರಿಸಿ, ಶುಚಿಯಾದೆನೆಂದು ಅಶುಚಿಯಾದೆನೆಂದು ಭವಿಯಾಗುತ್ತೊಮ್ಮೆ, ಭಕ್ತನಾಗುತ್ತೊಮ್ಮೆ ಒಪ್ಪಚ್ಚಿ ಹೊಲೆ, ಒಪ್ಪಚ್ಚಿ ಕುಲವೆಂದು ತೆರನರಿಯದಿಪ್ಪ ಬರಿಯ ಶುದ್ಧಶೈವವಂ ಬಿಟ್ಟು, ಬ್ರಹ್ಮ ವಿಷ್ಣು ರುದ್ರ ಮಾಹೇಶ್ವರರು ಒಂದೆಂದು ನುಡಿವ ದುಃಕರ್ಮ ಮಿಶ್ರವಂ ಬಿಟ್ಟು, ಹರನೆ ಹಿರಿಯನೆಂದು ಕಿರಿಯರೆಲ್ಲಾ ದೇವರೆಂದು ನುಡಿದು ಕಂಡ ಕಂಡವರ್ಗೆ ಹೊಡೆಗೆಡವ ವೇಶಿಯ ಸುತನಂತೆ ಸಂಕೀರ್ಣಕ್ಕೊಳಗಾದ ಸಂಕೀರ್ಣಶೈವಮಂ ನೋಡದೆ, ದೂರದಿಂ ನಮಿಸಿ ಅರ್ಪಿಸಿ ಶೇಷವರುಣಕರ್ತನಲ್ಲವೆಂದು ದೂರಸ್ತನಹ ಪೂರ್ವಶೈವಮಂ ತೊಲಗಿ, ಅಂಗದಲನವರತ ಲಿಂಗಮಂ ಧರಿಸಿರ್ದು ದೇಹೇಂದ್ರಿಯ ಮನಃ ಪ್ರಾಣ ಜ್ಞಾನ ಭಾವ ಒಮ್ಮುಖಮಂ ಮಾಡಿ, ಸದ್ಗುರುಕಾರುಣ್ಯಮಂ ಪಡೆದು, ಲಿಂಗವೇ ಪತಿ, ಗುರುವೆ ತಂದೆ, ಜಂಗಮವೇ ಲಿಂಗವೆಂದರಿದು, ದ್ರವ್ಯವೆಂಬುದು ಭೂತರೂಪು, ಪ್ರಸಾದವೆಂಬುದು ಲಿಂಗರೂಪವೆಂದು ತಿಳಿದು, ಲಿಂಗದ ಪಾದೋದಕವೇ ಲಿಂಗಕ್ಕೆ ಮಜ್ಜನವಾಗಿ ಲಿಂಗದ ಪ್ರಸಾದವೇ ಲಿಂಗಕ್ಕೆ ಆರೋಗಣೆಯಾಗಿ ಲಿಂಗದಿಂದ ನೋಡುತ್ತ ಕೇಳುತ್ತ ರುಚಿಸುತ್ತ ಮುಟ್ಟುತ್ತ ವಾಸಿಸುತ್ತ ಕೊಡುತ್ತ ಆನಂದಿಸುತ್ತ ಅಹಂ ಮಮತೆಗೆಟ್ಟು ಸಂದು ಸಂಶಯವರಿತು ಹಿಂದು ಮುಂದ ಹಾರದಿಪ್ಪುದೆ ವೀರಶೈವ. ಅದೆಂತೆಂದಡೆ: ಪಿತಾ ಗುರುಃ ಪತಿರ್ಲಿಂಗಂ, ಸ್ವಲಿಂಗಂ ಜಂಗಮಪ್ರಭುಃ ತಸ್ಮಾತ್ಸರ್ವಪ್ರಯತ್ನೇನ ತಸ್ಯೈವಾರಾಧನಂ ಕ ರು ಸ ಏವ ಸ್ಯಾತ್ಪ್ರಸಾದಸ್ತೇ ಭಕ್ತಿವಿತ್ತಸಮರ್ಪಿತಃ ತತ್ಪ್ರಸಾದಸ್ತು ಭೋಕ್ತವ್ಯಃ ಭಕ್ತೋವಿಗತಕಲ್ಮಷಃ ಎಂದುದಾಗಿ, ಇಂತಲ್ಲದಿರ್ದುದೆ ಇತರ ಶೈವ ಕಾಣಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ತನ್ನ ಪರಿಸ್ಪಂದವ ಸಾಕುವುದಕ್ಕೆ ಗುರು ಲಿಂಗಜಂಗಮಕ್ಕೆಂದು ಬೇಡಿ ಒಡಲ ಹೊರೆವ ಪರಿ. ಇನ್ನೆಂತುಂಟಯ್ಯಾ? ಗುರುವಿಂಗೆಂದಲ್ಲಿ ಅಂಗದಾಸೆಯಿಲ್ಲದೆ, ಲಿಂಗಕ್ಕೆಂದಲ್ಲಿ ಸಂದು ಸಂಶಯವಿಲ್ಲದೆ, ಜಂಗಮಕ್ಕೆಂದಲ್ಲಿ ಇಂದು ನಾಳೆಯೆಂಬ ಸಂದೇಹವ ಹರಿದು ಮಾಡುವನ ಇರವೆ ಷಡುಸ್ಥಲ ಬ್ರಹ್ಮಮೂರ್ತಿ. ಆತ ಇಹದಲ್ಲಿ ಸುಖಿ, ಪರದಲ್ಲಿ ಪರಿಣಾಮಿ, ಆತ ಕಾಲಾಂತಕಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಎಲ್ಲವು ಲಿಂಗಕ್ಕೆ ಸಲ್ವುದೆಂಬುದನದು, ಸಂಕಲ್ಪಸೂತಕವಳಿದು. ಬಂದ ಪದಾರ್ಥವ ಲಿಂಗಭಾಜನದಲ್ಲಿ ಸಹಭೋಜನವ ಮಾಡುವುದು ಲಿಂಗಭರಿತಾರ್ಪಣ. ಲಿಂಗಕ್ಕೂ ತನಗೂ ಬ್ಥಿನ್ನಭಾವವಿಲ್ಲದೆ ಲಿಂಗದೊಳಗೆ ಸಲೆ ಸಂದು ಒಂದಾಗಿ ಕೂಡಿದುದು ಶರಣಭರಿತಾರ್ಪಣ, ಸದಾಶಿವಮೂರ್ತಿಲಿಂಗಕ್ಕೆ ತೃಪ್ತಿ.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->